Tag: ಇನೋವಾ ಕಾರು

  • ನಿಂತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ- ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ನಿಂತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ- ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಝೆನ್ ಕಾರೊಂದು ರಸ್ತೆ ಮಧ್ಯೆಯೇ ಪಲ್ಟಿಯೊಡೆದು, ಸುಮಾರು 50 ಮೀಟರ್‌ನಷ್ಟು ದೂರ ಹೋಗಿ ಬಿದ್ದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹ್ಯಾಂಡ್‍ಪೋಸ್ಟ್ ಸಮೀಪದ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

    ಬಾಂಬ್ ಬ್ಲಾಸ್ಟ್ ಆದಂತೆ ಶಬ್ಧ ಬಂದು ಧೂಳೆದ್ದಿರೋದನ್ನ ಗಮನಿಸಿದರೆ ನೋಡುಗರಿಗೆ ಎದೆ ಝಲ್ ಎನ್ನುವಂತಿದೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಝೆನ್ ಕಾರು ಪಲ್ಟಿಯಾದ ರಭಸಕ್ಕೆ ಉರುಳಿಕೊಂಡು ಹೋಗಿ ನಿಂತಿದ್ದ ಇನ್ನೊವಾ ಕಾರಿ ಡಿಕ್ಕಿಯೊಡೆದಿದೆ. ಎರಡು ಕಾರು ಕೂಡ ಬಹುತೇಕ ಜಖಂ ಆಗಿವೆ.

    ಹ್ಯಾಂಡ್ ಪೋಸ್ಟ್ ಸಮೀಪದ ಕೃಷ್ಣಾಪುರ ಗ್ರಾಮದ ಹಾರ್ಡ್‍ವೇರ್ ಅಂಗಡಿ ಬಳಿ ನಿಂತಿದ್ದ ಇನೋವಾ ಕಾರಿಗೆ ಝೆನ್ ಡಿಕ್ಕಿಯೊಡೆದಿದೆ. ಇನೋವಾ ಕಾರು ಹಾರ್ಡ್‍ವೇರ್ ಮಾಲೀಕನಿಗೆ ಸೇರಿದ್ದು. ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರಿನ ಅಕ್ಕಪಕ್ಕ ಅದೃಷ್ಟವಶಾತ್ ಯಾರೂ ಇರಲಿಲ್ಲ. ಇದ್ದಿದ್ದರೆ ಭಾರೀ ದೊಡ್ಡ ಪ್ರಮಾಣದ ಅನಾಹುತ ಸಂಭವಿಸಿರುತ್ತಿತ್ತು. ಇದನ್ನೂ ಓದಿ: ಡಿಕೆಶಿ ಗೂಂಡಾ, ಸಿದ್ದರಾಮಯ್ಯ ಜಾತಿವಾದಿ: ಈಶ್ವರಪ್ಪ

    ಸಿಸಿಟಿವಿಯಲ್ಲಿ ಸೆರೆಯಾಗಿರೋ ಈ ಭಯಾನಕ ದೃಶ್ಯವನ್ನ ನೋಡಿದರೆ ಸಿನಿಮಾ ಚಿತ್ರೀಕರಣದ ವೇಳೆ ಡೂಪ್ ಮಾಡುವಂತೆ ಕಾಣುತ್ತದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನ ಚಾಲಕನಿಗೆ ತುಸು ಹೆಚ್ಚಾಗಿ ಗಾಯವಾಗಿದ್ದು, ಆತನನ್ನ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗಂಡನ ವೀರ್ಯವನ್ನು ಕೇಕ್‍ನಲ್ಲಿ ಮಿಕ್ಸ್ ಮಾಡಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಶಿಕ್ಷಕಿಗೆ 40 ವರ್ಷ ಜೈಲು

  • ಬೆಳಗಾವಿಯಲ್ಲಿ ಇನೋವಾ ಕಾರು ಪಲ್ಟಿ: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ಬೆಳಗಾವಿಯಲ್ಲಿ ಇನೋವಾ ಕಾರು ಪಲ್ಟಿ: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ಬೆಳಗಾವಿ: ತಾಲೂಕಿನ ವಂಟಮೂರಿ ಗ್ರಾಮದ ಬಳಿ ಗುರುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇನೋವಾ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

    ತಾಲೂಕಿನ ವಂಟಮೂರಿ ಘಾಟ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದ್ದು. ಇಜಾಜ್ ಪಠಾಣ, ವಿನಾಯಕ ಪಿರಾಜೆ, ವಿಶ್ವನಾಥ, ಸುಶಾಂತ ಮಾನೆ ಮೃತ ದುರ್ದೈವಿಗಳು.

    ಘಟನೆಯಲ್ಲಿ ಓಂಕಾರ ಜಮಖಂಡಿ ಹಾಗೂ ವಿಶ್ವನಾಥ ಗಂಭೀರವಾಗಿ ಗಾಯಗೊಂಡಿದ್ದು ಕೆಎಲ್‍ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಎಲ್ಲರೂ ಮೂಲತಃ ಚಿಕ್ಕೋಡಿ ನಿವಾಸಿಗಳೆಂದು ಗುರುತಿಸಲಾಗಿದ್ದು, ಚಿಕ್ಕೋಡಿಯ ಕೆಎಲ್‍ಇ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.

    ಅಂಬೋಲಿಯಿಂದ ಚಿಕ್ಕೋಡಿಗೆ ಹೊರಟ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗಯಜ್ಜಾಗಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಶೀಲನೆ ನಡೆಸಿದರು.