Tag: ಆಸ್ತಿ

  • 4ರ ಮಗಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ದಂಪತಿ

    4ರ ಮಗಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ದಂಪತಿ

    – ವಾಟ್ಸಪ್‍ನಲ್ಲಿ ಡೆತ್‍ ನೋಟ್ ಕಳುಹಿಸಿ ಜೀವಬಿಟ್ರು
    – ಆಸ್ತಿಗಾಗಿ ಸಂಬಂಧಿಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ

    ಮುಂಬೈ: 4 ವರ್ಷದ ಮಗಳನ್ನು ನೇಣು ಹಾಕಿ ಕೊಲೆಗೈದ ಬಳಿಕ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ವಕ್ಲಾನ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

    ರೈಸ್ ಮಿಲ್‍ನಲ್ಲಿ ಕೆಲಸ ಮಾಡುತ್ತಿದ್ದ ವಕ್ಲಾನ್ ನಿವಾಸಿ ಶಿವರಾಮ್ ಪಾಟೀಲ್(39), ಪತ್ನಿ ದೀಪಿಕಾ ಆತ್ಮಹತ್ಯೆಗೆ ಶರಣಾದ ದಂಪತಿ. ಆಸ್ತಿ ವಿಚಾರಕ್ಕೆ ದಂಪತಿಗೆ ಸಂಬಂಧಿಕರು ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಮನನೊಂದು ಶಿವರಾಮ್, ದೀಪಿಕಾ ಆತ್ಮಹತ್ಯಗೆ ಶರಣಾಗಿದ್ದಾರೆ. ತಾವು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ದಂಪತಿ ತಮ್ಮ 4 ವರ್ಷದ ಮಗಳನ್ನು ನೇಣು ಹಾಕಿ ಕೊಲೆಗೈದಿದ್ದಾರೆ.

    ಅಷ್ಟೇ ಅಲ್ಲದೇ ನಮ್ಮ ಸಾವಿಗೆ ಸಂಬಂಧಿಕರೇ ಕಾರಣ. ಅವರ ಕಿರುಕುಳ ತಾಳಲಾರದೇ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವ ಎಂದು 13 ಮಂದಿಯ ಹೆಸರನ್ನು ಉಲ್ಲೇಖಿಸಿ ದಂಪತಿ ಡೆತ್ ನೋಟ್ ಬರೆದಿದ್ದಾರೆ. ಬಳಿಕ ವಾಟ್ಸಪ್ ಮೂಲಕ ಡೆತ್ ನೋಟ್ ಅನ್ನು ದೀಪಿಕಾ ತನ್ನ ಸಹೋದರನಿಗೆ ಕಳುಹಿಸಿದ್ದಾರೆ. ಬಳಿಕ ದಂಪತಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

    ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಮನೆಯನ್ನು ಪರಿಶೀಲಿಸಿದಾಗ ಅಲ್ಲಿ ಹರಿದು ಹಾಕಿದ್ದ ಡೆತ್ ನೋಟ್ ಪೇಪರ್ ಪತ್ತೆಯಾಗಿತ್ತು. ಅಲ್ಲದೇ ಸಹೋದರನಿಗೆ ಕಳುಹಿಸಿದ ವಾಟ್ಸಪ್ ಮೆಸೇಜ್ ಕೂಡ ಪೊಲೀಸರಿಗೆ ಸಿಕ್ಕಿತ್ತು. ಈ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಈ ಸಂಬಂಧ ವಿಚಾರಣೆ ನಡೆಸಿದಾಗ 10 ಎಕ್ರೆ ಜಮೀನಿನ ವಿಚಾರಕ್ಕೆ ದಂಪತಿ ಹಾಗೂ ಅವರ ಸಂಬಂಧಿಕರ ನಡುವೆ ಜಗಳ ನಡೆಯುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ. ಆಸ್ತಿಗಾಗಿ ಸಂಬಂಧಿಕರು ದಂಪತಿಗೆ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್‍ನಲ್ಲಿ 13 ಮಂದಿಯ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    13 ಮಂದಿಯಲ್ಲಿ ಇಬ್ಬರನ್ನು ಈಗಾಗಲೇ ವಶಕ್ಕೆ ಪಡೆದಿದ್ದೇವೆ. ಇನ್ನೂ ಉಳಿದ 11 ಮಂದಿ ತಲೆಮರೆಸಿಕೊಂಡಿದ್ದಾರೆ. ಹಾಗೆಯೇ ಜಗಳಕ್ಕೆ ಕಾರಣವಾಗಿರುವ 10 ಎಕ್ರೆ ಜಮೀನನ್ನು ಸಹೋದರನಿಗೆ ನೀಡಿ, ಅದನ್ನು ಆತ ಆನಾಥಾಶ್ರಮಗಳಿಗೆ ನೀಡುತ್ತಾನೆ ಎಂದು ದೀಪಿಕಾ ಹಾಗೂ ಶಿವರಾಮ್ ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಗಂಡನನ್ನೇ ಕಿಡ್ನಾಪ್ ಮಾಡಿ ಉಗುರು ಕಿತ್ತು ಚಿತ್ರಹಿಂಸೆ – ಅಣ್ಣನ ಜೊತೆ ಸೇರಿ 2ನೇ ಪತಿಯ ಕೊಲೆ

    ಗಂಡನನ್ನೇ ಕಿಡ್ನಾಪ್ ಮಾಡಿ ಉಗುರು ಕಿತ್ತು ಚಿತ್ರಹಿಂಸೆ – ಅಣ್ಣನ ಜೊತೆ ಸೇರಿ 2ನೇ ಪತಿಯ ಕೊಲೆ

    – 5 ದಿನ ಗೃಹ ಬಂಧನದಲ್ಲಿಟ್ಟು ಕಿರುಕುಳ
    – ಪೊಲೀಸರ ಮುಂದೆ ಪತ್ನಿಯ ಕೃತ್ಯ ತಿಳಿಸಿ ಪತಿ ಸಾವು

    ಚಾಮರಾಜನಗರ: ಹಣಕಾಸಿನ ವ್ಯವಹಾರದಲ್ಲಿ ಗಂಡ-ಹೆಂಡತಿ ನಡುವೆ ವೈಷಮ್ಯ ಉಂಟಾಗಿ ಸ್ವಂತ ಅಣ್ಣನ ಜೊತೆ ಸೇರಿ ಪತ್ನಿಯೇ ಎರಡನೇ ಪತಿಯನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಕೊಳ್ಳೇಗಾಲದ ಮುಡಿಗುಂಡಂ ನಿವಾಸಿ ಸುಬ್ರಹ್ಮಣ್ಯ ಕೊಲೆಯಾದ ವ್ಯಕ್ತಿ. ಆರೋಪಿ ಪತ್ನಿ ರಶ್ಮಿ ತನ್ನ ಸಹೋದರ ರಾಕೇಶ್ ಜೊತೆ ಸೇರಿಕೊಂಡು ಪತಿಯನ್ನೇ ಕಿಡ್ನಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾಳೆ.

    ಏನಿದು ಪ್ರಕರಣ?
    ಆರೋಪಿ ರಶ್ಮಿಗೆ ಈಗಾಗಲೇ ಮದುವೆಯಾಗಿ 11 ವರ್ಷದ ಮಗ ಕೂಡ ಇದ್ದನು. ಆದರೆ ಪತಿಯ ಜೊತೆ ಜಗಳ ಮಾಡಿಕೊಂಡು ಡಿವೋರ್ಸ್ ತೆಗೆದುಕೊಂಡು ಬೇರೆಯಾಗಿದ್ದಳು. ನಂತರ ನಾಲ್ಕು ವರ್ಷಗಳ ಹಿಂದೆ ಮೃತ ಸುಬ್ರಹ್ಮಣ್ಯ ಜೊತೆ ಮದುವೆಯಾಗಿದ್ದಳು. ಒಂದು ವರ್ಷದ ಹಿಂದೆ ಮತ್ತೆ ಆರೋಪಿ ರಶ್ಮಿ ಮೊದಲನೆಯ ಪತಿಯ ಬಳಿ ಹೋಗಿದ್ದಳು. ಆದರೆ ಮತ್ತೆ ಜಗಳ ಮಾಡಿಕೊಂಡು ಆಸ್ತಿಗಾಗಿ ಎರಡನೇ ಪತಿ ಬಳಿ ಬಂದಿದ್ದಳು ಎಂದು ತಿಳಿದು ಬಂದಿದೆ.

    ಆರೋಪಿ ರಶ್ಮಿ ಪತಿ ಸುಬ್ರಹ್ಮಣ್ಯರನ್ನು ಅಪಹರಿಸಿ ಐದು ದಿನಗಳ ಕಾಲ ಗೃಹ ಬಂಧನದಲ್ಲಿಟ್ಟಿದ್ದಳು. ಅಲ್ಲದೇ ಹಣಕ್ಕಾಗಿ ಐದು ದಿನಗಳ ಕಾಲ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ. ಬಂಧನದಲ್ಲಿದ್ದಾಗ ಪತಿಯ ಉಗುರು ಕಿತ್ತು ರಾಡ್‍ನಿಂದ ಕಿರಾತಕರು ಹಲ್ಲೆ ಮಾಡಿದ್ದಾರೆ.

    ಹಲ್ಲೆಗೊಳಗಾಗಿ ಅಸ್ವಸ್ಥರಾಗಿದ್ದ ಸುಬ್ರಹ್ಮಣ್ಯರನ್ನು ನನ್ನು ಮುಡಿಗುಂಡದ ಮನೆಗೆ ಬಿಟ್ಟು ಆರೋಪಿಗಳು ಹೋಗಿದ್ದಾರೆ. ತಕ್ಷಣ ಸುಬ್ರಹ್ಮಣ್ಯರನ್ನು ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂರು ದಿನಗಳ ಕಾಲ ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ ವಿಜಯನಗರ ಪೊಲೀಸರ ಮುಂದೆ ಘಟನೆಯ ಸಂಪೂರ್ಣ ವಿವರ ನೀಡಿ ಸುಬ್ರಹ್ಮಣ್ಯ ಸಾವನ್ನಪ್ಪಿದ್ದಾರೆ.

    ಇದೀಗ ನಾಲ್ವರು ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತ್ನಿ ರಶ್ಮಿ, ಸಹೋದರ ರಾಕೇಶ್, ಮುಡಿಗುಂಡದ ಪ್ರದೀಪ್, ರಾಕೇಶ್ ಪಡಗೂರು ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಮೊದಲನೇ ಆರೋಪಿ ರಶ್ಮಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗೆ ಕೊಳ್ಳೇಗಾಲ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ. ರಶ್ಮಿ ಸಹೋದರ ರಾಕೇಶ್ ಮುಡಿಗುಂಡ ಮತ್ತು ಆತನ ಇಬ್ಬರು ಸ್ನೇಹಿತರಾದ ಪ್ರದೀಪ್ ಹಾಗೂ ರಾಕೇಶ್ ಎಸ್ಕೇಪ್ ಆಗಿದ್ದಾರೆ. ಹೀಗಾಗಿ ಮೂವರ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

  • ಪತ್ನಿಯ ಕೊಲೆ ಮಾಡಿ ಜೈಲು ಸೇರಿದ- ಮಕ್ಕಳ ಹೆಸರಿಗೆ ಆಸ್ತಿ ಬರೆಯುವಂತೆ ಶವವಿಟ್ಟು ಪ್ರತಿಭಟನೆ

    ಪತ್ನಿಯ ಕೊಲೆ ಮಾಡಿ ಜೈಲು ಸೇರಿದ- ಮಕ್ಕಳ ಹೆಸರಿಗೆ ಆಸ್ತಿ ಬರೆಯುವಂತೆ ಶವವಿಟ್ಟು ಪ್ರತಿಭಟನೆ

    ಚಾಮರಾಜನಗರ: ಪತಿಯ ಅನುಮಾನದ ಭೂತದಿಂದ ಪತ್ನಿ ಕೊಲೆಯಾಗಿದ್ದಳು. ಇತ್ತ ಕೊಲೆ ಮಾಡಿದ ಪತಿ ಜೈಲು ಸೇರಿದ್ದ. ಆದರೆ ದಂಪತಿಯ ಇಬ್ಬರು ಮಕ್ಕಳು ಮಾತ್ರ ಅಪ್ಪ-ಅಮ್ಮ ಇಬ್ಬರೂ ಇಲ್ಲದೆ ದಿಕ್ಕು ತೋಚದ ಪರಿಸ್ಥಿತಿಯಲ್ಲಿದ್ದಾರೆ. ಇತ್ತ ತಂದೆಯ ಆಸ್ತಿಯನ್ನು ಮೋಸದಿಂದ ಬರೆದುಕೊಂಡಿರುವ ಸಹೋದರಿಯರು ಪರಾರಿಯಾಗಿದ್ದು, ಮೃತರ ಆಸ್ತಿಯನ್ನು ಮಕ್ಕಳ ಹೆಸರಿಗೆ ಬರೆದು ಕೊಡುವಂತೆ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸುರೇಶ್ ಎಂಬಾತ ಕಳೆದ ಮೂರು ದಿನಗಳ ಹಿಂದೆ ಪತ್ನಿಯನ್ನು ಕೊಲೆ ಮಾಡಿ ಜೈಲು ಸೇರಿದ್ದಾನೆ. ಆರೋಪಿ ಸುರೇಶ್‍ಗೆ ಕಳೆದ 17 ವರ್ಷಗಳ ಹಿಂದೆ ಪಡಗೂರು ಗ್ರಾಮದ ಶಶಿಕಲಾರೊಂದಿಗೆ ಮದುವೆಯಾಗಿತ್ತು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ವಿಪರೀತ ಕುಡುಕನಾಗಿದ್ದ ಸುರೇಶ್ ಪತ್ನಿಯ ಶೀಲ ಶಂಕಿಸಿ ಜಗಳವಾಡುತ್ತಿದ್ದ. ಮನೆಯಲ್ಲಿ ಅಪ್ಪನ ಕಿರುಕುಳ ಸಹಿಸಲಾಗದೆ ಹಿರಿಯ ಮಗಳು ತಾತನ ಮನೆಯಲ್ಲಿ ವಾಸಿಸುತ್ತಿದ್ದಳು. ಇತ್ತ ಶಶಿಕಲಾ ತನ್ನ 2ನೇ ಮಗಳೊಂದಿಗೆ ಅದೇ ಮನೆಯ ಕೊಠಡಿಯೊಂದರಲ್ಲಿ ಪ್ರತ್ಯೇಕವಾಗಿ ವಾಸ ಮಾಡತೊಡಗಿದ್ದಳು.

    ಕಳೆದ 2 ದಿನಗಳ ಹಿಂದೆ ಪತ್ನಿಯೊಡನೆ ಜಗಳ ತೆಗೆದಿದ್ದ ಸುರೇಶ್ ಕಟ್ಟಿಗೆಯಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದ. ಈ ನಡುವೆ ಸುರೇಶ್ ಹೆಸರಿನಲ್ಲಿದ್ದ 14 ಎಕರೆ ಜಮೀನು ಸೇರಿದಂತೆ ಬಹುತೇಕ ಆಸ್ತಿಯನ್ನು ಆತನ ಸಹೋದರಿಯರಾದ ಭಾಗ್ಯಮ್ಮ ಹಾಗೂ ರತ್ನಮ್ಮ ಮೋಸದಿಂದ ಬರೆಸಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಪತ್ನಿ ಕೊಲೆ ಮಾಡಿದ ಸುರೇಶ್ ಜೈಲು ಪಾಲಾಗಿದ್ದಾನೆ. ಆತನ ಸಹೋದರಿಯರು ಪರಾರಿಯಾಗಿದ್ದಾರೆ. ಕೊಲೆಯಾದ ಶಶಿಕಲಾಳ ಶವವನ್ನು ಅಂತ್ಯ ಸಂಸ್ಕಾರ ನಡೆಸದ ಆಕೆಯ ಪೋಷಕರು ಪ್ರತಿಭಟನೆ ನಡೆಸಿದ್ದರು.

    ಸುರೇಶ್ ಆಸ್ತಿಯನ್ನು ಸಹೋದರಿಯರು ಮೋಸದಿಂದ ಬರೆಸಿಕೊಂಡಿದ್ದಾರೆ. ಮತ್ತೆ ಆ ಆಸ್ತಿಯನ್ನು ಆತನ ಹೆಣ್ಣು ಮಕ್ಕಳಿಗೆ ಬರೆದುಕೊಡಬೇಕು ಎಂದು ಶಶಿಕಲಾ ಪೋಷಕರು ಬೇಡಿಕೆ ಇಟ್ಟಿದ್ದರು. ಇತ್ತ ಶಶಿಕಲಾ ಕೊಲೆಯಲ್ಲಿ ತಮ್ಮ ಪಾತ್ರ ಇಲ್ಲ. ಆದ್ದರಿಂದ ನಮ್ಮ ವಿರುದ್ಧ ನೀಡಿರುವ ದೂರನ್ನು ಹಿಂಪಡೆಯಬೇಕು. ಆಗ ನಾವು ಆಸ್ತಿಯನ್ನು ಹೆಣ್ಣು ಮಕ್ಕಳಿಗೆ ಬರೆದುಕೊಡುವುದಾಗಿ ಸುರೇಶ್ ಸಹೋದರಿಯರು ಷರತ್ತು ವಿಧಿಸಿ ಒಪ್ಪಿಗೆ ಸೂಚಿಸಿದ್ದಾರೆ. ಸದ್ಯ ವಕೀಲರ ಮೂಲಕ ಒಪ್ಪಂದ ಮಾಡಿಕೊಂಡು ಶಶಿಕಲಾ ಪೋಷಕರು ಅಂತಿಮ ಸಂಸ್ಕಾರ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

  • ಆಸ್ತಿಗಾಗಿ ತಂದೆ, ತಾಯಿ, ಸಹೋದರನನ್ನೇ ಕೊಲೆಗೈದ ಮಗ

    ಆಸ್ತಿಗಾಗಿ ತಂದೆ, ತಾಯಿ, ಸಹೋದರನನ್ನೇ ಕೊಲೆಗೈದ ಮಗ

    ಬೆಳಗಾವಿ: ದೊಡ್ಡವಾಡ ಠಾಣಾ ವ್ಯಾಪ್ತಿಯ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.

    ಶಿವಾನಂದ ಅಂದಾನಶೆಟ್ಟಿ, ಆತನ ಪತ್ನಿ ಶಾಂತವ್ವ ಮತ್ತು ಮಗ ವಿನೋದ್ ಕೊಲೆಯಾದವರು. ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಸ್ತಿ ಸಿಗದ ಕಾರಣ ಸಾಕು ಮಗನೇ ತನ್ನ ತಂದೆ, ಮಲ ತಾಯಿ ಹಾಗೂ ಸಹೋದರನನ್ನು ಕೊಚ್ಚಿ ಕೊಲೆ ಮಾಡಿರುವುದಾಗಿ ತನಿಖೆ ಸಂದರ್ಭದಲ್ಲಿ ಬಯಲಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಮೂವರ ಭೀಕರ ಕೊಲೆ-11 ದಿನದಲ್ಲಿ ಹಸೆಮಣೆ ಏರಬೇಕಿದ್ದಾತ ಸಾವು

    ದೊಡ್ಡವಾಡ ಗ್ರಾಮದ ಶಿವಾನಂದ ಅಂದಾನಶೆಟ್ಟಿ ಹಾಗೂ ಕಸ್ತೂರಿ ದಂಪತಿಗೆ ಮಕ್ಕಳಿಲ್ಲದ ಕಾರಣಕ್ಕೆ ಶಿವಾನಂದನ ಸಹೋದರಿಯ ಮಗ ಶಿವಪ್ಪನನ್ನು ಸಾಕುತ್ತಿದ್ದರು. ಆದರೆ ಕಳೆದ 7 ವರ್ಷಗಳ ಹಿಂದೆ ಧಾರವಾಡ ಶಾಂತವ್ವಳನ್ನು ಶಿವಾನಂದ ಎರಡನೇ ಮದುವೆಯಾಗುತ್ತಾನೆ. ಇದರಿಂದ ಮನನೊಂದ ಕಸ್ತೂರಿ ಪತಿಯಿಂದ ದೂರವಾಗಿ ಅಳಿಯ ಗೋವಿಂದನ ಮನೆಯಲ್ಲಿ ವಾಸಮಾಡಲು ಶುರು ಮಾಡುತ್ತಾಳೆ.

    ಈ ಮಧ್ಯೆ ಸಾಕುಮಗ ಶಿವಪ್ಪನಿಗೆ ಎಂದು ಮೀಸಲಿಟ್ಟಿದ್ದ 12 ಎಕರೆ ಜಮೀನನ್ನು ಶಾಂತವ್ವಳ ಮಗ ವಿನೋದನ ಹೆಸರಿಗೆ ಮಾಡುವುದಕ್ಕೆ ಶಿವಾನಂದ ಮುಂದಾಗಿದ್ದನು. ಇದು ಶಿವಪ್ಪನ ಕೋಪಕ್ಕೆ ಕಾರಣವಾಗುತ್ತದೆ. ಹಾಗಾಗಿಯೇ ವಿನೋದನ ಮದುವೆಗೆ ಕೇವಲ 10 ದಿನ ಬಾಕಿ ಉಳಿದಿರುವಾಗಲೇ ಸಾಕುತಂದೆ ಶಿವಾನಂದ ಅಂದಾನಶೆಟ್ಟಿ, ಆತನ ಪತ್ನಿ ಶಾಂತವ್ವ ಹಾಗೂ ಪುತ್ರ ವಿನೋದ್ ಈ ಮೂವರನ್ನೂ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ ಎಂದು ಎಸ್‍ಪಿ ನಿಂಬರಗಿ ಹೇಳಿದ್ದಾರೆ.

    ಈ ಕೊಲೆ ಸಂಚು ರೂಪಿಸಲು ಶಿವಪ್ಪನಿಗೆ ಸಹಕಾರ ನೀಡಿದ ಆತನ ಸಂಬಂಧಿಕರಾದ ಗೋವಿಂದ, ಬಸವಂತೆಪ್ಪ ಮತ್ತು ಮಲ್ಲಿಕಾರ್ಜುನ ಮೂವರನ್ನು ಬಂಧಿಸಲಾಗಿದೆ. ಕೇವಲ ನಾಲ್ಕು ದಿನಗಳಲ್ಲಿಯೇ ಈ ತ್ರಿವಳಿ ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಬೇಧಿಸಿದ ದೊಡ್ಡವಾಡ ಪೊಲೀಸರ ಕಾರ್ಯವನ್ನು ಎಸ್‍ಪಿ ಲಕ್ಷ್ಮಣ ನಿಂಬರಗಿ ಪ್ರಶಂಶಿಸಿ ಬಹುಮಾನ ಘೋಷಿಸಿದ್ದಾರೆ.

  • ಸುಪಾರಿ ಕೊಟ್ಟು ಮೈದುನನಿಂದ ಅತ್ತಿಗೆಯ ಭೀಕರ ಕೊಲೆ

    ಸುಪಾರಿ ಕೊಟ್ಟು ಮೈದುನನಿಂದ ಅತ್ತಿಗೆಯ ಭೀಕರ ಕೊಲೆ

    ಚಿಕ್ಕಬಳ್ಳಾಪುರ: ಆಸ್ತಿಗಾಗಿ ಸುಪಾರಿ ಕೊಟ್ಟ ಅತ್ತಿಗೆಯನ್ನೇ ಕೊಲೆ ಮಾಡಿಸಿದ ಕಿರಾತಕ ಮೈದುನ ಹಾಗೂ ಕೊಲೆ ಮಾಡಿದ ಕೊಲೆಗಾರನನ್ನ ಬಂಧಿಸುವಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.

    ಕಗ್ಗಲಹಳ್ಳಿ ಗ್ರಾಮದ ರತ್ಮಮ್ಮ ಕೊಲೆಯಾಗಿದ್ದ ಮಹಿಳೆ. ಡಿಸೆಂಬರ್ 22 ರಂದು ರತ್ಮಮ್ಮಳ ಬಾಯಿಗೆ ಬಟ್ಟೆ ತುರುಕಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆದರೆ ಈ ಘಟನೆ ಡಿಸೆಂಬರ್ 24 ರಂದು ಬೆಳಕಿಗೆ ಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಶುರು ಮಾಡಿದ್ದರು. ಇದೀಗ ಮೃತಳ ಮೈದುನ ಅದೇ ಗ್ರಾಮದ ನಾಗೇಶ್ ಹಾಗೂ ಸುಪಾರಿ ಪಡೆದು ರತ್ಮಮ್ಮಳನ್ನ ಕೊಲೆ ಮಾಡಿದ್ದ ಅದೇ ಗ್ರಾಮದ ಲಕ್ಷ್ಮೀಶನನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬಾಯಿಗೆ ಬಟ್ಟೆ ತುರುಕಿ ಒಂಟಿ ಮಹಿಳೆಯ ಭೀಕರ ಕೊಲೆ

    ಏನಿದು ಪ್ರಕರಣ?
    ಪತಿ ಮೃತಪಟ್ಟ ನಂತರ ಒಂಟಿಯಾಗಿದ್ದ ರತ್ಮಮ್ಮ ಹಾಗೂ ಆರೋಪಿ ನಾಗೇಶ್ ನಡುವೆ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಆಗಾಗ ಜಗಳ ನಡೆಯುತ್ತಿತ್ತು. ಇದೇ ಆಸ್ತಿ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಹೀಗಾಗಿ ಅತ್ತಿಗೆ ಮೇಲೆ ದ್ವೇಷ ಸಾಧಿಸುತ್ತಿದ್ದ ಮೈದುನ ನಾಗೇಶ್, ಗ್ರಾಮದ ಡೈರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಶನಿಗೆ 2 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು 5,000 ಹಣ ಮುಂಗಡವಾಗಿ ನೀಡಿದ್ದನು.

    ಇದೇ ಗ್ರಾಮದವನಾಗಿದ್ದ ಲಕ್ಷ್ಮೀಶ ಆಗಾಗ ಮೃತಳ ಮನೆಗೆ ಹೋಗಿ ಬರುತ್ತಿದ್ದನು. ಒಂದು ದಿನ ರತ್ಮಮ್ಮಳನ್ನ ಮಾತನಾಡಿಸುವ ನೆಪದಲ್ಲಿ ಮನೆಗೆ ಹೋಗಿ ಆಕೆಯ ಮೇಲೆ ಮೊದಲು ಮಚ್ಚನಿಂದ ಲಕ್ಷ್ಮೀಶ ಅಟ್ಯಾಕ್ ಮಾಡಿದ್ದಾನೆ. ತದನಂತರ ಬಾಯಿಗೆ ಬಟ್ಟೆ ತುರುಕಿ ಮೃತಪಟ್ಟ ನಂತರ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇನ್ನೂ ಕೊಲೆ ಮಾಡಿ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಯಾರಿಗೂ ಅನುಮಾನ ಬಾರದ ಹಾಗೆ ಊರಲ್ಲೇ ಓಡಾಡಿಕೊಂಡು ಇದ್ದನು.

    ಪೊಲೀಸರು ತನಿಖೆ ಮಾಡುತ್ತಿದ್ದ ವೇಳೆ ಅನುಮಾನಗೊಂಡು ಆರೋಪಿ ಮೈದಾನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಆಗ ಸತ್ಯ ಬಯಲಾಗಿದೆ. ಸದ್ಯಕ್ಕೆ ಪೊಲೀಸರು ಮೈದುನ ನಾಗೇಶ್ ಹಾಗೂ ಲಕ್ಷ್ಮೀಶನನ್ನ ಬಂಧಿಸಿದ್ದಾರೆ. ಕೊಲೆಗಡುಕ ಲಕ್ಷ್ಮೀಶ್ ಮೃತಳ ಕತ್ತಿನಲ್ಲಿದ್ದ ಚಿನ್ನದ ಸರ ಕದ್ದು, ಅದನ್ನ ಚಿಕ್ಕಬಳ್ಳಾಪುರ ನಗರದ ಮುತ್ತೂಟ್ ಫೈನಾನ್ಸ್ ನಲ್ಲಿ ಆಡವಿಟ್ಟಿದ್ದ. ಈಗ ಅದನ್ನ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

  • ಸರ್ಕಾರಿ ಶಾಲೆಗಳ ಹೆಸರಿಗೆ ಆಸ್ತಿ ನೋಂದಣಿ ಮಾಡಿಸಲು ಕ್ರಮ: ಸಚಿವ ಸುರೇಶ್ ಕುಮಾರ್

    ಸರ್ಕಾರಿ ಶಾಲೆಗಳ ಹೆಸರಿಗೆ ಆಸ್ತಿ ನೋಂದಣಿ ಮಾಡಿಸಲು ಕ್ರಮ: ಸಚಿವ ಸುರೇಶ್ ಕುಮಾರ್

    ಶಿವಮೊಗ್ಗ: ಸರ್ಕಾರಿ ಶಾಲೆಗಳ ಆಸ್ತಿಪಾಸ್ತಿಗಳನ್ನು ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕೆ.ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಜಿಲ್ಲೆಯ ಸಾಗರ ತಾಲೂಕಿನ ಚದರವಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸುರೇಶ್ ಕುಮಾರ್ ಮಾತನಾಡಿದರು. ಖಾಸಗಿ ಶಾಲೆಗಳ ಆಕರ್ಷಣೆ ಕಡಿಮೆ ಮಾಡಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಹ ವಾತಾವರಣ ಸೃಷ್ಟಿಸುವ ಯೋಜನೆಗಳನ್ನು ರೂಪಿಸಲಾಗುತ್ತಿದೆ.

    ಸಾಂದರ್ಭಿಕ ಚಿತ್ರ

    ಶಾಲೆಗಳ ದುರಸ್ತಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ರಾಜ್ಯದಲ್ಲಿ 530 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ 34.48 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಸಾಗರ ತಾಲೂಕಿನಲ್ಲಿ 134 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಅಗತ್ಯ ಬಿದ್ದರೆ ಜಿಲ್ಲೆಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು.

    ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಸೆಪ್ಟಂಬರಿನಿಂದ ನವೆಂಬರ್ ಒಳಗಾಗಿ ಆಯೋಜಿಸಲು ಸೂಚನೆ ನೀಡಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರತಾಳು ಹಾಲಪ್ಪ ವಹಿಸಿದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ರಾಘವೇಂದ್ರ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

  • ಮಂಗಳೂರಿನಲ್ಲಿ ಆಸ್ತಿಪಾಸ್ತಿ ಹಾನಿಗೈದವರ ಆಸ್ತಿ ಜಪ್ತಿ ಮಾಡಿ: ಸಿಟಿ ರವಿ

    ಮಂಗಳೂರಿನಲ್ಲಿ ಆಸ್ತಿಪಾಸ್ತಿ ಹಾನಿಗೈದವರ ಆಸ್ತಿ ಜಪ್ತಿ ಮಾಡಿ: ಸಿಟಿ ರವಿ

    ಮಂಗಳೂರು: ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡಿದವರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕುತ್ತಿದೆ. ಅದೇ ರೀತಿಯಲ್ಲಿ ಮಂಗಳೂರಿನ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡಿದವರಿಗೆ ಪುಂಡು ಕಂದಾಯ ಹೇರಿ. ಆಸ್ತಿಯನ್ನು ಜಪ್ತಿ ಮಾಡುವ ಕಾನೂನು ತರಬೇಕೆಂದು ಸಚಿವ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪೌರತ್ವ ಮಸೂದೆಯನ್ನು ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಆಸ್ತಿಪಾಸ್ತಿ ಹಾನಿ ಮಾಡಿದವರನ್ನು ಗುರುತಿಸಿ ಅವರ ಆಸ್ತಿಗಳನ್ನು ಜಪ್ತಿ ಮಾಡಲಾರಂಭಿಸಿದ್ದಾರೆ. ಹೀಗಾಗಿ ನಮ್ಮ ರಾಜ್ಯ ಸರ್ಕಾರವೂ ಇಂತಹ ಕ್ರಮಕ್ಕೆ ಮುಂದಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ನಡೆಯುವ ಗಲಭೆಯನ್ನು ನಿಯಂತ್ರಿಸಬಹುದು ಎಂದು ಹೇಳಿದರು.

    ಯಾವುದೇ ಚಳುವಳಿ ಇರಬಹುದು, ಯಾವುದೇ ಪಕ್ಷದ ಚಟುವಟಿಕೆ ಇರಬಹುದು. ಬೆಂಕಿ ಹಾಕುತ್ತೇವೆ ಎನ್ನುವವರ ಮತ್ತು ಬೆಂಕಿ ಹಾಕುವ ಗಲಭೆಕೋರರಿಗೆ ಈ ಮೂಲಕ ಮೂಗುದಾರ ತೊಡಿಸಬಹುದು. ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ಹೇಳಿದರು.

    ಇದಲ್ಲದೆ ಗಲಭೆ ಪ್ರಕರಣದಲ್ಲಿ ಅಮಾಯಕರು ಸತ್ತರೆ ಪರಿಹಾರ ನೀಡೋದು ಸಹಜ. ಆದರೆ ಕ್ರಿಮಿನಲ್ ಚಟುವಟಿಕೆ ಮಾಡಿದ್ದರೂ ಪರಿಹಾರ ನೀಡಬೇಕೇ ಎಂದು ಕಾಂಗ್ರೆಸ್ಸಿಗರನ್ನು ಪ್ರಶ್ನೆ ಮಾಡಿದ ಸಿಟಿ ರವಿ, ಸರ್ಕಾರವನ್ನು ಅಸ್ಥಿರ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಚುನಾವಣೆ ಸೋತಾಗ ಇವಿಎಂ ಮೇಲೆ ಅನುಮಾನ. ಈಗ ಪೊಲೀಸರ ಮೇಲೆ ಅನುಮಾನ ಬಂದಿದೆ ಎಂದು ವ್ಯಂಗ್ಯವಾಡಿದರು.

  • ಆಸ್ತಿಗಾಗಿ ಬ್ಲ್ಯಾಕ್‍ಮೇಲ್ – ಪತ್ನಿಯ ಕಿರುಕುಳಕ್ಕೆ ಬೇಸತ್ತು ಬೆಂಗ್ಳೂರಿನ ಟೆಕ್ಕಿ ಆತ್ಮಹತ್ಯೆ

    ಆಸ್ತಿಗಾಗಿ ಬ್ಲ್ಯಾಕ್‍ಮೇಲ್ – ಪತ್ನಿಯ ಕಿರುಕುಳಕ್ಕೆ ಬೇಸತ್ತು ಬೆಂಗ್ಳೂರಿನ ಟೆಕ್ಕಿ ಆತ್ಮಹತ್ಯೆ

    ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬೆಳ್ಳಂದೂರು ಠಾಣಾ ವ್ಯಾಪ್ತಿಯ ಹಾಲನಾಯಕನಹಳ್ಳಿಯಲ್ಲಿ ನಡೆದಿದೆ.

    ಟೆಕ್ಕಿ ಶ್ರೀನಾದ್ (39) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಆಂಧ್ರ ಪ್ರದೇಶ ಮೂಲದ ಟೆಕ್ಕಿ ಶ್ರೀನಾದ್ 2009ರಲ್ಲಿ ರೇಖಾ ಜೊತೆ ಮದುವೆಯಾಗಿತ್ತು. ದಂಪತಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗಿ ಆಗಿದ್ದರು.

    ಶ್ರೀನಾದ್ ಬ್ಯಾಂಕಿನಲ್ಲಿ ಲೋನ್ ಮಾಡಿ ಅಪಾರ್ಟ್ ಮೆಂಟ್‍ನಲ್ಲಿ ಫ್ಲಾಟ್ ಖರೀದಿಸಿದ್ದರು. ಬಳಿಕ ಪ್ರತಿ ತಿಂಗಳ ಸಾಲ ಕಟ್ಟುತ್ತಿದ್ದರು. ಇತ್ತ ಪತ್ನಿ ರೇಖಾ ಮಾತ್ರ ಐಷಾರಾಮಿ ಜೀವನ ನಡೆಸುವುದು ಹಾಗೂ ದುಂದು ವೆಚ್ಚ ಮಾಡುತ್ತಿದ್ದಳು. ಹಾಗಾಗಿ ಶ್ರೀನಾದ್ ಕಡಿಮೆ ಖರ್ಚು ಮಾಡುವಂತೆ ರೇಖಾಳಿಗೆ ಬುದ್ಧಿ ಹೇಳಿದ್ದಾರೆ. ಆದರೆ ಇದರಿಂದ ಕೋಪಗೊಂಡ ರೇಖಾ ಹಾಗೂ ಆಕೆಯ ಕುಟುಂಬಸ್ಥರು ಶ್ರೀನಾದ್‍ಗೆ ಮಾನಸಿಕ ಕಿರುಕುಳ ನೀಡುತ್ತಿದ್ದಳು.

    ಅಲ್ಲದೆ ನಿನ್ನ ತಂದೆ-ತಾಯಿಯಿಂದ ಆಸ್ತಿ ಬರೆದುಕೊಂಡು ಬಾ, ಒಂದು ಲಕ್ಷ ರೂ. ಬಾಡಿಗೆ ಬರುವ ಆಸ್ತಿ ಕೊಡುವಂತೆ ಕೇಳು. ಇಲ್ಲದಿದ್ದರೆ ಡಿವೋರ್ಸ್ ನೀಡುತ್ತೇನೆ ಎಂದು ರೇಖಾ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಳು. ಇದರಿಂದ ಮಾನಸಿಕವಾಗಿ ಮನನೊಂದಿದ್ದ ಶ್ರೀನಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಶುಕ್ರವಾರ ಸುಮಾರು 6.40ಕ್ಕೆ ಅಪಾರ್ಟ್ ಮೆಂಟ್‍ನ ವಾಚ್‍ಮ್ಯಾನ್ ಶ್ರೀನಾದ್ ಅವರ ತಂದೆ ನಾಗೇಶ್ವರ ರಾವ್‍ಗೆ ಕರೆ ಮಾಡಿ ನಿಮ್ಮ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಶ್ರೀನಾದ್ ತಂದೆ ನಗರದ ಸೆಂಟ್ ಜಾನ್ಸ್ ಆಸ್ಪತ್ರೆಗೆ ಭೇಟಿ ನೀಡಿ ಶವಗಾರದಲ್ಲಿ ಮೃತದೇಹವನ್ನು ಗುರುತಿಸಿದ್ದಾರೆ. ಇದೇ ವೇಳೆ ಶ್ರೀನಾದ್ ತನ್ನ ಪತ್ನಿ ರೇಖಾ ಹಾಗೂ ಆಕೆಯ ಕುಟುಂಬಸ್ಥರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದರು.

    ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀನಾದ್ ತಂದೆ ನಾಗೇಶ್ವರ ರಾವ್ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪತ್ನಿ ರೇಖಾ ಹಾಗೂ ಆಕೆ ಪೋಷಕರ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಹಾಗೂ ಐಪಿಸಿ ಸೆಕ್ಷನ್ 34 (ಅಪರಾಧಿಕ ಸಂಚು) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

  • ಎಂಟಿಬಿ ನಾಗರಾಜ್ ಒಟ್ಟು ಆಸ್ತಿ ಮೌಲ್ಯ 1,195 ಕೋಟಿ ರೂ.

    ಎಂಟಿಬಿ ನಾಗರಾಜ್ ಒಟ್ಟು ಆಸ್ತಿ ಮೌಲ್ಯ 1,195 ಕೋಟಿ ರೂ.

    – ಒಂದೇ ವರ್ಷದಲ್ಲಿ 180 ಕೋಟಿ ರೂ. ಏರಿಕೆ
    – ಪತ್ನಿಗೆ 1.57 ಕೋಟಿ ರೂ. ಸಾಲ ಕೊಟ್ಟ ಎಂಟಿಬಿ
    – ಎಂಟಿಬಿ ಬಳಿ ಇದೆ 193 ಬ್ಯಾಂಕ್ ಖಾತೆಗಳು

    ಬೆಂಗಳೂರು: ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಒಟ್ಟು 1,195 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.

    ಉಪ ಚುನಾವಣೆಯ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ತಮ್ಮ ಹಾಗೂ ಪತ್ನಿಯ ಹೆಸರಿನಲ್ಲಿದ್ದ ಚರಾಸ್ತಿ, ಸ್ಥಿರಾಸ್ತಿಯನ್ನು ಘೋಷಿಕೊಂಡಿದ್ದಾರೆ. ಅಫಿಡವಿಟ್ ಪ್ರಕಾರ ಎಂಟಿಬಿ ನಾಗರಾಜ್, 419,28,63,731 ರೂ. ಮೌಲ್ಯದ ಚರಾಸ್ತಿ, 2.54 ಕೋಟಿ ರೂ. ಮೌಲ್ಯದ ಕಾರುಗಳು ಸೇರಿದಂತೆ ಒಟ್ಟು 1,195 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಕೇವಲ ಒಂದೇ ವರ್ಷದಲ್ಲಿ ಎಂಟಿಬಿ ನಾಗರಾಜ್ ಅವರ ಆಸ್ತಿ ಮೌಲ್ಯದಲ್ಲಿ 180 ಕೋಟಿ ರೂ. ಏರಿಕೆಯಾಗಿದೆ. ಇದನ್ನೂ ಓದಿ:  ವಿಶ್ವದ ದುಬಾರಿ ಕಾರಿನ ಒಡೆಯನಾದ ಎಂಟಿಬಿ – ಬೆಲೆ ಎಷ್ಟು? ವಿಶೇಷತೆ ಏನು? ಮೈಲೇಜ್ ಎಷ್ಟು?

    ಕರ್ನಾಟಕದ ಅತ್ಯಂತ ಶ್ರೀಮಂತ ರಾಜಕಾರಣಿ ಎಂಟಿಬಿ ನಾಗರಾಜ್ 29.90 ಕೋಟಿ ಸಾಲ ಹೊಂದಿದ್ದು, ಸ್ವತಃ ಪತ್ನಿಗೆ 1.57 ಕೋಟಿ ಸಾಲ ಕೊಟ್ಟಿದ್ದಾರೆ. ಒಟ್ಟು 193 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.

    ಸಮ್ಮಿಶ್ರ ಸರ್ಕಾರದ ವಿರುದ್ಧ ಅನರ್ಹ ಶಾಸಕರು ಆಗಸ್ಟ್ ತಿಂಗಳಿನಲ್ಲಿ ಬಂಡಾಯ ಎದಿದ್ದರು. ಈ ಅವಧಿಯಲ್ಲೇ ಅಂದ್ರೆ ಆಗಸ್ಟ್ 2ರಿಂದ 7ರ ನಡುವೆ ಎಂಟಿಬಿ ನಾಗರಾಜ್ ವಿವಿಧ ಬ್ಯಾಂಕ್ ಖಾತೆಗಳಲ್ಲಿ 53 ಠೇವಣಿಗಳನ್ನು ಇರಿಸಿದ್ದಾರೆ. ಪ್ರತಿ ಠೇವಣಿ 90 ಲಕ್ಷ ರೂಪಾಯಿಗಿಂದ ಅಧಿಕವಾಗಿದೆ. ಎಲ್ಲಾ ಠೇವಣಿಯ ಒಟ್ಟು ಮೊತ್ತವು 48.76 ಕೋಟಿ ರೂಪಾಯಿ ಆಗುತ್ತದೆ. ಅಷ್ಟೇ ಅಲ್ಲದೆ ಜುಲೈ ತಿಂಗಳಲ್ಲಿ 1.06 ಕೋಟಿ ರೂ. ಠೇವಣಿ ಮಾಡಿಸಿದ್ದಾರೆ.

    ಎಂಟಿಬಿ ನಾಗರಾಜ್ ಅವರ ಚರಾಸ್ತಿ 419.28 ಕೋಟಿ ರೂ., ಅದರಲ್ಲಿ ಸ್ವಯಾರ್ಜಿತ ಸ್ಥಿರಾಸ್ತಿಯ ಮೌಲ್ಯ 417.11 ಕೋಟಿ ಇದ್ದು, ಪಿತ್ರಾರ್ಜಿತ ಆಸ್ತಿಯ ಮೌಲ್ಯ 2.64 ಕೋಟಿ ರೂ. ಆಗಿದೆ. ಅವರ ಪತ್ನಿಯ ಆಸ್ತಿ ಮೌಲ್ಯ 167.34 ಕೋಟಿ ರೂ., ಸ್ವಯಾರ್ಜಿತ ಆಸ್ತಿ ಮೌಲ್ಯ 189.14 ಕೋಟಿ ರೂ ಹಾಗೂ ಪಿತ್ರಾರ್ಜಿತ ಆಸ್ತಿಯ ಮೌಲ್ಯ 27.50 ಲಕ್ಷ ರೂ. ಇದೆ.

    ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು 2018ರ ವಿಧಾನಸಭಾ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‍ನಲ್ಲಿ 1,015 ಕೋಟಿ ಘೋಷಣೆಗೊಂಡಿದ್ದರು. ಎಂಟಿಬಿ ನಾಗರಾಜ್ ಹೆಸರಿನಲ್ಲಿ ಚರಾಸ್ತಿ 314,75,54,785 ರೂ., ಸ್ಥಿರಾಸ್ತಿ 394,63,53,309 ರೂ., ವಾರ್ಷಿಕ ಆದಾಯ 102 ಕೋಟಿ ರೂ. ಹಾಗೂ 27, 70,31,565 ರೂ. ಸಾಲ ಹೊಂದಿರುವುದಾಗಿ ಮಾಹಿತಿ ನೀಡಿದ್ದರು. ಎಂಟಿಬಿ ನಾಗರಾಜ್ ಅವರು 8ನೇ ತರಗತಿ ವರೆಗೆ ವಿದ್ಯಾಭ್ಯಾಸ ಪಡೆದಿದ್ದಾರೆ.

    ಎಂಟಿಬಿ ನಾಗರಾಜ್ ಪತ್ನಿ ಶಾಂತಕುಮಾರಿ ಹೆಸರಿನಲ್ಲಿ 122,40,09,258 ರೂ. ಚರಾಸ್ತಿ, 184,01,120 ರೂ. ಸ್ಥಿರಾಸ್ತಿ ಹಾಗೂ ಅವರ ವಾರ್ಷಿಕ ಆದಾಯ 52 ಕೋಟಿ ರೂ. ಸೇರಿದಂತೆ 25 ಲಕ್ಷ ರೂ. ಸಾಲ ಹೊಂದಿರುವುದಾಗಿ ಮಾಹಿತಿ ನೀಡಿದ್ದರು. 2013ರ ಚುನಾವಣೆ ವೇಳೆ 470,13,52,248 ರೂ. ಆಸ್ತಿಯನ್ನು ಎಂಟಿಬಿ ನಾಗರಾಜ್ ಘೋಷಿಸಿಕೊಂಡಿದ್ದರು.

  • ಫೋರ್ಜರಿ ಮಾಡಿ ಆಸ್ತಿ ಕಬಳಿಸಿ ತಂದೆ-ತಾಯಿಯನ್ನು ಬೀದಿಗೆ ಬಿಟ್ಟ ಹೆಣ್ಣುಮಕ್ಕಳು!

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ ತಂದೆ-ತಾಯಿಯನ್ನು ಬೀದಿಗೆ ಬಿಟ್ಟ ಹೆಣ್ಣುಮಕ್ಕಳು!

    – ದ್ರೋಹಕ್ಕೆ ಕಣ್ಣೀರಿಟ್ಟ 90ರ ಹಿರಿ ಜೀವಗಳು

    ಬೆಂಗಳೂರು: ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಿಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿ ಅವರೆಲ್ಲರಿಗೂ ಸೂರು ಮಾಡಿಕೊಟ್ಟ ತಂದೆ-ತಾಯಿ, ಹೆಣ್ಣುಮಕ್ಕಳು ಮನೆ ಕಣ್ಣು ಎನ್ನುವಂತೆ ಸಾಕಿ ಸಲಹಿದರು. ಆದರೆ ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.

    ಮಕ್ಕಳಿಗಾಗಿ ನಿಸ್ವಾರ್ಥವಾಗಿ ತಮ್ಮ ಸುಖವನ್ನೂ ಮರೆತು ಅವರ ಸುಖಕ್ಕೆ ಬದುಕನ್ನೇ ಹೆತ್ತವರು ಸವೆಯುತ್ತಾರೆ. ಆದರೆ ವೆಲ್ಲಿಯನ್, ಕಮಲಮ್ಮ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿದ್ದಾರೆ. ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳು. ಈ ಮಕ್ಕಳನ್ನು ಓದಿಸಿ, ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದು, ನಾಲ್ಕು ಜನರಿಗೂ ಚಾಮರಾಜಪೇಟೆಯಲ್ಲಿ ಪ್ರತ್ಯೇಕ ಮನೆ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಮಾಡಿದ್ದರೂ ಹೆತ್ತವರು ಮಾತ್ರ ಈ ಮಕ್ಕಳಿಗೆ ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಆಸ್ತಿಯನ್ನು ಫೋರ್ಜರಿ ಸಹಿ ಮೂಲಕ ತಮ್ಮ ಹೆಸರಿಗೆ ಬರೆದುಕೊಂಡಿದ್ದು, ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.

    ಆದರೆ ಒಬ್ಬಳು ಪುತ್ರಿ ಹೆತ್ತವರನ್ನು ಮನೆಗೆ ಕರೆತಂದು ಸಾಕಲು ಮುಂದಾದಾಗ ಆಕೆಯ ಮನೆ ಸೇರಿದಂತೆ, ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಮೃಗೀಯ ವರ್ತನೆಗೆ ವೃದ್ದ ದಂಪತಿ ಕಣ್ಣೀರು ಹಾಕಿದ್ದಾರೆ.

    ಮಕ್ಕಳಿಗೆಂದು ದಂಪತಿ ವಿಲ್ ಸಹ ಮಾಡಿದ್ದರು. ಅದನ್ನ ನಂಬದೇ ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿಕೊಂಡಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಮನೆ ಬೇಕು ಎಂದು ದೊಡ್ಡ ಸೈಟಿನಲ್ಲಿ ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಒಂದೊಂದು ಮನೆಯನ್ನ ದಂಪತಿ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಇದೇ ವಿಚಾರಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡಿದ್ದರು.

    ನಂತರ ಜನವರಿಯಲ್ಲಿ ಜಿಗಣಿ ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ಕಟ್ಟಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ ಮಕ್ಕಳಿಂದಲೇ ತಂದೆಯ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.

    ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.