Tag: ಆಸ್ತಿ

  • ಬೇನಾಮಿ ಗಿಫ್ಟ್ ಪಡೆಯೋದ್ರಲ್ಲಿ ಡಿಕೆಶಿ ನಿಸ್ಸೀಮರು, ಮುಂದೆ ದಾಖಲೆ ಬಿಡುಗಡೆ: ಯೋಗೇಶ್ವರ್

    ಬೇನಾಮಿ ಗಿಫ್ಟ್ ಪಡೆಯೋದ್ರಲ್ಲಿ ಡಿಕೆಶಿ ನಿಸ್ಸೀಮರು, ಮುಂದೆ ದಾಖಲೆ ಬಿಡುಗಡೆ: ಯೋಗೇಶ್ವರ್

    ರಾಮನಗರ: ಇಂಧನ ಸಚಿವ ಡಿಕೆ ಶಿವಕುಮಾರ್ ಬೇನಾಮಿ ಆಸ್ತಿ ಮಾಡಿದ್ದಾರೆ. ಬೇನಾಮಿ ಗಿಫ್ಟ್ ಪಡೆಯೋದರಲ್ಲಿ ಅವರು ನಿಸ್ಸೀಮರು. ಅದರ ದಾಖಲೆಗಳಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಜನರ ಮುಂದಿಡ್ತೇನೆಂದು ಶಾಸಕ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಹಾಗೂ ಪಾವಗಡದಲ್ಲಿ ಸಚಿವ ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ. ನನಗೆ ಬೇನಾಮಿ ಆಸ್ತಿಯ ಗಿಫ್ಟ್ ಕೊಡುವ ಆಗತ್ಯವಿಲ್ಲ. ತಾಲೂಕಿನ ಜನ ಎಲ್ಲ ಗಿಫ್ಟ್ ಕೊಟ್ಟಿದ್ದು ಅವರ ಗಿಫ್ಟ್ ಬೇಕಾಗಿಲ್ಲ. ಡಿಕೆಶಿ ರಾಜಕೀಯ ಜೀವನ ಬಹುಶಃ ಇಲ್ಲಿಗೆ ಮುಗಿಯುತ್ತಿದ್ದು, ಸ್ವಾರ್ಥಕ್ಕಾಗಿ ಸಾರ್ವಜನಿಕ ಜೀವನ ಬಳಸಿಕೊಂಡಿದ್ದಾರೆ. ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

    ಪರಿವರ್ತನ ಯಾತ್ರೆಯ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ಇಂದು ಪರಿವರ್ತನೆಯ ವಾತಾವರಣ ಸೃಷ್ಟಿಯಾಗ್ತಿದೆ. ಮುಂದಿನ ದಿನದಲ್ಲಿ ಬಿಜೆಪಿ ರಾಜ್ಯಕ್ಕೆ ಬೇಕೆಂದು ಜನರು ಕೈ ಜೋಡಿಸ್ತಿದ್ದಾರೆ. ತಾಲೂಕು ಮುಖಂಡರೆಲ್ಲಾ ಬಿಜೆಪಿಗೆ ಸೇರ್ಪಡೆಯಾಗ್ತಿದ್ದೇವೆ. ಕನಕಪುರದ ನಂದಿನಿಗೌಡರವರು ಕೂಡಾ ಬಿಜೆಪಿ ಸೇರುತ್ತಿದ್ದಾರೆ. ನಾನು ಯಾವುದೇ ನಿಬಂಧನೆಗಳನ್ನ ಒಡ್ಡಿ ಪಕ್ಷ ಸೇರುತ್ತಿಲ್ಲ. ಯೋಗ್ಯತೆಗೆ ತಕ್ಕಂತೆ ದುಡಿಸಿಕೊಳ್ಳುತ್ತೆ ಎನ್ನುವ ಭರವಸೆಯಿದೆ ಎಂದರು.

    ಡಿಕೆಶಿಗೆ ನಾವು ಬೆಂಬಲ ಕೊಟ್ಟಾಗ ರಾಜಕೀಯವಾಗಿ ಬಹಳ ಶಕ್ತಿವಂತರಾಗಿದ್ದರು. ಇವತ್ತು ಯಾರಿಗೆ ಶಕ್ತಿ ಕೊಟ್ಟಿದ್ದೇವೆ ಅಂತಾ ಅರ್ಥವಾಗಿದೆ. ಅವರಿಂದ ತಾಲೂಕಿಗೆ ಕೊಡುಗೆ ಶೂನ್ಯ, ಅವರು ಕೆಲಸಗಳೇನು ಮಾಡಿಲ್ಲ. ಮತ ಹಾಕಿಸಿಕೊಂಡು ಮುಖಂಡರ ಮನೆಗೆ ಹೋಗಿ ಅವರ ಸಂತೃಪ್ತಿಗೊಳಿಸುತ್ತಿದ್ದಾರೆ. ಅವರ ಅನುಕೂಲಕ್ಕಾಗಿ ಬಂದು ಸಹಾಯ ಬೇಡಿದ್ರು, ಸಹಾಯ ಮಾಡಿದ್ವಿ. ಆದರೆ ಸರ್ಕಾರ ಮುಗಿಯುತ್ತಾ ಬಂದ್ರೂ ಅನುಕೂಲವಾಗದಿದ್ದಾಗ ಮಾತನಾಡಲೇಬೇಕಾಗಿದೆ. ನಾನು ಬಿಜೆಪಿಗೆ ಹೋಗ್ತಿರುವ ಸಂಕಟ ಅವರನ್ನ ಕಾಡ್ತಿದೆ ಎಂದು ಹೇಳಿದ್ದಾರೆ.

    ಬುಧವಾರ ಆಪ್ತರ ಮನೆಗೆ ಸಚಿವ ಡಿಕೆಶಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿ ಅವರು ಭೇಟಿ ಮಾಡಿದ್ದ ಮುಖಂಡರೆಲ್ಲಾ ಈಗ ನಮ್ಮ ಜೊತೆಯಲ್ಲಿಯೇ ಇದ್ದಾರೆ. ಅವರು ಬರ್ತಾರೆ, ಬಲವಂತಕ್ಕೆ ಬಂದು ಡ್ರಾಮಾ ಮಾಡಿ ಹೋಗ್ತಾರೆ. ಅವರನ್ನ ತಾಲ್ಲೂಕಿನ ಜನ ನಂಬುವ ಸ್ಥಿತಿಯಲ್ಲಿಲ್ಲ. ಅದಕ್ಕೆ ಅಂತಹ ಮಹತ್ವ ಕೊಡುವ ಅಗತ್ಯ ಸಹ ಇಲ್ಲ. ಜನಗಳ ಕೆಲಸ ಮಾಡಬೇಕಾದ್ದು ಅವರ ಕರ್ತವ್ಯ. ಅವರು 30 ವರ್ಷಗಳಿಂದ ಈ ಕೆಲಸ ಮಾಡಬೇಕಿತ್ತು. ಇಂದು ಕಾಂಗ್ರೆಸ್ ಅಧಿಕಾರ ಮುಗಿಸುವಂತಹ ಸಮಯ. ಕೊನೆಯಗಳಿಗೆಯಲ್ಲಿ ವಾರಕ್ಕೊಮ್ಮೆ ಬರ್ತೀನಿ ಅಂತಿದ್ದಾರೆ. ಅವರಿಗೆ ನಾನು ಬಿಜೆಪಿಗೆ ಸೇರುತ್ತಿರುವುದು ನೋವಿದೆ. ಅವರ ರಾಜಕೀಯ ಉನ್ನತಿಗೆ ತಾಲೂಕು ಮುಖ್ಯವಾಗಿತ್ತು. ತಾಲೂಕಿನ ಜನ ಪರಿವರ್ತನೆ ಆಗ್ತಿರೋದು ಅವರ ಹತಾಶೆಗೆ ಕಾರಣವಾಗಿದೆ. ಇವತ್ತು ನಮಗೆ ಶುಭದಿನ, ಮುಂದಿನ ದಿನಗಳಲ್ಲಿ ಅವರ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆಂದು ಹೇಳಿದರು.

  • ದೇಶದ ಶ್ರೀಮಂತ ಪಕ್ಷ ಯಾವುದು? ಯಾವ ಪಕ್ಷದ ಆಸ್ತಿ ಎಷ್ಟಿದೆ?

    ದೇಶದ ಶ್ರೀಮಂತ ಪಕ್ಷ ಯಾವುದು? ಯಾವ ಪಕ್ಷದ ಆಸ್ತಿ ಎಷ್ಟಿದೆ?

    ನವದೆಹಲಿ: ಒಟ್ಟು 894 ಕೋಟಿ ರೂ. ಆಸ್ತಿಯನ್ನು ಘೋಷಿಸಿಕೊಳ್ಳುವ ಮೂಲಕ ಭಾರತದ ಶ್ರೀಮಂತ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

    ಅಸೋಷಿಯೇಷನ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಎಆರ್) ಸಂಸ್ಥೆ 2015-16ನೇ ಸಾಲಿನಲ್ಲಿ ಪಕ್ಷಗಳ ಆಸ್ತಿಯ ವಿವರಗಳನ್ನು ಪ್ರಕಟಿಸಿದ್ದು, ಕಾಂಗ್ರೆಸ್ 759 ಕೋಟಿ ರು. ಆಸ್ತಿ ಹೊಂದುವ ಮೂಲಕ ಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿದೆ.

    ಯಾವ ಪಕ್ಷದ ಆಸ್ತಿ ಎಷ್ಟು?
    ಬಿಜೆಪಿ 893.88 ಕೋಟಿ ರೂ., ಕಾಂಗ್ರೆಸ್ 758.79 ಕೋಟಿ ರೂ., ಬಿಎಸ್‍ಪಿ 559 ಕೋಟಿ ರೂ., ಸಿಪಿಎಂ 437.78 ಕೋಟಿ ರೂ., ಎಐಟಿಸಿ 44.99 ಕೋಟಿ ರೂ., ಎನ್‍ಸಿಪಿ 14.54 ಕೋಟಿ ರೂ., ಸಿಪಿಐ 10.18 ಕೋಟಿ ರೂ. ಆಸ್ತಿಯನ್ನು ಹೊಂದಿದೆ.

    ಸಾಲ ಎಷ್ಟಿದೆ?
    ಕಾಂಗ್ರೆಸ್ 329.43 ಕೋಟಿ ರೂ., ಬಿಜೆಪಿ 24.99 ಕೋಟಿ ರೂ., ಎಐಟಿಸಿ 12.07 ಕೋಟಿ ರೂ., ಸಿಪಿಐ 8.79 ಕೋಟಿ ರೂ., ಸಿಪಿಐಎಂ 20.285 ಕೋಟಿ ರೂ., ಬಿಎಸ್‍ಪಿ 1.63 ಕೋಟಿ ರೂ., ಎನ್‍ಸಿಪಿಗೆ 95 ಲಕ್ಷ ರೂ. ಸಾಲವಿದೆ.

    2004-05ರಲ್ಲಿ ಬಿಜೆಪಿ 123.93 ಕೋಟಿ ರುಪಾಯಿ ಆಸ್ತಿ ಹೊಂದಿತ್ತು. 11 ವರ್ಷದಲ್ಲಿ ಅದರ ಆಸ್ತಿ ಪ್ರಮಾಣ ಹೆಚ್ಚಾಗಿದ್ದು ಈಗ 893.88 ಕೋಟಿ ರೂ. ಆಗಿದೆ. ಕಾಂಗ್ರೆಸ್ ಆಸ್ತಿ ಪ್ರಮಾಣ ಇದೇ ಅವಧಿಯಲ್ಲಿ 167.35 ಕೋಟಿ ರೂ. ಇದ್ದರೆ ಈಗ 758.79 ಕೋಟಿ ರೂ. ಆಗಿದೆ.

    2004-05 ರ ಅವಧಿಯಲ್ಲಿ ಕಾಂಗ್ರೆಸ್ ಗೆ 8 ಕೋಟಿ ರೂ. ಸಾಲವಿದ್ದರೆ ಈಗ 329.43 ಕೋಟಿ ರೂ.ಗೆ ಏರಿಕೆಯಾಗಿದೆ.  ಈ ಅವಧಿಯಲ್ಲಿ  ಬಿಜೆಪಿಗೆ 14.29 ಕೋಟಿ ರೂ. ಸಾಲವಿದ್ದರೆ 2015-16 ಅವಧಿಯ ವೇಳೆಗೆ 24.99 ಕೋಟಿ ರೂ.ಗೆ ಏರಿಕೆಯಾಗಿದೆ.

    ಇದನ್ನೂ ಓದಿ: 4 ವರ್ಷದಲ್ಲಿ ರಾಜಕೀಯ ಪಕ್ಷಗಳಿಗೆ 956.77 ಕೋಟಿ ರೂ. ದೇಣಿಗೆ: ಯಾವ ಪಕ್ಷಕ್ಕೆ ಎಷ್ಟು ಕೋಟಿ ಬಂದಿದೆ? ಕೊಟ್ಟವರು ಯಾರು?

     

     

  • ಬಾಬಾ ರಾಮ್‍ರಹೀಮ್ ಸಿಂಗ್ ಆಸ್ತಿಗೆ ಕೊನೆಗೂ ಸಿಕ್ಕಳು ಉತ್ತರಾಧಿಕಾರಿ!

    ಬಾಬಾ ರಾಮ್‍ರಹೀಮ್ ಸಿಂಗ್ ಆಸ್ತಿಗೆ ಕೊನೆಗೂ ಸಿಕ್ಕಳು ಉತ್ತರಾಧಿಕಾರಿ!

    ಬೆಂಗಳೂರು: ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಜೈಲುಪಾಲಾಗಿರುವ ಹಿನ್ನೆಲೆಯಲ್ಲಿ ಇದೀಗ ಎಲ್ಲರಿಗೂ ಮೂಡಿರುವ ಪ್ರಶ್ನೆ ಎಂದರೆ ದೇಶ, ವಿದೇಶಗಳಲ್ಲಿರುವ ಸಂಸ್ಥೆಗಳಿಗೆ ಯಾರು ಉತ್ತರಾಧಿಕಾರಿ ಎಂಬುದು. ಈ ಪ್ರಶ್ನೆಗೆ ಉತ್ತರವೂ ಸಿಕ್ಕಂತೆ ಕಾಣ್ತಿದೆ.

    ರಾಮ್ ರಹೀಂ ಬಾಬಾ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದಾಗ ಬಾಬಾ ಜೊತೆಯಲ್ಲೇ ಕಾಣಿಸಿಕೊಂಡಿದ್ದ ಮಹಿಳೆ ಹಾಗೂ ಬಾಬಾ ಮಗಳೆಂದೇ ಕರೆಯಲ್ಪಡುತ್ತಿರುವ ಹನಿಪ್ರೀತ್ ಇನ್ಸಾನ್ ಮುಂದಿನ ಉತ್ತರಾಧಿಕಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಯಾರು ಈ ಹನಿಪ್ರೀತ್ ಇನ್ಸಾನ್?: ಹನಿಪ್ರೀತ್ ಇಸಾನ್ ಮೂಲ ಹೆಸರು ಪ್ರಿಯಾಂಕ ತನೇಜಾ. ಹನಿಪ್ರೀತ್ ಹರಿಯಾಣ ರಾಜ್ಯದ ಹಿಸ್ಸಾರ್ ಜಿಲ್ಲೆಯ ಫತೇಪುರ ಮೂಲದ ಮಹಿಳೆ. ಹನಿಪ್ರೀತ್ 1999ರಲ್ಲಿ ಸಿರ್ಸಾದ ಬಾಬಾ ರಾಮ್ ರಹೀಂ ಹಿಂಬಾಲಕನನ್ನು ಮದ್ವೆಯಾಗಿದ್ದರು. ಮದ್ವೆಯಾದ ಬಳಿಕ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿ ಬೇರೆಯಾಗಿದ್ದರು. 2009ರಲ್ಲಿ ಹನಿಪ್ರೀತ್ ಇನ್ಸಾನ್ ರನ್ನು ಬಾಬಾ ಮಗಳಾಗಿ ದತ್ತು ಪಡೆದುಕೊಂಡಿದ್ದಾರೆ.

    ಅಂದಿನಿಂದ ಮಗಳಾದ ಹನಿಪ್ರೀತ್ ಬಾಬಾನ ಎಲ್ಲ ಆಪ್ತ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಡೇರಾ ಸಚ್ಚಾ ಸೌಧ ಮಾತ್ರ ಹನಿಪ್ರೀತ್ ಮತ್ತು ಬಾಬಾ ನಡುವೆ ಕೇವಲ ಅಪ್ಪ-ಮಗಳ ಸಂಬಂಧವಿದೆ ಎಂದು ಹೇಳಿದೆ. ಆದರೆ ಮೆಸೆಂಜರ್ ಆಫ್ ಗಾಡ್ ಸಿನಿಮಾದಲ್ಲಿ ಬಾಬಾಗೆ ಹೀರೋಯಿನ್ ಆಗಿ ಹನಿಪ್ರೀತ್ ಕಾಣಿಸಿಕೊಂಡಿದ್ದು, ಸಾಕಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ.

     

  • 22 ಕೋಟಿ ರೂ. ಸರ್ಕಾರಿ ಆಸ್ತಿಯನ್ನು ಕೇವಲ 28 ಸಾವಿರ ರೂ.ಗೆ ಮಾರಿದ್ರು!

    22 ಕೋಟಿ ರೂ. ಸರ್ಕಾರಿ ಆಸ್ತಿಯನ್ನು ಕೇವಲ 28 ಸಾವಿರ ರೂ.ಗೆ ಮಾರಿದ್ರು!

    ಬೀದರ್: 22 ಕೋಟಿ ರೂ. ಬೆಲೆಬಾಳುವ ಸರ್ಕಾರದ ಆಸ್ತಿಯನ್ನು ಕೇವಲ 28 ಸಾವಿರ ರೂ.ಗಳಿಗೆ ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವಂಥ ಅಕ್ರಮ ಬೀದರ್ ನಗರಸಭೆಯಲ್ಲಿ ನಡೆದಿದೆ.

    ನಗರಸಭೆ ಆಯುಕ್ತ ಕೆ. ನರಸಿಂಹಮೂರ್ತಿ ಹಾಗೂ ಹಿರಿಯ ಉಪ ನೋಂದಣಾಧಿಕಾರಿ ಎಸ್.ಎಂ ಹೆಮೇಶ್ ಕೆಲ ಖಾಸಗಿ ವ್ಯಕ್ತಿಗಳಿಗೆ ಕೋಟಿ ಕೋಟಿ ಬೆಲೆಬಾಳುವ ಆಸ್ತಿಯನ್ನು ಕೇವಲ 28 ಸಾವಿರಕ್ಕೆ ಮಾರಾಟ ಮಾಡಿದ್ದಾರೆಂದು ಡಿಯುಡಿಸಿ ಅಧಿಕಾರಿ ನಗರದ ಮಾರ್ಕೆಟ್ ಠಾಣೆಯಲ್ಲಿ ಕ್ರೀಮಿನಲ್ ಕೇಸ್ ದಾಖಲಿಸಿದ್ದರು. ಇದೀಗ ಪೊಲೀಸರು ನಗರಸಭೆ ಆಯುಕ್ತರು ಹಾಗೂ ಉಪನೊಂದಣಾಧಿಕಾರಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಇನ್ನು ಜಿಲ್ಲಾಧಿಕಾರಿಗಳಿಗೆ ಪೌರಾಡಳಿತ ಸಚಿವರು ಪತ್ರ ಬರೆದಿದ್ದು, ತನಿಖೆ ಕೈಗೊಂಡು ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ. ಡಿಯುಡಿಸಿ ಅಧಿಕಾರಿಗಳ ದೂರಿನ ಮೇರೆಗೆ ಮುನ್ಸಿಪಲ್ ಕಾಯ್ದೆ ಮತ್ತು ಕ್ರೀಮಿನಲ್ ಕೇಸ್ ದಾಖಲು ಮಾಡಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪಬ್ಲಿಕ್ ಟಿವಿಗೆ ಎಸ್‍ಪಿ ದೇವರಾಜ್ ಹೇಳಿದ್ದಾರೆ.

  • ಯಾವುದೇ ಕ್ಷಣದಲ್ಲಿ ಡಿಕೆಶಿ ಬಂಧನ ಸಾಧ್ಯತೆ- ಐಟಿ ರೇಡ್‍ನಲ್ಲಿ ಸಿಕ್ಕ ಆಸ್ತಿಪಾಸ್ತಿಯ ಮೌಲ್ಯವೆಷ್ಟು ಗೊತ್ತಾ?

    ಯಾವುದೇ ಕ್ಷಣದಲ್ಲಿ ಡಿಕೆಶಿ ಬಂಧನ ಸಾಧ್ಯತೆ- ಐಟಿ ರೇಡ್‍ನಲ್ಲಿ ಸಿಕ್ಕ ಆಸ್ತಿಪಾಸ್ತಿಯ ಮೌಲ್ಯವೆಷ್ಟು ಗೊತ್ತಾ?

    ಬೆಂಗಳೂರು: ಸತತ 3ನೇ ರಾತ್ರಿ ಇಂಧನ ಸಚಿವ ಡಿಕೆ ಶಿವಕುಮಾರ್ ಮನೆಯಲ್ಲಿ ಮಿಡ್‍ನೈಟ್ ಆಪರೇಷನ್ ನಡೆದಿದೆ. 4 ದಿನಗಳ ಐಟಿ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು? ಐಟಿ ಲ್ಯಾಪ್‍ಟಾಪ್ ರಹಸ್ಯವೇನು? ಡಿಕೆಶಿ ಆಪ್ತರು ಹಾಗೂ ಸಂಬಂಧಿಕರ ಮನೆಗಳಲ್ಲಿ ಪತ್ತೆಯಾದ ಆಸ್ತಿಪಾಸ್ತಿ ಎಷ್ಟು ಎಂಬುದರ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

    ಹೌದು. ಐಟಿ ದಾಳಿ ವೇಳೆ ಪತ್ತೆಯಾಗಿದ್ದು 600 ಕೋಟಿಗೂ ಅಧಿಕ ಮೌಲ್ಯದ ಆಸ್ತಿಪಾಸ್ತಿಗಳ ದಾಖಲೆ. ಬೆಂಗಳೂರು, ಮೈಸೂರು, ದೆಹಲಿ ಸೇರಿ ವಿವಿಧೆಡೆ ವಶಪಡಿಸಿಕೊಂಡ ದಾಖಲೆಗಳನ್ನ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಥೈಲ್ಯಾಂಡ್, ದಕ್ಷಿಣ ಕೊರಿಯಾ, ಸಿಂಗಪೂರ್, ಕತಾರ್ ಹಾಗೂ ಲಂಡನ್‍ನಲ್ಲೂ ಕೂಡ ಡಿಕೆಶಿ ಹೂಡಿಕೆ ಮಾಡಿದ್ದಾರೆ.

    ಬಹುತೇಕ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಪವರ್ ಮಿನಿಸ್ಟರ್ ಹಣ ತೊಡಗಿಸಿದ್ದಾರೆ. ಬೇನಾಮಿ ಹೆಸರಿನಲ್ಲಿ ಹೂಡಿಕೆ ಮಾಡಿರುವ ಸಂಬಂಧ ದಾಖಲೆ ಪತ್ರಗಳು ಐ.ಟಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಹೀಗಾಗಿಯೇ ರಾತ್ರಿಯಿಡೀ ಡಿಕೆ ಶಿವಕುಮಾರ್‍ರನ್ನು ಐಟಿ ಪಡೆ ವಿಚಾರಣೆಗೆ ಒಳಪಡಿಸಿದೆ.

    ಅನುಮಾನಾಸ್ಪದ ಉದ್ಯಮಗಳು ಮತ್ತು ಬ್ಯಾಂಕ್ ಖಾತೆಗಳ ಸ್ಥಗಿತಕ್ಕೆ ಐಟಿ ಇಲಾಖೆ ಸೂಚನೆ ನೀಡುವ ಸಾಧ್ಯತೆಯಿದೆ. ಡಿಕೆಶಿ ಪ್ರಕರಣವನ್ನು ಶೀಘ್ರವೇ ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಲು ಐಟಿ ತಯಾರಿ ನಡೆಸಿದೆ ಎಂದು ಹೇಳಲಾಗಿದೆ. ಜಾರಿ ನಿರ್ದೇಶನಾಲಯ ಕೂಡ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಈಗಾಗಲೇ ಬೆಂಗಳೂರಿನ ಕೆಲವು ಹಿರಿಯ ವಕೀಲರನ್ನು ಜಾರಿ ನಿರ್ದೇಶನಾಲಯ ಸಂಪರ್ಕಿಸಿದೆ ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯಕ್ಕೆ ಪ್ರಕರಣ ವರ್ಗಾವಣೆಗೊಂಡರೆ ಯಾವುದೇ ಕ್ಷಣದಲ್ಲಿ ಡಿಕೆಶಿ ಬಂಧನವಾಗೋ ಸಾಧ್ಯತೆಯಿದೆ.

  • ಜಮೀನಿನಲ್ಲೇ ತಂದೆಯ ತಲೆಗೆ ಕೊಡಲಿಯಲ್ಲಿ ಹೊಡೆದು ಬರ್ಬರವಾಗಿ ಕೊಲೆಗೈದ ಮಗ!

    ಜಮೀನಿನಲ್ಲೇ ತಂದೆಯ ತಲೆಗೆ ಕೊಡಲಿಯಲ್ಲಿ ಹೊಡೆದು ಬರ್ಬರವಾಗಿ ಕೊಲೆಗೈದ ಮಗ!

    ಮಂಡ್ಯ: ಆಸ್ತಿ ಆಸೆಗಾಗಿ ಮಗನೇ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ನಿವಾಸಿ ಬೊಮ್ಮೇಗೌಡ ಎಂಬವರೇ ಮಗನಿಂದಲೇ ಹತರಾದ ದುರ್ದೈವಿ.

    ಬೊಮ್ಮೇಗೌಡ ಮತ್ತು ಅವರ ಮಗ ಮಂಜುಗೆ ಆಸ್ತಿ ವಿಚಾರವಾಗಿ ಪದೇ ಪದೇ ಗಲಾಟೆಯಾಗುತ್ತಿತ್ತು. ಇಂದು ಎಂದಿನಂತೆ ಅಪ್ಪ ಮಕ್ಕಳಿಬ್ಬರು ಜಮೀನಿನ ಬಳಿ ಕೆಲಸಕ್ಕೆಂದು ಹೋಗಿದ್ದರು. ಈ ಸಂದರ್ಭದಲ್ಲಿ ಆಸ್ತಿ ಬರೆದು ಕೊಡುವಂತೆ ಮಂಜು ತನ್ನ ತಂದೆ ಬೊಮ್ಮೇಗೌಡನನ್ನು ಕೇಳಿದ್ದಾನೆ. ಈ ವಿಷ್ಯವಾಗಿ ತಂದೆ ಮಗನ ನಡುವೆ ಮಾತಿಗೆ ಮಾತು ಬೆಳೆದಿದೆ. ಇದ್ರಿಂದ ಕೋಪಗೊಂಡ ಮಂಜು ಕೊಡಲಿಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ. ಪರಿಣಾಮ ತೀವ್ರ ರಕ್ತಸ್ತ್ರಾವವಾಗಿ ಬೊಮ್ಮೇಗೌಡ ಸಾವನ್ನಪ್ಪಿದ್ದಾರೆ.

    ತಂದೆಯನ್ನು ಕೊಲೆ ಮಾಡಿದ ಬಳಿಕ ಮಂಜು ನಾಪತ್ತೆಯಾಗಿದ್ದಾನೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಕಿಕ್ಕೇರಿ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

  • ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ

    ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ

    ಧಾರವಾಡ: ಆಸ್ತಿವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಶಾಂತಿ ನಗರದಲ್ಲಿ ನಡೆದಿದೆ.

    ಯಲ್ಲವ್ವ ನಾಯ್ಕರ್, ಭಾರತಿ ಪತಂಗಿ, ಪ್ರದೀಪ್ ಪತಂಗಿ ಎಂಬವರು ಗಂಭೀರವಾಗಿ ಗಾಯಗೊಂಡರು. ಈಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಹೆಲ್ಮೆಟ್ ಹಾಕಿಕೊಂಡು ಬೈಕ್ ನಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ಯಲ್ಲವ್ವಾ ನಾಯ್ಕರ್ ಮತ್ತು ಮಗಳು ಭಾರತಿ ಪಂತಂಗಿ ಮೂಲತಃ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಗವಾಡ ಗ್ರಾಮದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಹುಬ್ಬಳ್ಳಿಗೆ ಕೆಲಸವನ್ನು ಅರಿಸಿಕೊಂಡು ಬಂದಿದ್ದರು.

    ಆದ್ರೆ ಯಲ್ಲವ್ವಾರ ಪತಿಗೆ ಇಬ್ಬರು ಹೆಂಡತಿಯರು. ಯಲ್ಲವ್ವಾ ಪತಿ ಕೆಲ ವರ್ಷಗಳ ಹಿಂದೆ ತೀರಿಕೊಂಡಿದ್ದು ಹೀಗಾಗಿ ಯಲ್ಲವ್ವಾ ಪತಿಯ ಹೆಸರಲ್ಲಿ ಇದ್ದ 14 ಎಕರೆ ಜಮೀನು ವಿವಾದ ಸವದತ್ತಿ ಕೋರ್ಟ್ ನಲ್ಲಿತ್ತು. ಕಾರಣ ಸವದತ್ತಿ ಕೋರ್ಟ್ ಕೆಲ ದಿನಗಳ ಹಿಂದೆ ಆದೇಶ ನೀಡಿದ್ದು ಯಲ್ಲವ್ವಾರಿಗೆ ನ್ಯಾಯಾಲಯ ಹೆಚ್ಚಿನ ಭಾಗವನ್ನು ನೀಡಿ ಆದೇಶ ಮಾಡಿತ್ತು. ಇದನ್ನು ಸಹಿಸದ ಯಲ್ಲವ್ವಾರಂಡನ ಮೊದಲ ಪತ್ನಿಯ ಮಗ ಈ ಕೃತ್ಯ ಮಾಡಿರುವುದಾಗಿ ಗಾಯಾಳುಗಳು ಆರೋಪಿಸಿದ್ದಾರೆ.

    ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

  • ಮನೆಗೆ ಬೆಂಕಿ ಹಾಕಿ ಸಹೋದರನನ್ನು ಸೇರಿದಂತೆ ನಾಲ್ವರನ್ನು ಜೀವಂತ ಸುಟ್ಟ!

    ಮನೆಗೆ ಬೆಂಕಿ ಹಾಕಿ ಸಹೋದರನನ್ನು ಸೇರಿದಂತೆ ನಾಲ್ವರನ್ನು ಜೀವಂತ ಸುಟ್ಟ!

    ಪಾಟ್ನಾ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಹೋದರ, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರನ್ನು ಜೀವಂತವಾಗಿ ಸುಟ್ಟ ದಾರುಣ ಘಟನೆ ಭಾನುವಾರ ರಾತ್ರಿ ಬಿಹಾರದಲ್ಲಿ ನಡೆದಿದೆ.

    ಬಿಹಾರದ ಕತಿಹಾರ್ ಜಿಲ್ಲೆಯಯಲ್ಲಿ ಈ ಘಟನೆ ಸಂಭವಿಸಿದೆ. ಕೇದಾರ್ ಸಿಂಗ್(45) ಪತ್ನಿ ಪ್ರತಿಮಾ ದೇವಿ(40) ಅವರ ಇಬ್ಬರು ಪುತ್ರಿಯರಾದ ಡಿಂಪಲ್ ಕುಮಾರಿ(15) ಮತ್ತು ಸೋನಿ(17) ಮೃತಪಟ್ಟವರು. ಕೋಣೆಯಲ್ಲಿ ಮಲಗಿದ್ದ ಮಗ ಲಕ್ಷ್ಮಣ್ ಕುಮಾರ್ ಸಿಂಗ್(12) ಘಟನೆಯಿಂದ ಪಾರಾಗಿದ್ದಾನೆ.

    ಕೇದಾರ್ ಸಿಂಗ್ ಮತ್ತು ಆತನ ಸಹೋದರನ ಮಧ್ಯೆ ಪೂರ್ವಜರ ಆಸ್ತಿ ವಿಷಯದ ಬಗ್ಗೆ ಜಗಳವಿತ್ತು. ಹೀಗಾಗಿ ಈ ಆಸ್ತಿ ದ್ವೇಷದಿಂದ ಕೇದಾರಸಿಂಗ್ ಹಾಗೂ ಆತನ ಕುಟುಂಬಸ್ಥನ್ನ ಮನೆಯಲ್ಲಿ ಮಲಗಿದ್ದ ವೇಳೆ ಹೊರಗಡೆಯ ಬಾಗಿಲ ಕೊಂಡಿಯನ್ನು ಲಾಕ್ ಮಾಡಿ ಮನೆಗೆ ಬೆಂಕಿ ಹಚ್ಚಿದ ಎಂದು ಲಕ್ಷ್ಮಣ್ ತಿಳಿಸಿದ್ದಾರೆ.

    ಆ ವೇಳೆ ಬೆಂಕಿ ಹತ್ತಿದಾಗ ಎಚ್ಚರಗೊಂಡ ಕೇದಾರ್ ಸಿಂಗ್ ಕಿರುಚಾಡಿತೊಡಗಿದ್ದಾರೆ. ಕೇದಾರ್ ಸಿಂಗ್ ಸಹೋದರ ಬಾಗಿಲು ಲಾಕ್ ಮಾಡಿದ್ದರಿಂದ ಒಳಗಿದ್ದವರನ್ನು ಕಾಪಾಡಲು ಆಗದಿದ್ದಾಗ ಮನೆಯಲ್ಲಿ ಸುಟ್ಟು ಹೋಗಿದ್ದರು.

    ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಗ ಲಕ್ಷ್ಮಣ್ ಸಿಂಗ್ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕೇದಾರ್ ಸಿಂಗ್ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಈಗ ಆರೋಪಿ ಕೇದಾರ್ ಸಿಂಗ್ ನಾಪತ್ತೆಯಾಗಿದ್ದಾನೆ.

  • ಗುಂಪು ಚದುರಿಸಲು ಬೂಟ್‍ನಿಂದ ಬಾರಿಸಿದ ಪಿಎಸ್‍ಐ: ವಿಡಿಯೋ ವೈರಲ್

    ಗುಂಪು ಚದುರಿಸಲು ಬೂಟ್‍ನಿಂದ ಬಾರಿಸಿದ ಪಿಎಸ್‍ಐ: ವಿಡಿಯೋ ವೈರಲ್

    ಕೊಪ್ಪಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆಯೇ ಕೈ ಕೈ ಮಿಲಾಯಿಸಿದ ವೇಳೆ ಪಿಎಸ್‍ಐ ಬೂಟ್‍ನಿಂದ ಹೊಡೆದು ದರ್ಪ ತೋರಿಸಿದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.

    ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಇಪ್ಪತ್ತೈದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಮಾಧ್ಯಮಗಳಿಗೆ ತಡವಾಗಿ ವಿಡಿಯೋ ಲಭ್ಯವಾಗಿದೆ. ಸಿಂಗನಾಳ ಗ್ರಾಮದ ಶಿವಬಸಪ್ಪ ಹಾಗೂ ವೀರಭದ್ರಪ್ಪ ನಡುವೆ ಭೂವಿವಾದಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದಿತ್ತು. ಆಗ ಗಂಗಾವತಿ ಗ್ರಾಮೀಣ ಠಾಣೆ ಪಿಎಸ್‍ಐ ಪ್ರಕಾಶ ಮಾಳೆ ಬೂಟ್ ನಿಂದ ಸಾರ್ವಜನಿಕವಾಗಿ ಥಳಿಸಿದ್ದಾರೆ. ಬೂಟ್ ನಿಂದ ಹೊಡೆದು ಗುಂಪನ್ನ ಚದುರಿಸಿದ್ದಾರೆ.

    ಗುಂಪು ಚದುರಿಸಬೇಕಾದ್ರೆ ಲಾಠಿ ಬಳಸಬೇಕು ಆದ್ರೆ ಪಿಎಸ್‍ಐ ಪ್ರಕಾಶ ಮಾಳೆ ಬೂಟ್ ಬಳಸಿರೋದು ವಿವಾದಕ್ಕೆ ಕಾರಣವಾಗಿದೆ. ಇದೀಗ ಪಿಎಸ್‍ಐ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

    https://www.youtube.com/watch?v=1sMur_Y6GmI&feature=youtu.be

  • ಆಸ್ತಿಗಾಗಿ ತಮ್ಮನ ನಕಲಿ ಮರಣ ಪ್ರಮಾಣಪತ್ರ ತೆಗೆಸಿದ ಅಣ್ಣ!

    ಆಸ್ತಿಗಾಗಿ ತಮ್ಮನ ನಕಲಿ ಮರಣ ಪ್ರಮಾಣಪತ್ರ ತೆಗೆಸಿದ ಅಣ್ಣ!

    ಧಾರವಾಡ: ಕಿರಿಯ ಸಹೋದರನ ನಕಲಿ ಮರಣ ಪ್ರಮಾಣ ಪತ್ರ ತೆಗೆಸಿ ಆಸ್ತಿ ಲಪಟಾಯಿಸಲು ಅಣ್ಣನೊಬ್ಬನು ಹೊಂಚು ಹಾಕಿರೋ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ.

    ಧಾರವಾಡ ತಾಲೂಕಿನ ಮಾಳಮಡ್ಡಿಯ ನಿವಾಸಿಯಾದ ನಾನಾಸಾಹೇಬ್ ದೇಶಪಾಂಡೆ ಅವರು 2012 ರಲ್ಲಿ ಉತ್ತರಾಖಂಡ ಪ್ರವಾಸಕ್ಕೆ ಹೋದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ ನಾನಾಸಾಹೇಬ ಸಹೋದರ ರಂಗಾರಾವ್ ದೇಶಪಾಂಡೆ 2000ರಲ್ಲಿಯೇ ತಮ್ಮನ ಮರಣ ಪ್ರಮಾಣಪತ್ರ ತೆಗೆಸಿದ್ದಾನೆ.

    ಅಮ್ಮಿನಬಾವಿ ಗ್ರಾಮದ ಬಳಿಯಿರುವ 8 ಎಕರೆ ಜಮೀನು ಲಪಟಾಯಿಸಲು ರಂಗರಾವ್ ಹೊಂಚು ಹಾಕಿದ್ದನು. ಆದರೆ ಇದು ನಾನಾಸಾಹೇಬ ಕುಟುಂಬಸ್ಥರಿಗೆ 2014ರಲ್ಲಿ ಆಸ್ತಿಯನ್ನು ವಿಭಜಿಸುವಾಗ ತಿಳಿದಿದೆ. ಆದ್ರೆ ಇದೂವರೆಗೂ ನಾನಾಸಾಹೇಬ ಪತ್ನಿ ಲಕ್ಷ್ಮೀಬಾಯಿ ಮತ್ತು ಪುತ್ರ ವೆಂಕಟೇಶ್ ಅವರಿಗೆ ಆಸ್ತಿಯನ್ನು ನೀಡಿಲ್ಲ. ಇದೀಗ ರಂಗಾರಾವ್‍ಗೆ ಪಾಲಿಕೆ ಮತ್ತು ತಹಶೀಲ್ದಾರ ಕಚೇರಿಯ ಅಧಿಕಾರಿಗಳು ಹೇಗೆ ನಕಲಿ ಪ್ರಮಾಣ ಪತ್ರ ನೀಡಿದರು ಎಂದು ನಾನಾಸಾಹೇಬ್ ಪುತ್ರ ವೆಂಕಟೇಶ್ ಪ್ರಶ್ನಿಸುತ್ತಾರೆ.

    ಈ ಸಂಬಂಧ ನಾನಾಸಾಹೇಬ ಪುತ್ರ ವೆಂಕಟೇಶ್ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.