Tag: ಇಂಡಿಯಾ: ದಿ ಮೋದಿ ಕ್ವೆಶ್ಚನ್

  • ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

    ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಸಾಕ್ಷ್ಯಚಿತ್ರ ಹೊರತಂದು ವಿವಾದಕ್ಕೆ ಸಿಲುಕಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ (Income Tax) ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದೆಹಲಿ (New Delhi) ಹಾಗೂ ಮುಂಬೈನಲ್ಲಿರುವ (Mumbai) ಬಿಬಿಸಿ ಕಚೇರಿಗಳಲ್ಲಿ ಸರ್ವೇ ನಡೆಸಲಾಗಿದೆ.

    BBC (ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್) ಒಳಗೊಂಡಿರುವ ಅಂತಾರಾಷ್ಟ್ರೀಯ ತೆರಿಗೆ ಮತ್ತು ಅಕ್ರಮಗಳ ಆರೋಪದ ಮೇಲೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮತಾಂಧತೆಯನ್ನ ಭಯೋತ್ಪಾದನೆಗೆ ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ತಿತ್ತು- PFI ನಿಷೇಧ ಸಮರ್ಥಿಸಿಕೊಂಡ ಶಾ

    ಬಿಬಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನೇಕ ಪತ್ರಕರ್ತರ ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಕೇವಲ ಸರ್ವೇ ಅಷ್ಟೆ. ನಮ್ಮ ಅಧಿಕಾರಿಗಳು, ಬಿಬಿಸಿ ಕಚೇರಿಯ ಅಕೌಂಟ್‌ ಬುಕ್‌ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

    2002ರ ಗುಜರಾತ್‌ ಗಲಭೆ ಕುರಿತು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿ ಬಿಬಿಸಿ ವಿವಾದಕ್ಕೆ ಸಿಲುಕಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕ್ರಮವಹಿಸಿತ್ತು. ಈ ಸಂಬಂಧ ಯೂಟ್ಯೂಬ್‌, ಟ್ವಿಟ್ಟರ್‌ಗೆ ನಿರ್ದೇಶನ ನೀಡಿತ್ತು. ಅಷ್ಟೇ ಅಲ್ಲದೇ, ಬಿಬಿಸಿ ನಿಷೇಧಿಸಬೇಕು ಎಂದು ಹಿಂದೂಪರ ಸಂಘಟನೆಯ ಸದಸ್ಯರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಇದನ್ನೂ ಓದಿ: ರಾಗಾ ವಿಮಾನವನ್ನು ವಾರಣಾಸಿಯಲ್ಲಿ ಬೇಕೆಂದೇ ಇಳಿಸಲು ನಿರಾಕರಿಸಲಾಗಿದೆ: ಕಾಂಗ್ರೆಸ್ ಆರೋಪ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೋದಿ ಕುರಿತ BBC ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾದ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

    ಮೋದಿ ಕುರಿತ BBC ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾದ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಸಂಬಂಧಿಸಿದ ಬಿಬಿಸಿ (BBC) ವಿವಾದಾತ್ಮಕ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾಗಿದ್ದ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ (Jamia Millia Islamia University) ಮೂವರು ಎಡಪಂಥೀಯ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್‌ ಇಂಡಿಯಾವು ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರ ಸ್ಕ್ರೀನಿಂಗ್‌ ಮಾಡಲಾಗುವುದು ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದನ್ನು ಗಮನಿಸಿ ತಕ್ಷಣ ಎಚ್ಚೆತ್ತ ವಿವಿ ಆಡಳಿತ ಮಂಡಳಿ, ಕ್ಯಾಂಪಸ್‌ನಲ್ಲಿ ಯಾವುದೇ ಅನಧಿಕೃತ ಕೂಟಗಳಿಗೆ ಅವಕಾಶ ಕಲ್ಪಿಸದಿರಲು ಕ್ರಮವಹಿಸಿದೆ. ಜೊತೆಗೆ ಪೊಲೀಸರು, ಅಶ್ರುವಾಯು ದಳ ಸಿಬ್ಬಂದಿ ಕೂಡ ದೆಹಲಿ ಕಾಲೇಜು ಗೇಟ್‌ ಬಳಿ ಜಮಾಯಿಸಿದ್ದಾರೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರಕ್ಕೆ ವಿರೋಧ – ಟೀಕೆಗೆ ಗುರಿಯಾಗಿದ್ದ ಎ.ಕೆ.ಆ್ಯಂಟನಿ ಪುತ್ರ ಕಾಂಗ್ರೆಸ್‌ಗೆ ರಾಜೀನಾಮೆ

    ಪ್ರಧಾನಿ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಗಲಭೆ (2002 – ಗೋಧ್ರಾ ಹತ್ಯಾಕಾಂಡ) ಆಧರಿಸಿ ಬಿಬಿಸಿ ಸಾಕ್ಷ್ಯಚಿತ್ರ ಮಾಡಿದೆ. ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿದ್ದು, ಸಾಮಾಜಿಕ ಮಾಧ್ಯಮ ಕಂಪನಿಗಳು ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ಆದರೆ ಕೇಂದ್ರದ ಧೋರಣೆಗೆ ವಿಪಕ್ಷಗಳು ಟೀಕೆ ವ್ಯಕ್ತಪಡಿಸಿವೆ. ಇದು ಘೋರ ಸೆನ್ಷಾರ್‌ಶಿಪ್‌ ಎಂದು ಕಿಡಿಕಾರಿವೆ.

    ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಸಂಜೆ ವಿದ್ಯಾರ್ಥಿಗಳ ವಿಭಾಗವು ಸಾಕ್ಷ್ಯಚಿತ್ರ ಸ್ಕ್ರೀನಿಂಗ್ ಮಾಡಲು ಮುಂದಾಗಿತ್ತು. ಆದರೆ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಇಂಟರ್ನೆಟ್ ಮತ್ತು ವಿದ್ಯುತ್ ಎರಡೂ ಸ್ಥಗಿತಗೊಂಡಿದ್ದರಿಂದ ತೊಂದರೆಯಾಯಿತು. ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದರೆ ಶಿಸ್ತು ಕ್ರಮ ಜರುಗಿಸುವುದಾಗಿ ಜೆಎನ್‌ಯು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಕ್ರಮವು ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಬಹುದು ಎಂದು ಹೇಳಲಾಗಿದೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ದಂಗಲ್ – ಜೆಎನ್‍ಯುನಲ್ಲಿ ಇಂಟರ್‌ನೆಟ್, ವಿದ್ಯುತ್ ಸ್ಥಗಿತ

    ಏನಿದು ಗೋಧ್ರಾ ಹತ್ಯಾಕಾಂಡ?
    ಗುಜರಾತ್‌ನ ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ ರೈಲಿಗೆ ಬೆಂಕಿ ಹಚ್ಚಿದ ಪರಿಣಾಮ 59 ಕರಸೇವಕರು ಸುಟ್ಟು ಹೋಗಿದ್ದರು. ಇದಕ್ಕೆ ಪ್ರತಿಕಾರವಾಗಿ ಗುಜರಾತ್‌ನ ಅನೇಕ ಕಡೆಗಳಲ್ಲಿ ಕೋಮು ಗಲಭೆ ನಡೆಯಿತು. ಅದರಲ್ಲಿ 1,200 ಮಂದಿ ಹತ್ಯೆಯಾದರು. ಸತ್ತವರ ಪೈಕಿ ಬಹುತೇಕರು ಮುಸ್ಲಿಮರು. ಗುಜರಾತ್‌ ಗಲಭೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದರು. ಗಲಭೆ ನಿಯಂತ್ರಣಕ್ಕೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು ಎಂಬ ಆರೋಪಗಳು ಕೇಳಿಬಂದಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೋದಿ ಸಾಕ್ಷ್ಯಚಿತ್ರಕ್ಕೆ ವಿರೋಧ – ಟೀಕೆಗೆ ಗುರಿಯಾಗಿದ್ದ ಎ.ಕೆ.ಆ್ಯಂಟನಿ ಪುತ್ರ ಕಾಂಗ್ರೆಸ್‌ಗೆ ರಾಜೀನಾಮೆ

    ಮೋದಿ ಸಾಕ್ಷ್ಯಚಿತ್ರಕ್ಕೆ ವಿರೋಧ – ಟೀಕೆಗೆ ಗುರಿಯಾಗಿದ್ದ ಎ.ಕೆ.ಆ್ಯಂಟನಿ ಪುತ್ರ ಕಾಂಗ್ರೆಸ್‌ಗೆ ರಾಜೀನಾಮೆ

    ನವದೆಹಲಿ: 2002ರ ಗುಜರಾತ್‌ ಗಲಭೆಗೆ (Gujarat Riots) ಸಂಬಂಧಿಸಿದ ಬಿಬಿಸಿ (BBC) ವಿವಾದಾತ್ಮಕ ಸಾಕ್ಷ್ಯಾಚಿತ್ರದ ವಿರುದ್ಧ ಮಾತನಾಡಿ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದ, ಕಾಂಗ್ರೆಸ್‌ ಹಿರಿಯ ನಾಯಕ ಎ.ಕೆ.ಆ್ಯಂಟನಿ (A.K.Antony) ಪುತ್ರ ಅನಿಲ್‌ ಕೆ.ಆ್ಯಂಟನಿ (Anil k Antony) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

    ಕೇರಳದಲ್ಲಿ (Kerala) ಕಾಂಗ್ರೆಸ್‌ನ (Congress) ಸಾಮಾಜಿಕ ಮಾಧ್ಯಮ ಕೋಶದ ಭಾಗವಾಗಿದ್ದ ಅನಿಲ್ ಆ್ಯಂಟನಿ, ಪ್ರಧಾನಿ ನರೇಂದ್ರ ಮೋದಿಗೆ ಸಂಬಂಧಿಸಿದಂತೆ ಬಿಬಿಸಿ ನಿರ್ಮಿಸಿರುವ ʼಇಂಡಿಯಾ: ದಿ ಮೋದಿ ಕ್ವೆಶ್ಚನ್‌ʼ (India: The Modi Question) ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಟ್ವೀಟ್‌ ಮಾಡಿದ್ದರು. ಅದಕ್ಕೆ ಕಾಂಗ್ರೆಸ್‌ ಪಕ್ಷದಿಂದಲೇ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಅನಿಲ್‌ ಆ್ಯಂಟನಿ ಪಕ್ಷದ ತಮ್ಮ ಎಲ್ಲಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ದಂಗಲ್ – ಜೆಎನ್‍ಯುನಲ್ಲಿ ಇಂಟರ್‌ನೆಟ್, ವಿದ್ಯುತ್ ಸ್ಥಗಿತ

    ಟ್ವೀಟ್‌ ಮೂಲಕ ರಾಜೀನಾಮೆ ಘೋಷಿಸಿರುವ ಅನಿಲ್. “ನಾನು ಕಾಂಗ್ರೆಸ್‌ನ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದೇನೆ. ಬಿಬಿಸಿ ಸಾಕ್ಷ್ಯಚಿತ್ರ ವಿರುದ್ಧ ಟ್ವೀಟ್‌ ಮಾಡಿದ್ದಕ್ಕೆ ಅಸಹಿಷ್ಣುತೆ ಕರೆಗಳು ಮತ್ತು ಫೇಸ್‌ಬುಕ್‌ನಲ್ಲಿ ದ್ವೇಷ/ನಿಂದನೆ ಬರುತ್ತಿದೆ” ಎಂದು ತಿಳಿಸಿದ್ದಾರೆ.

    “ಭಾರತದ ವಿರುದ್ಧ ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ ಹೊಂದಿರುವ ರಾಜ್ಯ ಪ್ರಾಯೋಜಿತ ಚಾನೆಲ್ ಬಿಬಿಸಿ” ಎಂದು ಅನಿಲ್‌ ಆ್ಯಂಟನಿ ಸಾಕ್ಷ್ಯಚಿತ್ರದ ವಿರುದ್ಧ ಟ್ವೀಟ್‌ ಮಾಡಿ ನಿನ್ನೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ

    ಅನಿಲ್ ಆ್ಯಂಟನಿ ತಂದೆ ಎ.ಕೆ.ಆ್ಯಂಟನಿ ಅವರು ಕಾಂಗ್ರೆಸ್ ಹಿರಿಯ ನಾಯಕರಲ್ಲಿ ಒಬ್ಬರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಕೇಂದ್ರ ರಕ್ಷಣಾ ಸಚಿವರಾಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ

    ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕುರಿತು ಬಿಬಿಸಿ (BBC) ರಚಿಸಿರುವ ಸಾಕ್ಷ್ಯಚಿತ್ರ (Documentary) ಪ್ರಸಾರವನ್ನು ಕೇಂದ್ರ ನಿರ್ಬಂಧಿಸಿದ್ದರೂ ಹೈದರಾಬಾದ್ ವಿಶ್ವವಿದ್ಯಾಲಯದ (Hyderabad University) ಕ್ಯಾಂಪಸ್‌ನಲ್ಲಿ ಪ್ರದರ್ಶನ ಮಾಡಿರುವುದಾಗಿ ದೂರು ದಾಖಲಾಗಿದೆ.

    ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ (India: The Modi Question) ಹೆಸರಿನ ಸಾಕ್ಷ್ಯಚಿತ್ರ 2002ರ ಗಲಭೆಯ ಸಂದರ್ಭದ ಗುಜರಾತ್ ನಾಯಕತ್ವದ ಬಗ್ಗೆ ತಪ್ಪು ವರದಿ ಮಾಡಿರುವುದಾಗಿ ವಿವಾದಕ್ಕೀಡಾಗಿತ್ತು. ಈ ಹಿನ್ನೆಲೆ ಕಳೆದ ಶನಿವಾರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಯೂಟ್ಯೂಬ್‌ನಲ್ಲಿ ಬಿಬಿಸಿ ರಚಿಸಿರುವ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದೆ.

    ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸೋಮವಾರ ಅಧಿಕಾರಿಗಳಿಗೆ ದೂರು ಸಲ್ಲಿಸಿದೆ. ಭದ್ರತಾ ಇಲಾಖೆಯಿಂದ ವರದಿಯನ್ನು ನಿರೀಕ್ಷಿಸಲಾಗಿದ್ದು, ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮೋದಿ ಮೆಗಾ ರೋಡ್ ಶೋಗೆ ಪ್ಲಾನ್

    ಕೆಲ ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ಪ್ರದರ್ಶನದ ಬಗ್ಗೆ ಯಾವುದೇ ಉಲ್ಲಂಘನೆ ಮಾಡಿಲ್ಲ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಈ ನಿರ್ಬಂಧವನ್ನು ಹೇರುವುದಕ್ಕೂ ಮೊದಲೇ ಸ್ಕ್ರೀನಿಂಗ್ ಅನ್ನು ಆಯೋಜನೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ ಕೇಂದ್ರ ಸರ್ಕಾರದ ಆದೇಶದ 1 ದಿನದ ನಂತರ ಎಂದರೆ ಭಾನುವಾರ ಸಾಕ್ಷ್ಯಚಿತ್ರ ಪ್ರದರ್ಶನವಾಗಿದೆ ಎಂದು ವಿಶ್ವವಿದ್ಯಾಲಯ ಹೇಳಿದೆ. ಇದನ್ನೂ ಓದಿ: ಬೊಮ್ಮಾಯಿ ಅಂಕಲ್ ನಮ್ಗೆ ಮೇಲ್ಸೇತುವೆ ಬೇಡ- ಸಿಎಂಗೆ 2 ಸಾವಿರ ವಿದ್ಯಾರ್ಥಿಗಳಿಂದ ಪತ್ರ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k