Tag: ಇಟಲಿ

  • ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು

    ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು

    ರೋಮ್: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದಾರೆ. ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ.

    ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು ಅವರ ಪತ್ನಿ ನಾಡಿರಾ ಗುಲ್ಶನ್ (47) ಮೃತಪಟ್ಟಿದ್ದಾರೆ. ಇವರು ತಮ್ಮ ಮೂವರು ಮಕ್ಕಳೊಂದಿಗೆ (ಅರ್ಜೂ ಅಖ್ತರ್, ಶಿಫಾ ಅಖ್ತರ್ ಹಾಗೂ ಮಗ ಜಾಝೆಲ್‌ ಅಖ್ತರ್) ಪ್ರಯಾಣಿಸುತ್ತಿದ್ದರು. ಗ್ರೊಸೆಟೊ ಬಳಿಯ ಔರೆಲಿಯಾ ಹೆದ್ದಾರಿಯಲ್ಲಿ ಕುಟುಂಬವು ಅಪಘಾತಕ್ಕೀಡಾಯಿತು.

    ಕುಟುಂಬವು ನಾಗ್ಪುರದ ಸೀತಾಬುಲ್ಡಿ ಫ್ಲೈಓವರ್ ಬಳಿಯ ಗುಲ್ಶನ್ ಪ್ಲಾಜಾ ಹೋಟೆಲ್ ಅನ್ನು ಹೊಂದಿದೆ. ಇಟಲಿಯನ್ನು ತಲುಪುವ ಮೊದಲು ಅವರು ಸೆಪ್ಟೆಂಬರ್ 22 ರಂದು ಫ್ರಾನ್ಸ್‌ನಲ್ಲಿ ರಜಾ ದಿನಗಳನ್ನು ಕಳೆದಿದ್ದರು.

    ಏಷ್ಯನ್ ಮೂಲದ ಪ್ರವಾಸಿಗರನ್ನು ಹೊತ್ತ ವ್ಯಾನ್ ಮತ್ತು ಮಿನಿ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಮೂವರು ಜನರಲ್ಲಿ ನಾಗ್ಪುರ ದಂಪತಿಗಳು ಸೇರಿದ್ದಾರೆ. ಮಿನಿಬಸ್ ಚಾಲಕ ಮತ್ತು ಭಾರತದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಈ ದಂಪತಿಯ ಮಗಳು ಅರ್ಜೂ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡಿದ್ದಾಳೆ. ಆಕೆಯನ್ನು ಸಿಯೆನಾದ ಲೀ ಸ್ಕಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಇನ್ನಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

    ಇಟಲಿಯ ಭಾರತೀಯ ರಾಯಭಾರ ಕಚೇರಿ ನಾಗ್ಪುರ ದಂಪತಿ ಸಾವಿಗೆ ಸಂತಾಪ ಸೂಚಿಸಿದೆ. ಅವರ ಕುಟುಂಬಕ್ಕೆ ಅಗತ್ಯ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದೆ.

  • 30 ಕೋಟಿ ಮೌಲ್ಯದ ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಖರೀದಿಸಿದ ಸತೀಶ್‌ ಜಾರಕಿಹೊಳಿ

    30 ಕೋಟಿ ಮೌಲ್ಯದ ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಖರೀದಿಸಿದ ಸತೀಶ್‌ ಜಾರಕಿಹೊಳಿ

    ಬೆಂಗಳೂರು: ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಅನ್ನು ಸಚಿವ ಸತೀಶ್‌ ಜಾರಕಿಹೊಳಿ ಖರೀದಿಸಿದ್ದಾರೆ.

    ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್‌ ಜಾರಕಿಹೊಳಿ ಅವರು ಈ ಹಿಂದೆ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಹೊಂದಿದ್ದರು.

    ಹಳೆ ಹೆಲಿಕಾಪ್ಟರ್ ಮಾರಾಟ ಮಾಡಿ ಹೊಸ ಇಟಲಿ ಮೇಡ್ ಡಬಲ್ ಇಂಜಿನ್ ಅಗಸ್ಟ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ.

  • ʼYou Are The Bestʼ – ಜಿ-7 ಶೃಂಗಸಭೆಯಲ್ಲಿ ಮೆಲೋಡಿ ಮೊಮೆಂಟ್

    ʼYou Are The Bestʼ – ಜಿ-7 ಶೃಂಗಸಭೆಯಲ್ಲಿ ಮೆಲೋಡಿ ಮೊಮೆಂಟ್

    ಒಟ್ಟಾವಾ: ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯಲ್ಲಿ (G7 Summit ) ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಇಟಾಲಿಯನ್ (Italy) ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಭೇಟಿಯಾಗಿದ್ದಾರೆ.

    ಮೋದಿ ಅವರನ್ನು ಭೇಟಿ ಆಗುತ್ತಿದ್ದಂತೆ ಮೆಲೋನಿ ಅವರು, ನೀವು ಅತ್ಯುತ್ತಮರು. ನಾನು ನಿಮ್ಮಂತೆ ಇರಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಮೆಲೋನಿ ಮೋದಿ ಅವರಿಗೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ನೆಟ್ಟಿಗರು ʼಮೆಲೋಡಿ ಮೊಮೆಂಟ್ʼ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

    ಕಳೆದ ವರ್ಷ ಇಟಲಿಯಲ್ಲಿ ಜಿ-7 ಶೃಂಗಸಭೆ ಆಯೋಜನೆಗೊಂಡಿತ್ತು. ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಈ ಶೃಂಗಸಭೆ ಮುಗಿದ ಬಳಿಕ ಮೆಲೋನಿ ಅವರು ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ ‘Hello From The Melody Team’ ಎಂದು ಬರೆದು ಪೋಸ್ಟ್‌ ಮಾಡಿದ್ದರು.

    ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಜಿ7 ರಾಷ್ಟ್ರಗಳು ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡುತ್ತಿವೆ. ಇದನ್ನೂ ಓದಿ: ಭಾರತಕ್ಕೆ ಯಾವುದೇ ದೇಶದ ಮಧ್ಯಸ್ಥಿಕೆ ಅಗತ್ಯವಿಲ್ಲ: ಟ್ರಂಪ್‌ಗೆ ಮೋದಿ ಸ್ಪಷ್ಟನೆ

     

    ಏನಿದು ಮೆಲೋಡಿ?
    ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ನರೇಂದ್ರ ಮೋದಿ ಇಬ್ಬರು ಉತ್ತಮ ಸ್ನೇಹಿತರಾಗಿದ್ದಾರೆ. ಜಿ20 ಸಮ್ಮೇಳನಕ್ಕೆ ಮೆಲೋನಿ ಬಂದಾಗ #Melodi ಹ್ಯಾಶ್‌ ಟ್ಯಾಗ್‌ ಫೇಮಸ್‌ ಆಗಿತ್ತು. ಮೆಲೋನಿ ಮತ್ತು ಮೋದಿ ಹೆಸರನ್ನು ಸೇರಿಸಿ ಅಭಿಮಾನಿಗಳು Melodi ಟ್ಯಾಗ್‌ ಬಳಸಿ ಪೋಸ್ಟ್‌ ಮಾಡುತ್ತಿದ್ದಾರೆ.

  • ಸುಂಕ ಸಮರದ ನಡುವೆ ಯುಎಸ್‌ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್‌

    ಸುಂಕ ಸಮರದ ನಡುವೆ ಯುಎಸ್‌ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್‌

    – ಅಮೆರಿಕದಲ್ಲಿ 9 ಲಕ್ಷ ಕೋಟಿ ಹೂಡಿಕೆ, ಇಂಧನ ಆಮದು ಹೆಚ್ಚಳ ಮಾಡುವುದಾಗಿ ಘೋಷಣೆ

    ವಾಷಿಂಗ್ಟನ್‌: ಪ್ರಸ್ತುತ ನಡೆಯುತ್ತಿರುವ ವಾಣಿಜ್ಯ ಯುದ್ಧದ ನಡುವೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ (Giorgia Meloni) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ಭೇಟಿಯಾಗಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಮೆಲೊನಿ, ಟ್ರಂಪ್‌ ಅವರನ್ನ ಶ್ವೇತಭವನದಲ್ಲಿ ಭೇಟಿಯಾಗಿ ವ್ಯಾಪಾರ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

    27 ರಾಷ್ಟ್ರಗಳನ್ನೊಳಗೊಂಡ ಐರೋಪ್ಯ ಒಕ್ಕೂಟದ ಮೇಲೆ ಅಮೆರಿಕವು ಶೇ 25ರಷ್ಟು ಆಮದು ಸುಂಕ ಹೇರಿದೆ. ಇದರಲ್ಲಿ ಪ್ರಮುಖವಾಗಿ ಉಕ್ಕು, ಅಲ್ಯುಮಿನಿಯಂ ಮತ್ತು ಕಾರುಗಳು ಸೇರಿವೆ. ಇದಕ್ಕೆ ಪ್ರತಿಯಾಗಿ ಅಮೆರಿಕ ಉತ್ಪನ್ನಗಳ ಮೇಲೆ ಯುರೋಪ್‌ನಲ್ಲೂ ಸುಂಕ ಹೆಚ್ಚಳ ಮಾಡಲಾಗಿದೆ. ಇದರಿಂದ ಎರಡೂ ಕಡೆ ಒತ್ತಡ ಸೃಷ್ಟಿಯಾಗಿದೆ. ಈ ನಡುವೆ ಅಮೆರಿಕದ ಪ್ರತಿಸುಂಕದ ಬರೆಯಿಂದ ಪಾರಾಗಲು ಮೆಲೊನಿ ಅವರು ವಾಷಿಂಗ್ಟನ್‌ ಮತ್ತು ಯುರೋಪ್‌ ನಡುವೆ ಕೊಂಡಿಯಾಗಿ ಕೆಲಸ ಮಾಡಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ. ಈ ನಡುವೆ ಟ್ರಂಪ್‌ ಸುಂಕ ವಿಧಿಸಿದ ಬಳಿಕ ಅಮೆರಿಕಕ್ಕೆ ಭೇಟಿ ನೀಡಿದ ಮೊದಲ ಯುರೋಪಿಯನ್‌ ನಾಯಕಿ ಮೆಲೊನಿ ಆಗಿದ್ದಾರೆ. ಇದನ್ನೂ ಓದಿ: ಮುಂಬೈ To ದುಬೈ ಮಧ್ಯೆ ಸಮುದ್ರದೊಳಗೆ ರೈಲು! – ದೇಶದ ಭವಿಷ್ಯವನ್ನೇ ಬದಲಿಸಲಿದೆಯಾ ಈ ಪ್ಲ್ಯಾನ್‌?

    ಈ ಸಂರ್ಭದಲ್ಲಿ ಟ್ರಂಪ್‌, ಇಟಲಿ ಪ್ರಧಾನಿ ಮೆಲೊನಿ ಅವರನ್ನ ಹಾಡಿಹೊಗಳಿದ್ದಾರೆ. ಶ್ವೇತಭವನದಲ್ಲಿ ಮಾತನಾಡುತ್ತಾ, ಮೆಲೊನಿ ಅವರನ್ನ ತುಂಬಾ ಇಷ್ಟಪಡುತ್ತೇನೆ, ಅವರು ಶ್ರೇಷ್ಠ ಪ್ರಧಾನಿಯಾಗಿದ್ದು, ಯುರೋಪಿನಾದ್ಯಂತ ಸಂಚಲನ ಮೂಡಿಸಿದ್ದಾರೆ. ಇಟಲಿಯಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಾನು ಅವರನ್ನು ಮೊದಲಿನಿಂದಲೂ ನೋಡುತ್ತಾ ಬಂದಿದ್ದೇನೆ. ವಿಶ್ವದ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ನಮ್ಮ ಎರಡೂ ರಾಷ್ಟ್ರಗಳ ಸಂಬಂಧ ಉತ್ತಮವಾಗಿದ್ದು, ಮುಂದೆಯೂ ಒಟ್ಟಿಗೆ ಸಾಗಲಿವೆ ಎಂದು ಗುಣಗಾನ ಮಾಡಿದರು. ಇದನ್ನೂ ಓದಿ: ಯುಎಸ್-ಚೀನಾ ಟಾರಿಫ್ ವಾರ್ ಮತ್ತಷ್ಟು ಜೋರು – ಚೀನಾ ಉತ್ಪನ್ನಗಳಿಗೆ 245% ಸುಂಕ ವಿಧಿಸಿದ ಅಮೆರಿಕ

    ಇದೇ ವೇಳೆ ಉಭಯ ರಾಷ್ಟ್ರಗಳ ನಡುವೆ ಸುಂಕ, ವಲಸೆ ವಿಚಾರಗಳನ್ನು ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ಸುಂಕಗಳಿಂದ ಅಮೆರಿಕವು ಹೆಚ್ಚು ಪ್ರಯೋಜನ ಪಡೆಯುತ್ತಿದೆ. ಆತುರದಲ್ಲಿ ವ್ಯಾಪಾರ ಒಪ್ಪಂದ ಮಾಡಲು ಬಯಸುವುದಿಲ್ಲ ಎಂದು ಟ್ರಂಪ್‌ ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿ ಮೆಲೊನಿ, ಇಟಾಲಿಯನ್‌ ಕಂಪನಿಗಳು ಅಮೆರಿಕದಲ್ಲಿ 10 ಬಿಲಿಯನ್‌ ಯುರೋಗಳನ್ನು (ಸುಮಾರು 9 ಲಕ್ಷ ಕೋಟಿ) ಹೂಡಿಕೆ ಮಾಡಲಿವೆ. ಜೊತೆಗೆ ಅಮೆರಿಕದಿಂದ ಇಂಧನ ಆಮದು ಹೆಚ್ಚಿಸಲಿವೆ ಎಂದು ಘೋಷಣೆ ಮಾಡಿದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: UK | ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ 123ನೇ ಅಧ್ಯಕ್ಷರಾಗಿ ಭಾರತೀಯ ಮೂಲದ ಮುಮ್ತಾಜ್‌ ಆಯ್ಕೆ

  • ನಾನು, ಟ್ರಂಪ್, ಮೋದಿ ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ?: ಮೆಲೋನಿ ಪ್ರಶ್ನೆ

    ನಾನು, ಟ್ರಂಪ್, ಮೋದಿ ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ?: ಮೆಲೋನಿ ಪ್ರಶ್ನೆ

    ವಾಷಿಂಗ್ಟನ್: ನಾನು, ಟ್ರಂಪ್ (Donald Trump), ಮೋದಿ (Narendra Modi) ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ? ಎಂದು ಇಟಲಿ ಪ್ರಧಾನಿ  ಜಾರ್ಜಿಯಾ ಮೆಲೋನಿ (Giorgia Meloni) ಅವರು ಎಡಪಂಥೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ.

    ವಾಷಿಂಗ್ಟನ್‌ನಲ್ಲಿ (Washington) ನಡೆದ ಕನ್ಸರ್ವೇಟಿವ್ ಪೊಲಿಟಿಕಲ್ ಆ್ಯಕ್ಷನ್ ಕಾನ್ಫರೆನ್ಸ್(ಸಿಪಿಎಸಿ)ನಲ್ಲಿ ವಿಡಿಯೋ ಮೂಲಕ ಮಾತನಾಡಿದ ಅವರು, `ನಾನು, ಡೊನಾಲ್ಡ್ ಟ್ರಂಪ್, ಮೋದಿಯಂಥ ಬಲಪಂಥೀಯ ನಾಯಕರು ಬಂದಾದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಕೂಗೆಬ್ಬಿಸುತ್ತಾರೆ. ಆದರೆ ಅದೇ ಎಡಪಂಥೀಯ ನಾಯಕರು ಇದೇ ರೀತಿ ಮೈತ್ರಿ ಮಾಡಿಕೊಂಡಾಗ ಪ್ರಶಂಸೆ ವ್ಯಕ್ತಪಡಿಸುತ್ತಾರೆ. ಎಡಪಂಥೀಯರು ಟ್ರಂಪ್ ಅವರ ಗೆಲುವಿನಿಂದ ಆತಂಕಕ್ಕೊಳಗಾಗಿದ್ದಾರೆ. ಕನ್ನರ್ವೇಟಿವ್‌ಗಳು ಗೆಲ್ಲುತ್ತಿರುವುದು ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಒಂದಾಗುತ್ತಿರುವುದು ಎಡಪಂಥೀಯರಿಗೆ ವಿಪರೀತ ಹೊಟ್ಟಯುರಿ ಉಂಟು ಮಾಡುತ್ತಿದೆ’ ಎಂದರು. ಇದನ್ನೂ ಓದಿ: ಬಲ್ಡೋಟಾ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಕೊಪ್ಪಳ ಬಂದ್ ಕರೆ – ಶಾಲೆಗಳಿಗೆ ರಜೆ

    `ಬಿಲ್‌ಕ್ಲಿಂಟನ್ ಮತ್ತು ಹಿಂದಿನ ಬ್ರಿಟನ್ ಒರಧಾನಿ ಟೋನಿ ಬ್ಲೇರ್ ಅವರು 90ರ ದಶಕದಲ್ಲಿ ಅಂತಾರಾಷ್ಟ್ರೀಯ ಎಡಪಂಥೀಯ ಉದಾರವಾದಿ ನೆಟ್‌ವರ್ಕ್ ರಚಿಸಿದಾಗ ಅವರನ್ನು `ಮುತ್ಸದ್ದಿಗಳು’ ಎಂದು ಕರೆಯಲಾಯಿತು. ಆದರೆ ಇದೀಗ ಟ್ರಂಪ್, ಮೆಲೋನಿ, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಅಥವಾ ಪ್ರಧಾನಿ ಮೋದಿ ಅವರು ಪರಸ್ಪರ ಮಾತುಕತೆ ನಡೆಸಿದರೆ `ಪ್ರಜಾಪ್ರಭುತ್ವಕ್ಕೆ ಬೆದರಿಕೆ’ ಎನ್ನುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮತದಾನಕ್ಕೆ ಅಮೆರಿಕ ದೇಣಿಗೆ ನೀಡಿಲ್ಲ, 7 ಯೋಜನೆಗಳಿಗಷ್ಟೇ ಧನಸಹಾಯ – ಹಣಕಾಸು ಸಚಿವಾಲಯ

    ಈ ಎಡಪಂಥೀಯರ ದ್ವಿಮುಖ ನೀತಿ ನಮಗೆ ಅಭ್ಯಾಸವಾಗಿ ಹೋಗಿದೆ. ಅವರು ನಮ್ಮ ಮೇಲೆ ಎಷ್ಟೇ ಕೆಸರೆರಚಿದರೂ ಎಡಪಂಥೀಯರ ಸುಳ್ಳುಗಳನ್ನು ಜನ ನಂಬುತ್ತಿಲ್ಲ. ಜನ ನಮಗೇ ಮತಹಾಕುತ್ತಿದ್ದಾರೆ’ ಎಂದು ಮೆಲೋನಿ ಹೇಳಿದರು. ನಾವು ಸ್ವಾತಂತ್ರ್ಯವನ್ನು ರಕ್ಷಿಸುತ್ತೇವೆ. ಹಸಿರು ಎಡಪಂಥೀಯರ ಹುಚ್ಚುತನದಿಂದ ಜನರನ್ನು ರಕ್ಷಿಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ಬ್ಯಾಂಕಲ್ಲಿ 5 ಲಕ್ಷಕ್ಕಿಂತ ಹೆಚ್ಚು ಹಣ ಇಟ್ಟರೆ ಸೇಫ್ ಆಗಿರುತ್ತಾ, ಇಲ್ವಾ? – ಏನಿದು ಠೇವಣಿ ವಿಮೆ?

  • 95 ವರ್ಷಗಳಿಂದ ಈ ದೇಶದಲ್ಲಿ ಒಂದೇ ಒಂದು ಮಗು ಜನಿಸಿಲ್ಲ – ಇದರ ಹಿಂದಿನ ನಿಗೂಢ ಕಾರಣವೇನು?

    95 ವರ್ಷಗಳಿಂದ ಈ ದೇಶದಲ್ಲಿ ಒಂದೇ ಒಂದು ಮಗು ಜನಿಸಿಲ್ಲ – ಇದರ ಹಿಂದಿನ ನಿಗೂಢ ಕಾರಣವೇನು?

    ಪ್ರಪಂಚದ ಅನೇಕ ದೇಶಗಳು ವಿವಿಧ ರೀತಿಯ ನಿಗೂಢ ವಿಷಯಗಳನ್ನು ಹೊಂದಿವೆ. ಅದರಲ್ಲಿ ಇಟಲಿಯ ರೋಮ್‌ನಲ್ಲಿರುವ ವ್ಯಾಟಿಕನ್ ಸಿಟಿಯೂ (Vatican City) ಒಂದು. ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್ ಧರ್ಮದ ಎಲ್ಲಾ ಮಹಾನ್ ಧಾರ್ಮಿಕ ಮುಖಂಡರು ಇಲ್ಲಿ ವಾಸಿಸುತ್ತಿದ್ದಾರೆ. ಪೋಪ್ ಇಲ್ಲಿ ಆಳ್ವಿಕೆ ನಡೆಸುತ್ತಾರೆ. ವಿವಿಧ ದೇಶಗಳಿಗೆ ಹೋಲಿಸಿದಾಗ ಈ ದೇಶವು ಒಂದು ವಿಭಿನ್ನತೆಯನ್ನು ಹೊಂದಿದೆ.

    ಕಳೆದ 95 ವರ್ಷಗಳಿಂದ ಒಂದೇ ಒಂದು ಮಗುವೂ ಇಲ್ಲಿ ಜನಿಸಿಲ್ಲ. ಹೌದು. ಫೆಬ್ರವರಿ 11, 1929 ರಂದು ದೇಶವನ್ನು ರಚಿಸಲಾಯಿತು. 95 ವರ್ಷಗಳು ಕಳೆದರೂ ಇಲ್ಲಿ ಒಂದೇ ಒಂದು ಮಗು ಜನಿಸದಿರುವುದು ಆಶ್ಚರ್ಯಕರವಾಗಿದೆ. ಇದು ವಿಶ್ವದ ಅತ್ಯಂತ ಚಿಕ್ಕ ದೇಶವೂ ಆಗಿದೆ. ಈ ಚಿಕ್ಕ ರಾಷ್ಟ್ರದಲ್ಲಿ, ಸುಮಾರು 800 ಜನರು ವಾಸಿಸುತ್ತಿದ್ದು, ಅದರಲ್ಲಿ ಕೇವಲ 30 ಮಹಿಳೆಯರು ಇದ್ದಾರೆ ಎನ್ನಲಾಗುತ್ತಿದೆ.

    ಈ ದೇಶ ರಚನೆಯಾದ ನಂತರ ಇಲ್ಲಿ ಯಾವುದೇ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಿಲ್ಲ. ಆಸ್ಪತ್ರೆಗೆ ನಿರ್ಮಿಸುವಂತೆ ಹಲವಾರು ಬಾರಿ ವಿನಂತಿಸಲಾಯಿತು ಆದರೂ ಕೂಡ ಪ್ರತಿ ಬಾರಿ ಈ ಮನವಿಯನ್ನು ತಿರಸ್ಕರಿಸಲಾಗಿದೆ. ಇಲ್ಲಿ ಯಾರಾದರೂ ತೀವ್ರವಾಗಿ ಅಸ್ವಸ್ಥರಾದರೆ ಅಥವಾ ಮಹಿಳೆ ಗರ್ಭಿಣಿಯಾದರೆ, ಆಕೆಯನ್ನು ರೋಮ್‌ನಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗುತ್ತದೆ.

    ವ್ಯಾಟಿಕನ್ ಸಿಟಿಯಲ್ಲಿ ಆಸ್ಪತ್ರೆಯನ್ನು ತೆರೆಯದಿರಲು ನಿರ್ಧರಿಸಲು ಅದರ ಸಣ್ಣ ಗಾತ್ರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳು ಕಾರಣ ಎಂದು ಹೇಳಲಾಗುತ್ತದೆ. ವ್ಯಾಟಿಕನ್ ಸಿಟಿಯ ವಿಸ್ತೀರ್ಣ ಕೇವಲ 118 ಎಕರೆ. ಎಲ್ಲಾ ರೋಗಿಗಳು ಚಿಕಿತ್ಸೆಗಾಗಿ ರೋಮ್‌ನಲ್ಲಿರುವ ಕ್ಲಿನಿಕ್‌ಗಳು ಮತ್ತು ಆಸ್ಪತ್ರೆಗಳಿಗೆ ಹೋಗಬೇಕು.

    ಇಲ್ಲಿ ಹೆರಿಗೆ ಆಸ್ಪತ್ರೆ ಇಲ್ಲದ ಕಾರಣ ಯಾರೂ ಹೆರಿಗೆ ಮಾಡುವಂತಿಲ್ಲ. ಹಾಗಾಗಿ ವೈದ್ಯಕೀಯ ಸೌಲಭ್ಯಗಳು ಬೇಕಿದ್ದರೆ ಹೊರಗೆ ಹೋಗಬೇಕಾಗುತ್ತದೆ. ಸಹಜ ಹೆರಿಗೆಯನ್ನು ಮಾಡುವುದಾಗಲಿ ಅಥವಾ ಅದಕ್ಕೆ ಅನುಮತಿಸುವ ಅವಕಾಶ ಇಲ್ಲ. ಇಲ್ಲಿರುವ ಮಹಿಳೆ ಗರ್ಭ ಧರಿಸಿ ಹೆರಿಗೆಯ ಸಮಯ ಸಮೀಪಿಸುತ್ತಿದ್ದಂತೆ.. ಇಲ್ಲಿನ ನಿಯಮಗಳ ಪ್ರಕಾರ ಆಕೆ ಮಗುವಿಗೆ ಜನ್ಮ ನೀಡುವವರೆಗೂ ಇಲ್ಲಿಂದ ಹೊರಡಬೇಕು.

    ಇನ್ನೂ ವ್ಯಾಟಿಕನ್ ನಗರದಲ್ಲಿ ಪಿತೃತ್ವವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮವು ಪಾದ್ರಿಗಳ ಧಾರ್ಮಿಕ ನಂಬಿಕೆಗಳಲ್ಲಿ ಆಳವಾಗಿ ಬೇರೂರಿದೆ. ಅಲ್ಲಿನ ನಿವಾಸಿಗಳು ಪ್ರಧಾನವಾಗಿ ಪಾದ್ರಿಗಳನ್ನು ಮದುವೆಯಾಗುವುದನ್ನು ಅಥವಾ ಅವರೊಂದಿಗೆ ಮಕ್ಕಳು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಬ್ರಹ್ಮಚರ್ಯದ ಪ್ರತಿಜ್ಞೆಯನ್ನು ಸಾಮಾನ್ಯವಾಗಿ ಎತ್ತಿಹಿಡಿಯಲಾಗಿದ್ದರೂ, ಪಾದ್ರಿಗಳು ಈ ಪ್ರತಿಜ್ಞೆಯನ್ನು ಮುರಿದರೆ, ಮಕ್ಕಳ ಜನನಕ್ಕೆ ಅಪವಾದಗಳಿವೆ ಎಂದು ನಂಬಲಾಗಿದೆ.

    ಈ ನಿಯಮದಿಂದಾಗಿಯೇ ವ್ಯಾಟಿಕನ್ ಸಿಟಿಯಲ್ಲಿ 95 ವರ್ಷಗಳಿಂದ ಒಂದೇ ಒಂದು ಮಗು ಜನಿಸಿಲ್ಲ. ವ್ಯಾಟಿಕನ್ ನಗರದಲ್ಲಿ ಯಾರೂ ಶಾಶ್ವತ ಪೌರತ್ವವನ್ನು ಪಡೆಯುವುದಿಲ್ಲ, ಎಲ್ಲಾ ನಿವಾಸಿಗಳು ತಮ್ಮ ಅಧಿಕಾರಾವಧಿಯ ಅವಧಿಯವರೆಗೆ ಮಾತ್ರ ಇಲ್ಲಿಯೇ ಇರುತ್ತಾರೆ, ಅಲ್ಲಿಯವರೆಗೆ ಅವರಿಗೆ ತಾತ್ಕಾಲಿಕ ಪೌರತ್ವವನ್ನು ನೀಡಲಾಗುತ್ತದೆ.

  • ರೇಪ್‌ ಆರೋಪಿಗಳಿಗೆ ಪುರುಷತ್ವ ಹರಣ – ಇಟಲಿಯಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು

    ರೇಪ್‌ ಆರೋಪಿಗಳಿಗೆ ಪುರುಷತ್ವ ಹರಣ – ಇಟಲಿಯಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು

    ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳು ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ನೇತೃತ್ವದ ಇಟಲಿ ಸರ್ಕಾರ ಹೊಸ ಕಾನೂನುಗಳನ್ನು (New Law) ಜಾರಿಗೆ ತರಲು ಮುಂದಾಗಿದೆ. ಅತ್ಯಾಚಾರ ಎಸಗುವವರಿಗೆ ಘೋರ ಶಿಕ್ಷೆ ವಿಧಿಸಲಾಗುತ್ತದೆ.

    ಹೌದು. ಅತ್ಯಾಚಾರ ಎಸಗುವ ಆರೋಪಿಗಳಿಗೆ ರಾಸಾಯನಿಕ ವಸ್ತುಗಳನ್ನು ಇಂಜೆಕ್ಟ್ ಮಾಡುವ ಮೂಲಕ ಪುರುಷತ್ವಹರಣ ಮಾಡಲಾಗುತ್ತದೆ. ಇದನ್ನು ಕೆಮಿಕಲ್‌ ಕ್ಯಾಸ್ಟ್ರೇಶನ್‌ (Chemical Castration) ಎಂದೂ ಸಹ ಕರೆಯಲಾಗುತ್ತದೆ. ಇಂಜೆಕ್ಷನ್ ನೀಡುವ ಮೂಲಕ ಟೆಸ್ಟೋಸ್ಟಿರಾನ್ ಉತ್ಪತ್ತಿಯಾಗುವುದನ್ನು ತಡೆಯಲಾಗುತ್ತದೆ. ಈ ಮೂಲಕ ಲೈಂಗಿಕ ಬಯಕೆಯನ್ನು ಕಡಿಮೆ ಮಾಡಿ, ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಹಾಕುವ ಪ್ರಯತ್ನಕ್ಕೆ ಮುಂದಾಗಿದೆ. ಆದ್ರೆ ಸರ್ಕಾರದ ಈ ಕ್ರಮವನ್ನು ವಿಪಕ್ಷಗಳು ವಿರೋಧಿಸಿದ್ದು, ಇದು ಮಾನವತೆ ಮತ್ತು ನ್ಯಾಯದ ಉಲ್ಲಂಘನೆ ಎಂದು ಹೇಳಿವೆ.

    ಅಷ್ಟಕ್ಕೂ ಕೆಮಿಕಲ್‌ ಕ್ಯಾಸ್ಟ್ರೇಶನ್ ಎಂದರೇನು? ಇದು ಹೇಗೆ ಕೆಲಸ ಮಾಡುತ್ತದೆ? ಬೇರಾವುದೇ ದೇಶದಲ್ಲಿ ಅತ್ಯಾಚಾರಿಗಳಿಗೆ ಇಂತಹ ಶಿಕ್ಷೆ ಇದೆಯೇ? ಇದರಿಂದ ನಿಜವಾಗಿಯೂ ಲೈಂಗಿಕ ಅಪರಾಧಗಳನ್ನು ತಡೆಯಬಹುದೇ? ಎಂಬ ಬಗ್ಗೆ ತಿಳಿಯಬೇಕೆ? ಹಾಗಿದ್ದರೆ ಮುಂದೆ ಓದಿ. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ

    ಕೆಮಿಕಲ್‌ ಕ್ಯಾಸ್ಟ್ರೇಷನ್‌ ಏನಿದು ಚಿಕಿತ್ಸೆ?

    ಕೆಮಿಕಲ್‌ ಕ್ಯಾಸ್ಟ್ರೇಷನ್‌ ವೈದ್ಯಕೀಯ ಪ್ರಕ್ರಿಯೆಯಾಗಿದೆ. ದೇಹದಲ್ಲಿ ಟೆಸ್ಟೋಸ್ಟೆರಾನ್‌ನಂತಹ (Testosterone) ಹಾರ್ಮೋನು ಮಟ್ಟವನ್ನು ಕಡಿಮೆಗೊಳಿಸುತ್ತದೆ. ಇದರಿಂದ ಅಪರಾಧಿಗಳಲ್ಲಿ ಲೈಂಗಿಕ ಬಯಕೆಯ ಮಟ್ಟ ಕಡಿಮೆಯಾಗುತ್ತದೆ. ಆದ್ರೆ ಇದು ಶಾಶ್ವತ ಪರಿಹಾರವಲ್ಲ ಎಂದೂ ತಜ್ಞರು ಹೇಳಿದ್ದಾರೆ. ಕೆಮಿಕಲ್‌ ಕ್ಯಾಸ್ಟ್ರೇಷನ್‌ ಪರಿಣಾಮವು ಒಂದು ನಿರ್ದಿಷ್ಟ ಅವಧಿಯವರೆಗೆ ಕೆಲಸ ಮಾಡುತ್ತದೆ. ನಂತರ ಚಿಕಿತ್ಸೆಗೆ ಒಳಗಾದ ಪುರುಷರಲ್ಲಿ ಮತ್ತೆ ಲೈಂಗಿಕ ಬಯಕೆ ಉಂಟಾಗುತ್ತದೆ. ಹಾಗಾಗಿ ಅಪರಾಧಿಗಳಿಗೆ ನಿರ್ದಿಷ್ಟ ಅವಧಿ ಮುಗಿದ ಬಳಿಕ ಮತ್ತೆ ಔಷಧವನ್ನು ಇಂಜೆಕ್ಟ್‌ ಮಾಡಬೇಕಾಗುತ್ತದೆ ಎಂದು ಹೇಳಲಾಗಿದೆ.

    ವಿರೋಧ ಏಕೆ?

    ಏಕೆಂದರೆ ಕೆಮಿಕಲ್‌ ಇಂಜೆಕ್ಟ್‌ ಮಾಡುವುದರಿಂದ ಅಪರಾಧಿಗೆ ತಪ್ಪಿನ ಅರಿವಾಗುವುದಿಲ್ಲ. ಲೈಂಗಿಕ ಬಯಕೆಯನ್ನು ಒಂದು ಕಾಲಮಿತಿಯವರೆಗೆ ತಡೆಯಬಹುದೇ ಹೊರತು ಅವರ ಕೋಪವನ್ನು ಕಡಿಮೆ ಮಾಡಲಾಗುವುದಿಲ್ಲ. ಅಲ್ಲದೇ ಶಿಕ್ಷೆ ಅವಧಿ ಮುಗಿದ ಬಳಿಕ ಅವನು ಮತ್ತೆ ಅಪರಾಧ ಎಸಗಬಹುದು. ಅಲ್ಲದೇ ಲೈಂಗಿಕ ಬಯಕೆ ಕಡಿಮೆಯಾದ್ರೆ ಆಕ್ರಮಣಕಾರಿ ಸ್ವಭಾವದಿಂದ ಮಹಿಳೆಯರು, ಮಕ್ಕಳನ್ನ ಕೊಲ್ಲುವ ಪ್ರವೃತ್ತಿ ಬೆಳೆಸಿಕೊಳ್ಳಬಹುದು. ಹಾಗಾಗಿ ಈ ರೀತಿಯ ಕಾನೂನು ತರುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR

    ಅಪರಾಧ ಕಡಿಮೆಯಾಗಿದೆಯೇ?

    ಈಗಾಗಲೇ ಕೆಲ ದೇಶಗಳಲ್ಲಿ ಲೈಂಗಿಕ ಅಪರಾಧಿಗಳಿಗೆ ಈ ಶಿಕ್ಷೆ ನೀಡಲಾಗುತ್ತಿದೆ. ಇದರಿಂದ ಅಪರಾಧ ಕಡಿಮೆಯಾಗಿದೆಯೇ ಎನ್ನುವ ಬಗ್ಗೆ ನೇರ ವರದಿಗಳಿಲ್ಲ. 2017ರಲ್ಲಿ ಇಂಡೋನೇಷ್ಯಾದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಈ ಶಿಕ್ಷೆ ನೀಡಲಾಗಿತ್ತು. ಇಂಡೋನೇಷಿಯನ್ ವಿಟ್ನೆಸ್ ಮತ್ತು ವಿಕ್ಟಿಮ್ ಪ್ರೊಟೆಕ್ಷನ್ ಏಜೆನ್ಸಿ ಪ್ರಕಾರ, 2017ರಲ್ಲಿ ಇಂಡೋನೇಷ್ಯಾದಲ್ಲಿ 70 ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಿತ್ತು. 2018-2019ರಲ್ಲಿ ಈ ಪ್ರಕರಣಗಳ ಸಂಖ್ಯೆ 149ಕ್ಕೆ ಏರಿಕೆಯಾಗಿತ್ತು. 200-21ಕ್ಕೆ ಇದರ ಶೇಕಡಾವಾರು ಪ್ರಮಾಣ ಶೇ.50ಕ್ಕೆ ಏರಿಕೆಯಾಗಿತ್ತು. ಹಾಗಾಗಿ ಅಲ್ಲಿ ಈ ಚಿಕಿತ್ಸೆ ಕೊಡಲು ಜಾರಿಗೆ ತರಲಾಗಿತ್ತು. ಇದನ್ನೂ ಓದಿ: ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು: ಸುಪ್ರೀಂ

    ಯಾವ್ಯಾವ ದೇಶಗಳಲ್ಲಿ ಚಿಕಿತ್ಸೆ?

    * ಕೆಮಿಕಲ್ ಕ್ಯಾಸ್ಟ್ರೇಶನ್ ಅನ್ನು ಮೊದಲ ಬಾರಿಗೆ ಅಮೇರಿಕಾದಲ್ಲಿ 1966 ರಲ್ಲಿ ಮಾಡಲಾಯಿತು. ಈಗ ಕ್ಯಾಲಿಫೋರ್ನಿಯಾ, ಫ್ಲೋರಿಡಾ, ಜಾರ್ಜಿಯಾ ಮತ್ತು ಟೆಕ್ಸಾಸ್ ಸೇರಿದಂತೆ 9 ರಾಜ್ಯಗಳು ಶಿಶುಕಾಮಿಗಳಿಗೆ ಈ ಶಿಕ್ಷೆ ನೀಡುತ್ತಿವೆ.
    * 2009ರ ಸೆಪ್ಟೆಂಬರ್‌ನಲ್ಲಿ ಪೋಲೆಂಡ್ ಸಂಸತ್ತು ತನ್ನ ದಂಡ ಸಂಹಿತೆ ಬದಲಾಯಿಸಿದ ನಂತರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರಿಗೆ ಈ ಶಿಕ್ಷೆ ನೀಡಲು ನಿರ್ಧರಿಸಿತು.
    * ರಷ್ಯಾದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಲೈಂಗಿಕ ಅಪರಾಧಿಗಳಿಗೆ ಆಂಡ್ರೊಜೆನ್-ತಡೆಗಟ್ಟುವ ಔಷಧಿಗಳನ್ನು ನೀಡಲಾಗುತ್ತಿದೆ.
    * 2012ರಲ್ಲಿ ಯುರೋಪಿಯನ್ ದೇಶವಾದ ಎಸ್ಟೋನಿಯಾದಲ್ಲಿ ಈ ಶಿಕ್ಷೆ ಕೊಡಲು ಪ್ರಾರಂಭವಾಯಿತು. ಈ ಔಷಧಿಯನ್ನು ಕೆಲವು ತಿಂಗಳವರೆಗೆ ನೀಡದೇ ಮೂರು ವರ್ಷಗಳವರೆಗೆ ನಿರಂತರವಾಗಿ ನೀಡಬೇಕು ಎಂದು ನ್ಯಾಯಾಲಯ ಹೇಳಿತ್ತು.
    * ಜೊತೆಗೆ ಉಕ್ರೇನ್, ಕೆನಡಾ, ಡೆನ್ಮಾರ್ಕ್, ಜರ್ಮನಿ, ಇಸ್ರೇಲ್, ನಾರ್ವೆ ಮತ್ತು ಸ್ವೀಡನ್‌ನಂತಹ ಅನೇಕ ದೇಶಗಳಲ್ಲಿಯೂ ಶಿಶುಕಾಮಿಗಳಿಗೆ ರಾಸಾಯನಿಕ ಕ್ಯಾಸ್ಟ್ರೇಶನ್ ಶಿಕ್ಷೆಯನ್ನಾಗಿ ನೀಡಲಾಗುತ್ತಿದೆ.

    ಕೈದಿಗಳೇ ಈ ಶಿಕ್ಷೆಗೆ ಒಪ್ಪಿದ್ದು ಏಕೆ?

    ಅಮೆರಿಕದಂತಹ ದೇಶಗಳಲ್ಲಿ ಕೆಲ ಕೈದಿಗಳು ಕೆಮಿಕಲ್‌ ಕ್ಯಾಸ್ಟ್ರೇಷನ್‌ ಚಿಕಿತ್ಸೆಯನ್ನ ಖುದ್ದು ಆಯ್ಕೆ ಮಾಡಿಕೊಂಡಿದ್ದಾರೆ. ಕೈದಿಗಳು ಸ್ವತಃ ಈ ಚಿಕಿತ್ಸೆ ಒಪ್ಪಿದರೆ ಅವರು ತಮ್ಮ ಶಿಕ್ಷೆಯಿಂದ ಮುಕ್ತರಾಗುತ್ತಾರೆ. ಕೆಲವರಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಕೂಡ ಮಾಡಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

  • ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ

    ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ

    ಬರಿ(ಇಟಲಿ): ಜಿ7 ಸಭೆ ಮುಗಿದ ನಂತರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Italian PM Giorgia Meloni) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಸೆಲ್ಫಿ ವಿಡಿಯೋ ಮಾಡಿ #Melodi ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್‌ ಮಾಡಿದ್ದು ವೈರಲ್‌ ಆಗಿದೆ.

    ಇಟಲಿಯಲ್ಲಿ ನಡೆದ ಜಿ7 ರಾಷ್ಟ್ರಗಳ ಸಭೆಗೆ ವಿಶೇಷ ಆಹ್ವಾನಿತರಾಗಿ ಮೋದಿ ಹೋಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಮೆಲೋನಿ ಅವರು ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ ‘Hello From The Melody Team’ ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ.

    ಮೆಲೋನಿ ಅವರು ಮೋದಿ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಇದೇ ಮೊದಲೆನಲ್ಲ. ಈ ಹಿಂದೆ ದುಬೈನಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ನಡೆದಿತ್ತು. ಈ ವೇಳೆ ಮೋದಿ ಮತ್ತು ಮೆಲೋನಿ ಭಾಗವಹಿಸಿದ್ದರು. ಈ ಸಂದರ್ಭದಲ್ಲೂ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿದ್ದರು. ಇದನ್ನೂ ಓದಿ: G7 Group Photo | ಮಧ್ಯದಲ್ಲಿ ನಿಂತ ಭಾರತ: ಮೋದಿ ಹೇಳಿದ್ದೇನು?

    ಜಿ7 ಸಭೆ ಮುಗಿದ ಬಳಿಕ ಕೊನೆಯಲ್ಲಿ ಎಲ್ಲಾ ದೇಶದ ನಾಯಕರ ಗ್ರೂಪ್‌ ಫೋಟೋ ತೆಗೆಯಲಾಗಿತ್ತು. ಈ ಫೋಟೋದಲ್ಲಿ ಪ್ರಧಾನಿ ಮೋದಿ ಮಧ್ಯದಲ್ಲಿ ನಿಂತಿದ್ದು ವಿಶೇಷವಾಗಿತ್ತು.

     

    ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಇಟಲಿ ಆಹ್ವಾನ ನೀಡಿತ್ತು.

     

    ಏನಿದು ಮೆಲೋಡಿ?
    ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ನರೇಂದ್ರ ಮೋದಿ ಇಬ್ಬರು ಉತ್ತಮ ಸ್ನೇಹಿತರಾಗಿದ್ದಾರೆ. ಜಿ20 ಸಮ್ಮೇಳನಕ್ಕೆ ಮೆಲೋನಿ ಬಂದಾಗ #Melodi ಹ್ಯಾಶ್‌ ಟ್ಯಾಗ್‌ ಫೇಮಸ್‌ ಆಗಿತ್ತು. ಮೆಲೋನಿ ಮತ್ತು ಮೋದಿ ಹೆಸರನ್ನು ಸೇರಿಸಿ ಅಭಿಮಾನಿಗಳು Melodi ಟ್ಯಾಗ್‌ ಬಳಸಿ ಪೋಸ್ಟ್‌ ಮಾಡುತ್ತಿದ್ದರು. ಈಗ ಸ್ವತ: ಜಾರ್ಜಿಯಾ ಮೆಲೋನಿ ಅವರೇ ಈ ಹ್ಯಾಶ್‌ಟ್ಯಾಗ್‌ ಬಳಸಿ ಪೋಸ್ಟ್‌ ಮಾಡಿದ್ದು ಸೆಲ್ಫಿ ಫೋಟೋ ವೈರಲ್‌ಆಗಿದೆ.

  • G7 Group Photo | ಮಧ್ಯದಲ್ಲಿ ನಿಂತ ಭಾರತ: ಮೋದಿ ಹೇಳಿದ್ದೇನು?

    G7 Group Photo | ಮಧ್ಯದಲ್ಲಿ ನಿಂತ ಭಾರತ: ಮೋದಿ ಹೇಳಿದ್ದೇನು?

    ಬರಿ(ಇಟಲಿ): ತಂತ್ರಜ್ಞಾನವು ಸೃಜನಶೀಲವಾಗಿರಬೇಕು, ವಿನಾಶಕಾರಿಯಾಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕರೆ ನೀಡಿದ್ದಾರೆ.

    ಇಟಲಿಯ ಬರಿ (Bari) ನಗರದಲ್ಲಿ ನಡೆದ ನಡೆದ ಜಿ7 (G7) ರಾಷ್ಟ್ರಗಳ ಸಭೆಯಲ್ಲಿ ಮೋದಿ ಮಾತನಾಡಿದರು. 21ನೇ ಶತಮಾನವನ್ನು ತಂತ್ರಜ್ಞಾನದ ಯುಗ ಎಂದು ಬಣ್ಣಿಸಿದ ಮೋದಿ, ತಂತ್ರಜ್ಞಾನವು ಮನುಷ್ಯನನ್ನು ಚಂದ್ರನತ್ತ ಕರೆದೊಯ್ಯುವ ಧೈರ್ಯವನ್ನು ನೀಡುತ್ತದೆ. ಆದರೆ ಸೈಬರ್ ಭದ್ರತೆಯಂತಹ ಸವಾಲುಗಳನ್ನು ಸಹ ಸೃಷ್ಟಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹಿಂಗೆ ಮಾಡಿ ನನ್‌ ತಲೆಗೆ ತಂದಿದ್ದಾರೆ: ದರ್ಶನ್‌ ಅಳಲು

    ತಂತ್ರಜ್ಞಾನದ ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ಸೀಮಿತಗೊಳಿಸುವ ಬದಲು ಮಾನವ ಶಕ್ತಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಎಂದರು.

    ನಾವು ತಂತ್ರಜ್ಞಾನವನ್ನು ವಿನಾಶಕಾರಿಯಾಗಿ ಬಳಸದೇ ಸೃಜನಾತ್ಮಕಗೊಳಿಸಬೇಕು. ಆಗ ಮಾತ್ರ ನಾವು ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸಬಹುದು ಎಂದು ಹೇಳಿದರು.

    ಜಾಗತಿಕ ವೇದಿಕೆಯಲ್ಲಿ ಗ್ಲೋಬಲ್‌ ಸೌತ್‌ ದೇಶಗಳ ಕಳವಳಗಳನ್ನು ವ್ಯಕ್ತಪಡಿಸುವುದು ತನ್ನ ಜವಾಬ್ದಾರಿ ಎಂದು ಭಾರತ ಪರಿಗಣಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಮ್ಮೇಳನದಲ್ಲಿ ಆಫ್ರಿಕಾ ಒಕ್ಕೂಟವನ್ನು ಜಿ20 ಖಾಯಂ ಸದಸ್ಯರನ್ನಾಗಿ ಸ್ವೀಕರಿಸಲಾಗಿದೆ. ಇದು ಭಾರತದ ಗಮನಾರ್ಹ ಸಾಧನೆ ಮತ್ತು ಗೌರವವನ್ನು ಸೂಚಿಸುತ್ತದೆ ಎಂದು ಮೋದಿ ತಿಳಿಸಿದರು.

    ಜಿ7 ಸಭೆ ಮುಗಿದ ಬಳಿಕ ಕೊನೆಯಲ್ಲಿ ಎಲ್ಲಾ ದೇಶದ ನಾಯಕರ ಗ್ರೂಪ್‌ ಫೋಟೋ ತೆಗೆಯಲಾಗಿತ್ತು. ಈ ಫೋಟೋದಲ್ಲಿ ಪ್ರಧಾನಿ ಮೋದಿ ಮಧ್ಯದಲ್ಲಿ ನಿಂತಿದ್ದು ವಿಶೇಷವಾಗಿತ್ತು.

    ಭಾರತದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ ಪ್ರಧಾನಿ ಮೋದಿ ಅವರಿಗೆ ಏಪ್ರಿಲ್‌ ತಿಂಗಳಿನಲ್ಲಿ ಜಿ7 ಸಭೆಗೆ ಆಗಮಿಸುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಆಹ್ವಾನ ನೀಡಿದ್ದರು. ಭಾರತ ಜಿ7 ದೇಶಗಳ ಒಕ್ಕೂಟದಲ್ಲಿ ಇಲ್ಲ. ಆದರೆ ವಿಶೇಷ ಅತಿಥಿಯಾಗಿ ಈ ಸಭೆಯಲ್ಲಿ ಭಾಗವಹಿಸಲು ಇಟಲಿ ಆಹ್ವಾನ ನೀಡಿತ್ತು.

     

  • G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ ಮೋದಿ

    G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ ಮೋದಿ

    – ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಪ್ರವಾಸ

    ರೋಮ್:‌ G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಇಟಲಿಗೆ ತಲುಪಿದ್ದಾರೆ. ಮೋದಿಯವರನ್ನು ಸ್ವಾಗತಿಸಲು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಕೂಡ ಬ್ರಿಂಡಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

    ಇಟಲಿಯ ಬ್ರಿಂಡಿಸಿ ವಿಮಾನ ನಿಲ್ದಾಣ ತಲುಪಿದ ಬಳಿಕ ಎಕ್ಸ್ ಮಾಡಿರುವ ಮೋದಿ (Narendra Modi), ನಾನು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿ ತಲುಪಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಅರ್ಥಪೂರ್ಣ ಚರ್ಚೆಗಾಗಿ ವಿಶ್ವ ನಾಯಕರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

    ಜೊತೆಗೆ ಜಾಗತಿಕ ಸವಾಲುಗಳನ್ನು ಪರಿಹರಿಸುವುದು ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತರಾಷ್ಟ್ರೀಯ ಸಹಕಾರವನ್ನು ಉತ್ತೇಜಿಸುವುದು ನಮ್ಮ ಗುರಿ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಿಯಾಸಿ ಬಸ್‌ ಮೇಲೆ ದಾಳಿ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು

    ಜಿ7 ಶೃಂಗಸಭೆಯಲ್ಲಿ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸೇರಿದಂತೆ ಹಲವು ವಿಶ್ವ ನಾಯಕರನ್ನು ಭೇಟಿಯಾಗಲಿದ್ದಾರೆ. ಮೂರನೇ ಬಾರಿಗೆ ಭಾರತದ ಪ್ರಧಾನಿಯಾದ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶಿ ಪ್ರವಾಸ ಇದಾಗಿದೆ.

    G7 ಯುಎಸ್, ಬ್ರಿಟನ್, ಫ್ರಾನ್ಸ್, ಇಟಲಿ, ಜರ್ಮನಿ, ಕೆನಡಾ ಮತ್ತು ಜಪಾನ್ ಅನ್ನು ಒಳಗೊಂಡಿದೆ. ಪ್ರಸ್ತುತ ಇಟಲಿ G7 (ಗ್ರೂಪ್ ಆಫ್ ಸೆವೆನ್) ಶೃಂಗಸಭೆಯ ಅಧ್ಯಕ್ಷತೆ ಮತ್ತು ಆತಿಥ್ಯ ವಹಿಸುತ್ತಿದೆ.