Tag: ಆಸ್ಪತೆ

  • ರೆಫ್ರಿ ವಿವಾದಿತ ತೀರ್ಪಿನಿಂದ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ – 100ಕ್ಕೂ ಹೆಚ್ಚು ಮಂದಿ ಸಾವು

    ರೆಫ್ರಿ ವಿವಾದಿತ ತೀರ್ಪಿನಿಂದ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ – 100ಕ್ಕೂ ಹೆಚ್ಚು ಮಂದಿ ಸಾವು

    ಕೊನಕ್ರಿ: ಗಿನಿಯಾದ (Guinea) 2ನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್ಬಾಲ್ ಪಂದ್ಯವೊಂದರ ವೇಳೆ ಅಭಿಮಾನಿಗಳ (Football Fans) ನಡುವೆ ಘರ್ಷಣೆ ಉಂಟಾಗಿ ಸುಮಾರು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    2021ರ ದಂಗೆಯ ನಂತರ ಅಧಿಕಾರ ವಹಿಸಿಕೊಂಡು ತನ್ನನ್ನು ತಾನು ಅಧ್ಯಕ್ಷ ಎಂದು ಘೋಷಿಸಿಕೊಂಡ ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ಅವರ ಗೌರವಾರ್ಥವಾಗಿ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ವೇಳೆ ರೆಫ್ರಿ ನೀಡಿದ ವಿವಾದಿತ ತೀರ್ಪು ಅಭಿಮಾನಿಗಳ ಘರ್ಷಣೆಗೆ ಕಾರಣವಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದಾಗಿ ತಿಳಿದುಬಂದಿದೆ.

    ಘಟನೆ ನಂತರ ಇಲ್ಲಿನ ಸ್ಥಳೀಯ ಆಸ್ಪತ್ರೆ ಮುಂಭಾಗ ಹೆಣಗಳ ರಾತ್ರಿಯೇ ಇತ್ತು, ಕೆಲವರ ದೇಹಗಳನ್ನ ಆಸ್ಪತ್ರೆಯ ವರಾಂಡದಲ್ಲಿ ಇಡಲಾಗಿತ್ತು. 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ ಎನ್ನಲಾಗಿದೆ.

    ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ರೆಫ್ರಿ ತೀರ್ಪಿನಿಂದ ರೊಚ್ಚಿಗೆದ್ದು ಘರ್ಷಣೆಗೆ ಇಳಿದಿದ್ದರು. ಇದು ದೊಡ್ಡ ದಂಗೆಯಾಗಿ ಮಾರ್ಪಟ್ಟಿತು. ಈ ವೇಳೆ ಸಮೀದಲ್ಲಿದ್ದ ಪೊಲೀಸ್‌ ಠಾಣೆಯನ್ನೂ ಧ್ವಂಸಗೊಳಿಸಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ.

    2021ರ ದಂಗೆಯ ನಂತರ ಆಲ್ಫಾ ಕಾಂಡೆ ಗಿನಿಯಾ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಂಡರು. ಆ ಬಳಿಕ ಅಧ್ಯಕ್ಷ ಸ್ಥಾನಕ್ಕೇರಿದ ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ತನ್ನನ್ನು ತಾನೇ ಅಧ್ಯಕ್ಷ ಎಂದು ಘೋಷಿಸಿಕೊಂಡರು. ಈ ವೇಳೆ ಚುನಾವಣಾ ಪ್ರವಾರದ ಭಾಗವಾಗಿ ಹಾಗೂ ತನಗೆ ಗೌರವಾರ್ಥವಾಗಿ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಹಿಂದೆಯೂ ಈ ರೀತಿಯ ಪಂದ್ಯಗಳನ್ನು ಆಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

  • ಯೂಟ್ಯೂಬ್ ವೀಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ- 17ರ ಬಾಲಕ ಸಾವು

    ಯೂಟ್ಯೂಬ್ ವೀಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ- 17ರ ಬಾಲಕ ಸಾವು

    ಪಾಟ್ನಾ: ಯೂಟ್ಯೂಬ್ ನೋಡಿ ನಕಲಿ ವೈದ್ಯ ಸರ್ಜರಿ ಮಾಡಿದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

    ಬಿಹಾರದ ಸರನ್ ಎಂಬಲ್ಲಿ ನಕಲಿ ವೈದ್ಯ ಯೂಟ್ಯೂಬ್ ವೀಡಿಯೋವನ್ನು ಅನುಸರಿಸಿ ಬಾಲಕನ ಪಿತ್ತಕೋಶದಲ್ಲಿರುವ ಕಲ್ಲನ್ನು ತೆಗೆಯುವುದಕ್ಕೆ ಆಪರೇಷನ್ ಮಾಡಿದ್ದಾರೆ.ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಬಾಲಕನನ್ನು ಪಾಟ್ನಾದ (Patna) ಬೇರೆ ಆಸ್ಪತ್ರೆಗೆ ಕರೆದೊಯ್ಯುವುದಕ್ಕೆ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದಾರೆ. ಮಾರ್ಗ ಮಧ್ಯೆ ಬಾಲಕ ಮೃತಪಟ್ಟಿದ್ದು, ದೇಹವನ್ನು ಆಸ್ಪತ್ರೆಯಲ್ಲಿ ಬಿಟ್ಟು ವೈದ್ಯರು ಹಾಗೂ ಜೊತೆಗಿದ್ದವರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ: ಸಿಎಂ ವಿರುದ್ಧ ಈಶ್ವರಪ್ಪ ಗರಂ

    ಬಾಲಕನು ಪದೇ ಪದೇ ವಾಂತಿ ಮಾಡುತ್ತಿದ್ದ. ಆದ್ದರಿಂದ ಆತನನ್ನು ಸರನ್ (Saran) ನಗರದಲ್ಲಿರುವ ಗಣಪತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಡ್ಮಿಟ್ ಮಾಡಿಸಿದೆವು. ವಾಂತಿ ನಿಂತಿತ್ತು. ಆದರೆ ವೈದ್ಯ ಅಜಿತ್ ಕುಮಾರ್ ಪುರಿ ಈತನಿಗೆ ಆಪರೇಷನ್ ಅಗತ್ಯ ಇದೆ. ಆಪರೇಷನ್ ಮಾಡಬೇಕು ಎಂದರು. ಆದರೆ ಅವರು ಯೂಟ್ಯೂಬ್ ವೀಡಿಯೋವನ್ನು ನೋಡಿ ಆಪರೇಷನ್ ಮಾಡಿದ್ದರಿಂದ ನನ್ನ ಮಗ ಜೀವ ಕಳೆದುಕೊಂಡ ಎಂದು ಚಂದನ್ ಶಾ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ – ಅಭಿಮಾನಿಗಳ ಅಭಿಯಾನ

    ಮೃತ ಬಾಲಕನ ಅಜ್ಜ ಮಾತನಾಡಿ, ಬಾಲಕನ ತಂದೆಯನ್ನು ಬೇರೆ ಕೆಲಸದ ಮೇರೆಗೆ ಹೊರಗಡೆ ಕಳುಹಿಸಿದ್ದರು. ಕುಟುಂಬದವರ ಅನುಮತಿ ಪಡೆಯದೇ ಅವರು ಬಾಲಕನನ್ನು ಕರೆದುಕೊಂಡು ಹೋಗಿ ಆಪರೇಷನ್ ಮಾಡಿದ್ದಾರೆ. ಬಾಲಕ ನೋವಿನಿಂದ ಕಿರುಚಿದ್ದನ್ನು ನೋಡಿ ಏನಾಯಿತು ಎಂದು ವೈದ್ಯರನ್ನು ಪ್ರಶ್ನಿಸಿದರೆ, ನಾವು ವೈದ್ಯರು ಎಂದು ಎದುರುತ್ತರಿಸಿದರು. ಸಂಜೆಯ ಸುಮಾರಿಗೆ ಬಾಲಕನ ಶವವನ್ನು ಆಸ್ಪತ್ರೆಯ ಮೆಟ್ಟಿಲಲ್ಲಿ ಇಟ್ಟು ಪರಾರಿಯಾಗಿದ್ದಾರೆ ಎಂದು ತಿಳಿಸಿದರು.

    ಈ ಘಟನೆಯ ಕುರಿತಾಗಿ ಪೊಲೀಸರು ವೈದ್ಯರ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪರಾರಿಯಾದ ವೈದ್ಯ ಮತ್ತು ಆತನ ತಂಡದವರನ್ನು ಹುಡುಕುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಇದನ್ನೂ ಓದಿ: ಒಂದೇ ದಿನದಲ್ಲಿ ತನಗೆ ಸೇರಿದ ಜಾಗದ 848 ಖಾತೆ ಮಾಡಿಸಿಕೊಂಡ ಮುಡಾ ಮಾಜಿ ಅಧ್ಯಕ್ಷ

  • ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಶ್ರೀನಗರ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

    ತೌಸೀಫ್ ಅಹಮದ್ ಹುತಾತ್ಮ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಶ್ರೀನಗರದ ಬಾಟ್‍ಮಲೂ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ಹುತಾತ್ಮರಾಗಿದ್ದಾರೆ.

    ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್‍ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕಾನ್‍ಸ್ಟೆಬಲ್ ತೌಸೀಫ್ ಅವರನ್ನು ತಕ್ಷಣವೇ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿಬರ್ಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್‍ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ  SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

  • ಬೀದರ್ ಶಾಕಿಂಗ್: 10ನೇ ಕ್ಲಾಸ್ ಓದಿರೋ ವೈದ್ಯರ ಸಹಾಯಕನಿಂದ ರೋಗಿಗಳಿಗೆ ಇಂಜೆಕ್ಷನ್!

    ಬೀದರ್ ಶಾಕಿಂಗ್: 10ನೇ ಕ್ಲಾಸ್ ಓದಿರೋ ವೈದ್ಯರ ಸಹಾಯಕನಿಂದ ರೋಗಿಗಳಿಗೆ ಇಂಜೆಕ್ಷನ್!

    ಬೀದರ್: 10ನೇ ಕ್ಲಾಸ್ ಪಾಸಾಗಿರೋ ವೈದ್ಯರ ಸಹಾಯಕ ರೋಗಿಗಳಿಗೆ ಇಂಜೆಕ್ಷನ್ ಹಾಗೂ ಔಷಧಿ ನೀಡಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಸಾವಿನ ಮನೆಗೆ ಕಳಿಸುತ್ತಿರುವ ಭಯಾನಕ ಪ್ರಕರಣವೊಂದು ಬೀದರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

    ಔರಾದ್ ತಾಲೂಕಿನ ತೋರಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 10 ಹಾಸಿಗೆಗಳ ಹೆರಿಗೆ ಆಸ್ಪತ್ರೆಯಲ್ಲಿರುವ ವೈದ್ಯರ ಸಹಾಯಕ ಶ್ರೀಕಾಂತ್ ಕೆಲಸ ಈಗ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಈ ಆಸ್ಪತ್ರೆಗೆ ವೈದ್ಯರು ವಾರಕ್ಕೆ ಒಂದು ಅಥವಾ ಎರಡು ದಿನ ಬಂದು ಇನ್ನುಳಿದ ದಿನ ಗೈರಾಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಶ್ರೀಕಾಂತ್ ವೈದ್ಯರ ಕೆಲಸವನ್ನು ಕ್ಷಣದಲ್ಲೇ ಮಾಡಿ ಮುಗಿಸುತ್ತಾನೆ.

    10ನೇ ಕ್ಲಾಸ್ ಓದಿರುವ ಶ್ರೀಕಾಂತ್‍ಗೆ ಎಂಬಿಬಿಎಸ್ ನೀರು ಕುಡಿದಷ್ಟೆ ಸಲಿಸಾಗಿದೆ ಎಂದರೆ ನೀವು ನಂಬಲೇಬೇಕು. ಎರಡು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಶ್ರೀಕಾಂತ್ ವೈದ್ಯರ ಸಹಾಯವಿಲ್ಲದೆ ರೋಗಿಗಳಿಗೆ ಇಂಜೆಕ್ಷನ್ ನೀಡುತ್ತಾನೆ.

    ವೈದ್ಯರ ಸಹಾಯಕ ಇಂಜೆಕ್ಷನ್ ಹಾಗೂ ಔಷಧಿ ಕೊಡುತ್ತಿರುವುದರಿಂದ ಭಯಭೀತರಾಗಿರುವ ರೋಗಿಗಳು, ಗರ್ಭಿಣಿಯರು ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಒಂದು ತಿಂಗಳಿನಿಂದ ಫಾಲೋಅಪ್ ಮಾಡಿ ಆಸ್ಪತ್ರೆಗೆ ಭೇಟಿ ನೀಡಿದ ಟಿವಿ ಕ್ಯಾಮೆರಾಗೆ ರೆಡ್ ಹ್ಯಾಂಡಾಗಿ ಈ ಸಹಾಯಕನ ಬಣ್ಣ ಬಯಲು ಮಾಡಿದೆ.

    ಕ್ಯಾಮೆರಾ ನೋಡುತ್ತಿದಂತೆ ಕಕ್ಕಾಬಿಕ್ಕಿಯಾದ ಸಹಾಯಕರು ಹೌದು ಸಾರ್ ನಾನು ವೈದ್ಯರು ಹೇಳಿದರೆ ಮಾತ್ರ ರೋಗಿಗಳಿಗೆ ಚಿಕಿತ್ಸೆ ನೀಡತ್ತೇವೆ ಎಂದು ಒಪ್ಪಿಕೊಂಡಿದ್ದಾನೆ.

  • ತಾಯಿ ಶವವನ್ನು ಹೆಗಲ ಮೇಲೆ ಹೊತ್ತೊಯ್ದ ಮಗ- ಬಳ್ಳಾರಿಯಲ್ಲೊಂದು ಮನಕಲಕುವ ಘಟನೆ

    ತಾಯಿ ಶವವನ್ನು ಹೆಗಲ ಮೇಲೆ ಹೊತ್ತೊಯ್ದ ಮಗ- ಬಳ್ಳಾರಿಯಲ್ಲೊಂದು ಮನಕಲಕುವ ಘಟನೆ

    ಹೊಸಪೇಟೆ: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡದೆ ತನ್ನ ಪೋಷಕರಿಬ್ಬರೂ ಒಂದೇ ದಿನ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬ, ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರತಿಭಟನಾರ್ಥವಾಗಿ ತಾಯಿ ಶವವನ್ನು ಹೆಗಲ ಮೆಲೇಯೇ ಹೊತ್ತು ಹೊರನಡೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಚಿತ್ರಗಳು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮೂಲತಃ ಬಳ್ಳಾರಿ ತಾಲೂಕಿನ ಕೊರ್ಲಗುಂದಿಯ ಮಾರೆಪ್ಪ (76) ಹಾಗೂ ಅವರ ಪತ್ನಿ ತಿಪ್ಪಮ್ಮ (70) ಅವರನ್ನು ಭಾನುವಾರ ಬೆಳಗ್ಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆ ಮಾರೆಪ್ಪ ಮೃತಪಟ್ಟರೆ, ರಾತ್ರಿ ತಿಪ್ಪಮ್ಮ ಮೃತಪಟ್ಟಿದ್ದಾರೆ. ಹೀಗಾಗಿ ಸರಿಯಾಗಿ ಚಿಕಿತ್ಸೆ ನೀಡದೇ ಇರುವುದರಿಂದಲೇ ತನ್ನ ತಂದೆ-ತಾಯಿ ಮೃತ ಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಮೃತ ದಂಪತಿಯ ಮಗ ರವಿ, ವೈದ್ಯರಿಗೂ ತಿಳಿಸದೆ, ಸ್ಟ್ರೆಚರ್ ನೆರವೂ ಕೇಳದೆ ತನ್ನ ತಾಯಿಯ ಶವವನ್ನು ಹೊತ್ತು ಹೊರ ನಡೆದಿದ್ದಾರೆ.

    ಘಟನೆ ಬಗ್ಗೆ ಪ್ರತಿಕ್ರಿಯಿಸಿದ ರವಿ ಅವರ ಹಿರಿಯ ಸಹೋದರ ತಿರುಪತಿ, ಬೆಳಿಗ್ಗೆಯೇ ಆಸ್ಪತ್ರೆಗೆ ದಾಖಲಿಸಿದ್ದರೂ ಅಲ್ಲಿಯ ಸಿಬ್ಬಂದಿ ಸಂಜೆವರೆಗೂ ವೃಥಾ ಕಾಲಹರಣ ಮಾಡಿದ್ದರು. ಅಪ್ಪನ ಶವವನ್ನು ಸಾಗಿಸುವ ಸಿದ್ಧತೆಯಲ್ಲಿದ್ದಾಗಲೇ ರಾತ್ರಿ ತಾಯಿಯೂ ತೀರಿಕೊಂಡರು. ಅಲ್ಲಿನ ಸಿಬ್ಬಂದಿ ಸ್ಟ್ರೆಚರ್, ಆಂಬುಲೆನ್ಸ್ ವ್ಯವಸ್ಥೆಯನ್ನೂ ಮಾಡಿಕೊಡಲಿಲ್ಲ. ಇದರಿಂದ ಬೇಸತ್ತ ನನ್ನ ತಮ್ಮ, ತಾನೇ ಶವ ಹೊತ್ತು ಸಾಗಿಸಿದ ಎಂದು ಹೇಳಿದರು. ಹೊಸಪೇಟೆ ತಾಲೂಕಿನ ಗಾಳೆಮ್ಮನ ಗುಡಿ ಗ್ರಾಮದಲ್ಲಿ ಸೋಮವಾರ ಸಂಜೆ ಇಬ್ಬರದ್ದೂ ಅಂತ್ಯಸಂಸ್ಕಾರ ನೆರವೇರಿಸಲಾಯಿತು ಎಂದು ಅವರು ತಿಳಿಸಿದರು.

    ಈ ಘಟನೆಯಲ್ಲಿ ವೈದ್ಯರಲ್ಲಿ ಮಾನವೀಯತೆಯೇ ಮರೆತು ಹೋಗಿದ್ದು, ಚಿಕಿತ್ಸೆ ನೀಡಲು ನಿರ್ಲಕ್ಷ್ಯವಹಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಅಗ್ರಹಿಸಿದ್ದಾರೆ.

    https://www.youtube.com/watch?v=zIOOhuEd6fE