Tag: ಇಂಜಿನಿಯರಿಂಗ್

  • ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣವನ್ನು ಮಾತೃಭಾಷೆಯಲ್ಲೂ ಕಲಿಯಬಹುದು: ರವಿಕುಮಾರ್

    ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣವನ್ನು ಮಾತೃಭಾಷೆಯಲ್ಲೂ ಕಲಿಯಬಹುದು: ರವಿಕುಮಾರ್

    ಬಾಗಲಕೋಟೆ: ಪ್ರತಿಯೊಬ್ಬರು ತಮ್ಮ ಮಾತೃಭಾಷೆಯಲ್ಲಿ ಇನ್ನೂ ಒಂದೆರಡು ವರ್ಷಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣವನ್ನು ಪಡೆಯಬಹುದು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಹೇಳಿದರು.

    ಜಿಲ್ಲೆಯ ಮುಧೋಳ ನಗರದಲ್ಲಿ ನಡೆದ ವಾಯುವ್ಯ ಪದವೀಧರರ ಶಿಕ್ಷಕರ ಚುನಾವಣೆ ನಿಮಿತ್ತ ಆಯೋಜಿಸಲಾಗಿದ್ದ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರವು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಯನ್ನು ತರುತ್ತಿದೆ. ಈ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಶಿಕ್ಷಣವನ್ನು ಇಂಗ್ಲಿಷ್‍ನಲ್ಲಿ ಅಲ್ಲದೇ ಆಯಾ ರಾಜ್ಯದ ಪ್ರಾದೇಶಿಕ ಮಾತೃಭಾಷೆಯಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುತ್ತದೆ ಎಂದರು. ಇದನ್ನೂ ಓದಿ: ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್

    ಈ ನಿರ್ಧಾರ ಮಹತ್ವದಾಗಿದ್ದು, ಇನ್ನೂ ಹೆಚ್ಚು ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ಮಾತೃ ಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯಬಹುದು. ಮಾತೃಭಾಷೆ ಕನ್ನಡದಲ್ಲಿ ಹೆಚ್ಚು ಪ್ರಭುತ್ವ ಮತ್ತು ವಿಸ್ತಾರವಾಗಿ ಓದಿ ಬರೆಯಬಹುದು. ಸ್ನಾತಕೋತರ ಪದವಿಯನ್ನು ಪಡೆಯಬಹುದು. ಈಗಾಗಲೇ ಕೆಲ ರಾಜ್ಯದಲ್ಲಿ ಹಿಂದಿ ಭಾಷೆಯಲ್ಲಿ ವೈದ್ಯಕೀಯ, ಇಂಗ್ಲೀಷ್ ಶಿಕ್ಷಣ ನೀಡಲಾಗುತ್ತಿದೆ. ಆದ್ದರಿಂದ ಇನ್ನೊಂದೆರಡು ಮೂರು ವರ್ಷಗಳಲ್ಲಿ ಉನ್ನತ ಶಿಕ್ಷಣವನ್ನು ಎಲ್ಲರೂ ಕಡ್ಡಾಯವಾಗಿ ಇಂಗ್ಲಿಷ್ ಹಿಂದಿಯಲ್ಲಿ ಬರೆಯಬೇಕೆಂದಿಲ್ಲ. ಅದನ್ನ ಮಾತೃಭಾಷೆ ಕನ್ನಡದಲ್ಲೂ ಕೂಡ ಓದಿ ಬರೆಯಬಹುದಾದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಎಟಿಎಂಗೆ ಹಣ ಹಾಕು ಅಂತ ಕೊಟ್ಟರೆ, ಹಣದೊಂದಿಗೆ ಎಸ್ಕೇಪ್ ಆದ ಭೂಪ

    ಬಡವ ಬಲ್ಲಿದ ಎನ್ನದೇ ಶಿಕ್ಷಣ ಎಲ್ಲರಿಗೂ ದೊರಕಬೇಕೆಂಬ ಹಿನ್ನೆಲೆಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರಲಾಗುತ್ತಿದೆ ಎಂದು ತಿಳಿಸಿದರು. ಈ ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಹನಮಂತ ನಿರಾಣಿ, ಸಚಿವರಾದ ಗೋವಿಂದ್ ಕಾರಜೋಳ, ರಾಮಣ್ಣ ತಳೇವಢ ಮತ್ತಿತರರು ಹಾಜರಿದ್ದರು.

  • ನಕಲಿ ಕೀ ಬಳಸಿ ಕಳ್ಳತನ-ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್

    ನಕಲಿ ಕೀ ಬಳಸಿ ಕಳ್ಳತನ-ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್

    ಹಾಸನ: ನಕಲಿ ಕೀ ಬಳಸಿ ಸಿಮೆಂಟ್ ಗೋದಾಮಿನಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಾಲ್ವರು ಹಾಸನ ನಗರದ ದಾಸರಕೊಪ್ಪಲಿನಲ್ಲಿರುವ ಲೊಕೇಶ್ ಎಂಬವರ ಸಿಮೆಂಟ್ ಗೋದಾಮಿನಲ್ಲಿ ಕಳ್ಳತನ ಎಸಗಿದ್ದರು.

    ಯಶವಂತ್, ವಿನಾಯಕ, ಯೋಗೇಶ್ ಮತ್ತು ಹೇಮಂತ್ ಬಂಧಿತರು. ಈ ನಾಲ್ವರು ಕಳೆದ 15 ದಿನಗಳಿಂದ ಪ್ರತಿದಿನ ಸಿಮೆಂಟ್ ಮೂಟೆಗಳನ್ನು ಕದ್ದು ಮಾರಾಟ ಮಾಡುತ್ತಿದ್ದರು. ಗೋದಾಮಿನಲ್ಲಿಯ ಸಿಸಿ ಕ್ಯಾಮೆರಾ ಮೇಲೆ ಬಟ್ಟೆ ಮುಚ್ಚಿ ತಮ್ಮ ಕೃತ್ಯ ಎಸಗುತ್ತಿದ್ದರು ಎಂದು ತಿಳಿದು ಬಂದಿದೆ. ರಾತ್ರಿ ಕಳ್ಳತನ ಮಾಡಲು ಮುಂದಾದಾಗ ಗೋದಾಮ ಮಾಲೀಕರು ನಾಲ್ವರನ್ನು ಸೆರೆ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.

    ಬಂಧಿತ ನಾಲ್ವರಲ್ಲಿ ಇಬ್ಬರು ನಗರದ ಪ್ರತಿಷ್ಠಿತ ಇಂಜಿನೀಯರಿಂದ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಮೋಜು ಮಸ್ತಿಗಾಗಿ ಸಿಮೆಂಟ್ ಗೋಡೌನ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನೊಂದಿಗೆ ಕಳ್ಳತನಕ್ಕೆ ಇಳಿದಿದ್ದರು. ನಾಲ್ವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • ಪಿಯುಸಿ ವಿಜ್ಞಾನ ವಿಭಾಗದಲ್ಲಿ 82.5% ಅಂಕ- ಎಂಜಿನಿಯರಿಂಗ್ ಓದೋ ಆಸೆಗೆ ಹಣದ ಸಮಸ್ಯೆ

    ಪಿಯುಸಿ ವಿಜ್ಞಾನ ವಿಭಾಗದಲ್ಲಿ 82.5% ಅಂಕ- ಎಂಜಿನಿಯರಿಂಗ್ ಓದೋ ಆಸೆಗೆ ಹಣದ ಸಮಸ್ಯೆ

    ಕೊಪ್ಪಳ: ಓದಬೇಕೆನ್ನುವ ಹಂಬಲದಿಂದ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಯುವಕನಿಗೆ ಉನ್ನತ ವ್ಯಾಸಂಗಕ್ಕಾಗಿ ಕಾಲೇಜು ಸೇರಲು ಬಡತನ ಅಡ್ಡಿಯಾಗಿದೆ. ಇದ್ದೊಬ್ಬ ಮಗನಿಗೆ ಬಡತನದಲ್ಲಿಯೂ ತಾಯಿ ಕಷ್ಟಪಟ್ಟು ಓದಿಸ್ತಾಯಿದ್ದಾರೆ. ಆದ್ರೀಗ ಎಂಜಿನಿಯರಿಂಗ್ ಓದೋ ಆಸೆಗೆ ಹಣಕಾಸಿನ ತೊಂದ್ರೆ ಆಗಿದೆ. ಸದ್ಯ ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದಲ್ಲಿ ನೆರವಿಗೆ ಬಂದಿದ್ದಾರೆ.

    ಕೊಪ್ಪಳದ ಗಂಗಾವತಿ ತಾಲೂಕಿನ ಮುಷ್ಟೂರ ಗ್ರಾಮದ ಮಲ್ಲಯ್ಯ ಹಾಗೂ ನಾಗಮ್ಮ ದಂಪತಿಯ ಪುತ್ರ ಮಂಜುನಾಥ್ ಬಡತನದಿಂದಾಗಿ ಶಿಕ್ಷಣವನ್ನು ಬಿಡುವ ಹಂತ ತಲುಪಿದ್ದಾರೆ. ಮಂಜುನಾಥ್ ಏಳನೇ ತರಗತಿಯಲ್ಲಿ ಓದುತ್ತಿದ್ದಾಗ ತಂದೆ ಸಾವನ್ನಪ್ಪಿದ್ರು. ಇದ್ದೊಬ್ಬ ತಾಯಿಯನ್ನ ಸಾಕೋ ಜವಾಬ್ದಾರಿ ಈತನ ಹೆಗಲಿಗೆ ಬಿದ್ದಿದೆ. ಜೊತೆಗೆ ತಾಯಿಯ ಪ್ರೋತ್ಸಾಹದಿಂದ ತನ್ನ ಓದಿಗೆ ಬ್ರೇಕ್ ಹಾಕದೇ ಕೂಲಿ ನಾಲಿ ಮಾಡಿ ಸಂಸಾರದ ನೊಗ ನೂಕ್ತಾ ತನ್ನ ಓದನ್ನ ಮುಂದುವರೆಸಿದ್ದಾರೆ. ಯಾವುದೇ ಟ್ಯೂಷನ್‍ಗೆ ಹೋಗ್ದೆ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 82.5 ರಷ್ಟು ಅಂಕಗಳನ್ನು ಪಡೆದುಕೊಂಡಿದ್ದಾರೆ.

     

     

    ನೀಟ್ ಪರೀಕ್ಷೆಯಲ್ಲಿ 40 ಸಾವಿರ ಸ್ಥಾನ ಪಡೆದುಕೊಂಡಿದ್ದಾರೆ. ಮಂಜುನಾಥ್ ನೀಟ್ ಪರೀಕ್ಷೆಗಾಗಿ ಯಾವುದೇ ಟ್ಯೂಷಿನ್‍ಗೆ ಹೋಗಿಲ್ಲ ಅನ್ನೋದು ಇನ್ನೊಂದು ವಿಶೇಷ. ಇವರಿಗೆ ಎಂಜಿನಿಯರಿಂಗ್ ವಿಭಾಗಕ್ಕೆ ಸೇರಿಕೊಳ್ಳೋ ಆಸೆಯಿದೆ. ಆದ್ರೆ ಮುಂದಿನ ಓದಿಗೆ ಇವರ ಬಳಿ ಹಣವಿಲ್ಲ.

    ನಿತ್ಯ ಬೆಳಿಗ್ಗೆ ಕಾಲೇಜು ಮುಗಿಸಿ ಆ ಬಳಿಕ ಕೂಲಿ ಮಾಡಿದ್ದಾರೆ. ಜೊತೆಗೆ ಮಗನಿಗೆ ಸಾಥ್ ನೀಡೋಕೆ ತಾಯಿ ನಾಗಮ್ಮ ಕೂಡಾ ಕೂಲಿ ಮಾಡ್ತಿದ್ದಾರೆ. ಇನ್ನು ಮಂಜುನಾಥ್ ಪ್ರತಿಭಾವಂತ ವಿದ್ಯಾರ್ಥಿ. ಎಸ್‍ಎಸ್‍ಎಲ್‍ಸಿ ಯಲ್ಲಿ ಶೇಕಡಾ 70.40 ರಷ್ಟು ಅಂಕ ಗಳಿಸಿದ್ದಾರೆ. ಗಂಗಾವತಿ ಸರ್ಕಾರಿ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಿದ್ದಾರೆ.

    ಬಡತನದಲ್ಲೂ ಮಂಜುನಾಥ ಪಿಯುಸಿ ವಿಜ್ಞಾನದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿರೋದಕ್ಕೆ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಮುಂದಿನ ಓದಿಗೆ ಸಹಾಯ ಹಸ್ತ ಚಾಚೋಕೆ ದಾನಿಗಳು ಮುಂದೆ ಬರಬೇಕಿದೆ.