Tag: ಇಂಡಿಯಾ ಲಾಕ್ ಡೌನ್

  • ಲಾಕ್‍ಡೌನ್ ನಡುವೆಯೂ ರಸ್ತೆ ಬದಿಯಲ್ಲಿ ಮದ್ಯ ಮಾರಾಟ

    ಲಾಕ್‍ಡೌನ್ ನಡುವೆಯೂ ರಸ್ತೆ ಬದಿಯಲ್ಲಿ ಮದ್ಯ ಮಾರಾಟ

    – ವ್ಯಕ್ತಿ ಅರೆಸ್ಟ್, ಎಣ್ಣೆನೂ ಸೀಜ್

    ಚಿಕ್ಕಮಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ರಸ್ತೆ ಬದಿ ಎಣ್ಣೆ ಮಾರಾಟ ಜೋರಾಗಿ ನಡೆಯುತ್ತಿದೆ.

    ಹೌದು. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‍ನ ಚಂದನ ವೈನ್ಸ್‍ನಲ್ಲಿ ಕೆಲಸ ಮಾಡ್ತಿದ್ದ ಕ್ಯಾಶಿಯರ್ ವೆಂಕಟೇಶ್ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದಾನೆ. ಅಲ್ಲದೆ ಅದನ್ನ ರಸ್ತೆ ಬದಿ ನಿಂತು ಡಬಲ್‍ಗಿಂತ ಹೆಚ್ಚಿನ ರೇಟಿಗೆ ಮಾರುತ್ತಿದ್ದನು. ವಿಷಯ ತಿಳಿದ ಕೂಡಲೇ ಹಲವರು ಡೈಲಿ ನೈಂಟಿ ಹಾಕೋಣ ಸಾಕು ಅಂತ ಖರೀದಿ ಕೂಡ ಮಾಡಿದ್ದಾರೆ.

    ಈ ಬಗ್ಗೆ ಖಚಿತ ಮಾಹಿತಿ ತಿಳಿದ ಕರ್ಫ್ಯೂ ಮಾದರಿಯ ಲಾಕ್‍ಡೌನ್ ಉಲ್ಲಂಘಿಸಿ ಅಕ್ರಮ ಮದ್ಯ ಮಾರುತ್ತಿದ್ದ ವ್ಯಕ್ತಿ ಮೇಲೆ ಬಣಕಲ್ ಪಿಎಸ್‍ಐ ಶ್ರೀನಾಥ್ ರೆಡ್ಡಿ ನೇತೃತ್ವದಲ್ಲಿ ದಾಳಿ ಮಾಡಿ ಬಾರ್ ಕ್ಯಾಶಿಯರ್ ವೆಂಕಟೇಶ್‍ನನ್ನ ಬಂಧಿಸಿದ್ದಾರೆ.

    ಈ ಸಂದರ್ಭದಲ್ಲಿ ಅವರ ಬಳಿಯಿದ್ದ ಮೂರು ಚೀಲದಷ್ಟು ಮದ್ಯವನ್ನು ಕೂಡ ಜಪ್ತಿ ಮಾಡಲಾಗಿದ್ದು, ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಣ್ಣೆ ಸಿಕ್ಕವರು ಓ ಮೈ ಗಾಡ್, 15ರ ತನಕ ಹೇಗೋ ನೈಂಟಿ ಹಾಕೊಂಡ್ ತಳ್ಳಬಹುದು ಅಂತಿದ್ರೆ, ಸಿಗದವರು ಈ ಪೊಲೀಸ್ರಿಗೆ 10 ನಿಮಿಷ ಲೇಟಾಗಿ ಬರೋದಕ್ಕೆ ಏನಾಗಿತ್ತು ಅಂತ ಗೊಣಗುತ್ತಿದ್ದಾರೆ.

  • ಪೊಲೀಸ್ರ ಜೊತೆ ಲಾಠಿ ಹಿಡಿದು ಜನರ ಮನವೊಲಿಸಿದ ಎಂಎಲ್‍ಸಿ ಗೋಪಾಲಸ್ವಾಮಿ

    ಪೊಲೀಸ್ರ ಜೊತೆ ಲಾಠಿ ಹಿಡಿದು ಜನರ ಮನವೊಲಿಸಿದ ಎಂಎಲ್‍ಸಿ ಗೋಪಾಲಸ್ವಾಮಿ

    ಹಾಸನ: ಕೊರೊನಾ ವಿರುದ್ಧ ಹೋರಾಟಕ್ಕೆ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರ ಜೊತೆ ಸದಾ ನಾವಿದ್ದೇವೆ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಪೊಲೀಸರೊಂದಿಗೆ ಲಾಠಿ ಹಿಡಿದು ಸ್ವಲ್ಪ ಸಮಯ ಕೆಲಸ ನಿರ್ವಹಿಸಿದ್ದಾರೆ.

    ಚನ್ನರಾಯಪಟ್ಟಣದಲ್ಲಿ ಪೊಲೀಸರು ಲಾಕ್ ಡೌನ್ ಬಂದೋಬಸ್ತ್ ನಲ್ಲಿ ಬ್ಯುಸಿಯಾಗಿದ್ರು. ಅದೇ ಸಮಯಕ್ಕೆ ಬಂದ ಎಂಎಲ್‍ಸಿ ಗೋಪಾಲಸ್ವಾಮಿ, ಕರ್ತವ್ಯ ನಿರತ ಪೊಲೀಸರ ಯೋಗಕ್ಷೇಮ ವಿಚಾರಿಸಿದ್ರು.

    ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೆಲವರು ಅನಗತ್ಯವಾಗಿ ವಾಹನಗಳಲ್ಲಿ ಓಡಾಡ್ತಿದ್ದರು. ಇದನ್ನು ನೋಡಿ ಹಗಲಿರುಳು ನಮಗಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸರ ಜೊತೆ ನಾವಿದ್ದೇವೆ ಎಂದು ಕೃತಜ್ಞತೆ ಸಲ್ಲಿಸುವ ಸಲುವಾಗಿ ಎಂಎಲ್‍ಸಿ ಗೋಪಾಲಸ್ವಾಮಿ ಸ್ವತಃ ಪೊಲೀಸ್ ಲಾಠಿ ಹಿಡಿದ ಕೆಲಸಕ್ಕೆ ನಿಂತ್ರು.

    ಎಷ್ಟು ಹೇಳಿದರೂ ಪದೇ ಪದೇ ಅನಗತ್ಯವಾಗಿ ವಾಹನದಲ್ಲಿ ಓಡಾಡುತ್ತಿದ್ದವರಿಗೆ ಅನಾವಶ್ಯಕವಾಗಿ ಓಡಾಡದಂತೆ ಮನವರಿಕೆ ಮಾಡಿದರು. ಎಂಎಲ್‍ಸಿಯೇ ಜೊತೆಗೆ ನಿಂತಾಗ ಪೊಲೀಸರೂ ಉತ್ಸಾಹದಿಂದ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಕಿರಣ್ ಹಾಜರಿದ್ದರು.

    ಎಂಎಲ್‍ಸಿ ಗೋಪಾಲಸ್ವಾಮಿ ಪೊಲೀಸರ ಜೊತೆ ಲಾಠಿ ಹಿಡಿದು ನಿಂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಂಎಲ್‍ಸಿಯ ಕೆಲಸಕ್ಕೆ ಜನ ಶಹಬ್ಬಾಸ್ ಅಂತಿದ್ದಾರೆ.

  • ಪ್ಲೀಸ್, ನಮ್ಗೆ ಒಂದು ಹೊತ್ತಿನ ಊಟ ಕೊಡಿ- ಕಣ್ಣೀರಿಟ್ಟ ಮಂಗಳಮುಖಿಯರು

    ಪ್ಲೀಸ್, ನಮ್ಗೆ ಒಂದು ಹೊತ್ತಿನ ಊಟ ಕೊಡಿ- ಕಣ್ಣೀರಿಟ್ಟ ಮಂಗಳಮುಖಿಯರು

    ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಜನ ಮನೆಯಲ್ಲೇ ಬಂಧಿಯಾಗಿದ್ದಾರೆ. ಪರಿಣಾಮ ಊಟಕ್ಕೂ ಪರದಾಡುತ್ತಿರುವವರಿಗೆ ಕೆಲವರು ಸಹಾಯ ಹಸ್ತ ಚಾಚುತ್ತಿದ್ದಾರೆ. ಈ ಮಧ್ಯೆ ಮಂಗಳಮುಖಿಯೊಬ್ಬರಿಗೆ ನಮಗೆ ಒಂದು ಹೊತ್ತಿನ ಊಟ ಕೊಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ.

    ಹೌದು. ಬೆಂಗಳೂರಿನಲ್ಲಿ ಮಂಗಳಮುಖಿಯರು ಹಸಿವಿನಿಂದ ಬಳಲುತ್ತಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಯಾರಾದರೂ ನಮಗೆ ಒಂದು ಹೊತ್ತಿನ ಊಟ ಕೊಡಿ ಅಂತ ಕೈ ಮುಗಿದು ಕಣ್ಣೀರು ಹಾಕಿದ್ದಾರೆ.

    ಕಳೆದ ಮೂರು ದಿನಗಳಿಂದ ಊಟವಿಲ್ಲದೇ ಬರೀ ನೀರು ಸೇವಿಸಿ ಜೀವನ ಕಳೆಯುತ್ತಿದ್ದಾರೆ. ಭಿಕ್ಷಾಟನೆ ಮಾಡಲು ಈಗ ಟೋಲ್, ರೋಡ್, ಅಂಗಡಿ, ಹೊಟೇಲ್ ಗಳು ಬಂದ್ ಆಗಿವೆ. ರಸ್ತೆಗೆ ಯಾರೂ ಬರುತ್ತಿಲ್ಲ. ಯಾರಿಂದ ನಾವು ಹಣ ಕೇಳೋಕೆ ಆಗುತ್ತೆ. ರೂಮ್ ಬಾಡಿಗೆ ಕಟ್ಟೋಕು ಆಗ್ತಿಲ್ಲ. ಯಾರಾದರೂ ನಮ್ಮ ನೆರವಿಗೆ ಬನ್ನಿ ಅಂತ ಮಂಗಳಮುಖಿಯರು ಕೈ ಮುಗಿದು ಕೇಳ್ಕೊಂಡಿದ್ದಾರೆ.