Tag: ಇಟಲಿ

  • ನಟಿ ಜಾಹ್ನವಿ ಬಾಯ್ ಫ್ರೆಂಡ್ ಜೊತೆ ಇಟಲಿಗೆ ಹಾರಿದ್ದೇಕೆ?

    ನಟಿ ಜಾಹ್ನವಿ ಬಾಯ್ ಫ್ರೆಂಡ್ ಜೊತೆ ಇಟಲಿಗೆ ಹಾರಿದ್ದೇಕೆ?

    ಬಾಲಿವುಡ್‌ನಲ್ಲಿ (Bollywood) ಆಗಾಗ ಗುಸು-ಗುಸು ಪಿಸು-ಪಿಸು ಮಾತುಗಳು ಕೇಳಿಬರೋದು ಸರ್ವೆಸಾಮಾನ್ಯ. ಅದರಲ್ಲೂ ನಟ, ನಟಿಯರ ವಿಷ್ಯದಲ್ಲಂತೂ ಈ ಸುದ್ದಿ ಬೇಗನೇ ಸ್ಪ್ರೆಡ್ ಆಗಿಬಿಡುತ್ತೆ. ಬಾಲಿವುಡ್ ನಟಿ ಜಾಹ್ನವಿ ಕಪೂರ್ (Jahnavi Kapoor) ಹಾಗೂ ಶಿಖರ್ ಪಹಾರಿಯಾ  (Shikhar Pahariya)ವಿಷ್ಯದಲ್ಲೂ ಈ ಸುದ್ದಿ ಆಗಾಗ ಕೇಳಿ ಬರ್ತಾನೇ ಇರುತ್ತೆ. ಅದಕ್ಕೆ ಪುಷ್ಟಿ ಎಂಬಂತೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ.

    ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಪ್ರೀ-ವೆಡ್ಡಿಂಗ್ ಇತ್ತೀಚೆಗೆ ಇಟಲಿಯಲ್ಲಿ (Italy) ಅದ್ಧೂರಿಯಾಗಿ ನೆರವೇರಿದೆ. ಈ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನೇಕ ಬಾಲಿವುಡ್ ತಾರೆಯರು ಭಾಗಿಯಾಗಿದ್ದರು. ಅದರಂತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಸಹ ತಮ್ಮ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡಿದ್ದು ವಿಶೇಷಗಳಲ್ಲಿ ವಿಶೇಷ.

    ಹೌದು, ತಮ್ಮ ಬಾಯ್‌ಫ್ರೆಂಡ್ ಶಿಖರ್ ಪಹಾರಿಯಾ ಕೈ ಹಿಡಿದು ನಡೆದಿದ್ದಾರೆ ಬಾಲಿವುಡ್ ಬ್ಯೂಟಿ ಜಾಹ್ನವಿ ಕಪೂರ್. ಬಾಲಿವುಡ್ ಅಂಗಳದಲ್ಲಿ ಜಾಹ್ನವಿ ಕಪೂರ್ ಹಾಗೂ ಶಿಖರ್ ಪಹಾರಿಯಾ ಸುದ್ದಿ ಆಗಾಗ ಮೇನ್ ಸ್ಟ್ರೀಮ್ ಗೆ  ಬರ್ತಾನೆ ಇತ್ತು. ಅದಕ್ಕೆಲ್ಲ ಕ್ಯೂಟ್ ನಟಿ ಜಾನು ಆನ್ಸರ್ ಮಾಡ್ತಾನೆ ಬಂದಿದ್ದಾರೆ. ಇದೀಗ ಅಂಬಾನಿ ಪುತ್ರನ ಪ್ರೀ ವೆಡ್ಡಿಂಗ್‌ನಲ್ಲಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನ ತಮ್ಮ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಜಾಹ್ನವಿ.

  • ಮೋದಿ ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ: ಕಂಗನಾ

    ಮೋದಿ ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ: ಕಂಗನಾ

    ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ ಎಂದು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಟಿ ಕಂಗನಾ ರಣಾವತ್ (Kangana Ranaut) ಹೇಳಿದ್ದಾರೆ.‌

    ಕುಲು ಜಿಲ್ಲೆಯ ಜಗತ್ ಖಾನಾದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೋದಿಯವರು ಉತ್ತಮ ಆಡಳಿತದ ಪ್ರತೀಕ. ಪ್ರಧಾನಿಗೆ ಪಹಾರಿ ಸೇರಿದಂತೆ ಹಲವಾರು ಭಾಷೆಗಳು ತಿಳಿದಿವೆ. ಸೋನಿಯಾ ಗಾಂಧಿಯಂತೆ (Sonia Gandhi) ಹಿಂದಿ ಗೊತ್ತಿಲ್ಲದ ಪ್ರಧಾನಿ ಮೋದಿ ಇಟಲಿಯವರಲ್ಲ. ಅವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

    ಒಂದೆಡೆ ಮೋದಿಯವರ ಉತ್ತಮ ಆಡಳಿತವಿದ್ದರೆ ಮತ್ತೊಂದೆಡೆ ಕಾಂಗ್ರೆಸ್‌ನ ಭ್ರಷ್ಟಾಚಾರವಿದೆ. ಹೀಗಾಗಿ ಹಿಮಾಚಲ ಪ್ರದೇಶದ ಜನರು ಜೂನ್ 1 ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಮನಸ್ಸು ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬುಲೆಟ್‌ ರೈಲು ಎಲ್ಲಿ- ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಪ್ರಶ್ನೆ

     ಇದೇ ವೇಳೆ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್ ಅವರು ಫ್ಲಾಪ್ ಚಿತ್ರ ಮಾಡುತ್ತಿದ್ದಾರೆ ಎಂಬ ಹೇಳಿಕೆಗಾಗಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರನ್ನು ತರಾಟೆಗೆ ತೆಗೆದುಕೊಂಡ ರಣಾವತ್, ಠಾಕೂರ್ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಸೂಪರ್ ಹಿಟ್ ಅಧಿಕಾರವನ್ನು ಹೊಂದಿದ್ದರು. ಆದರೆ ಸುಖು ಅವರು ಕೇವಲ 15 ತಿಂಗಳುಗಳಲ್ಲಿ ತಮ್ಮ ಕೆಲಸದಲ್ಲಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಸುಖು ಈ ಹಿಂದೆ ಕಂಗನಾ ಒಳ್ಳೆಯ ನಟಿ ಎಂದು ಹೇಳಿದ್ದರು. ಆದರೆ ಆಕೆಯ ಚಿತ್ರಕಥೆಗಾರರು ಠಾಕೂರ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ರಾಜೀವ್ ಬಿಂದಾಲ್ ಆಗಿರುವುದರಿಂದ ಅವರ ಚಿತ್ರ ವಿಫಲವಾಯಿತು ಎಂದಿದ್ದರು.

  • MBA ಓದಲು ಇಟಲಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

    MBA ಓದಲು ಇಟಲಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

    ರೋಮ್:‌ ಭಾರತೀಯ ವಿದ್ಯಾರ್ಥಿಯೊಬ್ಬ (Indian Student) ಇಟಲಿಯಲ್ಲಿ (Italy) ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಇದೀಗ ಆತನ ಕುಟುಂಬದವರು ಸರ್ಕಾರದ ನೆರವು ಬಯಸಿದ್ದಾರೆ.

    ಮೃತನನ್ನು ರಾಮ್‌ ರಾವತ್‌ ಎಂದು ಗುರುತಿಸಲಾಗಿದ್ದು, ಈತ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ನಿವಾಸಿ. ಪೊಲೀಸರ ಪ್ರಕಾರ, ರಾವುತ್ ಎಂಬಿಎ (MBA) ಓದಲು ಇಟಲಿಗೆ ಹೋಗಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೊಸ ವರ್ಷದ ಶುಭಾಶಯಗಳನ್ನು ತಿಳಿಸಲು ರಾವುತ್ ಅವರ ಪೋಷಕರು ಕರೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ.

    ಪೋಷಕರು ಮಾಡಿದ ಕರೆಯನ್ನು ರಾವತ್‌ ಸ್ವೀಕರಿಸಲಿಲ್ಲ. ಹೀಗಾಗಿ ಸಂಶಯಗೊಂಡ ಅವರು ವಸತಿಗೃಹದ ಮಾಲೀಕರನ್ನು ಸಂಪರ್ಕಿಸಿದರು. ಈ ವೇಳೆ ಅವರು ಮತ್ತೊಂದು ಮನೆಯ ವಾಶ್ ರೂಂನಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ- 44 ಯುವತಿಯರ ರಕ್ಷಣೆ

    ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಪೋಷಕರು ಕಂಗಾಲಾಗಿದ್ದಾರೆ. ಅಲ್ಲದೇ ಆತನ ಮೃತದೇಹವನ್ನು ಭಾರತಕ್ಕೆ (India) ಕರೆತರಲು ಜಾರ್ಖಂಡ್‌ನ ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ಸಂಪರ್ಕಿಸಿ ಮನವಿ ಮಾಡಿಕೊಂಡಿದ್ದಾರೆ.

    ಘಟನೆಯ ಕುರಿತು ಮಾತನಾಡಿದ ಪಶ್ಚಿಮ ಸಿಂಗ್‌ಭೂಮ್‌ನ ಡೆಪ್ಯೂಟಿ ಕಮಿಷನರ್ ಅನನ್ಯ ಮಿತ್ತಲ್, ರಾಮ್ ರಾವತ್ ಸಾವಿನ ಬಗ್ಗೆ ನನಗೆ ಮಾಹಿತಿ ಬಂದಿದೆ. ಅಗತ್ಯ ಕ್ರಮಕ್ಕಾಗಿ ಗೃಹ ಇಲಾಖೆ ಮತ್ತು ಜಾರ್ಖಂಡ್‌ನ ವಲಸೆ ಸೆಲ್‌ಗೆ ತಿಳಿಸಲಾಗಿದೆ ಎಂದು ಹೇಳಿದರು.

    ಪ್ರಕರಣದ ಎಲ್ಲಾ ಬೆಳವಣಿಗೆಗಳ ಮೇಲೆ ನಿಗಾ ಇಡುತ್ತಿದ್ದೇನೆ. ರಾಮ್‌ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮಿತ್ತಲ್ ಹೇಳಿದ್ದಾರೆ.

  • ಶೂಟಿಂಗ್ ಗಾಗಿ ಇಟಲಿಗೆ ಹಾರಲಿದ್ದಾರೆ ಗಣೇಶ್

    ಶೂಟಿಂಗ್ ಗಾಗಿ ಇಟಲಿಗೆ ಹಾರಲಿದ್ದಾರೆ ಗಣೇಶ್

    ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ. ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ ಹಾಡುಗಳ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ.

    ಹಾಡುಗಳ ಚಿತ್ರೀಕರಣಕ್ಕಾಗಿ ಮೂವತ್ತು ಜನರ ತಂಡ ಇಟಲಿಗೆ ಪ್ರಯಾಣ ಬೆಳಸಲಿದೆ. ಹೊಸವರ್ಷ ಆರಂಭದ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಎಲ್ಲರಿಗೂ ಚಿತ್ರತಂಡ ಹೊಸವರ್ಷದ ಶುಭಾಶಯ ತಿಳಿಸಿದೆ.

    ಯಶಸ್ವಿ ಚಿತ್ರಗಳ ನಿರ್ದೇಶಕ  ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ  ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಕೃಷ್ಣಂ ಪ್ರಣಯ ಸಖಿ ಚಿತ್ರಕ್ಕಿದೆ.

    ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ,  ಶ್ರೀನಿವಾಸಮೂರ್ತಿ,  ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಚೀನಾಗೆ ಬಿಗ್‌ ಶಾಕ್‌ – ಮಹತ್ವಾಕಾಂಕ್ಷೆಯ BRI ಯೋಜನೆಯಿಂದ ಹೊರಬಂದ ಇಟಲಿ

    ಚೀನಾಗೆ ಬಿಗ್‌ ಶಾಕ್‌ – ಮಹತ್ವಾಕಾಂಕ್ಷೆಯ BRI ಯೋಜನೆಯಿಂದ ಹೊರಬಂದ ಇಟಲಿ

    ರೋಮ್‌: ಚೀನಾಗೆ ಇಟಲಿ ಬಿಗ್‌ ಶಾಕ್‌ ನೀಡಿದೆ. ಚೀನಾದ (China) ಮಹತ್ವಾಕಾಂಕ್ಷೆಯ ಬೆಲ್ಟ್‌ ಅಂಡ್‌ ರೋಡ್‌ ಇನಿಷಿಯೇಟಿವ್ (BRI) ಯೋಜನೆಯಿಂದ ಹೊರಬರುವುದಾಗಿ ಇಟಲಿ (Italy) ಅಧಿಕೃತವಾಗಿ ತಿಳಿಸಿದೆ.

    ಈಗ ಇಟಲಿ ಅಧಿಕೃತವಾಗಿ ಈ ಯೋಜನೆಯಿಂದ ಹೊರಬರುವುದಾಗಿ ಚೀನಾಗೆ ತಿಳಿಸಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. 2019ರಲ್ಲಿ ನಡೆದ ಒಪ್ಪಂದವು ಮಾರ್ಚ್ 2024 ರಲ್ಲಿ ಮುಕ್ತಾಯಗೊಳ್ಳುತ್ತದೆ. ರೋಮ್ ಕನಿಷ್ಠ ಮೂರು ತಿಂಗಳ ಮೊದಲೇ ಲಿಖಿತವಾಗಿ ತಿಳಿಸದೇ ಇದ್ದರೆ ಅದು ಸ್ವಯಂಚಾಲಿತವಾಗಿ ನವೀಕರಿಸಲ್ಪಡುತ್ತದೆ. ಈಗ ಈ ಒಪ್ಪಂದವನ್ನು ನವೀಕರಿಸುವುದಿಲ್ಲಎಂದು ಇಟಲಿ ಚೀನಾಗೆ ಇತ್ತೀಚಿಗೆ ಪತ್ರದ ಮೂಲಕ ತಿಳಿಸಿದೆ ಎಂದು ವರದಿಯಾಗಿದೆ.

    ಚೀನಾದ ಈ ಯೋಜನೆಗೆ  2019ರಲ್ಲಿ ಇಟಲಿ ಸಹಿ ಹಾಕಿತ್ತು.  ಬಿಆರ್‌ಐ ಸೇರಿದ ಏಕೈಕ ಪಾಶ್ಚಿಮಾತ್ಯ ದೇಶ ಇಟಲಿಯಾಗಿತ್ತು. ಲಾಭಕ್ಕಿಂತ ನಷ್ಟವೇ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಇಟಲಿ ಈ ಯೋಜನೆಯಿಂದ ಹಿಂದಕ್ಕೆ ಸರಿಯಲಿದೆ ಎಂಬ ವಿಚಾರ ಕೆಲ ತಿಂಗಳಿಂದ ಸುದ್ದಿಯಾಗುತ್ತಿತ್ತು. ಇದನ್ನೂ ಓದಿ: ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ!

    ನಾವು ಇನ್ನು ಮುಂದೆ ಬಿಆರ್‌ಐ ಭಾಗವಾಗಿರದಿದ್ದರೂ ಸಹ ಚೀನಾದೊಂದಿಗೆ ಅತ್ಯುತ್ತಮ ಸಂಬಂಧವನ್ನು ಕಾಪಾಡಿಕೊಳ್ಳುವ ಎಲ್ಲಾ ಉದ್ದೇಶವನ್ನು ನಾವು ಹೊಂದಿದ್ದೇವೆ. ಇತರ ಜಿ7 ರಾಷ್ಟ್ರಗಳು ಚೀನಾದೊಂದಿಗೆ ನಮಗಿಂತಲೂ ಉತ್ತಮ ಸಂಬಂಧವನ್ನು ಹೊಂದಿದ್ದರೂ ಆ ದೇಶಗಳು ಬಿಆರ್‌ಐ ಯೋಜನೆಯ ಭಾಗವಾಗಿಲ್ಲ ಎಂದು ಇಟಲಿಯ ಸರ್ಕಾರಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

    ಕಳೆದ ವರ್ಷ ಪ್ರಧಾನಿಯಾಗಿ ಜಾರ್ಜಿಯಾ ಮೆಲೋನಿ (Giorgia Meloni) ಅಧಿಕಾರ ವಹಿಸಿಕೊಂಡ ಬಳಿಕ ಚೀನಾವನ್ನು ಪಶ್ಚಿಮಕ್ಕೆ ಸಂಪರ್ಕಿಸುವ ಈ ಯೋಜನೆಯಿಂದ ಇಟಲಿಗೆ ಯಾವುದೇ ಗಮನಾರ್ಹ ಲಾಭ ಇಲ್ಲ.  ಈ ಒಪ್ಪಂದದಿಂದ ಹಿಂದೆ ಸರಿಯಲು ಬಯಸುವುದಾಗಿ ಹೇಳಿದ್ದರು.  ಇದನ್ನೂ ಓದಿ: ಏನಿದು ಬಿಎಆರ್‌ಐ ಯೋಜನೆ? ಚೀನಾಗೆ ಲಾಭ ಹೇಗೆ? ಭಾರತ ಯಾಕೆ ಸೇರ್ಪಡೆಯಾಗಿಲ್ಲ? ಭಾರತದ ವಿರೋಧ ಯಾಕೆ? ಚೀನಾದ ಯೋಜನೆಗೆ ಪ್ರತಿಯಾಗಿ ಭಾರತ ಏನು ಮಾಡುತ್ತಿದೆ?

    ಏನಿದು ಈ ಯೋಜನೆ?
    ಸರಳವಾಗಿ ಹೇಳುವುದಾರೆ ರಸ್ತೆ, ರೈಲು, ಹಡಗಿನ ಮೂಲಕ ವಸ್ತುಗಳನ್ನು ಸಾಗಿಸಲು ಆರಂಭವಾದ ಯೋಜನೆ ಒನ್‌ ಬೆಲ್ಟ್‌, ಒನ್‌ ರೋಡ್‌ ಯೋಜನೆ. ಅಂದರೆ ಒಂದು ದೇಶದಲ್ಲಿ ಮೂಲಸೌಕರ್ಯವನ್ನು (Infrastructure) ಅಭಿವೃದ್ಧಿ ಪಡಿಸುವ ಈ ಯೋಜನೆ 2013ರಲ್ಲಿ ಆರಂಭಗೊಂಡಿತು. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ (Xi Jinping) ಕನಸಿನ ಯೋಜನೆ ಇದಾಗಿದ್ದು ಇದಕ್ಕೆ 30, 50 ದೇಶಗಳು ಸೇರಿಲ್ಲ. ರಷ್ಯಾ, ಸೌದಿ ಅರೇಬಿಯಾ, ಕತಾರ್‌, ಇರಾನ್‌, ಅರ್ಜೈಂಟಿನಾ, ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ ಸೇರಿದಂತೆ ಬರೋಬ್ಬರಿ 150 ದೇಶಗಳು ಈ ಮಹತ್ವಾಕಾಂಕ್ಷಿಯೋಜನೆಯ ಸದಸ್ಯ ರಾಷ್ಟ್ರಗಳಾಗಿವೆ. ರಸ್ತೆ, ರೈಲು, ಸೇತುವೆ, ವಿದ್ಯುತ್‌ ಸ್ಥಾವರ, ಬಂದರುಗಳನ್ನು ಈ ಯೋಜನೆಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ. ಸದಸ್ಯ ರಾಷ್ಟ್ರಗಳಲ್ಲ ಲ್ಯಾಟಿನ್‌ ಅಮೆರಿಕ, ಯುರೋಪ್‌, ಏಷ್ಯಾ, ಆಫ್ರಿಕಾ ದೇಶಗಳೇ ಅಧಿಕವಾಗಿವೆ.

     

    ಭಾರತ, ಅಮೆರಿಕ ವಿರೋಧ:
    ವಿಶ್ವದ ಹಲವು ರಾಷ್ಟ್ರಗಳು ಸೇರ್ಪಡೆಯಾದರೂ ಭಾರತ (India) ಮತ್ತು ಅಮೆರಿಕ (USA) ಈ ಯೋಜನೆಯನ್ನು ವಿರೋಧಿಸುತ್ತಾ ಬಂದಿದೆ. ಇದು ದೇಶಗಳನ್ನು ಸಾಲದ ಸುಳಿಗೆ ಸಿಲುಕಿಸುವ ಯೋಜನೆ ಎಂದೇ ಭಾರತ ಬಣ್ಣಿಸಿದೆ. ಈ ಯೋಜನೆಯ ಭಾಗವಾಗಿದ್ದ ಪಾಕಿಸ್ತಾನ ಮತ್ತು ಶ್ರೀಲಂಕಾ ಈಗಾಗಲೇ ಸಮಸ್ಯೆ ಎದುರಿಸುತ್ತಿದೆ.

    ಚೀನಾ ಪಾಕಿಸ್ತಾನ ಎಕಾನಮಿಕ್‌ ಕಾರಿಡಾರ್‌ ಹೆಸರಿನಲ್ಲಿ ಸಾಲ ಪಡೆದುಕೊಂಡಿತ್ತು. ಸದ್ಯ ಅಂದಾಜು 30 ಬಿಲಿಯನ್‌ ಡಾಲರ್‌ ಹಣವನ್ನು ಪಾಕಿಸ್ತಾನ ಚೀನಾಗೆ ಪಾವತಿ ಮಾಡಬೇಕಿದೆ. ಚೀನಾ ಹಣವನ್ನು ಪಾವತಿ ಮಾಡಲು ಕನಿಷ್ಟ 40 ವರ್ಷ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಶ್ರೀಲಂಕಾದ ಹಂಬನ್‌ತೋಟ ಬಂದರನ್ನು ಚೀನಾ ಸಹಕಾರದಿಂದ ಅಭಿವೃದ್ಧಿ ಪಡಿಸಲಾಗಿದೆ. ಅಭಿವೃದ್ಧಿ ಪಡಿಸಿದರೂ ನಿರೀಕ್ಷಿತ ಪ್ರಮಾಣದ ಲಾಭವಾಗಿಲ್ಲ. ಸಾಲ ಮರುಪಾವತಿ ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ 2017ರಲ್ಲಿ 99 ವರ್ಷಗಳ ಕಾಲ ಚೀನಾದ ಚೀನಾ ಮರ್ಚೆಂಟ್‌ ಪೋರ್ಟ್‌ ಹೋಲ್ಡಿಂಗ್‌ ಲೀಸ್‌ಗೆ ನೀಡಲಾಗಿದೆ.

    ಪಾಕಿಸ್ತಾನ, ಶ್ರೀಲಂಕಾ ಮಾತ್ರವಲ್ಲ ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡ, ಮಲೇಷ್ಯಾ, ಮಾಲ್ಡೀವ್ಸ್‌ ಸೇರಿದಂತೆ ಹಲವು ದೇಶಗಳು ಸಾಲದ ಸುಳಿಯಲ್ಲಿ ಸಿಲುಕಿವೆ. ಈ ಕಾರಣಕ್ಕೆ ಒನ್‌ ರೋಡ್‌, ಒನ್‌ ಬೆಲ್ಟ್‌ ಈಗ Debt-trap Diplomacy ಎಂದೇ ಕುಖ್ಯಾತಿ ಪಡೆದಿದೆ.

     

  • ಪ್ರಭಾಸ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಹೈದರಾಬಾದ್ ಗೆ ವಾಪಸ್

    ಪ್ರಭಾಸ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಹೈದರಾಬಾದ್ ಗೆ ವಾಪಸ್

    ತೆಲುಗಿನ ಖ್ಯಾತ ನಟ ಪ್ರಭಾಸ್ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಶಸ್ತ್ರ ಚಿಕಿತ್ಸೆಗಾಗಿ ಅವರು ಇಟಲಿಗೆ (Italy) ಹಾರಿದ್ದರು. ಇದೀಗ ಯಶಸ್ವಿ ಶಸ್ತ್ರ ಚಿಕಿತ್ಸೆ (Surgery) ನೆರವೇರಿದ್ದು, ಚಿಕಿತ್ಸೆ ನಂತರ ಹೈದರಾಬಾದ್ (Hyderabad) ಗೆ ವಾಪಸ್ಸು ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳು ನೆಚ್ಚಿನ ನಟ ಕಂಡು ಸಂಭ್ರಮಿಸಿದ್ದಾರೆ.

    ಕನಸಿನ ಸಿನಿಮಾ ರಿಲೀಸ್

    ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ.

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

    ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films)  ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

    ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳೇ ಹೇಳಿಕೊಂಡಿವೆ.

     

    ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ರೆಡಿಯಾಗಿದೆ.

  • ನಟಿ ಗಾಯತ್ರಿ ಜೋಶಿ ಕಾರು ಅಪಘಾತ: ವೃದ್ಧ ದಂಪತಿ ಸಾವು

    ನಟಿ ಗಾಯತ್ರಿ ಜೋಶಿ ಕಾರು ಅಪಘಾತ: ವೃದ್ಧ ದಂಪತಿ ಸಾವು

    ಬಾಲಿವುಡ್ ಖ್ಯಾತ ನಟಿ ಗಾಯತ್ರಿ ಜೋಶಿ (Gayatri Joshi) ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಪ್ರಯಾಣಿಸುತ್ತಿದ್ದ ಕಾರು ಇಟಲಿಯಲ್ಲಿ ಅಪಘಾತವಾಗಿದೆ. ವರದಿಗಳ ಪ್ರಕಾರ ಈ ರಸ್ತೆ ಅಪಘಾತದಲ್ಲಿ ವೃದ್ದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಾಹಿತಿಯನ್ನು ಸ್ವತಃ ನಟಿಯೇ ಹಂಚಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ‘ನಾನು ಮತ್ತು ನನ್ನ ಪತಿ ವಿಕಾಸ್ ಇದೀಗ ಇಟಲಿಯಲ್ಲಿ ಇದ್ದೇವೆ. ನಾನು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಇದೊಂದು ಸರಣಿಯ ಅಪಘಾತವಾಗಿದ್ದು, ನಾನು ಸುರಕ್ಷಿತರಾಗಿದ್ದೇವೆ’ ಎಂದು ಗಾಯತ್ರಿ ಅವರು ಹೇಳಿಕೆ ನೀಡಿದ್ದಾರೆ.  ಈ ಸರಣಿಯ ಅಪಘಾತದಲ್ಲಿ ಫೆರಾರಿ ಕಾರಿಗೆ ಬೆಂಕಿ ಹೊತ್ತಿಕೊಂಡು ಸ್ವಿಸ್ ದಂಪತಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

     

    ಶಾರುಖ್ ಖಾನ್ ನಟನಯ ಸ್ವದೇಸ್ ಚಿತ್ರದಲ್ಲಿ ನಟಿಸಿದ್ದ ಗಾಯತ್ರಿ, ಆನಂತರ ಮಾಡಲಿಂಗ್ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮಿಸ್ ಇಂಡಿಯಾ ಸೇರಿದಂತೆ ಹಲವು ಸ್ಪರ್ಧೆಗಳಲ್ಲೂ ಭಾಗವಹಿಸಿದವರು. ನಂತರ ಸಿನಿಮಾ ರಂಗದಿಂದಲೇ ದೂರವಾಗಿ ಉದ್ಯಮಿ ವಿಕಾಸ್ ಒಬೆರಾಯ್ ಅವರನ್ನು ಮದುವೆಯಾದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್‌ – 21 ಮಂದಿ ಸಾವು

    ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್‌ – 21 ಮಂದಿ ಸಾವು

    ರೋಮ್: ಇಟಾಲಿಯನ್ (Italy) ನಗರದ ವೆನಿಸ್ ಬಳಿಯ ಮೇಲ್ಸೇತುವೆಯಿಂದ (Venice Bridge) ಬಸ್ ಕೆಳಗೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ.

    ಸೇತುವೆಯ ಮೂಲಕ ವೆನಿಸ್‌ಗೆ ಸಂಪರ್ಕ ಕಲ್ಪಿಸುವ ಮೆಸ್ಟ್ರೆ ಜಿಲ್ಲೆಯ ರೈಲ್ವೆ ಹಳಿಗಳ ಬಳಿ ತಡೆಗೋಡೆ ಮುರಿದು ಬಸ್ ಪಲ್ಟಿಯಾಗಿದೆ. ದುರಂತದಲ್ಲಿ ಮೃತಪಟ್ಟವರ ಪೈಕಿ ಐವರು ಉಕ್ರೇನಿಯನ್ನರು, ಒಬ್ಬ ಜರ್ಮನ್ ಮತ್ತು ಇಟಾಲಿಯನ್ ಚಾಲಕ ಸೇರಿದ್ದಾರೆ. ಇದನ್ನೂ ಓದಿ: Asian Games 2023: 5000 ಮೀ. ಓಟದಲ್ಲಿ ಪಾರುಲ್‌ ಪ್ರಚಂಡ ಗೆಲುವು – ವನಿತೆಯರ ಬಂಗಾರದ ಬೇಟೆ

    ವೆನಿಸ್ ಮತ್ತು ಹತ್ತಿರದ ಮಾರ್ಗೇರಾ ಜಿಲ್ಲೆಯ ಕ್ಯಾಂಪ್‌ಸೈಟ್ ನಡುವೆ ಪ್ರವಾಸಿಗರನ್ನು ಬಸ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ರಾತ್ರಿ 7:45 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ದುರಂತಕ್ಕೆ ವೆನಿಸ್ ಮೇಯರ್ ಲುಯಿಗಿ ಬ್ರುಗ್ನಾರೊ ವಿಷಾದ ವ್ಯಕ್ತಪಡಿಸಿದ್ದಾರೆ.

    ಬಸ್ ಮಿಥೇನ್ ಅನಿಲದಿಂದ ಚಾಲಿತವಾಗಿದೆ. ಮೇಲ್ಸೇತುವೆಯಿಂದ ವಿದ್ಯುತ್ ತಂತಿಗಳ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಆಂತರಿಕ ಸಚಿವ ಮ್ಯಾಟಿಯೊ ಪಿಯಾಂಟೆಡೋಸಿ ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಕರಿಗೆ ಚಾಕ್ಲೇಟ್‌ ಆಸೆ ತೋರಿಸಿ ಅತ್ಯಾಚಾರ; ಹುಬ್ಬಳ್ಳಿಯಲ್ಲಿ ವಿಕೃತ ಸಲಿಂಗಕಾಮಿ ಬಂಧನ

    ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಕರ್ತರು ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಕನಿಷ್ಠ 18 ಜನರು ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂರು ತಿಂಗಳು ಸೂರ್ಯ ಉದಯಿಸದ ಊರಿಗೆ, ಸೂರ್ಯನನ್ನು ತಂದ ಕಥೆ!

    ಮೂರು ತಿಂಗಳು ಸೂರ್ಯ ಉದಯಿಸದ ಊರಿಗೆ, ಸೂರ್ಯನನ್ನು ತಂದ ಕಥೆ!

    ಒಂದು ದಿನ ಸೂರ್ಯನೇ (Sun) ಉದಯಿಸುವುದಿಲ್ಲ. ನಿಮ್ಮ ಊರಿನಲ್ಲಿ ಹೀಗಾದರೆ ಒಮ್ಮೆ ಊಹಿಸಿ. ಈ ರೀತಿಯ ಒಂದು ಊರಿದೆ, ಅಲ್ಲಿ ವರ್ಷದ ಮೂರು ತಿಂಗಳು ಸೂರ್ಯನೇ ಉದಯಿಸುವುದಿಲ್ಲ. ಆದರೂ ಅವರು ಹರಸಾಹಸಪಟ್ಟು ಸೂರ್ಯನನ್ನು ಎಳೆದು ತಮ್ಮೂರಿಗೆ ಕೊಂಡೊಯ್ಯುವ ಪ್ರಯತ್ನ ಮಾಡಿ ಗೆದ್ದಿದ್ದಾರೆ. ಹೌದು!

    ವಿಗಾನೆಲ್ಲಾ (Viganella) ಇದು ಇಟಲಿಯ (Italy) ಒಂದು ಹಳ್ಳಿ. ಈ ಹಳ್ಳಿ ಮೂರು ತಿಂಗಳು ಸೂರ್ಯನನ್ನು ನೊಡುತ್ತಲೇ ಇರಲಿಲ್ಲ. ಯಾಕೆ ಗೊತ್ತಾ? ಈ ಗ್ರಾಮ ಆಳವಾದ ಕಣಿವೆಯ ಕೆಳಭಾಗದಲ್ಲಿದೆ. ಅಲ್ಲದೇ ಸೂರ್ಯ ತನ್ನ ಪಥವನ್ನು ಬದಲಿಸುವುದರಿಂದ ಚಳಿಗಾಲದಲ್ಲಿ ಸೂರ್ಯನ ಬೆಳಕು ಇಲ್ಲಿ ಬೀಳುತ್ತಲೇ ಇರಲಿಲ್ಲ. ಹೀಗಾಗಿ ಮೂರು ತಿಂಗಳು ಇಲ್ಲಿನ ಜನ ಕತ್ತಲೆಯಲ್ಲೇ ಕಳೆಯುತ್ತಿದ್ದರು.

    ಆದರೆ ಈಗ ಕೆಲವು ಬುದ್ದಿವಂತ ಎಂಜಿನಿಯರ್‌ಗಳು ಮತ್ತು ವಾಸ್ತುಶಿಲ್ಪಿಗಳು ಸೂರ್ಯನನ್ನು ತಮ್ಮೂರಿಗೆ ಕೊಂಡೊಯ್ಯುವ ಪ್ರಯತ್ನದಲ್ಲಿ ಸಫಲರಾಗಿದ್ದಾರೆ. ಅದು ಹೇಗೆ ಗೊತ್ತಾ? ಅವರೆಲ್ಲ ಸೇರಿ ದೊಡ್ಡ ಕನ್ನಡಿಯನ್ನು ಬೆಟ್ಟದ ಮೇಲೆ ಇರಿಸಿ ಪ್ರತಿಫಲನದ ಮೂಲಕ ತಮ್ಮ ಹಳ್ಳಿಗೆ ಸೂರ್ಯನ ಬೆಳಕನ್ನು ಪಡೆದುಕೊಳ್ಳುತ್ತಿದ್ದಾರೆ. ಇದೇ ವಿಚಾರದಿಂದ ಈ ಪುಟ್ಟ ಹಳ್ಳಿ ಜಗತ್ತಿಗೆ ಪರಿಚಯವಾಗಿದೆ.

    ಇತಿಹಾಸದ ದಾಖಲೆಗಳ ಪ್ರಕಾರ ಈ ಪ್ರದೇಶದಲ್ಲಿ 13 ನೇ ಶತಮಾನದಷ್ಟು ಹಿಂದೆಯೇ ಜನ ಇಲ್ಲಿ ನೆಲೆಸಿದ್ದಾರೆ. ಅಂದರೆ ಸ್ಥಳೀಯ ತಲೆಮಾರುಗಳು 800 ಕ್ಕೂ ಹೆಚ್ಚು ಚಳಿಗಾಲವನ್ನು ಕತ್ತಲೆಯಲ್ಲಿ ಕಳೆದಿವೆ. ಪ್ರತಿ ವರ್ಷ ಈ ಊರು ನವೆಂಬರ್ 11 ರಂದು ತನ್ನ ಕೊನೆಯ ಸೂರ್ಯಾಸ್ತವನ್ನು ನೋಡುತ್ತದೆ ಮತ್ತು ಫೆಬ್ರವರಿ 2 ರಂದು ಮತ್ತೆ ಸೂರ್ಯನ ಕಿರಣಗಳನ್ನು ಪಡೆದುಕೊಳಗ್ಳುತ್ತದೆ. ಆ ದಿನ ಅಲ್ಲಿನ ನಿವಾಸಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುತ್ತಾರೆ. ಸೂರ್ಯನ ಆಗಮನವನ್ನು ಹಬ್ಬದಂತೆ ಆಚರಿಸುತ್ತಾರೆ.

    1999 ರಲ್ಲಿ ಸ್ಥಳೀಯ ವಾಸ್ತುಶಿಲ್ಪಿ ಜಿಯಾಕೊಮೊ ಬೊಂಜಾನಿ ಚರ್ಚ್ ಮುಂಭಾಗದಲ್ಲಿ ಕನ್ನಡಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ್ದರು. ಆದರೆ ಆಗಿನ ಮೇಯರ್ ಫ್ರಾಂಕೊ ಮಿಡಾಲಿ ಈ ಕಲ್ಪನೆಯನ್ನು ತಳ್ಳಿಹಾಕಿದ್ದರು. ಆದರೆ ಇದನ್ನು ಕಾರ್ಯರೂಪಕ್ಕೆ ತರಲು ಸಹಾಯಕ್ಕೆ ನಿಂತರು. ಬಳಿಕ ಕಲ್ಪನೆ 2006 ರ ಡಿಸೆಂಬರ್ 17 ರಂದು ರಂದು ವಾಸ್ತವವಾಗಿ ಎದುರು ನಿಂತಿತು. ಇಂಜಿನಿಯರ್ ಗಿಯಾನಿ ಫೆರಾರಿಯ ಸಹಾಯದಿಂದ ಕನ್ನಡಿಯನ್ನು ಬೋಜಾನಿ ಎಂಬುವವರು ವಿನ್ಯಾಸಗೊಳಿಸಿದ್ದಾರೆ. ಈ ಯೋಜನೆಗೆ ಸುಮಾರು 82 ಲಕ್ಷ ರೂ.ಗಳಷ್ಟು ವೆಚ್ಚ ತಗುಲಿದೆ. ಎಂಟು ಮೀಟರ್ ಅಗಲ ಮತ್ತು ಐದು ಮೀಟರ್ ಎತ್ತರ ಇರುವ ಇದು ದಿನಕ್ಕೆ ಆರು ಗಂಟೆಗಳ ಕಾಲ ಸೂರ್ಯನ ಬೆಳಕನ್ನು ನೀಡುತ್ತದೆ. ಪ್ರತಿಫಲಿತ ಬೆಳಕು ಸಹಜವಾಗಿ, ನೇರ ಸೂರ್ಯನ ಬೆಳಕಿನಂತೆ ಶಕ್ತಿಯುತವಾಗಿಲ್ಲ. ಆದರೆ ಊರನ್ನು ಬೆಚ್ಚಗಿಡಲು ಮತ್ತು ಮನೆಗಳಿಗೆ ನೈಸರ್ಗಿಕ ಸೂರ್ಯನ ಬೆಳಕನ್ನು ನೀಡಲು ಇದು ಸಾಕಾಗಿದೆ. ಈ ಕನ್ನಡಿಯನ್ನು ಚಳಿಗಾಲದಲ್ಲಿ ಮಾತ್ರ ಬಳಸಲಾಗುತ್ತದೆ. ಬಳಿಕ ವರ್ಷದ ಉಳಿದ ದಿನಗಳಲ್ಲಿ ಮುಚ್ಚಲಾಗುತ್ತದೆ.

    ಇದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದ ನಾರ್ವೆಯ ರ್ಜುಕಾನ್ ಪಟ್ಟಣಕ್ಕೂ ಇದು ಮಾದರಿಯಾಗಿದೆ. 2013 ರಲ್ಲಿ ಇಂಜಿನಿಯರ್‌ಗಳ ಗುಂಪು ಇದನ್ನು ಅಧ್ಯಯನ ಮಾಡಲು ವಿಗಾನೆಲ್ಲಾಗೆ ಭೇಟಿ ನೀಡಿತ್ತು. ನಂತರ ಇದೇ ರೀತಿಯ ಕನ್ನಡಿಯನ್ನು ರ್ಜುಕಾನ್‌ನಲ್ಲಿ ಸ್ಥಾಪಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಗಸ್ಟ್ 24ಕ್ಕೆ ಇಟಲಿಯಲ್ಲಿ ವರುಣ್-ಲಾವಣ್ಯ ಮ್ಯಾರೇಜ್

    ಆಗಸ್ಟ್ 24ಕ್ಕೆ ಇಟಲಿಯಲ್ಲಿ ವರುಣ್-ಲಾವಣ್ಯ ಮ್ಯಾರೇಜ್

    ಟಾಲಿವುಡ್ ಹೆಸರಾಂತ ನಟ ವರುಣ್ ತೇಜ್ (Varun Tej) ಹಾಗೂ ಬಹುಕಾಲದ ಗೆಳತಿ ಲಾವಣ್ಯ (Lavanya) ಮದುವೆ (Marriage) ಆಗಸ್ಟ್ 24 ರಂದು ಇಟಲಿಯಲ್ಲಿ (Italy) ನಡೆಯಲಿದೆ ಎಂದು ಹೇಳಲಾಗುತ್ತಿದೆ. ಇಟಲಿಯ ಸುಂದರವಾದ ಸ್ಥಳವನ್ನು ಈಗಾಗಲೇ ಗೊತ್ತು ಮಾಡಲಾಗಿದ್ದು, ಕುಟುಂಬಸ್ಥರು ಮತ್ತು ಆಪ್ತರಷ್ಟೇ ಈ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರಂತೆ. ಮೊನ್ನೆಯಷ್ಟೇ ವರುಣ್ ಭಾವಿ ಪತ್ನಿಯ ಮನೆಗೆ ಕಾಫಿಗೆ ಹೋಗಿದ್ದರು. ಅಲ್ಲಷ್ಟು ವಿಷಯಗಳ ವಿನಿಮಯವಾಗಿವೆ.

    ಹಲವು ವರ್ಷಗಳ ಪ್ರೀತಿಗೆ ಉಂಗುರದ ಮುದ್ರೆ ಒತ್ತುವ ಮೂಲಕ ಲಾವಣ್ಯ- ವರುಣ್ ತೇಜ್ ಎಂಗೇಜ್ ಆಗಿದ್ದರು. ಈಗ ಈ ಲವ್ ಬರ್ಡ್ಸ್ ಫಾರಿನ್‌ಗೆ ಹಾರಿದ್ದಾರೆ. ಭಾವಿ ಪತ್ನಿ ಲಾವಣ್ಯ ಜೊತೆ ವರುಣ್ ಕಾಫಿ ಡೇಟ್ ಮಾಡ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ವೇಕೆಷನ್‌ಗೆ ವರುಣ್ ಸಹೋದರಿ ನಿಹಾರಿಕಾ ಕೂಡ ಸಾಥ್ ನೀಡಿದ್ದಾರೆ.

    ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2017ರಲ್ಲಿ ಇಬ್ಬರು `ಮಿಸ್ಟರ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದರು. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ‘ಅಂತರಿಕ್ಷಂ’ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು. ಅಲ್ಲಿಂದ ಇಬ್ಬರ ಡೇಟಿಂಗ್ ಸುದ್ದಿ ಚಾಲ್ತಿಗೆ ಬಂದಿತ್ತು. ಇದನ್ನೂ ಓದಿ:ಜುಲೈ 23ಕ್ಕೆ ವಿಶ್ವಕುಂದಾಪ್ರ ಕನ್ನಡ ದಿನಕ್ಕೆ ಸಿಎಂ, ರಿಷಬ್ ಶೆಟ್ಟಿ- ಪ್ರಮೋದ್ ಶೆಟ್ಟಿ ಸಾಥ್

    ಆಗಾಗ ವರುಣ್, ಲಾವಣ್ಯ ಇಬ್ಬರೂ ಹಲವು ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಇದು ಗಾಳಿಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ವರುಣ್, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಹೀಗಾಗಿ ಡಿಸೆಂಬರ್ 15 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ.

     

    ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದಾರೆ. ಜೂನ್ 9ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದರು. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಸದ್ಯ ಎಂಗೇಜ್ ಆಗಿರುವ ಈ ಜೋಡಿ ಈ ವರ್ಷದ ಅಂತ್ಯದಲ್ಲಿ ಮದುವೆ ಆಗಲಿದ್ದಾರೆ. ಎಂಗೇಜ್‌ಮೆಂಟ್‌ನಲ್ಲಿ ನಟಿ ಲಾವಣ್ಯ ಗಿಳಿ ಹಸಿರು ಸೀರೆಯಲ್ಲಿ ಮಿಂಚಿದ್ರೆ, ವರುಣ್ ಗೋಲ್ಡನ್ ಬಣ್ಣದ ಶೆರ್ವಾನಿಯಲ್ಲಿ ಹೈಲೆಟ್ ಆಗಿದ್ದಾರೆ. ನನ್ನ ಪ್ರೀತಿಯನ್ನ 2016ರಲ್ಲಿಯೇ ಕಂಡುಕೊಂಡಿದ್ದೆ ಎಂದು ನಟಿ ನಿಶ್ಚಿತಾರ್ಥದ ಫೋಟೋ ಸಮೇತ ಪೋಸ್ಟ್ ಮಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]