ಲಕ್ನೋ: ಇಂಧನ ಸೋರಿಕೆಯಿಂದಾಗಿ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನವನ್ನ (IndiGo Flight) ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Lal Bahadur Shastri International Airport) ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹೊರಟಿದ್ದ ವಿಮಾನದಲ್ಲಿ ಇಂಧನ ಸೋರಿಕೆಯಾಗುತ್ತಿರುವುದು (Fuel Leak) ಕಂಡುಬಂದಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ. ಎಲ್ಲಾ 166 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವಾರಣಾಸಿ ಪೊಲೀಸರು ತಿಳಿಸಿದ್ದಾರೆ.
ಇನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ತಿಳಿಸಿದ್ದಾರೆ. ಉಳಿದ ವಿಮಾನಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲವೆಂದು ಹೇಳಿದ್ದಾರೆ.
ಗಾಂಧೀನಗರ: ಅಹಮದಾಬಾದ್ನಿಂದ (Ahmedabad) ದಿಯುಗೆ (Diu) ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕ್ ಆಫ್ ಆಗುವಾಗ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿಮಾನಯಾನವನ್ನು ಸ್ಥಗಿತಗೊಳಿಸಲಾಯಿತು.
ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 11 ಗಂಟೆಗೆ ಇಂಡಿಗೋ ವಿಮಾನ 6ಇ7966 60 ಪ್ರಯಾಣಿಕರನ್ನು ಹೊತ್ತು ದಿಯುಗೆ ಹೊರಟಿತ್ತು. ಆದರೆ ಟೇಕ್ ಆಫ್ ಆಗುವಾಗ ವಿಮಾನದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನಯಾನವನ್ನು ರದ್ದುಗೊಳಿಸಲಾಗಿದೆ.ಇದನ್ನೂ ಓದಿ: ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ
ಟೇಕ್ ಆಫ್ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಮೇಡೇ ಘೋಷಿಸಿದ ಪೈಲಟ್ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದರು. ವಿಮಾನದ ಕಾರ್ಯಾಚರಣೆಯನ್ನು ಪುನರಾರಂಭಿಸುವ ಮುನ್ನ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸೋಮವಾರ (ಜು.21) ಗೋವಾದಿಂದ ಇಂದೋರ್ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಪರಿಣಾಮ ವಿಮಾನವನ್ನು ಮತ್ತೆ ಗೋವಾದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು.ಇದನ್ನೂ ಓದಿ: 5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ
ಮುಂಬೈ: ದೆಹಲಿಯಿಂದ (Delhi) ಗೋವಾಗೆ (Goa) ತೆರಳುತ್ತಿದ್ದ ಇಂಡಿಗೋ ವಿಮಾನವೊಂದರಲ್ಲಿ (Indigo Flight) ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್ (Emergency Landing) ಮಾಡಲಾಯಿತು.
ಮೂಲಗಳ ಪ್ರಕಾರ, ಇಂಡಿಗೋ ವಿಮಾನ 6E6271 ದೆಹಲಿಯಿಂದ ಗೋವಾಗೆ ತೆರಳುತ್ತಿರುವಾಗ ಎಂಜಿನ್ನಲ್ಲಿ ಸಮಸ್ಯೆ ಉಂಟಾಗಿದೆ. ಪರಿಣಾಮ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು (Chhatrapati Shivaji Maharaj International Airport) ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಇಂಡಿಗೋ ಏರ್ಲೈನ್ಸ್ ದೃಢಪಡಿಸಿದೆ.
`ಪ್ಯಾನ್-ಪ್ಯಾನ್-ಪ್ಯಾನ್’ ಎಂಬುದು ವಿಮಾನಯಾನ ಕ್ಷೇತ್ರದಲ್ಲಿ ತುರ್ತು ಸ್ಥಿತಿಯನ್ನು ಸೂಚಿಸುವ ಪ್ರಕಟಣೆಯಾಗಿದ್ದು, ಇದು ಗಂಭೀರವಾದ ತಾಂತ್ರಿಕ ಸಮಸ್ಯೆಯನ್ನು ತಿಳಿಸುತ್ತದೆ. ಆದರೆ ತಕ್ಷಣದ ಅಪಾಯಕ್ಕಿಂತ ಕಡಿಮೆ ತೀವ್ರತೆಯನ್ನು ಹೊಂದಿರುತ್ತದೆ. ಪೈಲಟ್ನ ತ್ವರಿತ ನಿರ್ಧಾರ ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಯ ಸಮಯೋಚಿತ ಕ್ರಮದಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಪಾಟ್ನಾ: ದೆಹಲಿಯಿಂದ (Delhi) ಪಾಟ್ನಾಗೆ (Patna) ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ ಪೈಲಟ್ನ ಚಾಣಾಕ್ಷತನದಿಂದ ಮತ್ತೆ ಟೇಕಾಫ್ ಆಗಿ ಬಳಿಕ ಸೇಫ್ ಲ್ಯಾಂಡಿಂಗ್ ಆಗಿದೆ.
ವಿಮಾನವು ಲ್ಯಾಂಡ್ ಆಗುವಾಗ ಗೊತ್ತುಪಡಿಸಿದ ಟಚ್ಡೌನ್ ಪಾಯಿಂಟ್ಗಿಂತ ಮುಂದೆ ಇಳಿದಿದೆ. ಇದನ್ನರಿತ ಪೈಲಟ್ ಉಳಿದ ರನ್ವೇ ಉದ್ದವು ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಅರಿತು ಮತ್ತೆ ಚಾಣಾಕ್ಷತನದಿಂದ ಟೇಕಾಫ್ ಮಾಡಿದ್ದಾರೆ. ಬಳಿಕ ಮೂರು ಸುತ್ತು ಹೊಡೆದು ರಾತ್ರಿ 9 ಗಂಟೆಗೆ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ.
ವಿಮಾನದಲಿದ್ದ 173 ಪ್ರಯಾಣಿಕರು ಸುರಕ್ಷಿತವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾಟ್ನಾ ವಿಮಾನ ನಿಲ್ದಾಣದ ರನ್ವೇ ಚಿಕ್ಕದಾಗಿದ್ದು, ಲ್ಯಾಂಡಿಂಗ್ ಸಮಯದಲ್ಲಿ ಆಗಾಗ ಸವಾಲುಗಳು ಎದುರಾಗುತ್ತಿರುತ್ತವೆ.ಇದನ್ನೂ ಓದಿ: ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ – ಹಲವು ಪ್ರಯಾಣಿಕರಿಗೆ ಗಾಯ
ನವದೆಹಲಿ: 168 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಇಂಡಿಗೋ (IndiGo Flight) ವಿಮಾನ ಹಾರಾಟದ ಸಮಯದಲ್ಲೇ ‘ಮೇಡೇ’ ಘೋಷಿಸಿದೆ. ಅದೃಷ್ಟವಶಾತ್ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
168 ಪ್ರಯಾಣಿಕರಿದ್ದ ಇಂಡಿಗೋದ ಗುವಾಹಟಿ-ಚೆನ್ನೈ ವಿಮಾನವು ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಅಹಮದಾಬಾದ್ನಲ್ಲಿ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿತ್ತು. ಪೈಲಟ್ಗಳು ‘ಮೇಡೇ’ ಘೋಷಿಸಿದ ಕೆಲ ಹೊತ್ತಲ್ಲೇ ಈ ದುರಂತ ಸಂಭವಿಸಿತ್ತು. ಇದನ್ನೂ ಓದಿ: ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್ ಕೊಟ್ಟ ಕೊನೆಯ ಸಂದೇಶ
ಗುರುವಾರ ಈ ಘಟನೆ ನಡೆದಿದೆ. ಇಂಧನವು ತೀರಾ ಕಡಿಮೆ ಇದ್ದ ಇಂಡಿಗೋ ವಿಮಾನವು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಪತ್ತಿನ ಕರೆ ಬಂದ ನಂತರ, ಎಟಿಸಿ (ವಾಯು ಸಂಚಾರ ನಿಯಂತ್ರಣ) ಸಿಬ್ಬಂದಿಗೆ ಮಾಹಿತಿ ನೀಡಿತು. ಅವರು ಕಾರ್ಯಪ್ರವೃತ್ತರಾದರು. ವೈದ್ಯಕೀಯ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರು. ವಿಮಾನವು ರಾತ್ರಿ 8:20 ಕ್ಕೆ ಸುರಕ್ಷಿತವಾಗಿ ಇಳಿಯಿತು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Mayday ಅಂದ್ರೆ ವಿಮಾನ ತುಂಬಾ ಡೆಂಜರ್ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?
ಮಧುರೈಗೆ ಹೋಗುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲೇ ತಾಂತ್ರಿಕ ದೋಷವನ್ನು ಅನುಭವಿಸಿತು. ಸುಮಾರು 168 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರನ್ನು ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಕೆಳಗಿಳಿಸಲಾಯಿತು.
ನವದೆಹಲಿ: ದೆಹಲಿ (Delhi) ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ (Rain) ಮತ್ತು ಬಿರುಗಾಳಿ ಬೀಸಿದ್ದರಿಂದ ಇಂಡಿಗೋ ವಿಮಾನ (IndiGo Flight) ತೀವ್ರ ಪ್ರಕ್ಷುಬ್ಧತೆ ಅನುಭವಿಸಿದ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ರಾಯ್ಪುರ್ನಿಂದ ಬಂದ 6E 6313 ವಿಮಾನವು ದೆಹಲಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಈ ವೇಳೆ ಗಾಳಿ 80 ಕಿ.ಮೀ ವೇಗದಲ್ಲಿ ಬೀಸಿದೆ. ಇದರಿಂದ ಪ್ರಕ್ಷುಬ್ಧತೆ ಉಂಟಾಗಿದೆ. ತಕ್ಷಣ ಎಚ್ಚೆತ್ತ ಪೈಲಟ್, ವಿಮಾನವನ್ನು ಲ್ಯಾಂಡ್ ಮಾಡದೇ, ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಬಳಿಕ 38 ನಿಮಿಷಗಳ ಕಾಲ ಆಕಾಶದಲ್ಲೇ ಗಿರಕಿ ಹೊಡೆಸಿ, ವಾತಾವರಣ ತಿಳಿಯಾದ ಬಳಿಕ ಲ್ಯಾಂಡ್ ಮಾಡಿದ್ದಾರೆ. ವಿಮಾನವು ಸಂಜೆ 5:05ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ ಸಂಜೆ 5:43 ಕ್ಕೆ ಲ್ಯಾಂಡ್ ಆಯಿತು.
#WATCH | An IndiGo flight number 6E 6313 from Raipur to Delhi experienced turbulence due to a duststorm, prompting the pilot to climb up again when the aircraft was about to touch down at Delhi airport. The aircraft landed safely at Delhi airport after making many circuits in the… pic.twitter.com/TtDUwIH79b
ಗಾಳಿಗೆ ಸಿಕ್ಕ ವಿಮಾನ ತೀವ್ರವಾಗಿ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಕಿರುಚಾಡಿದ್ದಾರೆ. ಈ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೆಹಲಿ ಹವಾಮಾನ ಹಠಾತ್ ಬದಲು!
ಇಂದು ಮುಂಜಾನೆ, ದೆಹಲಿ-ಎನ್ಸಿಆರ್ನಲ್ಲಿ ಬಲವಾದ ಗಾಳಿ ಇತ್ತು, ಮಧ್ಯಾಹ್ನ ಬಿಸಿಲಿನ ವಾತಾವರಣ ಇತ್ತು. ಸಂಜೆಯ ವೇಳೆಗೆ ಮಳೆ ಹಾಗೂ ಬಿರುಗಾಳಿ ಬೀಸಿದೆ ಎಂದು ವರದಿಯಾಗಿದೆ.
ಮಳೆಯಿಂದಾಗಿ ತಾಪಮಾನದಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ದೆಹಲಿಯ ವಿವಿಧ ಭಾಗಗಳಲ್ಲಿ ತಾಪಮಾನವು 14 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿಕೆಯಾಗಿದೆ.
– 227 ಮಂದಿ ಹೊತ್ತು 36,000 ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ವಿಮಾನ
ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ (IndiGo Flight) ಪ್ರಕ್ಷುಬ್ಧತೆ ತಪ್ಪಿಸಲು ಪಾಕ್ ವಾಯುಸೀಮೆ ಬಳಸಲು ನಿರಾಕರಿಸಿದ ಬಳಿಕ ನಿಮಿಷಕ್ಕೆ 8,500 ಅಡಿಯಂತೆ ಇಳಿಸಿ ವಿಮಾನವನ್ನು ಸುರಕ್ಷಿತವಾಗಿ ಶ್ರೀನಗರದಲ್ಲಿ ಲ್ಯಾಂಡಿಗ್ ಮಾಡಲಾಗಿತ್ತು ಎಂದು ವರದಿಗಳು ತಿಳಿಸಿವೆ.
ಇತ್ತೀಚಿನ ವರದಿಗಳ ಪ್ರಕಾರ ಅತಿಯಾದ ಬಿರುಗಾಳಿಗೆ ಸಿಲುಕಿ ಇಂಡಿಗೋ ವಿಮಾನ ಪಕ್ಷುಬ್ಧತೆ ಎದುರಿಸಿತ್ತು. ಇದರೊಂದಿಗೆ ಆಲಿಕಲ್ಲು ಮಳೆಗೆ ಸಿಲುಕಿದ ಪರಿಣಾಮ ಸಮಸ್ಯೆ ಎದುರಾಗಿತ್ತು. ಹೀಗಾಗಿ 6E-2142 ಇಂಡಿಗೋ ವಿಮಾನವು ನಿಮಿಷಕ್ಕೆ 8,500 ಅಡಿಯಂತೆ ಇಳಿಯಿತು. ಸಾಮಾನ್ಯವಾಗಿ ವಿಮಾನವನ್ನು ನಿಮಿಷಕ್ಕೆ 1,500 ರಿಂದ 3,000 ಅಡಿಯಂತೆ ಇಳಿಸಿ ಲ್ಯಾಂಡಿಂಗ್ ಮಾಡಲಾಗುತ್ತದೆ. ಆದ್ರೆ ಅಂದು ನಿಮಿಷಕ್ಕೆ 8,500 ಅಡಿಯಂತೆ ಇಳಿಸಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಡೇಂಜರ್ನಲ್ಲಿದ್ದರೂ ದೆಹಲಿ-ಶ್ರೀನಗರ ಇಂಡಿಗೋ ವಿಮಾನಕ್ಕೆ ತನ್ನ ವಾಯುಸೀಮೆ ಬಳಸಲು ನಿರಾಕರಿಸಿದ ಪಾಕ್
ಡಿಜಿಸಿಎಯ ಪ್ರಾಥಮಿಕ ವರದಿಯ ಪ್ರಕಾರ, ಸಂಸತ್ ಸದಸ್ಯರು ಸೇರಿದಂತೆ 227ಕ್ಕೂ ಜನರನ್ನು ಹೊತ್ತ ವಿಮಾನವು 36,000 ಅಡಿಗಳಷ್ಟು ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ಪಠಾಣ್ಕೋಟ್ ಬಳಿ ಪ್ರತಿಕೂಲ ಹವಾಮಾನಕ್ಕೆ ಸಿಲುಕಿ ಪ್ರಕ್ಷುಬ್ಧತೆ ಎದುರಿಸಿತ್ತು ಎಂದು ವಿವರಿಸಿದೆ. ಇದನ್ನೂ ಓದಿ: ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ
ಮನವಿ ನಿರಾಕರಿಸಿದ್ದ ಪಾಕ್:
ಇಂಡಿಗೋ ವಿಮಾನವು ಪ್ರಕ್ಷುಬ್ಧತೆಯನ್ನು ತಪ್ಪಿಸಲು ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಸೀಮೆ ಬಳಸಲು ಅನುಮತಿ ಕೋರಿತ್ತು. ಅಮೃತಸರದ ಬಳಿಕ ನಡೆಸುತ್ತಿರುವಾಗ ಅಸ್ಥಿರ ಹವಾಮಾನವನ್ನು ಗಮನಿಸಿದ ಪೈಲಟ್, ಸುರಕ್ಷತಾ ಕಾರಣಗಳಿಗಾಗಿ ತನ್ನ ವಾಯುಸೀಮೆ ಮೂಲಕ ಹಾರಾಟ ನಟಡೆಸಲು ಪಾಕಿಸ್ತಾನಿ ವಾಯು ಸಂಚಾರ ನಿಯಂತ್ರಣ ಸಂಪರ್ಕಿಸಿದರು. ಆದಾಗ್ಯೂ, ವಿನಂತಿಯನ್ನು ಪಾಕ್ ನಿರಾಕರಿಸಿತು. ಆದಾಗ್ಯೂ ವಿಮಾನವು ತನ್ನ ನಿಗದಿತ ಮಾರ್ಗದಲ್ಲಿ ತಲುಪಿ ಶ್ರೀನಗರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು.
6ಇ2142 ವಿಮಾನವು ಐದು ಸದಸ್ಯರ ತೃಣಮೂಲ ಕಾಂಗ್ರೆಸ್ (TMC) ನಿಯೋಗ ಸೇರಿದಂತೆ 227 ಮಂದಿಯನ್ನ ಹೊತ್ತೊಯ್ಯುತ್ತಿತ್ತು. ದೆಹಲಿಯಿಂದ ಹೊರಟು ಶ್ರೀನಗರ ಸಮೀಪಿಸುತ್ತಿದ್ದಾಗ ಆಲಿಕಲ್ಲು ಮಳೆಯಿಂದ ತೀವ್ರ ಹಾನಿಗೆ ಒಳಗಾಯಿತು. ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಡ್ಯಾಮೇಜ್ ಆಯಿತು. ಆದರೆ ಸಿಬ್ಬಂದಿ ಸಂಜೆ 6:30 ಕ್ಕೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ವಿಮಾನ ಇಳಿದ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ವಿಮಾನದಲ್ಲಿದ್ದ ಎಲ್ಲ 227 ಮಂದಿಯೂ ಸೇಫ್ ಆಗಿದ್ದಾರೆ. ಪೈಲಟ್ಗಳ ಚಾಕಚಕ್ಯತೆಯಿಂದ ಎಲ್ಲ ಪ್ರಯಾಣಿಕರು ಸೇಫ್ ಆಗಿ ಬದುಕುಳಿದಿದ್ದಾರೆ. ವಿಮಾನದ ಮುಂಭಾಗ ಭಾರೀ ಪ್ರಮಾಣದಲ್ಲಿ ಹಾನಿಗೀಡಾಗಿದ್ದು, ಈ ಹಾನಿಯನ್ನು ನೋಡಿದವರು ಪ್ರಯಾಣಿಕರು ಪವಾಡಸದೃಶರಾಗಿ ಬದುಕುಳಿದಿದ್ದಾರೆ ಎನ್ನುವಷ್ಟು ಗಂಭೀರ ಪ್ರಮಾಣದಲ್ಲಿ ವಿಮಾನ ಹಾನಿಗೊಳಗಾಗಿದೆ.
ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಗಾಳಿಯಲ್ಲಿ ತೀವ್ರ ಹವಾಮಾನ ಪ್ರಕ್ಷುಬ್ಧತೆ ಅನುಭವಿಸಿತು. ಈ ಸಂದರ್ಭದಲ್ಲಿ ಪ್ರಕ್ಷುಬ್ಧತೆ ತಪ್ಪಿಸಲು ಪಾಕ್ ವಾಯುಸೀಮೆ ಬಳಸಲು ಇಂಡಿಗೋ ಮಾಡಿದ್ದ ಮನವಿಯನ್ನು ಪಾಕಿಸ್ತಾನ ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.
ಅಮೃತಸರದ ಬಳಿಕ ನಡೆಸುತ್ತಿರುವಾಗ ಅಸ್ಥಿರ ಹವಾಮಾನವನ್ನು ಗಮನಿಸಿದ ಪೈಲಟ್, ಸುರಕ್ಷತಾ ಕಾರಣಗಳಿಗಾಗಿ ತನ್ನ ವಾಯುಸೀಮೆ ಮೂಲಕ ಹಾರಾಟ ನಟಡೆಸಲು ಪಾಕಿಸ್ತಾನಿ ವಾಯು ಸಂಚಾರ ನಿಯಂತ್ರಣ ಸಂಪರ್ಕಿಸಿದರು. ಆದಾಗ್ಯೂ, ವಿನಂತಿಯನ್ನು ಪಾಕ್ ನಿರಾಕರಿಸಿತು. ಆದಾಗ್ಯೂ ವಿಮಾನವು ತನ್ನ ನಿಗದಿತ ಮಾರ್ಗದಲ್ಲಿ ತಲುಪಿ ಶ್ರೀನಗರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಇದನ್ನೂ ಓದಿ: ಜ್ಯೋತಿಗೆ ಒಡಿಶಾ ಲಿಂಕ್ – ‘ಪಾಕ್ನಲ್ಲಿ ಒಡಿಶಾ ಹುಡುಗಿ’ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿಚಾರಣೆ
6E2142 ವಿಮಾನವು ಐದು ಸದಸ್ಯರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಯೋಗ ಸೇರಿದಂತೆ 227 ಮಂದಿಯನ್ನ ಹೊತ್ತೊಯ್ಯುತ್ತಿತ್ತು. ದೆಹಲಿಯಿಂದ ಹೊರಟು ಶ್ರೀನಗರ ಸಮೀಪಿಸುತ್ತಿದ್ದಾಗ ಆಲಿಕಲ್ಲು ಮಳೆಯಿಂದ ತೀವ್ರ ಹಾನಿಗೆ ಒಳಗಾಯಿತು. ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಡ್ಯಾಮೇಜ್ ಆಯಿತು. ಆದರೆ ಸಿಬ್ಬಂದಿ ಸಂಜೆ 6:30 ಕ್ಕೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ವಿಮಾನ ಇಳಿದ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ವಿಮಾನದಲ್ಲಿದ್ದ ಎಲ್ಲ 227 ಮಂದಿಯೂ ಸೇಫ್ ಆಗಿದ್ದಾರೆ. ಪೈಲಟ್ಗಳ ಚಾಕಚಕ್ಯತೆಯಿಂದ ಎಲ್ಲ ಪ್ರಯಾಣಿಕರು ಸೇಫ್ ಆಗಿ ಬದುಕುಳಿದಿದ್ದಾರೆ. ವಿಮಾನದ ಮುಂಭಾಗ (Nose damage) ಭಾರೀ ಪ್ರಮಾಣದಲ್ಲಿ ಹಾನಿಗೀಡಾಗಿದ್ದು, ಈ ಹಾನಿಯನ್ನು ನೋಡಿದವರು ಪ್ರಯಾಣಿಕರು ಪವಾಡಸದೃಶರಾಗಿ ಬದುಕುಳಿದಿದ್ದಾರೆ ಎನ್ನುವಷ್ಟು ಗಂಭೀರ ಪ್ರಮಾಣದಲ್ಲಿ ವಿಮಾನ ಹಾನಿಗೊಳಗಾಗಿದೆ. ಇದನ್ನೂ ಓದಿ: ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ
ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda International Airport) ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲ್ಲರ್ (Tempo Traveller) ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಅಂದಹಾಗೆ ಇಂಜಿನ್ ರಿಪೇರಿ ಸಮಸ್ಯೆಯಿಂದ ಏರ್ಪೋರ್ಟ್ ಒಳಭಾಗದ ಅಲ್ಪಾ ಪಾರ್ಕಿಂಗ್ ಬೇ-71 ರಲ್ಲಿ ಹಲವು ದಿನಗಳಿಂದ ವಿಮಾನವನ್ನ ನಿಲ್ಲಿಸಲಾಗಿತ್ತು. ಇದೇ ವಿಮಾನಕ್ಕೆ ಮುಂಭಾಗದ ಮೂತಿ ಬಳಿ ಟೆಂಪೋ ಟ್ರಾವೆಲ್ಲರ್ ಡಿಕ್ಕಿಯಾಗಿದೆ.
ಘಟನೆಯಲ್ಲಿ ಟೆಂಪೋ ಟ್ರಾವೆಲ್ಲರ್ ವಿಮಾನದ ಮೂತಿ ಭಾಗದ ಕೆಳಗೆ ಸಿಲುಕಿಕೊಂಡು ಟಿಟಿಯ ಟಾಪ್ ಜಖಂ ಆಗಿದೆ. ಘಟನೆಯಲ್ಲಿ ಚಾಲಕನ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯಿಂದ ಪಾರಾಗಿದ್ದಾನೆ ಅಂತ ತಿಳಿದುಬಂದಿದೆ. ರನ್ ವೇಗೆ ಸಿಬ್ಬಂದಿಯನ್ನ ಬಿಟ್ಟು ಬರಬೇಕಾದರೆ ಟಿಟಿ ವಾಹನ ಅಪಘಾತಕ್ಕೀಡಾಗಿದೆ.
ಹೈಮಾಸ್ಟ್ ದೀಪದ ಬೃಹತ್ ಕಂಬಕ್ಕೆ ಕಾರು ಡಿಕ್ಕಿ:
ಇನ್ನೂ ಮತ್ತೊಂದು ಪ್ರಕರಣದಲ್ಲಿ ಏರ್ಪೋರ್ಟ್ನ ಒಳಭಾಗದ ರನ್ ವೇ ಬಳಿ ಹೈಮಾಸ್ಟ್ ದೀಪದ ಬೃಹತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಕಾರು ಚಾಲಕ ಗಾಯಗೊಂಡಿದ್ದಾನೆ. ಎರಡು ಪ್ರತ್ಯೇಕ ಪ್ರಕರಣಗಳ ತನಿಖೆಗೆ ಆದೇಶ ಮಾಡಲಾಗಿದೆ.
ನವದೆಹಲಿ: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿದ್ದ ವಿಮಾನವನ್ನು ರಾಯ್ಪುರ (Raipur) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಸಿಐಎಸ್ಎಫ್ ಮತ್ತು ಪೊಲೀಸರು ವಿಮಾನವನ್ನು ತಪಾಸಣೆ ಮಾಡಿದರು, ತಪಾಸಣೆಯಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗದ ಕಾರಣ ಹುಸಿ ಬಾಂಬ್ ಬೆದರಿಕೆ ಎಂದು ನಿರ್ಧರಿಸಲಾಗಿದೆ.
ಈ ಬಗ್ಗೆ ಮಾತನಾಡಿದ ರಾಯ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್, ವಿಮಾನಯಾನ ಸಂಸ್ಥೆಗಳಿಗೆ ಬೆದರಿಕೆ ಬಂದ ಹಿನ್ನೆಲೆ ನಾಗ್ಪುರದಿಂದ (Nagpur) ಕೋಲ್ಕತ್ತಾ (Kolkatta) ಕಡೆಗೆ ವಿಮಾನವನ್ನು ತಿರುಗಿಸಲಾಯಿತು. ಇಂಡಿಗೋ ವಿಮಾನದಲ್ಲಿದ್ದ 187 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಕಬ್ಬು ಬೆಲೆ ನಿಗದಿಗಾಗಿ ಹೋರಾಟ- ಸಿಎಂಗೆ ಘೇರಾವ್ ಹಾಕಲು ನಿರ್ಧರಿಸಿದ ಮುಧೋಳ ರೈತರು
ಬೆದರಿಕೆಗೆ ಸಂಬಂಧಿಸಿದಂತೆ ಒಬ್ಬ ಪ್ರಯಾಣಿಕನನ್ನು ಬಂಧಿಸಲಾಗಿದ್ದು, ಆತನನ್ನು ನಿಮೇಶ್ ಮಂಡಲ್ ಎಂದು ಗುರುತಿಸಲಾಗಿದೆ. ಆತನನ್ನು ಮನ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಮಾನಯಾನ ಸಂಸ್ಥೆಗಳಿಂದ ದೂರು ಸ್ವೀಕರಿಸಿದ್ದರಿಂದ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನ.20ಕ್ಕೆ ರಾಜ್ಯಾದ್ಯಂತ ಬಾರ್ ಬಂದ್