Tag: ಇಂಜಿನಿಯರಿಂಗ್ ಕಾಲೇಜು

  • ವೀರ ಮದಕರಿ ನಾಯಕ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ – ಪ್ರೊಫೆಸರ್ ಕ್ಷಮೆಯಾಚನೆ

    ವೀರ ಮದಕರಿ ನಾಯಕ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ – ಪ್ರೊಫೆಸರ್ ಕ್ಷಮೆಯಾಚನೆ

    ಬೆಳಗಾವಿ: ಸೋಶಿಯಲ್ ಮೀಡಿಯಾದಲ್ಲಿ ವೀರ ಮದಕರಿ ನಾಯಕನ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚನೆ ಮಾಡಿದ್ದಾರೆ.

    ಬೆಳಗಾವಿ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜು ಪ್ರೊಫೆಸರ್ ಅಭಿಜಿತ್ ಬೈಕೇರಿಕರ್ ಕ್ಷಮಾಪಣೆ ಕೇಳಿದ್ದಾರೆ. ಪ್ರಕರಣದ ಹಿನ್ನೆಲೆ ನೋಡೋದಾದ್ರೆ ಬೆಳಗಾವಿ ನಗರದ ಆರ್‌ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರಿಡುವಂತೆ ಕೆಲ ಸಂಘಟನೆಗಳು ಸರ್ಕಾರಕ್ಕೆ ಆಗ್ರಹಿಸಿದ್ದವು.

    ನಡೆದಿದ್ದೇನು?
    ಈ ಸಂದರ್ಭದಲ್ಲಿ ಪ್ರೊಫೆಸರ್ ಅಭಿಜಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬೆಳಗಾವಿಗೂ ವೀರಮದಕರಿ ನಾಯಕರಿಗೂ ಸಂಬಂಧ ಏನು? ಅಂತಾ ಪ್ರಶ್ನೆ ಮಾಡಿದ್ದರು. ಪ್ರೊಫೆಸರ್ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಗುರಿಯಾಗಿತ್ತು. ‘Remove_Abhijeet’ ಹ್ಯಾಷ್‍ಟ್ಯಾಗ್‍ನಲ್ಲಿ ನೆಟ್ಟಿಗರು ಅಭಿಯಾನ ಆರಂಭಿಸಿದ್ದರು. ಇದನ್ನೂ ಓದಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ 

    ಅಭಿಜಿತ್ ಅವರ ವಿರುದ್ಧ ಕ್ರಮಕ್ಕೆ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಆಗ್ರಹ ಮಾಡಿತ್ತು. ಈ ಸಂಬಂಧ ಕಾಲೇಜು ಪ್ರಾಂಶುಪಾಲರನ್ನು ಭೇಟಿಯಾಗಿ ಸಂಘಟನೆ ಸದಸ್ಯರು ಮನವಿ ಮಾಡಿಕೊಂಡಿದ್ದರು. ಇತ್ತ ಸಂಘಟನೆ ಒತ್ತಾಯದ ಬೆನ್ನಲ್ಲೇ ಅಭಿಜಿತ್ ಬೈಕೇರಿಕರ್ ಕ್ಷಮೆಯಾಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಊಟ ಸೇವಿಸಿ ಚಿಕ್ಕಮಗಳೂರು ಎಐಟಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ಊಟ ಸೇವಿಸಿ ಚಿಕ್ಕಮಗಳೂರು ಎಐಟಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ಚಿಕ್ಕಮಗಳೂರು: ನಗರದ ಎಐಟಿ ಕಾಲೇಜಿನ 20ಕ್ಕೂ ಹೆಚ್ಚು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ.

    ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ಎಐಟಿ ಕಾಲೇಜಿಗೆ ಸೇರಿದ ಹಾಸ್ಟೆಲ್‍ನ ವಿದ್ಯಾರ್ಥಿನಿಯರು ಊಟ ಹಾಗು ನೀರು ಸೇವಿಸಿ ವಾಂತಿ, ಬೇದಿ, ಜ್ವರದಿಂದ ಬಳಲುತ್ತಿದ್ದಾರೆ. ಸಾಕಷ್ಟು ವಿದ್ಯಾರ್ಥಿನಿಯರು ಜಿಲ್ಲಾ ಆಸ್ಪತ್ರೆ ಸೇರಿದ್ರೆ, ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

    ಕಳೆದ ಒಂದು ವಾರದಿಂದ ವಾರ್ಡನ್‍ಗೆ ನೀರು ಸರಿಯಿಲ್ಲ, ಊಟ ಸರಿಯಿಲ್ಲ ಅಂತ ಹೇಳಿದ್ರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಊಟ ಹಾಗೂ ನೀರಿನಿಂದ ಈ ರೀತಿ ಸಮಸ್ಯೆಯಾಗಿದೆ ಅಂತ ವೈದ್ಯರು ಹೇಳಿದ್ದಾರೆ. ಇನ್ನೂ ಎರಡು ದಿನ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.