Tag: ಇಂದಿರಾನಗರ

  • ಕಾರ್ಪೊರೇಟ್ ಕಂಪನಿಗೆ 2 ದಿನದಲ್ಲಿ 12.51 ಕೋಟಿ ವಂಚನೆ; ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರ ಬಂಧನ

    ಕಾರ್ಪೊರೇಟ್ ಕಂಪನಿಗೆ 2 ದಿನದಲ್ಲಿ 12.51 ಕೋಟಿ ವಂಚನೆ; ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರ ಬಂಧನ

    – ಗುಜರಾತ್ ಬ್ಯಾಂಕ್‌ನ 17 ಖಾತೆಗಳಿಗೆ ಹಣ ವರ್ಗಾವಣೆ

    ಬೆಂಗಳೂರು: ಕಾರ್ಪೊರೇಟ್ ಕಂಪನಿಯೊಂದರ ಇಂಟರ್ನೆಟ್ ಆಕ್ಸೆಸ್ ಪಡೆದು ಖಾಸಗಿ ಬ್ಯಾಂಕ್ ಮ್ಯಾನೇಜರ್ ಒಬ್ಬ 2 ದಿನದಲ್ಲಿ 12 ಕೋಟಿ ರೂ.ಗೂ ಅಧಿಕ ಹಣವನ್ನು ವಂಚಿಸಿರುವ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದಲ್ಲಿ (Indira Nagar) ನಡೆದಿದೆ.

    ಖಾಸಗಿ ಬ್ಯಾಂಕ್ ಮ್ಯಾನೇಜರ್ ಸೈಬರ್ ವಂಚನೆಯಲ್ಲಿ ಭಾಗಿಯಾಗಿ ಬರೋಬ್ಬರಿ 12 ಕೋಟಿ 51 ಲಕ್ಷ ರೂ. ವಂಚನೆ ಮಾಡಿದ್ದಾನೆ.ಇದನ್ನೂ ಓದಿ: ಮುನಿರತ್ನ ಮೇಲೆ ಮೊಟ್ಟೆ ದಾಳಿ; ಸ್ಥಳ ಮಹಜರು – ಸಿಬಿಐಗೆ ಕೊಡಲಿ ಎಂದ ಡಿಕೆ ಸುರೇಶ್

    ಬೆಂಗಳೂರಿನ ಇಂದಿರಾನಗರದಲ್ಲಿ ಖಾಸಗಿ ಕಂಪನಿಯೊಂದರ ಶಾಖೆಯಿದೆ. ಆ ಶಾಖೆಯಲ್ಲಿ ಕಾರ್ಪೊರೇಟ್ ನೋಡೆಲ್ ಖಾತೆಯನ್ನು ಹೊಂದಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಬ್ಯಾಂಕ್ ಮ್ಯಾನೇಜರ್ ಕಂಪನಿಯ ಕಾರ್ಪೊರೇಟ್ ಇನ್‌ವೆಸ್ಟಮೆಂಟ್ ಬ್ಯಾಂಕಿಂಗ್ ಮನವಿಗೆ ನಿರ್ದೇಶಕರ ನಕಲಿ ಸಹಿ ಮಾಡಿ ಆಕ್ಸೆಸ್ ಪಡೆದುಕೊಂಡರು. ಇದಾದ 2 ದಿನದಲ್ಲಿ 12 ಕೋಟಿ 51 ರೂ. ಲಕ್ಷ ವಂಚನೆ ಮಾಡಿದ್ದಾನೆ.

    ವಂಚನೆ ಸಂಬಂಧ ಕಂಪನಿ ಡೈರೆಕ್ಟರ್ ನರಸಿಂಹ ವಸಂತ ಶಾಸ್ತ್ರಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬ್ಯಾಂಕ್ ಮ್ಯಾನೇಜರ್ ವೈಭವ್ ಪಿತಾಡಿಯಾ ಸೇರಿದಂತೆ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 1,83,48,000 ರೂ. ನಗದು ವಶಪಡಿಸಿಕೊಂಡಿದ್ದಾರೆ.

    ತನಿಖೆ ನಡೆಸುತ್ತಿರುವ ಪೊಲೀಸರು, ಗುಜರಾತ್ ಬ್ಯಾಂಕ್‌ನ 17 ಅಪರಿಚಿತ ಅಕೌಂಟ್‌ಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಬಯಲಿಗೆಳೆದಿದ್ದಾರೆ.ಇದನ್ನೂ ಓದಿ: ದುಡ್ಡಿಗಾಗಿ ಸ್ನೇಹಿತನಿಗೆ ಸ್ಕೆಚ್ ಹಾಕಿ ಕೊಲೆ – ದೃಶ್ಯಂ ಸಿನಿಮಾ ಶೈಲಿಯಲ್ಲಿ ಸಾಕ್ಷ್ಯನಾಶ; ಕೊನೆಗೂ ಹಂತಕ ಅಂದರ್

  • ಸದಾ ಫೋನ್‌ನಲ್ಲೇ ಮುಳುಗಿರುತ್ತಿದ್ದಳು, ಸ್ವರ್ಗದಲ್ಲಿ ಒಂದಾಗೋಣ ಅಂತ ಮುಗಿಸಿಬಿಟ್ಟೆ – ಸತ್ಯ ಬಾಯ್ಬಿಟ್ಟ ಆರೋಪಿ

    ಸದಾ ಫೋನ್‌ನಲ್ಲೇ ಮುಳುಗಿರುತ್ತಿದ್ದಳು, ಸ್ವರ್ಗದಲ್ಲಿ ಒಂದಾಗೋಣ ಅಂತ ಮುಗಿಸಿಬಿಟ್ಟೆ – ಸತ್ಯ ಬಾಯ್ಬಿಟ್ಟ ಆರೋಪಿ

    ಬೆಂಗಳೂರು: ಇಂದಿರಾನಗರದ (Indiranagar) ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಪ್ರೇಯಸಿ ಕೊಲೆ ಪ್ರಕರಣದಲ್ಲಿ ರಹಸ್ಯಗಳು ಬಗೆದಷ್ಟೂ ಬಯಲಾಗುತ್ತಿವೆ. ವಿಚಾರಣೆ ವೇಳೆ ಕೊಲೆ ಆರೋಪಿ ಆರವ್‌ ಹನೋಯ್‌ ಹಲವು ವಿಚಾರಗಳನ್ನ ಬಾಯ್ಬಿಟ್ಟಿದ್ದಾನೆ. ಅತಿಯಾಗಿ ಫೋನ್‌ನಲ್ಲಿ ಮುಳುಗಿದ್ದೇ ಕಾರಣ ಎಂದು ಆರೋಪಿ ಒಪ್ಪಿಕೊಂಡಿದ್ದಾನಂತೆ.

    ಕೊಲೆಗೂ ಮುನ್ನ ಆರವ್‌ ಹನೋಯ್‌, ಅಸ್ಸಾಂ ಯುವತಿ ಮಾಯ ಗೊಗಾಯ್‌ಳನ್ನ ಭೇಟಿಯಾಗೋಣ ಅಂತ ಹೊಟೇಲ್‌ಗೆ ಕರೆದಿದ್ದ. ಇಬ್ಬರು ಭೇಟಿಯಾಗಿ 3-4 ದಿನಗಳಾಗಿವೆ ಬಾ ಅಂತಾ ಕರೆದಿದ್ದ. ಕೊನೆಗೆ ತಾನೇ ಹೋಟೆಲ್‌ಗೆ ಕೆರೆದುಕೊಂಡು ಬಂದಿದ್ದ. ಪದೇ ಪದೇ ಫೋನ್‌ ಕರೆಗಳಲ್ಲಿ ಮುಳುಗಿರುತ್ತಿದ್ದ ಮಾಯಾ, ಹೊಟೇಲ್‌ಗೆ ಬಂದ್ರೂ ಅದರಲ್ಲೇ ಮುಳುಗಿದ್ದಳು. ಇದರಿಂದ ಅವಳಿಗೆ ಫೋನ್‌ ಮೇಲೆ ಇರೋ ಆಸಕ್ತಿ ನನ್ನ ಮೇಲಿಲ್ಲ ಅಂದುಕೊಂಡಿದ್ದನಂತೆ. ಇದೇ ವಿಚಾರಕ್ಕೆ ಮಾಯಾಳನ್ನ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ನಿರ್ಧರಿಸಿದ್ದ. ಸ್ವರ್ಗದಲ್ಲಿ ಇಬ್ಬರು ಒಂದಾಗೋಣ ಅಂತಾ ನಿಶ್ಚಯಿಸಿ ಕೊಲೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ಈ ಬೆನ್ನಲ್ಲೇ ಪೊಲೀಸರು ಆರೋಪಿ ಪೂರ್ವಪರ ವಿಚಾರಿಸಿದ್ದಾರೆ. ಚಿಕ್ಕಂದಿನಲ್ಲೇ ತಂದೆ-ತಾಯಿ ಕಳೆದುಕೊಂಡಿದ್ದ ಆರವ್‌ ಕೇರಳದ ಕಣ್ಣೂರಿನಲ್ಲಿರುವ ಅಜ್ಜಿ ಮನೆಯಲ್ಲಿ ಬೆಳೆದಿದ್ದ. ಕಳೆದ ಮೇ ತಿಂಗಳಲ್ಲಿ ಬೆಂಗಳೂರಿಗೆ ಬಂದಿದ್ದ. ಇದನ್ನೂ ಓದಿ: ಇಂದಿರಾನಗರ ಕೊಲೆ ಕೇಸ್ – ಪ್ರೇಯಸಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಮನಸ್ಸು ಮಾಡಿದ್ದ ಆರೋಪಿ

    ಬಂದ ಹೊಸದರಲ್ಲಿ ಮಾಯಾ ಪರಿಚಯವಾಗಿದ್ದಳು. ಡೇಟಿಂಗ್‌ ಆಪ್‌ನಲ್ಲಿ ಮಾಯಾ ಪರಿಚಯವಾಗಿದ್ದಳು, ಬಳಿಕ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಆರಂಭದಲ್ಲಿ ತನ್ನನ್ನು ಹೆಚ್ಚು ಅಚ್ಚಿಕೊಂಡಿದ್ದ ಮಾಯಾ ಬಳಿಕ ಫೋನ್‌ನಲ್ಲಿ ಬ್ಯುಸಿಯಾಗಿರುತ್ತಿದ್ದಳು. ಇದರಿಂದ ರೋಸಿಹೋದ ಆರವ್‌ ಆಕೆಯನ್ನು ಕೊಲೆ ಮಾಡಲು ಸ್ಕೆಚ್‌ ಆಗಿದ್ದಾನೆ. ಇದನ್ನೂ ಓದಿ: ಕೂಲ್‌ ಡ್ರಿಂಕ್ಸ್‌ ಕುಡಿಯುತ್ತ ಕುಳಿತಿದ್ದ ರೌಡಿಶೀಟರ್‌ ಮೇಲೆ ಏಕಾಏಕಿ ದಾಳಿ – ಮಾರಕಾಸ್ತ್ರಗಳಿಂದ ಕೊಚ್ಚಿ ಕಗ್ಗೊಲೆ

  • ಪ್ರೇಯಸಿಯನ್ನು ಹತ್ಯೆಗೈದು ಪರಾರಿಯಾಗಿದ್ದ ಹಂತಕ ಪೊಲೀಸ್ ವಶಕ್ಕೆ

    ಪ್ರೇಯಸಿಯನ್ನು ಹತ್ಯೆಗೈದು ಪರಾರಿಯಾಗಿದ್ದ ಹಂತಕ ಪೊಲೀಸ್ ವಶಕ್ಕೆ

    ಬೆಂಗಳೂರು: ಇಂದಿರಾನಗರದ (Indiranagara) ಹೋಟೆಲ್ ಒಂದರಲ್ಲಿ ಪ್ರೇಯಸಿಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು (Police) ದೇವನಹಳ್ಳಿಯಲ್ಲಿ ವಶಕ್ಕೆ ಪಡೆದಿದ್ದಾರೆ.

    ವಶಕ್ಕೆ ಪಡೆಯಲಾದ ಆರೋಪಿಯನ್ನು ಆರವ್ ಹನೋಯ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಪ್ರೇಯಸಿ ಮಾಯ ಗೊಗಾಯ್ ಎಂಬಾಕೆಯನ್ನು ಹತ್ಯೆಗೈದಿದ್ದ. ಆತನ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು.

    ಪ್ರೇಯಸಿಯನ್ನು ಹತ್ಯೆಗೈಯ್ಯಲು ಆರೋಪಿ ಹಗ್ಗ ಹಾಗೂ ಚಾಕುವನ್ನು ಆರ್ಡರ್ ಮಾಡಿ ಹೊಟೆಲ್‌ಗೆ ತರಿಸಿಕೊಂಡಿದ್ದ. ಆತ ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದು,  ಖಾಸಗಿ ಕಂಪನಿಯಲ್ಲಿ ಇಂಟರ್ನ್‌ಶೀಪ್ ಮಾಡುತ್ತಿದ್ದ. ಇಬ್ಬರೂ ಆಪ್ ಮೂಲಕ ಪರಿಚಯ ಆಗಿದ್ದರು ಎಂದು ತಿಳಿದು ಬಂದಿದೆ.

    ಕೊಲೆ ಬಳಿಕ  ಆರೋಪಿ ಶವದ ಬಳಿ ಎರಡು ದಿನಗಳ ಕಾಲ ಇದ್ದ, ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಆರೋಪಿ ಹೋಟೆಲ್‌ನಲ್ಲೇ ಶವ ಬಿಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದವರೆಗೂ ಹೋಗಿದ್ದ. ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದ. ಅಲ್ಲಿಂದ ಮಧ್ಯಪ್ರದೇಶ, ಉತ್ತರ ಪ್ರದೇಶ ಹಾಗೂ ವಾರಣಾಸಿಗೆ ಹೋಗಿದ್ದ. ಅಲ್ಲಿಂದ ಕೊನೆಗೆ ದೇವನಹಳ್ಳಿಗೆ ಬಂದಿದ್ದಾನೆ. ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

    ಕೊಲೆಯಾದ ಮಾಯಳ ಅಕ್ಕ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದಾರೆ. ಶುಕ್ರವಾರ ಅಕ್ಕನಿಗೆ ಕರೆ ಮಾಡಿ, ‘ಆಫೀಸ್ ಪಾರ್ಟಿ ಇದೆ. ರಾತ್ರಿ ಬರಲ್ಲ’ ಎಂದು ಮಾಯ ಹೇಳಿದ್ದಳು. ಇನ್ನೂ ಹಂತಕ ಆರವ್ ಹಾಗೂ ಮಾಯ 6 ತಿಂಗಳಿಂದ ಪ್ರೀತಿಯಲ್ಲಿದ್ದರು ಎಂಬುದು ಮಾಯ ಸಹೋದರಿಯಿಂದ ತಿಳಿದುಬಂದಿತ್ತು.

    ಆರೋಪಿ ಪ್ರೇಯಸಿ ಜೊತೆ ಎರಡು ದಿನಗಳ ಕಾಲ ಕಳೆದು ಪ್ರೀ ಪ್ಲಾನ್‌ನಂತೆ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿತ್ತು.

  • ಬೆಂಗಳೂರಲ್ಲಿ ಕಾರಿನ ಗಾಜು ಒಡೆದು ಕಳ್ಳತನ – ನಾಲ್ವರ ಬಂಧನ

    ಬೆಂಗಳೂರಲ್ಲಿ ಕಾರಿನ ಗಾಜು ಒಡೆದು ಕಳ್ಳತನ – ನಾಲ್ವರ ಬಂಧನ

    ಬೆಂಗಳೂರು: ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್‌ವೊಂದಕ್ಕೆ ಪೊಲೀಸರು ಬಂಧಿಸಿದ್ದಾರೆ.

    ರಸ್ತೆ ಬದಿ ಪಾರ್ಕ್ ಮಾಡಿ ಶಾಪಿಂಗ್, ಬ್ಯಾಂಕ್ (Bank) ಕೆಲಸಕ್ಕೆಂದು ಹೋಗುವವರನ್ನು ಈ ಖತರ್ನಾಕ್ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಪಾರ್ಕಿಂಗ್ ಮಾಡಿ ನಿಲ್ಲಿಸುತ್ತಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಲ್ಯಾಪ್‌ಟಾಪ್(Laptop), ಬ್ಯಾಗ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಎತ್ತೊಯ್ಯುತ್ತಿತ್ತು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು

    ಗುರುವಾರ ಇದೇ ಕಳ್ಳರ ಗ್ಯಾಂಗ್ ಇಂದಿರಾನಗರದಲ್ಲಿ (Indiranagara) ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಬ್ಯಾಗ್ ಕಳ್ಳತನ ಮಾಡಿತ್ತು. ಖದೀಮರು ಕಳ್ಳತನ ಮಾಡುತ್ತಿರುವ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

    ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿತೀಶ್‌ ಕುಮಾರ್‌ ಪಕ್ಷದ ನಾಯಕ ತ್ಯಾಗಿ JDU ವಕ್ತಾರ ಸ್ಥಾನಕ್ಕೆ ರಾಜೀನಾಮೆ

  • ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ : ಎಫ್ಐಆರ್‌ ದಾಖಲು

    ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ : ಎಫ್ಐಆರ್‌ ದಾಖಲು

    ಸಿನಿಮಾ ರಂಗದಿಂದ ದೂರವಿದ್ದು, ಸದ್ಯ ಮಗುವಿನ ಪಾಲನೆ ಪೋಷನೆಯಲ್ಲಿ ಬ್ಯುಸಿಯಾಗಿರುವ ನಟಿ ಸಂಜನಾ ಗಲ್ರಾನಿ (Sanjana Galrani) ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸಂಜನಾಗೆ ಕೊಲೆ ಬೆದರಿಕೆ (Death threat) ಹಾಕಲಾಗಿದೆ ಎಂದು ಆರೋಪ ಮಾಡಿರುವ ಅವರು, ಬೆದರಿಕೆ ಹಾಕಿದವರು ವಿರುದ್ಧ ದೂರು ದಾಖಲಿಸಿದ್ದಾರೆ.

    ಪಾರ್ಕಿಂಗ್ ವಿಚಾರವಾಗಿ ಸ್ಥಳೀಯ ನಿವಾಸಿಗಳ ಜೊತೆ ಗಲಾಟೆ ನಡೆದಿದ್ದು, ಕೊಲೆ ಮಾಡ್ತಿನಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ಸಂಜನಾ ಇಂದಿರಾನಗರ ಠಾಣೆಗೆ ದೂರು ನೀಡಿದ್ದಾರೆ. ಇಂದಿರಾನಗರದ (Indiranagar) ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿ ಮನೆ ಬಳಿ ಯಶೋಧಮ್ಮ ಹಾಗೂ ರಾಜಣ್ಣ ಎಂಬುವವರ ಮನೆಯೂ ಇದೆ. ಇವರ ಮೇಲೆಯೇ ಸಂಜನಾ ದೂರು ನೀಡಿದ್ದಾರೆ. ಇದನ್ನೂ ಓದಿ: ದೀಪಿಕಾ ಪಡುಕೋಣೆ ನಮ್ಮ ಭಾರತದ ಹೆಮ್ಮೆ ಎಂದು ಹಾಡಿ ಹೊಗಳಿದ ಕಂಗನಾ

    ಯಶೋಧಮ್ಮ ಹಾಗೂ ರಾಜಣ್ಣ ಎನ್ನುವವರು ರಸ್ತೆಗೆ ಅಡ್ಡಲಾಗಿ ಕಾರುಗಳನ್ನ ನಿಲ್ಲಿಸ್ತಾರಂತೆ. ಇದನ್ನ ಪ್ರಶ್ನೆ ಮಾಡಿದ್ರೆ ಕೊಲೆ ಮಾಡ್ತಿನಿ, ನಾವು ನಲವತ್ತು ವರ್ಷದಿಂದ ವಾಸ ಇದ್ದೀವಿ ಅಂತ ಆವಾಜ್ ಹಾಕಿದ್ದಲ್ಲದೆ, ವೇಶ್ಯೆ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ ಸಂಜನಾ ಗಲ್ರಾನಿ. ಸದ್ಯ ನ್ಯಾಯಲಯದ ಅನುಮತಿ ಮೇರೆಗೆ ಎಫ್ಐಆರ್‌ (FIR) ದಾಖಲಾಗಿದೆ.

  • ನಮ್ಮ ಕಣ್ಣಿನಿಂದ ಇನ್ನೊಬ್ಬರಿಗೆ ದೃಷ್ಟಿ ಬರುವುದೇ ಬದುಕಿನ ಸಾಕ್ಷಾತ್ಕಾರ: ಡಾ.ಕೆ.ಸುಧಾಕರ್

    ನಮ್ಮ ಕಣ್ಣಿನಿಂದ ಇನ್ನೊಬ್ಬರಿಗೆ ದೃಷ್ಟಿ ಬರುವುದೇ ಬದುಕಿನ ಸಾಕ್ಷಾತ್ಕಾರ: ಡಾ.ಕೆ.ಸುಧಾಕರ್

    ಬೆಂಗಳೂರು: ನಮ್ಮ ಸಾವಿನ ನಂತರ ನಮ್ಮ ಕಣ್ಣುಗಳಿಂದ ಇನ್ನೊಬ್ಬರಿಗೆ ದೃಷ್ಟಿ ಬರುತ್ತದೆ ಅಂದರೆ ಅದಕ್ಕಿಂತ ಸಾಕ್ಷಾತ್ಕಾರ ಇನ್ನೊಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಬೆಂಗಳೂರಿನ ಇಂದಿರಾನಗರದಲ್ಲಿ ಡಾಕ್ಟರ್. ಅಗರ್ ವಾಲ್ಸ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಧತ್ವ ಬಹಳ ನೋವಿನ ಸಂಗತಿ. ಯಾರೇ ಇರಲಿ, ಭಗವಂತ ಸೃಷ್ಟಿ ಮಾಡಿರುವ ಪ್ರಕೃತಿಯನ್ನು ನೋಡಲು ಸಾಧ್ಯವಾಗುವುದು ನಮ್ಮ ಕಣ್ಣುಗಳಿಂದ. ಆದರೆ ಕಣ್ಣೇ ಇಲ್ಲದಿದ್ದರೆ ಈ ಸುಂದರ ಪ್ರಕೃತಿಯನ್ನು ಸವಿಯಲು ಅಸಾಧ್ಯ. ವಿಶ್ವದಲ್ಲಿ 4 ಕೋಟಿಗೂ ಹೆಚ್ಚು ಜನರಿಗೆ ಅಂಧತ್ವ ಇದೆ. ಭಾರತದಲ್ಲಿ ಪ್ರತಿವರ್ಷ 1 ಲಕ್ಷ ನೇತ್ರದಾನಿಗಳ ಅವಶ್ಯಕತೆ ಇದೆ. ಆದರೆ ನಮಗೆ ಸಿಗುತ್ತಿರುವ ದಾನಿಗಳ ಪ್ರಮಾಣ ಕೇವಲ 5% ಮಾತ್ರ. ಕಣ್ಣಿನ ದಾನಿಗಳ ಕೊರತೆ ನಮ್ಮನ್ನು ಕಾಡುತ್ತಿದೆ. ದೇಶದಲ್ಲಿ 10.8 ಲಕ್ಷ ಮಕ್ಕಳು ಅಂಧತ್ವಕ್ಕೆ ಒಳಗಾಗಿದ್ದಾರೆ ಎಂದರು.

    ಕೋವಿಡ್ ಸಮಯದಲ್ಲಿ ನೇತ್ರದಾನ ಪ್ರಮಾಣ ಮತ್ತಷ್ಟು ಕಡಿಮೆಯಾಗಿದೆ. ಕಣ್ಣಿನ ದಾನ ಮಹಾದಾನವಾದರೂ ಈ ಬಗ್ಗೆ ಕೆಲ ಮೂಢನಂಬಿಕೆಗಳು ಇವೆ. ಶವದಿಂದ ಕಣ್ಣನ್ನು ತೆಗೆದರೆ ಮುಖ ವಿಕಾರವಾಗುತ್ತದೆ ಎಂಬ ತಪ್ಪು ತಿಳಿವಳಿಕೆ ಇದೆ. ಆದರೆ ಇದು ಸುಳ್ಳು. ಕನ್ನಡದ ವರನಟ ಡಾ.ರಾಜ್ ಕುಮಾರ್, ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಂತಹ ಮಹಾನ್ ವ್ಯಕ್ತಿಗಳು ಕಣ್ಣು ದಾನ ಮಾಡಿದ್ದರು. ಲಕ್ಷಾಂತರ ಜನರು ಅವರ ಪಾರ್ಥಿವ ಶರೀರ ನೋಡಿದ್ದಾರೆ. ಆದರೆ ಯಾವುದೇ ವಿಕಾರ ಕಂಡಿಲ್ಲ. ಹೀಗಾಗಿ ನೇತ್ರದಾನ ಎಲ್ಲರೂ ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ಆರೋಗ್ಯ ಇರಲಿ ಅಥವಾ ನೇತ್ರದಾನದ ವಿಚಾರವೇ ಆಗಿರಲಿ ಕರ್ನಾಟಕ ದೇಶದ ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿದೆ. ಹೆಲ್ತ್ ಕೇರ್ ಉದ್ಯಮಿಗಳಿಂದ ಇದೆಲ್ಲಾ ಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ಕೈ ಗೆಟಕುವ ರೀತಿಯಲ್ಲಿ ಹೇಲ್ತ್ ಕೇರ್ ಇಂಡಸ್ಟ್ರಿ ಕರ್ನಾಟಕದಲ್ಲಿ ಬೆಳೆದಿದೆ ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ನಿಂದ ಎಲ್ಲರಿಗೂ ಲಾಭವಾಗುತ್ತಿದೆ. ಸಮಾಜದ ಎಲ್ಲಾ ವರ್ಗಗಳಿಗೆ ಇದರ ಉಪಯೋಗ ಆಗುತ್ತಿದೆ. ನಾವು ಎಲ್ಲಾ ಕನ್ನಡಿಗರಿಗೂ ಸಹಾಯವಾಗುವಂತೆ ಹೆಲ್ತ್ ಕೇರ್ ಫೆಸಿಲಿಟಿ ವ್ಯವಸ್ಥೆ ಮಾಡಿದ್ದೇವೆ. ಸರ್ಕಾರಿ ಇರಲಿ, ಖಾಸಗಿ ಇರಲಿ ಎಲ್ಲಾ ಕಡೆಯೂ ಇನ್ನೂ ಹೆಚ್ಚಿನ ಸೌಕರ್ಯ ಒದಗಿಸುವ ಯೋಜನೆ ರೂಪಿಸಲಾಗಿದೆ ಎಂದರು. ಇದನ್ನೂ ಓದಿ:  ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ

    ನೇತ್ರದಾನದ ಮಹತ್ವ ತಿಳಿಸಿ:
    ರಾಜ್ಯದಲ್ಲಿರುವ 21 ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸುವ ಯೋಜನೆ ರೂಪಿಸಿದ್ದೇವೆ. ಖಾಸಗಿ ಆಸ್ಪತ್ರೆಗಳು ದೊಡ್ಡಮಟ್ಟದಲ್ಲಿ ನೇತ್ರದಾನದ ಮಹತ್ವವನ್ನು ಸಮಾಜಕ್ಕೆ ತಿಳಿಸಿಕೊಡಬೇಕು. ಗ್ರಾಮೀಣ ಭಾಗದಲ್ಲಿ ಐ ಕ್ಯಾಂಪ್ ಗಳನ್ನು ಮಾಡಬೇಕು ಎಂದು ಮನವಿ ಮಾಡಿದರು.

    PM MODI

    ಪ್ರಧಾನಿ ನರೇಂದ್ರ ಮೋದಿಯವರು ಪ್ರಜಾಪ್ರಭುತ್ವ ಹಾಗೂ ಭಾರತದ ಅಭಿವೃದ್ಧಿಯ ಹರಿಕಾರ. ಹಾಗೆಯೇ ಡಾ.ಎಂ.ಸಿ.ಮೋದಿಯವರು ಕಣ್ಣಿನ ಆಸ್ಪತ್ರೆಗಳನ್ನು ಕಟ್ಟಿಸಿ ಎಲ್ಲರಿಗೂ ದೃಷ್ಟಿ ಸಿಗಬೇಕು ಅನ್ನುವ ಕನಸು ಕಂಡಿದ್ದರು. ತನ್ನ 40 ವರ್ಷಗಳ ಸೇವೆಯಲ್ಲಿ ಹಲವು ಸರ್ಜರಿಗಳನ್ನು ಅವರು ಮಾಡಿದ್ದರು. ಲಕ್ಷಾಂತರ ಕಣ್ಣಿನ ಸಮಸ್ಯೆಗಳನ್ನು ಪರಿಹರಿಸಿದರು. ಡಾ.ಎಂ.ಸಿ.ಮೋದಿಯವರ ಸೇವೆ ಮಾದರಿ ಎಂದರು.

  • ಹಲ್ಲಿ ಮೈಮೇಲೆ ಎಸೆದು ಯವತಿಯರ ಅಂಗಾಂಗ ಮುಟ್ಟೋ ಗ್ಯಾಂಗ್ ಬೆಂಗ್ಳೂರಲ್ಲಿದೆ ಎಚ್ಚರ!

    ಹಲ್ಲಿ ಮೈಮೇಲೆ ಎಸೆದು ಯವತಿಯರ ಅಂಗಾಂಗ ಮುಟ್ಟೋ ಗ್ಯಾಂಗ್ ಬೆಂಗ್ಳೂರಲ್ಲಿದೆ ಎಚ್ಚರ!

    ಬೆಂಗಳೂರು: ಯುವತಿಯರೇ ಎಚ್ಚರ. ನೀವು ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುತ್ತೀರಿ ಎಂದರೆ ಸ್ವಲ್ಪ ಎಚ್ಚರದಿಂದಿರಿ. ಯುವತಿಯರ ಮೇಲೆ ದೌರ್ಜನ್ಯವೆಸಗಲು ಬೆಂಗಳೂರಿನಲ್ಲಿ ಯುವಕರು ಹೊಸ ಟೆಕ್ನಿಕ್ ಬಳಸುತ್ತಿದ್ದಾರೆ.

    ತಮ್ಮ ವಾಂಛೆ ತೀರಿಸಿಕೊಳ್ಳಲು ಯುವಕರು ಯುವತಿಯರ ಮೇಲೆ ಹಲ್ಲಿಯನ್ನು ಎಸೆಯುತ್ತಾರೆ. ಬಳಿಕ ಅದನ್ನು ತೆಗೆಯುವ ನೆಪದಲ್ಲಿ ಬಂದು ಅಂಗಾಂಗ ಮುಟ್ಟಿ ಕಿರುಕುಳ ಕೊಟ್ಟಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಆಗಿದ್ದೇನು?: ಬಿಹಾರ ಮೂಲದ ಯುವತಿಯೊಬ್ಬಳು ಬೆಂಗಳೂರಿಗೆ 15 ದಿವಸದ ಟ್ರೈನಿಂಗ್ ಗೆಂದು ಆಗಮಿಸಿದ್ದಾಳೆ. ಎರಡು ದಿನಗಳ ಹಿಂದೆ ಇಂದಿರಾನಗರದ ಸಿಎಂಎಚ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಯುವತಿ ಟ್ರೈನಿಂಗ್ ಮುಗಿಸಿ ತಾನು ವಾಸವಿದ್ದ ಕಡೆ ಹೊರಟಿದ್ದಾಳೆ. ಈ ವೇಳೆ ರಸ್ತೆ ಬದಿಯಲ್ಲಿದ್ದ ಟೀ ಶಾಪ್ ಬಳಿ ಬಂದಾಗ ಕಾಮುಕರ ಗುಂಪು ಯುವತಿಯ ಮೇಲೆ ಹಲ್ಲಿಯನ್ನು ಎಸೆದಿದ್ದಾರೆ. ಬಳಿಕ ಅದೇ ಹಲ್ಲಿಯನ್ನು ತೆಗೆಯುವ ನೆಪದಲ್ಲಿ ಈ ಗುಂಪು ಯುವತಿಯ ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದಾರೆ.

    ಘಟನೆ ನಡೆದ ಬಳಿಕ ಯುವತಿ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದಾಳೆ. ಐಪಿಸಿ ಸೆಕ್ಷನ್ 354ರ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಪೊಲೀಸರು ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ವೀಡಿಯೋ ವಶಪಡಿಸಿಕೊಂಡಿದ್ದು ಇದರ ನೆರವಿನಿಂದ ಆರೋಪಿಗಳನ್ನು ಹುಡುಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ದೂರು ನೀಡಿದ ಯುವತಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

  • 20 ರೂ. ಪೌಡರ್ ಇಟ್ಕೊಂಡು ಮಸಾಜ್ ಹೆಸ್ರಲ್ಲಿ ಸೆಕ್ಸ್ ದಂಧೆ!

    20 ರೂ. ಪೌಡರ್ ಇಟ್ಕೊಂಡು ಮಸಾಜ್ ಹೆಸ್ರಲ್ಲಿ ಸೆಕ್ಸ್ ದಂಧೆ!

    ಬೆಂಗಳೂರು: ವೃದ್ಧಾಶ್ರಮ ಹೆಸರಲ್ಲಿ ಮಸಾಜ್ ಪಾರ್ಲರ್ ಮಾಡಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಾರ್ಲರ್ ಮೇಲೆ ಕೊನೆಗೂ ಇಂದಿರಾನಗರ ಪೊಲೀಸರು ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಇಂದಿರಾನಗರದ ಆರನೇ ಅಡ್ಡರಸ್ತೆಯಲ್ಲಿರುವ ಈ ಮನೆಯಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ಸೆಕ್ಸ್ ದಂಧೆ ನಡೆಯುವುದನ್ನು ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್ ಮೂಲಕ ಬಯಲಿಗೆ ತಂದಿದೆ.

    ಇಂದಿರಾ ನಗರದ ಕೂಗಳತೆಯ ದೂರದಲ್ಲಿ ಈ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಈ ಮನೆಯ ಪಕ್ಕ ಕಾಲೇಜಗಳಿವೆ. ಸಂಪ್ರದಾಯಸ್ಥರ ಮನೆಗಳೂ ಇವೆ. ಆದ್ರೂ ರಾಜಾರೋಷವಾಗಿ ಈ ಸೆಕ್ಸ್ ದಂಧೆ ನಡೆಯುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಕಾರ್ಯಾಚರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

    ಈ ದಂಧೆಯ ಓನರ್ ಒಬ್ಬಳು ಖತರ್ನಾಕ್ ಮಹಿಳೆಯೆ ಆಗಿದ್ದಾಳೆ. ಈಕೆಯ ಹೆಸರಿನಲ್ಲಿ ಅನೇಕರು ಕೆಲಸ ಮಾಡಿಕೊಂಡಿದ್ದಾರೆ. ಈ ಮನೆಗೆ ದಿನಕ್ಕೆ ಏನಿಲ್ಲವೆಂದರೂ ನೂರಾರು ಜನರು ಬರ್ತಾರೆ. ಲಕ್ಷ ಲಕ್ಷ ರೂಪಾಯಿಗಳ ವ್ಯವಹಾರ ಕೂಡ ನಡೆಯುತ್ತದೆ.

    ಫಸ್ಟ್ ಹಣ ಕೊಡ್ಬೇಕು: ರೂಂಗೆ ಹೋದ ತಕ್ಷಣ ಗ್ರಾಹಕರ ಬಳಿ ಫಸ್ಟ್ ಟಿಪ್ಸ್ ಕೊಡಿ ಅಂತಾ ದುಡ್ಡು ಕಿತ್ತುಕೊಳ್ತಾರೆ. ಆ ಮೇಲೆ ಬಟ್ಟೆ ಬಿಚ್ಚಿ ಪೌಡರ್ ಮಸಾಜ್ ಶುರು ಹಚ್ಕೊಳ್ತಾರೆ. ಬರೇ ಮಸಾಜ್ ಸಾಕು ಅಂದ್ರೂ ಕೇಳಲ್ಲ, ಟಿಪ್ಸ್ ಕೊಡೋದನ್ನ ತಪ್ಪಿಸೋಕೆ ಹಿಂಗಾಡ್ತೀಯಾ ಅಂತಾ ಗದರಿ ದುಡ್ಡು ಕಿತ್ಕೊಂಡು ಕೆಲ್ಸ ಮುಗಿಸ್ತಾರೆ. ದುರಂತ ಅಂದ್ರೆ ಇಲ್ಲಿ ಚಿಗುರು ಮೀಸೆ ಕಾಲೇಜ್ ಹುಡ್ಗರು ಎಂಟ್ರಿ ಕೊಡುತ್ತಿದ್ದಾರೆ.

     

    https://www.youtube.com/watch?v=P15VRt6N1Gw

    https://www.youtube.com/watch?v=LviKyrP1pKc

    https://www.youtube.com/watch?v=2EsDfbHP9n8

     

  • ವಿಚ್ಛೇದನ ಕೊಡುವಂತೆ ಒತ್ತಡ ಹೇರಿದ್ದಕ್ಕೆ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

    ವಿಚ್ಛೇದನ ಕೊಡುವಂತೆ ಒತ್ತಡ ಹೇರಿದ್ದಕ್ಕೆ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

    ಬೆಂಗಳೂರು: ಗಂಡನಿಂದಲೇ ಹೆಂಡತಿ ಬರ್ಬರ ಕೊಲೆಯಾದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ.

    45 ವರ್ಷದ ಮಂಜುಳಾ ಕೊಲೆಯಾಗಿದ್ದು, ಪತ್ನಿಯನ್ನ ಕೊಂದು ಆರೋಪಿ ಮೈಲಾರಯ್ಯ ಪೊಲೀಸರಿಗೆ ಶರಣಾಗಿದ್ದಾನೆ. ಆರೋಪಿ ಮೈಲಾರಯ್ಯ ನಗರದ ಕಾಲೇಜೊಂದರಲ್ಲಿ ಲೆಕ್ಚರರ್ ಆಗಿ ಕೆಲಸ ಮಾಡುತ್ತಿದ್ದು, ವಿಚ್ಛೇದನ ಕೊಡುವಂತೆ ಪತ್ನಿ ಒತ್ತಡ ಹೇರಿದ್ದಕ್ಕೆ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

    ಕೊಲೆಯಾದ ಮಂಜುಳಾ ಇಂದಿರಾ ನಗರ ಕ್ಲಬ್ ನಿಂದ ಮನೆಗೆ ತೆರಳಿದ್ದಳು. ಇದನ್ನ ಪ್ರಶ್ನಿಸಿದ ಪತಿ ಮಂಜುಳಾ ಜೊತೆ ಜಗಳವಾಡಿದ್ದ. ಆಗ ಮಕ್ಕಳು ಕೂಡ ತಾಯಿ ಸಪೋರ್ಟ್‍ಗೆ ಬಂದು ಅಪ್ಪನನ್ನೇ ಮನೆ ಬಿಟ್ಟು ಹೋಗು ಅಂದಿದ್ರು. ಇದ್ರಿಂದ ಕೆರಳಿದ ಮೈಲಾರಯ್ಯ ಪತ್ನಿಯನ್ನ ಕೊಲೆ ಮಾಡಿದ್ದಾನೆ. ಇತ್ತ ಅಮ್ಮನನ್ನ ಕೊಂದ ಅಪ್ಪನಿಗೆ ಮಕ್ಕಳು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಮಕ್ಕಳ ಕೈಯಿಂದ ತಪ್ಪಿಸಿಕೊಂಡು ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.