Tag: ಇಂದ್ರಾಣಿ ಮುಖರ್ಜಿ

  • 6 ವರ್ಷ ಜೈಲು ವಾಸದ ಬಳಿಕ ಬಿಡುಗಡೆಯಾದ ಇಂದ್ರಾಣಿ ಮುಖರ್ಜಿ

    6 ವರ್ಷ ಜೈಲು ವಾಸದ ಬಳಿಕ ಬಿಡುಗಡೆಯಾದ ಇಂದ್ರಾಣಿ ಮುಖರ್ಜಿ

    ನವದೆಹಲಿ: ಸುಪ್ರಿಂ ಕೋರ್ಟ್ ಬುಧವಾರ ಐಎನ್‌ಎಕ್ಸ್ ಕಂಪನಿ ಮಾಲಕಿ ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು ಮಾಡಿದ್ದು, ಶುಕ್ರವಾರ ಜೈಲಿನಿಂದ ಹೊರಬಂದಿದ್ದಾರೆ.

    ಇಂದ್ರಾಣಿ ಮುಖರ್ಜಿ ತನ್ನ ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ, 2015ರಲ್ಲಿ ಜೈಲು ಸೇರಿದ್ದರು. ಇದೀಗ 6 ವರ್ಷಗಳ ಜೈಲು ವಾಸ ಅನುಭವಿಸಿ, ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ.

    ಜೈಲಿನಿಂದ ಹೊರಬರುತ್ತಲೇ ಮಾಧ್ಯಮದೊಂದಿಗೆ ಮಾತನಾಡಿದ ಇಂದ್ರಾಣಿ ಮುಖರ್ಜಿ, ತೆರೆದ ಆಕಾಶವನ್ನು ನೋಡುತ್ತಾ ಬಹಳ ಸಂತೋಷವಾಗುತ್ತಿದೆ. ನಾನು ಜೈಲಿನಲ್ಲಿ ಬಹಳಷ್ಟು ಕಲಿತಿದ್ದೇನೆ. ಮುಂದಿನ ಸಂದರ್ಶನದಲ್ಲಿ ಅದರ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

    ಬುಧವಾರ ಸುಪ್ರೀಂ ಕೋರ್ಟ್ ಇಂದ್ರಾಣಿ ಮುಖರ್ಜಿಗೆ 2 ಲಕ್ಷ ರೂ. ಶ್ಯೂರಿಟಿ ಮತ್ತು ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಾಮೀನು ನಿರಾಕರಿಸಿದ ಕೋರ್ಟ್

    ಆರೋಪ ಏನು?
    2012 ಏಪ್ರಿಲ್ 24 ರಂದು ಇಂದ್ರಾಣಿ ಮುಖರ್ಜಿ, ಕಾರು ಚಾಲಕ ಶ್ಯಾಮ್‌ವರ್ ರೈ ಮತ್ತು ಮಾಜಿ ಪತಿ ಸಂಜೀವ್ ಖನ್ನಾ ಸೇರಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದರು. ಪುತ್ರಿಯ ಶವವನ್ನು ರಾಯಗಢ ಜಿಲ್ಲೆಯ ಕಾಡಿನಲ್ಲಿ ಎಸೆದು ಸುಟ್ಟು ಹಾಕಲಾಗಿದೆ ಎಂಬ ಆರೋಪ ಇಂದ್ರಾಣಿ ಮುಖರ್ಜಿ ಮೇಲಿದೆ. ಇದನ್ನೂ ಓದಿ: ಕೇಂದ್ರ ಕಾರಾಗೃಹದಲ್ಲಿ ವೀರ ಸಾವರ್ಕರ್ ಪುಸ್ತಕ ಇಡಲು ಹೈಕೋರ್ಟ್ ನ್ಯಾಯಮೂರ್ತಿ ಸೂಚನೆ

    ಈ ಸಂಬಂಧ 2015ರಲ್ಲಿ ಮುಂಬೈ ಪೊಲೀಸರು ಇಂದ್ರಾಣಿ ಮುಖರ್ಜಿಯನ್ನು ಬಂಧಿಸಿದ್ದರು. ಹೈ ಪ್ರೊಫೈಲ್ ಪ್ರಕರಣದ ಹಿನ್ನೆಲೆ ಇದರ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

  • ಶೀನಾ ಬೋರಾ ಹತ್ಯೆ ಕೇಸ್‌- ಇಂದ್ರಾಣಿಗೆ ಮುಖರ್ಜಿಗೆ ಜಾಮೀನು ಮಂಜೂರು

    ಶೀನಾ ಬೋರಾ ಹತ್ಯೆ ಕೇಸ್‌- ಇಂದ್ರಾಣಿಗೆ ಮುಖರ್ಜಿಗೆ ಜಾಮೀನು ಮಂಜೂರು

    ನವದೆಹಲಿ: ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಐಎನ್‍ಎಕ್ಸ್ ಕಂಪನಿಯ ಮಾಲಕಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

    ನ್ಯಾ. ಎಲ್‌ ನಾಗೇಶ್ವರ ರಾವ್‌ ಮತ್ತು ನ್ಯಾ. ಬಿ.ಆರ್‌ ಗವಾಯ್‌ ಅವರಿದ್ದ ಪೀಠ ಜಾಮೀನು ಮಂಜೂರು ಮಾಡಿದೆ. ಬಾಂಬೆ ಹೈಕೋರ್ಟ್‌ 2021ರ ನವೆಂಬರ್‌ನಲ್ಲಿ ಶೀನಾ ಬೋರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಈ ಆದೇಶವನ್ನು ಶೀನಾ ಬೋರಾ ಸುಪ್ರೀಂನಲ್ಲಿ ಪ್ರಶ್ನಿಸಿದ್ದರು.

    ಸಾಂದರ್ಭಿಕ ಸಾಕ್ಷ್ಯ ಮತ್ತು ಶೇ.50 ರಷ್ಟು ಸಾಕ್ಷಿಗಳು ಪ್ರಾಸಿಕ್ಯೂಶನ್‌ ಪರವಾಗಿ ಹೇಳಿಕೆ ನೀಡಿದ್ದರೂ ವಿಚಾರಣೆ ಶೀಘ್ರವೇ ಮುಕ್ತಾಯವಾಗಲಾರದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: 31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

    ಆರೋಪ ಏನು?
    2012 ಏಪ್ರಿಲ್‌ 24 ರಂದು ಇಂದ್ರಾಣಿ ಮುಖರ್ಜಿ, ಕಾರು ಚಾಲಕ ಶ್ಯಾಮ್‌ವರ್‌ ರೈ ಮತ್ತು ಮಾಜಿ ಪತಿ ಸಂಜೀವ್ ಖನ್ನಾ ಸೇರಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದಾರೆ. ಪುತ್ರಿಯ ಶವವನ್ನು ರಾಯಗಢ ಜಿಲ್ಲೆಯ ಕಾಡಿನಲ್ಲಿ ಎಸೆದು ಸುಟ್ಟು ಹಾಕಲಾಗಿದೆ ಎಂಬ ಆರೋಪ ಇಂದ್ರಾಣಿ ಮುಖರ್ಜಿ ಮೇಲಿದೆ.

    ಈ ಸಂಬಂಧ 2015ರಲ್ಲಿ ಮುಂಬೈ ಪೊಲೀಸರು ಇಂದ್ರಾಣಿ ಮುಖರ್ಜಿ ಅವರನ್ನು ಬಂಧಿಸಿತ್ತು. ಹೈ ಪ್ರೊಫೈಲ್‌ ಪ್ರಕರಣದ ಹಿನ್ನೆಲೆಯಲ್ಲಿ ನಂತರ ಇದರ ತನಿಖೆ ಸಿಬಿಐಗೆ ವರ್ಗಾವಣೆಯಾಗಿತ್ತು. ಕಳೆದ 6.5 ವರ್ಷಗಳಿಂದ ಇಂದ್ರಾಣಿ ಮುಖರ್ಜಿ ಜೈಲಿನಲ್ಲಿದ್ದರು.

  • ಇಂದ್ರಾಣಿಯ ಆ ಒಂದು ಹೇಳಿಕೆಯಿಂದ ಚಿದಂಬರಂ ಅರೆಸ್ಟ್ – ಕಂಪ್ಯೂಟರ್‌ನಿಂದ  ಸೆರೆಯಾದ ಕಾರ್ತಿ

    ಇಂದ್ರಾಣಿಯ ಆ ಒಂದು ಹೇಳಿಕೆಯಿಂದ ಚಿದಂಬರಂ ಅರೆಸ್ಟ್ – ಕಂಪ್ಯೂಟರ್‌ನಿಂದ ಸೆರೆಯಾದ ಕಾರ್ತಿ

    ನವದೆಹಲಿ: ಐಎನ್‍ಎಕ್ಸ್ ಕಂಪನಿಯ ಮಾಲಕಿ, ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಮುಂಬೈ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿ ನೀಡಿದ ಒಂದು ಹೇಳಿಕೆಯಿಂದ ಮಾಜಿ ಗೃಹ ಸಚಿವ ಚಿದಂಬರಂ ಈಗ ಅರೆಸ್ಟ್ ಆಗಿದ್ದಾರೆ.

    ಐಎನ್‍ಎಕ್ಸ್ ಪ್ರಕರಣದ ತನಿಖೆ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಇದ್ರಾಣಿ ಮುಖರ್ಜಿ 2006 ರಲ್ಲಿ ನಾರ್ಥ್ ಬ್ಲಾಕ್ ಕಚೇರಿಯಲ್ಲಿ ಚಿದಂಬರಂ ಅವರನ್ನು ಭೇಟಿಯಾಗಿದ್ದ ವೇಳೆ ನಡೆದ ಮಾತುಕತೆ ವಿಚಾರವನ್ನು ತಿಳಿಸಿದ್ದರು. ಈ ಹೇಳಿಕೆಯನ್ನು ಪ್ರಕರಣದ ಮುಖ್ಯ ಸಾಕ್ಷಿಯನ್ನಾಗಿ ಪರಿಗಣಿಸಿ ಸಿಬಿಐ ಈಗ ಚಿದಂಬರಂ ಅವರನ್ನು ಬಂಧಿಸಿದೆ.

    2018ರ ಫೆಬ್ರವರಿ 17ರ ವಿಚಾರಣೆ ಸಮಯದಲ್ಲಿ ದೆಹಲಿಯ ಹಯಾತ್ ಹೋಟೆಲಿನಲ್ಲಿ ಚಿದಂಬರಂ ಪುತ್ರ ಕಾರ್ತಿಯನ್ನು ಭೇಟಿಯಾಗಿದ್ದೆ. ಈ ಸಂದರ್ಭದಲ್ಲಿ ನಮ್ಮ ವ್ಯವಹಾರಕ್ಕಾಗಿ ಕಾರ್ತಿ 1 ದಶಲಕ್ಷ ಡಾಲರ್(7.17 ಕೋಟಿ ರೂ.) ಬೇಡಿಕೆ ಇಟ್ಟಿದ್ದರು ಎನ್ನುವ ಮತ್ತೊಂದು ವಿಚಾರವನ್ನು ಇಂದ್ರಾಣಿ ಮುಖರ್ಜಿ ತಿಳಿಸಿದ್ದರು.

    ಸಿಬಿಐ ಆರೋಪ ಏನು?
    ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ಒಡೆತನದ ಐಎನ್‍ಎಕ್ಸ್ ಮೀಡಿಯಾಗೆ 2007ರ ಮಾರ್ಚ್ ತಿಂಗಳಿನಲ್ಲಿ ಮೂರು ಮಾರಿಷಸ್ ಕಂಪೆನಿಗಳಿಂದ ಸುಮಾರು 4.62 ಕೋಟಿ ರೂಪಾಯಿ ವಿದೇಶಿ ನೇರ ಬಂಡವಾಳ ಹರಿದುಬರಲು ಅಂದಿನ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರ 4.62 ಕೋಟಿ ರೂ.ಗೆ ಅನುಮತಿ ನೀಡಿದ್ದರೆ 305 ಕೋಟಿ ರೂಪಾಯಿಗಳನ್ನು ಹೂಡಿಕೆಯಾಗಿ ವಿದೇಶದಿಂದ ತರಲಾಯಿತು. ಈ ಸಂದರ್ಭದಲ್ಲಿ ಡೌನ್ ಸ್ಟ್ರೀಮ್ ಇನ್ವೆಸ್ಟ್ ಮೆಂಟ್(ಭಾರತೀಯ ಕಂಪೆನಿ ಮತ್ತೊಂದು ಕಂಪೆನಿಯ ಮೇಲೆ ವಿದೇಶಿ ಹೂಡಿಕೆಯನ್ನು ಮಾಡುವುದು) ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿತ್ತು.

    ಇಂದ್ರಾಣಿ ಮುಖರ್ಜಿಯ ಕಂಪನಿಗೆ ಈ ಸಂದರ್ಭದಲ್ಲಿ ಕಾರ್ತಿ ಮಾಲೀಕತ್ವದ ಅಡ್ವಾನ್ಸ್ಡ್ ಸ್ಟ್ರಟಜಿಕ್ ಕನಸ್ಟಲಿಂಗ್ ಪ್ರೈವೆಟ್ ಲಿಮಿಟೆಡ್(ಎಎಸ್‍ಸಿಪಿಎಲ್) ಕಂಪನಿಯಿಂದ ಹೂಡಿಕೆಯಾಗಿತ್ತು. ಕಾರ್ತಿ ಮತ್ತು ಇಂದ್ರಾಣಿ ಮಾತುಕತೆಯ ಫಲವಾಗಿ ಎಎಸ್‍ಸಿಪಿಎಲ್ ಮತ್ತು ಇದರ ಸಹಭಾಗಿತ್ವದಲ್ಲಿರುವ ಕಂಪನಿಗಳು ಸುಮಾರು 7 ಲಕ್ಷ ಡಾಲರ್(ಆಗಿನ ಮೌಲ್ಯ 3.10 ಕೋಟಿ ರೂ.) ಹೂಡಿಕೆಯಾಗಿತ್ತು. ನಂತರ ಈ ಹಣ ಮರುಪಾವತಿಯಾಗಿತ್ತು. ಇದಾದ ನಂತರ ವಿದೇಶಿ ಬಂಡವಾಳ ಉತ್ತೇಜನ ಮಂಡಳಿ(ಎಫ್‍ಐಪಿಬಿ) ಕೆಲ ಬದಲಾವಣೆ ಮಾಡಿ ಇಂದ್ರಾಣಿ ಕಂಪನಿಗೆ ಅನುಮತಿ ನೀಡಿತ್ತು ಎನ್ನುವುದು ಸಿಬಿಐ ಆರೋಪ.

    ಸಿಬಿಐ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ನೀಡಿದ ಮಾಹಿತಿ ಪ್ರಕಾರ, ಎಫ್‍ಐಪಿಬಿ 4.62 ಕೋಟಿ ರೂ. ವಿದೇಶಿ ಹೂಡಿಕೆಗೆ ಅನುಮತಿ ನೀಡಿತ್ತು. ಆದರೆ ಚಿದಂಬರಂ ಮೂಲಕ ಕಾರ್ತಿಗೆ ಲಂಚ ನೀಡಿದ ಪರಿಣಾಮ 305 ಕೋಟಿ ರೂ. ವಿದೇಶಿ ಹಣ ಬಂದಿತ್ತು. ಅಷ್ಟೇ ಅಲ್ಲದೇ ಐಎನ್‍ಎಕ್ಸ್ ನ್ಯೂಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಶೇ.26 ರಷ್ಟು ಡೌನ್‍ಸ್ಟ್ರೀಮ್ ಇನ್ವೆಸ್ಟ್ ಮೆಂಟ್ ಮಾಡಲಾಯಿತು ಎಂದು ತಿಳಿಸಿದ್ದರು.

    ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಲಂಚವಾಗಿ ಪಡೆದ ಹಣದಲ್ಲಿ ಕಾರ್ತಿ ಚಿದಂಬರಂ ಸ್ಪೇನ್ ದೇಶದಲ್ಲಿ ಟೆನ್ನಿಸ್ ಕ್ಲಬ್, ಇಂಗ್ಲೆಂಡಿನಲ್ಲಿ ಕಾಟೇಜ್, ಭಾರತ ಮತ್ತು ವಿದೇಶಗಳಲ್ಲಿ ಸುಮಾರು 54 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವು ಆಸ್ತಿಗಳನ್ನು ಖರೀದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಬೆಳಕಿಗೆ ಬಂದಿದ್ದು ಹೇಗೆ?
    2008 ರಲ್ಲಿ ಕೇಂದ್ರ ಹಣಕಾಸು ಇಲಾಖೆಯ ಹಣಕಾಸು ಗುಪ್ತಚರ ವಿಭಾಗಕ್ಕೆ ಐಎನ್‍ಎಕ್ಸ್ ಕಂಪನಿಯಲ್ಲಿ ಹೂಡಿದ ವಿದೇಶಿ ಹೂಡಿಕೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಅನುಮಾನ ಬಂದಿದೆ. ಈ ಸಂದರ್ಭದಲ್ಲಿ ಮುಂಬೈ ಆದಾಯ ತೆರಿಗೆ ವಿಭಾಗ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ(ಇಡಿ) ವರ್ಗಾಯಿಸಿತ್ತು. 2010ರಲ್ಲಿ ಐಎನ್‍ಎಕ್ಸ್ ಮೀಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಅಡಿ ಪ್ರಕರಣ ದಾಖಲಿಸಿತ್ತು.

    ಈ ಪ್ರಕರಣ ತನಿಖೆ ನಡೆಸುತ್ತಿದ್ದಾಗ ಐಎನ್‍ಎಕ್ಸ್ ಮೀಡಿಯಾದ ಕಂಪ್ಯೂಟರ್ ನಲ್ಲಿ ಲೆಕ್ಕ ಪರಿಶೋಧಕ ಭಾಸ್ಕರ್ ರಾಮನ್ ಹೆಸರಿನಲ್ಲಿದ್ದ ದಾಖಲೆಗಳು ಸಿಕ್ಕಿದೆ. ಈ ಭಾಸ್ಕರ್ ರಾಮನ್ ಯಾರು ಎನ್ನುವುದನ್ನು ಪತ್ತೆ ಹಚ್ಚಿದಾಗ ಈ ವ್ಯಕ್ತಿ ಕಾರ್ತಿ ಚಿದಂಬರಂ ಅವರ ಲೆಕ್ಕಪರಿಶೋಧಕ ಎನ್ನುವುದು ಇಡಿಗೆ ತಿಳಿಯಿತು. ಸಿಕ್ಕಿದ ಸಾಫ್ಟ್ ಕಾಪಿ ದಾಖಲೆಯಲ್ಲಿ ಐಎನ್‍ಎಕ್ಸ್ ಕಂಪನಿ ಮತ್ತು ಕಾರ್ತಿ ನಡುವಿನ ವ್ಯವಹಾರದ ಮಾಹಿತಿ, ವಿದೇಶಿ ಬಂಡವಾಳ ಉತ್ತೇಜನ ಮಂಡಳಿ ನೀಡಿದ ಅನುಮತಿ ವಿವರಗಳು ಲಭ್ಯವಾಗಿತ್ತು. ಇಡಿಗೆ ಸಿಕ್ಕಿದ ಈ ದಾಖಲೆಯನ್ನು ಆಧಾರವಾಗಿಟ್ಟುಕೊಂಡು ಸಿಬಿಐ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಕಾರ್ತಿ ವಿರುದ್ಧ 2017ರಲ್ಲಿ ಎಫ್‍ಐಆರ್ ದಾಖಲಿಸಿತ್ತು.

    ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಕಾರ್ತಿ ಅವರನ್ನು ಕಳೆದ ಫೆಬ್ರವರಿಯಲ್ಲಿ ಬಂಧಿಸಿದ್ದರು. ನಂತರ ಕಾರ್ತಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು.