Tag: ಇಂದಿರಾ ಕ್ಯಾಂಟಿನ್

  • PUBLiC TV Impact | ಕತ್ತಲಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಬೆಳಕಿನ ಭಾಗ್ಯ

    PUBLiC TV Impact | ಕತ್ತಲಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಬೆಳಕಿನ ಭಾಗ್ಯ

    ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳನ್ನು (Indira Canteen) ಕತ್ತಲೆಗೆ ದೂಡಿದ್ದ ಬಿಬಿಎಂಪಿ ಇದೀಗ ಎಚ್ಚೆತ್ತುಕೊಂಡಿದ್ದು, ‘ಪಬ್ಲಿಕ್ ಟಿವಿ’ ವರದಿಯ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ಗಳಿಗೆ ಬೆಳಕಿನ ಭಾಗ್ಯ ಸಿಕ್ಕಿದೆ.

    ನಗರದ ಕೆಲವು ಇಂದಿರಾ ಕ್ಯಾಂಟೀನ್‌ಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೇ, ಮೊಂಬತ್ತಿ ಬೆಳಕಿನಡಿ ಗ್ರಾಹಕರು ಊಟ ಮಾಡುತ್ತಿದ್ದರು. ಈ ಬಗ್ಗೆ ಇಂದಿರಾ ಕ್ಯಾಂಟೀನ್‌ಗಳಿಗೆ ಕತ್ತಲೆ ಭಾಗ್ಯ ಎಂದು ಪಬ್ಲಿಕ್ ಟಿವಿ ವರದಿಯೊಂದು ಬಿತ್ತರಿಸಿತ್ತು. ವರದಿ ಪ್ರಸಾರದ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ, ಬೆಸ್ಕಾಂಗೆ ಇನ್ನೆರೆಡು ತಿಂಗಳಲ್ಲಿ ಬಿಲ್ ಪಾವತಿ ಮಾಡುವುದಾಗಿ ಭರವಸೆ ನೀಡಿದ್ದು, ಮತ್ತೆ ವಿದ್ಯುತ್ ಸಂಪರ್ಕವನ್ನು ಪಡೆದುಕೊಂಡಿದೆ.ಇದನ್ನೂ ಓದಿ: ರಾಜ್ಯದ ಎರಡನೇ ದಸರಾ ಖ್ಯಾತಿಯ ಶಿವಮೊಗ್ಗ ದಸರಾಕ್ಕೆ 44ರ ಸಂಭ್ರಮ

    ಮೆಜೆಸ್ಟಿಕ್, ವೆಸ್ಟ್ ಹಾಫ್ ಕಾರ್ಡ್ ರಸ್ತೆ ಸೇರಿ ಹಲವು ಇಂದಿರಾ ಕ್ಯಾಂಟೀನ್‌ಗಳಲ್ಲಿ ನಾಲ್ಕೈದು ತಿಂಗಳುಗಳಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ಮೆಜೆಸ್ಟಿಕ್‌ನ ಇಂದಿರಾ ಕ್ಯಾಂಟೀನ್‌ನ ಬಿಲ್ 8 ಸಾವಿರದ 340 ರೂ. ಆಗಿತ್ತು.

    ಪ್ರತಿಯೊಂದು ಇಂದಿರಾ ಕ್ಯಾಂಟೀನ್‌ಗಳ ವಿದ್ಯುತ್ ಬಿಲ್‌ನ್ನು ಆಯಾ ವಲಯದ ಬಿಬಿಎಂಪಿ (BBMP) ಇಂಜಿನಿಯರ್‌ಗಳೆ ಪಾವತಿ ಮಾಡಬೇಕು. ಈ ಇಂಜಿನಿಯರ್‌ಗಳಿಗೆ ಪಾಲಿಕೆಯ ಕೇಂದ್ರ ಕಚೇರಿಯಿಂದ ಹಣ ಬಿಡುಗಡೆ ಮಾಡದ ಹಿನ್ನೆಲೆ, ಬೆಸ್ಕಾಂಗೆ ಬಿಲ್ ಕಟ್ಟಿರಲಿಲ್ಲ. ಹೀಗಾಗಿ ಬಿಬಿಎಂಪಿಯ ಹೆಲ್ತ್ ಇನ್ಸ್ಪೆಕ್ಟರ್ ಅವರೇ ಖುದ್ದು ಇಂದಿರಾ ಕ್ಯಾಂಟೀನ್‌ಗೆ ಧಾವಿಸಿ ಪರಿಶೀಲಿಸಿದ್ದಾರೆ.

    ಇದೀಗ ಈ ಕ್ಯಾಂಟೀನ್‌ಗೂ ಬೆಳಕಿನ ಭಾಗ್ಯ ನೀಡಲಾಗಿದ್ದು, ವೆಸ್ಟ್ ಹಾಫ್ ಕಾರ್ಡ್ ರಸ್ತೆಯ ರಾಜುಕುಮಾರ್ ವಾರ್ಡ್ನ ಇಂದಿರಾ ಕ್ಯಾಂಟೀನ್‌ನಲ್ಲಿಯೂ ವಿದ್ಯುತ್ ಸಂಪರ್ಕವನ್ನ ಕಲ್ಪಿಸಲಾಗಿದೆ. ಪಬ್ಲಿಕ್ ಟಿವಿಯ ವರದಿಯ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಕತ್ತಲಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾಂಟೀನ್‌ಗಳಿಗೆ ಬೆಳಕು ನೀಡಿದೆ.ಇದನ್ನೂ ಓದಿ: Mysuru Dasara: ಅದ್ದೂರಿ ಜಂಬೂಸವಾರಿಗೆ ಕ್ಷಣಗಣನೆ – ನಾಳೆ ಏನೆಲ್ಲಾ ವಿಶೇಷತೆ ಇರುತ್ತೆ?

     

  • ಬಿಜೆಪಿಯವರು ಇಂದಿರಾ ಕ್ಯಾಂಟೀನ್ ಹೆಸ್ರನ್ನೇ ಬದಲಾಯಿಸೋಕೆ ಹೊರಟ್ರು ಹೆದರಿ ಸುಮ್ಮನಾದ್ರು: ಡಿಕೆಶಿ

    ಬಿಜೆಪಿಯವರು ಇಂದಿರಾ ಕ್ಯಾಂಟೀನ್ ಹೆಸ್ರನ್ನೇ ಬದಲಾಯಿಸೋಕೆ ಹೊರಟ್ರು ಹೆದರಿ ಸುಮ್ಮನಾದ್ರು: ಡಿಕೆಶಿ

    ಬೆಂಗಳೂರು: ಬಿಜೆಪಿಯವರು ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸೋಕೆ ಹೊರಟ್ಟಿದ್ದರು. ಆ ಬಳಿಕ ಹೆದರಿ ಸುಮ್ಮನಾಗಿದ್ದಾರೆ. ಅದನ್ನು ಮುಟ್ಟಬೇಕಾಗಿತ್ತು, ತೋರಿಸ್ತಾ ಇದ್ವಿ ಕಾಂಗ್ರೆಸ್ ಶಕ್ತಿ ಏನು ಅಂತ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

    ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಜಪೇಯಿಯವರು ಇಂದಿರಾ ಗಾಂಧಿಯನ್ನು ದುರ್ಗೆಗೆ ಹೋಲಿಸಿದ್ದರು. ಪೆನ್ಷನ್, ಸೈಟ್, ಮನೆ ಯೋಜನೆಗಳನ್ನು ಇಂದಿರಾ ಗಾಂಧಿ ಜಾರಿ ಮಾಡಿದ್ದರು. ಅಂಗನವಾಡಿ, ಬಿಸಿಯೂಟ, ಎಲ್ಲಾರಿಗೂ ಉತ್ತೇಜನ ಕೊಡೋ ಕಾರ್ಯಕ್ರಮ ಕೊಟ್ಟಿದ್ದಾರೆ. ಬಡತನ, ಜಾತಿ ವ್ಯವಸ್ಥೆ ಸರಿ ಮಾಡಬೇಕು ಎಂದಿದ್ದರು. ಸಾಮಾಜಿಕ ಬದ್ಧತೆ ಬಗ್ಗೆ ತಿಳಿಹೇಳುವ ಕೆಲಸ ಮಾಡಿದ್ದರು ಎಂದು ಇಂದಿರಾ ಗಾಂಧಿ ಅವರನ್ನು ಸ್ಮರಿಸಿಕೊಂಡರು. ಇದನ್ನೂ ಓದಿ: ಮೋದಿ ಪ್ರಧಾನಿ ಆಗಲು ಕಾಂಗ್ರೆಸ್ ಕಾರಣ: ಸಿದ್ದರಾಮಯ್ಯ

    ಈಗ ಕಾಂಗ್ರೆಸ್ ಬಿಟ್ಟು ಹೋಗಿದ್ದಾರಲ್ಲ ಗಿರಾಕಿಗಳು. ಅವರೇ ಇಂದಿರಾ ಕ್ಯಾಂಟೀನ್ ಅಂತ ಹೆಸರಿಡಿ ಎಂದು ಅರ್ಜಿ ತಗೊಂಡು ಬಂದಿದ್ದರು ಎಂದು ಎಸ್.ಟಿ.ಸೋಮಶೇಖರ್ ಹಾಗೂ ಮುನಿರತ್ನ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ ಡಿಕೆಶಿ, ಮೊನ್ನೆ ಚುನಾವಣೆಗೆ ಪ್ರಚಾರಕ್ಕೆ ಹೋದಾಗ ಎಲ್ಲಾ ಕಡೆ ಇವ್ರೇ ಇದ್ದರು. ಬಿಜೆಪಿಯವರು ಯಾರೂ ಇರಲಿಲ್ಲ ಎಲ್ಲಾ ಹಳದಿ ಶಾಲು ಹಾಕಿಕೊಂಡು ನಾವೆ ಅಂತ ಓಡಾಡುತ್ತಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಂದಿರಾ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ

  • ಖಾಲಿ ಹೊಡೀತಿದೆ ಇಂದಿರಾ ಕ್ಯಾಂಟೀನ್- ದಿನದಿಂದ ದಿನಕ್ಕೆ ಗ್ರಾಹಕರ ಸಂಖ್ಯೆಯಲ್ಲಿ ಇಳಿಕೆ

    ಖಾಲಿ ಹೊಡೀತಿದೆ ಇಂದಿರಾ ಕ್ಯಾಂಟೀನ್- ದಿನದಿಂದ ದಿನಕ್ಕೆ ಗ್ರಾಹಕರ ಸಂಖ್ಯೆಯಲ್ಲಿ ಇಳಿಕೆ

    ತುಮಕೂರು: ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಬಡವರಿಗೆ ನೀಡಬೇಕೆಂಬ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದರು. ಮೊದಮೊದಲು ಚೆನ್ನಾಗಿ ನಡೆಯುತ್ತಿದ್ದ ಇಂದಿರಾ ಕ್ಯಾಂಟೀನ್‍ಗಳು ಇದೀಗ ಹಳ್ಳ ಹಿಡಿಯುವ ಸ್ಥಿತಿಗೆ ಬಂದಿದೆ.

    ಇಂದಿರಾ ಕ್ಯಾಂಟೀನ್ ಸಿದ್ದರಾಮಯ್ಯರ ಕನಸಿನ ಕೂಸು. ಅದೆಷ್ಟೋ ಬಡವರು ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಅಂಥವರಿಗಾಗಿಯೇ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಎಂಬ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದರು. ನಂತರ ಜಿಲ್ಲೆಗಳಿಗೂ ವಿಸ್ತರಿಸಿದರು. ಸಾವಿರಾರು ಜನ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಊಟ ಮಾಡಿ ತಮ್ಮ ಹಸಿವನ್ನು ನೀಗಿಸಿಕೊಂಡರು. ಆದರೆ ಅತ್ತ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಕೂಡ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ.

    ತುಮಕೂರು ನಗರದ ಪಾಲಿಕೆ ಆವರಣ, ಕ್ಯಾತಸಂದ್ರ, ಶಿರಾ ಗೇಟ್ ಹಾಗೂ ಮಂಡಿಪೇಟೆ ಹೀಗೆ ನಗರದ ಒಟ್ಟು ನಾಲ್ಕು ದಿಕ್ಕುಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ಮೊದ ಮೊದಲು ಜನ ಕೂಡ ಊಟ, ತಿಂಡಿಗಾಗಿ ಮುಗಿಬೀಳುತ್ತಿದ್ದರು. ಅದೆಷ್ಟೋ ಸಲ ಜನ ಊಟ ಸಿಗದೇ ಕ್ಯಾಂಟೀನ್ ಸಿಬ್ಬಂದಿ ಜೊತೆಗೆ ಜಗಳವಾಡಿರುವ ಪ್ರಸಂಗಗಳೂ ನಡೆದಿದೆ. ಆದರೆ ಇತ್ತೀಚೆಗೆ ಯಾಕೋ ಜನ ಇಂದಿರಾ ಕ್ಯಾಂಟೀನ್‍ನತ್ತ ಸುಳಿಯುತ್ತಿಲ್ಲ.

    ಗ್ರಾಹಕರಿಗೆ ಕೊರತೆ ಆಗಬಾರದೆಂಬ ಕಾರಣಕ್ಕೆ ಗುತ್ತಿಗೆದಾರರು ಪ್ರತಿದಿನ 1500 ಜನರಿಗಾಗಿ ಊಟ-ತಿಂಡಿ ತಯಾರಿಸುತ್ತಿದ್ದಾರೆ. ಆದರೆ ಗ್ರಾಹಕರು ಬಾರದಿದ್ದಾಗ ಅನಿವಾರ್ಯವಾಗಿ ಆಹಾರಗಳನ್ನು ಮೋರಿಗೆ ಎಸೆಯುವ ಸ್ಥಿತಿ ಬಂದಿದೆ. ಗುತ್ತಿಗೆದಾರರು ಮಾತ್ರ ದಿನವೊಂದಕ್ಕೆ 1500 ಟೋಕನ್ ಸೇಲ್ ಆದ ಲೆಕ್ಕ ತೋರಿಸುತ್ತಿದ್ದಾರೆ.

  • ಇಂದಿರಾ ಕ್ಯಾಂಟೀನ್ ಅವ್ಯವಹಾರ- ಸಿಬಿಐ ತನಿಖೆಗೆ ಸಿಎಂ ಚಿಂತನೆ

    ಇಂದಿರಾ ಕ್ಯಾಂಟೀನ್ ಅವ್ಯವಹಾರ- ಸಿಬಿಐ ತನಿಖೆಗೆ ಸಿಎಂ ಚಿಂತನೆ

    ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ತಡ ಬಿಬಿಎಂಪಿ ಬಜೆಟ್, ವೈಟ್ ಟ್ಯಾಪಿಂಗ್ ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳ ತನಿಖೆಗೆ ಒಪ್ಪಿಸಲಾಗಿದೆ. ಈಗ ಇಂದಿರಾ ಕ್ಯಾಂಟೀನ್ ಸರದಿ ಎಂಬ ಮಾತು ಹರಿದಾಡುತ್ತಿದೆ.

    ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಗರಣ ಆರೋಪವಿರುವ ಎಲ್ಲ ಯೋಜನೆಗಳನ್ನ ತನಿಖೆಗೆ ಒಪ್ಪಿಸುತ್ತಿದ್ದಾರೆ. ಈ ಸಾಲಿಗೆ ಇಂದಿರಾ ಕ್ಯಾಂಟೀನ್ ಸಹ ಶೀಘ್ರವೇ ಸೇರ್ಪಡೆಯಾಗುವ ಸಾಧ್ಯತೆ ಇದೆ. ಇಂದಿರಾ ಕ್ಯಾಂಟೀನ್ ಬಡವರ ಹೊಟ್ಟೆ ತುಂಬಿಸುವುದರ ಬದಲು ಉಳ್ಳವರ ಖಜಾನೆ ತುಂಬಿಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಚಿವ ಕೆ.ಜೆ ಜಾರ್ಜ್ ಯೋಜನೆ ಹೆಸರಲ್ಲಿ ಕೋಟಿ ಲೂಟಿ ಹೊಡೆದಿದ್ದಾರೆ ಎಂಬ ಆರೋಪವಿದೆ.

    ವಿಪಕ್ಷ ಕಾಂಗ್ರೆಸ್ ನಾಯಕರು ಅವರ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಅಕ್ರಮವನ್ನು ತನಿಖೆಗೆ ಒಳಪಡಿಸುವ ಮೂಲಕ ರಾಜಕೀಯವಾಗಿ ಕಟ್ಟಿಹಾಕುವ ಪ್ಲ್ಯಾನ್ ನಡೆಯುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 189 ಇಂದಿರಾ ಕ್ಯಾಂಟೀನ್‍ನಲ್ಲಿ ಒಂದಕ್ಕೆ ಹತ್ತು ಪಟ್ಟು ಅಂಕಿ ಅಂಶ ತೋರಿಸಿ ಕೋಟ್ಯಂತರ ರೂಪಾಯಿಯ ಸಬ್ಸಿಡಿ ಹಣದ ಹಗಲು ದರೋಡೆ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಚರ್ಚಿಸುತ್ತಿದೆ. ಉನ್ನತ ಮಟ್ಟದ ಅಥವಾ ಸಿಐಡಿ ತನಿಖೆ ನಡೆಸುವ ಬಗ್ಗೆ ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್. ರಮೇಶ್ ಅವರ ದೂರು ಸೇರಿದಂತೆ ಸಾರ್ವಜನಿಕವಾಗಿ ಸಾಕಷ್ಟು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಗೆ ಮುಂದಾಗುವ ಸಂಭವ ಇದೆ.

    ಇಂದಿರಾ ಕ್ಯಾಂಟಿನ್ ಕಟ್ಟಡ ನಿರ್ಮಾಣದ ಗೋಲ್ ಮಾಲ್ ಮಾಹಿತಿ:
    * ಮಾಜಿ ಸಿಎಂ ಸಿದ್ದರಾಮಯ್ಯ 2017 ರಲ್ಲಿ 198 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ಆದೇಶ ನೀಡಲಾಗಿತ್ತು.
    * ತಮಿಳುನಾಡು ಮೂಲದ ಎಂ/ಎಸ್ ಇನ್‍ಪ್ರಸ್ಟ್ರಕ್ಚರ್ ಫ್ರೈ ಲಿಮಿಟೆಡ್‍ಗೆ ಕ್ಯಾಂಟೀನ್ ನಿರ್ಮಾಣ ಗುತ್ತಿಗೆ
    * ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಒಟ್ಟು 72 ಕೋಟಿ 90 ಲಕ್ಷ ವೆಚ್ಚ
    * ಪ್ರತಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ತಲಾ 28.50 ಲಕ್ಷ
    * 198 ಕ್ಯಾಂಟೀನ್‍ಗೆ ಒಟ್ಟು 56.3 ಕೋಟಿ ವೆಚ್ಚ
    * ಅಡುಗೆ ಮನೆ ನಿರ್ಮಾಣಕ್ಕೆ 16.47 ಕೋಟಿ.
    * ಕ್ಯಾಂಟೀನ್, ಅಡುಗೆ ಮನೆ ಅಗತ್ಯ ಸಲಕರಣೆಗಳಿಗೆ 14 ಕೋಟಿ 53 ಲಕ್ಷ ಬಿಡುಗಡೆ
    * 900 ಚ.ಅಡಿ ವಿಸ್ತೀರ್ಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ.

    ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಹಗರಣದ ದೂರು ಸದ್ಯ ಎಸಿಬಿ, ಲೋಕಾಯುಕ್ತ, ಬಿಎಂಟಿಎಫ್ ಅಂಗಳದಲ್ಲಿದೆ. ಕಟ್ಟಡ ಕೆಲಸಕ್ಕೆ ಮುನ್ನ ಸರ್ಕಾರ ಹಣ ಬಿಡುಗಡೆ ಮಾಡಿತ್ತು. 198 ಕ್ಯಾಂಟೀನ್ ಗಳಲ್ಲಿ 174 ಕ್ಯಾಂಟೀನ್ ಮಾತ್ರ ನಿರ್ಮಾಣವಾಗಿದೆ. 27 ಅಡುಗೆ ಮನೆ ನಿರ್ಮಿಸಬೇಕಿದ್ದ ಸಂಸ್ಥೆ 19 ಅಡುಗೆ ಮನೆ ಮಾತ್ರ ನಿರ್ಮಿಸಿದೆ. 24 ಕ್ಯಾಂಟೀನ್, 8 ಅಡುಗೆ ಮನೆ ನಿರ್ಮಾಣ ಬಾಕಿ ಇದ್ದರೂ ಹೆಚ್ಚುವರಿಯಾಗಿ 11 ಕೋಟಿ 72 ಲಕ್ಷ ಹಣ ಈಗಾಗಲೇ ಸಂಸ್ಥೆಗೆ ಬಿಡುಗಡೆಯಾಗಿದೆ.

    ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿ ಎರಡು ವರ್ಷಗಳು ಕಳೆದಿವೆ. ಆದರೆ ಯೋಜನೆ ಆರಂಭದಿಂದಲೂ ಸಾಕಷ್ಟು ವಿವಾದಗಳು ಸೃಷ್ಟಿ ಆಗುತ್ತಿವೆ. ಆರಂಭದಲ್ಲಿ ಕ್ಯಾಂಟೀನ್ ನಿರ್ಮಾಣದಲ್ಲಿ 9 ಲಕ್ಷದಲ್ಲಿ ನಿರ್ಮಿಸಬಹುದಾದ ಕಟ್ಟಡಕ್ಕೆ 28 ಲಕ್ಷ ವೆಚ್ಚ ಮಾಡಿದ ಆರೋಪ ಕೇಳಿಬಂದಿತ್ತು. ಬಳಿಕ ಶೆಫ್ ಟಾಕ್ ಮತ್ತು ರಿವಾರ್ಡ್ ಎಂಬ ಗುತ್ತಿಗೆ ಪಡೆದ ಎರಡು ಸಂಸ್ಥೆಗಳು ಸರ್ಕಾರದಿಂದ ಅಕ್ರಮವಾಗಿ ಸಬ್ಸಿಡಿ ಪಡೆಯುತ್ತಿವೆ ಎಂದು ದಾಖಲೆ ಸಹಿತ ದೂರಿನ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿದ್ದವು.

    ಅದರಲ್ಲೂ ಮುಖ್ಯವಾಗಿ ಊಟ, ತಿಂಡಿ ಲೆಕ್ಕದಲ್ಲಿ ನೀಡುತ್ತಿರುವ ಇಂಡೆಂಟ್‍ಗಳ ದಾಖಲೆಗಳಂತೆ ಪ್ರತೀ ತಿಂಗಳು ಗ್ರಾಹಕರಿಂದ ಸಂಗ್ರಹಿಸುತ್ತಿರುವ ಮೊತ್ತ ಸರಾಸರಿ 4,69,92,900 ರೂಪಾಯಿ ಆಗಿದೆ. ಹಾಗೆಯೇ ಪ್ರತೀ ತಿಂಗಳೂ ಬಿಬಿಎಂಪಿ ಮೂಲಕ ಸರ್ಕಾರದಿಂದ ಇವುಗಳು ಪಡೆಯುತ್ತಿರುವ ಸಬ್ಸಿಡಿ ಮೊತ್ತವು ಸುಮಾರು 6,82,81,373 ರೂಪಾಯಿ ಇದೆ. ಈ ಅಂಕಿ ಅಂಶಗಳ ಲೆಕ್ಕ ಸಂಶಯಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ವರ್ಷಗಳ ಹಿಂದೆ ಬಿಜೆಪಿ ತನಿಖೆಗೆ ಒತ್ತಾಯಿಸಿತ್ತು. ಆ ವಿಚಾರ ಇದೀಗ ಪಾಲಿಕೆಯಲ್ಲಿ ಮತ್ತೆ ಸದ್ದು ಮಾಡುತ್ತಿದೆ.

    ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆದ 60ಕ್ಕೂ ಹೆಚ್ಚು ಅಕ್ರಮಗಳ ಬಗ್ಗೆ ಬಿಜೆಪಿ ಸರ್ಕಾರ ತನಿಖೆಗೆ ಮುಂದಾಗಿದೆ. ಅದರಲ್ಲಿ ಮುಖ್ಯವಾಗಿ ಇಂದಿರಾ ಕ್ಯಾಂಟೀನ್‍ನಲ್ಲಾದ ಅಕ್ರಮದ ಬಗ್ಗೆಯೂ ತನಿಖೆ ನಡೆಸಲು ಸಿಎಂ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

  • ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯೋಕೆ ನೀರಿಲ್ಲ

    ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯೋಕೆ ನೀರಿಲ್ಲ

    – ಕೋಟಿಗಟ್ಟಲೆ ಕರೆಂಟ್ ಬಿಲ್ ಕಟ್ಟೇ ಇಲ್ಲ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆಗೆ ಎಳ್ಳು ನೀರು ಬಿಡುವ ಸ್ಥಿತಿ ಎದುರಾಗಲಿದೆ. ಯಾಕಂದರೆ ಇಂದಿರಾ ಕ್ಯಾಂಟೀನ್ ಬಗ್ಗೆ ದೋಸ್ತಿ ನಾಯಕರಿಗೆ ಆಸಕ್ತಿ ಇದ್ದಂತೆ ಕಾಣುತ್ತಿಲ್ಲ. ಜನಸಾಮಾನ್ಯರ ಇಂದಿರಾ ಕ್ಯಾಂಟೀನ್‍ನಲ್ಲಿ ನೀರಿಗಾಗಿ ಪರದಾಟ ಶುರುವಾಗಿದೆ.

    ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಡವರ ಹಸಿವು ನೀಗಿಸಲು ಆರಂಭಿಸಿದ ಯೋಜನೆ ಈಗ ನೆಲಕಚ್ಚುತ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇಂದಿರಾ ಕ್ಯಾಂಟೀನ್‍ನಲ್ಲಿ ವಿದ್ಯುತ್, ನೀರು ವ್ಯತ್ಯಯವಾಗಿದೆ. ಕಾರಣ ಕಳೆದ ಒಂದು ವರ್ಷದಿಂದ ಇಂದಿರಾ ಕ್ಯಾಂಟೀನ್‍ ಇವುಗಳ ಬಿಲ್ ಪಾವತಿಸಿಲ್ಲ. ನಗರದ 21 ಕ್ಯಾಂಟೀನ್‍ಗಳಲ್ಲಿ ಸದ್ಯ ನೀರಿನ ಪೂರೈಕೆ ಬಹುತೇಕ ಬಂದ್ ಆಗಿದೆ.

    ವಿದ್ಯುತ್ ಹಾಗೂ ನೀರಿಗೆ ವಾಣಿಜ್ಯ ಬೆಲೆ ನಿಗದಿ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಯೋಜನೆ ಸಾರ್ವಜನಿಕ ಸೇವೆಯದ್ದಾಗಿದೆ. ಇದಕ್ಕೆ ರಿಯಾಯಿತಿ ನೀಡುವವರೆಗೂ ಬಿಲ್ ಪಾವತಿಸಲ್ಲ ಎಂದು ಗುತ್ತಿಗೆದಾರರು ಪಟ್ಟು ಹಿಡಿದಿದ್ದಾರೆ. ಪರಿಣಾಮ ಕೋಡಿಗೆಹಳ್ಳಿ ಸಮೀಪದ ಕ್ಯಾಂಟೀನ್‍ನಲ್ಲಿ ಕಳೆದ 10 ದಿನದಿಂದ ನೀರಿನ ಸಂಪರ್ಕ ಕಡಿತಗೊಳಿಸಲಾಗಿದೆ.

    ರಿಯಾಯಿತಿ ದರದಲ್ಲಿ ಊಟ, ತಿಂಡಿ ಕೊಡುತ್ತಾರೆ. ನೀರು ಮಾತ್ರ ಕಷ್ಟ ಆಗುತ್ತಿದೆ. ಬೇಗ ನೀರಿನ ವ್ಯವಸ್ಥೆ ಕೊಡಿ ಎಂದು ಗ್ರಾಹಕರು ಒತ್ತಾಯಿಸುತ್ತಿದ್ದಾರೆ. ಬೆಂಗಳೂರಿನ 21 ಕ್ಯಾಂಟೀನ್ ಗಳಲ್ಲಿ ವಾಟರ್ ಬಂದ್ ಮಾಹಿತಿ ಇದೆ. ಹೀಗಾಗಿ ಸದ್ಯ ಖಾಸಗಿ ವಾಟರ್ ಟ್ಯಾಂಕ್‍ಗೆ ಸಾವಿರ ರೂ ಕೊಟ್ಟು ನೀರಿನ ಪೈಪ್ ಅಳವಡಿಸಿ ವ್ಯವಸ್ಥೆ ಮಾಡಿದ್ದಾರೆ. ಇನ್ನು ಗುತ್ತಿಗೆದಾರೊಂದಿಗೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೇಯರ್ ಗಂಗಾಬಿಕೆ ಹೇಳಿದ್ದಾರೆ.

    ಪ್ರತಿ ಇಂದಿರಾ ಕ್ಯಾಂಟೀನ್ ನಲ್ಲೂ ವಿದ್ಯುತ್ 90 ಸಾವಿರವರೆಗೂ ಬಿಲ್ ಬಾಕಿ ಉಳಿದಿದೆ. ನೀರು ಕಟ್ ಅಂತೂ ಆಯ್ತು ಹೀಗೆ ಮುಂದುವರಿದರೆ ವಿದ್ಯುತ್ ಸಹ ಬಂದ್ ಆಗಲಿದೆ. ಹೀಗಾಗಿ ಅಧಿಕಾರಿಗಳು, ದೋಸ್ತಿ ಜನರು ಇಂದಿರಾ ಸಂಕಟವನ್ನು ಬಗೆಹರಿಸಬೇಕಿದೆ.

  • ಲೋಕ ಸಮರ ಎಫೆಕ್ಟ್! – ಇಂದಿರಾ ಕ್ಯಾಂಟೀನ್ ಮೆನು ಕೊಂಚ ಚೇಂಜ್

    ಲೋಕ ಸಮರ ಎಫೆಕ್ಟ್! – ಇಂದಿರಾ ಕ್ಯಾಂಟೀನ್ ಮೆನು ಕೊಂಚ ಚೇಂಜ್

    ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್ ಮೆನು ಕೊಂಚ ಬದಲಾಗಿದ್ದು, ರುಚಿಕರ ಊಟ ಕೊಡುವ ಮೂಲಕ ಮತದಾರ ಸೆಳೆಯುವ ಯತ್ನ ನಡೆಯುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.

    ಬ್ರೇಕ್ ಫಾಸ್ಟ್ ಸಮಯದಲ್ಲಿ ನೀಡುತ್ತಿದ್ದ ಚಟ್ನಿ ಬೇಸಿಗೆಯಲ್ಲಿ ಬಹುಬೇಗ ಹಾಳಾಗುತ್ತೆ ಎಂಬ ಕಾರಣದಿಂದ ಚಟ್ನಿ ಬದಲಾಗಿ ಇಡ್ಲಿ ಜೊತೆ ಗಟ್ಟಿ ಸಾಂಬರ್ ಕೊಡಲಿದ್ದಾರೆ. ವಾರಕ್ಕೆ ಎರಡು ದಿನ ಖಾರಬಾತ್ ಸಿಗಲಿದೆ. ಈ ಹಿಂದೆ ಒಂದೇ ದಿನ ಮಾತ್ರ ಖಾರಬಾತ್ ನೀಡಲಾಗುತ್ತಿತ್ತು. ಬಿಸಿಬೇಳೆ ಬಾತ್‍ಗೆ ಖಾರಬೂದಿ ಸಹ ಕೊಡಲು ತೀರ್ಮಾನಿಸಲಾಗಿದೆ. ಇನ್ನು ಸಾಂಬಾರ್‍ನಲ್ಲೂ ಸಾಕಷ್ಟು ಬದಲಾವಣೆಯಾಗಿದ್ದು, ಈ ಹಿಂದೆ ತರಕಾರಿ ಅಡುಗೆ ಸಾಂಬಾರ್ ಮಾಡಲಾಗುತ್ತಿತ್ತು. ಈಗ ಕಾಳುಗಳನ್ನ ಹಾಕಿ ಸಾಂಬರ್ ಮಾಡಲು ನಿರ್ಧರಿಸಿದ್ದಾರೆ.

    ರಾತ್ರಿ ಊಟವೂ ಸಹ ಪಲಾವ್, ಅನ್ನಸಾಂಬರ್ ಸಿಗಲಿದೆ. ಮೊದಲು ರಾತ್ರಿ ವೇಳೆ ಪಲಾವ್ ಅಥವಾ ಅನ್ನಸಾಂಬಾರ್ ಇತ್ತು. ಈಗ ಎರಡು ಇರುತ್ತೆ. ಸದ್ಯಕ್ಕಂತೂ ಈ ಬದಲಾವಣೆ ಫಲಾನುಭವಿಗಳಿಗೆ ಖುಷಿ ತಂದಿದೆ. ಇದು ಬಡವರಿಗೆ ಬಗೆ ಬಗೆಯ ಊಟ ಕೊಟ್ಟು ಮತಗಿಟ್ಟಿಸುವ ಚಿಂತನೆಯ ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ಚುನಾವಣೆ ಬಳಿಕವೂ ಇದೇ ಗುಣಮಟ್ಟ ಕಾಯ್ತು ಕೊಳ್ಳುತ್ತರಾ ಕಾದು ನೋಡಬೇಕಿದೆ.

  • ಇಂದಿರಾ ಕ್ಯಾಂಟಿನ್‍ಗೂ ತಟ್ಟಿದೆ ಸುಳ್ವಾಡಿ ದುರಂತದ ಎಫೆಕ್ಟ್

    ಇಂದಿರಾ ಕ್ಯಾಂಟಿನ್‍ಗೂ ತಟ್ಟಿದೆ ಸುಳ್ವಾಡಿ ದುರಂತದ ಎಫೆಕ್ಟ್

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದ ಎಫೆಕ್ಟ್ ಇದೀಗ ಇಂದಿರಾ ಕ್ಯಾಂಟಿನ್‍ಗೂ ತಟ್ಟಿದೆ.

    ಸುಳ್ವಾಡಿ ಪ್ರಕರಣದಿಂದ ಎಚ್ಚೆತ್ತಿರುವ ಚಾಮರಾಜನಗರ ಜಿಲ್ಲಾಡಳಿತ ಇದೀಗ ಇಂದಿರಾ ಕ್ಯಾಂಟಿನ್‍ಗಳಿಗೆ ಸಿಸಿಟಿವಿಗಳನ್ನು ಅಳವಡಿಕೆ ಮಾಡಿದೆ. ಜಿಲ್ಲೆಯ ಮೂರು ಇಂದಿರಾ ಕ್ಯಾಂಟಿನ್‍ಗಳಿಗೆ ಸಿಸಿಟಿವಿಗಳನ್ನು ಈಗಾಗಲೇ ಅಳಡಿಕೆ ಮಾಡಲಾಗಿದೆ.

    ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಕೊಳ್ಳೇಗಾಲದಲ್ಲಿರುವ ಇಂದಿರಾ ಕ್ಯಾಂಟಿನ್‍ಗಳಿಗೆ ತಲಾ 4 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದೆ. ಅಡುಗೆ ಮನೆಯಲ್ಲಿ ಎರಡು ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಕೆ ಮಾಡಿದರೆ, ಡೈನಿಂಗ್ ಹಾಲ್ ಮತ್ತು ಕ್ಯಾಂಟಿನ್‍ನ ಹೊರ ಭಾಗಕ್ಕೆ ಒಂದೊಂದು ಸಿಸಿಟಿವಿಯನ್ನು ಅಳವಡಿಸಲಾಗಿದೆ. ಇದಲ್ಲದೇ ಅಡುಗೆ ಮನೆಗೆ ಅಡುಗೆ ಭಟ್ಟರನ್ನು ಬಿಟ್ಟು ಯಾರು ಹೋಗದಂತೆ ಈಗಾಗಲೇ ಆದೇಶ ಮಾಡಲಾಗಿದೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ನೀಡಿದ ವಿಷಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕನ್ನಡಿಗರಿಗೆ ಇಂದಿರಾ ಕ್ಯಾಂಟೀನ್ ಉದ್ಯೋಗದಲ್ಲಿ ಶೇ.50ರಷ್ಟು ಮೀಸಲಾತಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕನ್ನಡಿಗರಿಗೆ ಇಂದಿರಾ ಕ್ಯಾಂಟೀನ್ ಉದ್ಯೋಗದಲ್ಲಿ ಶೇ.50ರಷ್ಟು ಮೀಸಲಾತಿ

    ಬೆಂಗಳೂರು: ಇಂದಿರಾ ಕ್ಯಾಂಟೀನ್ ಉದ್ಯೋಗದಲ್ಲಿ ಶೇ.50ರಷ್ಟು ಮೀಸಲಾತಿಯನ್ನು ಕನ್ನಡಿಗರಿಗೆ ನೀಡುವಂತೆ ಇಂದೇ ಆದೇಶಿಸುತ್ತೇವೆ ಎಂದು ಬಿಬಿಎಂಪಿ ಮೇಯರ್ ಪದ್ಮಾವತಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಾವು ಟೆಂಡರ್ ನೀಡುವಾಗ ಈ ಅಂಶವನ್ನು ಪ್ರಸ್ತಾಪ ಮಾಡಿರಲಿಲ್ಲ. ಇವತ್ತು ನಾವು ಟೆಂಡರ್ ನೀಡಿದ ಕಂಪೆನಿಗಳಿಗೆ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆದೇಶಿಸುತ್ತೇವೆ ಎಂದು ಹೇಳಿದರು.

    ಇಂದಿರಾ ಕ್ಯಾಂಟೀನ್‍ನಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ. ಕೆಲಸ ನೀಡುವುದರಿಂದ ನೂರಾರು ಜನ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದಂತಾಗುತ್ತದೆ ಎಂದು ತಿಳಿಸಿದರು.

    ಕರ್ನಾಟಕದಲ್ಲಿ ಕನ್ನಡಿಗರರಿಗೆ ಕೆಲಸ ಕೊಡದೇ ಹೊರರಾಜ್ಯದವರಿಗೆ ಬಿಬಿಎಂಪಿ ಮಣೆ ಹಾಕಿದ್ದ ವಿಚಾರ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‍ನಲ್ಲಿ ಬಯಲಾಗಿತ್ತು. ಆಂಧ್ರ ಹಾಗೂ ದೆಹಲಿ ಮೂಲದ ಕಂಪನಿಗಳಿಗೆ ಅಡುಗೆ ಟೆಂಡರ್ ನೀಡಲಾಗಿದ್ದು, ಈ ಕಂಪೆನಿಗಳು ಹೈದ್ರಾಬಾದ್ ಹಾಗೂ ಕೊಲ್ಕತ್ತಾ ಮೂಲದ ವ್ಯಕ್ತಿಗಳನ್ನು ಕೆಲಸಕ್ಕೆ ನೇಮಿಸಿತ್ತು.