Tag: ಇಂಜೆಕ್ಷನ್

  • ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು – ನರ್ಸ್‌ ವಿರುದ್ಧ ಕುಟುಂಬಸ್ಥರ ಆಕ್ರೋಶ

    ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು – ನರ್ಸ್‌ ವಿರುದ್ಧ ಕುಟುಂಬಸ್ಥರ ಆಕ್ರೋಶ

    ತಿರುವನಂತಪುರಂ: ಜ್ವರದಿಂದ ಬಳಲುತ್ತಿದ್ದ 45 ವರ್ಷದ ಮಹಿಳೆಯೊಬ್ಬರಿಗೆ ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ ಸಾವನ್ನಪ್ಪಿರುವ ಘಟನೆ ಕೇರಳದ (Kerala) ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ( Kozhikode Medical College) ನಡೆದಿದೆ.

    ಮೃತರನ್ನು ಕೋಯಿಕ್ಕೋಡ್‍ನ ಕೂಡರಂಜಿ ನಿವಾಸಿ ಸಿಂಧು ಎಂದು ಗುರುತಿಸಲಾಗಿದೆ. ನರ್ಸ್ ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಸಿಂಧು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಗುರುವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿಂಧು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ ಚೆನ್ನಾಗಿಯೇ ಇದ್ದರು, ಆದರೆ ನರ್ಸ್ ತಪ್ಪಾದ ಇಂಜೆಕ್ಷನ್ ನೀಡಿದ ಬಳಿಕ ಅವರ ಆರೋಗ್ಯ ಹದಗೆಡಲು ಪ್ರಾರಂಭವಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಮೃತ ಸಿಂಧು ಪತಿ ರಘು ಅವರು, ಇದು ನರ್ಸ್‍ನ ತಪ್ಪು, ಕೊನೆ ಕ್ಷಣದಲ್ಲಿ ನನ್ನ ಹೆಂಡತಿ ಬಹಳ ಬೆವರುತ್ತಿದ್ದಳು. ಇಂಜೆಕ್ಷನ್ ನೀಡಿದ ಬಳಿಕ ನಾನು ಆರೋಗ್ಯವಾಗಿಲ್ಲ ಎಂದು ಹೇಳುತ್ತಿದ್ದಳು. ಹೀಗಾಗಿ ನರ್ಸ್‍ಗೆ ಕರೆ ಮಾಡಿ ಕೇಳಿದಾಗ ಭಯ ಪಡುವ ಅಗತ್ಯವಿಲ್ಲ. ಅವರ ಆರೋಗ್ಯ ಸ್ಥಿರವಾಗಿಯೇ ಇದೆ ಎಂದು ಹೇಳಿದ್ದರು. ಆದರೆ ಇಂಜೆಕ್ಷನ್ ನೀಡಿದ ಬಳಿಕ ನನ್ನ ಪತ್ನಿ ಆರೋಗ್ಯ ಹದಗೆಡಲು ಆರಂಭವಾಯಿತು. ನನ್ನ ಮಡಿಲಿನಲ್ಲಿಯೇ ನನ್ನ ಪತ್ನಿ ಪ್ರಾಣಬಿಟ್ಟಿದ್ದಾಳೆ. ನಿನ್ನೆ ಬಳಸಿದ್ದ ಔಷಧವನ್ನೇ ಇಂದು ಕೂಡ ಆಸ್ಪತ್ರೆಯಲ್ಲಿ ಬಳಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಂಡೇ ಮಠದ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಲೋಕಲ್ ಸ್ವಾಮೀಜಿ ಕೈವಾಡ!

    ಆದರೆ ಆಸ್ಪತ್ರೆ ಮಾತ್ರ ಕುಟುಂಬಸ್ಥರ ಆರೋಪವನ್ನು ನಿರಾಕರಿಸಿದ್ದು, ಮಹಿಳೆ ಅಚಾನಕ್ ಆಗಿ ಸಾವನ್ನಪ್ಪಿರವ ಬಗ್ಗೆ ಸ್ಪಷ್ಟವಾದ ಮಾಹಿತಿ ತಿಳಿದುಬಂದಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಈ ಬಗ್ಗೆ ಮೃತ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಘಟನೆ ಸಂಬಂಧ ಸಂಪೂರ್ಣ ತನಿಖೆ ನಡೆಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಆದೇಶಿಸಿದ್ದಾರೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    Live Tv
    [brid partner=56869869 player=32851 video=960834 autoplay=true]

  • 16 ಕೋಟಿ ಇಂಜೆಕ್ಷನ್ ಕೊಟ್ರೆ ಉಳಿಯುತ್ತಂತೆ ಮಗು – ಕಂದನನ್ನು ಉಳಿಸಿಕೊಡುವಂತೆ ಅಂಗಲಾಚಿದ ದಂಪತಿ

    16 ಕೋಟಿ ಇಂಜೆಕ್ಷನ್ ಕೊಟ್ರೆ ಉಳಿಯುತ್ತಂತೆ ಮಗು – ಕಂದನನ್ನು ಉಳಿಸಿಕೊಡುವಂತೆ ಅಂಗಲಾಚಿದ ದಂಪತಿ

    – ಮಗುವನ್ನ ಉಳಿಸಲು ಸಹಾಯ ಬೇಡುತ್ತಿರುವ ಪೋಷಕರು

    ರಾಯಚೂರು: ಇಲ್ಲಿನ ವಿರೇಶ್- ಶ್ವೇತಾ ದಂಪತಿಯ ಒಂದು ವರ್ಷದ ಮಗು ಸಾತ್ವಿಕ್ ನಂದನ್ ಸ್ಪೈನಲ್‌ ಮಸ್ಕೂಲರ್ ಆಟ್ರೋಪಿ ಟೈಪ್-1 ಕಾಯಿಲೆಯಿಂದ ಬಳಲುತ್ತಿದ್ದು, ಸಹಾಯಕ್ಕಾಗಿ ಪೋಷಕರು ಅಂಗಲಾಚುತ್ತಿದ್ದಾರೆ.

    ಮಗು ಒಂದು ತಿಂಗಳು ಇದ್ದಾಗಲೇ ಸ್ಪೈನಲ್‌ ಮಸ್ಕೂಲರ್ ಆಟ್ರೋಪಿ ಟೈಪ್-1 ಮಾರಣಾಂತಿಕ ಕಾಯಿಲೆ ಕಾಣಿಸಿಕೊಂಡಿದೆ. ಮೊದಲು ನ್ಯುಮೋನಿಯಾ ಅಂದುಕೊಂಡಿದ್ದ ಇವರು ಹತ್ತಾರು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಇದೀಗ ಈ ಕಾಯಿಲೆಯಿಂದ ಗುಣಪಡಿಸಲು ವೈದ್ಯರು ಔಷಧ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಕಾಂಗ್ರೆಸ್‌ ಮುಖಂಡನ ಕೂದಲು ಹಿಡಿದು ಜೀಪಿನೊಳಗೆ ದಬ್ಬಿದ ಪೊಲೀಸರು

    16 ಕೋಟಿ ರೂ. ಮೌಲ್ಯದ ಜೋಲ್ಗಸ್ಮಾ ಎಂಬ ಇಂಜೆಕ್ಷನ್ ಕೊಡಿಸಬೇಕು. ಇದೊಂದೆ ಮಗುವಿನ ಕಾಯಿಲೆಗೆ ಚಿಕಿತ್ಸೆ. ಇಲ್ಲದಿದ್ದರೆ ಮಗು ಬದುಕುಳಿಯುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಈ ಚುಚ್ಚುಮದ್ದು ಭಾರತದಲ್ಲಿ ಸಿಗೋದಿಲ್ಲ, ಅಮೆರಿಕದಿಂದ ತರಿಸಬೇಕು. ಆದರೆ ತಿಂಗಳಿಗೆ 8 ಸಾವಿರ ವೇತನ ಪಡೆಯುವ ತಂದೆ ವಿರೇಶ್ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಿ, ಸಾಲ ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈಗಾಗಲೇ ಸುಮಾರು 5 ಲಕ್ಷ ರೂ. ಖರ್ಚಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

    ಇದೇ ಜುಲೈ 26ಕ್ಕೆ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ ಬರುತ್ತಿದ್ದು, ಮಗುವನ್ನು ಉಳಿಸಿಕೊಡುವಂತೆ ಬೇಡಿಕೊಳ್ಳುತ್ತಿದ್ದಾರೆ. ಚುಚ್ಚುಮದ್ದಿನ ಬೆಲೆ 16 ಕೋಟಿ ರೂ. ಇದ್ದು, ಹೆಚ್ಚುವರಿ ತೆರಿಗೆ ಸೇರಿ 18 ಕೋಟಿ ರೂ. ಆಗಲಿದೆ. ಸಹೃದಯರಾದ ಕನ್ನಡಿಗರು ಹಾಗೂ ಸರ್ಕಾರ ಕೂಡಲೇ ನಮ್ಮ ನೆರವಿಗೆ ಬಂದು ಈ ಔಷಧ ಕೊಡಿಸಿ ಎಂದು ಪೋಷಕರು ಬೇಡಿಕೊಳ್ಳುತ್ತಿದ್ದಾರೆ ಎಂದು ಕೋರಿದ್ದಾರೆ.

    Name – Veeresh
    A/c- 18132200114731
    IFSC – CNRB0011813
    Canara Bank. Deosugur 584170. Dist Raichur. Tq Raichur
    PH no – 9036695059

    Live Tv
    [brid partner=56869869 player=32851 video=960834 autoplay=true]

  • ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ 14 ಮಕ್ಕಳು ಅಸ್ವಸ್ಥ

    ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ 14 ಮಕ್ಕಳು ಅಸ್ವಸ್ಥ

    ಶಿವಮೊಗ್ಗ: ಬೇರೆ-ಬೇರೆ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 14 ಮಕ್ಕಳು ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ಪಡೆದ ನಂತರ ಅಸ್ವಸ್ಥಗೊಂಡ ಘಟನೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆ್ಯಂಟಿ-ಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ-ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ 4 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಇದನ್ನೂ ಓದಿ: ಸ್ಟಾರ್ ನಟರ ಸಿನಿಮಾ ನಿರ್ಮಾಣ ಮಾಡಿದ್ದ ಖ್ಯಾತ ನಿರ್ಮಾಪಕನ ಕಾರು ಅಪಘಾತ 

    ಘಟನೆ ನಂತರ ಮಕ್ಕಳ ಪೋಷಕರು, ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಪೋಷಕರು ಹಾಗೂ ವೈದ್ಯರಿಂದ ಮಾಹಿತಿ ಪಡೆದರು.

    ಅಲ್ಲದೇ ಘಟನೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದರು. ಪೋಷಕರು ಭಯಪಡುವ ಅಗತ್ಯವಿಲ್ಲ. ಯಾವುದೇ ಮಕ್ಕಳಿಗೂ ಪ್ರಾಣಾಪಾಯ ಇಲ್ಲ. ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಸಮಸ್ಯೆಯಿಂದ ಕೋವಿಡ್‌ ಕೇಸ್‌ ಕಡಿಮೆ ದಾಖಲು – ಇಂದು 133 ಮಂದಿಗೆ ಸೋಂಕು

    Live Tv

  • 16 ಕೋಟಿ ಬೆಲೆಯ ಇಂಜೆಕ್ಷನ್‍ಗೆ ಬಡದಂಪತಿಯ ಪರದಾಟ

    16 ಕೋಟಿ ಬೆಲೆಯ ಇಂಜೆಕ್ಷನ್‍ಗೆ ಬಡದಂಪತಿಯ ಪರದಾಟ

    ಚಿಕ್ಕಬಳ್ಳಾಪುರ: ಹೆತ್ತ ಮಗನನ್ನು ಉಳಿಸಿಕೊಳ್ಳೋಕೆ 16 ಕೋಟಿ ದುಬಾರಿ ಬೆಲೆಯ ಇಂಜೆಕ್ಷನ್‍ಗೆ ಬಡದಂಪತಿ ಪರದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರ ಬಳಿ ಧನಸಹಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಲ್ಲಸಂದ್ರ ಗ್ರಾಮದ ದಂಪತಿ ನಂದೀಶ್ ಹಾಗೂ ಸೌಮ್ಯಲತಾ ದಂಪತಿಯ ಮಗ ಯಶ್ವಿಕ್‍ಗೆ ಎಸ್‍ಎಂಎ ಖಾಯಿಲೆ ಆವರಿಸಿದೆ. ಎಸ್‍ಎಂಎ ಅಂದರೆ ಸ್ಪೈನಲ್ ಮಸ್ಕುಲರ್ ಅಟ್ರೋಫಿ ಇದು ದೇಹದ ಸ್ನಾಯುಗಳನ್ನ ದುರ್ಬಲಗೊಳಿಸುವ ನರಸಂಬಂಧಿತ ಕಾಯಿಲೆಯಾಗಿದೆ. ಇದನ್ನೂ ಓದಿ: ಕಿರಿಕ್ ಪ್ರಶ್ನೆಯನ್ನು ಕೇಳಿದ ಅಭಿಮಾನಿಯ ಬಾಯಿ ಮುಚ್ಚಿಸಿದ ಸಮಂತಾ

    1000 ಮಕ್ಕಳಲ್ಲಿ ಒಬ್ಬರಿಗೆ ಈ ಖಾಯಿಲೆ ತಗಲುವ ಸಾಧ್ಯತೆಯಿದ್ದು, ಈ ಕಾಯಿಲೆಗೆ ಗುರಿಯಾದ ಮಗು 2 ವರ್ಷಕ್ಕಿಂತ ಹೆಚ್ಚು ಬದುಕುವುದಿಲ್ಲ ಅಂತ ಹೇಳಲಾಗುತ್ತೆ. ಇನ್ನೂ ಈ ಖಾಯಿಲೆ ಗುಣಪಡಿಸಲು ಇರುವ ಏಕೈಕ ಔಷಧಿ ಝೊಲ್ಗೆನ್ಸಾ ಇಂಜೆಕ್ಷನ್. ಇದು ಅಮೇರಿಕಾದಲ್ಲಿ ಮಾತ್ರ ಲಭ್ಯವಿದ್ದು, ಒಂದು ಇಂಜೆಕ್ಷನ್‍ನ ಬೆಲೆ 16 ಕೋಟಿ ರೂಪಾಯಿ ಇದೆ. ಇದನ್ನೂ ಓದಿ: ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ

    ಗ್ರಾಮ ಪಂಚಾಯತಿ ಕರ ವಸೂಲಿಗಾರನಾಗಿರುವ ಯಶ್ವಿಕ್ ತಂದೆ ತಾಯಿಗೆ ಈ ಹಣ ಭರಿಸಲು ಶಕ್ತರಾಗಿಲ್ಲ. ಹೀಗಾಗಿ ಸಾರ್ವಜನಿಕರು ಸಹಾಯ ಮಾಡುವಂತೆ ಬಡ ದಂಪತಿ ಅಂಗಲಾಚುತ್ತಿದ್ದಾರೆ. ಅವರ ಮೊಬೈಲ್ ಸಂಖ್ಯೆ 9148495959 ಆಗಿದ್ದು ಯುಪಿಐ ಮೂಲಕ ವರ್ಗಾವಣೆ ಮಾಡಬಹುದಾಗಿದೆ.

  • ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿಗೆ ಸಹಾಯ ಕೋರಿದ ಮಂಜು

    ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿಗೆ ಸಹಾಯ ಕೋರಿದ ಮಂಜು

    ಬೆಂಗಳೂರು: ಬಿಗ್‍ಬಾಸ್ ಸೀಸನ್-8ರ ವಿಜೇತ ಮಂಜುಪಾವಗಡ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಜೀವ ಉಳಿಸಲು ಸೋಶಿಯಲ್ ಮೀಡಿಯಾದ ಮೂಲಕ ಸಹಾಯ ಮಾಡಲು ಕೋರಿದ್ದಾರೆ. ಇದನ್ನೂ ಓದಿ: ಆಪಲ್ ಉದ್ಯೋಗಿಗಳ ವಿರುದ್ಧ ಗರಂ – ಖಾರವಾದ ಪತ್ರ ಬರೆದು ಎಚ್ಚರಿಕೆ ನೀಡಿದ ಟಿಮ್ ಕುಕ್

    manju

    ಈ ಕುರಿತಂತೆ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ವೀಡಿಯೋ ಶೇರ್ ಮಾಡಿರುವ ಮಂಜು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನವೀನ್ ಹಾಗೂ ಜ್ಯೋತಿ ದಂಪತಿಯ ಮಗು ಜನೀಶ್, ಅಪರೂಪದ ಕಾಯಿಲೆಯಿಂದ ಬಳಲುತ್ತಿದೆ. ಮಗುವನ್ನು ಗುಣಪಡಿಸಲು ನಮ್ಮ ದೇಶದಲ್ಲಿ ಯಾವುದೇ ಚಿಕಿತ್ಸೆಗಳಿಲ್ಲ. ಚಿಕಿತ್ಸೆ ಕೊಡಿಸಲು ಬೇರೆ ದೇಶದಿಂದ ಒಂದು ಇಂಜೆಕ್ಷನ್ ತರಿಸಲು 16 ಕೋಟಿಯಾಗುತ್ತದೆ. ಈಗಾಗಲೇ 8 ಕೋಟಿ ರೂ ಸಂಗ್ರಹಿಸಲಾಗಿದೆ. ಆದರೆ ಇನ್ನೂ 3 ತಿಂಗಳ ಒಳಗೆ ಮತ್ತೆ 8 ಕೋಟಿ ಬೇಕಾಗಿದೆ. ಹಾಗಾಗಿ ಆದಷ್ಟು ಬೇಗ ನಿಮ್ಮ ಕೈಯಲ್ಲಿ ಆದಷ್ಟು ಹಣ ಸಹಾಯ ಮಾಡಿ ಹಾಗೂ ನಮ್ಮ ಕೈಯಲ್ಲಿ ಕೂಡ ಆದಷ್ಟು ಸಹಾಯ ಮಾಡಿ ಆ ಮಗುವನ್ನು ಉಳಿಸಿಕೊಳ್ಳೋಣ ಎಂದು ಕೈಮುಗಿದು ಬೇಡಿಕೊಂಡಿದ್ದಾರೆ. ಮಗು ತುಂಬಾ ಕಷ್ಟದಲ್ಲಿದ್ದು, ಅದನ್ನು ನೋಡಲು ಸಹ ಸಾಧ್ಯವಾಗುತ್ತಿಲ್ಲ. ಆ ಮಗುವನ್ನು ಉಳಿಸಿ, ಮಗುವಿನ ಮುಖದಲ್ಲಿ ನಗುವನ್ನು ತರಿಸಿ ಎಂದಿದ್ದಾರೆ.

    manju

    ಮಗುವಿನ ಪೋಷಕರು ಮಗುವಿಗೆ 17 ತಿಂಗಳಾಗಿದ್ದರೂ ಕತ್ತು ನಿಂತಿಲ್ಲ, ಪೈಪ್ ಮೂಲಕವೇ ಊಟ ನೀಡುತ್ತಿದ್ದೇವೆ. ಈ ಕಾಯಿಲೆ ಬಂದರೆ ಮಗು ಉಳಿಯುವುದು ಬಹಳ ಕಷ್ಟ. ಕನಿಷ್ಠ 2 ವರ್ಷ ಬದುಕಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಇದು ನಿಮ್ಮ ಮನೆಯ ಮಗು ಅಂದುಕೊಂಡು ಮರು ಜನ್ಮ ನೀಡಿ. ಕಾಲಾವಕಾಶ ಬಹಳ ಕಡಿಮೆ ಇದೆ. ದಯವಿಟ್ಟು ಮಗುವನ್ನು ಉಳಿಸಿಕೊಡಿ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಕೊರೊನಾ ಇಳಿಮುಖ – ಉಡುಪಿ ಕೃಷ್ಣಮಠದಲ್ಲಿ ಸಾರ್ವಜನಿಕ ಅನ್ನಪ್ರಸಾದ ಸೇವೆ ಆರಂಭ

    ಮಗುವಿನ ತಂದೆ ನವೀನ್‍ರನ್ನು ಪರಿಚಯ ಮಾಡಿಕೊಟ್ಟ ಮಂಜು 8 ಲಕ್ಷ ಜನ 100ರೂ. ಎಂದು ಸಹಾಯ ಮಾಡಿದರೂ 8 ಕೋಟಿಯಾಗುತ್ತದೆ. 8 ಕೋಟಿ ಈಗಾಗಲೇ ದೊರೆತಿದ್ದು, ಇನ್ನೂ 8 ಕೋಟಿ ಬೇಕಾಗಿದೆ ದಯವಿಟ್ಟು ಎಲ್ಲರೂ ಸಪೋರ್ಟ್ ಮಾಡಿ ಎಂದು ಕೇಳಿ ಕೊಂಡಿದ್ದಾರೆ.

  • ರೋಗಿಗೆ ಇಂಜೆಕ್ಷನ್ ನೀಡಿದ ಸೆಕ್ಯೂರಿಟಿ ಗಾರ್ಡ್

    ರೋಗಿಗೆ ಇಂಜೆಕ್ಷನ್ ನೀಡಿದ ಸೆಕ್ಯೂರಿಟಿ ಗಾರ್ಡ್

    ಭುವನೇಶ್ವರ: ಒಡಿಶಾದ ಅಂಗುಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ರೋಗಿಗಳಿಗೆ ಇಂಜೆಕ್ಷನ್ ನೀಡುತ್ತಿರುವ ವಿಚಾರ ಬಹಿರಂಗಗೊಂಡಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಈ ವೀಡಿಯೋವನ್ನು ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಯ ಸಂಬಂಧಿಯೊಬ್ಬರು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸಣ್ಣ ಅಪಘಾತದಿಂದಾಗಿ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವೈದ್ಯರ ಬದಲಾಗಿ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್ ನೀಡಿದ್ದಾರೆ. ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಅನ್ನಲು ಸಂಬರ್ಗಿ ಬಳಿ ದಾಖಲೆ ಏನಿದೆ..?: ಚಂದ್ರಚೂಡ್

    ಇನ್ನೂ ವೈದ್ಯರು ಮತ್ತು ನರ್ಸ್ ಏಕೆ ರೋಗಿಗೆ ಇಂಜೆಕ್ಷನ್ ನೀಡಲಿಲ್ಲ ಎಂಬ ಪ್ರಶ್ನೆಗೆ, ಸಹಾಯಕ ಮುಖ್ಯ ವೈದ್ಯಕೀಯ ಅಧೀಕ್ಷಕ ಮಾನಸ್ ರಂಜನ್ ಬಿಸ್ವಾಲ್ ನಾವು ಈ ಬಗ್ಗೆ ವಿಚಾರಣೆ ಆರಂಭಿಸಿದ್ದೇವೆ ಮತ್ತು ತನಿಖೆಯ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಅರವಿಂದ್ ವೀಡಿಯೋ ಮಾಡಿ ಅದನ್ನು ಟ್ರೋಲಿಗನಿಗೆ ಸಂಬರ್ಗಿ ಕೊಟ್ಟ: ಚಂದ್ರಚೂಡ್

    ಈ ಮುನ್ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರದೀಪ್ತ ಕುಮಾರ್ ಮೊಹಾಪಾತ್ರ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ಸಹಾಯ ಮಾಡಲು ಆರೋಗ್ಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗುವುದಿಲ್ಲ ಎಂದು ನಿರ್ದೇಶಿಸಿದ್ದರು.

  • ಬ್ಲ್ಯಾಕ್ ಫಂಗಸ್ ಔಷಧಿಯಿಂದ ಅಡ್ಡಪರಿಣಾಮ – ಇಂಜೆಕ್ಷನ್ ಪಡೆಯಲು ಸೋಂಕಿತರ ನಿರಾಕರಣೆ

    ಬ್ಲ್ಯಾಕ್ ಫಂಗಸ್ ಔಷಧಿಯಿಂದ ಅಡ್ಡಪರಿಣಾಮ – ಇಂಜೆಕ್ಷನ್ ಪಡೆಯಲು ಸೋಂಕಿತರ ನಿರಾಕರಣೆ

    – ರಿಮ್ಸ್ ಆಸ್ಪತ್ರೆಯಲ್ಲಿನ ಸೋಂಕಿತರಿಗೆ ಕಾಣಿಸಿಕೊಂಡ ಅಡ್ಡಪರಿಣಾಮ
    – ಇಂಜೆಕ್ಷನ್ ಪಡೆದ ಬಳಿಕ ಜ್ವರ, ಮೈಕೈ ನೋವು, ವಾಂತಿ

    ರಾಯಚೂರು: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಅಡ್ಡಪರಿಣಾಮಗಳಿಗೆ ಹೆದರಿ ಔಷಧಿಯನ್ನೇ ನಿರಾಕರಿಸುತ್ತಿದ್ದಾರೆ.

    ಸರ್ಕಾರ ಸರಬರಾಜು ಮಾಡುತ್ತಿರುವ ಅಂಪೋಟೆರಿಸಿನ್ ಬಿ ಇಂಜೆಕ್ಷನ್ ತಗೆದುಕೊಳ್ಳಲು ಹೆದರಿದ್ದಾರೆ. ಮೊದಲೇ ಸೋಂಕಿನ ನೋವು ಇರುವಾಗ ಔಷಧಿಯೂ ನೋವು ಕೊಡುತ್ತಿರುವುದಕ್ಕೆ ಸೋಂಕಿತರು ಈ ಮೊದಲು ಕೊಡುತ್ತಿದ್ದ ಔಷಧಿಯನ್ನೇ ಕೊಡಿ ಅಂತ ಅಂಗಲಾಚುತ್ತಿದ್ದಾರೆ.

    ಕೋವಿಡ್ ಬಳಿಕ ಅತೀಯಾದ ಸ್ಟೆರೈಡ್ ಬಳಕೆ ಸೇರಿ ಬೇರೆ, ಬೇರೆ ಕಾರಣಕ್ಕೆ ಕೆಲವರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕು ಈಗ ಸರ್ಕಾರಕ್ಕೂ ದೊಡ್ಡ ತಲೆನೋವಾಗಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಸರ್ಕಾರ ಜಿಲ್ಲೆಗಳಿಗೆ ಸರಬರಾಜು ಮಾಡುತ್ತಿರುವ ಅಂಪೋಟೆರಿಸಿನ್ ಬಿ ಇಂಜೆಕ್ಷನ್ ಸೋಂಕಿತರ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಇಂಜೆಕ್ಷನ್ ಪಡೆದ ಬಳಿಕ ತೀವ್ರ ಜ್ವರ, ವಾಂತಿ, ಮೈಕೈ ನೋವಿನ ಸಮಸ್ಯೆಗೆ ಒಳಗಾಗುತ್ತಿದ್ದು, ಇಂಜೆಕ್ಷನ್ ಬದಲಿಸುವಂತೆ ಒತ್ತಾಯಿಸಿದ್ದಾರೆ.

    ಜಿಲ್ಲೆಗೆ ಇತ್ತೀಚಿಗೆ ಬಂದಿರುವ 2,000 ಅಂಪೋಟೆರಿಸಿನ್ ಬಿ ಔಷಧಿ ಅಡ್ಡ ಪರಿಣಾಮಕ್ಕೆ ಕಾರಣವಾಗಿದೆ. ಹೀಗಾಗಿ ಮೊದಲು ನೀಡುತ್ತಿದ್ದ, ಔಷಧಿಯನ್ನೇ ನೀಡುವಂತೆ ಸೋಂಕಿತರು ಕೇಳಿಕೊಳ್ಳುತ್ತಿದ್ದಾರೆ. ಸದ್ಯ ನೀಡುತ್ತಿರುವ ಇಂಜೆಕ್ಷನ್ ಬೇಡ ಎಂದು ಪಟ್ಟು ಹಿಡಿದಿದ್ದಾರೆ. ಅಂಪೋಟೆರಿಸಿನ್ ಬಿ, ಸ್ಟ್ರಾಂಗ್ ಔಷಧಿ ಆಗಿದ್ದು ನೋವು ಕಾಣಿಸಿಕೊಳ್ಳುತ್ತಿದೆ. ಜೊತೆಗೆ ಸೋಂಕಿತರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ವತಃ ವೈದ್ಯರಾಗಿರುವ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದ್ದಾರೆ.

    ಜಿಲ್ಲೆಯಲ್ಲಿ 100 ಜನಕ್ಕೆ ಸೋಂಕು ತಗುಲಿದ್ದು 16 ಜನ ಗುಣಮುಖರಾಗಿದ್ದಾರೆ. 70ಕ್ಕೂ ಹೆಚ್ಚು ಜನರಿಗೆ ಮೊದಲ ಹಂತದ ಶಸ್ತ್ರಚಿಕಿತ್ಸೆಯಾಗಿದೆ. 20 ಜನರಿಗೆ ಎರಡನೇ ಬಾರಿ ಶಸ್ತ್ರಚಿಕಿತ್ಸೆಯಾಗಿದೆ. ಆದರೆ ಶಸ್ತ್ರಚಿಕಿತ್ಸೆ ಬಳಿಕವೂ ಇಂಜೆಕ್ಷನ್ ಪಡೆಯಬೇಕಿದ್ದು, ಔಷಧಿ ಅಡ್ಡಪರಿಣಾಮ ಬೀರುತ್ತಿರುವುದರಿಂದ ಸೋಂಕಿತರು ನೋವಿನ ಜೊತೆ ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ ಒಬ್ಬೊಬ್ಬರನ್ನ ಮನವೊಲಿಸಿ ಇಂಜೆಕ್ಷನ್ ನೀಡಬೇಕಾದ ಅನಿವಾರ್ಯತೆ ವೈದ್ಯರಿಗೆ ಎದುರಾಗಿದೆ. ಆದರೆ ಅತಿಯಾದ ನೋವು, ಜ್ವರಕ್ಕೆ ಹೆದರಿರುವ ಸೋಂಕಿತರು ಇಂಜೆಕ್ಷನ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೋಂಕಿತರ ಸಮಸ್ಯೆ ನಮ್ಮ ಗಮನಕ್ಕೆ ಬಂದಿಲ್ಲ. ಸಮಸ್ಯೆಗೆ ಕಾರಣ ತಿಳಿದುಕೊಳ್ಳುವುದಾಗಿ ಹೇಳಿದ್ದಾರೆ.

    ಸೋಂಕಿತರ ಸಮಸ್ಯೆ ಅರ್ಥವಾದರೂ ಏನೂ ಮಾಡದ ಸ್ಥಿತಿಯಲ್ಲಿ ವೈದ್ಯರಿದ್ದಾರೆ. ಸರ್ಕಾರ ಸರಬರಾಜು ಮಾಡುತ್ತಿರುವ ಔಷಧಿಯನ್ನ ನೀಡಲೇಬೇಕಾದ ಪರಿಸ್ಥಿತಿಯಿದೆ. ಒಂದು ರೋಗ ಗುಣಪಡಿಸಲು ಇನ್ನೊಂದು ನೋವಿನಿಂದ ಸೋಂಕಿತರು ಬಳಲುವಂತಾಗಿದೆ. ಈಗಲಾದರೂ ಸರ್ಕಾರ ಸೋಂಕಿತರಿಗಾಗುತ್ತಿರುವ ಅಡ್ಡಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಿದೆ. ಇದನ್ನೂ ಓದಿ: ಕಸಾಯಿಖಾನೆಗೆ ಕಳ್ಳಸಾಗಣೆಯಾಗುತ್ತಿದ್ದ 18 ಗೋವುಗಳ ರಕ್ಷಣೆ

  • ಕೊರೊನಾ ಲಸಿಕೆ ಪಡೆದಂತೆ ನಟಿಸಿದ್ರಾ ನಟಿ ನಯನತಾರಾ..?

    ಕೊರೊನಾ ಲಸಿಕೆ ಪಡೆದಂತೆ ನಟಿಸಿದ್ರಾ ನಟಿ ನಯನತಾರಾ..?

    – ಅಭಿಮಾನಿಗಳು ಹೇಳೋದೇನು..?

    ಚೆನ್ನೈ: ಕಾಲಿವುಡ್ ನಟಿ ನಯನತಾರಾ ಇತ್ತೀಚೆಗಷ್ಟೇ ಕೊರೊನಾ ಲಸಿಕೆ ಪಡೆದಕೊಂಡಿದ್ದರು. ಆದರೆ ಈ ವಿಚಾರ ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ನಟಿ ನಯನತಾರಾ ಲಸಿಕೆ ನೀಡುತ್ತಿದ್ದ ನರ್ಸ್ ಕೈಯಲ್ಲಿ ಸಿರಿಂಜ್ ಇಲ್ಲ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

    ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸಾರ್ವಜನಿಕರು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಸೆಲೆಬ್ರಿಟಿಗಳು ಕೂಡ ಲಸಿಕೆ ಪಡೆಯುವ ಮೂಲಕ ಇನ್ನೂ ಲಸಿಕೆ ಸ್ವೀಕರಿಸದವರಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಪಡೆಯುವಂತೆ ಎಚ್ಚರಿಕೆಯ ಸಂದೇಶ ನೀಡುತ್ತಿದ್ದಾರೆ.

    ಸದ್ಯ ಇತ್ತೀಚೆಗಷ್ಟೇ ಕಾಲಿವುಡ್ ನಟಿ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಹಾಗೂ ಅವರ ಬಾಯ್ ಫ್ರೆಂಡ್ ವಿಘ್ನೇಶ್ ಶಿವನ್ ಕೂಡ ಕೊರೊನಾ ಲಸಿಕೆ ಪಡೆದುಕೊಂಡಿದ್ದರು. ಈ ಕುರಿತ ಕೆಲವು ಫೋಟೋವನ್ನು ವಿಘ್ನೇಶ್ ಶಿವನ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಫೋಟೋ ವೈರಲ್ ಆಗುತ್ತಿದ್ದಂತೆಯೇ ವಿಘ್ನೇಶ್ ಶಿವನ್ ಫೋಟೋದಲ್ಲಿ ಕಾಣಿಸುತ್ತಿರುವ ಸಿರಿಂಜ್, ನಯನತಾರಾ ಫೋಟೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿಲ್ಲ ಎಂದು ಅನೇಕ ಮಂದಿ ಕಾಮೆಂಟ್ ಮಾಡುತ್ತಿದ್ದಾರೆ. ಹೀಗಾಗಿ ಈ ವಿಚಾರ ಇದೀಗ ಎಲ್ಲರಿಗೂ ಅನುಮಾನ ಮೂಡಿಸಿದೆ.

    ಆದರೆ ಈ ಎಲ್ಲದರ ಮಧ್ಯೆ ನಯನತಾರಾ ಅಭಿಮಾನಿಗಳು ಮಾತ್ರ, ಆ ಫೋಟೋವನ್ನು ಝೂಮ್ ಮಾಡಿ ನೋಡಿದಾಗ ಅದರಲ್ಲಿ ಚಿಕ್ಕ ಸೂಜಿ ಕಾಣಿಸುತ್ತಿದ್ದು, ಅದು ನರ್ಸ್ ಕೈಯಲ್ಲಿ ಅವಿತುಕೊಂಡಿದೆ. ಅಲ್ಲದೆ ವಿಘ್ನೇಶ್ ಶಿವನ್ ಫೋಟೋವನ್ನು ಮತ್ತೊಂದು ಬದಿಯಿಂದ ಕ್ಲಿಕ್ಕಿಸಿರುವ ಕಾರಣ ಸಿರಿಂಜ್ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಹೇಳುವ ಮೂಲಕ ತಮ್ಮ ನೆಚ್ಚಿನ ನಟಿ ಪರವಾಗಿ ವಾದ ಮಂಡಸಿದ್ದಾರೆ.

     

    View this post on Instagram

     

    A post shared by Vignesh Shivan (@wikkiofficial)

  • ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟ- ಇಬ್ಬರು ಆರೋಪಿಗಳ ಬಂಧನ

    ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟ- ಇಬ್ಬರು ಆರೋಪಿಗಳ ಬಂಧನ

    ಬೀದರ್: ರೆಮಿಡಿಸಿವರ್ ಇಂಜೆಕ್ಷನ್ ದುಪ್ಪಟ್ಟು ಹಣಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆ ಗಡಿ ಜಿಲ್ಲೆ ಬೀದರ್ ನಲ್ಲಿ ದಿನೇ ದಿನೇ ಜೋರಾಗುತ್ತಿದೆ.

    ಅಭಿಷೇಕ್ ಹಾಗೂ ಆಸಿಫ್ ಅಹ್ಮದ್ ಬಂಧಿತ ಆರೋಪಿಗಳಾಗಿದ್ದಾರೆ. ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಇವರನ್ನು ಇಂದು ಬಂಧಿಸಲಾಗಿದೆ.

    ಬೀದರ್ ಬ್ರೀಮ್ಸ್ ಆಸ್ಪತ್ರೆಯ ಬಳಿ ಅಕ್ರಮವಾಗಿ ರೆಮಿಡಿಸಿವರ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಬೀದರ್ ಬ್ರೀಮ್ಸ್ ಆಸ್ಪತ್ರೆ ಬಳಿ ನ್ಯೂಟೌನ್ ಪೊಲೀಸರು ದಾಳಿ ಮಾಡಿ ಇಬ್ಬರು ಬಂಧಿಸಿದ್ದಾರೆ. ಆರೋಪಿಗಳು ರೆಮಿಡಿಸಿವರ್ ಇಂಜೆಕ್ಷನ್ 20 ರಿಂದ 25 ಸಾವಿರಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು.

    ನಿನ್ನೆ ಕೂಡಾ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಇಂದು ಕೂಡಾ ನ್ಯೂ ಟೌನ್ ಪೊಲೀಸರು ಅಕ್ರಮವಾಗಿ ಕಾಳಸಂತೆಯಲ್ಲಿ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ನ್ಯೂ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಕೈಗೊಂಡಿದ್ದಾರೆ.

  • ವಾಕ್ಸಿನ್ ಪಡೆಯುವಾಗ ಮಮ್ಮಿ, ಮಮ್ಮಿ ಎಂದು ಕಿರುಚಾಡಿದ ಯುವತಿ

    ವಾಕ್ಸಿನ್ ಪಡೆಯುವಾಗ ಮಮ್ಮಿ, ಮಮ್ಮಿ ಎಂದು ಕಿರುಚಾಡಿದ ಯುವತಿ

    ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ರಾಜ್ಯ ಸರ್ಕಾರ ಕೋವಿಡ್ ವ್ಯಾಕ್ಸಿನ್ ನೀಡಲು ಆರಂಭಿಸಿದೆ. ಕೋವಿಡ್ ವ್ಯಾಕ್ಸಿನ್ ಸ್ವೀಕರಿಸಿದ ನಂತರ ಅನೇಕ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ವೀಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

    ಸದ್ಯ ಯುವತಿಯೊಬ್ಬಳು ಇಂಜೆಕ್ಷನ್‍ನನ್ನು ನೋಡಿದ ತಕ್ಷಣ ಗಾಬರಿಯಿಂದ ಕಿರುಚಾಡಿರುವ ವೀಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 45 ಸೆಕೆಂಡ್ ಇರುವ ಈ ವೀಡಿಯೋದಲ್ಲಿ, ಯುವತಿ ಲಸಿಕೆ ಪಡೆಯಲು ಕುರ್ಚಿ ಮೇಲೆ ಕುಳಿತುಕೊಳ್ಳುತ್ತಾಳೆ. ಈ ವೇಳೆ ನರ್ಸ್ ಕೈಯಲ್ಲಿ ಇಂಜೆಕ್ಷನ್ ಹಿಡಿದು ಹತ್ತಿರ ಬರುತ್ತಿದ್ದಂತೆ, ಯುವತಿ ಕುರ್ಚಿಯಿಂದ ಎದ್ದು, ಭಯದಿಂದ ನಡುಗುತ್ತಾ, ಒಂದು ನಿಮಿಷ ಇರಿ, ಒಂದು ನಿಮಿಷ ಇರಿ ಎಂದು ಕಿರುಚಾಡುತ್ತಾಳೆ.

    ಈ ವೇಳೆ ಆಕೆಯೊಂದಿಗೆ ಬಂದಿದ್ದ ವ್ಯಕ್ತಿ ಬಾಯಿಯನ್ನು ಮುಚ್ಚಿ ಯುವತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಾರೆ. ಆಗಲೂ ಯುವತಿ ಜೋರಾಗಿ ಚಿರಾಡಲು ಆರಂಭಿಸುತ್ತಾಳೆ. ಆಗ ನರ್ಸ್‍ಗೆ ಕೋಪಬರುತ್ತದೆ. ಹಾಸ್ಯವರೆಂದರೆ ಯುವತಿ ತನಗೆ ತಾನೇ ಭಯವನ್ನು ನಿಯಂತ್ರಿಸಿಕೊಳ್ಳಲು ‘ಮಮ್ಮಿ ಮಮ್ಮಿ’ ಎಂದು ಹೇಳಬೇಕಾ ಎಂದು ಕೇಳಿಕೊಳ್ಳುತ್ತಾಳೆ. ಆಗ ವೈದ್ಯರು ಏನನ್ನು ಹೇಳಬೇಡಿ. ಶಾಂತಿಯಿಂದ ಕುಳಿತುಕೊಳ್ಳಿ ಎಂದು ತಿಳಿಸುತ್ತಾರೆ. ತದ ನಂತರ ಕಣ್ಣು ಮುಚ್ಚಿಕೊಂಡು ಯುವತಿ ಇಂಜೆಕ್ಷನ್ ಸ್ವೀಕರಿಸಿದ್ದಾಳೆ.

    ಈ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಜನರಿಗೆ ಮನರಂಜನೆ ನೀಡುತ್ತಿದೆ. ಇನ್ನೂ ಕೆಲವರಂತೂ ಹುಡುಗಿ ಆಡಿದ್ದನ್ನು ನೋಡಿ ಗೇಲಿ ಮಾಡುತ್ತಿದ್ದಾರೆ.