Tag: ಆಹಾರ ಮೇಳ

  • ದಸರಾ ವಿಶೇಷ | ಮೈಸೂರು ಸಿಂಗರಿಸಿದ ದೀಪಾಲಂಕಾರ, ಆಹಾರ ಮೇಳಕ್ಕೆ ಚಾಲನೆ

    ದಸರಾ ವಿಶೇಷ | ಮೈಸೂರು ಸಿಂಗರಿಸಿದ ದೀಪಾಲಂಕಾರ, ಆಹಾರ ಮೇಳಕ್ಕೆ ಚಾಲನೆ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) 2025ರ ಅಂಗವಾಗಿ ಸೋಮವಾರ (ಸೆ.22) ಜನಪ್ರಿಯ ಆಹಾರ ಮೇಳ ಹಾಗೂ ದೀಪಾಲಂಕಾರಕ್ಕೆ ಚಾಲನೆ ನೀಡಲಾಯಿತು.

    ದೀಪಾಲಂಕಾರ:
    ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್ (KJ George) ಅವರು ಚಾಲನೆ ನೀಡಿದರು.

    ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತಲೂ ಹೆಚ್ಚು ಆಕರ್ಷಣೀಯವಾಗಿ ಈ ಬಾರಿಯ ದೀಪಾಲಂಕಾರ ಕಂಗೊಳಿಸಲಿದೆ. ಈ ಮೂಲಕ ಸಾಂಸ್ಕೃತಿಕ ರಾಜಧಾನಿ ಮೈಸೂರು 21 ದಿನಗಳ ಕಾಲ ದೀಪದ ಬೆಳಕಿನಲ್ಲಿ ಮಿನುಗಲಿದೆ.ಇದನ್ನೂ ಓದಿ: Photo Gallery | ಹೂವು ಚೆಲುವೆಲ್ಲಾ ತನ್ನದೆನ್ನುತ್ತಿದೆ.. ಸಂಗೀತ ಝೇಂಕಾರ ಮನಮುಟ್ಟುತ್ತಿದೆ – ದಸರಾ ಸೊಬಗು ಕಣ್ತುಂಬಿಕೊಳ್ಳಿ

    136 ಕಿ.ಮೀ ದೀಪಾಲಂಕಾರ:
    ದಸರಾ ಹಿನ್ನೆಲೆಯಲ್ಲಿ ಈ ಬಾರಿ ನಗರದ 136 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಇದರೊಂದಿಗೆ ನಗರದ ಪ್ರಮುಖ ಕಡೆಗಳಲ್ಲಿ ಎಲ್‌ಇಡಿ ಬಲ್ಬ್ಗಳಿಂದ ನಿರ್ಮಿಸಲಾದ 80 ವಿವಿಧ ಪ್ರತಿಕೃತಿಗಳನ್ನು ಇರಿಸಲಾಗಿದೆ. ನಿಗದಿಯಂತೆ ಸೆ.22ರಿಂದ ಅ.2ರವರೆಗೆ ವಿದ್ಯುತ್ ದೀಪಾಲಂಕಾರ ನಡೆಯಲಿದ್ದು, ಇದರೊಂದಿಗೆ ಮುಖ್ಯಮಂತ್ರಿಗಳ ನಿರ್ದೇಶನದಂತೆ 10 ದಿನಗಳು ವಿಸ್ತರಣೆ ಮಾಡಿಲಾಗಿದೆ, ಈ ಮೂಲಕ ಒಟ್ಟು 21 ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ಇರಲಿದೆ. ಇದಕ್ಕಾಗಿ 300 ಕಿ.ಲೋ ವ್ಯಾಟ್‌ಗಳ, 2,57,520 ಯೂನಿಟ್ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.

    ಕೋಲ್ಕತ್ತಾ ಲೈಟಿಂಗ್ ಮೆರಗು :
    ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ಕೋಲ್ಕತ್ತಾ ಮಾದರಿ ಲೈಟಿಂಗ್ ಸಹ ಅಳವಡಿಸಲಾಗಿದೆ. ಇದರ ಮೂಲಕವಾಗಿ ನಗರದ ಹಲವು ಕಡೆಗಳಲ್ಲಿ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸುವ ಮೂಲಕ ದಸರಾ ವಿದ್ಯುತ್ ದೀಪಾಲಂಕಾರದ ಮೆರಗು ಹೆಚ್ಚಿಸಲಾಗಿದೆ.

    ಕಂಗೊಳಿಸುತ್ತಿದೆ ಮೈಸೂರು:
    ಇಡೀ ಮೈಸೂರು ನಗರ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪ್ರಮುಖವಾಗಿ ಅರಮನೆ ಸುತ್ತಲಿನ ರಸ್ತೆಗಳು ಸೇರಿದಂತೆ ಸಯ್ಯಾಜಿರಾವ್ ರಸ್ತೆ, ಇರ್ವಿನ್ ರಸ್ತೆ, ಅಲ್ಬರ್ಟ್ ವಿಕ್ಟರ್ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿರಸ್ತೆ, ಹೊರವಲಯದಲ್ಲಿನ ಪ್ರಮುಖ ಹೆದ್ದಾರಿಗಳಿಗೂ ದೀಪಾಲಂಕಾರ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿರುವ ಪ್ರಮುಖ ವೃತ್ತಗಳಿಗೂ ಆಕರ್ಷಕ ದೀಪಾಲಂಕಾರ ಮಾಡಲಾಗಿದೆ. ಇದಲ್ಲದೆ ದೊಡ್ಡಕೆರೆ ಮೈದಾನ, ಕೆ.ಆರ್.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ರೈಲ್ವೆ ನಿಲ್ದಾಣ ಸಮೀಪ, ಗನ್‌ಹೌಸ್, ಎಲ್‌ಐಸಿ ವೃತ್ತ ಸೇರಿದಂತೆ ವಿವಿಧೆಡೆ ಹಲವು ಕಲಾಕೃತಿಗಳನ್ನು ನಿರ್ಮಿಸಲಾಗಿದೆ.ಇದನ್ನೂ ಓದಿ: ಮೈಸೂರು ರೇಷ್ಮೆ ಸೀರೆ, ಮಲ್ಲಿಗೆ ಮುಡಿದು ಚಾಮುಂಡಿ ತಾಯಿಯ ಸೀರೆ ಪಡೆದ ಬಾನು ಮುಷ್ತಾಕ್‌

    ಅಗತ್ಯ ಸುರಕ್ಷತಾ ಕ್ರಮಗಳು:
    ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್ ಮಾಡುವುದನ್ನು ತಪ್ಪಿಸುವುದು, ಮಳೆ ಸಂದರ್ಭದಲ್ಲಿ ವಿದ್ಯುತ್/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸುವುದು, ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ, ವಿದ್ಯುತ್ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ ಸಹಾಯವಾಣಿ 1912 ಸಂಖ್ಯೆಗೆ ಸಂಪರ್ಕಿಸುವಂತೆ ಕೋರಲಾಗಿದೆ.

    ಆಕರ್ಷಕ ಡ್ರೋನ್ ಶೋ:
    ದಸರಾ ಮಹೋತ್ಸವದ ಹೊಸ ಆಕರ್ಷಣೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ವರ್ಣರಂಜಿತವಾಗಿರಲಿದೆ. ಕಳೆದ ಬಾರಿ 1,500 ಡ್ರೋನ್ ಬಳಸಿಕೊಂಡು ನಡೆಸಲಾಗಿದ್ದ ಡ್ರೋನ್ ಪ್ರದರ್ಶನದಲ್ಲಿ ಈ ಬಾರಿ 3,000 ಸಾವಿರ ಡ್ರೋನ್ ಬಳಸಿಕೊಂಡು ನಡೆಸಲಾಗುತ್ತದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಯಲಿದೆ.

    ಆಹಾರ ಮೇಳ:
    ಮಹಾರಾಜ ಕಾಲೇಜು ಮೈದಾನದಲ್ಲಿ “ರುಚಿಯೊಂದಿಗೆ ಸ್ವಚ್ಛತೆಯ ಸಿರಿ” ಎಂಬ ಧ್ಯೇಯ ವಾಕ್ಯದೊಂದಿಗೆ ಜನಪ್ರಿಯ ಆಹಾರ ಮೇಳವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಉದ್ಘಾಟಿಸಿದರು.

    ಈ ಮೇಳದಲ್ಲಿ ಒಟ್ಟು 160ಕ್ಕೂ ಹೆಚ್ಚು ಮಳಿಗೆಗಳು ತೆರೆದಿದ್ದು, ಅವುಗಳಲ್ಲಿ 121 ಸಸ್ಯಾಹಾರಿ ಹಾಗೂ 39 ಮಾಂಸಾಹಾರಿ ಮಳಿಗೆಗಳಿವೆ. ಇಲ್ಲಿ ಸ್ಥಳೀಯವಾಗಿ ಮೈಸೂರಿನ ವಿಶೇಷ ಆಹಾರ ಶೈಲಿ, ಬುಡಕಟ್ಟು, ಮಲೆನಾಡು, ಕೊಡವ, ಕರಾವಳಿ, ಉತ್ತರ ಹಾಗೂ ಮಧ್ಯ ಕರ್ನಾಟಕದ ಪಾಕಶೈಲಿಗಳ ಜೊತೆಗೆ ಗುಜರಾತಿ, ರಾಜಸ್ಥಾನಿ, ಹೈದರಾಬಾದಿ, ಕೇರಳ, ಚೈನೀಸ್ ಮತ್ತು ಅಂತಾರಾಷ್ಟ್ರೀಯ ಪಾಕಶೈಲಿಗಳನ್ನು ಪರಿಚಯಿಸಲಾಗಿದೆ.

    ಈ ಮೇಳಕ್ಕೆ ಪ್ರವಾಸಿಗರು ಮತ್ತು ಸಾರ್ವಜನಿಕರು ತಮ್ಮ ಕುಟುಂಬ ಸಮೇತ ಭೇಟಿ ನೀಡಿ, ವಿವಿಧ ಶೈಲಿಯ ಆಹಾರ ಪದ್ಧತಿಗಳ ಪರಿಚಯ ಪಡೆದು, ತಮಗೆ ಇಷ್ಟವಾದ ಭೋಜನಗಳನ್ನು ಸವಿಯಲು ಒಂದು ಅಪೂರ್ವ ಅವಕಾಶವನ್ನು ಒದಗಿಸುತ್ತದೆ.ಇದನ್ನೂ ಓದಿ: Mysuru Dasara | ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ

  • ಪಬ್ಲಿಕ್ ಟಿವಿಯ ಆಹಾರ ಮೇಳಕ್ಕೆ ಅದ್ಧೂರಿ ತೆರೆ- ಫುಡ್‍ಫೆಸ್ಟ್ ಗೆ ಹರಿದು ಬಂದ ಜನಸಾಗರ

    ಪಬ್ಲಿಕ್ ಟಿವಿಯ ಆಹಾರ ಮೇಳಕ್ಕೆ ಅದ್ಧೂರಿ ತೆರೆ- ಫುಡ್‍ಫೆಸ್ಟ್ ಗೆ ಹರಿದು ಬಂದ ಜನಸಾಗರ

    ಬೆಂಗಳೂರು : ಪಬ್ಲಿಕ್ ಟಿವಿ ಆಯೋಜನೆಯ ಎರಡನೇ ವರ್ಷದ ಆಹಾರ ಮೇಳಕ್ಕೆ ಅದ್ಧೂರಿಯಾಗಿ ತೆರೆಬಿದ್ದಿದೆ. ನಗರದ ಮಲ್ಲೇಶ್ವರಂ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಈ ಆಹಾರ ಮೇಳದಲ್ಲಿ ಮೂವತ್ತಕ್ಕೂ ಹೆಚ್ಚು ಮಳಿಗೆಗಳು ಮತ್ತು ನೂರಕ್ಕೂ ಹೆಚ್ಚು ಆಹಾರ ಖಾದ್ಯಗಳು ಒಂದೇ ಸೂರಿನಡಿ ಸಿಕ್ಕಿತ್ತು.

    ಕಡೆ ದಿನವಾದ ಇಂದು ಆಹಾರ ಮೇಳಕ್ಕೆ ಜನಸಾಗರವೇ ಹರಿದು ಬಂತು. ಸಿಲಿಕಾನ್ ಸಿಟಿಯ ಜನರು ಆಹಾರ ಮೇಳಕ್ಕೆ ಆಗಮಿಸಿ ಇಷ್ಟವಾದ ಆಹಾರ ಖಾದ್ಯಗಳನ್ನ ಸೇವನೆ ಮಾಡಿದ್ದಾರೆ. ಎರಡು ದಿನಗಳ ಕಾಲದ ಆಹಾರ ಮೇಳಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಇಂದು ಪುರುಷರಿಗಾಗಿ ಇಡ್ಲಿ ತಿನ್ನುವ ಸ್ಫರ್ಧೆಯನ್ನ ಏರ್ಪಡಿಸಲಾಗಿತ್ತು. ಒಂದು ನಿಮಿಷದಲ್ಲಿ ಅತಿ ಹೆಚ್ಚು ಇಡ್ಲಿ ತಿಂದವರಿಗೆ ಪ್ರಥಮ, ದ್ವೀತಿಯ ಮತ್ತು ತೃತೀಯ ಬಹುಮಾನವನ್ನ ನೀಡಲಾಯಿತು. ಇದರಲ್ಲಿ ಗೆದ್ದ ಮೂರು ಜನಕ್ಕೆ ಪ್ರಶಸ್ತಿ ನೀಡಲಾಯಿತು. ಈ ಆಹಾರ ಮೇಳದಲ್ಲಿ ಭಾಗವಹಿಸಿದ್ದ ಮೂವತ್ತಕ್ಕೂ ಹೆಚ್ಚು ಸ್ಟಾಲ್ ಮಾಲೀಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯ್ತು.

    ಡಿಸಿಪಿ ಶಶಿಕುಮಾರ್ ಆಗಮಿಸಿ ವಿವಿಧ ಖಾದ್ಯಗಳನ್ನ ಸವಿದು, ಪಬ್ಲಿಕ್ ಟಿವಿ ವೇದಿಕೆಯಲ್ಲೇ ಗೊಂಬೆ ಹೇಳುತೈತ್ತೆ ಹಾಡನ್ನು ಹಾಡಿದರು. ಇನ್ನೂ ಅಹಂ ಆತ್ಮ ಸೂಲ್ಕ್ ನ ವಿದ್ಯಾರ್ಥಿಗಳು ಭರತನಾಟ್ಯ ಮಾಡಿ ಎಲ್ಲರ ಹುಬ್ಬೇರಿಸಿದರು.

  • ಪಬ್ಲಿಕ್ ಟಿವಿ ಆಹಾರ ಮೇಳಕ್ಕೆ ಚಾಲನೆ – ಬನ್ನಿ ಭಾಗವಹಿಸಿ, ಬಹುಮಾನ ಗೆಲ್ಲಿ

    ಪಬ್ಲಿಕ್ ಟಿವಿ ಆಹಾರ ಮೇಳಕ್ಕೆ ಚಾಲನೆ – ಬನ್ನಿ ಭಾಗವಹಿಸಿ, ಬಹುಮಾನ ಗೆಲ್ಲಿ

    ಬೆಂಗಳೂರು: ಪಬ್ಲಿಕ್ ಟಿವಿಯ ಎರಡನೇ ಆವೃತ್ತಿಯ ಆಹಾರ ಮೇಳಕ್ಕೆ ಯಶಸ್ವಿ ಚಾಲನೆ ಸಿಕ್ಕಿದೆ.

    ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಇಂದು ಮತ್ತು ನಾಳೆ ಆಹಾರ ಮೇಳ ನಡೆಯಲಿದ್ದು, ಅತಿಥಿಗಳು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

    ಈ ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್. ಆರ್ ರಂಗನಾಥ್, ಪೆಪ್ಸ್ ಮ್ಯಾಟ್ರಿಸ್‍ನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಕೆ. ಮಾಧವನ್, ಟೈಟಲ್ ಸ್ಪಾನ್ಸರ್ ನಿತ್ಯಾಮೃತ ನೋನಿಯ ಕಮಲಾಕರ್ ಭಟ್, ಎಂ.ಕೆ ಆಗ್ರೋಟೆಕ್ ಸನ್ ಫ್ಯೂರ್ ಸನ್ ಪ್ಲವರ್ ಆಯಿಲ್ ರಿಜಿನಲ್ ಮ್ಯಾನೇಜರ್ ಸುಹೇಲ್ ಎಂ.ಎನ್, ಕೆಎಂಎಫ್ ಎಂಡಿ ಬಿ.ಸಿ ಸತೀಶ್, ಥ್ಯಾಂಕೋಸ್ ನ್ಯಾಚುರಲ್ ಐಸ್ ಕ್ರೀಮ್ ಎಂಡಿ ರಾಘವೇಂದ್ರ ಥಾಣೆ, ಥಾಟ್ ಬಾಕ್ಸ್ ಡೈರೆಕ್ಟರ್ ಕರಣ್, ನಟ ಪ್ರಜ್ವಲ್ ದೇವರಾಜ್, ನಟಿ ನಿಶ್ವಿಕಾ ನಾಯ್ಡು, ನಿರ್ದೇಶಕ ಗುರು ದೇಶಪಾಂಡೆ ಉಪಸ್ಥಿತರಿದ್ದರು.

    ಆಹಾರ ಮೇಳದಲ್ಲಿ 30 ಬಗೆಯ ಆಹಾರ ಮಳಿಗೆಗಳು ಇದೆ. ಕರ್ನಾಟಕ ಸೇರಿದಂತೆ ಭಾರತದ ವಿವಿಧ ಪ್ರಸಿದ್ಧ ಆಹಾರ ಖಾದ್ಯಗಳು ಆಹಾರ ಮೇಳದಲ್ಲಿ ಲಭ್ಯವಿದೆ. ಒಂದೇ ಸೂರಿನಡಿ ನೂರಾರು ಆಹಾರ ಖಾದ್ಯಗಳು ದೊರೆಯಲಿದೆ. ಆಹಾರ ಮೇಳಕ್ಕೆ ಬರಲು ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಆಹಾರ ಮೇಳಕ್ಕೆ ಬಂದು ಹೆಸರು ನೋಂದಾಯಿಸಿದ ಗ್ರಾಹಕರಿಗೆ ಪ್ರತಿ ಅರ್ಧ ಗಂಟೆಗೆ ಒಮ್ಮೆ ಲಕ್ಕಿ ಕೂಪನ್ ಬಹುಮಾನ ನೀಡಲಾಗುತ್ತದೆ. ಜೊತೆಗೆ ಇಂದು ಮಹಿಳೆಯರಿಗೆ ಪಾನಿಪೂರಿ ತಿನ್ನುವ ಸ್ಫರ್ಧೆ ಆಯೋಜಿಸಲಾಗಿದೆ. ಭಾನುವಾರ ಪುರುಷರಿಗೆ ಇಡ್ಲಿ ತಿನ್ನುವ ಸ್ಫರ್ಧೆ ಇರಲಿದ್ದು, ಆಹಾರ ಮೇಳಕ್ಕೆ ಭೇಟಿ ಕೊಟ್ಟು ಇಷ್ಟವಾದ ಖಾದ್ಯವನ್ನ ಸೇವನೆ ಮಾಡಿ, ಸ್ಪರ್ಧೆಗಳಲ್ಲೂ ಗ್ರಾಹಕರು ಭಾಗವಹಿಸಬಹುದು.

    ಕಾರ್ಯಕ್ರಮ ಉದ್ಘಾಟನೆ ಬಳಿಕ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್. ಆರ್ ರಂಗನಾಥ್ ಅವರು ಮಾತನಾಡಿ, ಎಲ್ಲ ರೋಗಗಳು ಆಹಾರದಿಂದಲೇ ಆರಂಭವಾಗುತ್ತದೆ. ಆದರೆ ಸರಿಯಾಗಿ ತಿನ್ನಿ, ಎಂಜಾಯ್ ಮಾಡಿ. ರಂಗೋಲಿ ಸ್ಫರ್ಧೆಗೆ ಬಂದವರಿಗೆ ಧನ್ಯವಾದ, ಚೆನ್ನಾಗಿ ರಂಗೋಲಿ ಬಿಡಿಸಿದ್ದೀರಿ. ಹಾಗೆಯೇ ಭಾಗವಹಿಸಿದ ಎಲ್ಲ ಸ್ಟಾಲ್ ನವರಿಗೆ ಧನ್ಯವಾದ ಎಂದರು.

    ಆಹಾರ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಎಂಎಫ್ ಎಂಡಿ ಬಿ.ಸಿ ಸತೀಶ್ ಅವರು ಮಾತನಾಡಿ, ಈ ಕಾರ್ಯಕ್ರಮ ಆಯೋಜಿಸಿದಕ್ಕೆ ಧನ್ಯವಾದ. ಇಪ್ಪತ್ತೈದು ಲಕ್ಷ ರೈತ ಸಮೂದಾಯ ಹಾಗೂ ಐದು ಕೋಟಿಗೂ ಅಧಿಕ ಗ್ರಾಹಕರನ್ನು ಕೆಎಂಎಫ್ ಹೊಂದಿದೆ. ನಾವು ಗ್ರಾಹಕರಿಗೆ ಉತ್ಕೃಷ್ಟ ಉತ್ಪನ್ನ ನೀಡುತ್ತಿದ್ದೇವೆ. ನಮ್ಮನ್ನು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಿದಕ್ಕೆ ಪಬ್ಲಿಕ್ ಟಿವಿಗೆ ಧನ್ಯವಾದ. ರಂಗೋಲಿ ಸ್ಫರ್ಧೆ ಏರ್ಪಡಿಸಿರುವುದು ಉತ್ತಮವಾದದ್ದು, ನಮ್ಮ ಸಂಸ್ಕøತಿ, ಸಂಸ್ಕಾರವನ್ನು ಈ ರಂಗೋಲಿಯಲ್ಲಿ ಬಿಡಿಸಿದಂತಹ ಎಲ್ಲಾ ಹೆಣ್ಣು ಮಕ್ಕಳಿಗೆ ಧನ್ಯವಾದ ಹೇಳುತ್ತೇನೆ ಎಂದು ಖುಷಿಯನ್ನು ಹಂಚಿಕೊಂಡರು.

    ಕಮಲಾಕರ್ ಭಟ್ ಅವರು ಮಾತನಾಡಿ, ಆಹಾರ ಮೇಳ ಬೆಂಗಳೂರು ನಗರಕ್ಕೆ ಹಬ್ಬ. ಆಹಾರಕ್ಕೆ ಮಾತ್ರ ಇಲ್ಲಿ ಪ್ರಾಮುಖ್ಯತೆ ಕೊಟ್ಟಿಲ್ಲ. ರಂಗೋಲಿ ಸ್ವರ್ಧೆಯ ಮೂಲಕ ಸಂಸ್ಕಾರ, ಪರಂಪರೆ ನೆನಪಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಹಾಗೆಯೇ ಎಂ.ಕೆ ಆಗ್ರೋಟೆಕ್‍ನ ರಿಜಿನಲ್ ಮ್ಯಾನೇಜರ್ ಸೊಹೈಲ್ ಅವರು ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿ, ಈ ರೀತಿ ಕಾರ್ಯಕ್ರಮ ಹೆಚ್ಚು ಹೆಚ್ಚು ಆಗಲಿ. ಸದಾ ನಾವು ನಿಮ್ಮೊಂದಿಗೆ ಇರುತ್ತೇವೆ. ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಕ್ಕೆ ಧನ್ಯವಾದಗಳು ಎಂದರು.

    ಪ್ರಜ್ವಲ್ ದೇವರಾಜ್ ಅವರು ಪ್ರತಿಕ್ರಿಯಿಸಿ, ಈ ಫುಡ್ ನೋಡಿದರೆ ನಂಗೆ ಡಯೆಟ್ ಮರಿಬೇಕು ಅನಿಸುತ್ತಿದೆ. ದಾರಿಯುದ್ದಕ್ಕೂ ರಂಗೋಲಿ ತುಂಬಾ ಚೆನ್ನಾಗಿತ್ತು. ಶನಿವಾರ, ಭಾನುವಾರ ಡಯೆಟ್ ಮರೆತು ಇಲ್ಲಿ ಬಂದು ಫುಡ್ ತಿಂದು ಎಂಜಾಯ್ ಮಾಡಿ ಎಂದು ಹೇಳಿದರು. ಇತ್ತ ನಟಿ ನಿಶ್ವಿಕಾ ನಾಯ್ಡು ಅವರು ಮಾತನಾಡಿ, ಈ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದ್ದಕ್ಕೆ ಪಬ್ಲಿಕ್ ಟಿವಿಗೆ ಧನ್ಯವಾದ. ಡಯೆಟ್ ಎಲ್ಲಾ ಮರೆತು ಫುಡ್ ಫೆಸ್ಟ್ ನಲ್ಲಿ ಭಾಗಿಯಾಗಿ ಎಂದರು. ಹಾಗೆಯೇ ನಿರ್ದೇಶಕ ಗುರು ದೇಶಪಾಂಡೆ ಅವರು ಮಾತನಾಡಿ, ಆಹಾರವನ್ನು ವ್ಯರ್ಥ ಮಾಡಬೇಡಿ, ಹೆಚ್ಚು ಉಪಯೋಗ ಮಾಡಿಕೊಳ್ಳೋಣ. ಇಲ್ಲದೇ ಇರೋರಿಗೆ ಆಹಾರ ಕೊಡೋಣ. ಇದು ಎರಡನೇ ವರ್ಷ ನಾನು ಆಹಾರ ಮೇಳಕ್ಕೆ ಬರುತ್ತಿರೋದು. ಇಲ್ಲಿ ಆಹಾರ ರುಚಿ ಚೆನ್ನಾಗಿ ಇರುತ್ತೆ. ಎಲ್ಲರೂ ಬಂದು ಆಹಾರ ಸವಿಯಿರಿ ಎಂದು ಹೇಳಿದರು.

    ಆಹಾರ ಮೇಳಕ್ಕೆ ಚಾಲನೆಗೂ ಮುನ್ನ ರಂಗೋಲಿ ಸ್ಫರ್ಧೆ ನಡೆದಿದ್ದು, 120 ನಿಮಿಷದ ಒಳಗೆ ರಂಗೋಲಿಯನ್ನ ಬಿಡಿಸಿದ್ದಾರೆ. ರಂಗೋಲಿ ಸ್ಫರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನ ನೀಡಲಾಯಿತು. ಈ ಸ್ಪರ್ಧೆಯ ತೃತೀಯ ಬಹುಮಾನ ವಿಜೇತೆ ಭಾಗ್ಯ, ದ್ವೀತಿಯ ಬಹುಮಾನ ವಿಜೇತೆ ಪ್ರತಿಮಾ ಉಡುಪ, ಪ್ರಥಮ ಬಹುಮಾನ ವಿಜೇತೆ ನಿರ್ಮಲ ಅವರಿಗೆ ಪೆಪ್ಸ್ ಮ್ಯಾಟ್ರಿಸ್ ವತಿಯಿಂದ ಹಾಸಿಗೆ ನೀಡಲಾಯ್ತು. ಇದೇ ವೇಳೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲಾ ಸ್ಪರ್ಧಿಗಳಿಗೂ ಪೆಪ್ಸ್ ಮ್ಯಾಟ್ರಿಸ್ ದಿಂಬುಗಳನ್ನು ಸಮಾಧಾನಕರ ಬಹುಮಾನವಾಗಿ ನೀಡಿ ಅಭಿನಂದಿಸಲಾಯಿತು.

  • ಇಂದಿನಿಂದ ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುವ 2ನೇ ಆವೃತ್ತಿಯ ಆಹಾರ ಮೇಳ

    ಇಂದಿನಿಂದ ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುವ 2ನೇ ಆವೃತ್ತಿಯ ಆಹಾರ ಮೇಳ

    -ಆಹಾರ ಮೇಳಕ್ಕೆ ಬನ್ನಿ, ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಿ

    ಬೆಂಗಳೂರು: ಆಹಾರ ಪ್ರಿಯರಿಗೊಂದು ಸಿಹಿ ಸುದ್ದಿ. ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುವ ಆಹಾರ ಮೇಳ ಮತ್ತೆ ಬಂದಿದೆ. ಮೊದಲನೇ ವರ್ಷದ ಅಹಾರ ಮೇಳ ಯಶಸ್ವಿಯಾದ ಬಳಿಕ ನಿಮ್ಮ ಪಬ್ಲಿಕ್ ಟಿವಿ ಎರಡನೇ ವರ್ಷ ಆಹಾರ ಮೇಳವನ್ನು ಆಯೋಜಿಸಿದ್ದು, ಇಂದಿನಿಂದ ಎರಡು ದಿನಗಳ ಕಾಲ ಆಹಾರ ಮೇಳ ನಡೆಯಲಿದೆ.

    ಒಂದನೇ ವರ್ಷದ ಆಹಾರ ಮೇಳ ಯಶಸ್ವಿಯಾದ ಬಳಿಕ ಪಬ್ಲಿಕ್ ಟಿವಿ ಎರಡನೇ ವರ್ಷದ ಆಹಾರ ಮೇಳವನ್ನು ಆಯೋಜಿಸಲಾಗಿದೆ. ಜನವರಿ 25 ಮತ್ತು 26 ಅಂದರೆ ಇಂದಿನಿಂದ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಈ ಆಹಾರ ಮೇಳ ಇರಲಿದೆ. ಆಹಾರ ಮೇಳ ಮಲ್ಲೇಶ್ವರಂ ಮೈದಾನದ ಮುಂಭಾಗದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದ್ದು, ಒಂದೇ ಸೂರಿನಡಿಯಲ್ಲಿ 30ಕ್ಕೂ ಹೆಚ್ಚು ಆಹಾರ ಮಳಿಗೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವಿಶೇಷ ಆಹಾರ ಮೇಳದಲ್ಲಿ ಕರ್ನಾಟಕ ಹಾಗೂ ಭಾರತದ ಇತರೇ ರಾಜ್ಯಗಳ ಪ್ರಸಿದ್ಧ ಖಾದ್ಯಗಳನ್ನು ಪ್ರದರ್ಶಿಸಲಾಗುತ್ತಿದೆ.

    ಈ ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಇಷ್ಟವಾಗುವ ಆಹಾರಗಳನ್ನು ತಯಾರಿಸಿ ಸರ್ವ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಸಸ್ಯಾಹಾರ ಹಾಗೂ ಮಾಂಸಾಹಾರ ಎರಡು ರೀತಿಯ ಅಡುಗೆ ರುಚಿಯನ್ನು ಸ್ಥಳದಲ್ಲಿಯೇ ಸವಿಯಬಹುದು. ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಬೆಳಗ್ಗೆ 10:30 ರಿಂದ ರಾತ್ರಿ 9 ಗಂಟೆಯವರೆಗೆ ಈ ಆಹಾರ ಮೇಳಕ್ಕೆ ಭೇಟಿ ನೀಡಬಹುದು. ಆಹಾರ ಮೇಳ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದರ ಜೊತೆಯಲ್ಲಿ ಜ.25 ರಂದು ಮಹಿಳೆಯರಿಗೆ ಪಾನಿಪುರಿ, ಜ.26 ರಂದು ಪುರುಷರಿಗೆ ಇಡ್ಲಿ ತಿನ್ನುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಉಚಿತ ಪ್ರವೇಶ ಇರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹುಮಾನ ಮತ್ತು ಗಿಫ್ಟ್ ಹ್ಯಾಂಪರ್ ಗಳನ್ನು ಗೆಲ್ಲಬಹುದಾಗಿದೆ.

    ಆಹಾರ ಮೇಳದಲ್ಲಿ ಏನಿರಲಿದೆ?
    * 30ಕ್ಕೂ ಹೆಚ್ಚು ಮಳಿಗೆಗಳಲ್ಲಿ ವಿವಿಧ ಆಹಾರಗಳ ಪ್ರದರ್ಶನ
    * ಕರ್ನಾಟಕ ಹಾಗೂ ಭಾರತದ ಇತರೇ ರಾಜ್ಯಗಳ ಪ್ರಸಿದ್ಧ ಖಾದ್ಯಗಳ ಪ್ರದರ್ಶನ
    * ಸ್ಥಳದಲ್ಲೇ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯದ ಲೈವ್ ಕೌಂಟರ್
    * ಪ್ರತಿ 30 ನಿಮಿಷಕ್ಕೆ ನೋಂದಾಯಿತ ಗ್ರಾಹಕರಿಗೆ ಲಕ್ಕಿ ಡ್ರಾ ಮೂಲಕ ಸಿಗಲಿದೆ ಗಿಫ್ಟ್

    ಆಹಾರ ಮೇಳದ ಮೊದಲ ದಿನವೇ ರಂಗೋಲಿ ಸ್ಪರ್ಧೆ ನಡೆಯಲಿದೆ. ಮಹಿಳೆಯರಿಗಾಗಿ ಈ ರಂಗೋಲಿ ಸ್ಫರ್ಧೆ ಆಯೋಜನೆ ಮಾಡಿದ್ದು, ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದ ಚಿತ್ರಗಳನ್ನ ಬಿಡಿಸಬಹುದಾಗಿದೆ. ಮಲ್ಲೇಶ್ವರದ 6ನೇ ಕ್ರಾಸ್‍ನಲ್ಲಿ ಜನವರಿ 25 ಶನಿವಾರ ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು 96209 40365 ನಂಬರಿಗೆ ಎಸ್‍ಎಂಎಸ್ ಅಥವಾ ವಾಟ್ಸಪ್ ಮೆಸೇಜ್ ಮಾಡಿ ಹೆಸರು ನೋಂದಾಯಿಸಬೇಕು. ಮೊದಲು ಹೆಸರು ನೋಂದಾಯಿಸಿದವರಿಗೆ ಮತ್ತು 100 ಮಂದಿಗೆ ಮಾತ್ರ ಸ್ಪರ್ಧಿಸಲು ಅವಕಾಶ ಸಿಗಲಿದೆ.

    ಇಂದಿನಿಂದ ಎರಡು ದಿನಗಳಿಂದ ಕಾಲ ಆಹಾರ ಮೇಳ ನಡೆಯಲಿದ್ದು. ಹಲವಾರು ಖಾದ್ಯ ಪ್ರದರ್ಶನಗಳ ಜೊತೆಗೆ ಸ್ಪರ್ಧೆಗಳನ್ನು ಕೂಡ ಆಯೋಜನೆ ಮಾಡಲಾಗಿದೆ. ಎರಡು ದಿನ ವೀಕೆಂಡ್ ಮತ್ತು ಸರ್ಕಾರಿ ರಜೆ ಇದ್ದು ಪಬ್ಲಿಕ್ ಟಿವಿ ಆಯೋಜನೆಯ ಆಹಾರ ಮೇಳಕ್ಕೆ ಭೇಟಿ ನೀಡಿ ನಿಮಗೆ ಇಷ್ಟವಾದ ಖಾದ್ಯವನ್ನ ಸೇವಿಸಿ.

  • ಪಬ್ಲಿಕ್ ಟಿವಿ ಆಹಾರ ಮೇಳಕ್ಕೆ ಬನ್ನಿ – ಸ್ಪರ್ಧೆಯಲ್ಲಿ ಭಾಗವಹಿಸಿ

    ಪಬ್ಲಿಕ್ ಟಿವಿ ಆಹಾರ ಮೇಳಕ್ಕೆ ಬನ್ನಿ – ಸ್ಪರ್ಧೆಯಲ್ಲಿ ಭಾಗವಹಿಸಿ

    ಬೆಂಗಳೂರು: ಒಂದನೇ ವರ್ಷದ ಆಹಾರ ಮೇಳ ಯಶಸ್ವಿಯಾದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಎರಡನೇ ವರ್ಷದ ಆಹಾರ ಮೇಳವನ್ನು ಆಯೋಜಿಸುತ್ತಿದೆ.

    ಜನವರಿ 25 ಮತ್ತು 26ರಂದು ಆಹಾರ ಮೇಳವನ್ನು ಆಯೋಜಿಸಲಾಗಿದೆ. ಆಹಾರ ಮೇಳ ಮಲ್ಲೇಶ್ವರಂ ಮೈದಾನದ ಮುಂಭಾಗದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದ್ದು, ಒಂದೇ ಸೂರಿನಡಿಯಲ್ಲಿ 30ಕ್ಕೂ ಹೆಚ್ಚು ಆಹಾರ ಮಳಿಗೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವಿಶೇಷ ಆಹಾರ ಮೇಳದಲ್ಲಿ ಕರ್ನಾಟಕ ಹಾಗೂ ಭಾರತದ ಇತರೇ ರಾಜ್ಯಗಳ ಪ್ರಸಿದ್ಧ ಖಾದ್ಯಗಳನ್ನು ಪ್ರದರ್ಶಿಸಲಾಗುತ್ತಿದೆ.

    ಈ ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಇಷ್ಟವಾಗುವ ಆಹಾರಗಳನ್ನು ತಯಾರಿಸಿ ಸರ್ವ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಸಸ್ಯಾಹಾರ ಹಾಗೂ ಮಾಂಸಾಹಾರ ಎರಡು ರೀತಿಯ ಅಡುಗೆ ರುಚಿಯನ್ನು ಸ್ಥಳದಲ್ಲಿಯೇ ಸವಿಯಬಹುದು. ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಬೆಳಗ್ಗೆ 10:30 ರಿಂದ ರಾತ್ರಿ 9 ಗಂಟೆಯವರೆಗೆ ಈ ಆಹಾರ ಮೇಳಕ್ಕೆ ಭೇಟಿ ನೀಡಬಹುದು. ಆಹಾರ ಮೇಳ ಅಂಗವಾಗಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದರ ಜೊತೆಯಲ್ಲಿ ಜ.25 ರಂದು ಮಹಿಳೆಯರಿಗೆ ಪಾನಿಪುರಿ, ಜ.26 ರಂದು ಪುರುಷರಿಗೆ ಇಡ್ಲಿ ತಿನ್ನುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಉಚಿತ ಪ್ರವೇಶ ಇರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹುಮಾನ ಮತ್ತು ಗಿಫ್ಟ್ ಹ್ಯಾಂಪರ್ ಗಳನ್ನು ಗೆಲ್ಲಬಹುದಾಗಿದೆ.

    ಆಹಾರ ಮೇಳದಲ್ಲಿ ಏನಿರಲಿದೆ?
    * 30 ಕ್ಕೂ ಹೆಚ್ಚು ಮಳಿಗೆಗಳಲ್ಲಿ ವಿವಿಧ ಆಹಾರಗಳ ಪ್ರದರ್ಶನ
    * ಕರ್ನಾಟಕ ಹಾಗೂ ಭಾರತದ ಇತರೇ ರಾಜ್ಯಗಳ ಪ್ರಸಿದ್ಧ ಖಾದ್ಯಗಳ ಪ್ರದರ್ಶನ
    * ಸ್ಥಳದಲ್ಲೇ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯದ ಲೈವ್ ಕೌಂಟರ್
    * ಪ್ರತಿ 30 ನಿಮಿಷಕ್ಕೆ ನೋಂದಾಯಿತ ಗ್ರಾಹಕರಿಗೆ ಲಕ್ಕಿ ಡ್ರಾ ಮೂಲಕ ಸಿಗಲಿದೆ ಗಿಫ್ಟ್

    ರಂಗೋಲಿ ಸ್ಪರ್ಧೆ:
    * ರಂಗೋಲಿ ಸ್ಪರ್ಧೆ ಮಲ್ಲೇಶ್ವರದ 6ನೇ ಕ್ರಾಸ್‍ನಲ್ಲಿ ಜನವರಿ 25 ಶನಿವಾರ ಬೆಳಗ್ಗೆ 8 ಗಂಟೆಗೆ ನಡೆಯಲಿದೆ
    * ಸ್ಪರ್ಧೆಯಲ್ಲಿ ಭಾಗವಹಿಸುವವರು 96209 40365 ನಂಬರಿಗೆ ಎಸ್‍ಎಂಎಸ್ ಅಥವಾ ವಾಟ್ಸಪ್ ಮೆಸೇಜ್ ಮಾಡಿ ಹೆಸರು ನೋಂದಾಯಿಸಬೇಕು
    * ಮೊದಲು ಹೆಸರು ನೋಂದಾಯಿಸಿದವರಿಗೆ ಮತ್ತು 100 ಮಂದಿಗೆ ಮಾತ್ರ ಸ್ಪರ್ಧಿಸಲು ಅವಕಾಶ
    * ವಿಜೇತರಾದವರಿಗೆ ಸಿಗಲಿದೆ ಬಹುಮಾನ

    ರಂಗೋಲಿ ಸ್ಪರ್ಧೆಯ ನಿಯಮಗಳು:
    * ಮಹಿಳೆಯರಿಗೆ ಮಾತ್ರ ಅವಕಾಶ
    * 120 ನಿಮಿಷದಲ್ಲಿ ರಂಗೋಲಿ ಬಿಡಿಸಬೇಕು
    * ಸ್ಪರ್ಧೆಗೆ ಹೆಸರು ನೋಂದಾಯಿಸಿದವರು ಬೆಳಗ್ಗೆ 7.30ಕ್ಕೆ ಸ್ಥಳದಲ್ಲಿ ಹಾಜರಿರಬೇಕು
    * ನಾವು ರಂಗೋಲಿ ಪುಡಿಯನ್ನು ಮಾತ್ರ ನೀಡುತ್ತೇವೆ
    * ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದ ವಿಷಯವನ್ನು ರಂಗೋಲಿಯಲ್ಲಿ ಬಿಡಿಸಬೇಕು
    * ಸ್ಪರ್ಧೆಯಲ್ಲಿ ಭಾಗವಹಿಸುವರು ತಾವೇ ತಮಗೆ ಬೇಕಾದ ವಸ್ತುಗಳನ್ನು ತರಬೇಕು ಮತ್ತು ಒಂದೇ ಮಾದರಿಯನ್ನು ಬಳಸಬೇಕು. ಬಣ್ಣಗಳು/ ಪುಷ್ಪ ದಳಗಳು/ ಪುಡಿ/ ಧಾನ್ಯಗಳು/ ಅಕ್ಕಿ ಇತ್ಯಾದಿಗಳ ಪೈಕಿ ಒಂದು ವಸ್ತುವನ್ನು ಮಾತ್ರ ಬಳಸಿ ರಂಗೋಲಿ ಹಾಕಬೇಕು
    * ಸಂಘಟಕರು ನೀಡುವ ಸ್ಥಳದಲ್ಲಿ ಸ್ಪರ್ಧಿಗಳು ರಂಗೋಲಿಯನ್ನು ಸಿದ್ಧ ಪಡಿಸಬೇಕು
    * ಕೊರೆಯಚ್ಚನ್ನು ಬಳಸುವಂತಿಲ್ಲ
    * ಒಬ್ಬರಿಗೆ ಮಾತ್ರ ಅವಕಾಶ
    * ಸ್ಪರ್ಧೆ ಒಂದೇ ಸುತ್ತಿನಲ್ಲಿ ಮುಗಿಯಲಿದೆ
    * ಸ್ಪರ್ಧಿಗಳು ರಂಗೋಲಿ ಬಿಡಿಸಲು ಯಾವುದೇ ಮುದ್ರಿತ ವಸ್ತುಗಳನ್ನು ಬಳಸುವಂತಿಲ್ಲ
    * ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ
    ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವವರು ಎಸ್‍ಎಂಎಸ್ ಅಥವಾ ವಾಟ್ಸಪ್ ಮೂಲಕ 96209 40365 ಮಸೇಜ್ ಕಳುಹಿಸಿ ಹೆಸರು ನೋಂದಾಯಿಸಬೇಕು.

  • ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಧರೆಗಿಳಿದ ಕೇಕ್ ಲೋಕ

    ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಧರೆಗಿಳಿದ ಕೇಕ್ ಲೋಕ

    ಬೆಂಗಳೂರು: ದೇಶ-ವಿದೇಶಗಳಲ್ಲಿ ಹೆಸರು ವಾಸಿಯಾದ ಬಾಣಸಿಗರು ಹಲವು ಬಗೆಯ ಡಿಶೆಸ್ ರೆಡಿ ಮಾಡಿ ಡಿಸೈನ್ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಕೇಕ್ ಲೋಕ ಧರೆಗಿಳಿದಿದೆ. ಭಾನುವಾರದವರೆಗೆ ದಕ್ಷಿಣ ಭಾರತದ ಅತೀ ದೊಡ್ಡ ಆಹಾರ ಮತ್ತು ಆತಿಥ್ಯ ಮೇಳ ಆಯೋಜಿಸಲಾಗಿದೆ. ಇಲ್ಲಿ ದೇಶದ 150ಕ್ಕೂ ನಳಪಾಕ ಪ್ರವೀಣರು, ವಿವಿಧ ಡಿಸೈನ್‍ಗಳನ್ನು ತಯಾರಿಸಿ ಕೇಕ್‍ನಲ್ಲೇ ಕಮಾಲ್ ಮಾಡಿದರು.

    ರಂಗು ರಂಗಾಗಿರುವ ಹ್ಯಾಂಗಿಗ್ ಕೇಕ್ಸ್, ಕ್ಯೂಟ್ ಕ್ಯೂಟ್ ಆಗಿ ಪೋಸ್ ಕೊಡುತ್ತಿರುವ ಕಪಲ್ಸ್ ಕೇಕ್, ಪುಟಾಣಿಗಳನ್ನು ಆಕರ್ಷಿಸುತ್ತಿರುವ ಹಾರ್ಸ್, ಎಲೆಫೆಂಟ್, ಸೀ ಕ್ವೀನ್, ಇವೆಲ್ಲವುಗಳನ್ನು ಕಣ್ಣು ಕುಕ್ಕುವಂತೆ ಯುವತಿಯರು ರೆಡಿ ಮಾಡುತ್ತಿದ್ದಾರೆ.

    ಕೇಕ್‍ನಲ್ಲಿಯೇ ಭ್ರೂಣಾವಸ್ಥೆಯಿಂದ 10 ತಿಂಗಳ ಮಗುವನ್ನು ಮನೋಜ್ಞವಾಗಿ ಕಟ್ಟಿಕೊಡಲಾಗಿದೆ. ತೂಗು ಉಯ್ಯಾಲೆಯ ವೆಡ್ಡಿಂಗ್ ಕೇಕ್ಸ್, ಸಾಂಪ್ರದಾಯಿಕವಾಗಿ ಮಿಂಚುತ್ತಿರುವ ನವಜೋಡಿ ಎಲ್ಲರನ್ನೂ ಅಟ್ರಾಕ್ಟ್ ಮಾಡುತ್ತಿವೆ. ಜೊತೆಗೆ ಎಪಿಜೆ ಅಬ್ದುಲ್ ಕಲಾಂ, ಅಬ್ರಹಾಂ ಲಿಂಕನ್ ಪ್ರತಿಮೆಗಳು ನೋಡುಗರ ಮನಸೂರೆಗೊಳಿಸುತ್ತಿವೆ. ಒಟ್ಟಿನಲ್ಲಿ ಈ ಆಹಾರ ಮೇಳದಲ್ಲಿ ಇರುವ ಒಂದೊಂದು ಕೇಕ್‍ಗಳು ಒಂದೊಂದು ಕತೆ ಹೇಳುತ್ತಿವೆ.

  • ನೀವು ಆಹಾರ ಪ್ರಿಯರೇ, ಹಾಗಾದ್ರೆ ಆಹಾರ ಮೇಳಕ್ಕೆ ಬನ್ನಿ!

    ನೀವು ಆಹಾರ ಪ್ರಿಯರೇ, ಹಾಗಾದ್ರೆ ಆಹಾರ ಮೇಳಕ್ಕೆ ಬನ್ನಿ!

    ಬೆಂಗಳೂರು: ನೀವು ಆಹಾರ ಪ್ರಿಯರೇ? ಬಗೆ ಬಗೆಯ ಆಹಾರದ ಬಗ್ಗೆ ನಿಮಗೆ ತಿಳಿಯಬೇಕೇ? ಹಾಗಾದರೆ ಪಬ್ಲಿಕ್ ಟಿವಿ ಆಯೋಜಿಸಿರುವ ಆಹಾರ ಮೇಳಕ್ಕೆ ಬನ್ನಿ.

    ಪಬ್ಲಿಕ್ ಟಿವಿ ಜನವರಿ 26 ಮತ್ತು 27ರಂದು ಆಹಾರ ಮೇಳವನ್ನು ಆಯೋಜಿಸಿದೆ. ಆಹಾರ ಮೇಳ ಮಲ್ಲೇಶ್ವರಂ ಮೈದಾನದ ಮುಂಭಾಗದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದ್ದು, ಒಂದೇ ಸೂರಿನಡಿಯಲ್ಲಿ 30ಕ್ಕೂ ಹೆಚ್ಚು ಆಹಾರ ಮಳಿಗೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವಿಶೇಷ ಆಹಾರ ಮೇಳದಲ್ಲಿ ಕರ್ನಾಟಕ ಹಾಗೂ ಭಾರತದ ಇತರೇ ರಾಜ್ಯಗಳ ಪ್ರಸಿದ್ಧ ಖಾದ್ಯಗಳನ್ನು ಪ್ರದರ್ಶಿಸಲಾಗುತ್ತಿದೆ.

    ಈ ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಇಷ್ಟವಾಗುವ ಆಹಾರಗಳನ್ನು ತಯಾರಿಸಿ ಸರ್ವ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಸಸ್ಯಾಹಾರ ಹಾಗೂ ಮಾಂಸಾಹಾರ ಎರಡು ರೀತಿಯ ಅಡುಗೆ ರುಚಿಯನ್ನು ಸ್ಥಳದಲ್ಲಿಯೇ ಸವಿಯಬಹುದು. ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಬೆಳಗ್ಗೆ 10:30 ರಿಂದ ರಾತ್ರಿ 9 ಗಂಟೆಯವರೆಗೆ ಈ ಆಹಾರ ಮೇಳಕ್ಕೆ ಭೇಟಿ ನೀಡಬಹುದು.

    ಆಹಾರ ಮೇಳದಲ್ಲಿ ಏನಿರಲಿದೆ?
    ದಕ್ಷಿಣ ಭಾರತದ ತಿನಿಸು, ಉತ್ತರ ಭಾರತದ ತಿನಿಸು, ಕಾಂಟಿನೆಂಟಲ್, ಸಮುದ್ರ ಆಹಾರ, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಗ್ರಿಲ್ಸ್ ಮತ್ತು ರೋಲ್ಸ್, ಮಸಾಲೆ ಮತ್ತು ಕಾಂಡಿಮೆಂಟ್ಸ್, ಸಿಹಿತಿಂಡಿ, ಐಸ್‍ಕ್ರೀಂ, ಕಾಫಿ, ಟೀ, ಚಾಟ್ ಇರಲಿದೆ. ಅಷ್ಟೇ ಅಲ್ಲದೇ ಪ್ರತಿ 30 ನಿಮಿಷಗಳಿಗೊಮ್ಮೆ ನೋಂದಾಯಿಸಲ್ಪಟ್ಟ ಸಂದರ್ಶಕರಿಗೆ ಲಕ್ಕಿ ಡ್ರಾ ಮೂಲಕ ಉಡುಗೊರೆ ಸಿಗಲಿದೆ.

    ರಂಗೋಲಿ ಸ್ಪರ್ಧೆ:
    ಸ್ಥಳದಲ್ಲಿಯೇ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಮಲ್ಲೇಶ್ವರಂ 6ನೇ ಕ್ರಾಸ್ ನಲ್ಲಿ ಜನವರಿ 26ರಂದು ಶನಿವಾರ ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಸ್ಪರ್ಧಿಗಳು 96066 – 66031 ವಾಟ್ಸಪ್ ಸಂಖ್ಯೆಗೆ ಮೆಸೇಜ್ ಮಾಡಿ ಹೆಸರನ್ನು ನೋಂದಾಯಿಸಬೇಕಾಗುತ್ತದೆ. ಮೊದಲು ರಿಜಿಸ್ಟರ್ ಮಾಡಿಕೊಳ್ಳುವ 100 ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ವಿಜೇತರಿಗೆ ಬಹುಮಾನ ನೀಡಲಾಗುವುದು.

    ರಂಗೋಲಿ ಸ್ಪರ್ಧೆಯ ನಿಯಮಗಳು
    * ಮಹಿಳೆಯರಿಗೆ ಮಾತ್ರ ಅವಕಾಶ.
    * 120 ನಿಮಿಷದಲ್ಲಿ ರಂಗೋಲಿ ಬಿಡಿಸಬೇಕು.
    * ರಿಜಿಸ್ಟರ್ ಮಾಡಿಕೊಂಡಿದ್ದ ಸ್ಪರ್ಧಿಗಳ ಹೆಸರು ಖಚಿತವಾದವರು ಶನಿವಾರ ಬೆಳಗ್ಗೆ 7.30ಕ್ಕೆ ಸ್ಥಳದಲ್ಲಿ ಹಾಜರಿರಬೇಕು.
    * ನಾವು ರಂಗೋಲಿ ಪುಡಿಯನ್ನು ಮಾತ್ರ ನೀಡುತ್ತೇವೆ.
    * ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದ ವಿಷಯವನ್ನು ರಂಗೋಲಿಯಲ್ಲಿ ಬಿಡಿಸಬೇಕು.
    * ಸ್ಪರ್ಧೆಯಲ್ಲಿ ಭಾಗವಹಿಸುವರು ತಾವೇ ತಮಗೆ ಬೇಕಾದ ವಸ್ತುಗಳನ್ನು ತರಬೇಕು ಮತ್ತು ಒಂದೇ ಮಾದರಿಯನ್ನು ಬಳಸಬೇಕು. ಬಣ್ಣಗಳು/ ಪುಷ್ಪ ದಳಗಳು/ ಪುಡಿ/ ಧಾನ್ಯಗಳು/ ಅಕ್ಕಿ ಇತ್ಯಾದಿಗಳ ಪೈಕಿ ಒಂದು ವಸ್ತುವನ್ನು ಮಾತ್ರ ಬಳಸಿ ರಂಗೋಲಿ ಹಾಕಬೇಕು.
    * ಸಂಘಟಕರು ನೀಡುವ ಸ್ಥಳದಲ್ಲಿ ಸ್ಪರ್ಧಿಗಳು ರಂಗೋಲಿಯನ್ನು ಸಿದ್ಧ ಪಡಿಸಬೇಕು.
    * ಕೊರೆಯಚ್ಚನ್ನು ಬಳಸುವಂತಿಲ್ಲ.
    * ಒಂದು ತಂಡದಲ್ಲಿ ಇಬ್ಬರಿಗೆ ಮಾತ್ರ ಅವಕಾಶ.
    * ಸ್ಪರ್ಧೆ ಒಂದೇ ಸುತ್ತಿನಲ್ಲಿ ಮುಗಿಯಲಿದೆ.
    * ಸ್ಪರ್ಧಿಗಳು ರಂಗೋಲಿ ಬಿಡಿಸಲು ಯಾವುದೇ ಮುದ್ರಿತ ವಸ್ತುಗಳನ್ನು ಬಳಸುವಂತಿಲ್ಲ.
    * ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೀಕೆಂಡ್‍ನಲ್ಲಿ ವೆರೈಟಿ ತಿಂಡಿಗಳ ಫುಡ್ ಫೆಸ್ಟಿವಲ್

    ವೀಕೆಂಡ್‍ನಲ್ಲಿ ವೆರೈಟಿ ತಿಂಡಿಗಳ ಫುಡ್ ಫೆಸ್ಟಿವಲ್

    ಬೆಂಗಳೂರು: ಸಿಲಿಕಾನ್ ಸಿಟಿ ಹೃದಯ ಭಾಗವಾದ ಫ್ರೀಡಂ ಪಾರ್ಕ್ ನಲ್ಲಿ ಆಹಾರ ಮೇಳವನ್ನು ಆಯೋಜನೆ ಮಾಡಲಾಗಿದೆ.

    ರೆಡ್ ರಿಬ್ಬನ್ ಪ್ರೊ ಸಂಸ್ಥೆಯು ಲಯನ್ಸ್ ಕ್ಲಬ್ ಸಹಯೋಗದೊಂದಿಗೆ 2ನೇ ಸಸ್ಯಹಾರ ಫುಡ್‍ಫೆಸ್ಟ್ ಆಯೋಜನೆ ಮಾಡಿದೆ. ಈ ಆಹಾರ ಮೇಳದಲ್ಲಿ ಆಂಧ್ರ ಪ್ರದೇಶದ ಪೋತರೇಕಲ್, ಎರಕಾರಮ್ ದೋಸೆ, ಬಾಳೆಕಾಯಿ ಬಿರಿಯಾನಿ, ಮಹಾರಾಷ್ಟ್ರದ ಮಿಸಲ್ ಪಾವ್, ತಮಿಳುನಾಡಿನ ಬ್ರಿಂಜಾಲ್ ಬಿರಿಯಾನಿ, ಬಿಹಾರದ ಲಿಟ್ಟಿ ಚೋಕಾ, ಗುಜರಾತ್ ನಫೆಡ್ಕಾ, ಉತ್ತರ ಕರ್ನಾಟಕದ ಶೈಲಿಯ ವಿವಿಧ ಬಗೆಯ ವಿಶೇಷ ಖಾದ್ಯಗಳನ್ನು ಸವಿಯಬಹುದಾಗಿದೆ. ಅದರಲ್ಲೂ ಪಂಜಾಬಿನ ಉಪ್ಪಿನಕಾಯಿ ಮತ್ತು ಹೋಂಮೇಡ್ ಐಸ್‍ಕ್ರೀಂಗಳು ಕೂಡ ದೊರೆಯುತ್ತವೆ.

    ಬೆಳಗ್ಗೆ 10 ರಿಂದ ರಾತ್ರಿ 8 ರವರೆಗೆ ಈ ಮೇಳವು ನಡೆಯಲಿದೆ. ದೆಹಲಿ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು, ಆಂಧ್ರ, ಬಿಹಾರ ಸೇರಿದಂತೆ ದೇಶದ ಇತರ 15 ರಾಜ್ಯಗಳ ಸಾಂಪ್ರದಾಯಿಕ ತಿನಿಸುಗಳು ಇಲ್ಲಿ ದೊರೆಯುತ್ತವೆ. ವಿದೇಶಿಗರೂ ಮೇಳದಲ್ಲಿ ಮಳಿಗೆಗಳನ್ನು ತೆರೆದಿದ್ದಾರೆ. ಎರಡು ಸಾವಿರಕ್ಕೂ ಅಧಿಕ ತಿನಿಸುಗಳು ಹಾಗೂ ಖಾದ್ಯಗಳು ಇಲ್ಲಿ ಸವಿಯಲು ಸಿಗುತ್ತವೆ.

    ಮೇಳದಲ್ಲಿ 150 ಮಳಿಗೆಗಳಿದ್ದು, ಎಂಟ್ರಿ ಫೀ 20 ರಿಂದ 150 ರೂಪಾಯಿಯಾಗಿದೆ. ಮೂರು ದಿನ ನಡೆಯುವ ಈ ಮೇಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಮನೆಯ ತಿಂಡಿಗಳನ್ನ ತಿಂದು ಬೇಸರವಾಗಿದ್ದರೆ ಒಮ್ಮೆ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿ ವಿದೇಶದ ತಿಂಡಿಗಳ ರುಚಿ ನೋಡಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಕಾರವಾರದ ಆಹಾರ ಮೇಳಕ್ಕೆ ಸಖತ್ ರೆಸ್ಪಾನ್ಸ್- ಬಿರಿಯಾನಿ, ಕಬ್ಬಿನ ಹಾಲಿನ ದೋಸೆ, ಮೀನಿನ ಖಾದ್ಯಗಳನ್ನ ಸವಿದ ಜನ

    ಕಾರವಾರದ ಆಹಾರ ಮೇಳಕ್ಕೆ ಸಖತ್ ರೆಸ್ಪಾನ್ಸ್- ಬಿರಿಯಾನಿ, ಕಬ್ಬಿನ ಹಾಲಿನ ದೋಸೆ, ಮೀನಿನ ಖಾದ್ಯಗಳನ್ನ ಸವಿದ ಜನ

    ಕಾರವಾರ: ಕರಾವಳಿ ಎಂದಕೂಡಲೇ ಬಗೆಬಗೆಯ ಮೀನಿನ ಖಾದ್ಯಗಳು ಬಾಯಲ್ಲಿ ನೀರೂರಿಸುತ್ತವೆ. ಮೀನಿನ ಖಾದ್ಯಗಳೇ ಇಲ್ಲಿ ಪ್ರಸಿದ್ಧ. ಇಂತಹ ಖಾದ್ಯಗಳ ಬಗ್ಗೆ ಪ್ರಚಾರ ಮಾಡೋ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಡಳಿತ ಕರಾವಳಿ ಆಹಾರ ಮೇಳವನ್ನು ಆಯೋಜಿಸಿತ್ತು.

    ಕಾರವಾರದ ಕೋಡಿಬಾಗನ ಕಾಳಿನದಿ ತಡದಲ್ಲಿರುವ ಕಾಳಿ ರಿವರ್ ಗಾರ್ಡನ್‍ ನಲ್ಲಿ ಆಹಾರ ಮೇಳವನ್ನು ಆಯೋಜಿಸಲಾಗಿತ್ತು. ಜಿಲ್ಲಾಡಳಿತದ ಸಹಯೋಗದೊಂದಿಗೆ 5 ದಿನಗಳ ಕರಾವಳಿಯ ವಿವಿಧ ಸಂಪ್ರದಾಯಿಕ ಖಾದ್ಯಗಳ ಆಹಾರ ಮೇಳವನ್ನು ಸಿದ್ಧಪಡಿಸಲಾಗಿದ್ದು, 18 ಮಳಿಗೆಗಳನ್ನು ತೆರೆಯಲಾಗಿದೆ.

    ಜಿಲ್ಲೆಯಿಂದಲ್ಲದೇ ಹೊರ ಜಿಲ್ಲೆಯಿಂದಲೂ ಜನರು ಆಹಾರ ಮೇಳಕ್ಕೆ ಆಗಮಿಸಿದ್ದು, ಕರಾವಳಿಯ ಸಂಪ್ರದಾಯಿಕ ಆಹಾರಗಳ ಅನಾವರಣ ಮಾಡಲಾಯಿತು. ಆಹಾರ ಮೇಳದಲ್ಲಿ ಸಾವಿರಾರು ಜನರು ಭಾಗವಹಿಸಿ ರುಚಿ ರುಚಿಯಾದ ಸಂಪ್ರದಾಯಿಕ ಆಹಾರವನ್ನು ಆಸ್ವಾದಿಸಿದ್ರು. ಕರಾವಳಿಯ ಬಿರಿಯಾನಿ, ತಟ್ಟೆಇಡ್ಲಿ, ಕಬ್ಬಿನ ಹಾಲಿನ ದೋಸೆ, ಮೀನಿನ ಖಾದ್ಯಗಳು, ಪಾನಿಪುರಿ ಹೀಗೆ ಹತ್ತು ಹಲವು ವಿವಿಧ ಖಾದ್ಯಗಳು ಮೇಳದಲ್ಲಿ ಇದ್ದವು. ಎಲ್ಲಾ ಆಹಾರಗಳು ಜನರನ್ನು ಆಕರ್ಷಣೆ ಮಾಡಿದ್ದು, ಸಂಗೀತದ ಜೊತೆ ಆಹಾರವನ್ನು ಸವಿದು ಎಂಜಾಯ್ ಮಾಡಿದ್ರು.

    ಒಂದೆಡೆ ಆಹಾರ ಮೇಳಕ್ಕೆ ಮುಗಿಬೀಳುತ್ತಿರೋ ಜನ, ಇನ್ನೊಂದೆಡೆ ಬಂದ ಗ್ರಾಹಕರಿಗೆ ಬಿಸಿಬಿಸಿ ತಿನಿಸುಗಳನ್ನು ಮಾಡಿಕೊಡುತ್ತಿರೋ ಬಾಣಸಿಗರು. ಐದು ದಿನಗಳವರೆಗೆ ನೆಡೆಯುವ ಈ ಮೇಳ ಮೊದಲ ದಿನವೇ ಸಾವಿರಾರು ಆಹಾರಪ್ರಿಯರನ್ನ ಆಕರ್ಷಿಸಿದೆ. ಮೊದಲಬಾರಿಗೆ ಜಿಲ್ಲಾಡಳಿತದ ಪ್ರಯತ್ನಕ್ಕೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, ಜನರು ಮುಗಿಬಿದ್ದು ಖಾದ್ಯಗಳ ಸವಿ ಸವಿಯುತ್ತಿದ್ದಾರೆ.

  • ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲೆಗುಂಪಾಗುತ್ತಿದೆ ಭರಚುಕ್ಕಿ ಜಲಪಾತೋತ್ಸವ!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲೆಗುಂಪಾಗುತ್ತಿದೆ ಭರಚುಕ್ಕಿ ಜಲಪಾತೋತ್ಸವ!

    ಚಾಮರಾಜನಗರ: ದಟ್ಟ ಕಾನನದ ಮಧ್ಯೆ ಬೋರ್ಗರೆಯುತ್ತಿರುವ ಜಲಪಾತ. ಆ ಜಲಪಾತಕ್ಕೆ ವಿವಿಧ ಬಣ್ಣಬಣ್ಣದ ದೀಪಾಲಂಕಾರ. ಕಣ್ಣು ಹಾಯಿಸಿದೆಲ್ಲೆಲ್ಲಾ ರಂಗೋ ರಂಗು ಚಿತ್ತಾರ. ಇದೆಲ್ಲ ಒಂದು ಕಡೆಯಾದರೆ ಜನರನ್ನು ಹುಚ್ಚೆದ್ದು ಕುಣಿಸುವಂತ ನಾನಾ ಪ್ರದರ್ಶನ ಮತ್ತೊಂದು ಕಡೆ. ಇಂತಹದ್ದೊಂದು ಸುಂದರ ಸಂಜೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕು ಭರಚುಕ್ಕಿ ಜಲಪಾತದ ಆವರಣದಲ್ಲಿ ಕಳೆದ ಮೂರು ವರ್ಷಗಳಿಂದ ಸೃಷ್ಟಿಯಾಗುತಿತ್ತು. ಆದ್ರೆ ಈಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ದಿಂದ ಅದ್ಧೂರಿ ಕಾರ್ಯಕ್ರಮ ಮೂಲೆಗುಂಪಾಗುವ ಹಂತದಲ್ಲಿದೆ. ಈ ತಾಣಕ್ಕೆ ಬಂದ ಪ್ರವಾಸಿಗರು ಬಂದ ದಾರಿಗೆ ಸುಂಕ ಇಲ್ಲ ಅಂತ ಹಿಂತಿರುಗಿ ಹೋಗುತ್ತಿದ್ದಾರೆ.

     

    ಹೌದು. ಸ್ವರ್ಗವನ್ನೇ ಧರೆಗಿಳಿಸಿದ್ದ ಜಲಪಾತೋತ್ಸವದಲ್ಲಿ ಸಾವಿರಾರು ಪ್ರವಾಸಿಗರು ಬಂದು ತಮ್ಮ ತನು ಮನಗಳನ್ನು ತಂಪು ಮಾಡಿಕೊಳ್ಳುತ್ತಿದ್ದರು. ಸಹಕಾರ ಸಚಿವರಾಗಿದ್ದ ಎಚ್.ಎಸ್. ಮಹದೇವ ಪ್ರಸಾದ್ ಅವರು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದರು.

    ಈ ಜಲಪಾತೋತ್ಸವದಿಂದ ಪ್ರವಾಸೋದ್ಯಮ ಇಲಾಖೆಗೆ ಆದಾಯ ಹರಿದು ಬರುತ್ತಿತ್ತು. ಆದರೆ ಈಗ ಜಲಪಾತದಲ್ಲಿ ನೀರು ಹರಿಯುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಲಪಾತೋತ್ಸವ ಕಾರ್ಯಕ್ರಮವನ್ನು ಮಾಡಲು ಕಿಂಚಿತ್ತು ಆಸಕ್ತಿ ತೋರಿಸುತ್ತಿಲ್ಲ.

    ಜಲಾಪಾತೋತ್ಸವದ ವೇಳೆ ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಬಾಯಲ್ಲಿ ನೀರೂರಿಸುವ ಖಾದ್ಯಗಳು ಸ್ಥಳದಲ್ಲೇ ತಯಾರಾಗುತ್ತಿದ್ದವು. ಪ್ರವಾಸಿಗರು ಅದನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದರು. ಇನ್ನೂ ಸ್ಟಾರ್ ನಟರು ಹಾಗೂ ಕಲಾವಿದರನ್ನು ಆಹ್ವಾನಿಸಿ ಪ್ರತಿ ನಿತ್ಯ ರಾತ್ರಿ ಅದ್ಧೂರಿ ಕಾರ್ಯಕ್ರಮಗಳು ನಡೆಯುತಿತ್ತು.

     

    ಪ್ರವಾಸಿಗರು ಸಂಗೀತಕ್ಕೆ ಹುಚ್ಚೆದ್ದು ಕುಣಿಯುತ್ತಿದ್ದರು. ಭರಚುಕ್ಕಿ ಜಲಪಾತೋತ್ಸವ ಪ್ರವಾಸಿಗರಿಗೆ ಅಕ್ಷರಶಃ ಸ್ವರ್ಗವೇ ಆಗಿತ್ತು. ಸತತ ಮೂರು ವರ್ಷಗಳ ಕಾಲ ಯಶಸ್ವಿಯಾಗಿ ನಡೆದ ಕಾರ್ಯಕ್ರಮವನ್ನು ಈ ವರ್ಷವೂ ಆಯೋಜಿಸಿ ಎಂದು ಪ್ರವಾಸಿಗರು ಹಾಗೂ ಜನ ಬೇಡಿಕೆ ಇಟ್ಟಿದ್ದಾರೆ.

    ಒಟ್ಟಾರೆ ಹೇಳುವುದಾದರೆ ಮೂರು ವರ್ಷಗಳ ಕಾಲ ಯಶಸ್ವಿಯಾಗಿ ನಡೆದುಕೊಂಡು ಬಂದ ಜಲಪಾತೋತ್ಸವ ಕಾರ್ಯಕ್ರಮಕ್ಕೆ ಪ್ರವಾಸಿಗರಿಂದ ಬೇಡಿಕೆ ಹೆಚ್ಚಾಗಿದ್ದು, ಈ ವಿಷಯದಲ್ಲಿ ಸದ್ಯ ತಟಸ್ಥವಾಗಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜಲಪಾತೋತ್ಸವ ಕಾರ್ಯಕ್ರಮ ನಡೆಸಲು ಮುಂದಾಗಬೇಕಿದೆ.