Tag: ಆ್ಯಸಿಡ್ ದಾಳಿ

  • ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಚಿಕ್ಕಬಳ್ಳಾಪುರ: ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿಗೆ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಎರಚಿ (Acid Attack) ಸೋದರ ಮಾವ ತಾನೂ ಬೆಂಕಿ ಹಚ್ಚಿಕೊಂಡ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮಂಚನಬಲೆ (Manchanabale) ಗ್ರಾಮದಲ್ಲಿ ನಡೆದಿದೆ.

    ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ನಿವಾಸಿ ಸೋದರ ಮಾವ ಆನಂದ್ ಕುಮಾರ್ ಈ ಕೃತ್ಯವೆಸಗಿದ್ದಾನೆ. ಅದೃಷ್ಟವಶಾತ್ ಅನಾಹುತದಿಂದ ಯುವತಿ ಪಾರಾಗಿದ್ದಾಳೆ. ಯುವತಿಗೆ ಆ್ಯಸಿಡ್ ಎರಚಿದ ಬಳಿಕ ಆನಂದ್ ಆಕೆಯ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾನೆ. ಘಟನೆಯಲ್ಲಿ ಮಾವ ಆನಂದ್ ಕುಮಾರ್‌ಗೆ ತೀವ್ರ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಹರಿಯಾಣದ ರೈಲಿನಲ್ಲಿ ಗ್ಯಾಂಗ್‌ ರೇಪ್ -‌ ಅತ್ಯಾಚಾರ ಬಳಿಕ ರೈಲ್ವೆ ಹಳಿಗಳ ಮೇಲೆ ಮಹಿಳೆ ಎಸೆದ ಪಾಪಿಗಳು

    ಗಾಯಾಳು ಯುವತಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಗಾಯಾಳು ಆನಂದ್‌ಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಒಡವೆ ಮಾಡಿಕೊಡೋದಾಗಿ ಹೇಳಿ 8 ಕೆಜಿ ಗಟ್ಟಿ ಚಿನ್ನ ಕದ್ದ ಅಕ್ಕಸಾಲಿಗ ಅರೆಸ್ಟ್

  • ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ – ಪ್ರೇಮ ನಿವೇದನೆ ಒಪ್ಪದ್ದಕ್ಕೆ ಕೃತ್ಯ

    ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ – ಪ್ರೇಮ ನಿವೇದನೆ ಒಪ್ಪದ್ದಕ್ಕೆ ಕೃತ್ಯ

    ಮಂಗಳೂರು: ಕಡಬದಲ್ಲಿ (Kadaba) ಮೂವರು ವಿದ್ಯಾರ್ಥಿನಿಯರ (Students) ಮೇಲೆ ಆ್ಯಸಿಡ್ ದಾಳಿ (Acid Attack) ಪ್ರಕರಣಕ್ಕೆ ಕಾರಣ ಸಿಕ್ಕಿದ್ದು ಆರೋಪಿ ಪ್ರೇಮ ವೈಫಲ್ಯದದಿಂದ (Love Failure) ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

    ಕೇರಳ ಮೂಲದ ಎಬಿನ್ (24) ಎಂಬಿಎ ವಿದ್ಯಾರ್ಥಿಯಾಗಿದ್ದು, ಅಲೀನಾ ಎಂಬ ವಿದ್ಯಾರ್ಥಿನಿಯನ್ನು ಟಾರ್ಗೆಟ್ ಮಾಡಿ ಆ್ಯಸಿಡ್ ದಾಳಿ ನಡೆಸಿದ್ದಾನೆ. ಎಬಿನ್ ಹಾಗೂ ಅಲೀನಾ ಒಂದೇ ಕೋಮಿಗೆ ಸೇರಿದವರಾಗಿದ್ದು ಇವರಿಬ್ಬರಿಗೂ ಪರಿಚಯವಿತ್ತು. ಇದನ್ನೂ ಓದಿ: ಕಡಬದಲ್ಲಿ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

    ಈತನ ಪ್ರೇಮ ನಿವೇದನೆಯನ್ನು ಒಪ್ಪದ್ದಕ್ಕೆ ಅಲೀನಾಳ ಮೇಲೆ ದಾಳಿ ನಡೆಸಿದ್ದಾನೆ. ಘಟನೆಯಿಂದ ಅಲೀನಾ ಗಂಭೀರವಾಗಿ ಗಾಯಗೊಂಡಿದ್ದು, ಪಕ್ಕದಲ್ಲೇ ಇದ್ದ ಉಳಿದಿಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕಾಲುವೆಗೆ ಉರುಳಿದ ಕಾರು – ಮೂವರು ಸಾವು, ಮೂವರು ನಾಪತ್ತೆ

    ಎಬಿನ್ ಕೇರಳ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿಯಾಗಿದ್ದು, ಅಲೀನಾಳನ್ನು ಟಾರ್ಗೆಟ್ ಮಾಡಿ ಬಂದಿದ್ದ. ಆರೋಪಿ ಶಾಲಾ ಯೂನಿಫಾರ್ಮ್‌ನಲ್ಲಿ ಬಂದಿದ್ದು, ರಬ್ಬರ್ ಹಾಲು ಶೇಖರಣೆಗೆ ಬಳಸುವ ಆ್ಯಸಿಡ್‌ನ್ನು ವಿದ್ಯಾರ್ಥಿನಿಯ ಮೇಲೆ ಎರಚಿದ್ದಾನೆ. ಹೀಗಾಗಿ ಹೆಚ್ಚಿನ ಪ್ರಮಾಣದ ಅಪಾಯ ತಪ್ಪಿದೆ. ಇದನ್ನೂ ಓದಿ: ಸೋಶಿಯಲ್ ‌ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ

    ಈ ವೇಳೆ ಈಕೆ ಜೊತೆ ಕುಳಿತು ಓದುತ್ತಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರ ಮೇಲೂ ಆ್ಯಸಿಡ್ ಬಿದ್ದಿದೆ. ಗಾಯಗೊಂಡವರು ದ್ವಿತೀಯ ಪಿಯುಸಿಯ ವಿಜ್ಞಾನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ರಿಷ್ಯಂತ್, ಪುತ್ತೂರು ಎಸಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಸೀದಿ ಬಳಿಯಿರುವ ಭಗವಾಧ್ವಜ ತೆರವುಗೊಳಿಸಲು ಪ್ಲ್ಯಾನ್ ಆರೋಪ; ಮಾಜಿ ಶಾಸಕನ ವಿರುದ್ಧ ಕೇಸ್

    ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿದ್ದ ಧ್ವಜಸ್ತಂಭದ ಕಟ್ಟೆಯಲ್ಲಿ ಕುಳಿತು ಪರೀಕ್ಷಾ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆ ನಡೆದ ಬಳಿಕ ಆರೋಪಿ ಎಬಿನ್‌ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಎಬಿನ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ನಲ್ಲಿ ವಿಶೇಷ ಟೀಂನಿಂದ 1,000 ಕ್ಕೂ ಅಧಿಕ ಸಿಸಿಟಿವಿ ಪರಿಶೀಲನೆ

  • ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿ – ದೇಶದಲ್ಲೇ ಬೆಂಗಳೂರು ನಂಬರ್ 1

    ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿ – ದೇಶದಲ್ಲೇ ಬೆಂಗಳೂರು ನಂಬರ್ 1

    ನವದೆಹಲಿ: ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿಯಲ್ಲಿ (Acid Attack) ಮಹಾನಗರಗಳ ಪೈಕಿ ಬೆಂಗಳೂರು (Bengaluru) ಮೊದಲನೇ ಸ್ಥಾನವನ್ನು ಪಡೆದಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

    ಈ ಪೈಕಿ ನವದೆಹಲಿ (New Delhi) ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಅಹಮದಾಬಾದ್ (Ahmedabad) ಮೂರನೇ ಸ್ಥಾನವನ್ನು ಪಡೆದಿದೆ. 2022ರಲ್ಲಿ ಬೆಂಗಳೂರಿನಲ್ಲಿ ಒಟ್ಟು 8 ಆ್ಯಸಿಡ್ ದಾಳಿ ನಡೆದಿತ್ತು. ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋ (NCRB) ವರದಿಯಲ್ಲಿ ಆತಂಕಕಾರಿ ವಿಚಾರ ಬಯಲಾಗಿದೆ. ಇದನ್ನೂ ಓದಿ: ಟಿಕೆಟ್ ಪಡೆದ ಸ್ಟಾಪ್‌ಗೂ ಮುನ್ನ ಇಳಿಯಲು ಮುಂದಾದ ಯುವತಿ – ಯುವತಿ, ಕಂಡಕ್ಟರ್ ನಡುವೆ ಗಲಾಟೆ

    ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ ವರದಿ ಅನ್ವಯ ದೇಶದ 19 ಮಹಾನಗರಗಳ ಪೈಕಿ 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ 8 ಆ್ಯಸಿಡ್ ದಾಳಿ ಪ್ರಕರಣಗಳು ದಾಖಲಾಗಿದ್ದು, ಇದು ಆ ವರ್ಷದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣವಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ಅಕ್ರಮ ಪ್ರಶ್ನಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ: ವಿಜಯೇಂದ್ರ ಕಿಡಿ

    7 ಆ್ಯಸಿಡ್ ದಾಳಿ ಪ್ರಕರಣಗಳನ್ನು ದಾಖಲಿಸಿರುವ ದೆಹಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. 5 ಪ್ರಕರಣಗಳೊಂದಿಗೆ ಗುಜರಾತ್‌ನ ಅಹಮದಾಬಾದ್ 3ನೇ ಸ್ಥಾನದಲ್ಲಿದೆ. ಹೈದರಾಬಾದ್‌ನಲ್ಲಿ 2 ಆ್ಯಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿತ್ತು. ಕಳೆದ ವರ್ಷ ಬೆಂಗಳೂರಿನಲ್ಲಿ ಯುವತಿಯ ಮೇಲಿನ ಆ್ಯಸಿಡ್ ದಾಳಿ ಭಾರೀ ಸುದ್ದಿಯಾಗಿತ್ತು. ಇದನ್ನೂ ಓದಿ: ಕ್ಯಾಂಡಲ್‌ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದ ಬಾಲಕಿ ಬೆಂಕಿಗೆ ಬಲಿ

  • ಬೇಲ್‌ನಲ್ಲಿ ಹೊರಬಂದ ಅತ್ಯಾಚಾರ ಆರೋಪಿ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ – ಬಳಿಕ ಆತ್ಮಹತ್ಯೆ

    ಬೇಲ್‌ನಲ್ಲಿ ಹೊರಬಂದ ಅತ್ಯಾಚಾರ ಆರೋಪಿ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ – ಬಳಿಕ ಆತ್ಮಹತ್ಯೆ

    ನವದೆಹಲಿ: ಅತ್ಯಾಚಾರ ಆರೋಪಿಯೊಬ್ಬ (Rape Accused) ಜಾಮೀನಿನ (Bail) ಮೇಲೆ ಜೈಲಿನಿಂದ ಹೊರಬಂದು ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿ ನಂತರ ತಾನು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

    ಆಘಾತಕಾರಿ ಘಟನೆ ಮಧ್ಯ ದೆಹಲಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಪ್ರೇಮ್ ಸಿಂಗ್‌ಗೆ ಕುಟುಂಬದವರ ವಿವಾಹದಲ್ಲಿ ಪಾಲ್ಗೊಳ್ಳಲು ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. ಗುರುವಾರ ಸಂಜೆ ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಬಳಿಗೆ ತೆರಳಿ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಅದನ್ನು ನಿರಾಕರಿಸಿದ್ದಕ್ಕೆ ಆತ ಮಹಿಳೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿದ್ದಾನೆ. ಬಳಿಕ ತಾನೂ ಕುಡಿದಿದ್ದಾನೆ.

    ಪ್ರೇಮ್ ಸಿಂಗ್ ಹಾಗೂ ಮಹಿಳೆ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ನೆರೆಹೊರೆಯವರು. ವ್ಯಕ್ತಿ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಾಗ ಪ್ರಕರಣವನ್ನು ಹಿಂಪಡೆಯುವಂತೆ ಮಹಿಳೆಗೆ ಬೆದರಿಕೆ ಹಾಕಿದ್ದಾನೆ. ಆಕೆ ನಿರಾಕರಿಸಿದಾಗ ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೋಂ ವರ್ಕ್ ಮಾಡಿಲ್ಲವೆಂದು ಕೈಗೆ ರಾಡ್‍ನಿಂದ ಹೊಡೆದ್ರಾ ಶಿಕ್ಷಕಿ?

    ಆ್ಯಸಿಡ್ ದಾಳಿ ಮಾಡಿ ತಾನೂ ಆ್ಯಸಿಡ್ ಅನ್ನು ಕುಡಿದಿದ್ದಾನೆ. ತಕ್ಷಣ ಅಲ್ಲೇ ನೆರೆದಿದ್ದವರು ಆರೋಪಿ ಹಾಗೂ ಅಪ್ರಾಪ್ತೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿಕಿತ್ಸೆ ವೇಳೆ ಪ್ರೇಮ್ ಸಿಂಗ್ ಮೃತಪಟ್ಟರೆ, ಚಿಕಿತ್ಸೆ ನೀಡಿದ ಬಳಿಕ ಸಂತ್ರಸ್ತೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇದನ್ನೂ ಓದಿ: ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಹೆತ್ತ ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣು

  • ಆ್ಯಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ಕೆಲಸ ನೀಡಿದ ಸಿಎಂ ಸಿದ್ದರಾಮಯ್ಯ

    ಆ್ಯಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ಕೆಲಸ ನೀಡಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಆ್ಯಸಿಡ್ ದಾಳಿಗೆ (Acid Attack) ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಸಿಎಂ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ.

    ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಿಎಂ ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ (M.Com) ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜೊತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

    ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ (Basavaraj Bommai) ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೆ ಸಾಮಾನ್ಯನಂತೆ ಮೆಟ್ರೋದಲ್ಲಿ ಬಂದ ಪ್ರಧಾನಿ ಮೋದಿ

    ಪ್ರಕರಣ ಏನು?: ಆ್ಯಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ (Kamakshipaly Police Station) ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದರು.

    ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ಮುಖಕ್ಕೆ ಆ್ಯಸಿಡ್ ಎರಚಿದ ಪತ್ನಿ!

    ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ಮುಖಕ್ಕೆ ಆ್ಯಸಿಡ್ ಎರಚಿದ ಪತ್ನಿ!

    ಲಕ್ನೋ: ಮನೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ರೊಚ್ಚಿಗೆದ್ದ ಪತ್ನಿಯೊಬ್ಬಳು ಪತಿ ಮುಖದ ಮೇಲೆ ಆ್ಯಸಿಡ್ ಎರಚಿದ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದ ಕೂಪರ್ ಗಂಜ್ ಪ್ರದೇಶದಲ್ಲಿ ನಡೆದಿದೆ.

    ಆ್ಯಸಿಡ್ ದಾಳಿ (Acid Attack) ಗೆ ಒಳಗಾದ ವ್ಯಕ್ತಿಯನ್ನು ಡಬ್ಬು ಎಂದು ಗುರುತಿಸಲಾಗಿದ್ದು, ಉರ್ಸಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಒಡಿಶಾ ಆರೋಗ್ಯ ಸಚಿವರ ಹತ್ಯೆ ಕೇಸ್ – ASIಗೆ ಇತ್ತು Bipolar Disorder ಮಾನಸಿಕ ಕಾಯಿಲೆ

    ಡಬ್ಬು ತನ್ನ ಪತ್ನಿ (Wife) ಜೊತೆ ಮನೆಗೆ ಬರಲು ತಡವಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಅಲ್ಲದೆ ಪತಿಯ ಮಾತಿನಿಂದ ಸಿಟ್ಟಿಗೆದ್ದ ಪತ್ನಿ ಆ್ಯಸಿಡ್ ಬಾಟ್ಲಿ ತೆಗೆದುಕೊಂಡು ಮುಚ್ಚಳ ತೆಗೆದು ಪತಿಯ ಮುಖಕ್ಕೆ ಎರಚಿದ್ದಾಳೆ ಎಂದು ಆತ ನಡೆದ ಘಟನೆಯನ್ನು ವಿವರಿಸಿದ್ದಾನೆ.

    ಪ್ರಕರಣ ಸಂಬಂಧ ಪೊಲೀಸರು ಪತ್ನಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ: ಡಿಸಿಡಬ್ಲ್ಯು ಮುಖ್ಯಸ್ಥೆ ಕಿಡಿ

    ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ: ಡಿಸಿಡಬ್ಲ್ಯು ಮುಖ್ಯಸ್ಥೆ ಕಿಡಿ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಇಂದು ಶಾಲಾ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ (Acid Attack) ಜನರನ್ನು ಭಯಭೀತಗೊಳಿಸಿದೆ. ಈ ಭೀಕರ ಘಟನೆ ನಡೆದ ಬಳಿಕ ದೆಹಲಿ ಮಹಿಳಾ ಆಯೋಗದ (DCW) ಮುಖ್ಯಸ್ಥೆ ಸ್ವಾತಿ ಮಲಿವಾಲ್ (Swati Maliwal) ಮಾರುಕಟ್ಟೆಗಳಲ್ಲಿ ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

    ಪಶ್ಚಿಮ ದೆಹಲಿಯ ಉತ್ತಮ್ ನಗರದ ಬಳಿಕ ಇಂದು ಬೆಳಗ್ಗೆ 7:30ರ ಹೊತ್ತಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 17 ವರ್ಷದ ಬಾಲಕಿ ಮೇಲೆ ಆ್ಯಸಿಡ್ ಎರಚಿದ್ದಾರೆ. ಘಟನೆಯಿಂದ ಬಾಲಕಿಯ ಮುಖ ಹಾಗೂ ಕಣ್ಣುಗಳಿಗೆ ಸುಟ್ಟ ಗಾಯಗಳಾಗಿವೆ. ಬಾಲಕಿಯನ್ನು ನಗರದ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಆರೋಪಿಗಳ ಹೆಸರನ್ನು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಆರೋಪಿಗಳಲ್ಲಿ ಈಗಾಗಲೇ ಒಬ್ಬನನ್ನು ಬಂಧಿಸಲಾಗಿದೆ.

    ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸ್ವಾತಿ ಮಲಿವಾಲ್, ಆ್ಯಸಿಡ್ ಮಾರಾಟದ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಾವು ನ್ಯಾಯಾಲಯವನ್ನು ಒತ್ತಾಯಿಸುತ್ತೇವೆ. ಘಟನೆಯ ಕುರಿತು ನಾವು ನಗರದ ಪೊಲೀಸರಿಗೆ ನೋಟಿಸ್ ನೀಡಿದ್ದೇವೆ. ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ತಿಳಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಡಿಸಿಡಬ್ಲ್ಯು ಈ ಹಿಂದೆಯೇ ಹಲವಾರು ಸೂಚನೆಗಳನ್ನು ನೀಡಿದೆ. ಹಲವಾರು ಶಿಫಾರಸುಗಳನ್ನು ಮಾಡಿದೆ. ಆದರೆ ಆ್ಯಸಿಡ್ ಮಾರಾಟ ಇನ್ನೂ ಕೂಡಾ ಮುಂದುವರಿದಿದೆ. ಮಾರುಕಟ್ಟೆಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಿದಂತೆ ಆ್ಯಸಿಡ್ ಮಾರಾಟವಾಗುತ್ತಿದೆ. ಯಾರು ಬೇಕಾದರೂ ಆ್ಯಸಿಡ್ ಖರೀದಿಸಿ ಇಂತಹ ಕೃತ್ಯಗಳನ್ನು ಮಾಡಬಹುದು. ಇಂತಹ ಸಂದರ್ಭದಲ್ಲಿ ಸರ್ಕಾರ ಏಕೆ ನಿದ್ರಿಸುತ್ತಿದೆ? ಹುಡುಗಿಯರ ಮೇಲೆ ಆ್ಯಸಿಡ್ ದಾಳಿಯಾದಾಗ ಅವರು ಬಾಹ್ಯವಾಗಿ ಮಾತ್ರವಲ್ಲದೇ ಆಂತರಿಕವಾಗಿಯೂ ಗಾಯಗೊಳ್ಳುತ್ತಾರೆ. ಅವರ ಜೀವನವೇ ನಾಶವಾಗಿ ಹೋಗುತ್ತದೆ ಎಂದು ಹೇಳಿದರು.

    ಆ್ಯಸಿಡ್ ದಾಳಿಗೊಳಗಾದ ಬಾಲಕಿಯ ಮುಖ ಹಾಗೂ ಕಣ್ಣುಗಳಿಗೆ ಗಾಯಗಳಾಗಿವೆ. ಆಕೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ವೈದ್ಯನಿಂದ ಪತ್ನಿಯ ಬರ್ಬರ ಹತ್ಯೆ – ಸೂಟ್‍ಕೇಸ್‍ನಲ್ಲಿ ತುಂಬಿ 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ

    Live Tv
    [brid partner=56869869 player=32851 video=960834 autoplay=true]

  • 14ರ ಬಾಲಕಿಯ ಕತ್ತು ಸೀಳಿ, ಮುಖಕ್ಕೆ ಆ್ಯಸಿಡ್ ಹಾಕಿದ ಪಾಪಿ

    14ರ ಬಾಲಕಿಯ ಕತ್ತು ಸೀಳಿ, ಮುಖಕ್ಕೆ ಆ್ಯಸಿಡ್ ಹಾಕಿದ ಪಾಪಿ

    ಅಮರಾವತಿ: ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಕತ್ತು ಸೀಳಿ, ಆಕೆಯ ಮುಖಕ್ಕೆ ಆ್ಯಸಿಡ್ ಹಾಕಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

    ಭೀಕರ ಕೃತ್ಯ ಎಸಗಿರುವ ಆರೋಪಿ ಬಾಲಕಿಯ ಕುಟುಂಬದ ಹತ್ತಿರದ ಸಂಬಂಧಿ ಎಂದು ಹೇಳಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆ್ಯಸಿಡ್ ದಾಳಿಗೆ ತುತ್ತಾದ ಬಾಲಕಿಯನ್ನು ಮೊದಲಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ.

    ಘಟನೆಯೇನು?
    ವರದಿಗಳ ಪ್ರಕಾರ ಕೃತ್ಯ ಎಸಗಿರುವ ಆರೋಪಿ ಸಂತ್ರಸ್ತೆಯ ಹತ್ತಿರದ ಸಂಬಂಧಿಯಾಗಿದ್ದು, ಹಣದ ಆಸೆಯಿಂದ ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾನೆ. ಸೋಮವಾರ ಮಧ್ಯಾಹ್ನ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಆತ ಕಳ್ಳತನಕ್ಕಾಗಿ ಬಂದಿದ್ದ. ಮನೆಯೊಳಗೆ ಹೊಕ್ಕ ಆರೋಪಿ ಬಾಲಕಿ ಮೇಲೆ ಆ್ಯಸಿಡ್ ದಾಳಿ ನಡೆಸಿ, ಕತ್ತು ಕುಯ್ದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಚೀನಾ ಭೂಕಂಪ – ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ವೀಡಿಯೋಗಳು

    ಘಟನೆ ಬಗ್ಗೆ ತಿಳಿದ ಸ್ಥಳೀಯರು ತಕ್ಷಣವೇ ಬಾಲಕಿಯ ತಂದೆಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಬಳಿಕ 108 ಸಹಾಯವಾಣಿಗೆ ಕರೆ ಮಾಡಿ, ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

    CRIME

    ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಭಾರತೀಯ ದಂಡಸಂಹಿತೆ(ಐಪಿಸಿ) ಹಾಗೂ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ್ಯಸಿಡ್ ದಾಳಿಯಿಂದಾಗಿ ಬಾಲಕಿಯ ಮುಖ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ರಕ್ತಪಾತ – ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ

    Live Tv
    [brid partner=56869869 player=32851 video=960834 autoplay=true]

  • ಆ್ಯಸಿಡ್ ದಾಳಿಯಲ್ಲಿ ಬದುಕುಳಿದ 17ರ ಹುಡುಗಿ ದೆಹಲಿಗೆ ಏರ್‌ಲಿಫ್ಟ್‌

    ಆ್ಯಸಿಡ್ ದಾಳಿಯಲ್ಲಿ ಬದುಕುಳಿದ 17ರ ಹುಡುಗಿ ದೆಹಲಿಗೆ ಏರ್‌ಲಿಫ್ಟ್‌

    ನವದೆಹಲಿ: ಆ್ಯಸಿಡ್ ದಾಳಿಗೆ ಒಳಗಾಗಿ ಬದುಕುಳಿದ 17 ವರ್ಷದ ಹುಡುಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಾರ್ಖಂಡ್‌ನಿಂದ ದೆಹಲಿಗೆ ಏರ್‌ಲಿಫ್ಟ್‌ ಮಾಡಲಾಗಿದೆ.

    ಈ ಕುರಿತು ಜಾರ್ಖಂಡ್‌ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ವೈದ್ಯಕೀಯ ಮಂಡಳಿಯು ಬಾಲಕಿಯನ್ನು ದೆಹಲಿಯ ಏಮ್ಸ್‌ಗೆ ಶಿಫಾರಸು ಮಾಡಿದೆ. ಇದನ್ನೂ ಓದಿ: ಬಲವಂತದ ಮತಾಂತರ ಆರೋಪ – ಪಾದ್ರಿಯ ಕಾರಿಗೆ ಬೆಂಕಿ, ಚರ್ಚ್ ಧ್ವಂಸ

    ರಿಮ್ಸ್ ಸೂಪರಿಂಟೆಂಡೆಂಟ್ ನೇತೃತ್ವದಲ್ಲಿ ರಚನೆಯಾದ ವೈದ್ಯಕೀಯ ಮಂಡಳಿ ನೀಡಿದ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬುಧವಾರ ಬಾಲಕಿಯನ್ನು ಏರ್‌ಲಿಫ್ಟ್ ಮಾಡುವ ನಿರ್ಧಾರ ಕೈಗೊಂಡರು ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

    ಆ್ಯಸಿಡ್ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ ಎಲ್ಲಾ ಸಹಕಾರ ನೀಡುವಂತೆ ಸೋರೆನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆಗಳೊಂದಿಗೆ ಸಂತ್ರಸ್ತೆಗೆ ಉತ್ತಮ ಚಿಕಿತ್ಸೆ ಕೊಡಿಸಲು ರಾಂಚಿ ಡಿಸಿ ಅವರು ದೆಹಲಿಗೆ ಸ್ಥಳಾಂತರಿಸುವ ಕ್ರಮ ಕೈಗೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕನನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು!

    ಜಾರ್ಖಂಡ್‌ನ ಚತ್ರಾ ಜಿಲ್ಲೆಯ 17ರ ಹುಡುಗಿ ಆಗಸ್ಟ್ 5 ರಂದು ಆ್ಯಸಿಡ್ ದಾಳಿಗೆ ಒಳಗಾಗಿದ್ದಳು. ಅದೇ ದಿನ ಆರೋಪಿಯನ್ನು ಬಂಧಿಸಲಾಗಿದ್ದು, ಕಾನೂನು ಪ್ರಕ್ರಿಯೆ ನಡೆಯುತ್ತಿದೆ ಎಂದು ಛತ್ರದ ಉಪ ಆಯುಕ್ತ ಅಬು ಇಮ್ರಾನ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 20ಕ್ಕೂ ಹೆಚ್ಚು ಎಮ್ಮೆ, ಹಸುಗಳ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು!

    20ಕ್ಕೂ ಹೆಚ್ಚು ಎಮ್ಮೆ, ಹಸುಗಳ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು!

    ಆನೇಕಲ್: ಎಮ್ಮೆ ಹಾಗೂ ಹಸುಗಳ ಮೇಲೆ ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ನೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಎಂಬವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ದುಷ್ಕರ್ಮಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾಜಕುಮಾರ್ ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನವನ್ನು ಸಾಗಿಸುತ್ತಿದ್ದರು. ಆದರೆ ಯಾರೋ ಕಿಡಿಗೇಡಿಗಳು ಮೊನ್ನೆ ರಾತ್ರಿ ಪ್ರಾಣಿಗಳ ಮೇಲೆ ಆ್ಯಸಿಡ್ ಎರಚಿದ್ದು, ಬೆನ್ನು ತಲೆ ಕಾಲು ಹಾಗೂ ದೇಹದ ಹಲವು ಭಾಗಗಳಿಗೆ ಆ್ಯಸಿಡ್ ಬಿದ್ದು ತೀವ್ರ ರಕ್ತಸ್ರಾವವಾಗಿದೆ.

    ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಜಾನುವಾರುಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಈ ಕೃತ್ಯವನ್ನು ಮಾಡಿರುವಂತಹ ಕಿಡಿಗೇಡಿಗಳು ಯಾರು ಎಂಬ ಮಾಹಿತಿ ಇನ್ನು ಸಹ ಲಭ್ಯವಾಗಿಲ್ಲ.

    ಅಮಾನುಷ ಕೃತ್ಯ ಎಸಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಜಾನ್ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    Live Tv
    [brid partner=56869869 player=32851 video=960834 autoplay=true]