Tag: ಇಂದಿರಾ ನಗರ

  • ಸಿನಿಮಾ ಶೈಲಿಯಲ್ಲಿ ಮೊಬೈಲ್‌ಗಳ್ಳರ ಸೆರೆ

    ಸಿನಿಮಾ ಶೈಲಿಯಲ್ಲಿ ಮೊಬೈಲ್‌ಗಳ್ಳರ ಸೆರೆ

    ಬೆಂಗಳೂರು: ಸಿನಿಮಾ ಶೈಲಿಯಲ್ಲಿ ಹೊಯ್ಸಳ  (Hoysala) ಪೊಲೀಸರು ಚೇಸಿಂಗ್ (Chasing) ಮಾಡಿ ಕಳ್ಳರನ್ನು ಇಂದಿರಾ ನಗರದ (Indira Nagar) 80 ಅಡಿ ರಸ್ತೆಯಲ್ಲಿ ಸೆರೆ ಹಿಡಿದಿದ್ದಾರೆ.

    ರೌಡಿಶೀಟರ್‌ಗಳಾದ ಗುಂಡಾ ಅಲಿಯಾಸ್ ವಿನೋದ್, ಸ್ಪೀಫನ್ ರಾಜ್‌ನನ್ನು ಬಂಧಿಸಲಾಗಿದೆ. ಜನವರಿ 31 ರಂದು ರಾತ್ರಿ ಎರಡು ಗಂಟೆ ವೇಳೆಗೆ ಸಿದ್ದೇಶ್ ಎಂಬಾತನ ಕಾರನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಪಾಕ್‌ನ ಸ್ವತಂತ್ರ ಅಭ್ಯರ್ಥಿಯ ಕಚೇರಿಯ ಹೊರಗೆ ಬಾಂಬ್‌ ಸ್ಫೋಟ: 26 ಮಂದಿ ಸಾವು

    ಸಿದ್ದೇಶ್ ಅವರು ಈ ಕುರಿತು ಹೊಯ್ಸಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಹೋಗಿದ್ದಾರೆ. ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಬೈಕ್‌ನಲ್ಲಿ ಹೊರಟ್ಟಿದ್ದಾರೆ. ಬಳಿಕ ಪೊಲೀಸರು ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಇದನ್ನೂ ಓದಿ: ಓದಿನ ಕಡೆ ಗಮನಕೊಡುವಂತೆ ಹೇಳಿದ್ದಕ್ಕೆ ಫುಟ್ಬಾಲ್ ಪ್ಲೇಯರ್ ಸೂಸೈಡ್

    ಹೊಯ್ಸಳ ಪೊಲೀಸರಾದ ಜಾರ್ಜ್ ಮತ್ತು ಬೀರಪ್ಪ ಅವರು ಆರೋಪಿಗಳನ್ನು ಬೆನ್ನಟ್ಟಿದು, ಸುಮಾರು ಮೂರು ಕಿಲೋಮಿಟರ್‌ಗಳವರೆಗೂ ಬೈಕ್‌ನಲ್ಲಿ ಆರೋಪಿಗಳು ಹೋಗಿದ್ದಾರೆ. ಪಟ್ಟು ಬಿಡದ ಪೊಲೀಸರು ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಿ, ಆರೋಪಿಗಳು ಕಳವು ಮಾಡಿದ್ದ ಏಳು ಮೊಬೈಲ್ ಫೋನ್‌ಗಳನ್ನು ಸಹ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರ ವಶ

    ಹೊಯ್ಸಳ ಪೊಲೀಸರ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಬಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ

  • ವೆಹಿಕಲ್ ಟೋಯಿಂಗ್ ಹುಡುಗರನ್ನು ಅಟ್ಟಾಡಿಸಿ ಹೊಡೆದ ಸಾರ್ವಜನಿಕರು

    ವೆಹಿಕಲ್ ಟೋಯಿಂಗ್ ಹುಡುಗರನ್ನು ಅಟ್ಟಾಡಿಸಿ ಹೊಡೆದ ಸಾರ್ವಜನಿಕರು

    ಬೆಂಗಳೂರು: ನಗರದಲ್ಲಿ ವೆಹಿಕಲ್ ಟೋಯಿಂಗ್ ಮಾಡುತ್ತಿದ್ದ ಹುಡುಗರನ್ನು ಸಾರ್ವಜನಿಕರು ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ಇಂದಿರಾ ನಗರದಲ್ಲಿ ನಡೆದಿದೆ.

    ಬೆಂಗಳೂರು ನಗರದಲ್ಲಿ ನಡೆದಿರುವ ಎರಡನೇ ಘಟನೆ ಇದಾಗಿದ್ದು, ಕಳೆದ ತಿಂಗಳು ಯಲಹಂಕದಲ್ಲಿ ಬೈಕ್ ಟೋಯಿಂಗ್ ಮಾಡೋ ವಿಚಾರವಾಗಿ ಇಬ್ಬರಿಗೆ ಹೆಲ್ಮೆಟ್‍ನಿಂದ ಹಿಗ್ಗಾಮುಗ್ಗ ಸಾರ್ವಜನಿಕರು ಥಳಿಸಿದ್ದರು. ಘಟನೆ ಸಂಬಂಧ ಹಲ್ಲೆಮಾಡಿದವರ ಮೇಲೆ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಇಬ್ಬರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಕೆಟ್ಟು ನಿಂತ ಟೆಂಪೋವನ್ನು 7 ಕಿ.ಮೀ ಎಳೆದ ಬೈಕ್! – ವಿಡಿಯೋ ನೋಡಿ

    ಈ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಘಟನೆ ಹಲಸೂರು ಸಂಚಾರಿ ಪೊಲೀಸ್ ಠಾಣಾ ಟೋಯಿಂಗ್ ಹುಡುಗರ ಮೇಲೆ ಹಲ್ಲೆ ನಡೆದಿದೆ. ಇಂದಿರಾ ನಗರದಲ್ಲಿ ಸಂಜೆ ನಾಲ್ಕು ಗಂಟೆಗೆ ಬೈಕ್ ಟೋಯಿಂಗ್ ಮಾಡುವ ವಿಚಾರವಾಗಿ ಸಾರ್ವಜನಿಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಸಾರ್ವಜನಿಕರು ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

    ಈ ಘಟನೆ ಸಂಬಂಧ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಹಲಸೂರು ಸಂಚಾರಿ ಪೊಲೀಸ್ ಠಾಣಾ ಎಸ್.ಐ ರಾಜೇಂದ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಹಲ್ಲೆಕೋರರಿಗೆ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಾರ್ಕಿಂಗ್‌ನಲ್ಲೇ ಬೈಕ್ ಪಾರ್ಕ್ ಮಾಡಿದ್ರೂ ಟೋಯಿಂಗ್ ಕಾಟ- ಫೈನ್ ಕಟ್ಟದೆ ಮಹಿಳೆ ಅವಾಜ್

  • ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್‍ಗೆ ಕಪಾಳಮೋಕ್ಷ

    ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್‍ಗೆ ಕಪಾಳಮೋಕ್ಷ

    ಬೆಂಗಳೂರು: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಅಧಿಕಾರಿಗೆ ಆರೋಪಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ನಗರದ ಜೆಬಿ ನಗರದಲ್ಲಿ ತಡರಾತ್ರಿ ನಡೆದಿದೆ.

    ರಾಜಸ್ತಾನ ಮೂಲದ ವ್ಯಕ್ತಿ ಜೀವನ್ ಭೀಮಾನಗರ ಟ್ರಾಫಿಕ್ ಸಹಾಯಕ ನಿರೀಕ್ಷಕ (ಎಎಸ್‍ಐ) ಶಿವಪ್ಪ ಅವರಿಗೆ ಕಪಾಳಮೋಕ್ಷ ಮಾಡಿದ್ದು, ಆರೋಪಿಯನ್ನು ಕೇಶವ್ ಗುಪ್ತಾ ಎಂದು ಗುರುತಿಸಲಾಗಿದೆ.

    ಆರೋಪಿ ಕೇಶವ್ ಗುಪ್ತಾ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಜೆಬಿ ನಗರದಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಸ್ಥಳದಿಂದ ಪರಾರಿಯಾಗಲು ಕೇಶವ್ ಯತ್ನಿಸಿದ್ದು, ಆ ಸಮಯಕ್ಕೆ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮಾಹಿತಿ ಪಡೆದಿದ್ದಾರೆ. ಅಲ್ಲದೇ ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೆ ಬರುವಂತೆ ಸೂಚಿಸಿದ್ದಾರೆ.

    ಈ ಹಂತದಲ್ಲಿ ಪೊಲೀಸರ ವಿರುದ್ಧವೇ ತಿರುಗು ಬಿದ್ದ ಆರೋಪಿ ಕೇಶವ್ ನಾನು ರಾಜಸ್ಥಾನಿ ಎಂದು ನನ್ನ ಮೇಲೆ ಕೇಸ್ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ಎಎಸ್‍ಐಗೆ ಕಾಪಾಳಮೋಕ್ಷ ಮಾಡಿದ್ದಾನೆ. ಅಲ್ಲದೇ ಮಹಿಳಾ ಪಿಎಸ್‍ಐ ವಿದ್ಯಾ ಅವರೊಂದಿಗೂ ಆರೋಪಿ ಅನುಚಿತ ವರ್ತನೆ ತೋರಿದ್ದಾನೆ. ಘಟನೆಯ ಸಂಬಂಧ ನಗರದ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಮತ್ತು ಮಹಿಳಾ ಪಿಎಸ್‍ಐ ಅವರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಇಂದಿರಾ ನಗರದ ಪೊಲೀಸರು ಬಂಧಿಸಿದ್ದಾರೆ.