Tag: ಆಸ್ತಿ ವಿವಾದ

  • ಕಲಾವಿದ ಅಂತ ಲೋನ್‌ ಸಿಗ್ಲಿಲ್ಲ, ಅಕ್ಕನ ಸ್ಯಾಲರಿ ಮೇಲೆ ಸಾಲ ಪಡೆದು ಫ್ಲಾಟ್ ಖರೀದಿಸಿದ್ದೆ: ರಂಜಿತ್

    ಕಲಾವಿದ ಅಂತ ಲೋನ್‌ ಸಿಗ್ಲಿಲ್ಲ, ಅಕ್ಕನ ಸ್ಯಾಲರಿ ಮೇಲೆ ಸಾಲ ಪಡೆದು ಫ್ಲಾಟ್ ಖರೀದಿಸಿದ್ದೆ: ರಂಜಿತ್

    – ಅಕ್ಕ, ಬಾವ, ಮಕ್ಕಳು ಎಲ್ಲಾ ನನ್ನ ಮನೆಯಲ್ಲೇ ಇದ್ರು

    ಫ್ಲಾಟ್ ವಿಚಾರವಾಗಿ ಅಕ್ಕನ ಜೊತೆ ಜಗಳ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ರಂಜಿತ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕಲಾವಿದ. ನನಗೆ ಲೋನ್ ಸಿಗಲ್ಲ ಎಂಬ ಕಾರಣಕ್ಕೆ ಅಕ್ಕನ ಸ್ಯಾಲರಿ ಮೇಲೆ ಸಾಲ ಪಡೆದು ಫ್ಲಾಟ್ ಖರೀದಿಸಿದೆ ಎಂದು ರಂಜಿತ್ ತಿಳಿಸಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ರಂಜಿತ್, ಸಿವಿಲ್ ಮ್ಯಾಟರ್ ಆಗಿರುವುದರಿಂದ ಕೋರ್ಟ್ಗೆ ಹೋಗಿ ಅಂತ ಪೊಲೀಸರು ಹೇಳಿ ಕಳುಹಿಸಿದ್ದಾರೆ. ಅದನ್ನ ಬಿಟ್ಮೇಲೂ ಹೋಗಿ ದೂರು ಕೊಟ್ಟಿದ್ದಾರೆ. ಅವರು ಸಿವಿಲ್ ಕೋರ್ಟ್ಗೆ ಹೋಗಬಹುದಿತ್ತಲ್ವಾ? ನನ್ನ ಮನೆಗೆ ಏಕೆ ಬಂದು, ನನ್ನ ಹೆಂಡತಿ ಮೇಲೆ ಕೈ ಮಾಡಿದ್ರು ಎಂದು ರಂಜಿತ್ ಪ್ರಶ್ನಿಸಿದ್ದಾರೆ.

    ವೀಡಿಯೋ ಹರಿದಾಡುತ್ತಿರುವ ಬಗ್ಗೆ ಮಾತನಾಡಿದ ನಟ, ದೂರು ಕೊಟ್ಟಮೇಲೆ ಇದೆಲ್ಲಾ ಆಗಿದ್ದು. ಮದುವೆಯಾಗುವ ಮುಂಚೆ ನನ್ನ ಇಬ್ಬರು ಅಕ್ಕಂದಿರು ನನ್ನ ಜೊತೆಯೇ ನನ್ನ ಮನೆಯಲ್ಲೇ ಇದ್ದರು. ಮೇ 11 ಕ್ಕೆ ನನ್ನ ಮದುವೆ ಆಯ್ತು. ಎಲ್ಲರೂ ನಮ್ಮ ಜೊತೆನೆ ಇದ್ರು. ಮದುವೆಯಾದ ಮೇಲೆ ಈಗ ಆರೋಪ ಮಾಡ್ತಿದ್ದಾರೆ ಎಂದು ಅಕ್ಕನ ವಿರುದ್ಧ ದೂರಿದರು.

    2017 ರಲ್ಲಿ ನಾನು ಮನೆ ತೆಗೆದುಕೊಳ್ಳುವಾಗ, ನಾನು ಕಲಾವಿದ ನನಗೆ ಲೋನ್ ಸಿಗಲ್ಲ ಎಂಬ ಕಾರಣಕ್ಕೆ ಅಕ್ಕನ ಸ್ಯಾಲರಿ ಮೇಲೆ ಸಾಲ ಪಡೆದು ಫ್ಲಾಟ್ ಖರೀದಿಸಿದೆ. ನನ್ನ ತಾಯಿಯೂ ಸುಮಾರು ಬಾರಿ ನನ್ನ ಹೆಸರಿಗೆ ಗಿಫ್ಟ್ ಡೀಡ್ ಮಾಡಿಕೊಡುವಂತೆ ಹೇಳಿದ್ರು. ಮದುವೆಯಾಗಲಿ ಮಾಡಿಕೊಡ್ತೀನಿ ಎನ್ನುತ್ತಿದ್ದರು. ಆದ್ರೆ ಈಗ ನನ್ನ ತಾಯಿ ಇಲ್ಲ ಎಂದು ತಿಳಿಸಿದರು.

    ಅಕ್ಕನ ಪತಿ ಅರ್ಮಿಯಲ್ಲಿದ್ರು. ಅಪಾರ್ಟ್ಮೆಂಟ್ 2017-18 ರಲ್ಲಿ ರಂಜಿತ್ ಕುಮಾರ್ ಅಂತಾ ಇದೆ. ನನ್ನ ಹೆಸರು ಯಾಕೆ ಹಾಕ್ತಾರೆ? ರಿಜಿಸ್ಟರ್ ಮಾತ್ರ ಅಕ್ಕನ ಹೆಸರಲ್ಲಿದೆ. ಏಕೆಂದರೆ, ನಾನು ಬೆಂಗಳೂರಿನಲ್ಲಿ ಇರ್ತಿರಲಿಲ್ಲ. 2017-18 ರಲ್ಲಿ ಮುಂಬೈನಲ್ಲಿರುತ್ತಿದ್ದೆ. ನಾನು ಕಲಾವಿದ ಆಗಿದ್ದರಿಂದ ಲೋನ್ ಆಗ್ತಿರಲಿಲ್ಲ. ಅದಕ್ಕೆ ಅಕ್ಕನ ಹೆಸರಲ್ಲಿ ಮಾಡಿದ್ದೆ. ಅಮೌಂಟ್ ಟ್ರಾನ್ಸ್ಫರ್ ಮಾಡಿರೋದು ದಾಖಲೆ ಇದೆ. ಈ ಸಂಬAಧ ವಕೀಲರ ಮೂಲಕ ರಿಪ್ಲೆöÊ ಕಳುಹಿಸಿದ್ದೆ. ಇದಾದ ಬಳಿ ಇದನ್ನೆಲ್ಲಾ ಮಾಡ್ತಿರೋದು ಎಂದು ಆರೋಪಿಸಿದರು.

    2017, 18ರಲ್ಲಿ ನಾನು ಅಪಾರ್ಟ್ಮೆಂಟ್ ತೆಗೆದುಕೊಂಡೆ. ಆಗ ಜೊತೆಯಲ್ಲೆ ಇದ್ರು. ಅವರು 2019ರಲ್ಲಿ ಅದೇ ಅಪಾರ್ಟ್ಮೆಂಟ್‌ನಲ್ಲೇ ನಿವೇಶನ ಖರೀದಿಸಿ, ಅಮೇಲೆ ಅಲ್ಲಿಗೆ ಶಿಫ್ಟ್ ಆದ್ರು. ನನ್ನ ತಾಯಿ ತೀರಿಕೊಂಡ ಮೇಲೆ ಅದನ್ನ ಬಾಡಿಗೆ ಕೊಟ್ಟು ಅವರು ನನ್ನ ಮನೆಗೆ ಬಂದು ಸೇರಿಕೊಂಡ್ರು. ಇಬ್ಬರು ಅಕ್ಕಂದಿರು, ಮಕ್ಕಳು, ಬಾವ, ಎಲ್ಲಾ ನಮ್ಮ ಜೊತೆಗೆ ಇದ್ವಿ. ತಮ್ಮ ಮದುವೆ ಆಗ್ತಾನೋ ಇಲ್ವೋ ಅಂತ ಅವರಿಗೂ ಗೊತ್ತಿರಲಿಲ್ಲ. ನಾನು ಮದುವೆ ಆದೆ. ಮದುವೆ ಆದ್ಮೇಲೆ ಬಿಟ್ಟುಕೊಡಬೇಕಿತ್ತು. ಅವರು ಕಳುಹಿಸಿರುವ ಲೀಗಲ್ ನೋಟಿಸ್‌ನಲ್ಲಿ ನಮೂದಿಸಿದ್ದಾರೆ. ಅವರ ಪ್ರೈವಸಿಗೆ ಬಿಟ್ಟು ನಾನು ಹೋಗ್ತಿದ್ದೀನಿ ಅಂತಾ ನಮೂದಿಸಿದ್ದಾರೆ. ಇದಕ್ಕೆ ನಮ್ಮ ವಕೀಲರು ರಿಪ್ಲೈ ಕೊಟ್ಟಿದ್ದಾರೆ. ಕೊಟ್ಟ ಮೇಲೆ ಅವರು ಕೋರ್ಟ್ಗೆ ಹೋಗೋಕೆ ರೆಡಿ ಇಲ್ಲ. ತಪ್ಪು ಯಾರದು ಅಂತಾ ಗೊತ್ತಾಗಲ್ವಾ? ಕೋರ್ಟ್ನಲ್ಲೇ ತೀರ್ಮಾನ ಮಾಡೋಣ ಎಂದು ತಿಳಿಸಿದರು.

    ವೀಡಿಯೋ ವೈರಲ್ ಆದ ಬಗ್ಗೆ ಮಾತನಾಡಿ, ನಮ್ಮ ತಂದೆ ನಮ್ಮ ಜೊತೆ ಇದ್ದಿದ್ದು. ತಂದೆ ನಮ್ಮ ಅಕ್ಕಂದಿರಿಗೆ ಸಪೋರ್ಟ್. ನಮ್ಮ ತಂದೆ ಒಳಗೆ ಬಂದ್ರು, ಮಾತುಕತೆ ಆಗುತ್ತೆ. ಇದಾದ ಮೇಲೆ ಇವಳಿಗೆ ಹೊಡೆದಿರೋದು ಎಂದು ಸ್ಪಷ್ಟಪಡಿಸಿದರು.

    ಪತ್ನಿ ಮೇಲೆ ಹಲ್ಲೆ ಕುರಿತು ಆರೋಪ ಮಾಡಿದ ರಂಜಿತ್, ಮೆಡಿಕಲ್ ಮಾಡಿಸಿದ್ದೀವಿ. ದೂರು ಕೊಡೋದು ಲೇಟ್ ಆಗಿತ್ತು. ಅವರ ಮೇಲೆ ಎನ್‌ಸಿಆರ್ ಆಗಿದೆ. ತಂದೆ, ಅಕ್ಕಂದಿರು, ಭಾವನ ಮೇಲೆ ಎನ್‌ಸಿಆರ್ ಆಗಿದೆ ಎಂದರು.

  • ಆಸ್ತಿ ವಿವಾದ- ಸಲಾಕೆಯಿಂದ ಹೊಡೆದು ಅತ್ತಿಗೆಯನ್ನು ಹತ್ಯೆಗೈದ ಮೈದುನ

    ಆಸ್ತಿ ವಿವಾದ- ಸಲಾಕೆಯಿಂದ ಹೊಡೆದು ಅತ್ತಿಗೆಯನ್ನು ಹತ್ಯೆಗೈದ ಮೈದುನ

    ಗದಗ: ಆಸ್ತಿ ವಿವಾದ ಹಿನ್ನೆಲೆ,  ಅತ್ತಿಗೆಯನ್ನು ಮೈದುನ ಸಲಾಕೆಯಿಂದ ಹೊಡೆದು ಕೊಲೆಗೈದ ಘಟನೆ ಗದಗ (Gadaga) ತಾಲೂಕಿನ ಕಣವಿ ಗ್ರಾಮದಲ್ಲಿ ನಡೆದಿದೆ.

    ಜೈಬುನಿಸಾ ಮಾಚೇನಹಳ್ಳಿ(56) ಮೃತ ಮಹಿಳೆ. ಮಲ್ಲಿಕಸಾಬ್ ಕಿಲ್ಲೆದಾರ್ ಮಹಿಳೆಯನ್ನು ಕೊಲೆಗೈದ ಮೈದುನ.

    ಸಹೋದರರ ಆಸ್ತಿ ಸಂಬಂಧ ನಡೆದ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಮೈದುನ ಸಲಾಕೆಯಿಂದ ಮಹಿಳೆ ತಲೆಗೆ ಹೊಡೆದಿದ್ದಾನೆ. ಕೂಡಲೆ ಆಕೆಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೆ ಜೈಬುನಿಸಾ ಸಾವನ್ನಪ್ಪಿದ್ದಾಳೆ. ಹಲ್ಲೆ ನಡೆಸಿದ ಬಳಿಕ ಮಲ್ಲಿಕಸಾಬ್ ತಾನೇ ಪೊಲೀಸರಿಗೆ ಶರಣಾಗಿದ್ದಾನೆ.ಇದನ್ನೂ ಓದಿ: ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ನಡೆಸಿದ ಖ್ಯಾತ ಗಾಯಕ ಸಂಜಯ್ ಚಕ್ರವರ್ತಿ ಅರೆಸ್ಟ್

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗದಗ ತಾಲೂಕಿನ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ 900 ಕೋಟಿ ಮೌಲ್ಯದ ಕೊಕೇನ್‌ ವಶ – ಇಬ್ಬರು ಅರೆಸ್ಟ್‌

  • ಬಾಡಿಗೆ ಹಣದ ಆಸೆಗೆ ಚಿಕ್ಕಪ್ಪನ ಮಗನನ್ನೇ ಕೊಂದ

    ಬಾಡಿಗೆ ಹಣದ ಆಸೆಗೆ ಚಿಕ್ಕಪ್ಪನ ಮಗನನ್ನೇ ಕೊಂದ

    ಬೆಳಗಾವಿ: ಆಸ್ತಿ ವಿವಾದ (Property Dispute) ಹಿನ್ನೆಲೆಯಲ್ಲಿ ಚಿಕ್ಕಪ್ಪನ ಮಗನನ್ನೇ ಹತ್ಯೆಗೈದ ಘಟನೆ ಬೆಳಗಾವಿಯ (Belagavi) ಹೊಸೂರು ಬಸವಣ ಗಲ್ಲಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿ ಅಭಿಜಿತ್ ಜಾಧವ್ ಹಾಗೂ ಆತನ ಚಿಕ್ಕಪ್ಪನ ಮಗನ ನಡುವೆ ಜಾಗದ ವಿಚಾರದಲ್ಲಿ ವಿವಾದ ಇತ್ತು. ಇದೇ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಭಾನುವಾರ ಜಗಳ ವಿಕೋಪಕ್ಕೆ ತಿರುಗಿ ಆರೋಪಿ ತನ್ನ ಚಿಕ್ಕಪ್ಪನ ಮಗ ಮಿಲಿಂದ್ ಜಾಧವ್(31) ತೊಡೆಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಿಲಿಂದ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕಾರು, ಲಾರಿ ಮುಖಾಮುಖಿ ಡಿಕ್ಕಿ – ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವು

    ಕುಟುಂಬಕ್ಕೆ ಸೇರಿದ್ದ ಜಾಗದಲ್ಲಿದ್ದ ಮಳಿಗೆಯನ್ನು ಬೇಕರಿ ನಡೆಸಲು ಬಾಡಿಗೆ ನೀಡಲಾಗಿತ್ತು. ಬಾಡಿಗೆ ಪಡೆಯುವ ವಿಚಾರಕ್ಕೆ ಮಿಲಿಂದ್ ಹಾಗೂ ಅಭಿಜಿತ್ ಮಧ್ಯೆ ಆಗಾಗ ಗಲಾಟೆ ಆಗುತ್ತಿತ್ತು. ಈಗ ಮಿಲಿಂದ್ ಹತ್ಯೆಯಲ್ಲಿ ಜಗಳ ಕೊನೆಗೊಂಡಿದೆ.

    ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ (Shahapur Police Station) ಪ್ರಕರಣ ದಾಖಲಾಗಿದೆ. ಹತ್ಯೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಯಾರ ಪ್ಲೆಕ್ಸ್ ಕೂಡ ಇರಬಾರದು; ನನ್ನ ಫೋಟೋ ಇರುವ ಫ್ಲೆಕ್ಸನ್ನೂ ಕಿತ್ತು ಹಾಕಿ: ಪ್ರದೀಪ್ ಈಶ್ವರ್

  • ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರ ಹತ್ಯೆ – ಅನಾಥವಾಯ್ತು ಮಗು

    ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರ ಹತ್ಯೆ – ಅನಾಥವಾಯ್ತು ಮಗು

    ಕಾರವಾರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ನಡೆದಿದೆ.

    ಕತ್ತಿಯಲ್ಲಿ ತಲೆ ಕಡಿದು ನಾಲ್ವರ ಕೊಲೆ ಮಾಡಲಾಗಿದೆ. ಶಂಭು ಭಟ್ (65) ಆತನ ಪತ್ನಿ ಮಾದೇವಿ ಭಟ್, ಮಗ ರಾಜೀವ್ ಭಟ್ (34) ಹಾಗೂ ಮಗನ ಪತ್ನಿ ಕುಸುಮಾ ಭಟ್ (30) ಕೊಲೆಯಾದವರು. ಕುಸುಮಾ ಭಟ್ ದಂಪತಿಯ ಚಿಕ್ಕ ಹೆಣ್ಣು ಮಗು ಅಂಗನವಾಡಿಗೆ ಹೋಗಿದ್ದರಿಂದ ಬದುಕುಳಿದಿದೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಅಕ್ರಮ ಬಂದೂಕುಗಳು ವಶ

    ಸ್ಥಳಕ್ಕೆ ಪೊಲೀಸರು ಹಾಜರಾಗಿ ಪರಿಶೀಲನೆ ನಡೆಸಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಶ್ರೀಧರ್ ಭಟ್, ವಿನಯ್ ಭಟ್, ವಿದ್ಯಾ ಭಟ್ ಆಕೆಯ ತಂದೆ ಹಾಗೂ ಸಹೋದರರಿಂದ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಶಂಭು ಭಟ್‌ ಅವರ ಮೊದಲ ಮಗ ಕಿಡ್ನಿ ವೈಫಲ್ಯದಿಂದ ಸಾವಾಗಿದ್ದರಿಂದ ಸೊಸೆ ವಿದ್ಯಾ ಭಟ್ ತವರು ಮನೆ ಸೇರಿದ್ದಳು. ಜೀವನಾಂಶ ಹಾಗೂ ಆಸ್ತಿ ನೀಡುವ ವಿಚಾರದಲ್ಲಿ ಶಂಭು ಭಟ್‌ರೊಂದಿಗೆ ವಿದ್ಯಾ ಭಟ್‌ ಕುಟುಂಬಸ್ಥರು ಗಲಾಟೆ ಮಾಡಿಕೊಂಡಿದ್ದರು. ಜೀವನಾಂಶ ಕೊಡಲು ನಿರಾಕರಿಸಿದ್ದರಿಂದ ರೊಚ್ಚಿಗೆದ್ದ ಹಿರಿಯ ಸೊಸೆ ಕುಟುಂಬದವರಿಂದ ಹತ್ಯೆ ಮಾಡಿಸಿ ಪರಾರಿಯಾಗಿದ್ದಾಳೆ. ಇದನ್ನೂ ಓದಿ: ಮತ್ತೆ ಒಂದಾದ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಡು ರಸ್ತೆಯಲ್ಲಿ ಮಾವನಿಗೆ ಚಪ್ಪಲಿಯಿಂದ ಹೊಡೆದ ಸೊಸೆ

    ನಡು ರಸ್ತೆಯಲ್ಲಿ ಮಾವನಿಗೆ ಚಪ್ಪಲಿಯಿಂದ ಹೊಡೆದ ಸೊಸೆ

    ಲಕ್ನೋ: ನಡುರಸ್ತೆಯಲ್ಲಿ ಮಹಿಳೆಯೊಬ್ಬಳು ತನ್ನ ಮಾವನಿಗೆ ನಿಷ್ಕರುಣೆಯಿಂದ ಚಪ್ಪಲಿಯಿಂದ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಮಹಿಳೆ ತನ್ನ ತಂದೆ ಹಾಗೂ ಸಹೋದರನೊಂದಿಗೆ ಮಾವನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ. ಚಪ್ಪಲಿಯಲ್ಲಿ ಥಳಿಸಿದ್ದಲ್ಲದೇ ಕಿಂಚಿತ್ತು ಕರುಣೆ ತೋರದೇ ಮೂವರು ಸೇರಿಕೊಂಡು ವೃದ್ಧನನ್ನು ರಸ್ತೆಯಲ್ಲಿ ಧರಧರನೇ ಎಳೆದೊಯ್ದಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಈಶ್ವರ ಖಂಡ್ರೆ ವಾಗ್ದಾಳಿ

    ಈ ಸಂಪೂರ್ಣ ಘಟನೆಯು ಹೆದ್ದಾರಿಯ ನಡುವಿನ ಛೇದಕದಲ್ಲಿ ಪೊಲೀಸ್ ಚೌಕಿಯ ಸಮೀಪ ಸಂಭವಿಸಿದೆ. ವೀಡಿಯೋದಲ್ಲಿ ಸಹೋದರ ನನ್ನ ಸಹೋದರಿಯ ತಪ್ಪು ಏನಿದೆ. ಅವಳನ್ನೆ ಏಕೆ ಹೊಡೆದೆ ಎಂದು ಪದೇ, ಪದೇ ಕೇಳುತ್ತಾ ಹೊಡೆದಿದ್ದಾನೆ. ಈ ವೇಳೆ ಅಸಹಾಯಕನಾದ ವೃದ್ಧ, ತನಗೆ ಬಿಡುವಂತೆ ಅಂಗಲಾಚಿ ಬೇಡಿಕೊಳ್ಳುತ್ತಿದ್ದರು. ಮೂವರು ಸೇರಿಕೊಂಡು ವೃದ್ಧನಿಗೆ ಹೊಡೆದು ಮತ್ತು ಕಾಲಿನಿಂದ ಒದ್ದಿದ್ದಾರೆ.

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಮಹಿಳೆ ಮತ್ತು ಆಕೆಯ ತಂದೆಯನ್ನು ವಶಕ್ಕೆ ಪಡೆದಿದ್ದು, ತಲೆ ಮರೆಸಿಕೊಂಡಿರುವ ಆಕೆಯ ಸಹೋದರನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದೀಗ ಗಾಯಗೊಂಡಿರುವ ವೃದ್ಧನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮೈಸೂರು ಉದ್ಯಮಿಯ ಕೊಲೆಗೆ ಕೇಸ್‍ಗೆ ಟ್ವಿಸ್ಟ್ – ತಂದೆಯನ್ನೇ ಬರ್ಬರ ಹತೈಗೈದ 16ರ ಮಗ!

    ಘಟನೆ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಗಾಯಾಳು ಸುಖದೇವ್ ಸಿಂಗ್ ಯಾದವ್ ಅವರ ಪುತ್ರ ಬಬ್ಲು ಯಾದವ್ ಅವರು, ತಮ್ಮ ಕಿರಿಯ ಸಹೋದರ ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದು, ಅವರ ಪತ್ನಿ ಪುಷ್ಪಾ, ಸಹೋದರ ಕಮಲೇಶ್ ಮತ್ತು ಅವರ ತಂದೆ ರಾಮ್ ವಿಲಾಸ್ ನಮ್ಮ ತಂದೆಗೆ ಸಂಪೂರ್ಣ ಆಸ್ತಿಯನ್ನು ಪುಷ್ಪಾ ಅವರ ಹೆಸರಿಗೆ ಮಾಡುವಂತೆ ಒತ್ತಾಯಿಸಿದ್ದರು. ನಂತರ ಆಸ್ತಿಯನ್ನು ಹಂಚುವಂತೆ ಒತ್ತಡ ಹೇರಿದ್ದಕ್ಕೆ ನಾನು ಆಸ್ತಿಯನ್ನು ಹಂಚಲು ಸಿದ್ಧನಿಲ್ಲ ಎಂದು ತಿಳಿಸಿದ್ದರು. ಅಲ್ಲದೇ ಆಕೆಗೆ ಇರಲು ಒಂದು ಕೋಣೆಯನ್ನು ಸಹ ನೀಡಲಾಗಿತ್ತು. ಆದರೆ ಅಷ್ಟಕ್ಕೆ ತೃಪ್ತಿ ಕಾಣದೇ, ಮಹಿಳೆ ತನ್ನ ತಂದೆ ಮತ್ತು ಕುಟುಂಬಸ್ಥರನ್ನು ಕರೆಸಿ ನಮ್ಮ ತಂದೆಗೆ ಹೊಡೆಸಿದ್ದಾಳೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅತ್ತೆಯನ್ನ ಕೊಲೆ ಮಾಡಿದ ಅಳಿಯನಿಗೆ ಜೀವಾವಧಿ ಶಿಕ್ಷೆ

    ಅತ್ತೆಯನ್ನ ಕೊಲೆ ಮಾಡಿದ ಅಳಿಯನಿಗೆ ಜೀವಾವಧಿ ಶಿಕ್ಷೆ

    ದಾವಣಗೆರೆ: ಆಸ್ತಿಯ ಸಲುವಾಗಿ ಜಗಳವಾಡಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ಕೊನೆಗೆ ಅಳಿಯ ಅತ್ತೆಯನ್ನು ಕೊಲೆ ಮಾಡಿದ್ದ. ಈಗ ಅವನಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡವನ್ನು ವಿಧಿಸಿದೆ.

    ದಾವಣಗೆರೆ ನಗರದ ಹೊಂಡದ ಸರ್ಕಲ್‍ನ ಅಭಿರಾಜ್ ಶಿಕ್ಷೆಗೆ ಒಳಗಾದ ಯುವಕ. ಅತ್ತೆ ಭಾಗ್ಯಮ್ಮ ಕೊಲೆಯಾಗಿದ್ದ ಮಹಿಳೆ. 2019 ರ ಜುಲೈ 18 ರಂದು ಭಾಗ್ಯಮ್ಮಳನ್ನು ಆಸ್ತಿ ಆಸೆಗೆ ಅಭಿರಾಜ್ ಕೊಲೆ ಮಾಡಿದ್ದನು. ಈ ಪ್ರಕರಣ ಇನ್ನೂ ನ್ಯಾಯಾಲಯದ ಮುಂದೆ ಇತ್ತು. ಅಭಿರಾಜ್‍ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಕೊಟ್ಟಿದ್ದು, ಈ ಕೇಸ್‍ಗೆ ಮುಕ್ತಿ ಸಿಕ್ಕಿದೆ. ಇದನ್ನೂ ಓದಿ: ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    ಪ್ರಕರಣದ ಹಿನ್ನೆಲೆ: ಈಗಿನ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದದ ಹನುಮಂತಪ್ಪ ಅವರ ಪುತ್ರಿ ಭಾಗ್ಯಮ್ಮ ಅವರು 14 ವರ್ಷಗಳ ಹಿಂದೆ ದಾವಣಗೆರೆಯ ಶಿವಕುಮಾರ್ ಅವರನ್ನು ಮದುವೆಯಾಗಿದ್ದರು.

    ಈ ದಂಪತಿಗೆ ಒಂದು ಹೆಣ್ಣು ಮಗು ಜನಿಸಿತ್ತು. ಮದ್ಯವ್ಯಸನ ಚಟದಿಂದಾಗಿ ಶಿವಕುಮಾರ್ ಐದು ವರ್ಷಗಳ ಹಿಂದೆ ಮೃತಪಟ್ಟಿದ್ದ. ಭಾಗ್ಯಮ್ಮ ಮಗಳನ್ನು ಅಕ್ಕನ ಮನೆಯಲ್ಲಿ ಬಿಟ್ಟು, ಗಂಡನ ಸ್ವಂತ ಮನೆಯಲ್ಲಿ ಒಬ್ಬಳೇ ವಾಸವಾಗಿದ್ದಳು. ಶಿವಕುಮಾರ್ ಅಕ್ಕನ ಮಗನಾದ ಅಭಿರಾಜ್, ಭಾಗ್ಯಮ್ಮ ಅವರ ಹಿಂದಿನ ಮನೆಯಲ್ಲೇ ವಾಸವಾಗಿದ್ದ. ಭಾಗ್ಯಮ್ಮ ವಾಸವಿರುವ ಮನೆಯನ್ನು ಹೇಗಾದರೂ ಮಾಡಿ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂದು ಅವರ ಮನೆಗೆ ಹೋಗಿ ಕಿರುಕುಳ ನೀಡುತ್ತಿದ್ದ.

    ಮಚ್ಚಿನಿಂದ ಕೊಚ್ಚಿದ
    ಭಾಗ್ಯಮ್ಮ ಮನೆಗೆ ಬೇರೆ-ಬೇರೆ ಗಂಡಸರು ಬಂದು ಹೋಗುತ್ತಿದ್ದಾರೆ ಎಂದು ಆಕೆಯ ತಾಯಿ ಹಾಗೂ ಅಣ್ಣನಿಗೆ ಚಾಡಿ ಹೇಳುತ್ತಿದ್ದ. 2019ರ ಜುಲೈ 18 ರಂದು ರಾತ್ರಿ ಅಭಿರಾಜ್ ಮನೆಗೆ ಬಂದಾಗ ತನ್ನ ಬಗ್ಗೆ ಚಾಡಿ ಹೇಳುತ್ತಿರುವುದನ್ನು ಭಾಗ್ಯಮ್ಮ ಪ್ರಶ್ನಿಸಿದ್ದಾರೆ. ಈಕೆಯನ್ನು ಸುಮ್ಮನೆ ಬಿಟ್ಟರೆ ತನಗೆ ಆಸ್ತಿ ಸಿಗುವುದಿಲ್ಲ ಎಂದು ಅಭಿರಾಜ್ ಮಚ್ಚಿನಿಂದ ಭಾಗ್ಯಮ್ಮ ಅವರನ್ನು ಕೊಲೆ ಮಾಡಿದ್ದ. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

    ಈ ಪರಿಣಾಮ ಅಂದಿನ ಸಿಪಿಐ ಉಮೇಶ್ ಜಿ.ಬಿ.ತನಿಖೆ ನಡೆಸಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜೆ.ವಿ.ವಿಜಯಾನಂದ ಅವರು ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಕೆ.ಕೆಂಚಪ್ಪ ವಾದ ಮಂಡಿಸಿದ್ದರು.

  • ಆಸ್ತಿ ಗಲಾಟೆ ಬೀದಿಗೆ – ಹಾಕಿ ಸ್ಟಿಕ್‍ನಲ್ಲಿ ಬಡಿದಾಡಿದ ಕುಟುಂಬಸ್ಥರು

    ಆಸ್ತಿ ಗಲಾಟೆ ಬೀದಿಗೆ – ಹಾಕಿ ಸ್ಟಿಕ್‍ನಲ್ಲಿ ಬಡಿದಾಡಿದ ಕುಟುಂಬಸ್ಥರು

    ಲಕ್ನೋ: ಆಸ್ತಿ ವಿಚಾರವಾಗಿ ಎರಡು ಕುಟುಂಬಗಳು ನಡು ರಸ್ತೆಯಲ್ಲಿ ಪರಸ್ಪರ ಹಾಕಿ ಸ್ಟಿಕ್‍ನಲ್ಲಿ ಕಾದಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ ದುಜಾನಾ ಗ್ರಾಮದಲ್ಲಿ ನಡೆದಿದೆ.

    ಕೆಲವು ದಿನಗಳ ಹಿಂದೆ ಯುದ್ವೀರ್ ಮತ್ತು ರಾಮ್ಲಖಾನ್ ನಡುವೆ ಆಸ್ತಿ ಹಂಚಿಕೆ ವಿಚಾರ ಇತ್ಯರ್ಥವಾಗಿತ್ತು. ಆದರೆ ಇತ್ಯರ್ಥದ ಬಳಿಕ ರಾಮ್ಲಖಾನ್ ಅವರು ನೀಡಿದ್ದ ಆಸ್ತಿ ಹಂಚಿಕೆಯ ಬಗ್ಗೆ ಅಸಮಾಧಾನಗೊಂಡಿದ್ದರು. ಇದನ್ನೂ ಓದಿ: SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಮಾ.28 ರಿಂದ ಆರಂಭ

     

    ಗುರುವಾರ ರಾಮ್ಲಖಾನ್, ಅವರ ಪತ್ನಿ ಸುಮನ್ ಮತ್ತು ಮಗ ಅಂಕಿತ್ ಅವರು ಜಮೀನಿಗೆ ಹೋಗುತ್ತಿದ್ದ ವೇಳೆ ಯುದ್ವೀರ್ ಮತ್ತು ಅವರ ಪತ್ನಿ ಹಾಕಿ ಸ್ಟಿಕ್‍ನಿಂದ ಹಲ್ಲೆ ನಡೆಸಿದ್ದಾರೆ. ಇದೀಗ ಘಟನೆಯಲ್ಲಿ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ವೀಡಿಯೋದಲ್ಲಿ ಯುದ್ವೀರ್ ಮತ್ತು ಅವರ ಪತ್ನಿಗೆ ಹಾಕಿಸ್ಟಿಕ್‍ನಿಂದ ಹಲ್ಲೆ ನಡೆಸುತ್ತಿದ್ದಾಗ, ತಮ್ಮನ್ನು ರಕ್ಷಿಸಿಕೊಳ್ಳುವ ಸಲುವಾಗಿ ಹಾಕಿ ಸ್ಟಿಕ್ ಕಿತ್ತುಕೊಂಡು ಯುದ್ವೀರ್ ಅವರು ಅಂಕಿತ್ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಸೋಮವಾರದಿಂದ SSLC ಪರೀಕ್ಷೆ- ಹಿಜಬ್ ನಿಷೇಧ, ಸಮವಸ್ತ್ರ ಕಡ್ಡಾಯ

    ಸದ್ಯ ಯುದ್ವೀರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರಾಮ್ಲಖಾನ್ ಮತ್ತು ಸುಮನ್ ಅವರನ್ನು ಬಂಧಿಸಿದ್ದಾರೆ. ಜೊತೆಗೆ ಅವರ ಮಗ ಅಂಕಿತ್ ವಿರುದ್ಧ ಐಪಿಸಿ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಆಸ್ತಿ ವಿವಾದ – ಗರ್ಭಿಣಿ ಸೇರಿದಂತೆ ಮೂವರನ್ನು ಬೆಂಕಿಗೆ ಹಾಕಿದ ದುರುಳರು

    ಆಸ್ತಿ ವಿವಾದ – ಗರ್ಭಿಣಿ ಸೇರಿದಂತೆ ಮೂವರನ್ನು ಬೆಂಕಿಗೆ ಹಾಕಿದ ದುರುಳರು

    ಪಾಟ್ನಾ: ಎಂಟು ತಿಂಗಳ ಗರ್ಭಿಣಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರನ್ನು ಆಸ್ತಿ ವಿವಾದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಬಿಹಾರದ ದರ್ಭಾಂಗಾದಲ್ಲಿ ನಡೆದಿದೆ.

    ಅಕ್ರಮವಾಗಿ ನಮ್ಮ ಜಾಗದಲ್ಲಿ ಬೇರೆ ಕುಟುಂಬ ವಾಸಿಸುತ್ತಿದೆ ಎಂದು ವ್ಯಕ್ತಿಯೊಬ್ಬ ಬುಲ್ಡೋಜರ್‍ನಿಂದ ಮನೆ ಬಿಳಿಸಲು ಸೂಚಿಸಿದ್ದಾನೆ. ಈ ವೇಳೆ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ದುಷ್ಕರ್ಮಿಗಳು ಮನೆಯಲ್ಲಿ ವಾಸಿಸುತ್ತಿದ್ದವರ ಮೇಲೆ ಬೆಂಕಿ ಹಚ್ಚಿದ್ದಾರೆ. ಗರ್ಭಿಣಿ ಎಂಬುದನ್ನು ನೋಡದೇ ಆಕೆಯ ಮೇಲೂ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಆದರೆ ಇವರನ್ನು ಕಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಸ್ತುತ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ.

    Three injured after being set on fire in Darbhanga - The Dani Post

    ಗಾಯಗೊಂಡವರನ್ನು ಸಂಜಯ್ ಝಾ(31), ಪಿಂಕಿ(36) ಮತ್ತು ನಿಕ್ಕಿ ಕುಮಾರಿ(20) ಎಂದು ಗುರುತಿಸಲಾಗಿದೆ. ಪ್ರಸ್ತುತ ಇವರನ್ನು ಚಿಕಿತ್ಸೆಗಾಗಿ ಆಸತ್ರೆಗೆ ದಾಖಲಿಸಲಾಗಿದ್ದು, ನಿಕ್ಕಿ ಹುಷಾರಾಗಿ ಮನೆಗೆ ಮರಳಿದ್ದಾರೆ. ಆದರೆ ಎಂಟು ತಿಂಗಳ ಗರ್ಭಿಣಿ, ಪಿಂಕಿ ಮತ್ತು ಸಂಜಯ್ ಅವರನ್ನು ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಲಾಗಿದೆ.

    ದರ್ಭಾಂಗ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಪ್ರಸಾದ್ ಈ ಕುರಿತು ಮಾತನಾಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಈ ಘಟನೆಯು ಆಸ್ತಿ ವಿವಾದದಿಂದ ಈ ಕೃತ್ಯ ಸಂಭವಿಸಿದೆ ಎಂದು ಎನ್ನಲಾಗುತ್ತಿದೆ. ಆಸ್ತಿಗಾಗಿ ಜಗಳ ನಡೆಯುವ ವೇಳೆ ಕುಟುಂಬದ ಮೂವರಿಗೆ ಬೆಂಕಿ ಹಚ್ಚಲಾಗಿದ್ದು, ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

    ಪ್ರಸ್ತುತ ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗಿದೆ. ಶೀಘ್ರದಲ್ಲೇ ಈ ಕೃತ್ಯ ಮಾಡಿದ ದುಷ್ಕರ್ಮಿಗಳನ್ನು ಗುರುತಿಸಲಾಗುವುದು. ಈ ಕೃತ್ಯದ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ನಿಕ್ಕಿ ಪ್ರತಿಕ್ರಿಯಿಸಿದ್ದು, ಈ ಹಿಂದೆಯೇ ನಾವು ಪೊಲೀಸರಿಗೆ ಭದ್ರತೆಗಾಗಿ ಪದೇ-ಪದೇ ಮನವಿ ಮಾಡಿಕೊಂಡಿದ್ದೆವು. ಆದರೆ ಈ ಬಗ್ಗೆ ಪೆÇಲೀಸರು ಕಿವಿಗೊಡುತ್ತಿಲ್ಲ ಎಂದು ಆರೋಪಿಸಿದರು. ಈ ಕೃತ್ಯದಲ್ಲಿ ಶಿವಕುಮಾರ್ ಝಾ ಭಾಗಿಯಾಗಿದ್ದಾರೆ ಎಂದು ಸೂಚಿಸಿದ್ದಾರೆ.

    ಎಂಟು ತಿಂಗಳ ಗರ್ಭಿಣಿ, ನನ್ನ ಸಹೋದರ ಸಂಜಯ್ ಮತ್ತು ಅಕ್ಕ ಪಿಂಕಿ ಅವರ ದೇಹ ಬೆಂಕಿಯಿಂದ ಶೇ.80 ರಷ್ಟು ಹೆಚ್ಚು ಸುಟ್ಟು ಗಾಯಗಳಾಗಿವೆ ಎಂದು ಉಲ್ಲೇಖಿಸಿದ ಅವರು, ಈ ಆಸ್ತಿಯನ್ನು ಶಿವಕುಮಾರ್ ಅವರು ಅಕ್ರಮವಾಗಿ ಖರೀದಿಸಿದ್ದಾರೆ. ಈ ಸುದ್ದಿ ತಿಳಿದ ನಂತರ ನಾವು ಪೊಲೀಸರಿಗೂ ತಿಳಿಸಿದ್ದು, ಅವರು ನಿರ್ಲಕ್ಷ್ಯ ತೋರಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ವಿವಾದಾತ್ಮಕ ಸ್ಟೇಟಸ್ ಹಾಕಿದ ಯುವಕ – ಹತ್ತು ಜನ ಅರೆಸ್ಟ್!

    ಗುರುವಾರ ಮಧ್ಯಾಹ್ನ ದರ್ಬಾಂಗಾ ಎಸ್‍ಎಸ್‍ಪಿ ಅವರನ್ನು ಭೇಟಿ ಮಾಡಲು ಹೋಗಿದ್ದೆವು. ಎಸ್‍ಎಸ್‍ಪಿ ನಮ್ಮನ್ನು ಭೇಟಿಯಾಗಲಿಲ್ಲ. ನನ್ನ ಸಹೋದರಿಯೊಂದಿಗೆ ಫೋನ್ ನಲ್ಲಿ ಮಾತನಾಡಿ ಸಹಾಯ ಮಾಡುತ್ತೇವೆಂದು ಭರವಸೆ ನೀಡಿದ್ದರು ಎಂದು ತಿಳಿಸಿದ್ದಾರೆ.

    ಆಸ್ತಿ ವಿವಾದ ನಡೆಯುತ್ತಿದ್ದ ಜಾಗದಲ್ಲೇ ಕಳೆದ ನಾಲ್ಕು ದಶಕಗಳಿಂದ ಈ ಕುಟುಂಬ ವಾಸಿಸುತ್ತಿದೆ. ಆದರೆ 2017 ರಲ್ಲಿ, ಶಿವಕುಮಾರ್ ಝಾ ಅವರು ಈ ಆಸ್ತಿಯನ್ನು ಅಕ್ರಮವಾಗಿ ಖರೀದಿಸಿದ್ದಾರೆ. 2019 ರಿಂದ ಈ ವಿವಾದದ ಕೇಸ್ ಪಾಟ್ನಾ ಹೈಕೋರ್ಟ್‍ನಲ್ಲಿ ನಡೆಯುತ್ತಿದೆ.

  • ಸೊಸೆಯ ಎಡಗೈ, ಎದೆ ಭಾಗಕ್ಕೆ ಗುಂಡಿಟ್ಟು ಕೊಲೆಗೆ ಯತ್ನಿಸಿದ ಮಾವ

    ಸೊಸೆಯ ಎಡಗೈ, ಎದೆ ಭಾಗಕ್ಕೆ ಗುಂಡಿಟ್ಟು ಕೊಲೆಗೆ ಯತ್ನಿಸಿದ ಮಾವ

    ಮಡಿಕೇರಿ: ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಾವ ಸೊಸೆಯ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೆಟ್ಟದಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಬೆಟ್ಟದಕೊಪ್ಪ ಗ್ರಾಮದ ಐಯ್ಯಪ್ಪ ಎಂಬುವವರು ಮಗನಾದ ಹೂವಯ್ಯನ ಪತ್ನಿ ತೀರ್ಥ ಅವರೊಂದಿಗೆ ರಸ್ತೆಯಲ್ಲಿ ದನ ಕಟ್ಟುವ ವಿಚಾರದಲ್ಲಿ ವಾಗ್ವಾದಕ್ಕಿಳಿದಿದ್ದಾರೆ. ಮಾತಿನ ಚಕಮಕಿ ವಿಪರೀತಕ್ಕೆ ಹೋದ ಪರಿಣಾಮ ಐಯ್ಯಪ್ಪ, ತೀರ್ಥ ಅವರ ಎಡಗೈ ಮತ್ತು ಎದೆ ಭಾಗಕ್ಕೆ ಗುಂಡು ಹಾರಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಗುಂಡೇಟಿನಿಂದ ಗಾಯಗೊಂಡ ತೀರ್ಥ ಅವರಿಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಐಯ್ಯಪ್ಪ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸಿಸುತ್ತಿದ್ದು, ಮಗ ಹೂವಯ್ಯ ಆತನ ಪತ್ನಿ ತೀರ್ಥ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಹೂವಯ್ಯ ನೀಡಿದ ದೂರಿನ ಮೇರೆಗೆ ಆರೋಪಿ ಐಯ್ಯಪ್ಪ ಹಾಗೂ ಆತನ ಪತ್ನಿ ಮತ್ತು ಇಬ್ಬರು ಪುತ್ರಿಯರ ವಿರುದ್ಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.

  • ಆಸ್ತಿ ವಿವಾದ – ಜಮೀನಿನಲ್ಲೇ ಬರ್ಬರವಾಗಿ ಕೊಲೆಯಾದ ತಾಯಿ, ಮಗ

    ಆಸ್ತಿ ವಿವಾದ – ಜಮೀನಿನಲ್ಲೇ ಬರ್ಬರವಾಗಿ ಕೊಲೆಯಾದ ತಾಯಿ, ಮಗ

    ಬಾಗಲಕೋಟೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬಾದಾಮಿ ತಾಲೂಕಿನ ಜಂಗವಾಡ ಗ್ರಾಮದ ಬಳಿ ಹೊಲದಲ್ಲಿ ನಡೆದಿದೆ.

    ಘಟನೆಯಲ್ಲಿ 36 ವರ್ಷದ ದುರ್ಗಪ್ಪ ಭೀಮಪ್ಪ ಮಾದರ್, 56 ವರ್ಷದ ದೇವಕೆವ್ವ ಭೀಮಪ್ಪ ಮಾದರ್ ಕೊಲೆಯಾಗಿರುವ ದುರ್ದೈವಿಗಳಾಗಿದ್ದಾರೆ. ಶಿವಪ್ಪ ಮಾದರ, ಉಮೇಶ್ ಮಾದರ, ಕಾಮಪ್ಪ ಮಾದರ, ಹನುಮಂತ ಮಾದರ, ಪ್ರಕಾಶ್ ಮಾದರ, ರವಿ ಮಾದರ, ರಮೇಶ್ ಮಾದರ, ಬಸವರಾಜ ಮಾದರ, ಸೇರಿದಂತೆ ಒಂಬತ್ತು ಜನ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

    ಹೊಲದ ವಿಚಾರವಾಗಿ ಕೊಲೆ ಆರೋಪಿ ಉಮೇಶ್ ಮಾದರ್ ಹಾಗೂ ದುರ್ಗಪ್ಪ ಮಾದರ್ ಕುಟುಂಬದ ಮಧ್ಯೆ ಕಲಹ ಏರ್ಪಟ್ಟಿತ್ತು. ಈ ಕಲಹ ಕೋರ್ಟ್ ಮೆಟ್ಟಿಲೇರಿ, ಹೊಲ ದುರ್ಗಪ್ಪ ಮಾದರ್ ಅವರಿಗೆ ಸೇರಿದ್ದು ಎಂದು ನ್ಯಾಯಾಲಯ ತೀರ್ಪು ಸಹ ನೀಡಿತ್ತು. ಇದರಿಂದ ಮನುಷ್ಯತ್ವ ಕಳೆದುಕೊಂಡ ಉಮೇಶ್ ಮಾದರ್ ಹಾಗೂ ಸಂಗಡಿಗರು ದುರ್ಗಪ್ಪ ಅವರ ಹೊಲಕ್ಕೆ ನುಗ್ಗಿ ಏಕಾಏಕಿ ಕೊಡಲಿ ಹಾಗೂ ಮಾರಕಾಸ್ತ್ರಗಳಿಂದ ದುರ್ಗಪ್ಪ ಹಾಗೂ ತಾಯಿ ದೇವಕ್ಕೆವ್ವ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

    ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೆರೂರು ಪೊಲೀಸರು, ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೈಕ್ ಅಲ್ಲಿ ಬಂದು 14 ಜನ ದುಷ್ಕರ್ಮಿಗಳು ಸೇರಿ ಕೊಡಲಿಯಿಂದ ಕೊಚ್ಚಿ ಕೊಲೆಗೈದ್ದಾರೆ. ಕೆರೂರು ಪೊಲೀಸ್ ಠಾಣೆಯಲ್ಲಿ 14 ಜನರ ವಿರುದ್ಧ ದೂರು ದಾಖಲಾಗಿದೆ. ತಪ್ಪಿಸಿಕೊಂಡ ಇನ್ನು 9 ಮಂದಿಗೆ ಪೊಲೀಸರು ಬಲೆ ಬೀಸಿದ್ದಾರೆ.