Tag: ಇಂಡಿಯನ್ ನೇವಿ

  • ಕರಾವಳಿಯಲ್ಲಿ `OP TRIGGER’ ಆಪರೇಷನ್ – ಕಡಲಿನಲ್ಲಿ ಕಟ್ಟೆಚ್ಚರ

    ಕರಾವಳಿಯಲ್ಲಿ `OP TRIGGER’ ಆಪರೇಷನ್ – ಕಡಲಿನಲ್ಲಿ ಕಟ್ಟೆಚ್ಚರ

    ಕಾರವಾರ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಹದ್ದಿನ ಕಣ್ಣಿರಿಸಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್‌ ಹಾಗೂ ಕೋಸ್ಟಲ್ ಪೊಲೀಸರು ಕೂಮಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

    ʻOP TRIGGERʼ ಹೆಸರಿನಲ್ಲಿ ಆಪರೇಷನ್ ನಡೆಸ್ತಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್‌ ಹಾಗೂ ಕೋಸ್ಟಲ್ ಪೊಲೀಸರು ಅರಬ್ಬಿ ಸಮುದ್ರ ಭಾಗದಲ್ಲಿ ತಪಾಸಣೆ ನಡೆಸುತಿದ್ದಾರೆ.

    ದೇಶದ ಆಂತರಿಕ ಭದ್ರತೆ ಹಿನ್ನಲೆಯಲ್ಲಿ ಸಮುದ್ರದಲ್ಲಿರುವ ಸಾಗುವ ಪ್ರತಿ ಬೋಟುಗಳು ಹಾಗೂ ಬಂದರುಗಳಲ್ಲಿರುವ ಬೋಟುಗಳು, ಕಾರ್ಮಿಕರ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕುತಿದ್ದಾರೆ. ಯಾವುದೇ ಉಗ್ರರು ರಾಜ್ಯದ ಕರಾವಳಿಯ ಮೂಲಕ ದೇಶಕ್ಕೆ ಎಂಟ್ರಿಕೊಡಬಾರದು ಎಂಬ ಉದ್ದೇಶದಿಂದ ತಪಾಸಣೆ ಚುರುಕುಗೊಳಿಸಲಾಗಿದೆ. ಇದನ್ನೂ ಓದಿ: ಮರ ಬಿದ್ದು ಮೃತಪಟ್ಟಿದ್ದ ಆಟೋ ಚಾಲಕನ ಅಂತ್ಯಸಂಸ್ಕಾರ – ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಹೇಶ್

    ಅತಿ ಸೂಕ್ಷ್ಮ ಪ್ರದೇಶವಾಗಿರುವ ಕಾರವಾರದ ನೌಕಾನೆಲೆ ಹಾಗೂ ಕೈಗಾ ಅಣುವಿದ್ಯುತ್ ಸ್ಥಾವರದ ಸುತ್ತಮುತ್ತಲೂ ಭಿಗಿ ಭದ್ರತೆ ನೀಡಲಾಗಿದೆ. ಜೊತೆಗೆ ತೀರ ಪ್ರದೇಶಗಳಲ್ಲಿ ಡ್ರೋನ್‌ಗಳನ್ನು ಕೂಡ ಬಳಸಿ ಪರಿಶೀಲನೆ‌ ನಡೆಸಲಾಗುತ್ತಿದೆ. ಇನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಪ್ರತಿದಿನ ಕೂಮಿಂಗ್ ಕಾರ್ಯಾಚರಣೆಯನ್ನು ಹೆಚ್ಚಿಸಿದ್ದು ಮೀನುಗಾರರಿಗೆ ಯಾರೇ ಅನುಮಾನಸ್ಪದ ಬೋಟುಗಳು ಅರಬ್ಬಿ ಸಮುದ್ರದಲ್ಲಿ ಕಂಡಲ್ಲಿ ತಕ್ಷಣ ಮಾಹಿತಿ ನೀಡಲು ತಿಳಿಸಾಗಿದೆ.  ಇದನ್ನೂ ಓದಿ: ಪಾಕ್ ಯುವತಿಯನ್ನು ಮದ್ವೆಯಾಗಿ ಕೆಲಸ ಕಳೆದುಕೊಂಡ ಸಿಆರ್‌ಪಿಎಫ್‌ ಯೋಧ!

  • ಕಾರವಾರ ಬಂದರಿನಲ್ಲಿ ಮಿಂಚಿದ ವಿಕ್ರಮಾದಿತ್ಯ- ಕೊರೊನಾ ವಾರಿಯರ್ಸ್‍ಗೆ ಸೆಲ್ಯೂಟ್

    ಕಾರವಾರ ಬಂದರಿನಲ್ಲಿ ಮಿಂಚಿದ ವಿಕ್ರಮಾದಿತ್ಯ- ಕೊರೊನಾ ವಾರಿಯರ್ಸ್‍ಗೆ ಸೆಲ್ಯೂಟ್

    – ಕೇರಳ, ಮುಂಬೈ ಬಂದರುಗಳಲ್ಲೂ ನಮನ

    ನವದೆಹಲಿ: ದೇಶಾದ್ಯಂತ ಭಾರತೀಯ ಮೂರು ಪಡೆಯ ಯೋಧರಿಂದ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಗಿದ್ದು, ವಾಯು ಸೇನೆಯಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿಗೈದರೆ, ಅತ್ತ ಇಂಡಿಯನ್ ನೇವಿ ಹಡಗುಗಳು ದೀಪಾಲಂಕಾರದಿಂದ ಕಂಗೊಳಿಸುವ ಮೂಲಕ ಗೌರವ ಸಲ್ಲಿಸಿದವು. ಕಾರವಾರದ ನೌಕಾ ನೆಲೆಯಲ್ಲಿ ವಿಕ್ರಮಾದಿತ್ಯ ಸಹ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು.

    ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸುವ ಸಲುವಾಗಿ ಇಂದು ಐಎನ್‍ಎಸ್ ವಿಕ್ರಮಾದಿತ್ಯ ಹಡಗಿನಲ್ಲಿ ಬಣ್ಣದ ಲೈಟುಗಳನ್ನು ಅಲಂಕಾರ ಮಾಡಿ ಪಟಾಕಿ ರಾಕೆಟ್ ಮೂಲಕ ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು. ಕಾರವಾರದ ಅರಗಾದ ಕದಂಬ ನೌಕಾ ನೆಲೆಯಲ್ಲಿ ದೇಶದ ಅತಿದೊಡ್ಡ ಯುದ್ಧ ನೌಕೆ ವಿಕ್ರಮಾದಿತ್ಯ ಹಡಗಿನಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಟಡುತ್ತಿರುವ ಕೊರೊನಾ ಯೋಧರಾದ ವೈದ್ಯರು, ಶುಶ್ರೂಷಕರು, ಪೊಲೀಸರು ಹಾಗೂ ನೈರ್ಮಲ್ಯ ಕೆಲಸಗಾರರಿಗೆ ಗೌರವ ಸಲ್ಲಿಸಲಾಯಿತು.

    ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಶುಶ್ರೂಷಕರು, ಪೊಲೀಸರು ಹಾಗೂ ನೈರ್ಮಲ್ಯ ಕೆಲಸಗಾರರಿಗೆ ಗೌರವ ಸಲ್ಲಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಕಾರ್ಯವನ್ನು ಹಮ್ಮಿಕೊಂಡಿತ್ತು. ಬೆಳಗ್ಗೆ ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್‍ಗಳು ಪುಷ್ಪವೃಷ್ಠಿಗೈದರೆ, ಸಂಜೆ ಇಂಡಿಯನ್ ನೇವಿ ಹಡಗುಗಳಲ್ಲಿ ದೀಪಾಲಂಕಾರ ಮಾಡಲಾಗಿತ್ತು.

    ದೇಶದಲ್ಲೆಡೆ ಅಭಿನಂದನೆ ಸಲ್ಲಿಸಲಾಗಿದ್ದು, ಭಾರತೀಯ ಮೂರು ಪಡೆಯ ಯೋಧರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೊರೊನಾ ವಾರಿಯರ್ಸ್ ಮೇಲೆ ಪುಷ್ಪವೃಷ್ಠಿ ಮಾಡಿದರು. ಚೆನ್ನೈ ರಾಜೀವ್ ಗಾಂಧಿ ಆಸ್ಪತ್ರೆ, ಬೆಂಗಳೂರಿನಲ್ಲಿ ಕಮಾಂಡ್, ವಿಕ್ಟೋರಿಯಾ ಆಸ್ಪತ್ರೆ, ದೆಹಲಿಯ ಏಮ್ಸ್, ರಾಜಸ್ಥಾನದ ಸಾವಾಯಿ ಮಾನ್‍ಸಿಂಗ್ ಆಸ್ಪತ್ರೆ, ಚಂಡೀಗಢ, ಗುವಾಹತಿ, ಪಾಟ್ನಾ, ಲೇಹ್‍ಗಳಲ್ಲಿ ಆಸ್ಪತೆಗಳ ಮೇಲೆ ಪುಷ್ಪವೃಷ್ಠಿ ಮಾಡಲಾಯಿತು.

    ಕಾರವಾರ, ಕೇರಳದ ಕೊಚ್ಚಿ ಬಂದರು, ಮುಂಬೈ ಹಾಗೂ ಇತರೆಡೆಗಳಲ್ಲಿ ಹಡಗುಗಳನ್ನು ದೀಪಾಲಂಕಾರದಿಂದ ಕಂಗೊಳಿಸುವಂತೆ ಮಾಡುವ ಮೂಲಕ ವಾರಿಯರ್ಸ್‍ಗೆ ಮನಮ ಸಲ್ಲಿಸಲಾಯಿತು.