Tag: ಇಂಡಿಯನ್ ಆರ್ಮಿ

  • ಚಲಿಸುತ್ತಿರುವ ರೈಲಿನಲ್ಲೇ ಹೆರಿಗೆ ಮಾಡಿಸಿದ ಸೇನಾ ವೈದ್ಯರಿಗೆ ನೆಟ್ಟಿಗರ ಮೆಚ್ಚುಗೆ

    ಚಲಿಸುತ್ತಿರುವ ರೈಲಿನಲ್ಲೇ ಹೆರಿಗೆ ಮಾಡಿಸಿದ ಸೇನಾ ವೈದ್ಯರಿಗೆ ನೆಟ್ಟಿಗರ ಮೆಚ್ಚುಗೆ

    ನವದೆಹಲಿ: ಚಲಿಸುತ್ತಿರುವ ರೈಲಿನಲ್ಲಿ ಹೆರಿಗೆ ಮಾಡಿಸಿದ ಸೇನಾ ವೈದ್ಯರಿಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಭಾರತೀಯ ಸೇನೆಯ 172 ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುವ ಕ್ಯಾಪ್ಟನ್ ಲಲಿತಾ ಮತ್ತು ಕ್ಯಾಪ್ಟನ್ ಅಮಂದೀಪ್ ಇಬ್ಬರು ಹೌರ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.

    ಈ ಸಮಯದಲ್ಲಿ ತಕ್ಷಣ ಸಹಾಯಕ್ಕೆ ಬಂದ ಸೇನಾ ವೈದ್ಯೆಯರಾದ ಲಲಿತಾ ಮತ್ತು ಅಮಂದೀಪ್ ಚಲಿಸುತ್ತಿರುವ ರೈಲಿನಲ್ಲೇ ಹೆರಿಗೆ ಮಾಡಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಇಂಡಿಯನ್ ಆರ್ಮಿ ತಾಯಿ ಮತ್ತು ಹೆಣ್ಣು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದೆ. ಆರ್ಮಿ ಮಾಡಿರುವ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಮಗುವಿನ ಜೊತೆ ಲಲಿತಾ ಮತ್ತು ಅಮಂದೀಪ್ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ಇಂಡಿಯನ್ ಆರ್ಮಿ, ಭಾರತೀಯ ಸೇನೆಯ 172 ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುವ ಕ್ಯಾಪ್ಟನ್ ಲಲಿತಾ ಮತ್ತು ಕ್ಯಾಪ್ಟನ್ ಅಮಂದೀಪ್ ಚಲಿಸುತ್ತಿರುವ ಹೌರ ಎಕ್ಸ್ ಪ್ರೆಸ್ ರೈಲಿನಲ್ಲಿ ಹೆರಿಗೆಯನ್ನು ಮಾಡಿಸಿದ್ದಾರೆ. ತಾಯಿ ಮತ್ತು ಹೆಣ್ಣು ಮಗು ಆರೋಗ್ಯವಾಗಿ ಇದ್ದಾರೆ ಎಂದು ಬರೆದುಕೊಂಡಿದೆ.

    ಆರ್ಮಿ ಮಾಡಿರುವ ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಸುಮಾರು 20 ಸಾವಿರ ಜನ ಪೋಸ್ಟ್ ಅನ್ನು ಇಷ್ಟಪಟ್ಟಿದ್ದಾರೆ ಮತ್ತು 35 ಸಾವಿರಕ್ಕೂ ಹೆಚ್ಚು ಜನ ರೀಟ್ವೀಟ್ ಮಾಡುವ ಮೂಲಕ ಸೇನಾ ವೈದ್ಯರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಜೊತೆಗೆ ಸೇನಾ ವೈದ್ಯೆಯರನ್ನು ಹೀರೋ ಎಂದು ಹೊಗಳಿದ್ದಾರೆ.

    https://twitter.com/CharuvillyNair/status/1210854897282736129

    ಈ ಪೋಸ್ಟ್ ಮೆಚ್ಚಿ ಕೆಲವರು ಕಮೆಂಟ್ ಮಾಡಿದ್ದು ಮಗುವಿನ ಪೋಷಕರಿಗೆ ಮಗುವಿಗೆ ಈ ಇಬ್ಬರು ವೈದ್ಯೆಯರಲ್ಲಿ ಯಾರ ಹೆಸರು ಇಡಬೇಕು ಎಂಬ ಪ್ರಶ್ನೆ ಕಾಡುತ್ತಿರಬಹುದು ಎಂದು ಕಮೆಂಟ್ ಮಾಡಿದ್ದಾರೆ. ಆಸ್ಪತ್ರೆಯಿಂದ ಹೊರಗೆ ಹೆರಿಗೆ ಮಾಡಿಸುವುದು ತುಂಬಾ ಕಷ್ಟದ ಕೆಲಸ. ಆದರೆ ಈ ಇಬ್ಬರು ಧೈರ್ಯಶಾಲಿ ಸೇನಾ ವೈದ್ಯೆಯರು ಈ ಕೆಲಸವನ್ನು ಬಹಳ ಸುಲಭದಲ್ಲಿ ಮಾಡಿದ್ದಾರೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

  • ವಿಶೇಷ ಆರ್ಮಿ ಕ್ಯಾಪ್ ಧರಿಸಿ ರಾಂಚಿಯಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಆಟಗಾರರು – ಪಂದ್ಯದ ಸಂಭಾವನೆ ಸೈನಿಕರ ನಿಧಿಗೆ

    ವಿಶೇಷ ಆರ್ಮಿ ಕ್ಯಾಪ್ ಧರಿಸಿ ರಾಂಚಿಯಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಆಟಗಾರರು – ಪಂದ್ಯದ ಸಂಭಾವನೆ ಸೈನಿಕರ ನಿಧಿಗೆ

    ರಾಂಚಿ: ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಏಕದಿನ ಟೂರ್ನಿಯ 3ನೇ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟೀಂ ಇಂಡಿಯಾ ಆಟಗಾರರು ಪಂದ್ಯದಲ್ಲಿ ವಿಶೇಷ ಆರ್ಮಿ ಕ್ಯಾಪ್ ಧರಿಸಿ ಕಣಕ್ಕೆ ಇಳಿದಿದ್ದಾರೆ.

    ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಸೈನಿಕರಿಗೆ ಗೌರವ ನೀಡಲು ವಿಶೇಷವಾಗಿ ಭಾರತದ ಸೇನೆಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಕ್ಯಾಫ್ ಧರಿಸಲಾಗಿದೆ. ಪಂದ್ಯದಲ್ಲಿ ವಿಶೇಷ ಕ್ಯಾಪ್ ಧರಿಸಿ ಆಡುವುದು ಮಾತ್ರವಲ್ಲದೇ ಯೋಧರ ಮಕ್ಕಳ ಶಿಕ್ಷಣ, ಕುಟುಂಬಗಳ ನೆರವಿಗೆ ಧವಿಸುವ ರಾಷ್ಟ್ರೀಯ ರಕ್ಷಣಾ ನಿಧಿಗೆ ಹಣ ಸಂಗ್ರಹಿಸಲು ಕೂಡ ಟೀಂ ಇಂಡಿಯಾ ಮುಂದಾಗಿದೆ.

    ಈ ಪಂದ್ಯದ ಸಂಭಾವನೆಯನ್ನು ಟೀಂ ಇಂಡಿಯಾ ಎಲ್ಲಾ ಸಿಬ್ಬಂದಿ, ಆಟಗಾರರು ಕೂಡ ರಾಷ್ಟ್ರೀಯ ರಕ್ಷಣಾ ನಿಧಿಗೆ ನೀಡಲಿದ್ದಾರೆ. ಅಲ್ಲದೇ ದೇಶದ ನಾಗರಿಕರು ಕೂಡ ಸೈನಿಕರಿಗೆ ನೆರವು ನೀಡಿ ಎಂದು ಕೊಹ್ಲಿ ಮನವಿ ಮಾಡಿದ್ದಾರೆ.

    ಪಂದ್ಯದ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡದ ಎಲ್ಲಾ ಆಟಗಾರರಿಗೆ ಕ್ಯಾಪ್ ನೀಡಿದರು. ಈಗಾಗಲೇ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಪಡೆದಿರುವ ಟೀಂ ಇಂಡಿಯಾ ರಾಂಚಿ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಜಯಿಸುವ ಗುರಿ ಹೊಂದಿದೆ. ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತುಮಕೂರಿನ ಬೈಪಾಸ್ ರಸ್ತೆಯಲ್ಲಿ ಕಂಡರಂತೆ ಉಗ್ರರು-ಫೇಕ್ ವಿಡಿಯೋ ನೋಡಿ ಬೆಚ್ಚಿಬಿದ್ದ ಜನತೆ

    ತುಮಕೂರಿನ ಬೈಪಾಸ್ ರಸ್ತೆಯಲ್ಲಿ ಕಂಡರಂತೆ ಉಗ್ರರು-ಫೇಕ್ ವಿಡಿಯೋ ನೋಡಿ ಬೆಚ್ಚಿಬಿದ್ದ ಜನತೆ

    ತುಮಕೂರು: ಜಿಲ್ಲೆಯ ಬೈಪಾಸ್ ರಸ್ತೆಯಲ್ಲಿ ಉಗ್ರರು ಕಾಣಿಸಿಕೊಂಡಿದ್ದಾರೆ. ಇಂಡಿಯನ್ ಆರ್ಮಿ ತಂಡ ನಾಲ್ವರ ಮೇಲೆ ದಾಳಿ ನಡೆಸಿದೆ. ಓರ್ವ ಉಗ್ರ ಹತನಾಗಿದ್ದು, ಇನ್ನುಳಿದ ಮೂವರನ್ನು ಬಂಧಿಸಲಾಗಿದೆ ಎಂಬ ಸುಳ್ಳು ಸುದ್ದಿಯೊಂದು ತುಮಕೂರು ಜನತೆಯನ್ನು ಬೆಚ್ಚಿಬೀಳಿಸಿದೆ.

    ಸೈನಿಕರು ಕಾರ್ಯಾಚರಣೆ ಮಾಡುವ ಮಾದರಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಿಂದ ಸಾರ್ವಜನಿಕರು ಇನ್ನಷ್ಟು ಆತಂಕಗೊಂಡಿದ್ದಾರೆ. ಆದರೆ ಅಸಲಿಗೆ ಇದು ತಿರುಪತಿ ಪೊಲೀಸರು ಉಗ್ರರ ದಾಳಿಯಾದರೆ ಯಾವ ರೀತಿಯ ಕಾರ್ಯಾಚರಣೆ ಮಾಡಬೇಕು ಎಂಬ ಕುರಿತಂತೆ ಮಾಡಿದ ಅಣಕು ಪ್ರದರ್ಶನ.

    ಕೆಲ ಕಿಡಿಗೇಡಿಗಳು ಈ ವಿಡಿಯೋಗೆ ಸುಳ್ಳು ಕಥೆ ಕಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಆತಂಕಗೊಳಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ತುಮಕೂರು ಎಸ್ಪಿ ವಂಶಿ ಕೃಷ್ಣ, ಇದೊಂದು ಸುಳ್ಳು ಸುದ್ದಿಯಾಗಿದ್ದು, ಯಾರು ಆತಂಕ ಪಡಬಾರದು. ಈ ರೀತಿ ಸುಳ್ಳು ಸುದ್ದಿ ಹರಿಡಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv