Tag: ಇಫ್ತಾರ್

  • ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ – ಸಂಜಯ್ ಸರೋಗಿ

    ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ – ಸಂಜಯ್ ಸರೋಗಿ

    ಪಾಟ್ನಾ: ಶಿಕ್ಷಣ ಕೇಂದ್ರವನ್ನು ಧಾರ್ಮಿಕ ಆಚರಣೆಗಳ ಸ್ಥಳವನ್ನಾಗಿ ಮಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಬಿಹಾರದ ಲಲಿತ್ ನಾರಾಯಣ ಮಿಥಿಲಾ ವಿಶ್ವವಿದ್ಯಾನಿಲಯದಲ್ಲಿ ಏಪ್ರಿಲ್ 26 ರಂದು ಆಯೋಜಿಸಲಾದ ಆಜಾನ್ ಮತ್ತು ಇಫ್ತಾರ್ ಕೂಟಕ್ಕೆ ಬಿಜೆಪಿ ಶಾಸಕ ಸಂಜಯ್ ಸರೋಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಇದೊಂದು ಗಂಭೀರ ವಿಚಾರ. ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕ ಸ್ಥಳಗಳನ್ನಾಗಿ ಪರಿವರ್ತಿಸುವುದನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ ಎಂದು ವಿಶ್ವವಿದ್ಯಾನಿಲಯ ಉಪಕುಲಪತಿ ಹಾಗೂ ರಿಜಿಸ್ಟ್ರಾರ್ ಮುಷ್ತಾಕ್ ಅಹ್ಮದ್ ವಿರುದ್ಧ ಸಂಜಯ್ ಸರೋಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ

    ಇದಕ್ಕೆ ಪ್ರತಿಕ್ರಿಯಿಸಿದ ಮುಷ್ತಾಕ್ ಅಹ್ಮದ್ ಅವರು, ಇಫ್ತಾರ್ ಕೂಟವನ್ನು ವಿಶ್ವವಿದ್ಯಾಲಯದ ಆಡಳಿತ ಆಯೋಜಿಸಿಲ್ಲ. ವಿಶ್ವವಿದ್ಯಾಲಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಕಾರ್ಯಕ್ರಮವನ್ನು ಕೆಲವು ವಿದ್ಯಾರ್ಥಿಗಳು ಆಯೋಜಿಸಿದ್ದರು. ತಪ್ಪು ಮನಸ್ಥಿತಿ ಹೊಂದಿರುವ ಜನರು ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಧ್ಯಾಪಕ ಅಮಾನತು

  • ಇಫ್ತಾರ್ ಕೂಟಕ್ಕೂ ರಾಜಕೀಯಕ್ಕೂ ಏನು ಸಂಬಂಧ – ನಿತೀಶ್ ಪ್ರಶ್ನೆ

    ಇಫ್ತಾರ್ ಕೂಟಕ್ಕೂ ರಾಜಕೀಯಕ್ಕೂ ಏನು ಸಂಬಂಧ – ನಿತೀಶ್ ಪ್ರಶ್ನೆ

    ಪಾಟ್ನಾ: ರಾಷ್ಟ್ರೀಯ ಜನತಾದಳ (RJD) ನಾಯಕ ತೇಜಸ್ವಿ ಯಾದವ್ ಆಯೋಜಿಸಿದ್ದ ಇಫ್ತಾರ್‌ಕೂಟದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್ ಪಾಲ್ಗೊಂಡಿದ್ದು ಈಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

    NITHISHKUMAR

    ಇದಕ್ಕೆ ಮಾಧ್ಯಮಗಳ ಮೂಲಕ ಸ್ಪಷ್ಟನೆ ನೀಡಿದ ಅವರು, ಇಫ್ತಾರ್ ಕೂಟದಲ್ಲಿ ಪಾಲ್ಗೊಳ್ಳುವುದು ಸಂಪ್ರದಾಯ ಪ್ರತಿವರ್ಷವೂ ಇದು ನಡೆಯುತ್ತಲೇ ಬಂದಿದೆ. ಇಫ್ತಾರ್‌ಗೆ ಅನೇಕ ಜನರನ್ನು ಆಹ್ವಾನಿಸಲಾಗುತ್ತದೆ. ನಾವೂ ಇತರರನ್ನು ಆಹ್ವಾನಿಸುತ್ತೇವೆ. ಇದಕ್ಕೂ ರಾಜಕೀಯಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 15% ಜನರಿಗಾಗಿ 85% ನಾಗರಿಕರ ಮೂಲಭೂತ ಹಕ್ಕು ಉಲ್ಲಂಘನೆ – ಹಲಾಲ್ ಉತ್ಪನ್ನ ನಿಷೇಧಿಸುವಂತೆ ಸುಪ್ರೀಂನಲ್ಲಿ ಅರ್ಜಿ

    ಕಳೆದ 5 ವರ್ಷಗಳಿಂದ ಆರ್‌ಜೆಡಿಯಿಂದ ದೂರ ಉಳಿದಿದ್ದ ನಿತೀಶ್‌ಕುಮಾರ್ ಇಫ್ತಾರ್‌ಕೂಟದಲ್ಲಿ ಪಾಲ್ಗೊಂಡಿದ್ದು, ಹಲವರಲ್ಲಿ ಕುತೂಹಲ ಮೂಡಿಸಿದೆ. 2017ರಲ್ಲಿ, ಕುಮಾರ್ ಬಿಹಾರದ ಮಹಾಮೈತ್ರಿಕೂಟ ತೊರೆದು ಬಿಜೆಪಿ ಮಿತ್ರರಾದರು. ಬಿಹಾರದಲ್ಲಿ ಈಗಾಗಲೇ ಬಿಜೆಪಿ ಜಾತಿ ಆಧಾರಿತ ಜನಗಣತಿ, NDA ನಾಯಕತ್ವ, ಮದ್ಯ ನಿಷೇಧ ಮತ್ತು ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ವಿಷಯಗಳಲ್ಲಿ ಒಳಜಗಳಗಳು ನಡೆಯುತ್ತಿದೆ. ಇಂತಹ ಹೊತ್ತಿನಲ್ಲಿ 5 ವರ್ಷಗಳ ನಂತರ ಮತ್ತೆ ಇಫ್ತಾರ್‌ಕೂಟದಲ್ಲಿ ಪಾಲ್ಗೊಂಡಿದ್ದು, ಊಹಾಪೋಹಗಳಿಗೆ ಕಾರಣವಾಗಿದೆ. ಇದನ್ನೂ ಓದಿ: ಇಮ್ಲಿವಾಲಿ ಮಸೀದಿ ಮುಂದೆ ನಮಾಜ್ ಮಾಡಿದ 150 ಮಂದಿ ವಿರುದ್ಧ FIR 

  • ಇಫ್ತಾರ್ ಕೂಟಕ್ಕೆ ಆಹ್ವಾನಿಸಿಲ್ಲ ಎಂದು ಗುಂಡಿಕ್ಕಿ ಮೂವರು ಮಕ್ಕಳ ಹತ್ಯೆ

    ಇಫ್ತಾರ್ ಕೂಟಕ್ಕೆ ಆಹ್ವಾನಿಸಿಲ್ಲ ಎಂದು ಗುಂಡಿಕ್ಕಿ ಮೂವರು ಮಕ್ಕಳ ಹತ್ಯೆ

    ಲಕ್ನೋ: ರಂಜಾನ್‍ನ ಇಫ್ತಾರ್ ಪಾರ್ಟಿಗೆ ಆಹ್ವಾನಿಸಿಲ್ಲ ಎಂದು ವ್ಯಕ್ತಿಯೊಬ್ಬ ಒಂದೇ ಕುಟುಂಬದ ಮೂವರು ಮಕ್ಕಳನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ನಲ್ಲಿ ನಡೆದಿದೆ.

    ಆಸ್ಮಾ, ಅಲೀಮಾ ಮೋಹೆ ಹಾಗೂ ಅಬ್ದುಲ್ಲಾ ಮೃತ ದುರ್ದೈವಿಗಳು. ಮೂವರು ಮಕ್ಕಳು 7ರಿಂದ 8 ವರ್ಷದವರು ಎಂದು ಹೇಳಲಾಗಿದ್ದು, ಇವರ ಕುಟುಂಬದವರು ಶುಕ್ರವಾರ ಇಫ್ತಾರ್ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಗೆ ತನ್ನನ್ನು ಆಹ್ವಾನಿಸಿಲ್ಲ ಎಂದು ಬೇಸರದಿಂದ ವ್ಯಕ್ತಿ ಮೂವರು ಮಕ್ಕಳನ್ನು ಕೊಲೆ ಮಾಡಿದ್ದಾನೆ.

    ವ್ಯಕ್ತಿ ಬೇಸರದಿಂದ ಮೂವರನ್ನು ಮಕ್ಕಳನ್ನು ಗುಂಡಿಕ್ಕಿ ಕೊಲೆ ಮಾಡಿದಲ್ಲದೇ ಅವರ ಮೃತದೇಹವನ್ನು ದುತೂರಿ ಗ್ರಾಮದ ಅರಣ್ಯದಲ್ಲಿದ್ದ ಬಾವಿಯಲ್ಲಿ ಎಸೆದಿದ್ದನು. ಮಕ್ಕಳು ಕಾಣಿಸದೇ ಇದ್ದಾಗ ಪೋಷಕರು ಶುಕ್ರವಾರ ರಾತ್ರಿ ಸುಮಾರು 9.22ಕ್ಕೆ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾರೆ ಎಂದು 100ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದರು.

    ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚು ಗಮನ ಕೊಡಲಿಲ್ಲ ಹಾಗೂ ದೂರು ಕೂಡ ದಾಖಲಿಸಿಲ್ಲ. ಈ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಕಾರಣ ಧೃವ್ ಭುಷಣ್ ದುಬೆ ಹಾಗೂ ಮುಂಶಿಯ ಎಸ್‍ಎಸ್‍ಪಿಯನ್ನು ಕೆಲಸದಿಂದ ಸಸ್ಪೆಂಡ್ ಮಾಡಲಾಗಿದೆ.

  • ರಾಮನ ಊರಲ್ಲಿ ಧರ್ಮ ಭೇದವಿಲ್ಲ- ಸೀತಾರಾಮ ಮಂದಿರದಲ್ಲಿ ಮುಸಲ್ಮಾನರಿಗೆ ಇಫ್ತಾರ್ ವ್ಯವಸ್ಥೆ!

    ರಾಮನ ಊರಲ್ಲಿ ಧರ್ಮ ಭೇದವಿಲ್ಲ- ಸೀತಾರಾಮ ಮಂದಿರದಲ್ಲಿ ಮುಸಲ್ಮಾನರಿಗೆ ಇಫ್ತಾರ್ ವ್ಯವಸ್ಥೆ!

    ಅಯೋಧ್ಯೆ: ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಅಯೋಧ್ಯೆ ವಿವಾದ ದಶಕಗಳಿಂದ ಬಗೆಹರಿಯದೆ ಉಳಿದಿದೆ. ಆದರೆ ಶ್ರೀರಾಮ ಹುಟ್ಟಿದ ನೆಲ ಅಯೋಧ್ಯೆಯಲ್ಲಿ ಹಿಂದೂ-ಮುಸಲ್ಮಾನ್ ಎಂಬ ಭೇದವಿಲ್ಲ. ಇಲ್ಲಿನ ಶ್ರೀ ಸೀತಾರಾಮ ಮಂದಿರದಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಇಫ್ತಾರ್ ವ್ಯವಸ್ಥೆ ಮಾಡಿ ಏಕತೆ ಮೆರೆದಿದ್ದಾರೆ.

    ಶ್ರೀ ಸೀತಾರಾಮ ದೇವಸ್ಥಾನದ ಟ್ರಸ್ಟ್ ವತಿಯಿಂದ ಮುಸ್ಲಿಂ ಬಾಂಧವರಿಗೆ ರೋಜಾ ಇಫ್ತಾರ್ ಔತಣಕೂಟವನ್ನು ಸೋಮವಾರದಂದು ಆಯೋಜಿಸಲಾಗಿತ್ತು. ಈ ರೋಜಾ ಇಫ್ತಾರ್ ನಲ್ಲಿ ಮುಸಲ್ಮಾನರು ಮಾತ್ರವಲ್ಲದೇ ನಗರದ ಕೆಲವು ಸಾಧು-ಸಂತರು ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ:ಮದರಸಾ ತೆರೆಯಲು ಮುಂದಾದ ಆರ್‌ಎಸ್‌ಎಸ್

    ದೇವಸ್ಥಾನದ ಟ್ರಸ್ಟ್ ವತಿಯಿಂದ ಮೂರನೇ ಬಾರಿಗೆ ರೋಜಾ ಇಫ್ತಾರ್ ಏರ್ಪಡಿಸಲಾಗಿತ್ತು. ಇದು ಮುಂದೆಯೂ ಹೀಗೆ ಮುಂದುವರೆಯಲಿದೆ ಎಂದು ದೇವಾಲಯದ ಟ್ರಸ್ಟಿಗಳು ಹೇಳಿದ್ದಾರೆ. ನಾವು ಧರ್ಮ ಭೇದವನ್ನು ಮರೆತು ಶಾಂತಿ ಮತ್ತು ಹಿಂದೂ-ಮುಸ್ಲಿಂ ಸ್ನೇಹ ಸಂಬಂಧವನ್ನು ಕಾಯ್ದುಕೊಳ್ಳಲು ಈ ಇಫ್ತಾರ್ ವ್ಯವಸ್ಥೆ ಮಾಡಿದ್ದೇವೆ. ಧರ್ಮ ಭೇದ ತೊರೆದು ಪ್ರತಿ ಹಬ್ಬ ಆಚರಣೆಯನ್ನೂ ಒಗ್ಗೂಡಿ ಆಚರಿಸಿ ಸಂಭ್ರಮಿಸಬೇಕು ಎಂದು ಹೇಳಿದರು. ಇದನ್ನೂ ಓದಿ:ನೀರು ಕೇಳಿದ ಮುಸ್ಲಿಂ ಪ್ರಯಾಣಿಕನಿಗೆ ಆಹಾರ ನೀಡಿದ ಗಗನಸಖಿ!

    ರೋಜಾ ಇಫ್ತಾರ್ ಗೆ ಬಂದಿದ್ದ ಮುಜಾಲ್ ಫಿಜಾ ಅವರು ಮಾತನಾಡಿ, ದೇಶದಲ್ಲಿ ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಯುತ್ತಿದೆ. ಅಯೋಧ್ಯೆಯಲ್ಲಿ ಅಲ್ಪಸಂಖ್ಯಾತರಾಗಿದ್ದರೂ ನಾವು ಎಂದಿಗೂ ಹೆದರಿಲ್ಲ. ನಾನು ನನ್ನ ಹಿಂದೂ ಸ್ನೇಹಿತರೊಡನೆ ಸೇರಿ ನವರಾತ್ರಿಯನ್ನು ಆಚರಿಸುತ್ತೇನೆ. ನಮ್ಮಲ್ಲಿ ಭೇದಬಾವವಿಲ್ಲ ಎಂದು ತಿಳಿಸಿದರು.

    ಧರ್ಮದ ಆಧಾರದ ಮೇಲೆ ಎಂದಿಗೂ ಮನುಷ್ಯರನ್ನು ನೋಡಬಾರದು. ಮನುಷ್ಯತ್ವ, ಪ್ರೀತಿ ಎಲ್ಲದಕ್ಕೂ ಮಿಗಿಲಾದದ್ದು ಎನ್ನುವುದನ್ನು ಈ ಮೂಲಕ ಅಯೋಧ್ಯೆಯಲ್ಲಿ ಹಿಂದೂ-ಮುಸಲ್ಮಾನ್ ಬಾಂಧವರು ಸಾರಿದ್ದಾರೆ.

  • ನೀರು ಕೇಳಿದ ಮುಸ್ಲಿಂ ಪ್ರಯಾಣಿಕನಿಗೆ ಆಹಾರ ನೀಡಿದ ಗಗನಸಖಿ!

    ನೀರು ಕೇಳಿದ ಮುಸ್ಲಿಂ ಪ್ರಯಾಣಿಕನಿಗೆ ಆಹಾರ ನೀಡಿದ ಗಗನಸಖಿ!

    ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ತೆರಳುತ್ತಿದ್ದ ಮುಸ್ಲಿಂ ಪ್ರಯಾಣಿಕರೊಬ್ಬರು ಇಫ್ತಾರ್ ಸಮಯವಾದಾಗ ಗಗನಸಖಿಯೊಬ್ಬರ ಬಳಿ ನೀರು ಕೇಳಿದ್ದರು. ಆದರೆ ಪ್ರಯಾಣಿಕ ಉಪವಾಸವಿದ್ದ ಬಗ್ಗೆ ತಿಳಿದ ಗಗನಸಖಿ ಅವರಿಗೆ ಇಫ್ತಾರ್ ಆಹಾರವನ್ನು ನೀಡಿ ಎಲ್ಲರ ಮನ ಗೆದ್ದಿದ್ದಾರೆ.

    ಹೌದು. ರಂಜಾನ್ ಹಬ್ಬದ ಹಿನ್ನೆಲೆ ಪತ್ರಕರ್ತ ರಿಫಾತ್ ಜಾವೈದ್ ಅವರು ಉಪವಾಸದಲ್ಲಿದ್ದರು. ಶನಿವಾರದಂದು ರಿಫಾತ್ ಜಾವೈದ್ ಗೊರಖ್‍ಪುರದಿಂದ ದೆಹಲಿಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಸಂಜೆ ತಮ್ಮ ಉಪವಾಸ ಮುರಿಯುವ ಸಮಯವಾದಗ ಗಗನಸಖಿ ಮಂಜುಳ ಅವರ ಬಳಿ ಒಂದು ಬಾಟಲ್ ನೀರನ್ನು ಕೇಳಿದ್ದಾರೆ. ಆದರೆ ಪ್ರಯಾಣಿಕ ಉಪವಾಸವಿರುವ ಬಗ್ಗೆ ಅರಿತ ಗಗನಸಖಿ ರಿಫಾತ್ ಅವರಿಗೆ ಟ್ರೇನಲ್ಲಿ ಇಫ್ತಾರ್ ಆಹಾರವನ್ನು ನೀಡಿ ಮಾನವೀಯತೆ ಮರೆದಿದ್ದಾರೆ.

    ತಮಗೆ ಇಫ್ತಾರ್ ಆಹಾರ ನೀಡಿದ ಗಗನಸಖಿಯ ಸಹಾಯಕ್ಕೆ ಸಂತೋಷಗೊಂಡ ರಿಫಾತ್ ಅವರು ಈ ಬಗ್ಗೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಗಗನಸಖಿಯ ಗುಣಕ್ಕೆ ಮನಸೋತಿದ್ದಾರೆ. ನಾನು ದೆಹಲಿಗೆ ವಿಮಾನದಲ್ಲಿ ವಾಪಾಸ್ ತೆರೆಳುತ್ತಿದ್ದೆ. ಈ ವೇಳೆ ಇಫ್ತಾರ್ ನ ಸಮಯವಾಗಿತ್ತು. ಆದರಿಂದ ನಾನು ಗಗನಸಖಿ ಮಂಜುಳ ಅವರ ಬಳಿ ಹೋಗಿ ನೀರು ಕೇಳಿದೆ. ಆಗ ಅವರು ನನಗೆ ಒಂದು ಬಾಟರ್ ನೀರು ಕೊಟ್ಟರು. ಬಳಿಕ ನಾನು ಉಪವಾಸದಲ್ಲಿದ್ದೇನೆ ಇನ್ನೊಂದು ಬಾಟಲ್ ನೀರು ಬೇಕಿತ್ತು ಎಂದೆ. ಆಗ ಗಗನಸಖಿ ನೀವು ನಿಮ್ಮ ಸೀಟ್‍ಗೆ ಹೋಗಿ ತಂದು ಕೊಡುತ್ತೇನೆ ಎಂದು ಹೇಳಿ ಕಳುಹಿಸಿದರು. ನಂತರ ನನಗೆ ಟ್ರೇ ತುಂಬಾ ಇಫ್ತಾರ್ ಆಹಾರವನ್ನೂ ನೀಡಿ ಸತ್ಕರಿಸಿದರು ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ನೆಟ್ಟಿಗರು ರಿಫಾತ್ ಅವರ ಟ್ವೀಟ್‍ಗೆ ರೀ-ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಧರ್ಮ ಬೇರೆಯಾಗಿದ್ದರು, ಮಾನವೀಯತೆಯಿಂದ ಒಬ್ಬರಿಗೆ ಸಹಾಯ ಮಾಡುವುದು ದೊಡ್ಡ ವಿಷಯ. ಜಾತಿ ಧರ್ಮವೆಂದು ಜಗಳವಾಡುವವರ ಮಧ್ಯೆ ಮನವೀಯತೆ ಎಲ್ಲದಕ್ಕಿಂತ ಮಿಗಿಲಾದದ್ದು ಎಂದು ಸಾರಿರುವ ಗಗನಸಖಿ ಸಹಾಯವನ್ನು ನಿಜಕ್ಕೂ ಮೆಚ್ಚಲೇಬೇಕು. ಈ ಮೂಲಕ ಮಾನವೀಯತೆ ಇನ್ನೂ ಜೀವಂತವಾಗಿದೆ ಎನ್ನುವುದನ್ನ ಗಗನಸಖಿ ತೋರಿಸಿದ್ದಾರೆ. ಇದು ನಮ್ಮ ಭಾರತದ ವಿಶೇಷತೆ ಎಂದು ರೀ-ಟ್ವೀಟ್ ಮಾಡಿದ್ದಾರೆ.

  • ಪ್ರತಿನಿತ್ಯ 800 ಮಂದಿಗೆ ಇಫ್ತಾರ್ ಭೋಜನ ವ್ಯವಸ್ಥೆ ಮಾಡುತ್ತಿರುವ ಕ್ರಿಶ್ಚಿಯನ್ ಉದ್ಯಮಿ!

    ಪ್ರತಿನಿತ್ಯ 800 ಮಂದಿಗೆ ಇಫ್ತಾರ್ ಭೋಜನ ವ್ಯವಸ್ಥೆ ಮಾಡುತ್ತಿರುವ ಕ್ರಿಶ್ಚಿಯನ್ ಉದ್ಯಮಿ!

    ದುಬೈ: ಕೇರಳ ಮೂಲದ ಕ್ರಿಶ್ಚಿಯನ್ ಉದ್ಯಮಿಯೊಬ್ಬರು ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆಂದು ಪ್ರತ್ಯೇಕ ಮಸೀದಿ ನಿರ್ಮಿಸುವುದರೊಂದಿಗೆ ರಂಜಾನ್ ತಿಂಗಳಲ್ಲಿ ಇಫ್ತಾರ್ ಊಟದ ವ್ಯವಸ್ಥೆಯನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ಹೌದು, ಕೇರಳದ ಕಯಾಕುಲಂ ಮೂಲದವರಾಗಿರುವ ಉದ್ಯಮಿ ಸಾಜಿ ಚೆರಿಯನ್(49) 2003ರಿಂದ ಯುಎಇನಲ್ಲಿ ವಾಸವಾಗಿದ್ದಾರೆ. ತಾವು ಕ್ರಿಶ್ಚಿಯನ್ ಆಗಿದ್ದರು ಧರ್ಮಬೇಧ ಮರೆತು ಯುಎಇನಲ್ಲಿ ಮಸೀದಿ ಕಟ್ಟಿಸಿದ್ದಾರೆ. ಜೊತೆಗೆ ರಂಜಾನ್ ತಿಂಗಳ ಪೂರ್ತಿ 800 ಮಂದಿ ಜನರಿಗೆ ಇಫ್ತಾರ್ ಊಟದ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದಾರೆ.

    ಪ್ರತಿನಿತ್ಯ ನಮಾಜ್‍ಗೆ ತಮ್ಮ ಸಂಸ್ಥೆಯ ಸಿಬ್ಬಂದಿ ಸಂಬಳದ ಹಣ ಖರ್ಚು ಮಾಡಿಕೊಂಡು ಹೋಗುತ್ತಿರುವುದನ್ನು ಗಮನಿಸಿ, ಈ ಹಣವನ್ನು ಉಳಿಸಲು ಉದ್ಯಮಿ ಸಾಜಿ ಈ ಉಪಾಯ ಮಾಡಿದ್ದಾರೆ. ಸಿಬ್ಬಂದಿಗಾಗಿ ಮಸೀದಿಯನ್ನೂ ನಿರ್ಮಿಸಿದ್ದಾರೆ. ಮಸೀದಿಗೆ `ಮೇರಿ ದಿ ಮದರ್ ಆಫ್ ಜೀಸಸ್’ ಎಂದು ಹೆಸರಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಪ್ರತಿನಿತ್ಯ ಇಫ್ತಾರ್ ಊಟದಲ್ಲಿ ಬಿರಿಯಾನಿ, ಹಣ್ಣು, ಖರ್ಜೂರ ಸೇರಿದಂತೆ ಹಲವು ಖಾದ್ಯಗಳನ್ನು ಸಿಬ್ಬಂದಿಗೆ ನೀಡುತ್ತಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಚೆರಿಯನ್, ಸಿಬ್ಬಂದಿ ನಮಾಜ್ ಮಾಡಲು ದೂರದ ಪ್ರದೇಶಕ್ಕೆ ತೆರಳಬೇಕಾಗಿತ್ತು. ಹಾಗೆಯೇ ಇದಕ್ಕಾಗಿ ಸಂಬಳದ ಹಣವನ್ನು ಖರ್ಚು ಮಾಡುತ್ತಿದ್ದರು. ಜೊತೆಗೆ ಇಫ್ತಾರ್ ಊಟಕ್ಕೂ ಹಣ ಖರ್ಚಾಗುತ್ತಿತ್ತು. ಆದ್ದರಿಂದ ಸಿಬ್ಬಂದಿಯ ಹಣ ಉಳಿಸಲು ಈ ರೀತಿ ಮಾಡಿದ್ದೇನೆ. ರಂಜಾನ್ ಮುಗಿಯುವ ತನಕ ಒಂದೇ ರೀತಿಯ ಆಹಾರ ನೀಡಿದರೆ ಅವರಿಗೆ ಬೇಸರವಾಗುತ್ತದೆ. ಹೀಗಾಗಿ ವಿವಿಧ ರೀತಿಯ ಬಿರಿಯಾನಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಪತ್ರಿಕೆಯೊಂದರ ವರದಿ ಪ್ರಕಾರ ರಂಜಾನ್ ಆಚರಣೆಯ 17 ನೇ ರಾತ್ರಿಯಂದು ಈ ಮಸೀದಿಯನ್ನು ಉದ್ಘಾಟಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ದುಬೈನಲ್ಲಿ ಅಲ್ ಹೈಲ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈಸ್ಟ್ ವಿಲ್ಲೆ ರಿಯಲ್ ಎಸ್ಟೇಟ್ ಸಂಕೀರ್ಣದಲ್ಲಿ ಈ ಮಸೀದಿಯನ್ನು ನಿರ್ಮಿಸಲಾಗಿದೆ. ಇದು ಒಂದೇ ಸಮಯದಲ್ಲಿ 250 ಮಂದಿ ಪ್ರಾರ್ಥನೆಯನ್ನು ಸಲ್ಲಿಸುವಷ್ಟು ದೊಡ್ಡ ಸಭಾಂಗಣವನ್ನು ಹೊಂದಿದೆ. ಅಷ್ಟೇ ಅಲ್ಲದೆ ಮಸೀದಿಯ ಹೊರಗಡೆ ತೆರೆದ ಆವರಣದಲ್ಲಿ 700 ಮಂದಿ ಆರಾಧಕರು ಪ್ರಾರ್ಥನೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

  • ಮುಸ್ಲಿಂ ಯುವತಿಯನ್ನ ಪ್ರೀತಿಸಿದ್ದಕ್ಕೆ ಕೊಲೆಯಾಗಿದ್ದ ಯುವಕನ ಮನೆಯಲ್ಲಿ ಇಫ್ತಾರ್ ಕೂಟ

    ಮುಸ್ಲಿಂ ಯುವತಿಯನ್ನ ಪ್ರೀತಿಸಿದ್ದಕ್ಕೆ ಕೊಲೆಯಾಗಿದ್ದ ಯುವಕನ ಮನೆಯಲ್ಲಿ ಇಫ್ತಾರ್ ಕೂಟ

    ನವದೆಹಲಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆಯಾಗಿದ್ದ ಫೋಟೋಗ್ರಾಫರ್ ಅಂಕಿತ್ ಸಕ್ಸೆನಾ ಮನೆಯಲ್ಲಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು.

    ಫೆಬ್ರವರಿ 1ರಂದು ಪಶ್ಚಿಮ ದೆಹಲಿಯಲ್ಲಿ ಅಂಕಿತ್‍ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಅಂಕಿತ್ ತನ್ನದೇ ನಗರದ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದವು.

    ಈ ಹಿನ್ನೆಲೆಯಲ್ಲಿ ಅಂಕಿತ್ ತಂದೆ ಯಶ್‍ಪಾಲ್ ಸಕ್ಸೆನಾ, ರಂಜಾನ್ ತಿಂಗಳಲ್ಲಿ ಉಪವಾಸವಿರುವ ಮುಸ್ಲಿಂ ಸಮುದಾಯದ ಜನರಿಗೆ ಇಫ್ತಾರ್ ಆಯೋಜನೆ ಮಾಡುವ ಮೂಲಕ ಐಕ್ಯತೆಯಿಂದ ಕೂಡಿ ಬಾಳೋಣ ಎಂಬ ತತ್ವವನ್ನು ಸಾರಿದ್ದಾರೆ. ಇದನ್ನೂ ಓದಿ: ಹೌದು, ನನ್ನ ಮಗನ ಕೊಲೆಯಾಗಿದೆ, ಅದನ್ನ ಧರ್ಮದೊಂದಿಗೆ ಲಿಂಕ್ ಮಾಡ್ಬೇಡಿ: ಅಂಕಿತ್ ತಂದೆ

    ಇಫ್ತಾರ್ ನಡೆದ ಮರುದಿನ ಮಾಧ್ಯಮಗಳೊಂದಿಗೆ ಮಾತನಾಡಿದ ಯಶ್‍ಪಾಲ್, ನನ್ನ ಮಗನ ಕೊಲೆ ಕೇವಲ ದ್ವೇಷದಿಂದ ನಡೆದಿತ್ತು. ನನ್ನ ಮಗನ ಸಾವಿನ ಮೊದಲು ನಾನು ಯುವತಿಯ ಪೋಷಕರನ್ನು ಭೇಟಿಯಾಗಿ ಸಮಾಧಾನದಿಂದ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳೋಣ ಅಂತಾ ಮನವಿ ಮಾಡಿಕೊಂಡಿದ್ದೆ. ಆದ್ರೆ ಆ ವೇಳೆ ಯುವತಿಯ ಮನೆಯವರು ತುಂಬಾ ಕೋಪದಲ್ಲಿದ್ದರಿಂದ ನನ್ನ ಮಾತನ್ನು ಅವರು ಕೇಳಿಸಿಕೊಳ್ಳಲಿಲ್ಲ ಎಂದು ದುಃಖ ವ್ಯಕ್ತಪಡಿಸಿದರು.

    ಯಶ್‍ಪಾಲ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಸಾಕಷ್ಟು ಮುಸ್ಲಿಂ ಜನರು ಭಾಗಿಯಾಗಿದ್ದರು. ಒಂದು ರೀತಿಯಲ್ಲಿ ಯಶ್‍ಪಾಲ್‍ರ ಮನೆಯಲ್ಲಿ ಮದುವೆಯ ಸಂಭ್ರಮ ಮನೆ ಮಾಡಿತ್ತು. ಎರಡೂ ಸಮುದಾಯದ ಜನರು ಪರಸ್ಪರ ಅಪ್ಪಿಕೊಂಡು ರಂಜಾನ್ ಹಬ್ಬದ ಶುಭಕೋರಿದ್ರು.

    ನನ್ನ ಪ್ರಕಾರ ಇಂದಿನ ಯುವ ಸಮುದಾಯ ಕೋಪದಲ್ಲಿ ಅಹಿತಕರ ಘಟನೆಗಳಲ್ಲಿ ಭಾಗಿಯಗ್ತಾರೆ. ಹಾಗಾಗಿ ಎಲ್ಲ ಯುವಕರು ಎದುರಾಗುವ ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಿಕೊಳ್ಳಬೇಕು. ನಾವೆಲ್ಲರೂ ಒಂದೇ ಸಮಾಜದಲ್ಲಿ ಬದುಕುತ್ತಿದ್ದು, ಪರಸ್ಪರ ಹೊಂದಾಣಿಕೆ, ಐಕ್ಯತೆ, ಒಗ್ಗಟ್ಟಿನಿಂದ ಬಾಳಬೇಕು ಎಂಬುವುದು ನನ್ನ ಆಶಯವಾಗಿದೆ ಅಂತಾ ತಿಳಿಸಿದ್ರು.

  • Exclusive: ಹಿಂದೂಗಳಿಗೆ ಮೋಸ ಮಾಡಿದ್ರಾ ಸಿಎಂ ಸಿದ್ದರಾಮಯ್ಯ?

    Exclusive: ಹಿಂದೂಗಳಿಗೆ ಮೋಸ ಮಾಡಿದ್ರಾ ಸಿಎಂ ಸಿದ್ದರಾಮಯ್ಯ?

    ಸುನೀಲ್ ಜಿಎಸ್
    ಬೆಂಗಳೂರು: ಹನುಮ ಜಯಂತಿ ಆಚರಣೆ ಮಾಡುತ್ತಿದ್ದವರಿಗೆ ಲಾಠಿ ಏಟು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂಗಳಿಗೆ ಮೋಸ ಆಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.

    ಹೌದು. ಮಾಹಿತಿ ಹಕ್ಕಿನ ಅಡಿ ಕೇಳಲಾದ ಪ್ರಶ್ನೆಗೆ ಮುಖ್ಯಮಂತ್ರಿಗಳ ಸಚಿವಾಲಯ ನೀಡಿದ ಉತ್ತರದಿಂದಾಗಿ ಆರೋಪ ಕೇಳಿ ಬಂದಿದೆ. ಆರ್ ಟಿಐ ಕಾರ್ಯಕರ್ತ ಭಾಸ್ಕರನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೇಲೆ ಯಾವ ಧರ್ಮದವರಿಗೆ 2017 ಅಕ್ಟೋಬರ್ 31 ರವರೆಗೆ ಎಷ್ಟು ಬಾರಿ ಭೋಜನ/ಉಪಹಾರ ಕೂಟವನ್ನು ಆಯೋಜಿಸಿದ್ದಾರೆ ಎಂದು ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಕೇವಲ ಮುಸ್ಲಿಮರಿಗೆ ಹೊರತು ಪಡಿಸಿ ಬೇರೆ ಯಾವುದೇ ಧರ್ಮದವರಿಗೆ ಸಿದ್ದರಾಮಯ್ಯ ಭೋಜನ ಕೂಟವನ್ನು ಆಯೋಜಿಸಿಲ್ಲ ಎಂದು ಸಚಿವಾಲಯ ಉತ್ತರ ನೀಡಿದೆ.

    ಸಚಿವಾಲಯದ ಉತ್ತರ ಇಲ್ಲಿದೆ:
    ಮುಖ್ಯಮಂತ್ರಿಯಾಗಿ 2013 ಮೇ 13ರಂದು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ ಇಲ್ಲಿಯವರೆಗೆ ಸಿದ್ದರಾಮಯ್ಯನವರು ಪವಿತ್ರ ರಂಜನ್ ಮಾಸದ ಸಂದರ್ಭದಲ್ಲಿ ಇಫ್ತಿಯಾರ್ ಭೋಜನ ಕೂಟವನ್ನು ಅರಮನೆ ಮೈದಾನದಲ್ಲಿ ಮುಸ್ಲಿಮ್ ಬಾಂಧವರಿಗೆ ಸ್ವಂತ ಖರ್ಚಿನಲ್ಲಿ ಆಯೋಜಿಸಿದ್ದರು. ಇದನ್ನು ಹೊರತು ಪಡಿಸಿ ಮುಸ್ಲಿಮ್ ಸಮುದಾಯದ ಇತರೇ ಹಬ್ಬಗಳ ಸಂದರ್ಭದಲ್ಲಿ ಸರ್ಕಾರಿ ಅಥವಾ ಸ್ವಂತ ವೆಚ್ಚದಲ್ಲಿ ಯಾವುದೇ ಭೋಜನ ಕೂಟವನ್ನು ಆಯೋಜಿಸಿಲ್ಲ. ಅರಮನೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗಣ್ಯ ಮುಸಲ್ಮಾನ ಬಂಧುಗಳು, ರಾಜ್ಯ ಸರ್ಕಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

    ಗಾಂಧಿ ಜಯಂತಿ, ಅಂಬೇಡ್ಕರ್ ಜಯಂತಿ, ಮಕ್ಕಳ ದಿನಾಚರಣೆ, ಶಿಕ್ಷಕರ ದಿನಾಚರಣೆ, ಸ್ವಾಮಿ ವಿವೇಕಾನಂದ ಜಯಂತಿ, ಬಸವ ಜಯಂತಿ ಇನ್ನಿತರ ಕಾರ್ಯಕ್ರಮಗಳನ್ನು ಸಂಬಂಧಪಟ್ಟ ಇಲಾಖೆಯವರು ಸರ್ಕಾರದ ವತಿಯಿಂದ ಮಾಡಿರುತ್ತಾರೆ. ಇಲಾಖೆಯ ಆಹ್ವಾನದ ಮೇರೆಗೆ ಈ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಭೋಜನ/ ಲಘು ಉಪಹಾರವನ್ನು ಏರ್ಪಾಡು ಮಾಡಿಲ್ಲ.

    ಬೇರೆಯವರಿಗೆ ಯಾಕಿಲ್ಲ?:
    ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ. ಇಲ್ಲಿ ಮುಸ್ಲಿಮರು ಮಾತ್ರವಲ್ಲದೇ ಹಿಂದೂಗಳು, ಕ್ರೈಸ್ತರು, ಜೈನರು, ಬೌದ್ಧರು ಹಲವು ಧರ್ಮದವರು ನೆಲೆಸಿದ್ದು ಎಲ್ಲರೂ ತೆರಿಗೆಯನ್ನು ಪಾವತಿಸುತ್ತಾರೆ. ಇವರಿಗೆಲ್ಲ ನೀಡದ ವಿಶೇಷ ಉಪಹಾರ ಕೇವಲ ಮುಸ್ಲಿಮರಿಗೆ ಮಾತ್ರ ನೀಡುತ್ತಿರುವುದು ಯಾಕೆ? ಸಿದ್ದರಾಮಯ್ಯ ಮುಸ್ಲಿಮರಿಗೆ ಮಾತ್ರ ಮುಖ್ಯಮಂತ್ರಿಯೇ? ಭೋಜನ ಕೂಟವನ್ನು ಆಯೋಜಿಸಿದರೆ ಯಾವ ಧರ್ಮದವರಿಗೆ ತಾರತಮ್ಯ ಮಾಡದೇ ಆಯೋಜಿಸಬೇಕು. ಹಿಂದೂಗಳು ಗಣೇಶ ಚತುರ್ಥಿ, ದೀಪಾವಳಿ ಆಚರಿಸುತ್ತಾರೆ. ಕ್ರೈಸ್ತರು ಕ್ರಿಸ್‍ಮಸ್ ಆಚರಿಸುತ್ತಾರೆ. ಆದರೆ ಈ ಸಂದರ್ಭದಲ್ಲಿ ಯಾವುದೇ ಉಪಹಾರ ಕೂಟವನ್ನು ಆಯೋಜಿಸದ ಸಿಎಂ ಸಿದ್ದರಾಮಯ್ಯ ಮುಸ್ಲಿಮರ ವೋಟ್ ಬ್ಯಾಂಕಿಗೆ ಈ ರೀತಿ ಮಾಡುವುದು ಎಷ್ಟು ಸರಿ ಎಂದು ಆರ್ ಟಿಐ ಕಾರ್ಯಕರ್ತ ಭಾಸ್ಕರನ್ ಪ್ರಶ್ನೆ ಮಾಡಿದ್ದಾರೆ.

    ಸರ್ಕಾರವೇ ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದಕ್ಕೆ ವ್ಯಾಪಕ ವಿರೋಧ ಕೇಳಿ ಬಂದಿತ್ತು. ಈಗ ಹನುಮ ಜಯಂತಿ, ದತ್ತ ಜಯಂತಿ ಕಾರ್ಯಕ್ರಮದ ಮೆರವಣಿಗೆಗೆ ಸರ್ಕಾರ ನಿರ್ಬಂಧ ಹೇರಿದ್ದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಹನುಮ ಜಯಂತಿ ವೇಳೆ ಪಾಲ್ಗೊಂಡಿದ್ದವರನ್ನು ಸರ್ಕಾರ ಕ್ಷಣ ಮಾತ್ರದಲ್ಲೇ ಬಂಧಿಸುತ್ತದೆ. ಹಿಂದೂ ಮುಖಂಡರ ಬಂಧನಕ್ಕೆ ಕ್ಷಣಾರ್ಧದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಆದರೆ ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಹೇಳಿಕೆ ನೀಡಿದ ಮೌಲ್ವಿಯನ್ನು ಕೂಡಲೇ ಬಂಧಿಸುವುದಿಲ್ಲ ಯಾಕೆ? ಮತಬ್ಯಾಂಕ್‍ಗಾಗಿ ಹಿಂದುಗಳ ಕಡೆಗಣನೆ ಮಾಡುವುದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

    https://youtu.be/HP6PMNpDDbg

  • ಉಡುಪಿ ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ಬೆಂಬಲಿಸ್ತೀವಿ: ಪರಮೇಶ್ವರ್

    ಉಡುಪಿ ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ಬೆಂಬಲಿಸ್ತೀವಿ: ಪರಮೇಶ್ವರ್

    ಉಡುಪಿ: ಸಮಾಜದಲ್ಲಿ ಸಾಮರಸ್ಯ ಇರಬೇಕು ಎಂದು ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ನಾವು ಬೆಂಬಲಿಸುತ್ತೇವೆ. ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ.

    ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಅಂದ್ರು. ಮುಂದಿನ ಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ನಾವು ಎಲ್ಲಾ ಸಚಿವರನ್ನು ಗಮನಿಸಿ ವರದಿಯನ್ನು ತರಿಸಿಕೊಳ್ತೇವೆ. ಬಳಿಕ ಸರ್ವೇಗಳನ್ನು ನಡೆಸುತ್ತೇವೆ. ಅದರ ಆಧಾರದ ಮೇಲೆ ವಸ್ತುಸ್ಥಿತಿ ತಿಳ್ಕೊಂಡು ಮುಂದಿನ ತೀರ್ಮಾನ ಮಾಡ್ತೇವೆ ಅಂತಾ ಹೇಳಿದ್ರು.

    ಕಲ್ಲಡ್ಕ ಗಲಭೆ ಬಗ್ಗೆ ಮಾತನಾಡಿದ ಅವರು, ಇಂತಹ ಘಟನೆ ಆಗಬಾರದು. ಕರಾವಳಿಯಲ್ಲಿ ಇತ್ತೀಚೆಗೆ ಇದು ಹೆಚ್ಚಾಗುತ್ತಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಇದಕ್ಕೆ ಪ್ರಚೋದನೆ ಮಾಡುತ್ತಿದ್ದಾರೆ ಅಂದ್ರು.

    ಇದೇ ಸಂದರ್ಭದಲ್ಲಿ ಯುಡಿಯೂರಪ್ಪ ದಲಿತರ ಮನೆಗೆ ಭೇಟಿ ವಿಚಾರ ಕುರಿತು ಮಾತನಾಡಿ, ನಾಟಕೀಯ ರಾಜಕಾರಣಕ್ಕಾಗಿ ಇದನ್ನು ಮಾಡುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಒಯ್ಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಸರ್ಕಾರ ಇರೋವಾಗ ದಲಿತರ ಸಮಸ್ಯೆಗೆ ಸ್ಪಂದಿಸಿಲ್ಲ. ಇದು ಕೇವಲ ರಾಜಕಾರಣ ಅಂತಾ ಇಡೀ ಜಗತ್ತಿಗೆ ಗೊತ್ತಾಗ್ತಾ ಇದೆ ಎಂದು ಪರಮೇಶ್ವರ್ ಹೇಳಿದರು.

  • ಉಡುಪಿಯಲ್ಲಿ ಶ್ರೀರಾಮಸೇನೆ ಪ್ರತಿಭಟನೆ: ಪರಧರ್ಮ ದ್ವೇಷದ ಪರಮಾವಧಿ ಎಂದ ಪೇಜಾವರ ಶ್ರೀ

    ಉಡುಪಿಯಲ್ಲಿ ಶ್ರೀರಾಮಸೇನೆ ಪ್ರತಿಭಟನೆ: ಪರಧರ್ಮ ದ್ವೇಷದ ಪರಮಾವಧಿ ಎಂದ ಪೇಜಾವರ ಶ್ರೀ

    ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ನಡೆದ ಇಫ್ತಾರ್ ಕೂಟ ಮತ್ತು ನಮಾಜ್ ಕಾರ್ಯಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ಶ್ರೀರಾಮಸೇನೆ ಭಜನೆ- ಪೂಜೆ ಮಾಡಿ ಪ್ರತಿಭಟನೆ ನಡೆಸಿದೆ. ನಗರದ ಸರ್ವೀಸ್ ಬಸ್ ನಿಲ್ದಾಣ ಸಮೀಪದ ಕ್ಲಾಕ್ ಟವರ್ ಮುಂಭಾಗ ಈ ಪ್ರತಿಭಟನೆ ನಡೆಯಿತು.

    ಶ್ರೀರಾಮಸೇನೆ ಸಂಘಟನೆಗೆ ಹಿಂದೂ ಜನಜಾಗೃತಿ ಸಮಿತಿ ಬೆಂಬಲಿಸಿತು. ಕ್ಲಾಕ್ ಟವರ್ ಮುಂಭಾಗ ಜಮಾಯಿಸಿದ ನೂರಾರು ಕಾರ್ಯಕರ್ತರು ಘಟನೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ದೇವರ ನಾಮ ಮತ್ತು ಭಜನೆಗಳನ್ನು ಹಾಡುವ ಮೂಲಕ ಇಫ್ತಾರ್ ಕೂಟ ಮತ್ತು ನಮಾಜ್ ಪ್ರಕ್ರಿಯೆಯನ್ನು ತೀವ್ರವಾಗಿ ಖಂಡಿಸಿದರು.

    ಈ ಸಂದರ್ಭ ಮಾತನಾಡಿದ ಶ್ರೀರಾಮ ಸೇನೆಯ ಮಂಗಳೂರು ಪ್ರಾಂತ್ಯ ಪ್ರಮುಖ್, ಇಫ್ತಾರ್ ಕೂಟಕ್ಕೆ ನಮ್ಮ ವಿರೋಧವಿಲ್ಲ. ಮುಂದೆ ನಮಾಜ್ ಮಠದ ವ್ಯಾಪ್ತಿಯಲ್ಲಿ ನಡೆಯಬಾರದು. ಪೇಜಾವರ ಶ್ರೀಗಳು ನಮ್ಮ ಅತ್ಯುನ್ನತ ಗುರುಗಳು. ಅವರಿಗೆ ಸಮಾನವಾದ ಗುರುಗಳು ಮತ್ತೊಬ್ಬರಿಲ್ಲ. ಆದ್ರೆ ನಮಾಜ್ ಮಾಡಿದ್ದು ಸರಿಯಲ್ಲ ಎಂದರು. ಮುಂದಿನ ಬಾರಿ ಬೇರೆ ಕಡೆಯಲ್ಲಿ ಇಫ್ತಾರ್ ಆಯೋಜಿಸಿ. ಆವಾಗ ಶ್ರೀರಾಮ ಸೇನೆ ಕೂಡಾ ಪಾಲ್ಗೊಳ್ಳುತ್ತದೆ ಎಂದು ಹೇಳಿದರು.

    ಮಠದಲ್ಲಿ ನಡೆದ ಇಫ್ತಾರ್‍ಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ಮನಸ್ಸಿಗೆ ಆದ ನೋವನ್ನು ಈ ಮೂಲಕ ತೋರ್ಪಡಿಸಿದ್ದೇವೆ. ಹಿಂದೂ ಸಮಾಜಕ್ಕಾದ ನೋವನ್ನು ಈ ರೀತಿಯಲ್ಲಿ ತೋಡಿಕೊಂಡಿದ್ದೇವೆ ಎಂದು ವಕ್ತಾರ ಜಯರಾಮ ಅಂಬೇಕಲ್ ಹೇಳಿದರು.

    ಪರಧರ್ಮ ದ್ವೇಷದ ಪರಮಾವಧಿ: ಶ್ರೀರಾಮ ಸೇನೆಯ ಪ್ರತಿಭಟನೆಯ ವಿರುದ್ಧ ಗರಂ ಆಗಿ ಪೇಜಾವರ ಶ್ರೀ ಪ್ರತಿಕ್ರಿಯಿಸಿ, ಇದು ಪರಧರ್ಮ ದ್ವೇಷದ ಪರಮಾವಧಿ ಎಂದು ಚಾಟಿ ಬೀಸಿದರು. ಮುತಾಲಿಕ್ ನೀಡಿದ ಹಿಂಸಾತ್ಮಕ- ರಕ್ತಪಾತದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ನನ್ನ ಧೋರಣೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಇಫ್ತಾರ್ ಮಾಡಿದ್ದರಿಂದ ಧರ್ಮಕ್ಕೆ ಏನು ನಷ್ಟವಾಯ್ತು, ಏನು ಹಾನಿಯಾಯ್ತು..? ಎಂದು ಪ್ರಶ್ನೆ ಹಾಕಿದ್ದಾರೆ. ಇದನ್ನೆಲ್ಲ ವಿರೋಧಿಸುವವರಿಗೆ ಶಾಸ್ತ್ರವೇ ಗೊತ್ತಿಲ್ಲ. ಪ್ರತಿಭಟನೆಗಳಿಂದ ನಾನು ವಿಚಲಿತನಾಗಿಲ್ಲ ಎಂದರು.

    ಇದನ್ನೂ ಓದಿ: ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

    ಕೃಷ್ಣಮಠವನ್ನು ಶುದ್ಧೀಕರಿಸುವ ಪ್ರಶ್ನೆಯೇ ಇಲ್ಲ ಎಂದ ಪೇಜಾವರ, ದೇವರ ಪ್ರಾರ್ಥನೆ ಮಾಡಿದರೆ ಅದು ತಪ್ಪಾ..? ಅದಕ್ಕೆ ಶುದ್ಧ ಮಾಡಬೇಕಾ. ಧರ್ಮಶಾಸ್ತ್ರಗಳ ವಿರೋಧ ನಾನು ಮಾಡಿಲ್ಲ. ಮಠವನ್ನು ಶುದ್ಧ ಮಾಡಲು ಕಾರಣ ಬೇಕಲ್ಲ. ಹಿಂದೂ ಧರ್ಮದಲ್ಲಿ ದ್ವೈತ- ಅದ್ವೈತ- ವಿಶಿಷ್ಟಾದ್ವೈತದ ಸಹಬಾಳ್ವೆ ಇದ್ದಂತೆ, ಬೇರೆ ಧರ್ಮಗಳ ನಡುವೆ ಸಹಿಷ್ಣುತೆ ಇದ್ದರೇನು ತಪ್ಪು ಎಂದು ಪ್ರಶ್ನಸಿದ್ದಾರೆ. ಧೈರ್ಯ ಇದ್ದರೆ ನನ್ನಲ್ಲಿ ಈ ಬಗ್ಗೆ ಚರ್ಚೆ ಮಾಡಲು ಬನ್ನಿ ಎಂದು ಪೇಜಾವರಶ್ರೀ ಮುತಾಲಿಕ್ ಗೆ ಹಾಗೂ ಶ್ರೀರಾಮ ಸೇನೆಗೆ ಶ್ರೀಗಳು ಬಹಿರಂಗ ಸವಾಲು ಹಾಕಿದ್ದಾರೆ.

    ಮುಸ್ಲಿಂ ಸಮುದಾಯದ ಮುಖಂಡ ರಹೀಂ ಉಚ್ಚಿಲ ಶ್ರೀಗಳ ಮಾತಿಗೆ ದನಿಗೂಡಿಸಿ, ರಕ್ತಪಾತ ಮಾಡುವುದಾದರೆ ಮೊದಲು ನಮ್ಮ ಮೇಲೆ ಮಾಡಲಿ. ನಾವು 2 ಸಾವಿರ ಮಂದಿ ಮುಸ್ಲಿಮರು ಮಠದ ಪರ ಇದ್ದೇವೆ. ವಿಶ್ವಮಟ್ಟದಲ್ಲಿ ಉಡುಪಿಗೆ ಪ್ರಖ್ಯಾತಿ ಇದೆ. ರಕ್ತಪಾತ ಎಂದು ಮುತಾಲಿಕ್ ಯಾರ ವಿರುದ್ಧ ಮಾತನಾಡುತ್ತಿದ್ದಾರೆ..? ಉಳ್ಳಾಲದ ದರ್ಗಾದ ಗರ್ಭಗುಡಿಯ ಒಳಗೆ ಬರುವಂತೆ ಪ್ರಮೋದ್ ಮುತಾಲಿಕ್‍ಗೆ ಸವಾಲು ಹಾಕಿದ್ರು.