Tag: ಇನ್ಸುರೆನ್ಸ್

  • ಬಾರ್ ಪಕ್ಕದಲ್ಲೇ ಕುಡುಕರ ವಿಶ್ರಾಂತಿ ಭವನ ಮಾಡ್ಬೇಕು – ಮದ್ಯಪಾನ ಪ್ರಿಯರ ಸಂಘದ ಹೈಟೆಕ್‌ ಬೇಡಿಕೆಗಳೇನು?

    ಬಾರ್ ಪಕ್ಕದಲ್ಲೇ ಕುಡುಕರ ವಿಶ್ರಾಂತಿ ಭವನ ಮಾಡ್ಬೇಕು – ಮದ್ಯಪಾನ ಪ್ರಿಯರ ಸಂಘದ ಹೈಟೆಕ್‌ ಬೇಡಿಕೆಗಳೇನು?

    – ಪ್ರತಿ ಬಾರ್‌ ಮುಂದೆ ಅಂಬುಲೆನ್ಸ್ ಸೇವೆ ನೀಡಬೇಕು, ಬಾಟಲಿಗೆ ವಿಮೆ ಕೊಡಬೇಕು
    – `ನಿತ್ಯ ದುಡಿ, ಸತ್ಯ ನುಡಿ, ಸ್ವಲ್ಪ ಕುಡಿ, ಮನೆಗೆ ನಡಿ’ ಘೋಷವಾಕ್ಯದೊಂದಿಗೆ ಪ್ರತಿಭಟನೆ
    – ಮದ್ಯಪಾನ ಪ್ರಿಯರ ಬೇಡಿಕೆ ಕೇಳಿ ಸಚಿವರು ಸುಸ್ತೋಸುಸ್ತು

    ಬೆಳಗಾವಿ: ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ (Habitual Drinkers Association) ಸದಸ್ಯರು ಬೆಳಗಾವಿಯಲ್ಲಿ (Belagavi) ಪ್ರತಿಭಟನೆ ನಡೆಸಿದ್ದಾರೆ.

    ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. `ನಿತ್ಯ ದುಡಿ, ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಘೋಷವಾಕ್ಯದೊಂದಿಗೆ ಮದ್ಯಪಾನ ಪ್ರಿಯರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ಪರವಾಗಿ ಸಚಿವ ಸಂತೋಷ್ ಲಾಡ್ (Santosh Lad) ಪ್ರತಿಭಟನಾಕಾರರ ಬೇಡಿಕೆಗಳನ್ನ ಆಲಿಸಿ, ಮನವಿ ಸ್ವೀಕರಿಸಿದ್ದಾರೆ. ಈ ವೇಳೆ ಬೇಡಿಕೆಗಳನ್ನ ಕೇಳಿ ಫುಲ್‌ ಸುಸ್ತಾಗಿದ್ದಾರೆ. ಇದನ್ನೂ ಓದಿ: ಅಲಹಾಬಾದ್ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟಗೊಂಡು ವಿದ್ಯಾರ್ಥಿಗೆ ಗಾಯ

    ಮದ್ಯಪಾನ ಪ್ರಿಯರ ಬೇಡಿಕೆಗಳು ಏನೇನು?
    ಪ್ರತಿವರ್ಷ ಡಿಸೆಂಬರ್ 31ರ ದಿನವನ್ನು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡಬೇಕು. ಅಂದು ಎಲ್ಲಾ ರೀತಿಯ ಬಾರ್ , ರೆಸ್ಟೋರೆಂಟ್‌ನಲ್ಲಿ 50% ರಿಯಾಯಿತಿ ನೀಡಬೇಕು. ʻಕುಡುಕʼ ಎಂಬ ಪದಬಳಕೆ ನಿಷೇಧ ಮಾಡಬೇಕು, ಮದ್ಯಪಾನ ಪ್ರಿಯರ ಅಭಿವೃದ್ಧಿ ನಿಗಮ ಆರಂಭಿಸಿ 10% ಅನುದಾನ ನೀಡಬೇಕು. ಪ್ರತಿ ಬಾಟಲಿಗೆ ವಿಮೆ (Insurance) ನೀಡಬೇಕು, ಪ್ರತಿ ಬಾರ್ ಮುಂದೆ ಅಂಬುಲೆನ್ಸ್ ಸೇವೆ ನೀಡಬೇಕು. ಬಾರ್ ಪಕ್ಕದಲ್ಲಿ ಕುಡುಕರ ವಿಶ್ರಾಂತಿಗಾಗಿ ಭವನ ನಿರ್ಮಾಣ ಮಾಡಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ ಜನ್ಮಭೂಮಿ ವಿವಾದ – ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಹೈಕೋರ್ಟ್‌ ಅನುಮತಿ

    ಮದ್ಯಪಾನ ಪ್ರಿಯರ ಆರೋಗ್ಯ ಹಾಳಾಗುತ್ತಿದೆ. ಲಿವರ್ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ಬಿಲ್ ಪಾವತಿಸಲಾಗದೇ ಮರಣ ಹೊಂದುವ ಪರಿಸ್ಥಿತಿ ಬರುತ್ತಿದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ಆಗುವ ಖರ್ಚನ್ನು ಸರ್ಕಾರವೇ ಭರಿಸಬೇಕು. ಮದ್ಯಪಾನ ಪ್ರಿಯರಿಂದ ವಾರ್ಷಿಕವಾಗಿ 36,000 ಕೋಟಿ ರೂ. ಆದಾಯ ಸರ್ಕಾರಕ್ಕೆ ಬರುತ್ತಿದೆ. ಕುಡುಕರಿಗೆ ಪ್ರತ್ಯೇಕ ನಿಧಿ ಸ್ಥಾಪಿಸಿ ಆದಾಯದ 10% ಹಣವನ್ನ ನಿಧಿಗೆ ಮೀಸಲಿಡಬೇಕು. ಮದ್ಯಪಾನ ಪ್ರಿಯರು ಮೃತಪಟ್ಟ ಸಂದರ್ಭದಲ್ಲಿ 10 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

  • ಕುಡಿತ ಹೆಚ್ಚಾದ್ರೆ ಬಾರ್‌ನಲ್ಲೇ ಮಲಗೋಕೆ ಬೆಡ್‌ ವ್ಯವಸ್ಥೆ ಮಾಡಿ – ಮದ್ಯಪಾನ ಪ್ರಿಯರ ಹೋರಾಟ ಸಂಘದ ಬೇಡಿಕೆಗಳೇನು?

    ಕುಡಿತ ಹೆಚ್ಚಾದ್ರೆ ಬಾರ್‌ನಲ್ಲೇ ಮಲಗೋಕೆ ಬೆಡ್‌ ವ್ಯವಸ್ಥೆ ಮಾಡಿ – ಮದ್ಯಪಾನ ಪ್ರಿಯರ ಹೋರಾಟ ಸಂಘದ ಬೇಡಿಕೆಗಳೇನು?

    ಹಾಸನ: ಮದ್ಯಪಾನ ಮಾಡುವವರಿಗೆ ಸರ್ಕಾರ ಸವಲತ್ತುಗಳನ್ನು ಒದಗಿಸುವಂತೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ (Habitual Drinkers Association) ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದ್ದಾರೆ.

    ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯ ಕುಡಿಯುವವರನ್ನು ಯಾರೂ ಕೂಡ ಕುಡುಕರು ಎನ್ನಬಾರದು. ಮದ್ಯಪ್ರಿಯರು ಎಂದು ಕರೆಯಬೇಕು. ಮದ್ಯಪಾನ ಪ್ರಿಯರಿಗೆ 1 ಲಕ್ಷ ಇನ್ಷೂರೆನ್ಸ್ ಸೌಲಭ್ಯ ಒದಗಿಸಬೇಕು. ಮದ್ಯ ಕುಡಿದು ಸಾವನ್ನಪ್ಪಿದರೆ ಆ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಫೆಬ್ರವರಿಯಲ್ಲಿ ಬಜೆಟ್ ಮಂಡನೆ: ಬೊಮ್ಮಾಯಿ

    ಮದ್ಯಪ್ರಿಯರಿಗೆ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು. ಕುಡಿದು ಹೆಚ್ಚಾಗಿ ಬಾರ್‌ನಲ್ಲಿ ಮಲಗಿದರೆ ಅವರನ್ನು ಆಚೆ ಕಳುಹಿಸಬಾರದು. ನಾಲ್ಕು ಗಂಟೆ ಅಲ್ಲೇ ವಿಶ್ರಾಂತಿ ಪಡೆಯಲು ವೈನ್‌ ಸ್ಟೋರ್‌ಗಳಲ್ಲಿ ಬೆಡ್‌ ವ್ಯವಸ್ಥೆ ಕಲ್ಪಿಸಿಕೊಡಬೇಕು. ಮದ್ಯಪಾನ ನಿಗಮ ಮಂಡಳಿ ರಚಿಸಬೇಕು. ಮದ್ಯಪಾನ ಪ್ರಿಯರಿಗೆ ನಿವೇಶನ ನೀಡುವುದು ಸೇರಿದಂತೆ ಹದಿನೆಂಟು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

    ಸರ್ಕಾರಕ್ಕೆ ನಮ್ಮಿಂದಲೇ ಶೇ.30 ಆದಾಯ ಬರುತ್ತಿದೆ. ಮದ್ಯ ಪ್ರಿಯರು ಕುಡಿದು ಮನೆಗೆ ಹೋಗಿ ಗಲಾಟೆ ಮಾಡಿದರೆ ಮಕ್ಕಳ ಓದಿಗೆ ತೊಂದರೆ ಆಗುತ್ತದೆ. ಹೀಗಾಗಿ ಕುಡುಕರ ಮಕ್ಕಳಿಗೆ ಹಾಸ್ಟೆಲ್‌ಗಳಲ್ಲಿ ಶೇ.10ರಷ್ಟು ಮೀಸಲಿಡಬೇಕು. ಕುಡಿತದಿಂದ ಎದುರಾಗುವ ಆರೋಗ್ಯ ಸಮಸ್ಯೆ ಹಾಗೂ ಕಿಡ್ನಿ, ಲಿವರ್‌ ತೊಂದರೆಯಿಂದ ಬಳಲುವವರಿಗೆ ಸರ್ಕಾರವೇ 4ರಿಂದ 5 ಲಕ್ಷ ವೈದ್ಯಕೀಯ ವೆಚ್ಚ ಭರಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಹಳೇ ಮೈಸೂರು ಭಾಗದ ಮೇಲೆ ಕಣ್ಣು- ಡಿ.30ಕ್ಕೆ ಮಂಡ್ಯದಲ್ಲಿ ಅಮಿತ್‌ ಶಾ ಸಮಾವೇಶ

    ಶೀಘ್ರದಲ್ಲಿಯೇ ಅಧಿಕೃತವಾಗಿ ಮದ್ಯಪಾನ ಪ್ರಿಯರ ಹೋರಾಟ ಸಂಘದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಸೇರಿದಂತೆ ಏಳೆಂಟು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಏರ್ ಶೋ ಅಗ್ನಿ ದುರಂತಕ್ಕೆ ವಿಮೆಗಾಗಿ ಯಲಹಂಕ ಆರ್​ಟಿಓ ಓಪನ್

    ಏರ್ ಶೋ ಅಗ್ನಿ ದುರಂತಕ್ಕೆ ವಿಮೆಗಾಗಿ ಯಲಹಂಕ ಆರ್​ಟಿಓ ಓಪನ್

    -ಸ್ಥಳದಲ್ಲೇ ಕೌಂಟರ್ ತೆಗೆದ ವಿಮೆ ಕಂಪನಿಗಳು

    ಬೆಂಗಳೂರು: ಬೆಂಗಳೂರಿನ ಯಲಹಂಕದ ಬಳಿಯ ಏರ್ ಶೋನಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 300ಕ್ಕೂ ಹೆಚ್ಚು ಕಾರುಗಳು ಭಸ್ಮವಾಗಿವೆ. ಇದೀಗ ವಾಹನ ಮಾಲೀಕರು ಕಣ್ಣೀರು ಹಾಕ್ತಿದ್ದಾರೆ. ಸಾಲ ಸೋಲ ಮಾಡಿ, ಇಎಂಐಗಳನ್ನ ಕಟ್ಟಿಕೊಂಡು ಬರ್ತಿದ್ದವರು ಅಯ್ಯೋ… ಹೀಗಾಗೋಯ್ತಲ್ಲ ಅಂತ ತಲೆ ಮೇಲೆ ಕೈ ಹೊತ್ತುಕೊಂಡಿದ್ದಾರೆ.

    ಏರ್ ಶೋನಲ್ಲಿ ಧಗಧಗಿಸಿ ಹೋದ ಕಾರ್ ಗಳು ಮಾಲೀಕರು ಇದೀಗ ಇನ್ಸುರೆನ್ಸ್ ಪಡೆಯೋಕೆ ಪರದಾಡುತ್ತಿದ್ದಾರೆ. ಆದ್ರೆ, ನ್ಯಾಚುರಲ್ ಡಿಸಾಸ್ಟರ್ ಅಂತ ಈ ಘಟನೆಯನ್ನು ಘೋಷಣೆ ಮಾಡಿದ್ರೆ ಬಹುತೇಕ ಎಲ್ಲಾ ವಾಹನಗಳಿಗೆ ಹಂಡ್ರೆಡ್ ಪರ್ಸೆಂಟ್ ವಿಮೆ ಸಿಗಲಿದೆ. ಹೀಗಾಗಿ, ವಿಮಾ ಕಂಪನಿಗಳು ಸಹ ಘಟನಾ ಸ್ಥಳದಲ್ಲೇ ಕೌಂಟರ್ ತೆಗೆದಿವೆ. ಸುಟ್ಟು ಹೋಗಿರುವ ಕಾರ್‍ಗಳನ್ನು ಪತ್ತೆ ಹಚ್ಚಿದ ಮಾಲೀಕರು ರಿಜಿಸ್ಟ್ರೇಷನ್ ನಂಬರ್ ಬರೆದಿದ್ದಾರೆ.

    ಇವತ್ತೂ ಸಹ ಯಲಹಂಕ ಆರ್ ಟಿಒ ಕಚೇರಿ ಓಪನ್ ಇರುತ್ತೆ. ವಾಹನ ನೊಂದಣಿ, ಚಾಲನಾ ಪತ್ರಗಳ ವಿವರಗಳನ್ನ ಪಡೆಯಲು ಸಾರಿಗೆ ಇಲಾಖೆ ಯಲಹಂಕದಲ್ಲಿ ಸಹಾಯ ಕೇಂದ್ರ ಆರಂಭಿಸಲಾಗಿದೆ. ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 080-29729908, ಮೊ. 9449864050 ಕಾರು ಮಾಲೀಕರು ಸಹಾಯ ಕೇಂದ್ರದ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

    ಇನ್ಸುರೆನ್ಸ್ ಗಾಗಿ ಏನೇನು ಮಾಡಬೇಕು..?
    * ವಾಹನ ಮಾಲೀಕರು ಮೊದಲು ಕಂಪ್ಲೆಂಟ್ ಕೊಡಬೇಕು.
    * ಆ ಕಂಪ್ಲೆಂಟ್ ಕಾಪಿಯನ್ನು ಇಟ್ಕೊಂಡು ವಿಮೆಗೆ ಅಪ್ಲೈ ಮಾಡಬೇಕು.
    * ಇನ್ಶುರೆನ್ಸ್ ಕಚೇರಿಗೆ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.
    * ಮೂಲ ದಾಖಲಾತಿ ಇಲ್ಲದಿದ್ದರೆ ನಕಲು ಪ್ರತಿಗಳನ್ನು ಸಲ್ಲಿಸಿ ಇನ್ಸುರೆನ್ಸ್ ಗೆ ಅರ್ಜಿ ಸಲ್ಲಿಸಿ.
    * ಮೂಲ ದಾಖಲಾತಿ ಕಳೆದುಹೋಗಿದ್ದರೆ ಆರ್ ಟಿಒ ಕಚೇರಿಗೆ ಭೇಟಿ ನೀಡಿ ನಕಲು ದಾಖಲಾತಿಗಳನ್ನು ಪಡೆದುಕೊಳ್ಳಿ.

    * ನಂತರ ಎಲ್ಲಾ ದಾಖಲಾತಿ ಸಮೇತ ಕಂಪ್ಲೆಂಟ್ ಕಾಪಿಯನ್ನು ಇನ್ಸುರೆನ್ಸ್ ಆಫೀಸ್ ಗೆ ಸಲ್ಲಿಸಿ.
    * ಆಗ ಇನ್ಸುರೆನ್ಸ್ ಕಂಪನಿ ಎಲ್ಲಾ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತದೆ.
    * ಒಂದು ವೇಳೆ ಹೊರ ರಾಜ್ಯದಲ್ಲಿ ನೋಂದಣಿಯಾಗಿದ್ದರೆ ಎಲ್ಲಿ ನೋಂದಣಿಯಾಗಿದೆ, ಕೊನೆಗೆ ಯಾರು ರಿಜಿಸ್ಟ್ರರ್ ಮಾಡಿದ್ರು ಅನ್ನೋ ದಾಖಲೆಯೊಂದಿಗೆ ಕಂಪ್ಲೆಂಟ್ ಕಾಪಿ ಸಮೇತ ವಿಮೆಗೆ ಅರ್ಜಿ ಸಲ್ಲಿಸಿ.
    * ಮೊದಲನೆಯದಾಗಿ ನಿಮ್ಮ ಇನ್ಸುರೆನ್ಸ್ ಕೊನೆಯಾಗಿರಬಾರದು. ಮಾನ್ಯವಾಗಿರಬೇಕು.
    * ಇನ್ಸುರೆನ್ಸ್ ನವೀಕರಣ ಆಗಿರಬೇಕು
    * ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಆರ್ ಟಿಒ ಕಚೇರಿಯಿಂದ ಒಂದೇ ಬಾರಿಗೆ ಅಪ್ರೂವಲ್ ಮಾಡೋ ಕ್ರಮದ ಭರವಸೆ.

    ಏರ್‍ಶೋ ಎಂದಿನ ವೇಳಾಪಟ್ಟಿಯಂತೆ ಇವತ್ತೂ ಮುಂದುವರಿಯಲಿದೆ. ಊಹಾಪೋಹಗಳಿಗೆ ಕಿವಿಕೊಡಬೇಡಿ ಅಂತಾ ಡಿಫೆನ್ಸ್ ಅಧಿಕಾರಿಗಳು ಹೇಳಿದ್ದಾರೆ. ದುರಂತರದ ಬಳಿಕ ಆಯೋಜಕರು ಎಚ್ಚೆತ್ತುಕೊಂಡಿದ್ದು, ಕಾರ್ ಪಾರ್ಕಿಂಗ್‍ಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ವೀಕೆಂಡ್ ಆಗಿರೋ ಕಾರಣ ಸಾವಿರಾರು ಮಂದಿ ಆಗಮಿಸಬಹುದು. ಆದರೆ ಘಟನೆಯಿಂದ ವೀಕ್ಷಕರ ಸಂಖ್ಯೆ ಕಡಿಮೆಯೂ ಆಗಬಹುದು. ಯಾವುದೇ ಕಾರಣಕ್ಕೂ ಏರ್ ಶೋ ರದ್ದಾಗಲ್ಲ. ಎಂದಿನಂತೆ ನಡೆಯಲಿದೆ.

    https://www.youtube.com/watch?v=ISKqdrigZd0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೃತ ಅಣ್ಣನ ಇನ್ಶುರೆನ್ಸ್ ಹಣಕ್ಕೇ ಕಣ್ಣು ಹಾಕಿ ಅತ್ತಿಗೆಯನ್ನು ಹೊರಹಾಕಿದ ಪಾಪಿ ಮೈದುನ!

    ಮೃತ ಅಣ್ಣನ ಇನ್ಶುರೆನ್ಸ್ ಹಣಕ್ಕೇ ಕಣ್ಣು ಹಾಕಿ ಅತ್ತಿಗೆಯನ್ನು ಹೊರಹಾಕಿದ ಪಾಪಿ ಮೈದುನ!

    ರಾಯಚೂರು: ಮದುವೆಯಾಗಿ ಕೆಲವೇ ತಿಂಗಳಲ್ಲಿ ಗಂಡನನ್ನ ಕಳೆದುಕೊಂಡ ಯುವತಿಗೆ ಆಸರೆಯಾಗಬೇಕಾದ ಗಂಡನ ಮನೆಯವರೇ ಯುವತಿಗೆ ವಂಚಿಸಿದ್ದಾರೆ. ಗಂಡನ ಇನ್ಸುರೆನ್ಸ್ ಹಣಕ್ಕಾಗಿ ನಾಲ್ಕು ವರ್ಷ ಹೋರಾಟ ನಡೆಸಿದ ಪತ್ನಿಗೆ ಸಿಕ್ಕಿದ್ದು ಮಾತ್ರ ನಿರಾಸೆ. ಸ್ವಂತ ಮೈದುನನೇ ಅತ್ತಿಗೆಗೆ ಸೇರಬೇಕಾದ ಹಣವನ್ನೇ ಲೂಟಿ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಹೌದು. ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಮಂಜುಳಾ, ರಾಮನಗರದ ಬಿಡದಿಯ ಲಾರಿ ಡ್ರೈವರ್, ಹೂನೂರಪ್ಪ ಎಂಬವರನ್ನು ಮದುವೆ ಆಗಿದ್ದರು. ಆದ್ರೆ ಗಂಡ 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ ಬಳಿಕ ಇನ್ಸುರೆನ್ಸ್ ಹಣಕ್ಕಾಗಿ ಪತ್ನಿ ವಕೀಲರನ್ನ ನೇಮಿಸಿದ್ರು. ಆದ್ರೆ ಲಿಂಗಸುಗೂರಿನ ವಕೀಲ ಭೂಪನಗೌಡ ಹಾಗೂ ಮೈದುನ ಬಸವರಾಜ್ ಸೇರಿ ಇನ್ಸುರೆನ್ಸ್‍ನಿಂದ ಬಂದ 6 ಲಕ್ಷದ 75 ಸಾವಿರ ಹಣವನ್ನು ಲೂಟಿ ಮಾಡಿದ್ದಾರೆ. ಮೈದುನ ಬಸವರಾಜ್ ತನ್ನ ಪತ್ನಿ ರೇಣುಕಾಳ ನಕಲಿ ಆಧಾರ್ ಹಾಗೂ ಪ್ಯಾನ್ ಕಾರ್ಡ್ ಬಳಸಿ, ರೇಣುಕಾಳ ಹೆಸರಿನ ಜಾಗದಲ್ಲಿ ಮಂಜುಳಾ ಅಂತ ತಿದ್ದಿ, ನ್ಯಾಯಾಲಯಕ್ಕೂ ತಪ್ಪು ಮಾಹಿತಿ ನೀಡಿದ್ದಾನೆ.

    ಬಡತನದಲ್ಲಿರೋ ಮಂಜುಳಾಗೆ ತವರಿನಿಂದಲೂ ಯಾವುದೇ ಸಹಾಯ ಸಿಕ್ತಿಲ್ಲ. ಇತ್ತ ಗಂಡನ ಇನ್ಸುರೆನ್ಸ್ ಹಣವೂ ಇಲ್ಲ. ಇದೆಲ್ಲಾ ಗೊತ್ತಿದ್ರೂ ಪೊಲೀಸರು ಕೇಸ್ ದಾಖಲಿಸಿಕೊಳ್ಳದೇ ನ್ಯಾಯಾಲಯದ ಮೆಟ್ಟಿಲೇರಲು ಸಲಹೆ ನೀಡಿದ್ದಾರೆ.

    ಒಟ್ಟಿನಲ್ಲಿ ಅಣ್ಣ ಸತ್ತ ಬಳಿಕ ಅತ್ತಿಗೆಗೆ ಸಹಾಯ ಮಾಡಬೇಕಿದ್ದ ಮೈದುನ ವಂಚನೆ ಮಾಡಿ ಮನೆಯಿಂದ ಹೊರ ಹಾಕಿದ್ದು, ವಂಚಕ ಮೈದುನನಿಗೆ ಕೋರ್ಟ್ ತಕ್ಕ ಪಾಠ ಕಲಿಸಬೇಕಿದೆ.