Tag: ಆಸ್ತಿ

  • 40.94 ಕೋಟಿ ರೂ. ಆಸ್ತಿಗೆ ಒಡೆಯ ಹಾಸನದ ಮೈತ್ರಿ ಅಭ್ಯರ್ಥಿ

    40.94 ಕೋಟಿ ರೂ. ಆಸ್ತಿಗೆ ಒಡೆಯ ಹಾಸನದ ಮೈತ್ರಿ ಅಭ್ಯರ್ಥಿ

    ಹಾಸನ: ಲೋಕಸಭಾ ಚುನಾವಣೆಗೆ (Lok Sabha Election) ಅಖಾಡ ರಂಗೇರಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಿದ್ದಾರೆ. ಅದೇ ರೀತಿ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಒಟ್ಟು 40.94 ಕೋಟಿ ರೂ. ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಹೊಂದಿರುವುದಾಗಿ ನಾಮಪತ್ರದ ಅಫಿಡವಿಟ್‌ನಲ್ಲಿ (Affidavit) ಮಾಹಿತಿ ನೀಡಿದ್ದಾರೆ.

    5.44 ಕೋಟಿ ರೂ. ಮೌಲ್ಯದ ಚರ ಹಾಗೂ 40.94 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸೇರಿ ಒಟ್ಟು 40.94 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಪ್ರಜ್ವಲ್ ರೇವಣ್ಣ ಹೇಳಿಕೊಂಡಿದ್ದಾರೆ. ಸದ್ಯ 9.29 ಲಕ್ಷ ರೂ. ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವಿವಿಧ ಬ್ಯಾಂಕ್‌ಗಳ ಉಳಿತಾಯ ಖಾತೆಯಲ್ಲಿ 57 ಲಕ್ಷ ರೂ. ನಗದು ಹೊಂದಿರುವುದಾಗಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

     

    ಕಳೆದ ಐದು ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ರೂ. ಆದಾಯಗಳಿಸಿರುವುದಾಗಿ ಹೇಳಿಕೊಂಡಿರುವ ಪ್ರಜ್ವಲ್, ಕೃಷಿಯೇತರ ಮೂಲದಿಂದ 1.33 ಕೋಟಿ ರೂ. ಆದಾಯ ಗಳಿಕೆ ಮಾಡಿದ್ದೇನೆ ಎಂದಿದ್ದಾರೆ. ಹಾಗೆಯೇ 31 ಹಸು, 4 ಎತ್ತು, ಒಂದು ಟ್ರ‍್ಯಾಕ್ಟರ್ ಹೊಂದಿರುವ ಪ್ರಜ್ವಲ್ ರೇವಣ್ಣ, ಬೆಂಗಳೂರು ಮೈಸೂರು ಸೇರಿ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ ಹಾಗೂ ಬೆಂಗಳೂರಿನ ನೆಲಮಂಗಲದಲ್ಲಿ ಆಸ್ತಿ ಹೊಂದಿರುವುದನ್ನು ಬಹಿರಂಗ ಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಮಗನಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ಬಿಎಸ್‍ವೈ: ಎಂ.ಚಂದ್ರಪ್ಪ

    ಈ ನಡುವೆ ಅತ್ತೆ ಅನುಸೂಯ ಅವರಿಂದ 22 ಲಕ್ಷ ರೂ., ಮತ್ತೊಬ್ಬ ಅತ್ತೆ ಶೈಲಜಾ ಅವರಿಂದ 10 ಲಕ್ಷ ರೂ. ತಂದೆ ರೇವಣ್ಣ ಅವರಿಂದ 86 ಲಕ್ಷ ರೂ. ಹಾಗೂ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರಿಂದ 1 ಕೋಟಿ ರೂ. ಸಾಲ ಹಾಗೂ ಕುಪೇಂದ್ರ ರೆಡ್ಡಿ ಅವರಿಂದ ಸಾಲ ಪಡೆದು ಒಟ್ಟು 4.48 ಕೋಟಿ ಸಾಲ ಹೊಂದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿಕೆ ಸುರೇಶ್

    ಈ ನಡುವೆ ಸರ್ಕಾರಕ್ಕೆ 3.04 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿರುವ ಅವರು, ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ರೂ. ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನ ಮತ್ತು 17.48 ಲಕ್ಷ ರೂ. ಮೌಲ್ಯದ 23 ಕೆಜಿ ಬೆಳ್ಳಿ ಹಾಗೂ 1.90 ಲಕ್ಷ ರೂ. ಮೌಲ್ಯದ ವಜ್ರದ ಆಭರಣ ಹೊಂದಿರುವುದಾಗಿ ಪ್ರಜ್ವಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

  • ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

    ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

    ರಾಮನಗರ: ಬೆಂಗಳೂರು ಗ್ರಾಮಾಂತರ (Bengaluru Rural) ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್‌ (DK Suresh) 593 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಡಿಕೆ ಸುರೇಶ್‌ ಅವರು ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

    2019ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) 338 ಕೋಟಿ ರೂ. ಆಸ್ತಿ ಘೋಷಿಸಿದ್ದ ಡಿಕೆ ಸುರೇಶ್‌ ಅವರು ಈ ಬಾರಿ ಒಟ್ಟು 106.71 ಕೋಟಿ ರೂ. ಚರಾಸ್ತಿ, ಒಟ್ಟು 486.33 ಕೋಟಿ ರೂ. ಸ್ಥಿರಾಸ್ತಿ ಘೋಷಿಸಿದ್ದಾರೆ. ಕಳೆದ 5 ವರ್ಷಗಳಲ್ಲಿ ಡಿ.ಕೆ.ಸುರೇಶ್ ಅವರ ಆಸ್ತಿಯಲ್ಲಿ ಸುಮಾರು 259.19 (75%) ಕೋಟಿ ರೂ.ನಷ್ಟು ಏರಿಕೆ ಕಂಡಿದೆ.

    ತನ್ನ ಬಳಿ ಯಾವುದೇ ಕಾರು ಇಲ್ಲ. ಒಟ್ಟು 150.06 ಕೋಟಿ ರೂ ಸಾಲವನ್ನು ಹೊಂದಿರುವುದಾಗಿ ಸುರೇಶ್‌ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

    ತನ್ನ ಬಳಿ ಒಟ್ಟು 21,35,500 ರೂ. ಮೌಲ್ಯದ 1260 ಗ್ರಾಂ ಚಿನ್ನ ಮತ್ತು 2,10,000 ರೂ. ಮೌಲ್ಯದ 4886 ಗ್ರಾಂ ಬೆಳ್ಳಿ ಹೊಂದಿರುವುದಾಗಿ ಹೇಳಿದ್ದಾರೆ.ಒಟ್ಟು 32,75,50,472 ರೂ. ಮೌಲ್ಯದ ಕೃಷಿ ಭೂಮಿಯನ್ನು ಹೊಂದಿದ್ದರೆ 210,47,68,159 ರೂ. ಮೌಲ್ಯದ ಕೃಷಿಯೆತರ ಭೂಮಿಯನ್ನು ಹೊಂದಿದ್ದಾರೆ. ಒಟ್ಟು 211,91,41,888 ರೂ. ಮೌಲ್ಯದ ವಾಣಿಜ್ಯ ಕಟ್ಟಡಗಳನ್ನು ಡಿಕೆ ಸುರೇಶ್‌ ಹೊಂದಿದ್ದಾರೆ.  ಇದನ್ನೂ ಓದಿ: ರಂಗೇರಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಬೃಹತ್ ಮೆರವಣಿಗೆ ಮೂಲಕ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

    150 ಕೋಟಿ ಸಾಲ: 50.06 ಕೋಟಿ ರೂ. ಸಾಲ ಇರುವುದಾಗಿಯೂ ಡಿಕೆ ಸುರೇಶ್‌ ತಿಳಿಸಿದ್ದಾರೆ. 7.27 ಕೋಟಿ ರೂ. ಮೊತ್ತದ ಸಾಲಕ್ಕೆ ಸಂಬಂಧಿಸಿದಂತೆ ವಿವಾದವೂ ಜಾರಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಆದಾಯ ಎಷ್ಟು?:  2019ರ ಮಾರ್ಚ್‌ ಅಂತ್ಯಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ 1,12,17,630 ರೂ. 2020 ಹಣಕಾಸು ವರ್ಷದಲ್ಲಿ 3,71,38,390 ರೂ., 2021ರ ಹಣಕಾಸು ವರ್ಷದಲ್ಲಿ 32,51,35,700 ರೂ., 2022ರ ಹಣಕಾಸು ವರ್ಷದಲ್ಲಿ 2,29,82,360 ರೂ., 2023 ರ ಹಣಕಾಸು ವರ್ಷದಲ್ಲಿ 12,30,04,200 ಆದಾಯ ಬಂದಿದೆ ಎಂದು ತಿಳಿಸಿದ್ದಾರೆ.

     

  • ಆಸ್ತಿ ವಿಚಾರಕ್ಕೆ ಕಿತ್ತಾಟ – ಕಾರು ಹತ್ತಿಸಿ ಸಹೋದರನನ್ನೇ ಹತೈಗೈದ, ವಿಡಿಯೋ ಲಭ್ಯ

    ಆಸ್ತಿ ವಿಚಾರಕ್ಕೆ ಕಿತ್ತಾಟ – ಕಾರು ಹತ್ತಿಸಿ ಸಹೋದರನನ್ನೇ ಹತೈಗೈದ, ವಿಡಿಯೋ ಲಭ್ಯ

    ಶಿವಮೊಗ್ಗ: ಆಸ್ತಿ (Property) ವಿಚಾರಕ್ಕೆ ಫೆ.29 ರಂದು ಸಹೋದರನನ್ನು  ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡುತ್ತಿರುವ ದೃಶ್ಯ ಲಭ್ಯವಾಗಿದೆ.

    ಶಿವಮೊಗ್ಗ (Shivamogga) ಜಿಲ್ಲೆ ಸೊರಬ ತಾಲೂಕಿನ ತುಡನೀರು ಗ್ರಾಮದ ನಿವಾಸಿ ರಫೀಕ್‌ (45) ಆಸ್ತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಕಳೆದ ವರ್ಷ ತನ್ನ ಸಹೋದರನನ್ನು ಕೊಲೆ ಮಾಡಿ ಜೈಲು ಸೇರಿದ್ದ. ಜಾಮೀನಿನ ಮೇಲೆ ರಫೀಕ್ ಜೈಲಿನಿಂದ (Jail) ಹೊರಗಡೆ ಬಂದಿದ್ದ.

     

    ಜೈಲಿನಿಂದ ಬಂದ ರಫೀಕ್‌ನ ಮತ್ತೊಬ್ಬ ಸಹೋದರ ಇದಾಯಸ್‌ ಸಾಗರದ ಚಿಪ್ಪಳ್ಳಿಯಲ್ಲಿ ಕೊಲೆ ಮಾಡಿದ್ದ. ರಫೀಕ್ ಮೇಲೆ ಕಾರು ಹತ್ತಿಸಿ ಕೊಲೆ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದರು. ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಈಗ ಇದಾಯಸ್‌ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: PublicTV Explainer: ಬೆಂಗಳೂರಿಗೆ ಬಂತು ಮೊದಲ ಚಾಲಕ ರಹಿತ ಮೆಟ್ರೋ ರೈಲು – ವಿಶೇಷತೆಗಳು ನಿಮಗೆಷ್ಟು ಗೊತ್ತು?

     

  • ಸತತ 5ನೇ ಬಾರಿ ರಾಜ್ಯಸಭೆಗೆ ಜಯಾ ಬಚ್ಚನ್: ಆಸ್ತಿ ಮೌಲ್ಯ 1589 ಕೋಟಿ ರೂ.

    ಸತತ 5ನೇ ಬಾರಿ ರಾಜ್ಯಸಭೆಗೆ ಜಯಾ ಬಚ್ಚನ್: ಆಸ್ತಿ ಮೌಲ್ಯ 1589 ಕೋಟಿ ರೂ.

    ಬಾಲಿವುಡ್ ನ ಖ್ಯಾತ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರ ಪತ್ನಿ, ನಟಿ ಜಯಾ ಬಚ್ಚನ್ (Jaya Bachchan)  ಸತತ 5ನೇ ಬಾರಿ ಸಮಾಜವಾದಿ ಪಕ್ಷದಿಂದ ರಾಜ್ಯ ಸಭೆಗೆ ಸ್ಪರ್ಧಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಚುನಾವಣಾ ಆಯೋಗಕ್ಕೆ ತಮ್ಮ ಒಟ್ಟು ಆಸ್ತಿಯನ್ನು ಘೋಷಣೆ ಮಾಡಿದ್ದು, ಅವರ ಕುಟುಂಬದ ಒಟ್ಟು ಆಸ್ತಿ (Property) 1589 ಕೋಟಿ ರೂಪಾಯಿ ಎಂದು ಘೋಷಣೆ ಮಾಡಿದ್ದಾರೆ.

    ಜಯಾ ಬಚ್ಚನ್ ಸಿನಿಮಾ ರಂಗದಲ್ಲಿ ಸಕ್ರೀಯರಾಗಿಲ್ಲವಾದರೂ, ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2004 ರಿಂದ ಅವರು ಸಮಾಜವಾದಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ. ಅಲ್ಲದೇ, ಅಂದಿನಿಂದಲೇ ಸತತವಾಗಿ ರಾಜ್ಯಸಭಾ ಸದಸ್ಯೆಯಾಗಿಯೂ ಆಯ್ಕೆಯಾಗಿದ್ದಾರೆ. ಹೀಗಾಗಿ ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಒಟ್ಟು ಆಸ್ತಿಯನ್ನು ಘೋಷಿಸೋದು ಕಡ್ಡಾಯ ಕೂಡ ಆಗಿದೆ.

    ಹಾಗಂತ ಅಷ್ಟೂ ಆಸ್ತಿಯೂ ಜಯಾ ಬಚ್ಚನ್ ಅವರಿಗೆ ಸೇರಿದ್ದಲ್ಲ. ಜಯಾ ಬಚ್ಚನ್ ಮತ್ತು ಪತಿ ಅಮಿತಾಭ್ ಬಚ್ಚನ್ ಸೇರಿದಂತೆ ದಂಪತಿಯ ಒಟ್ಟು ಆಸ್ತಿ 1589 ಕೋಟಿ ರೂಪಾಯಿ ಇದೆ. ಇದರಲ್ಲಿ ಅಮಿತಾಭ್ ಬಚ್ಚನ್ ಆಸ್ತಿ 273, 74,96, 590 ಕೋಟಿ ರೂಪಾಯಿ ಆಗಿದ್ದರೆ, ಜಯಾ ಬಚ್ಚನ್ ಅವರದ್ದು 1, 63, 56,190 ಕೋಟಿ ರೂಪಾಯಿ ಆಗಿದೆ.

    ಇದರಲ್ಲಿ ಚರಾಸ್ತಿ 849.11 ಕೋಟಿ ರೂಪಾಯಿ ಮೌಲ್ಯದ್ದು ಆಗಿದ್ದರೆ, ಚರಾಸ್ತಿಯಲ್ಲಿ 40.97 ಕೋಟಿ ರೂಪಾಯಿ ಜಯಾ ಬಚ್ಚನ್ ಅವರಿಗೆ ಸೇರಿದೆ. ಸ್ಥಿರಾಸ್ತಿ ಒಟ್ಟು ಮೌಲ್ಯ 729.77 ಕೋಟಿ ರೂಪಾಯಿ. ಜಯಾ ಅವರ ಬಳಿ 9.82 ಲಕ್ಷ ರೂಪಾಯಿ ಮೌಲ್ಯದ ಕಾರು ಇದ್ದರೆ, 4.97 ಕೋಟಿ ರೂಪಾಯಿ ಬೆಲೆ ಬಾಳುವ ಬಂಗಾರ ಹೊಂದಿದ್ದಾರೆ. ಅಮಿತಾಭ್ ಬಳಿ 16 ಕಾರುಗಳಿದ್ದು, 54.77 ಕೋಟಿ ರೂಪಾಯಿ ಮೌಲ್ಯದ ಬಂಗಾರ ಹೊಂದಿದ್ದಾರೆ. ಅಮಿತಾಭ್ ಬಳಿ ಇರುವ ಕಾರಿನ ಬೆಲೆಯೇ 17.66 ಕೋಟಿ ರೂಪಾಯಿದ್ದು ಆಗಿದೆ.

    ಜಯಾ ಬಚನ್ ಅವರ ಬ್ಯಾಂಕ್ ಬ್ಯಾಲೆನ್ಸ್ 10,11,33,172 ಕೋಟಿ ರೂಪಾಯಿ ಹೊಂದಿದ್ದರೆ, ಅಮಿತಾಭ್ ಬಚ್ಚನ್ ಅವರ ಬ್ಯಾಂಕ್ ಬ್ಯಾಲೆನ್ಸ್ 120,45,62,083 ಹೊಂದಿದ್ದಾರೆ. ಈ ದಂಪತಿಯು ಬಾಡಿಗೆ, ವೇತನ, ವಿವಿಧ ಕಂಪೆನಿಗಳಲ್ಲಿನ ಹೂಡಿಕೆ, ನಿರ್ಮಾಣ ಸಂಸ್ಥೆ ಹೀಗೆ ನಾನಾ ಮೂಲಗಳಿಂದ ಬಂದಿರುವ ಆದಾಯದ ಒಟ್ಟು ಮೊತ್ತವಾಗಿದೆ.

  • ರಾಡ್‌ನಿಂದ ಹೊಡೆದು ವೃದ್ಧ ದಂಪತಿಯ ಕೊಲೆ – ಆಸ್ತಿ ವಿಚಾರಕ್ಕೆ ಮಗನಿಂದ ಹತ್ಯೆ ಶಂಕೆ

    ರಾಡ್‌ನಿಂದ ಹೊಡೆದು ವೃದ್ಧ ದಂಪತಿಯ ಕೊಲೆ – ಆಸ್ತಿ ವಿಚಾರಕ್ಕೆ ಮಗನಿಂದ ಹತ್ಯೆ ಶಂಕೆ

    ಬೆಂಗಳೂರು: ರಾಡ್‌ನಿಂದ (Rod) ಹೊಡೆದು ಮನೆಯಲ್ಲಿದ್ದ ವೃದ್ಧ ದಂಪತಿಯನ್ನು (Old Couple) ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ (Sulibele) ನಡೆದಿದೆ.

    ರಾಮಕೃಷ್ಣಪ್ಪ (70) ಹಾಗೂ ಮುನಿರಾಮಕ್ಕ (65) ಕೊಲೆಯಾದ ದಂಪತಿ. ಇನ್ನು ಆಸ್ತಿ (Property) ವಿಚಾರವಾಗಿ ಮಗ ತಂದೆ ತಾಯಿಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಾದಗಲಿನಿಂದಲೂ ನರಸಿಂಹ ತಂದೆ ತಾಯಿಯನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದು, ಒಬ್ಬನೇ ಮಗನಾದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ಇದನ್ನೂ ಓದಿ: ಬೆಳಗಾವಿ ಅಧಿವೇಶನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಬಸ್ ಅಪಘಾತ – 17 ಮಂದಿಗೆ ಗಾಯ

    ವೃದ್ಧ ದಂಪತಿಗೆ ಒಟ್ಟು 5 ಜನ ಮಕ್ಕಳಿದ್ದು, ಈ ಪೈಕಿ ನಾಲ್ಕು ಮಂದಿ ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗ. ಮದುವೆಯಾದಗಿನಿಂದ ನರಸಿಂಹಮೂರ್ತಿ ಬೇರೆ ಇದ್ದು, ತನ್ನ ಎಲ್ಲಾ ಮಕ್ಕಳನ್ನು ಸಾಕಿ ವೃದ್ಧ ದಂಪತಿ ಮದುವೆ ಮಾಡಿಕೊಟ್ಟಿದ್ದರು. ಹೆಣ್ಣು ಮಕ್ಕಳಿಗೆಲ್ಲಾ ಮದುವೆ ಮಾಡಿಕೊಡಲಾಗಿದೆ, ಇನ್ನು ಯಾವುದೇ ಆಸ್ತಿಯನ್ನು ಭಾಗ ಮಾಡುವಂತಿಲ್ಲ ಎಂದು ನರಸಿಂಹಮೂರ್ತಿ ಹೇಳುತ್ತಿದ್ದ. ಅಲ್ಲದೇ ಆಸ್ತಿ ವಿಚಾರವಾಗಿ ಹಲವು ವರ್ಷಗಳಿಂದ ತಂದೆ ತಾಯಿಗೆ ಹಿಂಸೆ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ತನ್ನ ಹೆಣ್ಣು ಮಕ್ಕಳಿಗೆ ಆಸ್ತಿ ಭಾಗ ನೀಡಬೇಕು ಎಂದು ವೃದ್ಧ ದಂಪತಿ ಹೇಳುತ್ತಿದ್ದು, ಇದೇ ವಿಚಾರವಾಗಿ ಕಳೆದ ಶನಿವಾರ ಸಂಜೆ ನರಸಿಂಹಮೂರ್ತಿ ತಂದೆ ತಾಯಿ ವಾಸವಿದ್ದ ಮನೆಗೆ ಹೋಗಿದ್ದ. ಈ ವೇಳೆ ಜಗಳ ಮಾಡಿ ರಾಮಕೃಷ್ಣಪ್ಪನಿಗೆ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದು, ನಂತರ ತಾಯಿಯನ್ನು ದಾರುಣವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ

    ಕೊಲೆ ಮಾಡಿ ತಲೆ ಮರೆಸಿಕೊಳ್ಳದೆ ತನಗೆ ಏನು ತಿಳಿಯದ ಹಾಗೆ ನರಸಿಂಹಮೂರ್ತಿ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ. ಪ್ರತಿ ದಿನ ತನ್ನ ಹೆಣ್ಣುಮಕ್ಕಳಿಗೆ ವೃದ್ಧ ದಂಪತಿ ಕರೆ ಮಾಡುತ್ತಿದ್ದರು. ಆದರೆ ಶನಿವಾರದಿಂದ ಕರೆ ಮಾಡಿರಲಿಲ್ಲ. ಹೀಗಾಗಿ ಹೆಣ್ಣುಮಕ್ಕಳು ಅನುಮಾನಗೊಂಡಿದ್ದು, ಕೊನೆಯ ಮಗಳು ಶಾಕುಂತಲ ಮನೆಯ ಬಳಿ ಬಂದು ನೋಡಿದ್ದಾರೆ. ಈ ವೇಳೆ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು. ತಕ್ಷಣ ಶಾಕುಂತಲ ತನ್ನ ತಂದೆ ತಾಯಿಗೆ ಕರೆ ಮಾಡಿದ್ದು, ಇಬ್ಬರ ನಂಬರ್ ಕೂಡಾ ಸ್ವಿಚ್‌ಆಫ್ ಆಗಿತ್ತು. ಈ ಹಿನ್ನೆಲೆ ಶಾಕುಂತಲ ಆತಂಕಗೊಂಡು ಸೂಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿಯ ಮನೆಯ ಬಳಿ ಬಂದಿದ್ದರು. ಇದನ್ನೂ ಓದಿ: ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿ – ದೇಶದಲ್ಲೇ ಬೆಂಗಳೂರು ನಂಬರ್ 1

    ಈ ವೇಳೆ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ ಅವರು, ತಕ್ಷಣ ಮನೆಯ ಬಾಗಿಲನ್ನು ಒಡೆದು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿಯ ಮೃತ ದೇಹ ನೋಡಿ ಶಾಕುಂತಲ ಶಾಕ್ ಆಗಿದ್ದು, ಸದ್ಯ ಆರೋಪಿ ನರಸಿಂಹಮೂರ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ (Hoskote) ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಮಂಡ್ಯ ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

  • ಆಸ್ತಿ ಬರೆಯಲು ನಿರಾಕರಿಸಿದ ಅಮ್ಮನ ಶಿರಚ್ಛೇದ ಮಾಡಿದ ಪಾಪಿ ಪುತ್ರ!

    ಆಸ್ತಿ ಬರೆಯಲು ನಿರಾಕರಿಸಿದ ಅಮ್ಮನ ಶಿರಚ್ಛೇದ ಮಾಡಿದ ಪಾಪಿ ಪುತ್ರ!

    ಲಕ್ನೋ: ತನ್ನ ಹೆಸರಿಗೆ ಆಸ್ತಿ ವರ್ಗಾಯಿಸಲು ನಿರಾಕರಿಸಿದ ಕಾರಣಕ್ಕೆ ಮಗ (Son) ತನ್ನ ತಾಯಿಯ (Mother) ಶಿರಚ್ಛೇದ ಮಾಡಿ ರುಂಡದೊಂದಿಗೆ ಪರಾರಿಯಾದ ಘಟನೆ ಉತ್ತರಪ್ರದೇಶದ (Uttar Pradesh) ಸೀತಾಪುರ (Sitapur) ಜಿಲ್ಲೆಯ ತಾಳಂಗಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಜಿಲ್ಲೆಯ ಮೇಜಾಪುರ ಗ್ರಾಮದಲ್ಲಿ ಶನಿವಾರ ಘಟನೆ ನಡೆದಿದ್ದು, ಆರೋಪಿ ದಿನೇಶ್ ಪಾಸಿ (35) ತನ್ನ ತಾಯಿ ಕಮಲಾ ದೇವಿಯನ್ನು (65) ಕೃಷಿ ಬ್ಲೇಡ್‌ನಿಂದ ಹತ್ಯೆಗೈದು ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದವ ಅರೆಸ್ಟ್

    ದಿನೇಶ್ ಮದ್ಯವ್ಯಸನಿಯಾಗಿದ್ದ. ಈತ ಪ್ರತಿದಿನ ಕುಡಿದು ಬಂದು ತಾಯಿಯೊಂದಿಗೆ ಜಗಳವಾಡುತ್ತಿದ್ದು, ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಕಿರುಕುಳ ನೀಡುತ್ತಿದ್ದ. ಅದೇ ರೀತಿ ಶನಿವಾರವೂ ಇವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ತಾಯಿಯ ರುಂಡವನ್ನು ಕತ್ತರಿಸಿದ್ದಾನೆ. ರುಂಡವಿಲ್ಲದ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಮಿನಿ ಬಸ್‌ಗೆ ಕಾರು ಡಿಕ್ಕಿ – ಪ್ರೇಮಿಗಳ ದಾರುಣ ಸಾವು

  • ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

    ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಇದೆ. ನನ್ನ ಆಸ್ತಿಯನ್ನು (Property) ತನಿಖೆ (Investigation) ಮಾಡಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಹೆಸರು ಹೇಳದೆ ಪರೋಕ್ಷವಾಗಿ ಸಚಿವ ಚೆಲುವರಾಯಸ್ವಾಮಿಗೆ (N. Chaluvaraya Swamy) ಸವಾಲ್ ಹಾಕಿದ್ದಾರೆ.

    ಕುಮಾರಸ್ವಾಮಿ ಆಸ್ತಿ ತನಿಖೆ ಮಾಡಿಸಿ ಎಂಬ ಚೆಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಸ್ನೇಹಿತರೊಬ್ಬರು, ನನ್ನ ಆಸ್ತಿ ತನಿಖೆ ಮಾಡುವ ಭಯಕ್ಕೆ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಈಗ ತನಿಖೆ ಮಾಡಿ ಎಂದು ಹೇಳುತ್ತಿದ್ದಾರೆ. ನಾನು ಈಗಲೂ ಸಿದ್ಧ. ನನ್ನ ಆಸ್ತಿ ತನಿಖೆ ಮಾಡಿಸಿ. ನಿಮ್ಮದೆ ಸರ್ಕಾರ ಇದೆ. ಸಿಎಂಗೆ ಹೇಳಿ ಯಾವ ತನಿಖೆ ಬೇಕೋ ಮಾಡಿಸಿ ಎಂದರು. ಇದನ್ನೂ ಓದಿ: ಐದು ಹೆಸರು ಎಂದರೆ ವರ್ಗ ಏನಯ್ಯ – ಮಗನ ವೈರಲ್ ವೀಡಿಯೋಗೆ ಸಿಎಂ ಪ್ರತಿಕ್ರಿಯೆ

    ನನ್ನ ಆಸ್ತಿ ತನಿಖೆ ಆಗಲಿ. ಅದರ ಜೊತೆ ಮಾಕಳಿ ಗ್ರಾಮದ ಮೂರೂವರೆ ಎಕರೆ ಕೆರೆ ಜಾಗ ಸರ್ವೆ ನಂಬರ್ 13 ಕೆರೆನೇ ಮಾಯ ಆಗಿದೆ. ಆ ಕೆರೆ ಜಾಗ ನಾನು ನುಂಗಿ ಹಾಕಿದ್ದೀನಾ? ಆ ಕೆರೆ ನುಂಗಿ ಹಾಕಿದ್ದು ಯಾರು? ಇದು ತನಿಖೆ ಆಗಲಿ ಅಂತ ಚೆಲುವರಾಯಸ್ವಾಮಿ ವಿರುದ್ಧ ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇದನ್ನೂ ಓದಿ: ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಅಪರಾಧವಲ್ಲ: ಯತೀಂದ್ರ ಪರ ಚಲುವರಾಯಸ್ವಾಮಿ ಬ್ಯಾಟಿಂಗ್

    1962ರಲ್ಲಿ ದೇವೇಗೌಡರು ರಾಜಕೀಯಕ್ಕೆ ಬಂದರು. ಒಬ್ಬರು ಕಾರ್ಪೋರೇಟರ್, ಜಿಲ್ಲಾ ಪಂಚಾಯತಿ ಸದಸ್ಯ ಮಾಡಿರೋ ಹಣ ನಾನು ಮಾಡಿಲ್ಲ. ನಾನು ಸಿನಿಮಾದಲ್ಲಿ ದುಡಿದು 45 ಎಕರೆ ಜಾಗ ತೆಗೆದುಕೊಂಡಿದ್ದೇನೆ. ನನ್ನ ಜೊತೆ 24 ಗಂಟೆ ಇದ್ದವರೇ ಇವರು. ಬಲಗೈನಲ್ಲಿ ತೆಗೆದುಕೊಂಡು ಎಡಗೈನಲ್ಲಿ ದಾನ ಮಾಡಿದ್ದೇನೆ. ರಾಜಕೀಯಕ್ಕೆ ನಾನು ಹಣ ಮಾಡಿಲ್ಲ. ಪಕ್ಷ ಉಳಿಸೋಕೆ ನಾನು ಮಾಡಿದ್ದೇನೆ. ನಾನು ಇವರ ರೀತಿ ದುಡ್ಡು ಮಾಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್‌ಟಿಎಸ್

    ನಾನು 100% ಶುದ್ಧ ಇಲ್ಲ. ಇವತ್ತಿನ ರಾಜಕೀಯ ಅಧಿಕಾರ ದುಡ್ಡು ಇಲ್ಲದೆ ನಡೆಯಲ್ಲ. ಇದನ್ನು ಓಪನ್ ಆಗಿ ಹೇಳಿದ್ದೇನೆ. ಆದರೆ ಇವರ ರೀತಿ ಸರ್ಕಾರದ ಆದೇಶ ಮಾರಾಟಕ್ಕೆ ಇಟ್ಟಿಲ್ಲ. ಚುನಾವಣೆ ಬಂದಾಗ ನಾನು ಭಿಕ್ಷೆ ಬೇಡಿದ್ದೇನೆ. ಆದರೆ ನಾನು ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಲಂಚಕ್ಕೆ ಶಾಸಕರ ಪ್ರೋತ್ಸಾಹ? – ಶರಣು ಸಲಗರ್ ಆಡಿಯೋ ವೈರಲ್

  • ನನ್ನ ವಿಚಾರಣೆ ಮಾಡೇ ಇಲ್ಲ, 90% ತನಿಖೆ ಪೂರ್ಣ ಹೇಗೆ ಆಗುತ್ತೆ: ಡಿಕೆಶಿ ಪ್ರಶ್ನೆ

    ನನ್ನ ವಿಚಾರಣೆ ಮಾಡೇ ಇಲ್ಲ, 90% ತನಿಖೆ ಪೂರ್ಣ ಹೇಗೆ ಆಗುತ್ತೆ: ಡಿಕೆಶಿ ಪ್ರಶ್ನೆ

    ಬೆಂಗಳೂರು: ನನ್ನನ್ನು ಒಂದು ದಿನ ಸಹ ವಿಚಾರಣೆಗೆ ಕರೆಸಿಲ್ಲ. ಈಗ 90% ರಷ್ಟು ತನಿಖೆ ಪೂರ್ಣ ಆಗಿದೆ ಎಂದು ಹೇಗೆ ಹೇಳಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪ್ರಶ್ನೆ ಮಾಡಿದ್ದಾರೆ.

    ಅದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ (CBI) ತನಿಖೆಗೆ ಹೈಕೋರ್ಟ್ ಅಸ್ತು ಅಂದಿರುವ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಬೆಂಗಳೂರಿನ ಕೇಂಪೇಗೌಡ ಏರ್‌ಪೋರ್ಟ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಕರಣದಲ್ಲಿ ಎಫ್‌ಐಆರ್ ಹಾಕಿರೋದು ಸರಿ ಇಲ್ಲ ಅಂತ ನ್ಯಾಯಾಲಯಕ್ಕೆ ಹೋಗಿದ್ದೆ. ಯಡಿಯೂರಪ್ಪ ಸರ್ಕಾರ ಇದ್ದಾಗ ಸಿಬಿಐಗೆ ತನಿಖೆಗೆ ಅವಕಾಶ ಕೊಟ್ಟಿದ್ರು. ಈಗ 90% ರಷ್ಟು ತನಿಖೆ ಪೂರ್ಣ ಆಗಿದೆ ಅಂತ ಹೇಳಿದ್ದಾರೆ. ನನ್ನ ಒಂದು ದಿನ ಸಹ ವಿಚಾರಣೆಗೆ ಕರೆಸಿಲ್ಲ ಎಂದು ತಿಳಿಸಿದರು.

    ನನ್ನನ್ನು ಕರೆದು ನನ್ನ ಆಸ್ತಿಯನ್ನು ಕೇಳಬೇಕು. ನನ್ನ ಆಸ್ತಿ ಯಾವುದು? ನನ್ನ ಹೆಂಡತಿಯ ಆಸ್ತಿ ಯಾವುದು ಅಂತ ಕೇಳಬೇಕು. ಅದು ಹೇಗೆ 90% ರಷ್ಟು ತನಿಖೆ ಪೂರ್ಣ ಮಾಡಿದ್ದಾರೋ ನನಗೆ ಅರ್ಥ ಆಗುತ್ತಿಲ್ಲ. ನ್ಯಾಯಾಲಯದ ಬಗ್ಗೆ ನನಗೆ ನಂಬಿಕೆ ಇದೆ. ಕಾನೂನು ಚೌಕಟ್ಟಿನಲ್ಲೇ ಉತ್ತರ ಕೊಡುತ್ತೇನೆ ಎಂದರು.

    ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಈಗಷ್ಟೇ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ತಿಂಗಳ ಒಳಗಾಗಿ ತನಿಖೆ ಪೂರ್ಣ ಮಾಡಲು ಹೇಳಿದ್ದಾರೆ, ನೋಡೋಣ. ನನಗೆ ನೋಟಿಸ್ ಕೊಟ್ಟು ಕರೆದು ಉತ್ತರ ಕೇಳಿ ಏನೇನು ಮಾಡ್ತಾರೋ ಎಂದರು. ಇದನ್ನೂ ಓದಿ: ಯಾವುದೇ ಅಪರಾಧ ಮಾಡಿಲ್ಲ, ಹಾಗಾಗಿ ಟ್ರಬಲ್ ಇಲ್ಲ: ಡಿಕೆ ಸುರೇಶ್

     

    ಪ್ರಕರಣದಲ್ಲಿ ಬಿಜೆಪಿಯವರ ರಾಜಕೀಯ ಪ್ರೇರಿತ ಇದ್ದರೂ ನನಗೆ ಭರವಸೆ ಇದೆ. ಕಾನೂನು ಚೌಕಟ್ಟಿನಲ್ಲಿಯೇ ಇದ್ದೇನೆ. ಕಾನೂನಡಿಯೇ ಉತ್ತರ ಕೊಡುತ್ತೇನೆ. ಬಿಜೆಪಿಯವರು ಏನೇ ಷಡ್ಯಂತ್ರ ಮಾಡಿದರೂ ಕೂಡ ನ್ಯಾಯಾಲಯಕ್ಕೆ ನನ್ನ ಎಲ್ಲಾ ಪಟ್ಟಿ ಕೊಡುತ್ತೇನೆ. ಅದೇ ಅದಕ್ಕೆ ಉತ್ತರ ಕೊಡುತ್ತದೆ ಎಂದು ಹೇಳಿದರು.

    ನಳೀನ್ ಕುಮಾರ್ ಕಟೀಲ್, ಕುಮಾರಸ್ವಾಮಿ ತಿಹಾರ್ ಜೈಲಿಗೆ ಕಳಿಸುವುದಾಗಿ ಹೇಳಿದ್ದಾರೆ. ಚುನಾವಣೆ ಮುಗಿಯುವವರೆಗೂ ಅಲ್ಲಿಯೇ ಇಡುವುದಾಗಿಯೂ ಹೇಳಿದ್ದಾರೆ. ಇದು ಅವರ ಬಾಯಲ್ಲಿ ಬಂದಿರೋ ನುಡಿಮುತ್ತುಗಳು. ಈಗಲೂ ಕೆಲವರು ಮಾತನಾಡುತ್ತಿದ್ದಾರೆ, ಮಾತಾಡಲಿ. ನಾನು ಎಲ್ಲೂ ಓಡಿ ಹೋಗಲ್ಲ. ಉತ್ತರ ಕೊಡುತ್ತೇನೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಅನುಕಂಪವನ್ನು ನಮ್ಮ ದೇಶದಲ್ಲಿ ಹೇಗೆ ಬೇಕಾದ್ರು ಉಪಯೋಗ ಮಾಡಿಕೊಳ್ತಾರೆ: ಡಿಕೆಶಿಗೆ ಕುಮಾರಸ್ವಾಮಿ ಠಕ್ಕರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆ.ಆರ್.ಪುರಂ ಸರ್ವೆ ಸೂಪರ್‌ವೈಸರ್ 5 ಲಿಕ್ಕರ್ ಲೈಸೆನ್ಸ್‌ಗಳ ಒಡೆಯ!

    ಕೆ.ಆರ್.ಪುರಂ ಸರ್ವೆ ಸೂಪರ್‌ವೈಸರ್ 5 ಲಿಕ್ಕರ್ ಲೈಸೆನ್ಸ್‌ಗಳ ಒಡೆಯ!

    ಬೆಂಗಳೂರು: ಕೆ.ಆರ್.ಪುರಂ (K.R.Puram) ಸರ್ವೆ ಸೂಪರ್‌ವೈಸರ್ ಕೆ.ಟಿ ಶ್ರೀನಿವಾಸ್‌ಗೆ ಸೇರಿದ 14 ಕಡೆಗಳಲ್ಲಿ ಲೋಕಾಯುಕ್ತ (Lokayukta) ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ (Ride) ನಡೆಸಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಪತ್ತೆ ಮಾಡಿದ್ದಾರೆ.

    ತುಮಕೂರು (Tumakuru) ಹಾಗು ಬೆಂಗಳೂರಿನ (Bengaluru) 14 ಕಡೆ ಲೋಕಾ ದಾಳಿ ನಡೆದಿದ್ದು, 5 ಲಿಕ್ಕರ್ ಲೈಸೆನ್ಸ್‌ಗಳನ್ನು (Liquor License) ಹೆಂಡತಿ ಹಾಗೂ ಸಹೋದರಿಯ ಹೆಸರಿನಲ್ಲಿ ಹೊಂದಿರುವ ಬಗ್ಗೆ ದಾಖಲೆಗಳು ಪತ್ತೆಯಾಗಿದೆ. ಕೆ.ಟಿ ಶ್ರೀನಿವಾಸ್‌ಗೆ ಸೇರಿದ ಎಷ್ಟೆಷ್ಟು ಆಸ್ತಿ ಪತ್ತೆಯಾಗಿದೆ ಎಂಬ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇದನ್ನೂ ಓದಿ: ಗೃಹಜ್ಯೋತಿಗಾಗಿ ಹಣ ಬಿಡುಗಡೆ – ಎಸ್ಕಾಂಗಳು ಕೇಳಿದ್ದು ಎಷ್ಟು? ಸಿಕ್ಕಿದ್ದು ಎಷ್ಟು?

    ಎಲ್ಲೆಲ್ಲಿ ಎಷ್ಟೆಷ್ಟು ಆಸ್ತಿ?
    * ಅಂದ್ರಳ್ಳಿಯಲ್ಲಿ 2.70 ಲಕ್ಷ ರೂ. ಮೌಲ್ಯದ ನಿವೇಶನ.
    * ಬೆಂಗಳೂರಿನ ಹೆಣ್ಣೂರು ಗ್ರಾಮದಲ್ಲಿ ಸಹೋದರಿ ಕೆ.ಟಿ ಪುಷ್ಪಲತಾ ಹೆಸರಿನಲ್ಲಿ 83.45 ಲಕ್ಷ ರೂ. ಮೌಲ್ಯದ ನಿವೇಶನ.
    * 60 ಲಕ್ಷ ರೂ. ಮೌಲ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ.
    * ರಾಯಪುರ ಗ್ರಾಮದಲ್ಲಿ ಪತ್ನಿ ರಾಜೇಶ್ವರಿ ಹೆಸರಿನಲ್ಲಿ 5 ಲಕ್ಷ ರೂ. ಮೌಲ್ಯದ 5 ಗುಂಟೆ ಜಮೀನು.
    * ಪತ್ನಿ ಹಾಗೂ ಸಹೋದರಿಯ ಹೆಸರಲ್ಲಿ 50 ಲಕ್ಷ ರೂ. ಮೌಲ್ಯದ ಹೋಟೆಲ್ ಉದ್ಯಮ
    * ತುಮಕೂರಿನ ಬಾಣಾವರದಲ್ಲಿ 50 ಲಕ್ಷ ರೂ. ಮೌಲ್ಯದ ಹೋಟೆಲ್ ಮತ್ತು ಬೋರ್ಡಿಂಗ್ ಹೌಸ್
    * ಸಹೋದರಿ ಹೆಸರಿನಲ್ಲಿ ತುಮಕೂರಿನ ನಂಜೇಗೌಡನ ಪಾಳ್ಯದಲ್ಲಿ 20 ಲಕ್ಷ ರೂ. ಮೌಲ್ಯದ ಬಾರ್.
    * ಸಹೋದರ ಕೆ.ಟಿ ವೆಂಕಟೇಗೌಡ ಹೆಸರಲ್ಲಿ ತುಮಕೂರಿನ ಭೈರಸಂದ್ರದಲ್ಲಿ 25 ಲಕ್ಷ ರೂ. ಮೌಲ್ಯದ ಬಾರ್ ಅಂಡ್ ರೆಸ್ಟೊರೆಂಟ್.
    * ಪತ್ನಿ ರಾಜೇಶ್ವರಿ ಹೆಸರಲ್ಲಿ ಮತ್ತೊಂದು 40 ಲಕ್ಷ ರೂ. ಮೌಲ್ಯದ ಹೋಟೆಲ್ ಮತ್ತು ಬೋರ್ಡಿಂಗ್ ಹೌಸ್
    * 10 ಲಕ್ಷ ರೂ. ಮೌಲ್ಯದ ಎಸ್ ಕ್ರಾಸ್ ಕಾರು.
    * ಕೊತ್ತನೂರಿನಲ್ಲಿ 10 ಲಕ್ಷ ರೂ. ಮೌಲ್ಯದ ನಿವೇಶನ.

    ಒಟ್ಟು ಅಂದಾಜು 3.53 ಕೋಟಿ ರೂ. ಮೌಲ್ಯದ ಆಸ್ತಿ-ಪಾಸ್ತಿ ಪತ್ತೆಯಾಗಿದ್ದು, ಲೋಕಾಯುಕ್ತ ಪೊಲೀಸರಿಂದ ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಆಪರೇಷನ್ ಹಸ್ತ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಧನಕ್ಕೂ ಮುನ್ನ 33 ವರ್ಷದ ಗೆಳತಿಯ ಹೆಸರಲ್ಲಿ 900 ಕೋಟಿ ಆಸ್ತಿ ಬರೆದಿಟ್ಟ ಇಟಲಿ ಮಾಜಿ ಪ್ರಧಾನಿ

    ನಿಧನಕ್ಕೂ ಮುನ್ನ 33 ವರ್ಷದ ಗೆಳತಿಯ ಹೆಸರಲ್ಲಿ 900 ಕೋಟಿ ಆಸ್ತಿ ಬರೆದಿಟ್ಟ ಇಟಲಿ ಮಾಜಿ ಪ್ರಧಾನಿ

    ರೋಮ್: ಇಟಲಿಯ ಮಾಜಿ ಪ್ರಧಾನಿ (Former Italian Prime Minister) ಸಿಲ್ವಿಯೊ ಬೆರ್ಲುಸ್ಕೋನಿ (Silvio Berlusconi) ಅವರು ಕಳೆದ ತಿಂಗಳು ನಿಧನರಾಗಿದ್ದಾರೆ. ಅವರು ಸಾವನ್ನಪ್ಪುವುದಕ್ಕೂ ಮುನ್ನ ತನ್ನ 33 ವರ್ಷದ ಗೆಳತಿಯ (Girlfriend) ಹೆಸರಿನಲ್ಲಿ ಬರೋಬ್ಬರಿ 900 ಕೋಟಿ ರೂ. ಮೌಲ್ಯದ ಆಸ್ತಿ ಬರೆದಿರುವುದಾಗಿ ವರದಿಯಾಗಿದೆ.

    86 ವರ್ಷದ ಬೆರ್ಲುಸ್ಕೋನಿ ಅವರು 33 ವರ್ಷದ ಮಾರ್ಟಾ ಫಾಸಿನಾ ಅವರನ್ನು ಪ್ರೀತಿಸುತ್ತಿದ್ದರು. ಆದರೆ ಮದುವೆಯಾಗಿರಲಿಲ್ಲ. ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಜೂನ್ 12 ರಂದು ನಿಧನರಾಗಿದ್ದಾರೆ. ಅವರ ಕೊನೆ ದಿನಗಳಲ್ಲಿ ತಮ್ಮ ಗೆಳತಿಯನ್ನು ಪತ್ನಿ ಎಂದು ಉಲ್ಲೇಖಿಸಿ ತಮ್ಮ ಸುಮಾರು 905 ಕೋಟಿ ರೂ. ಮೌಲ್ಯದ ಆಸ್ತಿಯನ್ನು (100 ದಶಲಕ್ಷ ಯುರೋ) ಬರೆದಿದ್ದಾರೆ.

    ಸಿಲ್ವಿಯೊ ಬರ್ಲುಸ್ಕೋನಿ ಹಾಗೂ ಮಾರ್ಟಾ ಫಾಸಿನಾ ನಡುವೆ 2020ರಲ್ಲಿ ಪ್ರೇಮಾಂಕುರವಾಗಿತ್ತು. ಈ ಹಿಂದೆ ಇಬ್ಬರನ್ನು ಮದುವೆಯಾಗಿದ್ದ ಇಟಲಿಯ ಮಾಜಿ ಪ್ರಧಾನಿ ಇಬ್ಬರಿಗೂ ವಿಚ್ಛೇದನ ನೀಡಿ ಬಳಿಕ ಮಾರ್ಟಾ ಫಾಸಿನಾ ಜೊತೆ ಸಂಬಂಧ ಬೆಳೆಸಿದ್ದರು. ಇದನ್ನೂ ಓದಿ: ಅನಾರೋಗ್ಯ ಪೀಡಿತ ತಂದೆ ನೋಡಲು ಹೋಗಿ ಅನಾರೋಗ್ಯಕ್ಕೀಡಾದ ಮದನಿ

    ವರದಿಗಳ ಪ್ರಕಾರ ಬರ್ಲುಸ್ಕೋನಿ ಅವರ ಸಂಪತ್ತನ್ನು 5 ಶತಕೋಟಿ ಯೂರೋಗಳೆಂದು ಅಂದಾಜಿಸಲಾಗಿದೆ. ಅವರು ದೊಡ್ಡ ಉದ್ಯಮಿಯೂ ಆಗಿದ್ದರಿಂದ ತಮ್ಮ ಗೆಳತಿಯ ಹೆಸರಿನಲ್ಲಿ ದೊಡ್ಡ ಮೊತ್ತದ ಆಸ್ತಿಯನ್ನು ಬರೆದಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲದೇ ಬರ್ಲುಸ್ಕೋನಿ ಅವರು ತಮ್ಮ ಕುಟುಂಬಸ್ಥರ ಹೆಸರಿನಲ್ಲೂ ಆಸ್ತಿಯನ್ನು ಬರೆದಿದ್ದಾರೆ. ತಮ್ಮ ಸಹೋದರ ಪಾವೋಲೊ ಅವರಿಗೆ 100 ದಶಲಕ್ಷ ಯೂರೋ, ಇಬ್ಬರು ಮಕ್ಕಳಿಗೆ ಕಂಪನಿಯಲ್ಲಿ 53% ರಷ್ಟು ಶೇರುಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಶೋನಲ್ಲೇ ‘ಧಮ್’ ಹೊಡೆದ ಸಲ್ಮಾನ್ ಖಾನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]