Tag: ಇಂಪ್ಯಾಕ್ಟ್

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಡೊಂಗ್ರಿ ಗ್ರಾಮದ ಶಾಲಾ ಮಕ್ಕಳಿಗೆ ಬಸ್ ಸಂಚಾರ ಪ್ರಾರಂಭ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಡೊಂಗ್ರಿ ಗ್ರಾಮದ ಶಾಲಾ ಮಕ್ಕಳಿಗೆ ಬಸ್ ಸಂಚಾರ ಪ್ರಾರಂಭ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗ್ರಾಮದ ಡೊಂಗ್ರಿ ಗ್ರಾಮದ ಮಕ್ಕಳು ತೂಗು ಸೇತುವೆ ಎರಡು ವರ್ಷದ ಹಿಂದೆ ಪ್ರವಾದಲ್ಲಿ ಕೊಚ್ವಿಹೋಗಿದ್ದರಿಂದ ಗಂಗಾವಳಿ ನದಿ ನೀರಿನಲ್ಲಿ ಜೀವ ಕೈಯಲ್ಲಿ ಹಿಡಿದು ಪ್ರತಿ ದಿನ ಶಾಲೆ ಹಾಗೂ ಕಾಲೇಜಿಗೆ ತೆರಳಬೇಕಿತ್ತು. ಈ ಕುರಿತು ಪಬ್ಲಿಕ್ ಟಿವಿ ತುಂಬಿ ಹರಿಯುವ ನದಿಯಲ್ಲಿ ಸಾವಿನ ಸಂಚಾರ ಎಂಬ ಶೀರ್ಷಿಕೆ ಅಡಿ ವರದಿ ಪ್ರಸಾರ ಮಾಡಿತ್ತು.

    ಡೊಂಗ್ರಿ ಗ್ರಾಮಕ್ಕೆ ಹೋಗಬೇಕು ಎಂದರೆ ಯಲ್ಲಾಪುರ ಭಾಗದಿಂದ ಸುತ್ತುವರೆದು 20ಕಿ.ಮೀಟರ್ ಬಸ್ ಸಂಚಾರ ಮಾಡಬೇಕಿತ್ತು. ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿದ್ದರಿಂದ ಡೊಂಗ್ರಿ ಗ್ರಾಮದ ಮಕ್ಕಳು ಶಾಲೆ ಕಾಲೇಜಿಗೆ ತೆರಳಲು ಹರಿಯುತ್ತಿರುವ ನದಿಯಲ್ಲಿ ಬಿದಿರಿನ ಬೊಂಬಿನಿಂದ ನಿರ್ಮಾಣವಾದ ತೆಪ್ಪದಲ್ಲಿ ಸಾಗುತ್ತಿದ್ದರು. ಸ್ಪಲ್ಪ ಆಯ ತಪ್ಪಿದ್ದರೂ ನೀರಿನಲ್ಲಿ ಬಿದ್ದು ಜೀವ ಕಳೆದುಕೊಳ್ಳುವ ಸ್ಥಿತಿ ಅಲ್ಲಿತ್ತು. ಈ ಕುರಿತು ಪಬ್ಲಿಕ್ ಟಿವಿ ವಿಸ್ತೃತ ವರದಿ ಮಾಡಿತ್ತು.

    ವರದಿ ನಂತರ ಅಂಕೋಲ ತಾಲೂಕಿನ ತಹಶೀಲ್ದಾರ್ ಭೇಟಿ ನೀಡಿ ಗ್ರಾಮದವರಿಗೆ ಹೆದರಿಸಿ ಮಾಧ್ಯಮಗಳಿಗೆ ಹೋದರೆ ನೋಟೀಸ್ ನೀಡುವ ಬೆದರಿಕೆ ಸಹ ಹಾಕಿದ್ದರು. ಈ ಕುರಿತು ಗ್ರಾಮಸ್ಥರು ತಮ್ಮ ನೋವನ್ನು ಹಂಚಿಕೊಂಡಿದ್ದರು. ತಕ್ಷಣ ಅಧಿಕಾರಿಗಳ ನಡವಳಿಕೆ ಹಾಗೂ ಗ್ರಾಮದ ನೈಜ ಸಮಸ್ಯೆ ಬಗ್ಗೆ ಇಲ್ಲಿನ ಶಾಸಕ ರೂಪಾಲಿ ನಾಯ್ಕ ಅವರ ಗಮನಕ್ಕೆ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು.

    ಇದಕ್ಕೆ ಸ್ಪಂದಿಸಿದ ಶಾಸಕಿ ರೂಪಾಲಿ ನಾಯ್ಕ ಅವರು ತೂಗು ಸೇತುವೆ ನಿರ್ಮಾಣ ಮಾಡಲು ಎರಡು ಕೋಟಿ ತುರ್ತು ಮಂಜೂರಿಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಜೊತೆಗೆ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಮಕ್ಕಳಿಗೆ ಶಾಲೆಗೆ ತೆರಳಲು ನಿನ್ನೆಯಿಂದ ಬಸ್ ವ್ಯವಸ್ಥೆ ಮಾಡಿದ್ದಾರೆ. ಇದರಿಂದಾಗಿ ಜೀವ ಕೈಯಲ್ಲಿ ಹಿಡಿದು ಶಾಲೆಗೆ ತೆರಳುತಿದ್ದ ಮಕ್ಕಳಿಗೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ಇನ್ನು ತಮ್ಮೂರಿನ ಮಕ್ಕಳಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದಕ್ಕಾಗಿ ಹಾಗೂ ವರದಿ ಮಾಡಿ ಆಡಳಿತದ ಕಣ್ಣು ತೆರೆಯುವಂತೆ ಮಾಡಿದ ಪಬ್ಲಿಕ್ ಟಿವಿ ಗೆ ಗ್ರಾಮದವರು ಧನ್ಯವಾದ ಅರ್ಪಿಸಿದ್ದಾರೆ.

  • ಬಿಗ್ ಇಂಪ್ಯಾಕ್ಟ್ – ತ್ರಿವಳಿ ಮಕ್ಕಳ ಕುಟುಂಬಕ್ಕೆ ಸೋನು ಸೂದ್ ಸಹಾಯ ಹಸ್ತ

    ಬಿಗ್ ಇಂಪ್ಯಾಕ್ಟ್ – ತ್ರಿವಳಿ ಮಕ್ಕಳ ಕುಟುಂಬಕ್ಕೆ ಸೋನು ಸೂದ್ ಸಹಾಯ ಹಸ್ತ

    – ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಗೆ ಮಿಡಿದ ಬಾಲಿವುಡ್ ನಟ

    ಯಾದಗಿರಿ: ತ್ರಿವಳಿ ಮಕ್ಕಳ ಜನನದಿಂದಾಗಿ ಚಿಂತೆಗೀಡಾಗಿದ್ದ ಕುಟುಂಬಕ್ಕೆ ಬಾಲಿವುಡ್ ನಟ ಸೋನು ಸೂದ್ ನೆರವಿನ ಹಸ್ತ ಚಾಚಿದ್ದಾರೆ.

    ಯಾದಗಿರಿ ತಾಲೂಕಿನ ರಾಮ ಸಮುದ್ರ ಗ್ರಾಮದ ಪದ್ಮಾ ಆಗಸ್ಟ್ 22 ರಂದು ಮೂವರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಪತಿ ನಾಗರಾಜ್ ಬೆಂಗಳೂರಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಲಾಕ್‍ಡೌನ್‍ನಿಂದಾಗಿ ಕೆಲಸ ಬಿಟ್ಟು ವಾಪಸ್ ಊರಿಗೆ ಬಂದಿದ್ದರು. ಊರಲ್ಲಿ ಕೆಲಸ ಸಿಗದೆ ನಾಗರಾಜ್ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಇದನ್ನೂ ಓದಿ: ಪಬ್ಲಿಕ್ ಟಿವಿ ಡಿಜಿಟಲ್ ಇಂಪ್ಯಾಕ್ಟ್- ತ್ರಿವಳಿ ಮಕ್ಕಳಿಗೆ ಹರಿದು ಬಂತು ನೆರವಿನ ಮಹಾಪೂರ

    ಇಂತಹ ಸಂಕಷ್ಟದ ನಡುವೆ ನಾಗರಾಜ್ ಪತ್ನಿ ಪದ್ಮಾ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ತಾಯಿ ಮಕ್ಕಳು ಆರೋಗ್ಯವಾಗಿರೋದು ನಾಗರಾಜ್‍ಗೆ ಖುಷಿ ತಂದಿದೆ. ಈಗಾಗಲೇ ಪತ್ನಿ ಹೆರಿಗೆ ಖರ್ಚಿಗೆಂದು 30 ಸಾವಿರ ರೂ. ಕೂಡ ಸಾಲ ಪಡೆದಿದ್ದರು. ಹೀಗಾಗಿ ನಾಗರಾಜ್ ಕುಟುಂಬ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ.

    ನಾಗರಾಜ್ ಮೊದಲಿನ ಹೆಣ್ಣು ಮಗು ಸೇರಿದಂತೆ ನಾಲ್ವರು ಮಕ್ಕಳ ಭವಿಷ್ಯದ ಬಗ್ಗೆ ತೀವ್ರ ಚಿಂತೆಯಲ್ಲಿ ಸಹಾಯ ಹಸ್ತ ಕೇಳಿದ್ದರು. ಆಗ ಕೆಲ ಸ್ಥಳೀಯರು ಕೂಡ ಆರ್ಥಿಕ ಸಹಾಯ ಮಾಡಿದರು. ಈ ಸುದ್ದಿ ಪಬ್ಲಿಕ್ ಟಿವಿ ವೆಬ್ ಸೈಟ್‍ನಲ್ಲಿ ಪ್ರಸಾರವಾಗಿತ್ತು. ಈ ಬಗ್ಗೆ ಜಿಲ್ಲೆಯ ಹತ್ತಿಕುಣಿ ಗ್ರಾಮದ ಮಲ್ಲಿಕಾರ್ಜುನ ರೆಡ್ಡಿ ಎಂಬವರು ವೆಬ್ ಸೈಟ್ ಕಟಿಂಗ್‍ಗಳನ್ನು, ಸೋನು ತಂಡಕ್ಕೆ ಮೆಸೇಜ್ ಮಾಡಿ ನಾಗರಾಜ್ ಪರಿಸ್ಥಿತಿ ಬಗ್ಗೆ ವಿವರಿಸಿದರು.

    ಕೂಡಲೇ ನಾಗರಾಜ್ ಜೊತೆ ಮಾತಾಡಿದ ಸೋನು ಸೂದ್ ತಂಡದ ಸದಸ್ಯ ಗೋವಿಂದ್ ಅಗರ್ವಾಲ್, ಎಲ್ಲಾ ಮಾಹಿತಿ ಪಡೆದು ನೆರವಿನ ಭರವಸೆ ನೀಡಿದ್ದಾರೆ. ಸದ್ಯ ಮೂರು ತಿಂಗಳ ದಿನಸಿ ಪದಾರ್ಥ ನೀಡಲು ಮುಂದಾಗಿರೋ ಸೋನು ತಂಡ, ಭವಿಷ್ಯದಲ್ಲಿ ಮಕ್ಕಳ ಚಿಕಿತ್ಸೆ ವೆಚ್ಚ ಭರಿಸುವುದಾಗಿ ತಿಳಿಸಿದೆ. ನೆರವು ನೀಡಲು ಮುಂದಾಗಿರುವ ತಂಡಕ್ಕೆ ನಾಗರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

    ಮಲ್ಲಿಕಾರ್ಜುನ ರೆಡ್ಡಿ ಈ ಬಗ್ಗೆ ನಟ ಸೋನು ಸೂದ್ ಜೊತೆ ಮಾತನಾಡಿ ಸಮಸ್ಯೆಯ ಬಗ್ಗೆ ತಿಳಿಸಿದ್ದಾರೆ. ನಂತರ ಸೋನು ಸೂದ್ ಕೂಡ ಮಲ್ಲಿಕಾರ್ಜುನ ರೆಡ್ಡಿ ಅವರ ಜೊತೆ ಮಾತನಾಡಿ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ತ್ರಿವಳಿ ಮಕ್ಕಳ ಪೋಷಕರ ನೋವಿಗೆ ನಟ ಸೋನು ಸೂದ್ ಕಾಳಜಿ ತೋರಿ ನೆರವಿನ ಭರವಸೆ ನೀಡಿದ್ದು, ಬಡ ಕುಟುಂಬಕ್ಕೆ ಖುಷಿಕೊಟ್ಟಿದೆ.

  • ಮನೆಯೇ ಮಂತ್ರಾಲಯ ಇಂಪ್ಯಾಕ್ಟ್ – ಕ್ಷೌರಿಕನ ಸಹಾಯಕ್ಕೆ ಬಂದ ಶಾಸಕ

    ಮನೆಯೇ ಮಂತ್ರಾಲಯ ಇಂಪ್ಯಾಕ್ಟ್ – ಕ್ಷೌರಿಕನ ಸಹಾಯಕ್ಕೆ ಬಂದ ಶಾಸಕ

    ಮಂಗಳೂರು: ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯ ಕಾರ್ಯಕ್ರಮಕ್ಕೆ ಕರೆ ಮಾಡಿದ್ದ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಲ್ಲೇಶ್ ಎಂಬವರಿಗೆ ಬೇಕಾದ ದಿನಚರಿ ವಸ್ತುಗಳನ್ನು ಇಂದು ನೀಡಲಾಯಿತು.

    ಮಲ್ಲೇಶ್ ಚಿತ್ರದುರ್ಗ ಮೂಲದವರಾಗಿದ್ದು ಕಳೆದ ಕೆಲವು ವರ್ಷದಿಂದ ಬೆಳ್ತಂಗಡಿಯ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದು ಲಾಕ್ ಡೌನ್ ಬಳಿಕ ಸಲೂನ್ ಓಪನ್ ಆದ್ರೂ ಜನ ಬರದೇ ದಿನಕ್ಕೆ 100 ರೂಪಾಯಿ ಸಂಪಾದನೆ ಮಾಡಲು ಸಾಧ್ಯವಾಗದೆ ಊಟಕ್ಕೂ ಕಷ್ಟವಾಗಿತ್ತು. ಹೀಗಾಗಿ ಮನೆಯೇ ಮಂತ್ರಾಲಯ ಕಾರ್ಯಕ್ರಮಕ್ಕೆ ಮಲ್ಲೇಶ್ ಕರೆ ಮಾಡಿದ್ದರು.

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ “ಶ್ರಮಿಕ ನೆರವು” ಮೂಲಕ ದಿನ ಬಳಕೆಗೆ ಬೇಕಾದ ಅಕ್ಕಿ, ದಿನಸಿ ಸಾಮಾಗ್ರಿಗಳನ್ನು ಇಂದು ಹಸ್ತಾಂತರಿಸಲಾಯಿತು. ಈ ಸಂದರ್ಭ ಮಾತನಾಡಿದ ಮಲ್ಲೇಶ್ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಹಾಗೂ ಶಾಸಕ ಹರೀಶ್ ಪೂಂಜಾ ಬಳಗಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಜಗದೀಶ್ ಲಾಯಿಲಾ, ರಾಜೇಶ್ ಪೆಂರ್ಬುಡ, ಪ್ರತೀಶ್ ಹೊಸಂಗಡಿ, ಸುಪ್ರಿತ್ ಜೈನ್, ಆದೇಶ್ ಶೆಟ್ಟಿ ಜೊತೆಗಿದ್ದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಹಸಿದ ಮಹಿಳೆಯ ಸಹಾಯಕ್ಕೆ ಬಂದ ಕೆಪಿಸಿಸಿ ಕಾರ್ಯದರ್ಶಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಹಸಿದ ಮಹಿಳೆಯ ಸಹಾಯಕ್ಕೆ ಬಂದ ಕೆಪಿಸಿಸಿ ಕಾರ್ಯದರ್ಶಿ

    ಶಿವಮೊಗ್ಗ: ಮನೆಯೇ ಮಂತ್ರಾಲಯ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಿಕೊಂಡಿದ್ದ ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರೂಪ ಎಂಬುವರಿಗೆ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ಸ್ಪಂದಿಸಿ ತಾವೇ ಸ್ವತಃ ಮಹಿಳೆ ಮನೆಗೆ ತೆರಳಿ ಒಂದು ತಿಂಗಳಿಗೆ ಆಗುವಷ್ಟು ದಿನಸಿ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರೂಪ ಎಂಬ ಮಹಿಳೆ ಲಾಕ್‍ಡೌನ್ ನಿಂದಾಗಿ ಕೆಲಸವಿಲ್ಲದ ಕಾರಣ ಊಟಕ್ಕೂ ಸಮಸ್ಯೆ ಆಗಿದೆ ಎಂದು ಕಾರ್ಯಕ್ರಮದ ಮೂಲಕ ಮನವಿ ಮಾಡಿಕೊಂಡಿದ್ದರು.

    ತಮ್ಮೂರಿನ ಮಹಿಳೆಯೊಬ್ಬರು ಊಟದ ಸಮಸ್ಯೆ ಎಂದು ಪಬ್ಲಿಕ್ ಟಿವಿಯಲ್ಲಿ ಮನವಿ ಮಾಡಿಕೊಂಡಿದ್ದನ್ನು ಗಮನಿಸಿದ ದೇವೇಂದ್ರಪ್ಪ ಅವರು ಮಹಿಳೆಗೆ ಒಂದು ತಿಂಗಳಿಗೆ ಆಗುವಷ್ಟು ದಿನಸಿ ಕಿಟ್ ನೀಡಿ ಸಹಾಯ ಹಸ್ತ ಚಾಚಿದ್ದಾರೆ.

  • ‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್ – ಉಪವಾಸ ಇದ್ದ ದಂಪತಿಗೆ ಸಹಾಯ

    ‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್ – ಉಪವಾಸ ಇದ್ದ ದಂಪತಿಗೆ ಸಹಾಯ

    ಚಿಕ್ಕಬಳ್ಳಾಪುರ: ಕೊರೊನಾ ಎಫೆಕ್ಟ್ ನಡುವೆ ನೇಕಾರಿಕೆ ಕೆಲಸ ಇಲ್ಲದೆ ಒಪ್ಪತ್ತಿನ ಊಟಕ್ಕೂ ಪರದಾಡುತ್ತಿದ್ದ ದಂಪತಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ.

    ಊಟಕ್ಕೂ ಇಲ್ಲದೆ ಪರದಾಡುತ್ತಿದ್ದ ಸುಖ್‍ರಾಜ್ ಮನೆಯೇ ಮಂತ್ರಾಲಯ ಕಾರ್ಯಕ್ರಮಕ್ಕೆ ಕರೆ ಮಾಡಿ ಅಳಲು ತೋಡಿಕೊಂಡಿದ್ದರು. ಹೀಗಾಗಿ ದಂಪತಿಯ ಸಂಕಷ್ಟಕ್ಕೆ ಸ್ಪಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಚಂದ್ರಶೇಖರ್ ಹಾಗೂ ಅವರ ಸ್ನೇಹಿತರು ಸುಖ್‍ರಾಜ್ ಮನೆಗೆ ಹೋಗಿ ದಿನಸಿ ಕಿಟ್ ಕೊಟ್ಟು ಸಹಾಯ ಮಾಡಿದರು.

    ದಂಪತಿ ಹುಬ್ಬಳ್ಳಿ ಮೂಲದವರಾಗಿದ್ದು, ಸದ್ಯ ಲಾಕ್‍ಡೌನ್‍ನಿಂದ ನೇಕಾರಿಕೆ ಕೆಲಸವೂ ಇಲ್ಲದಂತಾಗಿದೆ. ಸುಖ್‍ರಾಜ್ ಫೈಂಟಿಂಗ್ ಕೆಲಸ ಮಾಡುವುದಾಗಿ ಹೇಳಿದ್ದು, ನಾಳೆಯಿಂದ ಫೈಂಟಿಂಗ್ ಕೆಲಸ ಸಹ ಕೊಡಿಸುವ ಭರವಸೆ ನೀಡಿದ್ದಾರೆ. ಇದಲ್ಲದೇ ಯುವಕ ಕಾರ್ತಿಕ್ ಎಂಬಾತ ಧನಸಹಾಯ ಸಹ ಮಾಡಿದ್ದಾರೆ. ಪಬ್ಲಿಕ್ ಟಿವಿ ಹಾಗೂ ದಾನಿಗಳಿಗೆ ಸುಖ್‍ರಾಜ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

  • ‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್ – ಮಹಿಳೆ ಮನವಿಗೆ ಸ್ಪಂದಿಸಿದ ಶಾಸಕ

    ‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್ – ಮಹಿಳೆ ಮನವಿಗೆ ಸ್ಪಂದಿಸಿದ ಶಾಸಕ

    ಶಿವಮೊಗ್ಗ: ಮನೆಯ ಮಂತ್ರಾಲಯ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಿಕೊಂಡಿದ್ದ ಮಹಿಳೆಗೆ ಶಾಸಕ ಬಿ.ಕೆ.ಸಂಗಮೇಶ್ ಸ್ಪಂದಿಸಿ ದಿನಸಿ ಮತ್ತು ಹಣ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

    ಲಾಕ್‍ಡೌನ್ ಆರಂಭವಾದ ದಿನದಿಂದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ನಡೆಸಿಕೊಡುತ್ತಿರುವ ಕಾರ್ಯಕ್ರಮ ಮನೆಯೇ ಮಂತ್ರಾಲಯ ರಾಜ್ಯದಲ್ಲಿ ಮನೆ ಮಾತಾಗಿದ್ದು, ರಾಜ್ಯದ ಜನರು ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆ ಹೇಳಿಕೊಳ್ಳುವ ಮೂಲಕ ಪರಿಹಾರ ಸಹ ಕಂಡುಕೊಳ್ಳುತ್ತಿದ್ದಾರೆ.

    ಅದರಂತೆಯೇ ಜಿಲ್ಲೆಯ ಭದ್ರಾವತಿ ಪಟ್ಟಣದ ಜನ್ನಾಪುರ ನಿವಾಸಿ ಶಾಂತಮ್ಮ ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದ ಕಾರಣ ಊಟಕ್ಕೂ ಸಮಸ್ಯೆ ಆಗಿದೆ ಎಂದು ಮನವಿ ಮಾಡಿಕೊಂಡಿದ್ದರು. ಕ್ಷೇತ್ರದ ಮಹಿಳೆಯೊಬ್ಬರು ಊಟದ ಸಮಸ್ಯೆ ಎಂದು ಪಬ್ಲಿಕ್ ಟಿವಿಯಲ್ಲಿ ಮನವಿ ಮಾಡಿಕೊಂಡಿದ್ದನ್ನು ಗಮನಿಸಿದ ಶಾಸಕ ಬಿ.ಕೆ.ಸಂಗಮೇಶ್ ಅವರು ಮಹಿಳೆಗೆ ಒಂದು ತಿಂಗಳಿಗೆ ಆಗುವಷ್ಟು ದಿನಸಿ ಹಾಗೂ 1 ಸಾವಿರ ರೂಪಾಯಿ ಹಣವನ್ನು ನೀಡಿ ಸಹಾಯ ಹಸ್ತ ಚಾಚಿದ್ದಾರೆ.

    ಅಲ್ಲದೇ ಮುಂದೆಯೂ ಸಹ ಲಾಕ್‍ಡೌನ್ ಮುಂದುವರಿದು ಸಮಸ್ಯೆಯಾದರೆ ತನ್ನನ್ನು ಭೇಟಿಯಾಗಿ ದಿನಸಿ ಕಿಟ್ ಪಡೆದುಕೊಳ್ಳುವಂತೆ ಶಾಸಕರು ತಿಳಿಸಿದ್ದಾರೆ. ಅಲ್ಲದೇ ಕ್ಷೇತ್ರದ ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂದಿರುವ ಶಾಸಕರು ಪಬ್ಲಿಕ್ ಟಿವಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಪಬ್ಲಿಕ್ ಟಿವಿಯಲ್ಲಿ ನೋವು ತೋಡಿಕೊಂಡ ಪದ್ಮಾವತಿಗೆ ಫುಡ್ ಕಿಟ್ ವಿತರಣೆ

    ಪಬ್ಲಿಕ್ ಟಿವಿಯಲ್ಲಿ ನೋವು ತೋಡಿಕೊಂಡ ಪದ್ಮಾವತಿಗೆ ಫುಡ್ ಕಿಟ್ ವಿತರಣೆ

    ಹುಬ್ಬಳ್ಳಿ: ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯ ಕಾರ್ಯಕ್ರಮದಲ್ಲಿ ಶುಕ್ರವಾರ ಹುಬ್ಬಳ್ಳಿಯ ಪದ್ಮಾವತಿಯವರು ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದರು.

    ಆಹಾರವಿಲ್ಲದೇ ಜೀವನ ನಡೆಸುವಂತಾಗಿದೆ ಎಂದು ಪಬ್ಲಿಕ್ ಟಿವಿಯ ಕಾರ್ಯಕ್ರಮದ ಮೂಲಕ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಯುವ ಮುಖಂಡ ದೀಪಕ್ ನಾಯ್ಡು ಅವರು ಪದ್ಮಾವತಿಯವರಿಗೆ ಮನೆಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.

    ಹುಬ್ಬಳ್ಳಿಯ ಆನಂದನಗರದಲ್ಲಿರುವ ಪದ್ಮಾವತಿಯವರ ಸ್ವಗೃಹಕ್ಕೆ ಭೇಟಿ ನೀಡಿದ ದೀಪಕ್ ನಾಯ್ಡು ಅವರು, ಅಕ್ಕಿ, ರವಾ, ಅವಲಕ್ಕಿ, ಬೆಳೆ, ಎಣ್ಣೆ, ತೊಗರಿಬೆಳೆ, ಸಕ್ಕರೆ ಚಹಾಪುಡಿ ಇರುವ ಫುಡ್ ಕಿಟ್ ವಿತರಣೆ ಮಾಡಿದ್ದಾರೆ. ಈ ಮೂಲಕ ಮನೆಯ ಮಂತ್ರಾಲಯ ಕಾರ್ಯಕ್ರಮದಲ್ಲಿ ನೋವನ್ನು ತೋಡಿಕೊಂಡ ಮಹಿಳೆಯ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.

  • ‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್ – ಬಡ ಕುಟುಂಬಕ್ಕೆ ಕರವೇ ಕಾರ್ಯಕರ್ತರ ಸ್ಪಂದನೆ

    ‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್ – ಬಡ ಕುಟುಂಬಕ್ಕೆ ಕರವೇ ಕಾರ್ಯಕರ್ತರ ಸ್ಪಂದನೆ

    ನೆಲಮಂಗಲ: ಪಬ್ಲಿಕ್ ಟಿವಿಯ ‘ಮನೆಯೇ’ ಮಂತ್ರಾಲಯ ಕಾರ್ಯಕ್ರಮಕ್ಕೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಆಟೋ ಡ್ರೈವರ್ ಧನಂಜಯ ಎಂಬವರು ಶುಕ್ರವಾರ ಕರೆ ಮಾಡಿ ತಮ್ಮ ಕಷ್ಟವನ್ನ ಹೇಳಿಕೊಂಡಿದ್ದರು.

    ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಮನೆಯಿಂದ ಹೊರಬರದೆ ಹಾಗೂ ಬಡತನದ ಬೇಗೆಯಿಂದ ಸಾಕಷ್ಟು ಸಮಸ್ಯೆ ಎದುರಿಸಿದ್ದ ಕುಟುಂಬಕ್ಕೆ ನೆರವು ಸಿಕ್ಕಿದೆ. ಇಂದು ಈ ಬಡ ಕುಟುಂಬದ ಸದಸ್ಯರಿಗೆ ಕರವೇ ಶಿವರಾಮೇಗೌಡ ಬಣದ ನೆಲಮಂಗಲ ತಾಲೂಕು ಅಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಕರವೇ ಸ್ನೇಹಿತರು ಮಾನವೀಯತೆ ಮೆರೆದಿದ್ದಾರೆ.

    ಪಬ್ಲಿಕ್ ಟಿವಿಯ ಕರೆಗೆ ಸ್ಪಂದಿಸಿ ಈ ಕುಟುಂಬಕ್ಕೆ 15 ದಿನಕ್ಕೆ ಬೇಕಾಗುವ ಎಲ್ಲಾ ರೀತಿಯ ದಿನಸಿ ಪದಾರ್ಥಗಳು ಹಾಗೂ ತರಕಾರಿ ಹಣ್ಣುಗಳನ್ನು ನೀಡಿ ಸಂಕಷ್ಟದಲ್ಲಿದ್ದ ಆಟೋ ಡ್ರೈವರ್ ಧನಂಜಯ್ ಕುಟುಂಬಕ್ಕೆ ನೆರವು ನೀಡಿದ್ದಾರೆ. ನೆರವಿಗೆ ಧಾವಿಸಿದ ಪಬ್ಲಿಕ್ ಟಿವಿ ತಂಡ ಹಾಗೂ ಕರವೇ ಸ್ನೇಹಿತರಿಗೆ ಆಟೋ ಚಾಲಕನ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ.

    ಈ ವೇಳೆ ಮಾತನಾಡಿದ ನೆಲಮಂಗಲ ಕರವೇ ಅಧ್ಯಕ್ಷ ಸುರೇಶ್, ಇಂತಹ ಸಾಕಷ್ಟು ಜನರು ಈ ಲಾಕ್‍ಡೌನ್ ಸಮಯದಲ್ಲಿ ಸಮಸ್ಯೆ ಎದುರಿಸುತಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ತಾಲೂಕಿನಲ್ಲಿ ನಮ್ಮ ಸೇವೆಯನ್ನು ಮುಂದುವರಿಸಿ ಜನರ ಏಳಿಗೆಗೆ ನಮ್ಮ ತಂಡ ಶ್ರಮಿಸುವುದಾಗಿ ತಿಳಿಸಿದ್ದಾರೆ.

     

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಮಂಗ್ಳೂರಿಗೆ ಹೊರ ರಾಜ್ಯಗಳಿಂದ ಬರೋ ಮೀನು ಲಾರಿಗಳಿಗೆ ನಿರ್ಬಂಧ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಮಂಗ್ಳೂರಿಗೆ ಹೊರ ರಾಜ್ಯಗಳಿಂದ ಬರೋ ಮೀನು ಲಾರಿಗಳಿಗೆ ನಿರ್ಬಂಧ

    ಮಂಗಳೂರು: ಹೊರ ರಾಜ್ಯಗಳಿಂದ ಮಂಗಳೂರಿನ ಬಂದರಿಗೆ ಅನೇಕ ಮೀನು ಲಾರಿಗಳು ಬರುತ್ತಿದ್ದವು. ಈ ವೇಳೆ ಯಾವುದೇ ಸಾಮಾಜಿಕ ಅಂತರ ಇಲ್ಲದೆ ಬಂದರಿನಲ್ಲಿ ಸಾವಿರಾರು ಮಂದಿ ಸೇರುತ್ತಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ ಎಚ್ಚೆತ್ತ ಸಚಿವರು ಮಂಗಳೂರಿಗೆ ಹೊರ ರಾಜ್ಯಗಳಿಂದ ಬರುವ ಮೀನು ಲಾರಿಗಳಿಗೆ ನಿರ್ಬಂಧ ಹೇರಿದ್ದಾರೆ.

    ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೊರ ರಾಜ್ಯಗಳಿಂದ ಬರುವ ಮೀನು ಲಾರಿಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ಬಂದರಿಗೆ ಹೊರ ರಾಜ್ಯದ ಮೀನಿನ ಲಾರಿಗಳು ಬರುತ್ತಿದ್ದವು. ಮೀನು ಅನ್ ಲೋಡಿಂಗ್ ವೇಳೆ ಸಾವಿರಾರು ಜನರು ಮುಗಿಬೀಳುತ್ತಿದ್ದರು. ಈ ವೇಳೆ ಮೀನಿನ ವ್ಯಾಪಾರಿಗಳು ಯಾವುದೇ ಸಾಮಾಜಿಕ ಅಂತರ ಇಲ್ಲದೆ ಮುಗಿಬೀಳುತ್ತಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ ಪಬ್ಲಿಕ್ ಟಿವಿ ಸುದ್ದಿಯಿಂದ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೊರ ರಾಜ್ಯದ ಮೀನಿನ ಲಾರಿಗಳಿಗೆ ಬ್ರೇಕ್ ಹಾಕಿದೆ.

    ಕಳೆದ ನಾಲ್ಕು ದಿನಗಳಿಂದ ಜಿಲ್ಲಾಡಳಿತ ಮೀನು ಸರಬರಾಜಿಗೆ ಅನುಮತಿ ನೀಡಿದ್ದು, ಮಂಗಳೂರಿನ ಮೀನು ವ್ಯಾಪಾರಿಗಳು ಮೀನು ಖರೀದಿಗೆ ಮುಗಿಬಿದ್ದಿದ್ದರು. ಯಾವುದೇ ಸಾಮಾಜಿಕ ಅಂತರ ಇಲ್ಲದೆ 2 ಸಾವಿರಕ್ಕೂ ಹೆಚ್ಚು ಮಂದಿ ಬಂದರಿನಲ್ಲಿ ಸೇರುತ್ತಿದ್ದರು. ಅನ್ ಲೋಡಿಂಗ್ ಮತ್ತು ಏಲಂ ಮೂಲಕ ವಿತರಣೆ ಮಾಡುತ್ತಿದ್ದಾರೆ. ಮಾಸ್ಕ್, ಗ್ಲೌಸ್ ಯಾವುದೇ ರಕ್ಷಾ ಕವಚ ಇಲ್ಲದೆ ಕಾರ್ಮಿಕರು ತೊಡಗಿಸಿಕೊಂಡಿದ್ದರು.

    ದಿನಕ್ಕೆ ನೂರಕ್ಕೂ ಹೆಚ್ಚು ಹೊರ ರಾಜ್ಯದ ಲಾರಿಗಳು ಬರುತ್ತಿದ್ದು, ಇಲ್ಲಿಂದ ಖರೀದಿಸಿದ ಮೀನುಗಳನ್ನು ಮರುದಿನ ಕರಾವಳಿಯಾದ್ಯಂತ ಸರಬರಾಜು ಮಾಡಲಾಗುತ್ತೆ. ಈ ಮೂಲಕ ಉಚಿತವಾಗಿ ಕೊರೊನಾ ಕೂಡ ಗ್ರಾಮ ಗ್ರಾಮಗಳಿಗೆ ಸರಬರಾಜು ಆಗುವ ಅಪಾಯ ಎದುರಾಗಿತ್ತು. ಹಿಂದೆಲ್ಲಾ ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಹೊರ ರಾಜ್ಯಕ್ಕೆ ಮೀನು ಸಾಗಾಟ ಆಗುತ್ತಿತ್ತು. ಈಗ ಕರ್ನಾಟಕದಲ್ಲಿ ಆಳಸಮುದ್ರ ಮೀನುಗಾರಿಕೆ ಇಲ್ಲದ ಕಾರಣ ಆಂಧ್ರ ಪ್ರದೇಶ, ತಮಿಳನಾಡು ಕಡೆಯಿಂದ ಮೀನು ಪೂರೈಕೆಯಾಗುತ್ತಿದೆ.

    ಮುಸ್ಲಿಮರಿಗೆ ರಂಜಾನ್ ಆಗಿರುವ ಕಾರಣ ರಾತ್ರಿ ವೇಳೆ ಮೀನು ವಹಿವಾಟು ನಡೆಸಲು ಜಿಲ್ಲಾಡಳಿತ ವಿಶೇಷ ಅನುಮತಿ ನೀಡಿತ್ತು.  ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಯಾವುದೇ ವ್ಯವಸ್ಥೆ ಮಾಡದಿರುವುದು ಕೊರೊನಾ ಸೋಂಕು ಹರಡುವ ಸಾಧ್ಯತೆ ಇತ್ತು. ಅಲ್ಲದೇ ಜಿಲ್ಲಾಡಳಿತವೇ ಇಡೀ ಜಿಲ್ಲೆಯ ಜನರಿಗೆ ಕೊರೊನಾ ಸೋಂಕನ್ನು ಹರಡುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಜಿಲ್ಲಾಡಳಿತ ಹೊರ ರಾಜ್ಯಗಳಿಂದ ಬರುವ ಮೀರು ಲಾರಿಗಳಿಗೆ ಬ್ರೇಕ್ ಹಾಕಿದೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪೊಲೀಸರಿಂದ ರಸ್ತೆ ಬ್ಲಾಕ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪೊಲೀಸರಿಂದ ರಸ್ತೆ ಬ್ಲಾಕ್

    ಯಾದಗಿರಿ: ಕೊರೊನಾ ಗ್ರೀನ್ ಝೋನ್ ಇರುವ ಕಾರಣ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಂಪೂರ್ಣವಾಗಿ ಮರೆತು ಜನರನ್ನು ರಸ್ತೆಗಿಳಿಸಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು.

    ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಯಾದಗಿರಿ ಪೊಲೀಸ್ ಇಲಾಖೆ, ನಗರದ ಪ್ರಮುಖ ರಸ್ತೆಗಳನ್ನೆಲ್ಲ ಬಂಬು ಮತ್ತು ಬ್ಯಾರಿಕೇಡ್ ನಿಂದ ರಸ್ತೆ ಬ್ಲಾಕ್ ಮಾಡಿದೆ. ಇನ್ನೂ ಕೆಲವು ಕಡೆ ರಸ್ತೆಗಳಿಗೆ ಮುಳ್ಳು ಬೇಲಿ ಹಾಕಲಾಗಿದೆ.

    ನಗರದಲ್ಲಿ ಎಲ್ಲಾ ರಸ್ತೆಗಳು ಒನ್ ವೇ ಮಾಡಿ, ಅನಾವಶ್ಯಕವಾಗಿ ರಸ್ತೆಗಿಳಿಯುವ ವಾಹನಗಳನ್ನು ತಪಾಸಣೆ ಮಾಡಿ ಅವುಗಳ ಮೇಲೆ ಪ್ರಕರಣ ದಾಖಲಿಸಿ, ಸೀಜ್ ಮಾಡಲಾಗುತ್ತಿದೆ. ರಸ್ತೆ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.