Tag: ಇಶಾ ಪಂತ್

  • ಅಪ್ರಾಪ್ತ ಬಾಲಕಿ ರೇಪ್‌ಕೇಸ್ – ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1 ಲಕ್ಷ ಬಹುಮಾನ

    ಅಪ್ರಾಪ್ತ ಬಾಲಕಿ ರೇಪ್‌ಕೇಸ್ – ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1 ಲಕ್ಷ ಬಹುಮಾನ

    ಕಲಬುರಗಿ: ಅಫಜಲಪುರ ತಾಲೂಕಿನ ಆಳಂದ ಗ್ರಾಮದಲ್ಲಿ ನಡೆದಿದ್ದ ಅತ್ಯಾಚಾರ (Rape), ಕೊಲೆ ಪ್ರಕರಣದ ತನಿಖಾ ವರದಿಯನ್ನು (Investigation Report) 9 ದಿನಗಳಲ್ಲೇ ಬಾಲ ನ್ಯಾಯಮಂಡಳಿಗೆ ಸಲ್ಲಿಸಲಾಗಿದೆ ಎಂದು ಎಸ್ಪಿ ಇಶಾ ಪಂತ್ (Isha Pant) ತಿಳಿಸಿದ್ದಾರೆ.

    ನ.1ರಂದು ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು (Police) ಸಾಕ್ಷಿ ಸಮೇತ 9 ದಿನಗಳ ಒಳಗೇ ಬಾಲ ನ್ಯಾಯಮಂಡಳಿಗೆ ವರದಿ ಸಲ್ಲಿಸಲಾಗಿದೆ. ಇದನ್ನೂ ಓದಿ: ಬಯಲು ಬಹಿರ್ದೆಸೆಗೆ ತೆರಳಿದ್ದ ಬಾಲಕಿಯನ್ನು ರೇಪ್‌ ಮಾಡಿ ಕೊಲೆ

    ಅಪರಾಧ ಕೃತ್ಯವೆಸಗಿದ ಬಾಲಕನನ್ನು ತನಿಖಾ ತಂಡ ಕೇವಲ 24 ಗಂಟೆಯಲ್ಲೇ ವಶಕ್ಕೆ ಪಡೆದು, ವಿಚಾರಣೆ ನಡೆಸಿ ಬಾಲ ನ್ಯಾಯ ಮಂಡಳಿ ಮುಂದೆ ಹಾಜರು ಪಡಿಸಲಾಗಿತ್ತು. ತನಿಖಾ ತಂಡದ ಕಾರ್ಯವನ್ನು ಮೆಚ್ಚಿ ಡಿಜಿ ಮತ್ತು ಐಜಿಪಿಯವರು 1 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಪ್ರತಿಮೆ ಪ್ರತಿಷ್ಠಾಪಿಸಿ ಊದುಬತ್ತಿ ಹಚ್ಚಿ, ಆರತಿ ಬೆಳಗ್ತಾರಾ ನೋಡೋಣ – ಪ್ರಹ್ಲಾದ್‌ ಜೋಶಿ ಟಾಂಗ್‌

    ಶೇ.50 ಮೊತ್ತ ಬಾಲಕಿ ಕುಟುಂಬಕ್ಕೆ: ತನಿಖಾ ತಂಡಕ್ಕೆ ಡಿಜಿ (DGP) ಮತ್ತು ಐಜಿಪಿಯವರು (IGP) ಘೋಷಿಸಿದ 1 ಲಕ್ಷ ರೂ. ನಗದು ಬಹುಮಾನದ ಶೇ.50 ಮೊತ್ತವನ್ನು ಸಂತ್ರಸ್ತ ಬಾಲಕಿ ಕುಟುಂಬಕ್ಕೆ ನೀಡಲು ತನಿಖಾ ತಂಡ ನಿರ್ಧರಿಸಿದೆ. ತನಿಖಾ ತಂಡ ಕಾರ್ಯವನ್ನು ಎಸ್ಪಿ ಇಶಾ ಪಂತ್ ಅವರು ಪ್ರಶಂಸಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕನ್ನಡ ಕಲಿತು, ಹಾಡು ಹಾಡಿ ಮೆಚ್ಚುಗೆಗೆ ಪಾತ್ರರಾದ ಲೇಡಿ ಸಿಂಗಂ!

    ಕನ್ನಡ ಕಲಿತು, ಹಾಡು ಹಾಡಿ ಮೆಚ್ಚುಗೆಗೆ ಪಾತ್ರರಾದ ಲೇಡಿ ಸಿಂಗಂ!

    ಬೆಂಗಳೂರು: ನಗರದಲ್ಲಿ ಐಪಿಎಸ್ ಅಧಿಕಾರಿಯ ಕನ್ನಡ ಅಭಿಮಾನವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಲೇಡಿ ಸಿಂಗಂ ಖ್ಯಾತಿಯ ಡಿಸಿಪಿ, ಐಪಿಎಸ್ ಅಧಿಕಾರಿ ಇಷಾ ಪಂತ್ ಅವರು ಕನ್ನಡ ಹಾಡು ಹಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

    ಸದ್ಯ ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿಯಾಗಿ ಇವರು ಕೆಲಸ ನಿರ್ವಹಿಸುತ್ತಿದ್ದಾರೆ. ಕನ್ನಡ ಬರದಿದ್ದರೂ, ಕನ್ನಡ ಭಾಷೆ ಕಲಿತು ಹಾಡು ಹಾಡಿದ್ದಾರೆ. ‘ಜೊತೆಯಲಿ ಜೊತೆಯಲಿ ಇರುವೆನು ಹೀಗೆ ಎಂದೂ’… ಸಾಂಗ್ ಹಾಡಿರೋ ಇವರು 2011ರ ಬ್ಯಾಚ್ ನ ಐಪಿಎಸ್ ಅಧಿಕಾರಿ.

    2012ರಲ್ಲಿ ಎಲ್ಲಾ ಪ್ರೊಬೇಷನರ್ ಗಳನ್ನ ಹಿಂದಿಕ್ಕಿ ಬೆಸ್ಟ್ ಪ್ರೊಬೇಷನರ್ ಅನ್ನೋ ಪ್ರಶಸ್ತಿ ಪಡೆದಿದ್ದರು. ಮೂಲತಃ ಮಧ್ಯಪ್ರದೇಶದವರಾಗಿರುವ ಇವರು ಜಬ್ಬಲ್ ಪುರದಲ್ಲಿ ಎಎಸ್‍ಪಿಯಾಗಿದ್ದಾಗ ಡ್ರಗ್ ಮಾಫಿಯಾ, ಅಕ್ರಮ ಸಾರಾಯಿ ಮಾರಾಟದ ಅಡ್ಡೆಗಳನ್ನ ಮಟ್ಟ ಹಾಕಿದ್ದರು.

    2019ರಿಂದ ಆಗ್ನೇಯ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡ ಬರದಿದ್ರೂ ಕಲಿತು, ಸ್ವಷ್ಟವಾಗಿ ಹಾಗೂ ಇಂಪಾಗಿ ಹಾಡು ಹೇಳುವ ಮೂಲಕ ಇದೀಗ ಎಲ್ಲರ ಮನಗೆದ್ದಿದ್ದಾರೆ. ಸದ್ಯ ಇಶಾ ಪಂತ್ ಹಾಡು ಹಾಡಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

  • ತೇಜಸ್ವಿ ಸೂರ್ಯ ವಿರುದ್ಧ ಎಫ್‍ಐಆರ್ ದಾಖಲಾಗಿಲ್ಲ: ಡಿಸಿಪಿ ಇಶಾ ಪಂತ್

    ತೇಜಸ್ವಿ ಸೂರ್ಯ ವಿರುದ್ಧ ಎಫ್‍ಐಆರ್ ದಾಖಲಾಗಿಲ್ಲ: ಡಿಸಿಪಿ ಇಶಾ ಪಂತ್

    ಬೆಂಗಳೂರು: ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ವಿರುದ್ಧ ಯಾವುದೇ ಎಫ್‍ಐಆರ್ ದಾಖಲಾಗಿಲ್ಲ ಎಂದು ಡಿಸಿಪಿ ಇಶಾ ಪಂತ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

    ಇಂದು ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ, ಬೆಂಗಳೂರ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ತಮ್ಮ ಉಮೇದುವಾರಿಕೆಯಲ್ಲಿ ಈ ಬಗ್ಗೆ ಉಲ್ಲೇಖಿಸಿಲ್ಲ ಎಂದು ಆರೋಪಿಸಿದ್ದರು. ಇದೇ ವೇಳೆ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟ್ ಮಾಡಿದ್ದ ಸೋಮದತ್ತಾ ಪರಿಚತರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಬಿಡುಗಡೆಗೊಳಿಸಿದ್ದರು.

    ಆಡಿಯೋ ಕ್ಲಿಪ್ ನಲ್ಲಿ ಸಹ, ತೇಜಸ್ವಿ ಸೂರ್ಯನ ವಿರುದ್ಧ 2018ರ ಜೂನ್ ಅಥವಾ ಜುಲೈ ತಿಂಗಳಲ್ಲಿ ಆತನ ವಿರುದ್ಧ ದೂರು ದಾಖಲಿಸಿದ್ದೇನೆ. ಕೋರಮಂಗಲ ಪೊಲೀಸ್ ಠಾಣೆಗೆ ಹೋದರೆ ಎಲ್ಲ ಮಾಹಿತಿ ನಿಮಗೆ ಸಿಗಲಿದೆ. ಈಗಾಗಲೇ ಕೆಲವು ಮಾಧ್ಯಮದವರಿಗೆ ಎಫ್‍ಐಆರ್ ಪ್ರತಿ ಲಭ್ಯವಾಗಿದ್ದು, ನನ್ನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳುತ್ತಾರೆ.

    ಎಫ್‍ಐಆರ್ ದಾಖಲಾಗಿದೆ ಎಂದು ಬ್ರಿಜೇಶ್ ಕಾಳಪ್ಪ ತಿಳಿಸಿದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಈ ವಿಚಾರದ ಬಗ್ಗೆ ಸ್ಪಷ್ಟನೆ ಪಡೆಯಲು ಡಿಸಿಪಿ ಅವರನ್ನು ಸಂಪರ್ಕಿಸಿದೆ. ಈ ವೇಳೆ ತೇಜಸ್ವಿ ಸೂರ್ಯ ವಿರುದ್ಧ ಸಂತ್ರಸ್ತೆ ಯಾವುದೇ ಎಫ್‍ಐಆರ್ ದಾಖಲಿಸಿಲ್ಲ ಎಂದು ಇಶಾ ಪಂತ್ ಸ್ಪಷ್ಟನೆ ನೀಡಿದ್ದಾರೆ.

    ಆಡಿಯೋದಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ಹೇಳಿದ್ದರೆ ಡಿಸಿಪಿ ಯಾರೂ ದೂರು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ ಆಡಿಯೋದ ಬಗ್ಗೆ ಅನುಮಾನ ಎದ್ದಿದೆ.

    https://www.youtube.com/watch?v=b_yx7ATOliM