Tag: ಇಂದಿರಾ ದೇವಿ

  • ಮಹೇಶ್‌ ಬಾಬು ತಂದೆ ನಟ ಕೃಷ್ಣ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    ಮಹೇಶ್‌ ಬಾಬು ತಂದೆ ನಟ ಕೃಷ್ಣ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    ಟಾಲಿವುಡ್(Tollywood) ನಟ ಮಹೇಶ್ ಬಾಬು(Mahesh Babu) ಇತ್ತೀಚೆಗಷ್ಟೇ ತಾಯಿಯನ್ನ ಕಳೆದುಕೊಂಡು ಆಘಾತದಲ್ಲಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹೇಶ್ ಬಾಬು ಅವರ ತಂದೆ ಕೃಷ್ಣ (Krishna) ತೀವ್ರ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಹೈಪ್ ಕ್ರಿಯೇಟ್ ಮಾಡಿರುವ 80 ವರ್ಷದ ಲೆಜೆಂಡ್ ಆಕ್ಟರ್ ಕೃಷ್ಣ ಇದೀಗ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಯ ನಂತರ ಕೃಷ್ಣ ಅವರ ಆರೋಗ್ಯ ಸ್ಟೇಬಲ್ ಆಗಿದೆ. ಜನರಲ್ ಚೆಕಪ್‌ಗೆ ಆಸ್ಪತ್ರೆಗೆ ಹೋಗಿದ್ದರು. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷ್ಣ ಅವರ ಪಿಆರ್ ಸುರೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ನವೆಂಬರ್ 13ರಂದು ಹಿರಿಯ ನಟ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ಇರುವ ಕಾರಣ ದಾಖಲಿಸಲಾಗಿತ್ತು ಎನ್ನಲಾಗುತ್ತಿದೆ. ಕೃಷ್ಣ ಅವರ ಪತ್ನಿ ಇಂದಿರಾ ದೇವಿ ನಿಧನದ ಬಳಿಕ ಕೃಷ್ಣ ಅವರ ಆರೋಗ್ಯದಲ್ಲೂ ಸಮಸ್ಯೆ ಕಂಡು ಬಂದಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:`ಬನಾರಸ್’ ಚಿತ್ರದ ಬೆನ್ನಲ್ಲೇ ಝೈದ್ ಖಾನ್‌ಗೆ ಬಂತು ಬಿಗ್ ಆಫರ್

    ಇನ್ನೂ ಸೂಪರ್ ಸ್ಟಾರ್ ಕೃಷ್ಣ  350ಕ್ಕೂ ಹೆಚ್ಚು ತೆಲುಗಿನ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ, ನಿರ್ಮಾಪಕನಾಗಿಯೂ ಸೈ ಎನಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಟಾರ್ ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ನಿಧನ

    ಸ್ಟಾರ್ ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ನಿಧನ

    ಟಾಲಿವುಡ್ (Tollywood) ನ ಖ್ಯಾತ ಸ್ಟಾರ್ ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ (Indira Devi) ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಇಂದಿರಾ ಅವರನ್ನು ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಅನಾರೋಗ್ಯದ ಕಾರಣಕ್ಕಾಗಿ ವೆಂಟಿಲೇಟರ್ ನಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಬೆಳಗ್ಗೆ ನಾಲ್ಕು ಗಂಟೆ ಹೊತ್ತಿಗೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ (Passed Away) ತ್ಯಜಿಸಿದ್ದಾರೆ.

    ಇಂದಿರಾ ಅವರ ಅಂತಿಮ ದರ್ಶನಕ್ಕಾಗಿ ಪದ್ಮಾಲಯ ಸ್ಟುಡಿಯೋಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಜೆವರೆಗೂ ಅಭಿಮಾನಿಗಳು ಅಂತಿಮ ದರ್ಶನ ಮಾಡಬಹುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸೂಪರ್ ಸ್ಟಾರ್ ಕೃಷ್ಣ (Krishna) ಅವರ ಪತ್ನಿ ಆಗಿರುವ ಇಂದಿರಾ, ಪತಿ ಮತ್ತು ಮಕ್ಕಳು ಸಿನಿಮಾ ರಂಗದಲ್ಲಿ ಬೆಳೆಯಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಅವರಿಗೆ ಬೆನ್ನೆಲುಬಾಗಿ ನಿಂತು, ಪ್ರೋತ್ಸಾಹಿಸಿದ್ದಾರೆ. ಹಾಗಾಗಿ ಪತಿ ಮತ್ತು ಮಕ್ಕಳ ಅಭಿಮಾನಿಗಳು ಕೂಡ ಇಂದಿರಾ ಅವರನ್ನು ಅಷ್ಟೇ ಗೌರವದಿಂದ ಕಾಣುತ್ತಿದ್ದರು. ಇದನ್ನೂ ಓದಿ:ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾದ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್

    ಇಂದಿರಾ ದೇವಿ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಈಗಾಗಲೇ ಮಹೇಶ್ ಬಾಬು (Mahesh Babu) ಅವರ ನಿವಾಸದತ್ತ ಸಿನಿಮಾ ರಂಗದ ಸಾಕಷ್ಟು ಗಣ್ಯರು ಆಗಮಿಸಿದ್ದು, ಸಂತಾಪ ಸೂಚಿಸುತ್ತಿದ್ದಾರೆ. ಇಂದಿರಾ ಅವರ ಅಂತಿಮ ಸಂಸ್ಕಾರ ಇಂದು ಸಂಜೆ ನೆರವೇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    Live Tv
    [brid partner=56869869 player=32851 video=960834 autoplay=true]