Tag: ಇಂಡಿಯಾ ಗೇಟ್

  • ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ

    ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ

    ನವದೆಹಲಿ: ಶತಮಾನದ ಇತಿಹಾವುಳ್ಳ ದೇಶ ರಾಜಧಾನಿಯ ರಾಜಪಥದ (Rajpath) ಹೆಸರು ಇಂದಿನಿಂದ ಅಧಿಕೃತವಾಗಿ ಬದಲಾಗಿದೆ. ಮರುನಾಮಕರಣವಾದ ಕರ್ತವ್ಯ ಪಥವನ್ನು (Kartavya Path) ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಅಲ್ಲದೇ ಇದಕ್ಕೂ ಮೊದಲು ಇಂಡಿಯಾ ಗೇಟ್‌ನಲ್ಲಿ (India Gate) ಸ್ಥಾಪಿಸಲಾಗಿರುವ ಸ್ವಾತಂತ್ರ್ಯ ಸೇನಾನಿ ಸುಭಾಷ್‌ ಚಂದ್ರ ಬೋಸ್‌ (Netaji Subhas Chandra Bose) ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ (Narendra Modi) ಅನಾವರಣ ಗೊಳಿಸಿದರು.

    ಮೊದಲ ಐವತ್ತು ವರ್ಷ ಕಿಂಗ್ಸ್ ವೇ ಆಗಿ, ನಂತರದ 60 ವರ್ಷ ರಾಜಪಥವಾಗಿದ್ದ ರಸ್ತೆಗೆ ದಾಸ್ಯದ ಸಂಕೇತದಿಂದ ಮುಕ್ತಿ ಕೊಡಿಸಲಾಗಿದೆ. ಇದು ಎಲ್ಲರಿಗೆ ಕರ್ತವ್ಯವವನ್ನು ನೆನಪಿಸುವ ಕರ್ತವ್ಯ ಪಥವಾಗಿ ಬದಲಾಗಿದೆ. ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿಲೋಮೀಟರ್ ಉದ್ದದ ರಾಜಪಥಕ್ಕೆ ಕರ್ತವ್ಯ ಪಥ ಎಂದು ಪ್ರಧಾನಿ ಮೋದಿ ಇಂದು ಮರುನಾಮಕರಣ ಮಾಡಿದ್ದಾರೆ. ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿ ಹೊಸ ರೂಪದಲ್ಲಿ ಕರ್ತವ್ಯ ಪಥ ಕಂಗೊಳಿಸುತ್ತಿದೆ. ಇದನ್ನೂ ಓದಿ: ರಾಜಪಥ್‍ನಿಂದ ಕರ್ತವ್ಯ ಪಥವಾಗಿ ಬದಲಾದ ದೆಹಲಿ ಐಕಾನಿಕ್ ರಸ್ತೆ ಹೇಗೆ ಅಭಿವೃದ್ಧಿಯಾಗಿದೆ ಗೊತ್ತಾ?

    ಇದೇ ವೇಳೆ, ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಭಾಗವಾಗಿ ಜನವರಿ 23ರಂದು ಇಂಡಿಯಾ ಗೇಟ್‌ನಲ್ಲಿ ಪ್ರಧಾನಿ ಮೋದಿ, ನೇತಾಜಿ ಹೋಲೋಗ್ರಾಮ್ ಅನಾವರಣ ಮಾಡಿದ್ದರು. ಗುರುವಾರ ಅದೇ ಸ್ಥಳದಲ್ಲಿ ನೇತಾಜಿಯ ಪ್ರತಿಮೆ ಸ್ಥಾಪಿಸಲಾಗಿದೆ. ಅಷ್ಟಕ್ಕೂ ಕರ್ತವ್ಯ ಪಥದಲ್ಲಿ ಏನೆಲ್ಲಾ ಬದಲಾಗಿದೆ, ನೇತಾಜಿ ಪ್ರತಿಮೆ ವಿಶೇಷತೆಗಳು ಏನು ಎಂಬುದನ್ನು ನೋಡೋಣ.

    ನೇತಾಜಿ ಪ್ರತಿಮೆ ವಿಶೇಷತೆ
    28 ಅಡಿ ಎತ್ತರವಿರುವ ನೇತಾಜಿ ಪ್ರತಿಮೆ 65 ಟನ್ ತೂಕದ್ದಾಗಿದೆ. ಆಂಧ್ರಪ್ರದೇಶದ ಕಮ್ಮಂನ ಗ್ರಾನೈಟ್ ಬಳಸಿ ಪ್ರತಿಮೆ ಕೆತ್ತಲಾಗಿದೆ. ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಈ ಪ್ರತಿಮೆಯನ್ನು ಕೆತ್ತನೆ ಮಾಡಿದ್ದಾರೆ.‌ ಇದನ್ನೂ ಓದಿ: ಕಿಂಗ್ಸ್‌ವೇಯಿಂದ ರಾಜ್‌ಪಥ್‌; ರಾಜ್‌ಪಥ್‌‌ನಿಂದ ಕರ್ತವ್ಯ ಪಥ್ – ಇಲ್ಲಿದೆ ದೆಹಲಿಯ ಐಕಾನಿಕ್ ರಸ್ತೆಯ ಇತಿಹಾಸ

    Live Tv
    [brid partner=56869869 player=32851 video=960834 autoplay=true]

  • ಇಂಡಿಯಾ ಗೇಟ್ ಮುಂದೆ ಪ್ರತಿಷ್ಠಾನೆ ಆಗಲಿರುವ ಬೋಸ್ ಶಿಲ್ಪವನ್ನು ಕೆತ್ತುತ್ತಿರುವುದು ಕನ್ನಡಿಗ

    ಇಂಡಿಯಾ ಗೇಟ್ ಮುಂದೆ ಪ್ರತಿಷ್ಠಾನೆ ಆಗಲಿರುವ ಬೋಸ್ ಶಿಲ್ಪವನ್ನು ಕೆತ್ತುತ್ತಿರುವುದು ಕನ್ನಡಿಗ

    ಮೈಸೂರು: ದೆಹಲಿಯ ಇಂಡಿಯಾ ಗೇಟ್ ಮುಂಭಾಗ ಸುಭಾಷ್ ಚಂದ್ರ ಬೋಸ್ ಅವರ 30 ಅಡಿ ಎತ್ತರದ ಕಪ್ಪು ಕಲ್ಲಿನ ಏಕ ಶಿಲೆಯ ಮೂರ್ತಿ ನಿರ್ಮಾಣದ ಬಹುದೊಡ್ಡ ಅವಕಾಶ ಈಗ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಸಿಕ್ಕಿದೆ.

    ಕೇದಾರನಾಥ್‍ನಲ್ಲಿ ಶಂಕರಾಚಾರ್ಯರ ಅವರ ಮೂರ್ತಿ ಕೆತ್ತಿ ಖ್ಯಾತಿ ಪಡೆದ ಯೋಗಿರಾಜ್‍ಗೆ ಈಗ ಮತ್ತೊಂದು ಬಹುದೊಡ್ಡ ಅವಕಾಶ ಸಿಕ್ಕಿದೆ. ದೆಹಲಿಯಲ್ಲೇ ಉಳಿದು ಈ ಮೂರ್ತಿ ಕೆತ್ತನೆಯನ್ನು ಇವರು ಮತ್ತು ತಂಡ ಮಾಡಲಿದೆ.

    ಈ ಬಗ್ಗೆ ಮಾತನಾಡಿದ ಯೋಗಿರಾಜ್ ಅವರು, ಇಂಡಿಯಾ ಗೇಟ್‍ಗೆ ಕಲಾಕೃತಿ ಸೇರ್ಪಡೆ ಆಗುತ್ತಿರುವುದು ಹೆಮ್ಮೆಯ ವಿಷಯ. ಗ್ರಾನೇಟ್ ಕಲ್ಲಿನಲ್ಲಿನ ಸುಭಾಷ್‌ ಚಂದ್ರ ಅವರ ಮೂರ್ತಿ ಕೆತ್ತನೆ ಆಗುತ್ತದೆ. 30 ಅಡಿ ಕಲ್ಲಿನಲ್ಲಿ ಈ ಕೆತ್ತನೆ ಮಾಡಬೇಕು. ಬುಧವಾರ ದೆಹಲಿಗೆ ಹೋಗುತ್ತೇನೆ ಎಂದು  ತಿಳಿಸಿದರು. ಇದನ್ನೂ ಓದಿ: ಶೀಘ್ರವೇ ಕೇಂದ್ರ ಸಚಿವ ಸಂಪುಟ ಪುನಾರಚನೆ?

    ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್ ಭೇಟಿಯಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ನೀಡಿದ್ದರು. ಅಷ್ಟೇ ಅಲ್ಲದೇ ಸ್ವತಃ ಪ್ರಧಾನಿ ಸಚಿವಾಲಯದ ಅಧಿಕಾರಿಗಳೇ ದೇಶಾದ್ಯಂತ ಹುಡುಕಾಡಿ ಕೇದಾರಾನಾಥದಲ್ಲಿ ಶಂಕರರ ಪುತ್ಥಳಿ ಕೆತ್ತಲು ಅಂತಿಮವಾಗಿ ಆಯ್ಕೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ

  • ಕೆಲವರಿಗೆ ದೇಶ ಭಕ್ತಿ ಅರ್ಥವಾಗುವುದಿಲ್ಲ: ರಾಹುಲ್ ಗಾಂಧಿ

    ಕೆಲವರಿಗೆ ದೇಶ ಭಕ್ತಿ ಅರ್ಥವಾಗುವುದಿಲ್ಲ: ರಾಹುಲ್ ಗಾಂಧಿ

    ನವದೆಹಲಿ: ರಾಷ್ಟ್ರರಾಜಧಾನಿಯ ಅಪ್ರತಿಮ ಹೆಗ್ಗುರುತಾಗಿರುವ ಇಂಡಿಯಾ ಗೇಟ್ ಹುಲ್ಲುಹಾಸಿನಲ್ಲಿ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿಯ ಜ್ವಾಲೆಯು ಶಾಶ್ವತವಾಗಿ ನಂದಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.

    ಈ ಕುರಿತಂತೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ವಾಲೆ ಇಂದು ನಂದಿಸಲಾಗುತ್ತಿರುವುದು ಅತ್ಯಂತ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥವಾಗುವುದಿಲ್ಲ. ಆದರೂ ಪರವಾಗಿಲ್ಲ ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ

    ಇಂಡಿಯಾ ಗೇಟ್‍ನಿಂದ 400 ಮೀಟರ್ ದೂರದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಅಮರ್ ಜವಾನ್ ಜ್ಯೋತಿಯ ಜ್ವಾಲೆಯನ್ನು ನಂದಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

    1972ರ ಜನವರಿ 26 ರಂದು ಅಮರ್ ಜವಾನ್ ಜ್ಯೋತಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಉದ್ಘಾಟಿಸಿದ್ದರು. ಸ್ವಾತಂತ್ರ್ಯದ ನಂತರ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಯೋಧರ ಮತ್ತು ಹುತಾತ್ಮರ ಸ್ಮಾರಕವಾಗಿದೆ. ಸ್ಮಾರಕದಲ್ಲಿರುವ ಗ್ರಾನೈಟ್ ಫಲಕಗಳ ಮೇಲೆ 25,942 ಸೈನಿಕರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲಾಗಿದೆ.

  • ಪೌರತ್ವ ಕಾಯ್ದೆ ಕಿಚ್ಚು- ಇಂಡಿಯಾ ಗೇಟ್ ಬಳಿ ಪ್ರಿಯಾಂಕಾ ಧರಣಿ

    ಪೌರತ್ವ ಕಾಯ್ದೆ ಕಿಚ್ಚು- ಇಂಡಿಯಾ ಗೇಟ್ ಬಳಿ ಪ್ರಿಯಾಂಕಾ ಧರಣಿ

    ನವದೆಹಲಿ: ದೇಶದ ಬಹುತೇಕ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚು ಹೊತ್ತಿಕೊಂಡಿದ್ದು, ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿನ ಹಿಂಸಾಚಾರದ ನಂತರ ದೆಹಲಿಯಲ್ಲೂ ಹೆಚ್ಚಾಗಿದೆ. ಈ ನಡುವೆಯೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಧರಣಿ ನಡೆಸಲು ಪ್ರಾರಂಭಿಸಿದ್ದಾರೆ.

    ಪ್ರಿಯಾಂಕಾ ಗಾಂಧಿಯವರು ಇಂಡಿಯಾ ಗೇಟ್ ಬಳಿ ಧರಣಿ ಆರಂಭಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿ ಸಂಘಟನೆಗಳು ಅವರಿಗೆ ಬೆಂಬಲ ವ್ಯಕ್ತಪಡಿಸಿವೆ.

    ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ನಾಯಕರು ಎರಡು ಗಂಟೆಗಳ ಕಾಲ ಇಂಡಿಯಾ ಗೇಟ್ ಬಳಿ ಧರಣಿ ನಡೆಸುವುದಾಗಿ ಹೇಳಿದ್ದರು. ಇದು ದೇಶದ ವಿದ್ಯಾರ್ಥಿಗಳು ಹಾಗೂ ಯುವಕರ ಪ್ರಶ್ನೆಯಾಗಿದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸಂಜೆ ನಾಲ್ಕರಿಂದ 2ಗಂಟೆಗಳ ಕಾಲ ಸಾಂಕೇತಿಕ ಧರಣಿ ನಡೆಸುತ್ತೇವೆ ಎಂದು ಹೇಳಿದ್ದರು.

    ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸುತ್ತಿವೆ. ಈ ಮಧ್ಯೆಯೇ ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದೆ. ಪೌರತ್ವ ತಿದ್ದಪಡಿ ಮಸೂದೆಯು ಮೇಲ್ಮನೆ ಹಾಗೂ ಕೆಳಮನೆ ಎರಡರಲ್ಲೂ ಪಾಸ್ ಆಗಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಸಹ ಅಂಕಿತ ಹಾಕಿದ್ದು, ಕಾಯ್ದೆಯಾಗಿದೆ. ಇದರ ಬೆನ್ನಲ್ಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಹೋರಾಟ ತೀವ್ರಗೊಂಡಿದೆ.

    ಅಸ್ಸಾಂ, ಮೆಘಾಲಯ ಸೇರಿದಂತೆ ಈಶಾನ್ಯದ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಬಸ್, ರೈಲುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ಥಾನ ಅಲ್ಪಸಂಖ್ಯಾತರಿಗೆ ಪೌರತ್ವ ವಿಸ್ತರಿಸುವುದಾಗಿದೆ.

  • ಬುಲೆಟ್ ಪ್ರೂಫ್ ಜಾಕೆಟ್ ಕೊಡ್ಲಿಲ್ಲ, ದೇಶಕ್ಕಿಂತ ಪರಿವಾರವೇ ಅವರಿಗೆ ಮುಖ್ಯವಾಗಿತ್ತು : ಕಾಂಗ್ರೆಸ್ ತಿವಿದ ಮೋದಿ

    ಬುಲೆಟ್ ಪ್ರೂಫ್ ಜಾಕೆಟ್ ಕೊಡ್ಲಿಲ್ಲ, ದೇಶಕ್ಕಿಂತ ಪರಿವಾರವೇ ಅವರಿಗೆ ಮುಖ್ಯವಾಗಿತ್ತು : ಕಾಂಗ್ರೆಸ್ ತಿವಿದ ಮೋದಿ

    ನವದೆಹಲಿ: ಈ ಹಿಂದೆ ಯೋಧರಿಗೆ ಬುಲೆಟ್ ಪ್ರೂಫ್ ಜಾಕೆಟ್ ಇರಲಿಲ್ಲ. ಹಿಂದಿನ ಸರ್ಕಾರಕ್ಕೆ ಸೇನೆ ಮನವಿ ಮಾಡಿದ್ದರೂ ಸರ್ಕಾರ ಕೊಟ್ಟಿರಲಿಲ್ಲ. ಆದರೆ ನಮ್ಮ ಸರ್ಕಾರ 4 ವರ್ಷದಲ್ಲಿ 2 ಲಕ್ಷಕ್ಕೂ ಹೆಚ್ಚು ಬುಲೆಟ್ ಪ್ರೂಫ್ ಜಾಕೆಟ್ ಖರೀದಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಯುಪಿಎ ಸರ್ಕಾರವನ್ನು ಟೀಕಿಸಿದ್ದಾರೆ.

    ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ ಯೋಧರಿಗೆ ಅರ್ಪಿಸಿದರು. ದೆಹಲಿಯ ಮೇಜರ್ ಧ್ಯಾನ್ ಚಂದ್ ನ್ಯಾಷನಲ್ ಸ್ಟೇಡಿಯಂನಲ್ಲಿ ಮಾತನಾಡಿದ ಅವರು ಯೋಧರ ಕೊಡುಗೆಯನ್ನು ನೆನೆದು ಕೊಂಡಾಡಿದರು.

    ನಮ್ಮ ಸರ್ಕಾರ ಯೋಧರ ರಕ್ಷಣೆಗೆ ಮುಂದಾಗಿದೆ. ಇದಕ್ಕಾಗಿ ಹೊಸ ಅತ್ಯಾಧುನಿಕ ವಿಮಾನ, ಹೆಲಿಕಾಪ್ಟರ್, ಅತ್ಯಾಧುನಿಕ ಶಸ್ತ್ರಾಸ್ತ್ರ ಖರೀದಿ ಮಾಡಿದೆ. ದೇಶ ಮೊದಲಾ ಅಥವಾ ಒಂದು ಕುಟುಂಬ ಮೊದಲೇ ಎಂದು ಪ್ರಶ್ನಿಸಿಬೇಕಿದೆ ಎಂದರು.

    ಈ ಹಿಂದಿನ ಸರ್ಕಾರ ಸೇನೆಯನ್ನು ಹೇಗೆ ನೋಡಿಕೊಳ್ಳುತ್ತಿತ್ತು ಎನ್ನುವುದು ತಿಳಿದಿದೆ. ದೇಶಕ್ಕಾಗಿ ಹುತಾತ್ಮರಾದ ಯೋಧರಿಗೆ ಏಕೆ ಈ ರೀತಿಯ ಅನ್ಯಾಯ ಮಾಡಿದ್ದಾರೆ? ಮೊದಲು ಇದ್ದ ಸರ್ಕಾರ ತಮ್ಮ ಅಭಿವೃದ್ಧಿಗೆ ಮಾತ್ರ ಗಮನ ನೀಡಿತ್ತು. ಇದಕ್ಕೆ ಅವರು ಜಾರಿಗೆ ತಂದ ಯೋಜನೆಗಳನ್ನು ಗಮನಿಸಿದರೆ ತಿಳಿಯುತ್ತದೆ. ರಾಷ್ಟ್ರೀಯ ಯೋಧರ ಸ್ಮಾರಕ ನಿರ್ಮಿಸಲು ಕೂಡ ಆಗಿರಲಿಲ್ಲ. ಸೇನೆಯನ್ನು ಮೊದಲು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತಿದ್ದರು. ದೇಶಕ್ಕಿಂತ ಅವರಿಗೆ ಪರಿವಾರವೇ, ಮುಖ್ಯವಾಗಿತ್ತು. ರಾಷ್ಟ್ರೀಯ ಯೋಧರ ಸ್ಮಾರಕ ನಿರ್ಮಾಣಕ್ಕೂ ಹೀಗೆ ಹೇಳುತ್ತಿದ್ದರು. ಆದರೆ ಸದ್ಯ ನನಗೆ ಸ್ಮಾರಕ ಉದ್ಘಾಟನೆ ಮಾಡುವ ಅವಕಾಶ ಲಭಿಸಿದೆ ಎಂದು ತಿಳಿಸಿದರು.

    ದೇಶದ ಸೈನ್ಯಕ್ಕೆ ಬಲ ತುಂಬಲು ಪ್ರಯತ್ನಿಸಿದರೆ ತಮ್ಮ ಶಕ್ತಿಯನ್ನೆಲ್ಲಾ ಬಳಸಿ ತಡೆ ನೀಡಲು ಬಯಸುತ್ತಿದ್ದಾರೆ. ಇದೇ ಜನರು ದೇಶಕ್ಕೆ ರಫೇಲ್ ಯುದ್ಧ ವಿಮಾನ ಬಾರದಂತೆ ತಡೆಯುತ್ತಿದ್ದಾರೆ. ಆದರೆ ಅವರ ಪ್ರಯತ್ನ ಸಫಲ ಆಗುವುದಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಆಗಸದಲ್ಲಿ ರಫೇಲ್ ಹಾರಾಟ ನಡೆಸಲಿದೆ ಎಂದರು.

    ದೇಶ ಸ್ವಾವಲಂಬಿಯಾಗಿ ಮಾಡುವ ಪ್ರಯತ್ನದ ಫಲವಾಗಿ ಅತ್ಯಾಧುನಿಕ ರೈಫಲ್ ಗಳು ಭಾರತದಲ್ಲೇ ತಯಾರಿಸಲಾಗುತ್ತಿದೆ. ಇಲ್ಲಿ ಮೋದಿ ಹೆಸರು ಮುಖ್ಯವಲ್ಲ. ಈ ದೇಶದ ಸಭ್ಯತೆ, ಸಂಸ್ಕೃತಿ, ಇತಿಹಾಸ ಎಲ್ಲಕ್ಕಿಂತ ಎತ್ತರಲ್ಲಿ ಇರುತ್ತದೆ ಎಂದರು.

    ತಮ್ಮ ಭಾಷಣದ ಉದ್ದಕ್ಕೂ ಕಾಂಗ್ರೆಸ್ ಪಕ್ಷದ ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ ನಡೆಸಿದರು. ಈ ಹಿಂದೆ ಅಸಾಧ್ಯ ಎಂದು ತಿಳಿದಿದ್ದ ಸಂಗತಿಗಳನ್ನು ನಾವು ಸಾಧ್ಯವಾಗಿಸುತ್ತಿದ್ದೇವೆ. ಜನರು 2014 ರಲ್ಲಿ ಆಶೀರ್ವಾದ ಮಾಡಿದ್ದ ಫಲವಾಗಿ ಕೆಲಸಗಳನ್ನು ಮಾಡಿದ್ದೇವೆ. ದೇಶದ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ಜರ ಪರವಾಗಿ ನಮ್ಮ ಸರ್ಕಾರ ನಿಲ್ಲಲಿದೆ ಎಂದರು.

    ವಿಶೇಷತೆ ಏನು?
    ಸ್ಮಾರಕದ ಒಳ ಭಾಗದಲ್ಲಿ ನಾಲ್ಕು ಸಮಾನಾಂತರ ವೃತ್ತಗಳನ್ನು ನಿರ್ಮಿಸಿದ್ದು ಅಮರ ಚಕ್ರ, ವೀರ ಚಕ್ರ, ತ್ಯಾಗ ಚಕ್ರ ಹಾಗೂ ಸುರಕ್ಷಾ ಚಕ್ರ ಎಂದು ಹೆಸರಿಡಲಾಗಿದೆ. ಈ ನಾಲ್ಕು ಚಕ್ರದಲ್ಲಿ ದೇಶಕ್ಕಾಗಿ ಮಡಿದ ಭೂ ಸೇನೆಯ 25,539 ವಾಯುಸೇನೆಯ 164 ಹಾಗೂ ನೌಕಾಪಡೆಯ 239 ಯೋಧರ ಹೆಸರನ್ನು ಕೆತ್ತಲಾಗಿದೆ.

    ಈ ನಾಲ್ಕು ವೃತ್ತಗಳಲ್ಲಿ ಮುಂದಿನ 30 ವರ್ಷಕ್ಕೆ ಹುತಾತ್ಮ ಸೈನಿಕರ ಹೆಸರು ಕೆತ್ತಲು ಸ್ಥಳವನ್ನು ಮೀಸಲಿಡಲಾಗಿದೆ. ಮುಂದಿನ 60 ವರ್ಷಗಳ ಕಾಲ ಹುತಾತ್ಮ ಯೋಧರ ಹೆಸರು ಕೆತ್ತಲು ಪ್ರತ್ಯೇಕ ವೃತ್ತ ನಿರ್ಮಾಣ ಮಾಡಲಾಗಿದೆ. ಪರಮ ವೀರ ಚಕ್ರ ಪಡೆದ ಯೋಧರ ಹೆಸರುಗಳನ್ನು ಪ್ರತ್ಯೇಕವಾಗಿ ಕೆತ್ತಲಾಗಿದೆ. ಗ್ರಾನೈಟ್ ಕಲ್ಲಿನಿಂದ ಹುತಾತ್ಮ ಯೋಧರ ಪ್ರತಿಮೆಗಳನ್ನು ನಿರ್ಮಿಸಿದ್ದು ಮರಳುಗಲ್ಲಿನಿಂದ ಅವುಗಳನ್ನು ಕೋಟ್ ಮಾಡಲಾಗಿದೆ.

    14 ಲಕ್ಷ ಲೀಟರ್ ಅಂತರ್ಜಲ ಶೇಖರಣಾ ವ್ಯವಸ್ಥೆ ಮಾಡಿದ್ದು ಮರಳುಗಲ್ಲು ತಣ್ಣಗೆ ಹಾಗೂ ಸುತ್ತಲಿನ ಹಸಿರು ಒಣಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹುತಾತ್ಮ ಯೋಧರ ಹೆಸರಿನ ಹುಡುಕಾಟಕ್ಕಾಗಿ ಡಿಜಿಟಲ್ ಸರ್ಚಿಂಗ್ ವ್ಯವಸ್ಥೆ ಮಾಡಲಾಗಿದೆ. ವಿಶ್ವದ ಅತಿ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ವಿನ್ಯಾಸಕ ಶ್ರೀರಾಮ್ ಸುತಾರ್ ಮ್ಯೂಸಿಯಂನಲ್ಲಿ ಆರು ಪ್ರತಿಮೆಗಳನ್ನು ನಿರ್ಮಿಸಿದ್ದಾರೆ.

    ನವದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಲಾಗಿರುವ ಈ ಸ್ಮಾರಕ ದೇಶದ ಮೊದಲ ವಾರ್ ಮ್ಯೂಸಿಯಂ ಆಂಡ್ ಮೆಮೋರಿಯಲ್ ಆಗಿದ್ದು ದೇಶಕ್ಕಾಗಿ ಹೋರಾಡಿ ಮಡಿದ ಯೋಧರಿಗೆ ಇದನ್ನು ಸಮರ್ಪಿಸಲಾಗಿದೆ. ಸುಮಾರು 176 ಕೋಟಿ ರೂಪಾಯಿ ವೆಚ್ಚದಲ್ಲಿ ಹೈದರಾಬಾದ್ ಕಂಪನಿಯೊಂದು ಈ ಕಾಮಗಾರಿಯನ್ನು ಪೂರ್ಣಗೊಳಿಸಿದ್ದು ಉನ್ನತ ತಂತ್ರಜ್ಞಾನ ಮತ್ತು ಹಲವು ವಿಶೇಷತೆಗಳಿಂದ ಮ್ಯೂಸಿಯಂ ಕಟ್ಟಲಾಗಿದೆ. ರಾಷ್ಟ್ರಪತಿ ಭವನ ಮತ್ತು ಇಂಡಿಯಾ ಗೇಟ್ ಸಮಾನಾಂತರವಾಗಿ ಮ್ಯೂಸಿಯಂ ನಿರ್ಮಾಣವಾಗಿದ್ದು ಈ ಎರಡು ಪ್ರದೇಶಗಳಲ್ಲಿ ನಿಂತರೂ ವಾರ್ ಮ್ಯೂಸಿಯಂನ ಅಮರ್ ಜವಾನ್ ಜ್ಯೋತಿಯ ಅಶೋಕ ಸ್ತಂಭ ಕಾಣಲಿದೆ.

    https://www.youtube.com/watch?v=ioxYSDmcxC4

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 60 ವರ್ಷಗಳ ಕನಸು ನನಸು – ಲೋಕಾರ್ಪಣೆಗೊಳ್ಳಲಿದೆ ಯುದ್ಧ ಸ್ಮಾರಕ : ವಿಶೇಷತೆ ಏನು?

    60 ವರ್ಷಗಳ ಕನಸು ನನಸು – ಲೋಕಾರ್ಪಣೆಗೊಳ್ಳಲಿದೆ ಯುದ್ಧ ಸ್ಮಾರಕ : ವಿಶೇಷತೆ ಏನು?

    ನವದೆಹಲಿ: ದೇಶದ 60 ವರ್ಷಗಳ ಕನಸು ನನಸಾಗುತ್ತಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ ಸೋಮವಾರ ಉದ್ಘಾಟನೆಗೊಳ್ಳಲಿದ್ದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಕೇಂದ್ರದ ಮೋದಿ ಸರ್ಕಾರ ದೇಶದ 26 ಸಾವಿರ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಿದೆ.

    ನವದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಲಾಗಿರುವ ಈ ಸ್ಮಾರಕ ದೇಶದ ಮೊದಲ ವಾರ್ ಮ್ಯೂಸಿಯಂ ಆಂಡ್ ಮೆಮೋರಿಯಲ್ ಆಗಿದ್ದು ದೇಶಕ್ಕಾಗಿ ಹೋರಾಡಿ ಮಡಿದ ಯೋಧರಿಗೆ ಇದನ್ನು ಸಮರ್ಪಿಸಲಾಗುತ್ತದೆ.

    ಸುಮಾರು 176 ಕೋಟಿ ರೂಪಾಯಿ ವೆಚ್ಚದಲ್ಲಿ ಹೈದರಾಬಾದ್ ಕಂಪನಿಯೊಂದು ಈ ಕಾಮಗಾರಿಯನ್ನು ಪೂರ್ಣಗೊಳಿಸಿದ್ದು ಉನ್ನತ ತಂತ್ರಜ್ಞಾನ ಮತ್ತು ಹಲವು ವಿಶೇಷತೆಗಳಿಂದ ಮ್ಯೂಸಿಯಂ ಕಟ್ಟಲಾಗಿದೆ. ರಾಷ್ಟ್ರಪತಿ ಭವನ ಮತ್ತು ಇಂಡಿಯಾ ಗೇಟ್ ಸಮಾನಾಂತರವಾಗಿ ಮ್ಯೂಸಿಯಂ ನಿರ್ಮಾಣವಾಗಿದ್ದು ಈ ಎರಡು ಪ್ರದೇಶಗಳಲ್ಲಿ ನಿಂತರೂ ವಾರ್ ಮ್ಯೂಸಿಯಂನ ಅಮರ್ ಜವಾನ್ ಜ್ಯೋತಿಯ ಅಶೋಕ ಸ್ತಂಭ ಕಾಣಲಿದೆ.

    ವಿಶೇಷತೆ ಏನು?
    ಸ್ಮಾರಕದ ಒಳ ಭಾಗದಲ್ಲಿ ನಾಲ್ಕು ಸಮಾನಾಂತರ ವೃತ್ತಗಳನ್ನು ನಿರ್ಮಿಸಿದ್ದು ಅಮರ ಚಕ್ರ, ವೀರ ಚಕ್ರ, ತ್ಯಾಗ ಚಕ್ರ ಹಾಗೂ ಸುರಕ್ಷ ಚಕ್ರ ಎಂದು ಹೆಸರಿಡಲಾಗಿದೆ. ಈ ನಾಲ್ಕು ಚಕ್ರದಲ್ಲಿ ದೇಶಕ್ಕಾಗಿ ಮಡಿದ ಭೂ ಸೇನೆಯ 25,539 ವಾಯುಸೇನೆಯ 164 ಹಾಗೂ ನೌಕಾಪಡೆಯ 239 ಯೋಧರ ಹೆಸರನ್ನು ಕೆತ್ತಲಾಗಿದೆ.

    ಈ ನಾಲ್ಕು ವೃತ್ತಗಳಲ್ಲಿ ಮುಂದಿನ 30 ವರ್ಷಕ್ಕೆ ಹುತಾತ್ಮ ಸೈನಿಕರ ಹೆಸರು ಕೆತ್ತಲು ಸ್ಥಳವನ್ನು ಮೀಸಲಿಡಲಾಗಿದೆ. ಮುಂದಿನ 60 ವರ್ಷಗಳ ಕಾಲ ಹುತಾತ್ಮ ಯೋಧರ ಹೆಸರು ಕೆತ್ತಲು ಪ್ರತ್ಯೇಕ ವೃತ್ತ ನಿರ್ಮಾಣ ಮಾಡಲಾಗಿದೆ. ಪರಮ ವೀರ ಚಕ್ರ ಪಡೆದ ಯೋಧರ ಹೆಸರುಗಳನ್ನು ಪ್ರತ್ಯೇಕವಾಗಿ ಕೆತ್ತಲಾಗಿದೆ. ಗ್ರಾನೈಟ್ ಕಲ್ಲಿನಿಂದ ಹುತಾತ್ಮ ಯೋಧರ ಪ್ರತಿಮೆಗಳನ್ನು ನಿರ್ಮಿಸಿದ್ದು ಮರಳುಗಲ್ಲಿನಿಂದ ಅವುಗಳನ್ನು ಕೋಟ್ ಮಾಡಲಾಗಿದೆ.

    14 ಲಕ್ಷ ಲೀಟರ್ ಅಂತರ್ಜಲ ಶೇಖರಣಾ ವ್ಯವಸ್ಥೆ ಮಾಡಿದ್ದು ಮರಳುಗಲ್ಲು ತಣ್ಣಗೆ ಹಾಗೂ ಸುತ್ತಲಿನ ಹಸಿರು ಒಣಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹುತಾತ್ಮ ಯೋಧರ ಹೆಸರಿನ ಹುಡುಕಾಟಕ್ಕಾಗಿ ಡಿಜಿಟಲ್ ಸರ್ಚಿಂಗ್ ವ್ಯವಸ್ಥೆ ಮಾಡಲಾಗಿದೆ. ವಿಶ್ವದ ಅತಿ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ವಿನ್ಯಾಸಕ ಶ್ರೀರಾಮ್ ಸುತಾರ್ ಮ್ಯೂಸಿಯಂನಲ್ಲಿ ಆರು ಪ್ರತಿಮೆಗಳನ್ನು ನಿರ್ಮಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv