Tag: ಇಂಜಿನಿಯರ್

  • RTPSನಲ್ಲಿ ಕಳಚಿಬಿದ್ದ ಬಂಕರ್‌ಗಳು – ವಿದ್ಯುತ್ ಉತ್ಪಾದನೆ ಸ್ಥಗಿತ

    RTPSನಲ್ಲಿ ಕಳಚಿಬಿದ್ದ ಬಂಕರ್‌ಗಳು – ವಿದ್ಯುತ್ ಉತ್ಪಾದನೆ ಸ್ಥಗಿತ

    ರಾಯಚೂರು: ಶಕ್ತಿನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರ RTPSನಲ್ಲಿ ಅವಘಡ ನಡೆದಿದ್ದು, ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ.

    ವಿದ್ಯುತ್ ಕೇಂದ್ರದ ಒಂದನೇ ಘಟಕದಲ್ಲಿ ಕಲ್ಲಿದ್ದಲು ಸಂಗ್ರಹಗೊಂಡಿದ್ದ ಮೂರು ಬಂಕರ್‌ಗಳು ಕಳಚಿ ಬಿದ್ದಿವೆ. ಘಟನೆಯಿಂದ ವಿದ್ಯುತ್ ಉತ್ಪಾದನೆ ಅಸಾಧ್ಯವಾಗಿದ್ದು, ಜೊತೆಗೆ ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. ಸುಮಾರು ದಿನಗಳಿಂದ ಕಲ್ಲಿದ್ದಲು ಸಾಗಿಸದೆ ಸಂಗ್ರಹಿಸಿಟ್ಟ ಪರಿಣಾಮ ಘಟನೆ ನಡೆದಿದೆ. ಕಲ್ಲಿದ್ದಲು ಭಾರ ಹೆಚ್ಚಾಗಿದ್ದರಿಂದ ಬಂಕರ್‌ಗಳು ಕಳಚಿ ಬಿದ್ದಿವೆ. ಇದನ್ನೂ ಓದಿ: ನಿನ್ನ ತರ ನಕಲಿ ಸರ್ಟಿಫಿಕೇಟ್ ಕ್ರಿಯೇಟ್ ಮಾಡಿ ದಂಧೆ ನಡೆಸಿಕೊಂಡು ಬಂದಿಲ್ಲ ನಾನು: ಅಶ್ವಥ್ ನಾರಾಯಣ ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

    ಬಾಯ್ಲರ್ ಬಳಿ ಘಟನೆ ನಡೆದಿದ್ದು, ನೀರಿನ ಮಾರ್ಗ ಹಾಳಾಗಿ ನೀರು ಪೋಲಾಗಿದೆ. ಬಂಕರ್‌ಗಳಿಂದ ಮಿಲ್ ಮೂಲಕ ರವಾನಿಸಬೇಕಿದ್ದ ಕಲ್ಲಿದ್ದಲು ಲೋಡ್ ಹೆಚ್ಚಾಗಿ ಕುಸಿತವಾಗಿದೆ. ಕಳಚಿ ಬಿದ್ದ ಬಂಕರ್‌ಗಳ ಪುನರ್ ಜೋಡಣೆಗೆ ತಿಂಗಳುಗಟ್ಟಲೆ ಸಮಯ ಬೇಕಿದೆ.

    ವ್ಯವಸ್ಥೆ ಸರಿಪಡಿಸುವವರೆಗೂ ಒಂದನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳಲಿದೆ. RTPS ಇಂಜಿನಿಯರ್‌ಗಳ ನಿರ್ಲಕ್ಷ್ಯದಿಂದ ಅವಘಡ ನಡೆದಿದೆ. ಇದನ್ನೂ ಓದಿ:  ಬಿಜೆಪಿ ತನ್ನ ಮಿತ್ರಪಕ್ಷಗಳನ್ನು ಮುಗಿಸಲು ಪ್ರಯತ್ನಿಸುತ್ತಿದೆ, ನಿತೀಶ್‍ರದ್ದು ಒಳ್ಳೆಯ ನಿರ್ಧಾರ: ಶರದ್ ಪವಾರ್

    Live Tv
    [brid partner=56869869 player=32851 video=960834 autoplay=true]

  • ಚಲಿಸುತಿದ್ದ ಕಾರಿನಲ್ಲೇ ಹೃದಯಾಘಾತ – ಸ್ಥಳದಲ್ಲೇ ಸಾವನ್ನಪ್ಪಿದ ಇಂಜಿನಿಯರ್

    ಚಲಿಸುತಿದ್ದ ಕಾರಿನಲ್ಲೇ ಹೃದಯಾಘಾತ – ಸ್ಥಳದಲ್ಲೇ ಸಾವನ್ನಪ್ಪಿದ ಇಂಜಿನಿಯರ್

    ಧಾರವಾಡ: ಚಲಿಸುತಿದ್ದ ಕಾರಿನಲ್ಲೇ ಇಂಜಿನಿಯರ್‌ಗೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

    ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಲೋಕನಾಥ್ ಗುತ್ತಲ್ (29) ಮೃತ ಇಂಜಿನಿಯರ್. ಧಾರವಾಡ ಜಿಲ್ಲಾ ಪಂಚಾಯತ್‍ನ ಇಂಜಿನಿಯರ್ ಆಗಿದ್ದ ಲೋಕನಾಥ್, ಕರ್ತವ್ಯದ ಮೇಲೆ ಹುಬ್ಬಳ್ಳಿಯಿಂದ ನವಲಗುಂದಗೆ ಹೊರಟಿದ್ದರು. ಈ ವೇಳೆ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮದ ಬಳಿ ಏಕಾಏಕಿ ಹೃದಯಾಘಾತ ಸಂಭವಿಸಿದೆ. ಇದನ್ನೂ ಓದಿ: ಹಿಂದೂ ಬಾಲಕಿಯ ಹೃದಯ ಮುಸ್ಲಿಂ ಯುವಕನಿಗೆ ಕಸಿ

    ಪರಿಣಾಮ ಕಾರ್ ರಸ್ತೆ ಪಕ್ಕ ಹೊಲಕ್ಕೆ ನುಗ್ಗಿದೆ. ಬಳಿಕ ಲೋಕನಾರಥ್‌ ಕಾರಿನಲ್ಲೇ ಜೀವ ಬಿಟ್ಟಿದ್ದಾರೆ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ನವಲಗುಂದ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಮಳೆಯಿಂದಾಗಿ ರಾಜ್ಯದೆಲ್ಲೆಡೆ ತತ್ತರ – ಕರಾವಳಿ, ಮಲೆನಾಡಿನಲ್ಲಿ ಏನಾಗಿದೆ?

    Live Tv
    [brid partner=56869869 player=32851 video=960834 autoplay=true]

  • ಕೆಲಸ ಬಿಟ್ಟು ಬಿರಿಯಾನಿ ಸ್ಟಾಲ್ ತೆರೆದ ಇಂಜಿನಿಯರಿಂಗ್ ಯುವಕರು

    ಕೆಲಸ ಬಿಟ್ಟು ಬಿರಿಯಾನಿ ಸ್ಟಾಲ್ ತೆರೆದ ಇಂಜಿನಿಯರಿಂಗ್ ಯುವಕರು

    ಚಂಡೀಗಢ: ಓದಿಗೆ ತಕ್ಕಂತೆ ಕೆಲಸ ಮಾಡಬೇಕು ಎಂಬುದು ಎಲ್ಲರ ಕನಸು. ಆದರೆ ಕೆಲಸ ಸಿಗದಿದ್ದಾಗ ಜನರು ಸಿಕ್ಕ ಕೆಲಸವನ್ನು ಮಾಡಿಕೊಂಡು ಅತೃಪ್ತಿಯಿಂದ ಒಳಲುತ್ತಾರೆ. ಆದರೆ ಹರಿಯಾಣದ ಇಂಜಿನಿಯರ್ ಯುವಕರು ಸಿಕ್ಕ ಕೆಲಸದಲ್ಲಿ ತೃಪ್ತಿಯಿಲ್ಲವೆಂದು ಬಿರಿಯಾನಿ ಸ್ಟಾಲ್ ಓಪನ್ ಮಾಡಿ ನಿರುದ್ಯೋಗಿಗಳಿಗೆ ಸ್ಫೂರ್ತಿಯಾಗಿದ್ದಾರೆ.

    ನಮ್ಮಲ್ಲಿ ಸಾಮಾನ್ಯವಾಗಿ ಹೆಚ್ಚು ಜನರು ತಮ್ಮ ಉದ್ಯೋಗಗಳ ಬಗ್ಗೆ ಅತೃಪ್ತಿ ಇದ್ದರೂ, ತಮಗೆ ಇಷ್ಟವಾದ ಕೆಲಸ ಮಾಡಲು ಬಂಡವಾಳ ಹಾಕುವ ಧೈರ್ಯವಿರುವುದಿಲ್ಲ. ಆದರೆ ಹರಿಯಾಣದ ಸೋನೆಪತ್‍ನಲ್ಲಿ ಇಬ್ಬರು ಇಂಜಿನಿಯರ್ ಓದಿದ ಯುವಕರು ತಮಗೆ ಬರುತ್ತಿದ್ದ ಸಂಬಳದ ಬಗ್ಗೆ ಅತೃಪ್ತಿ ಹೊಂದಿದ್ದರು. ಈ ಹಿನ್ನೆಲೆ ಅವರು ತಮ್ಮ ಕೆಲಸವನ್ನು ಬಿಟ್ಟು ಫುಡ್ ಸ್ಟಾಲ್ ತೆಗೆಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: EVMಗಳಲ್ಲಿ ಸಮಸ್ಯೆಯಿಲ್ಲ, ಜನರ ತಲೆಯೊಳಗಿನ ಚಿಪ್ಪಿನಲ್ಲಿ ಸಮಸ್ಯೆಯಿದೆ: ಫಲಿತಾಂಶದ ಬಗ್ಗೆ ಓವೈಸಿ ಪ್ರತಿಕ್ರಿಯೆ

    ಇಂಜಿನಿಯರ್‌ಗಳಾದ ರೋಹಿತ್ ಮತ್ತು ಸಚಿನ್ ಒಟ್ಟಿಗೆ ಬಿರಿಯಾನಿ ಸ್ಟಾಲ್ ಓಪನ್ ಮಾಡಿದ್ದಾರೆ. ಈ ಸ್ಟಾಲ್‍ಗೆ ಇವರು ‘ಇಂಜಿನಿಯರ್ ವೆಜ್ ಬಿರಿಯಾನಿ’ ಎಂದು ಹೆಸರಿಟ್ಟಿದ್ದಾರೆ. ಇದರಲ್ಲಿ ಗಮನಾರ್ಹ ವಿಷಯವೆಂದರೆ ಇಬ್ಬರೂ ಐದು ವರ್ಷಗಳ ಕಾಲ ಇಂಜಿನಿಯರಿಂಗ್ ಓದಿದ್ದಾರೆ. ರೋಹಿತ್ ಪಾಲಿಟೆಕ್ನಿಕ್ ವಿದ್ಯಾರ್ಥಿಯಾಗಿದ್ದಾಗ, ಸಚಿನ್ ಬಿ.ಟೆಕ್ ಓದಿದ್ದರು. ಆದರೆ, ಕೆಲಸದಲ್ಲಿ ತೃಪ್ತರಾಗದ ಹಿನ್ನೆಲೆ ಬಿರಿಯಾನಿ ಮಾರಾಟ ಮಾಡಲು ನಿರ್ಧರಿಸಿದ್ದಾರೆ. ಪ್ರಸ್ತುತ ಅವರು ಈ ಕೆಲಸದಿಂದ ತುಂಬಾ ಸಂತೋಷದಿಂದ ಇದ್ದೇವೆ ಎಂದು ಮಾಧ್ಯಮಗಳೊಂದಿಗೆ ಮಾತನಾಡಿ ಸಂತೋಷ ಹಂಚಿಕೊಂಡಿದ್ದಾರೆ.

    ಆಹಾರದ ವಿಷಯಕ್ಕೆ ಬಂದರೆ, ತಮ್ಮ ಬಿರಿಯಾನಿಗೆ ಹೆಚ್ಚು ಎಣ್ಣೆಯನ್ನು ಹಾಕುವುದಿಲ್ಲ. ಅರ್ಧ ಮತ್ತು ಪೂರ್ಣ ಪ್ಲೇಟ್‍ಗೆ ಕ್ರಮವಾಗಿ 50 ಮತ್ತು 70 ರೂ. ನಮ್ಮಲ್ಲಿ ಎರಡು ವಿಧದ ಬಿರಿಯಾನಿ-ವಿಶೇಷ ಗ್ರೇವಿ ವೆಜ್ ಬಿರಿಯಾನಿ ಮತ್ತು ಆಚಾರಿ ವೆಜ್ ಬಿರಿಯಾನಿಗಳನ್ನು ಮಾರಾಟ ಮಾಡಲಾಗುತ್ತೆ ಎಂದು ತಮ್ಮ ವ್ಯಾಪಾರದ ಬಗ್ಗೆ ವಿವರಿಸಿದ್ದಾರೆ. ಇದನ್ನೂ ಓದಿ: 4 ರಾಜ್ಯಗಳಲ್ಲಿ ಬಿಜೆಪಿ ವಿಜಯ – ಗುಜರಾತ್‍ನಲ್ಲಿ ಮೋದಿ ಭರ್ಜರಿ ರೋಡ್ ಶೋ

    ಗ್ರಾಹಕರ ಆರೋಗ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನಾವು ಆಹಾರವನ್ನು ತಯಾರಿಸುತ್ತೇವೆ. ನಮ್ಮ ಸ್ಟಾಲ್‍ನಲ್ಲಿ ಉತ್ತಮ ಗುಣಮಟ್ಟದ ಅಕ್ಕಿಯನ್ನು ಬಳಸಲಾಗುತ್ತೆ. ನಮ್ಮ ಶ್ರಮದ ಫಲವಾಗಿ ಇಂದು ಹಲವು ಜನರು ನಮ್ಮ ಸ್ಟಾಲ್ ಹುಡುಕಿಕೊಂಡು ಬರುತ್ತಾರೆ. ಅದಕ್ಕೆ ನಮ್ಮ ಸ್ಟಾಲ್‍ನನ್ನು ಇನ್ನೂ ವಿಸ್ತರಿಸಬೇಕು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

  • ಎಂಜಿನಿಯರ್ ಕೈಯಿಂದ ಫೈಲ್ ಕಿತ್ತುಕೊಂಡು ಓಡಿ ಹೋದ ಕಂಟ್ರಾಕ್ಟರ್

    ಎಂಜಿನಿಯರ್ ಕೈಯಿಂದ ಫೈಲ್ ಕಿತ್ತುಕೊಂಡು ಓಡಿ ಹೋದ ಕಂಟ್ರಾಕ್ಟರ್

    ಹಾಸನ: ಎಂಜಿನಿಯರ್ ಕೈಯಿಂದ ಗುತ್ತಿಗೆದಾರರೊಬ್ಬರು ಫೈಲ್ ಕಿತ್ತುಕೊಂಡು ಓಡಿ ಹೋದ ಅಚ್ಚರಿಯ ಘಟನೆ ಆಲೂರು ಪಟ್ಟಣದಲ್ಲಿರುವ ಕಾವೇರಿ ನೀರಾವರಿ ನಿಗಮದ ಹೇಮಾವತಿ ಪುನರ್ ವಸತಿ ವಿಭಾಗದ ಕಚೇರಿಯಲ್ಲಿ ನಡೆದಿದೆ.

    ಪ್ರೀತಂ ಕೈಯಿಂದ ಫೈಲ್ ಕಿತ್ತುಕೊಂಡು ಓಡಿ ಹೋದ ಗುತ್ತಿಗೆದಾರ. ಎಸ್.ಸಿ.ಪಿ.ಟಿ.ಎಸ್.ಪಿ. ಯೋಜನೆಯಡಿ ಜಾರಿಯಾಗಿದ್ದ, ಕೊಳವೆಬಾವಿ ಕೊರೆಯುವ ಹಣ ಸಂದಾಯ ವಿಚಾರವಾಗಿ ಗೊಂದಲವಾಗಿದೆ.

    ಕೇಶವ್ ಶಾಮಣ್ಣ ಮತ್ತು ಗಂಗಾಧರ್ ಆಚಾರಿ ಎಂಬ ಇಬ್ಬರು ಇದರ ಮೂಲ ಗುತ್ತಿಗೆದಾರರಾಗಿದ್ದು, ಇದನ್ನು ಕೊರೆಯಲು ಹಾಗೂ ಎಲೆಕ್ಟ್ರಿಕ್ ಕೆಲಸದ ಮೇಲೆ ಈ ಗುತ್ತಿಗೆ ಪಡೆದಿದ್ದರು. ಈ ಗುತ್ತಿಗೆಯನ್ನು ಪ್ರೀತಂ ಎಂಬುವವರಿಗೆ ಉಪ ಗುತ್ತಿಗೆಯಾಗಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂಲ ಗುತ್ತಿದೆರಾರರು ಮತ್ತು ಉಪ ಗುತ್ತಿಗೆದಾರರ ನಡುವೆ ಕಿತ್ತಾಟ ನಡೆದಿದೆ. ಇದನ್ನೂ ಓದಿ: ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್

    ಪ್ರೀತಂ ಎಲೆಕ್ಟ್ರಿಕ್ ಕೆಲಸ ಮಾಡಿದ್ದ ಹಣ ಸಂದಾಯ ಮಾಡಿಲ್ಲ. ಹಣ ಸಂದಾಯವಾಗದೇ ಇದ್ದರೆ ಬಿಲ್ ಮಾಡಲು ಬಿಡುವುದಿಲ್ಲ ಎಂದು ತಕರಾರು ತೆಗೆದಿದ್ದರು. ಈ ವೇಳೆ ಎಂಜಿನಿಯರ್ ನವೀನ್ ಬಿಲ್ ಪಾವತಿ ಮಾಡಿಸಲು ಮೇಲಾಧಿಕಾರಿ ಸಹಿಗೆ ಫೈಲ್ ತೆಗೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಉಪ ಗುತ್ತಿಗೆದಾರ ಪ್ರೀತಂ ಅವರ ಕೈಯಲ್ಲಿದ್ದ ಫೈಲ್ ಕಿತ್ತುಕೊಂಡು ಓಡಿ ಹೋಗಿದ್ದಾರೆ. ಇದನ್ನೂ ಓದಿ: ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

    ಈ ಕುರಿತು ಪ್ರೀತಂ ವಿರುದ್ಧ ಪೊಲೀಸ್ ಠಾಣೆಗೆ ಇಂಜಿನಿಯರ್ ನವೀನ್ ದೂರು ನೀಡಿದ್ದು, ಅಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಹಾವು ಕೊಂದ ಇಂಜಿನಿಯರ್ ವಿರುದ್ಧ ದೂರು ದಾಖಲು

    ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಹಾವು ಕೊಂದ ಇಂಜಿನಿಯರ್ ವಿರುದ್ಧ ದೂರು ದಾಖಲು

    -ಸ್ಮಾರ್ಟ್ ಸಿಟಿ ಇಂಜಿನಿಯರ್ ವಿರುದ್ದ ಅರಣ್ಯ ಇಲಾಖೆಯಲ್ಲಿ ದೂರು

    ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ವೇಳೆ ನಾಗರ ಹಾವನ್ನು ಕೊಂದು ಹಾಕಲಾಗಿದೆ ಎಂದು ಆರೋಪಿಸಿ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ.

    ಡಿಸೆಂಬರ್ 4ರಂದು ಶಿವಮೊಗ್ಗದ ಸಾಗರ ರಸ್ತೆಯ ಎಪಿಎಂಸಿ ಮಾರುಕಟ್ಟೆ ಮುಂಭಾಗ ಆಂಜನೇಯ ದೇವಸ್ಥಾನವನ್ನು ಜೆಸಿಬಿಯಿಂದ ನೆಲಸಮ ಮಾಡಲಾಗಿತ್ತು. ಆಂಜನೇಯ ದೇವಸ್ಥಾನ ತೆರವು ಮಾಡುವ ವೇಳೆ ಹಾವೊಂದು ಪ್ರತ್ಯಕ್ಷವಾಗಿತ್ತು. ಈ ವೇಳೆ ಹಾವು ದೇವಸ್ಥಾನ ತೆರವಿಗೆ ಅಡ್ಡಿಪಡಿಸಿದೆ. ನಂತರ ಜೆಸಿಬಿಯಿಂದ ಹಾವನ್ನು ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಪತ್ನಿಯನ್ನು ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ – ಎರಡು ಲಕ್ಷ ದಂಡ

    ದೇವಸ್ಥಾನ ತೆರವು ಮಾಡಿದ ನಂತರ ಅಂದೇ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಹಾವನ್ನು ಸ್ಮಾರ್ಟ್ ಸಿಟಿ ಯೋಜನೆಯವರು ಕೊಂದಿದ್ದಾರೆ ಎಂದು ಪಾಲಿಕೆಯ ಸದಸ್ಯ ರಾಹುಲ್ ಬಿದರೆ, ಆಲ್ಕೊಳದ ಶಂಕರ್ ವಲಯದ ಅರಣ್ಯಾಧಿಕಾರಿಗಳಿಗೆ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿಜಯ ಕುಮಾರ್ ವಿರುದ್ಧ ಹಾವು ಕೊಂದಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ – ವೀಡಿಯೋ ವೈರಲ್

  • ಡೋಣಿ ನದಿ ಸೇತುವೆಯಲ್ಲಿ ಬಿರುಕು – ಆಗಮಿಸಲಿದ್ದಾರೆ ದೆಹಲಿ ಎಂಜಿನಿಯರ್‌ಗಳು

    ಡೋಣಿ ನದಿ ಸೇತುವೆಯಲ್ಲಿ ಬಿರುಕು – ಆಗಮಿಸಲಿದ್ದಾರೆ ದೆಹಲಿ ಎಂಜಿನಿಯರ್‌ಗಳು

    ವಿಜಯಪುರ: ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಳಿಯ ಡೋಣಿ ನದಿ ಸೇತುವೆ ಬಿರುಕು ಬಿಟ್ಟಿದೆ. ಆದ್ದರಿಂದ ಅಧಿಕಾರಿಗಳು ಸೇತುವೆ ಮೇಲೆ ಸಂಚಾರ ಬಂದ್ ಮಾಡಿದ್ದಾರೆ.

    ದೆಹಲಿಯಿಂದ ಇಬ್ಬರು ಎಂಜಿನಿಯರ್ ಗಳು ಇಂದು ಸ್ಥಳಕ್ಕೆ ಭೇಟಿ ನೀಡಲಿದ್ದು, ಅವರಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ದೆಹಲಿ ಜೊತೆಗೆ ಬೆಂಗಳೂರಿನಿಂದ ಹಿರಿಯ ಅಧಿಕಾರಿಗಳ ಆಗಮನಕ್ಕೆ ಸ್ಥಳಿಯ ಅಧಿಕಾರಿಗಳು ಕಾಯುತ್ತಿದ್ದಾರೆ. ಎಂಜಿನಿಯರ್ ಗಳು ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಸೇತುವೆ ಯಾವ ಸ್ಥಿತಿಯಲ್ಲಿದೆ ಎನ್ನುವ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಇದನ್ನೂ ಓದಿ: ದಸರಾ ಬಳಿಕ ಪ್ರಾಥಮಿಕ ಶಾಲೆ ಓಪನ್?

    ಹಿರಿಯ ಅಧಿಕಾರಿಗಳ ಪರಿಶೀಲನೆ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡಲು ತೀರ್ಮಾನಿಸಲಾಗಿದೆ. ಸದ್ಯ ಸೇತುವೆ ಪಕ್ಕದಲ್ಲಿರುವ ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅನುವು ಆಗುವಂತೆ ರಸ್ತೆ ದುರಸ್ತಿ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.

    ಹಳೆಯ ಸೇತುವೆ ಗಟ್ಟಿಮುಟ್ಟಾಗಿದ್ದು, ಯಾವುದೇ ಅಪಾಯವಿಲ್ಲ. ಡೋಣಿ ನದಿಗೆ ಹೆಚ್ಚಿನ ನೀರು ಬರದಿದ್ದರೆ ಇಲ್ಲಿ ಸಂಚಾರ ಮಾಡಬಹುದು. ಸದ್ಯ ನೀರು ಕಡಿಮೆ ಆಗಿರುವ ಕಾರಣ ಹಳೆ ಸೇತುವೆ ಮೇಲೆ ಸಂಚಾರಕ್ಕೆ ತೊಂದರೆ ಇಲ್ಲ. ಈ ಕಾರಣ ಎರಡು ದಿನಗಳಲ್ಲಿ ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅವಕಾಶ ಮಾಡಿ ಕೊಡಲು ಅಧಿಕಾರಿಗಳು ಸಿದ್ಧತೆ ಮಾಡುತ್ತಿದ್ದಾರೆ. ಇದನ್ನೂ ಓದಿ:  ಭಾರತ ಕೋವಿಡ್ 19 ನಿರ್ವಹಣೆ ಮಾಡಿದಂತೆ ಬೇರೆ ಯಾವ ದೇಶ ಮಾಡಿಲ್ಲ – ಸುಪ್ರೀಂ ಮೆಚ್ಚುಗೆ

  • ಬೈಕ್‍ನಲ್ಲಿಯೇ ಮಿನಿ ಅಂಬುಲೆನ್ಸ್ – ಬಡವರಿಗೆ ಉಚಿತ ಸೇವೆ ಸಲ್ಲಿಸುತ್ತಿದ್ದಾರೆ ಯುವ ಇಂಜಿನಿಯರ್

    ಬೈಕ್‍ನಲ್ಲಿಯೇ ಮಿನಿ ಅಂಬುಲೆನ್ಸ್ – ಬಡವರಿಗೆ ಉಚಿತ ಸೇವೆ ಸಲ್ಲಿಸುತ್ತಿದ್ದಾರೆ ಯುವ ಇಂಜಿನಿಯರ್

    ಭೋಪಾಲ್: ಭಾರತದಲ್ಲಿ ಕೋವಿಡ್ ಹೆಚ್ಚಾಗುತ್ತಿದ್ದು, ಆರೋಗ್ಯ ಮೂಲಸೌಕರ್ಯಗಳಾದ ಬೆಡ್, ಔಷಧಿ ಮತ್ತು ಆಕ್ಸಿಜನ್ ಸಿಲಿಂಡರ್ ಇಲ್ಲದೇ ಜನರು ಪರದಾಡುತ್ತಿದ್ದಾರೆ. ಅನೇಕ ಮಂದಿ ಅಂಬುಲೆನ್ಸ್ ಮತ್ತು ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ತಡವಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ದಿನ ಇಂತಹ ದುಃಖಕರವಾದ ವಿಷಯಗಳನ್ನು ಕಂಡು ಬೇಸರಗೊಂಡ ಮಧ್ಯಪ್ರದೇಶದ ಇಂಜಿನಿಯರ್ ಒಬ್ಬರು ಜನರ ಜೀವ ಉಳಿಸಲು ಬೈಕ್‍ನಲ್ಲಿಯೇ ತಾತ್ಕಾಲಿಕ ಅಂಬುಲೆನ್ಸ್ ನಿರ್ಮಿಸಿದ್ದಾರೆ. ಅಲ್ಲದೆ ಈ ಮಿನಿ ಅಂಬುಲೆನ್ಸ್ ತಯಾರಿಸಲು ಸ್ಕ್ರ್ಯಾಪ್ ವಸ್ತುಗಳನ್ನು ಬಳಸಿದ್ದಾರೆ.

    ಈ ವ್ಯಕ್ತಿಯು ತಮ್ಮ ಬೈಕ್‍ಗೆ ಅಂಬುಲೆನ್ಸ್‌ನನ್ನು ಜೋಡಿಸಿ, ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಉಚಿತವಾಗಿ ಕರೆದೊಯ್ಯುತ್ತಿದ್ದಾರೆ. ಈ ಅಂಬುಲೆನ್ಸ್ ಸಿದ್ಧಪಡಿಸಲು 20-25,000ರೂ ಖರ್ಚಾಗಿದ್ದು, ಅಂಬುಲೆನ್ಸ್ ಒಳಗಡೆ ಆಕ್ಸಿಜನ್ ಸಿಲಿಂಡರ್ ಮತ್ತು ಸೋಕಿಂತರಿಗೆ ಅಗತ್ಯವಾದ ಮೆಡಿಸನ್ ಅಳವಡಿಸಲಾಗಿದೆ. ಅಲ್ಲದೇ ರೋಗಿಯನ್ನು ಹೊರತುಪಡಿಸಿ ಮತ್ತಿಬ್ಬರು ಅಂಬುಲೆನ್ಸ್ ಒಳಗೆ ಆರಾಮವಾಗಿ ಕುಳಿತುಕೊಳ್ಳಬಹುದು ಎಂದು ಇಂಜಿನಿಯರ್ ತಿಳಿಸಿದ್ದಾರೆ. ವಿಶೇಷವೆಂದರೆ ರೋಗಿಯ ಪ್ರೀತಿ ಪಾತ್ರರೇ ಈ ಗಾಡಿಯನ್ನು ಓಡಿಸಿಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಬಹುದು ಎಂದಿದ್ದಾರೆ.

    ಇತ್ತೀಚೆಗೆ ಕೇವಲ 3 ಕಿ.ಮೀವರೆಗೂ ರೋಗಿಯನ್ನು ಕರೆದುಕೊಂಡು ಹೋಗಲು ಅಂಬುಲೆನ್ಸ್ ಡ್ರೈವರ್ 10,000ರೂ ಡಿಮ್ಯಾಂಡ್ ಮಾಡಿದ್ದನ್ನು ಕೇಳಿದ್ದರು. ಹಾಗಾಗಿ ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಬೇಕೆಂದು ಆಲೋಚಿಸಿ ಅಂಬುಲೆನ್ಸ್ ತಯಾರಿಸಿರುವುದಾಗಿ ಹೇಳಿದ್ದಾರೆ. ಲಾಕ್‍ಡೌನ್ ಇರುವುದರಿಂದ ಅಂಬುಲೆನ್ಸ್ ಸಿದ್ಧಪಡಿಸಲು ಅಗತ್ಯ ವಸ್ತುಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ಬಡ ಜನರು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯಲು ಈ ಅಂಬುಲೆನ್ಸ್ ಅನುಕೂಲಕರವಾಗಿದೆ ಎಂದು ಹೇಳಿದ್ದಾರೆ.

    ಅಂಬುಲೆನ್ಸ್ ಸಿದ್ಧಪಡಿಸಲು ಲಕ್ಷಾಂತರ ರೂ. ವೆಚ್ಚವಾಗುತ್ತದೆ. ಅಲ್ಲದೇ ಕೆಲವೊಮ್ಮೆ ಅಂಬುಲೆನ್ಸ್ ಕೂಡ ರೋಗಿಗಳನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗುವುದಿಲ್ಲ. ಅಂಬುಲೆನ್ಸ್‌ಗಾಗಿ ಜನ ಹೆಚ್ಚಿನ ಹಣವನ್ನು ಖರ್ಚು ಮಾಡಲು ತಯಾರಾಗಿದ್ದರೂ, ಅಂಬುಲೆನ್ಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಸಮಯದಲ್ಲಿ ತಾನು ನಿರ್ಮಿಸಿರುವ ಮಿನಿ ಅಂಬುಲೆನ್ಸ್ ಮೂಲಕ ಅಗತ್ಯವಿರುವ ಜನರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬಹುದೆಂದು ಆಶಿಸುತ್ತೇನೆ ಎಂದಿದ್ದಾರೆ.

  • ಸಾಲ ವಾಪಸ್ ಕೊಡಲಿಲ್ಲ ಎಂದು 11 ಮಹಡಿಯಿಂದ ಸ್ನೇಹಿತನನ್ನೇ ತಳ್ಳಿದ್ರು

    ಸಾಲ ವಾಪಸ್ ಕೊಡಲಿಲ್ಲ ಎಂದು 11 ಮಹಡಿಯಿಂದ ಸ್ನೇಹಿತನನ್ನೇ ತಳ್ಳಿದ್ರು

    – ಮೂವರು ಸ್ನೇಹಿತರಿಂದ ಇಂಜಿನಿಯರ್ ವಿದ್ಯಾರ್ಥಿ ಬರ್ಬರ ಹತ್ಯೆ

    ಥಾಣೆ: 15 ಸಾವಿರ ಸಾಲ ಪಡೆದು ಸರಿಯಾದ ಸಮಯಕ್ಕೆ ವಾಪಸ್ ಕೊಡಲಿಲ್ಲ ಎಂದು ಸ್ನೇಹಿತನನ್ನೇ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿಕೊಂಡು 11 ಮಹಡಿಯಿಂದ ಕೆಳಗೆ ತಳ್ಳಿ ಕೊಲೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

    ಮೂವರು ಆರೋಪಿಗಳನ್ನು ಅಭಿನವ್ ಜಾಧವ್, ಅಕ್ಷಯ್ ಗೊರಾಡೆ ಮತ್ತು ತೇಜಸ್ ಗುಜಾರ್ ಎಂದು ಗುರುತಿಸಲಾಗಿದೆ. ಮೃತನನ್ನು ಸಾಗರ್ ಚಿಲ್ವೆರಿ ಎಂದು ಗುರುತಿಸಲಾಗಿದೆ. ಕೊಲೆಯಾದ ಸಾಗರ್ ಮತ್ತು ಆರೋಪಿಗಳು ಫ್ಲ್ಯಾಟ್‍ನಲ್ಲಿ ಒಟ್ಟಿಗೆ ಇರುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಕೊಲೆಯಾದ ಸಾಗರ್ ಜನವರಿ 9 ರಂದು ಅಭಿನವ್ ಜಾಧವ್ ಕಡೆಯಿಂದ ಶೇ.10 ಬಡ್ಡಿಗೆ 15 ಸಾವಿರ ಸಾಲ ಪಡೆದುಕೊಂಡಿರುತ್ತಾನೆ. ಈ ಹಣವನ್ನು ಕಳೆದ ಸೋಮವಾರಕ್ಕೆ ವಾಪಸ್ ಕೊಡುವುದಾಗಿ ಸಾಗರ್ ಹೇಳಿರುತ್ತಾನೆ. ಆದರೆ ಕೊಡಲು ಸಾಧ್ಯವಾಗಿರಲಿಲ್ಲ. ಈ ವಿಚಾರಕ್ಕೆ ಫ್ಲ್ಯಾಟ್‍ನ ಪಾರ್ಕಿಂಗ್ ಜಾಗದಲ್ಲಿ ಜಾಧವ್ ಮತ್ತು ಸಾಗರ್ ಜಗಳವಾಡಿರುತ್ತಾರೆ. ಆಗ ಮಧ್ಯೆ ಬಂದ ಸೆಕ್ಯೂರಿಟಿ ಗಾರ್ಡ್ ಜಗಳ ಬಿಡಿಸಿ ವಾಪಸ್ ಕಳುಹಿಸಿರುತ್ತಾರೆ.

    ಈ ಘಟನೆಯ ನಂತರ ಫ್ಲ್ಯಾಟ್‍ಗೆ ಹೋದ ಇಬ್ಬರು ಮತ್ತೆ ಜಗಳವಾಡುತ್ತಾರೆ. ಈ ವೇಳೆ ಜಾಧವ್‍ಗೆ ಅಕ್ಷಯ್ ಮತ್ತು ತೇಜಸ್ ಸಾಥ್ ಕೊಡುತ್ತಾರೆ. ಆಗ ಮೂವರು ಸೇರಿಕೊಂಡು ಸಾಗರ್ ಅನ್ನು 11 ಮಹಡಿಯಿಂದ ತಳ್ಳಿದ್ದಾರೆ. ಇದನ್ನು ನೋಡಿದ ಸೆಕ್ಯೂರಿಟಿ ಗಾರ್ಡ್, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ತಕ್ಷಣ ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

    ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಸೆಕ್ಯೂರಿಟಿ ಗಾರ್ಡ್ ನೀಡಿದೆ ಹೇಳಿಕೆ ಮೇಲೆ ಅಭಿನವ್ ಜಾಧವ್, ಅಕ್ಷಯ್ ಗೊರಾಡೆ ಮತ್ತು ತೇಜಸ್ ಗುಜಾರ್ ಮೂವರನ್ನು ಬಂಧಿಸಿದ್ದಾರೆ.

  • ಅಧಿಕಾರಿಗಳಿಗೆ ಮಾಜಿ ಸಂಸದ ಉಗ್ರಪ್ಪ ಆವಾಜ್

    ಅಧಿಕಾರಿಗಳಿಗೆ ಮಾಜಿ ಸಂಸದ ಉಗ್ರಪ್ಪ ಆವಾಜ್

    ಬಳ್ಳಾರಿ: ಮಾಜಿ ಸಂಸದರಾದ ವಿ.ಎಸ್ ಉಗ್ರಪ್ಪ ಅಧಿಕಾರಿಗಳಿಗೆ ನಾನ್ ಸೆನ್ಸ್ ಎಂದು ಹೇಳುವ ಮೂಲಕ ಆವಾಜ್ ಹಾಕಿದ್ದಾರೆ

    ಇಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಜೊತೆ ಅಲ್ಲಿಪುರ ಕೆರೆ ವೀಕ್ಷಣೆ ಅಗಮಿಸಿದ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಪಾಲಿಕೆ ಮುಖ್ಯ ಎಂಜಿನಿಯರ್ ದಿನೇಶ್ ಅವರಿಗೆ ಕ್ಲಾಸ್ ತೆಗೆದುಕೊಂಡರು.

    ಅಲ್ಲದೇ ಅಧಿಕಾರಿಗಳ ಮೇಲೆ ನಾನ್‍ಸೆನ್ಸ್ ಎನ್ನುವ ಪದ ಬಳಕೆ ಮಾಡಿದ್ದಾರೆ. ತುಂಗಾಭದ್ರಾ ನದಿಯ ನೀರನ್ನು ಬಳ್ಳಾರಿ ನಗರಕ್ಕೆ ಕುಡಿಯಲು ಬಳಸುವುದಕ್ಕೆ ನೀಡುವ ಉದ್ದೇಶದಿಂದ ನೀರನ್ನು ಕೆರೆಗೆ ಡಂಪ್ ಮಾಡಲಾಗುತ್ತಿದೆ. ಈ ಯೋಜನೆಯನ್ನು ವೀಕ್ಷಿಸಲು ಆಗಮಿಸಿದಾಗ ಸರಿಯಾಗಿ ಕೆಲಸ ಮಾಡಿ, ಏನ್ ಮಾತಾಡ್ತಿರಾ ನಾನ್‍ಸೆನ್ಸ್ ಎನ್ನುವ ಮೂಲಕ ಅಧಿಕಾರಿಗಳನ್ನು ಜಾಡಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಈಗ ಮೊಬೈಲ್ ಬಿದ್ದರೂ ಚಿಂತೆಯಿಲ್ಲ: ಹೊಸದಾಗಿ ಬಂದಿದೆ ಮೊಬೈಲ್ ಏರ್ ಬ್ಯಾಗ್  – ವಿಡಿಯೋ

    ಈಗ ಮೊಬೈಲ್ ಬಿದ್ದರೂ ಚಿಂತೆಯಿಲ್ಲ: ಹೊಸದಾಗಿ ಬಂದಿದೆ ಮೊಬೈಲ್ ಏರ್ ಬ್ಯಾಗ್ – ವಿಡಿಯೋ

    ಬೆಂಗಳೂರು: ಕಾರುಗಳಲ್ಲಿರುವ ಏರ್ ಬ್ಯಾಗ್ ನಲ್ಲಿ ಈಗ ಮೊಬೈಲ್ ಅನ್ನು ರಕ್ಷಿಸಲು ಏರ್ ಬ್ಯಾಗ್ ನಿರ್ಮಾಣಗೊಂಡಿದೆ.

    ಹೌದು, ಜರ್ಮನಿಯ ವಿದ್ಯಾರ್ಥಿಯೊಬ್ಬ ಮೊಬೈಲ್ ಏರ್‍ಬ್ಯಾಗ್ ಅನ್ನು ಅಭಿವೃದ್ಧಿ ಪಡಿಸಿದ್ದಾನೆ. ಆಲೇನ ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿದ್ಯಾರ್ಥಿ ಫಿಲಿಪ್ ಪ್ರೆಂಜಲ್ ನೂತನ ಮೊಬೈಲ್ ಏರ್ ಬ್ಯಾಗ್ ತಯಾರಿಸಿದ್ದಾನೆ. ಈತನ ಈ ಸಾಧನೆಗೆ ಜರ್ಮನಿಯ `ಜರ್ಮನ್ ಸೊಸೈಟಿ ಫಾರ್ ಮೆಕಾಟ್ರೋನಿಕ್ಸ್’ ಸಂಸ್ಥೆಯು ಪ್ರಶಸ್ತಿ ನೀಡಿ ಗೌರವಿಸಿದೆ.

    ಹೇಗೆ ತೆರೆದುಕೊಳ್ಳುತ್ತೆ?
    ಎಂಟು ತೆಳುವಾದ ಮೆಟಲ್ ಸುರುಳಿಗಳ ಸ್ಪ್ರಿಂಗ್ ಅನ್ನು ಹೊಂದಿರುವಂತೆ ಈ ಕೇಸನ್ನು ವಿನ್ಯಾಸಗೊಳಿಸಲಾಗಿದೆ. ಈ ಕೇಸ್‍ನಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಮೊಬೈಲ್ ಫೋನ್ ಬಿದ್ದರೂ, ಯಾವುದೇ ತೊಂದರೆ ಆಗುವುದಿಲ್ಲ. ಮೊಬೈಲ್ ಬೀಳುವಾಗ ಕೇಸ್‍ನಲ್ಲಿರುವ ಸೆನ್ಸರ್ ಅಲರ್ಟ್ ಆಗಿ ಸ್ಪ್ರಿಂಗ್ ಓಪನ್ ಆಗುವಂತೆ ಮಾಡುತ್ತದೆ. ಆಗ ಸ್ಪ್ರಿಂಗ್ ಓಪನ್ ಆಗಿ ಮೊಬೈಲನ್ನು ರಕ್ಷಿಸುತ್ತದೆ.