Tag: ಇಫ್ತಾರ್ ಕೂಟ

  • ಉಡುಪಿ ಚಲೋ ವೇಳೆ ಗೋಮೂತ್ರ ಸಿಂಪಡಣೆ ಈಗ ಏಕಿಲ್ಲ: ಅಮೀನ್ ಮಟ್ಟು ವಿವಾದಾದ್ಮಕ ಪೋಸ್ಟ್

    ಉಡುಪಿ ಚಲೋ ವೇಳೆ ಗೋಮೂತ್ರ ಸಿಂಪಡಣೆ ಈಗ ಏಕಿಲ್ಲ: ಅಮೀನ್ ಮಟ್ಟು ವಿವಾದಾದ್ಮಕ ಪೋಸ್ಟ್

    ಬೆಂಗಳೂರು: ಉಡುಪಿ ಮಠದಲ್ಲಿ ನಡೆದ ಇಫ್ತಾರ್ ಕೂಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಫೇಸ್‍ಬುಕ್‍ನಲ್ಲಿ ವಿವಾದಾತ್ಮಕವಾಗಿ ಬರಹವನ್ನು ಪೋಸ್ಟ್ ಮಾಡಿದ್ದಾರೆ.

    ದಲಿತರು ಉಡುಪಿ ಚಲೋ ಮಾಡಿದ್ದ ಸಂದರ್ಭದಲ್ಲಿ ಮಠದ ಶುದ್ಧೀಕರಣಕ್ಕೆ ಅನುಮತಿ ನೀಡಿದ್ದ ಪೇಜಾವರ ಶ್ರೀಗಳು ಇದೀಗ ಮಠದಲ್ಲಿ ನಡೆದ ಇಫ್ತಾರ್ ಕೂಟವನ್ನು ಬೆಂಬಲಿಸುತ್ತಿದ್ದಾರೆ. ಹಾಗಾದರೆ ದಲಿತರು ಮುಸ್ಲಿಂಮರಿಗಿಂತಲೂ ಕೀಳಾದರೆ ಎಂದು ಅಮೀನ್ ಮಟ್ಟು ಪ್ರಶ್ನಿಸಿದ್ದಾರೆ.

    ಈ ಎಫ್‍ಬಿ ಪೋಸ್ಟ್ ಗೆ ಇಫ್ತಾರ್ ಕೂಟದಲ್ಲಿ ಭಾಗಿಯಾದ ಮುಸ್ಲಿಂ ಮುಖಂಡ ರಹೀಂ ಉಚ್ಚಿಲ್ ಖಾರವಾಗಿ ಪ್ರತಿಕ್ರಿಯಿಸಿದ್ದು, ಅಮೀನ್ ಮಟ್ಟು ಯಾಕೆ ಈ ರೀತಿ ಹೇಳ್ತಿದ್ದಾರೆ ಅಂತ ನನಗೆ ಅರ್ಥವಾಗ್ತಿಲ್ಲ. ಇಲ್ಲಿ ದಲಿತರು ಮುಸ್ಲಿಮರು ಎಂಬ ಪ್ರಶ್ನೆ ಇಲ್ಲ. ಈ ಹಿಂದೆ ದಲಿತ ಸಮುದಾಯದ ಕೆಲವು ಮಂದಿ ಅಲ್ಲಿಗೆ ಹೋಗಿದ್ದು ಸ್ವಾಮೀಜಿ ವಿರುದ್ಧವಾಗಿ, ಮಠದ ವಿರುದ್ಧವಾಗಿ. ಮಠದ ವಿರುದ್ಧ ಹೋರಾಟ ಮಾಡಲು. ಆದ್ರೆ ನಾವು ಮುಸ್ಲಿಮರು ಹೋಗಿದ್ದು ಸ್ವಾಮೀಜಿಯ ಆಹ್ವಾನದ ಮೇಲೆ. ಆದ್ದರಿಂದ ಮಠದ ವಿರುದ್ಧ ಹೋದವರ ಮನಸ್ಸು ಶುದ್ಧಿ ಮಾಡುವ ಕೆಲಸ ಆಗಿದೆ. ಅದು ಕೂಡ ಮಠದಿಂದ ಆಗಿದ್ದಲ್ಲ. ಮಠದ ವಿಶ್ವಾಸವಿದ್ದವರಿಂದ ಆಗಿದ್ದು. ನಾವು ಪರಿಶುದ್ಧವಾದ ಮನಸ್ಸಿನಿಂದ ಹೋಗಿದ್ದರಿಂದ ಆ ರೀತಿ ಮಾಡೋ ಪ್ರಶ್ನೆಯೇ ಇಲ್ಲ. ಶುದ್ಧ ಮನಸ್ಸಿನಿಂದ ಹೋಗಿದ್ದೇವೆ. ಇಲ್ಲಿ ಹಿಂದೂ, ಮುಸ್ಲಿಂ, ದಲಿತ ಎಂಬ ವಿಚಾರವೇ ಬರುವುದಿಲ್ಲ. ಅಮೀನ್ ಮಟ್ಟು ಈ ರೀತಿ ಹೇಳಿಕೆ ನೀಡಿ ದಲಿತರ ಓಲೈಕೆ ಮಾಡಲು ಹೊರಟಿದ್ದು, ಇದರಲ್ಲಿ ಖಂಡಿತ ಯಶಸ್ವಿಯಾಗಲ್ಲ ಎಂದಿದ್ದಾರೆ.

    ಚುನಾವಣೆ ಉದ್ದೇಶ ಇಟ್ಕೊಂಡು ಅಮೀನ್ ಮಟ್ಟು ಈ ರೀತಿ ಹೇಳಿದ್ದಾರೆ. ಮೊದಲು ಅಮೀನ್ ಮಟ್ಟು ಅಂತವರ ಮನಸ್ಸನ್ನು ಶುದ್ಧಿ ಮಾಡ್ಬೇಕು. ಕರ್ನಾಟಕ ರಾಜ್ಯದ ಜನತೆ ಕಾಂಗ್ರೆಸ್‍ಗೂ ಹಾಗೂ ಅಮೀನ್ ಮಟ್ಟು ಮನಸ್ಸನ್ನು ಶುದ್ಧಿ ಮಾಡಬೇಕಿದೆ. ಮುಸ್ಲಿಂ ಸಮುದಾಯ ಆಕ್ರೋಶಗೊಳ್ಳುವ ರೀತಿಯಲ್ಲಿ ಮಟ್ಟು ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

    ಈ ಬಗ್ಗೆ ಉಡುಪಿ ಚಲೋದಲ್ಲಿ ಪಾಲ್ಗೊಂಡ ಜಿಲ್ಲೆಯ ದಲಿತ ಮುಖಂಡ ಸುಂದರ್ ಮಾಸ್ಟರ್ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಸ್ವಾಮೀಜಿಯದ್ದು ದ್ವಂದ್ವ ನಿಲುವು. ಶ್ರೀಗಳ ನಡವಳಿಕೆ ಡೋಂಗಿತನ. ಆಗ ದಲಿತರು ರಸ್ತೆಯಲ್ಲಿ ನಡೆದ ಕೂಡಲೇ ಇಡೀ ಉಡುಪಿ ಮಲಿನವಾಗಿದೆ. ಈಗ ಇಫ್ತಾರ್ ಕೂಟ ನಡೆದಾಗ ಮಠದ ಒಳಗಡೆ ಹೋದಾಗ ಮಲಿನವೇ ಆಗಿಲ್ಲ. ಗೋಮೂತ್ರ ಹಾಕಿ ಶುದ್ಧೀಕರಣ ಮಾಡುವ ಅಗತ್ಯವಿಲ್ಲ. ದಲಿತರು ಬಂದಾಗ ಏನಾಗಿತ್ತು ಅವರಿಗೆ? ಸ್ವಾಮೀಜಿ ದಲಿತರು ಮತ್ತು ಮುಸ್ಲೀಮರ ಬಗ್ಗೆ ಇಬ್ಬಗೆ ನೀತಿ ಅನುಸರಿಸಿದ್ದಾರೆ ಎಂದು ದೂರಿದ್ದಾರೆ.

    ಅಮಿನ್ ಮಟ್ಟು ಅವರ ಫೇಸ್‍ಬುಕ್ ಪೋಸ್ಟ್,

  • ಶ್ರೀರಾಮಸೇನೆಯಿಂದ ಪ್ರತಿಭಟನೆಗೆ ಡೇಟ್ ಫಿಕ್ಸ್, ಕೃಷ್ಣ ಮಠಕ್ಕೆ ರಕ್ಷಣೆ ನೀಡ್ತೀವಿ ಎಂದ ಯುವ ಕಾಂಗ್ರೆಸ್

    ಶ್ರೀರಾಮಸೇನೆಯಿಂದ ಪ್ರತಿಭಟನೆಗೆ ಡೇಟ್ ಫಿಕ್ಸ್, ಕೃಷ್ಣ ಮಠಕ್ಕೆ ರಕ್ಷಣೆ ನೀಡ್ತೀವಿ ಎಂದ ಯುವ ಕಾಂಗ್ರೆಸ್

    ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮ ಸೇನೆ ಈಗಾಗಲೇ ಡೇಟ್ ಫಿಕ್ಸ್ ಮಾಡಿದೆ. ಈ ನಡುವೆ, ಕೃಷ್ಣಮಠಕ್ಕೆ ಮುತ್ತಿಗೆ ಹಾಕುವುದಾದ್ರೆ ಮಠಕ್ಕೆ ಭದ್ರತೆ ಕೊಡಲು ಸಿದ್ಧ ಅಂತಾ ಯುವ ಕಾಂಗ್ರೆಸ್ ಹೇಳಿದೆ. ಈ ಮೂಲಕ ಘಟನೆಗೆ ರಾಜಕೀಯ ಬಣ್ಣ ಬಂದಿದೆ.

    ಉಡುಪಿ ಶ್ರೀಕೃಷ್ಣಮಠದಲ್ಲಿ ಪೇಜಾವರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಇಫ್ತಾರ್ ಸಭೆ ವಿರುದ್ಧ ಶ್ರೀರಾಮ ಸೇನೆ ತಗಾದೆ ಎತ್ತಿತ್ತು. ಪ್ರಮೋದ್ ಮುತಾಲಿಕ್ ಸ್ವಾಮೀಜಿಯವರನ್ನು ಭೇಟಿಯಾಗಿ ಈ ಬಗ್ಗೆ ಸ್ಪಷ್ಟನೆ ಕೇಳಿದ್ರು. ವಿಶ್ವೇಶತೀರ್ಥರ ಉತ್ತರದಿಂದ ಸಂತುಷ್ಟರಾಗದ ಮುತಾಲಿಕ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಪ್ರತಿಭಟನೆ ನಡೆಸದಂತೆ ಹಿಂದೂ ಮುಖಂಡರು ಮುತಾಲಿಕ್ ಗೆ ಒತ್ತಡ ಹೇರಿದ್ದರು. ಆದ್ರೆ ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯುವ ಪ್ರಮೇಯವೇ ಇಲ್ಲ ಅಂತ ಶ್ರೀರಾಮಸೇನೆ ಸ್ಪಷ್ಟಪಡಿಸಿದೆ.

    ಇದನ್ನೂಓದಿ: ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

    ಶ್ರೀರಾಮ ಸೇನೆ ಜಿಲ್ಲಾ ವಕ್ತಾರ ಜಯರಾಂ ಮಾತನಾಡಿ, ಪ್ರತಿಭಟನೆಯಿಂದ ನಾವು ಹಿಂದೆ ಸರಿಯಲ್ಲ. ಪ್ರತಿಭಟನೆ ನಡೆಸಿಯೇ ಸಿದ್ಧ ಎಂದಿದ್ದಾರೆ. ನಾವು ಕೃಷ್ಣಮಠಕ್ಕೆ ಮುತ್ತಿಗೆ ಹಾಕುವುದಾಗಿ ಯುವ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿವೆ. ಪೇಜಾವರ ಶ್ರೀಗಳು ನಮ್ಮ ಗುರುಗಳು- ನಾವೆಲ್ಲಾ ಅವರ ಶಿಷ್ಯರು. ನಾವು ಯಾವತ್ತೂ ಸ್ವಾಮೀಜಿಗಳ ಬೆಂಬಲಕ್ಕೆ ಇದ್ದೇವೆ. ಇಫ್ತಾರ್ ಕೂಟ ಮಾಡಿದ್ದಕ್ಕೆ ನಮ್ಮ ವಿರೋಧವಿಲ್ಲ. ನಮ್ಮ ವಿರೋಧವೇನಿದ್ದರೂ ಕೃಷ್ಣಮಠದಲ್ಲಿ ನಡೆದ ನಮಾಜ್ ವಿಚಾರಕ್ಕೆ ಮಾತ್ರ ಎಂದರು. ಜುಲೈ 2ರಂದು ರಾಜ್ಯವ್ಯಾಪಿ ಪ್ರತಿಭಟನೆ ಮಾಡುತ್ತೆವೆ. ಪ್ರತಿಭಟನೆ ಶಾಂತ ರೀತಿಯಲ್ಲಿ ನಡೆಯಲಿದೆ ಎಂದರು.

    ಮಠಕ್ಕೆ ಭದ್ರತೆ: ಜುಲೈ 2ರಂದು ರಾಜ್ಯದಾದ್ಯಂತ ಶಾಂತ ರೀತಿಯ ಪ್ರತಿಭಟನೆ ನಡೆಸಲು ಶ್ರೀರಾಮ ಸೇನೆ ನಿರ್ಧರಿಸಿದೆ. ಈ ನಡುವೆ ಶ್ರೀರಾಮ ಸೇನೆ ಮಠಕ್ಕೆ ಮುತ್ತಿಗೆ ಹಾಕುವುದಾಗಿ ಗುಲ್ಲೆದ್ದಿದೆ. ಮಠಕ್ಕೆ ಮುತ್ತಿಗೆ ಹಾಕುವುದಾದರೆ ಯುವ ಕಾಂಗ್ರೆಸ್ ಮಠಕ್ಕೆ ಭದ್ರತೆ ನೀಡುವುದಾಗಿ ಹೇಳಿದೆ. ಶ್ರೀರಾಮಸೇನೆಯ ವಿರುದ್ಧ ಬೃಹತ್ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದೆ. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕೃಷ್ಣಮಠವನ್ನು ಶ್ರೀರಾಮ ಸೇನೆ ಗುತ್ತಿಗೆಗೆ ಪಡೆದಿಲ್ಲ. ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ್ದೇವೆ, ಅವರಿಗೆ ಧೈರ್ಯ ಹೇಳಿದ್ದೇವೆ. ಶ್ರೀರಾಮಸೇನೆ ಮುತ್ತಿಗೆ ಹಾಕಿದ್ರೆ ಮಠದ ಸುತ್ತಲೂ ಮಾನವ ಸರಪಳಿ ರಚಿಸಿ ಭದ್ರತೆ ಕೊಡುವುದಾಗಿ ಹೇಳಿದರು.

    ಇದನ್ನೂ ಓದಿ: ನವೆಂಬರ್‍ನಲ್ಲಿ ಉಡುಪಿಯಲ್ಲಿ ರಾಮಮಂದಿರಕ್ಕೆ ಮುಹೂರ್ತ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

    ಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟ ಭಾರೀ ವಿವಾದ ಎಬ್ಬಿಸಿದ ಬೆನ್ನಲ್ಲೇ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್‍ನಲ್ಲಿ ಸೌಹಾರ್ದ ಈದ್ ಆಚರಣೆ ನಡೆದಿದೆ. ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಶೀರೂರು ಲಕ್ಷ್ಮೀವರಶ್ರೀ, ಮುಸ್ಲೀಂ ಧರ್ಮಗುರು ಮೌಲಾನ ಅಬ್ದುಲ್ ರಹೀಮಾನ್ ರಜ್ವೀ ಕಲ್ಕಟ್ ಜೊತೆ ಸೇರಿ ಈದ್ ಸೌಹಾರ್ದ ಕೂಟ ಆಯೋಜಿಸಿದ್ದಾರೆ.

    ಇದನ್ನೂ ಓದಿ: ರಾಮಮಂದಿರಕ್ಕೆ ಉಡುಪಿಯಲ್ಲಿ ಮುಹೂರ್ತ!?- ಪೇಜಾವರಶ್ರೀ ಹೇಳಿದ್ದಿಷ್ಟು

  • ಗೋಮಾಂಸ ಸೇವನೆ ಮೂಲಕ ಕ್ರೌರ್ಯ ಮೆರೆದಿದ್ದಾರೆ: ಪಲಿಮಾರು ಶ್ರೀ ಕಿಡಿ

    ಗೋಮಾಂಸ ಸೇವನೆ ಮೂಲಕ ಕ್ರೌರ್ಯ ಮೆರೆದಿದ್ದಾರೆ: ಪಲಿಮಾರು ಶ್ರೀ ಕಿಡಿ

    – ಉಡುಪಿಯಲ್ಲಿ ಇಫ್ತಾರ್ ಕೂಟ ಏರ್ಪಡಿಸಿದ್ದು ತಪ್ಪಲ್ಲ

    ರಾಯಚೂರು: ಮೈಸೂರಿನಲ್ಲಿ ಸಾಹಿತಿ ಭಗವಾನ್ ಮತ್ತಿತರರು ಗೋಮಾಂಸ ಸೇವಿಸಿರುವುದು ಮುಸ್ಲಿಂ ಸಮಾಜದ ಮೇಲಿನ ಪ್ರೀತಿಯಿಂದಲ್ಲ ಹಿಂದೂಗಳ ಮೇಲಿನ ದ್ವೇಷದಿಂದ ಅಂತಾ ಪಲಿಮಾರು ಮಠದ ಪೀಠಾಧಿಪತಿ ವಿದ್ಯಾಧೀಶ ತೀರ್ಥ ಶ್ರೀಗಳು ಕಿಡಿಕಾರಿದ್ದಾರೆ.

    ಇದನ್ನೂಓದಿ: ಅನುಮತಿಯಿಲ್ಲದೇ ಸರ್ಕಾರಿ ಸಭಾಂಗಣದಲ್ಲಿ ಗೋಮಾಂಸ ಸೇವನೆ- ನೊಟೀಸ್ ಜಾರಿಗೆ ಡಿಸಿ ನಿರ್ಧಾರ

     

    ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಇದು ರಾಜಕೀಯ ಅಷ್ಟೇ. ಗೋಮಾಂಸ ಆದ್ರೇನೂ ಮನುಷ್ಯ ಮಾಂಸವಾದ್ರೇನೂ ಎರಡೂ ಕ್ರೌರ್ಯ ಎಂದಿದ್ದಾರೆ.

    ಇದನ್ನೂಓದಿ: ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

    ಪೇಜಾವರ ಶ್ರೀಗಳು ಇಫ್ತಾರ್ ಕೂಟ ಆಯೋಜಿಸಿದ್ದನ್ನ ಸಮರ್ಥಿಸಿಕೊಂಡ ಶ್ರೀಗಳು, ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಕೂಟ ಆಯೋಜಿಸಿದ್ದಾರೆ ತಪ್ಪೇನಿಲ್ಲಾ ಅಂತಾ ತಿಳಿಸಿದ್ರು. ಈ ಕಾರಣಕ್ಕೆ ಪ್ರಮೋದ್ ಮುತಾಲಿಕ್ ಪೇಜಾವರ ಶ್ರೀಗಳ ವಿರುದ್ಧ ಹೋರಾಟ ನಡೆಸುವುದು ಸರಿಯಲ್ಲ ಎಂದರು. ಮುಂದೆ ತಮ್ಮ ಪರ್ಯಾಯ ಕಾರ್ಯಕ್ರಮದಲ್ಲಿ ಎಲ್ಲಾ ಜಾತಿ ಜನಾಂಗದವರು ಪಾಲ್ಗೊಳ್ಳಲಿದ್ದಾರೆ ಅಂತಾ ಹೇಳಿದ್ದಾರೆ.

    ಇದನ್ನೂ ಓದಿ: ಕೃಷ್ಣಮಠದಲ್ಲಿ ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ: ಮುತಾಲಿಕ್

    ಇದನ್ನೂ ಓದಿ: ಗೋಹತ್ಯೆ ಪರ ಇರೋರಿಗೆ ಡೈಲಾಗ್ ನಲ್ಲೇ ಟಾಂಗ್ ಕೊಟ್ಟ ನಟ ಜಗ್ಗೇಶ್

  • ಕೃಷ್ಣಮಠದಲ್ಲಿ ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ: ಮುತಾಲಿಕ್

    ಕೃಷ್ಣಮಠದಲ್ಲಿ ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ: ಮುತಾಲಿಕ್

    ಉಡುಪಿ: ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಶ್ರೀಕೃಷ್ಣಮಠದಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಪೇಜಾವರ ಶ್ರೀಗಳನ್ನು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಇಂದು ಭೇಟಿ ಮಾಡಿದರು.

    ಇದೇ ವೇಳೆ ಮಾತನಾಡಿದ ಮುತಾಲಿಕ್, ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ. ಈ ಬಗ್ಗೆ ಪೇಜಾವರ ಸ್ವಾಮೀಜಿ ಜೊತೆ ಚರ್ಚಿಸಲು ಉಡುಪಿಗೆ ಬಂದಿದ್ದೇನೆ. ಗೋ ರಕ್ಷಣೆಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಆದ್ರೆ ಗೋ ಭಕ್ಷಕರಿಗೆ ಮಠದ ಆವರಣದಲ್ಲಿ ನಮಾಜ್ ಗೆ ಅವಕಾಶ ನೀಡಿದ್ದು ಸರಿಯಲ್ಲ ಎಂದು ಹೇಳಿದರು.

    ಪೇಜಾವರ ಸ್ವಾಮೀಜಿಯವರು ಈ ಬಗ್ಗೆ ಸಮರ್ಥನೆ ಮಾಡುತ್ತಿದ್ದಾರೆ. ಸ್ವಾಮೀಜಿ ಸಮರ್ಥನೆಯಿಂದ ನಮಗೆ ತೃಪ್ತಿಯಾಗಿಲ್ಲ. ಈ ಬಗ್ಗೆ ಮುಂದೇನು ಮಾಡಬೇಕು ಎಂದು ತೀರ್ಮಾನ ಕೈಗೊಳ್ಳುತ್ತೇವೆ. ಸಂಘಟನೆಯ ಒಳಗೆ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿ ಮಠದಿಂದ ಮುತಾಲಿಕ್ ತೆರಳಿದರು.

    ಇದೇ ವಿಚಾರವಾಗಿ ಪೇಜಾವರಶ್ರೀ ಪ್ರತಿಕ್ರಿಯೆ ನೀಡಿದ್ದು, ಸ್ವಧರ್ಮ ನಿಷ್ಠೆ ಪರಧರ್ಮ ಸಹಿಷ್ಣುತೆ ಇದು ನನ್ನ ತತ್ವ. 1955ರಿಂದ ಸ್ನೇಹ ಸೌಹಾರ್ಧಕ್ಕೆ ಪ್ರಯತ್ನಿಸುತ್ತಾ ಬಂದಿದ್ದೇನೆ. ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ. ಇಫ್ತಾರ್ ಕೂಟದಿಂದ ಹಿಂದೂಗಳು ಉದಾರಿಗಳು ಎಂಬ ಸಂದೇಶ ಹೋಗುತ್ತೆ. ಕೃಷ್ಣಮಠದ ಒಳಗೆ ನಮಾಜು ಮಾಡಿಲ್ಲ. ಸಾರ್ವಜನಿಕ ಭೋಜನ ಶಾಲೆಯಲ್ಲಿ ನಮಾಜು ನಡೆದಿದೆ. ಮಧ್ವಾಚಾರ್ಯರ ಕಾಲದಿಂದ ಮುಸ್ಲಿಮರ ಜೊತೆ ಉತ್ತಮ ಭಾಂದವ್ಯವಿದೆ. ಉಡುಪಿ ಚಲೋ ಸಂದರ್ಭದಲ್ಲಿ ಮುಸ್ಲಿಮರು ಮಠಕ್ಕೆ ಸಹಕಾರ ನೀಡಿದ್ದಾರೆ ಅಂದ್ರು.

    ಜನರ ಮನಸ್ಸು ಕದಡಿಸುವ ಕೆಲಸ ಯಾರೂ ಮಾಡಬೇಡಿ. ನನ್ನದು ಸ್ವತಂತ್ರ ವ್ಯಕ್ತಿತ್ವ. ಹಿಂದೂ ಧರ್ಮ ಏನು ಎಂಬುದು ಚೆನ್ನಾಗಿ ನನಗೆ ಗೊತ್ತು. ಇದೊಂದು ಸಹಜ ಕಾರ್ಯಕ್ರಮ. ಇದನ್ನು ದೊಡ್ಡ ವಿಷಯ ಮಾಡಬೇಡಿ ಅಂತ ಹೇಳಿದ್ರು.