ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ ಮಹೇಂದ್ರ ರೆಡ್ಡಿ ಸಹ ಅದೇ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿದ್ದ.
2024ರ ಮೇ 26ರಂದು ಮಹೇಂದ್ರ ಮತ್ತು ಕೃತಿಕಾ ರೆಡ್ಡಿಗೆ ಮದುವೆಯಾಗಿತ್ತು. ವೈದ್ಯೆಗೆ ಅಜೀರ್ಣ, ಗ್ಯಾಸ್ಟ್ರಿಕ್ ಮತ್ತು ಲೋ ಶುಗರ್ ಸಮಸ್ಯೆ ಇತ್ತು. ಈ ವಿಚಾರ ಮಹೇಂದ್ರನಿಗೆ ತಿಳಿಸದೆ ಮದುವೆ ಮಾಡಿದ್ದರು. ಮದುವೆಯಾದ ಬಳಿಕ ಈ ವಿಚಾರ ಮಹೇಂದ್ರನಿಗೆ ಗೊತ್ತಾಗಿತ್ತು. ನಿತ್ಯ ವಾಂತಿ ಹಾಗೂ ಇತರ ಸಮಸ್ಯೆಯಿಂದ ಕೃತಿಕಾ ಬಳಲ್ತಿದ್ದರು. ಇದೇ ಕಾರಣಕ್ಕೆ ಆರೋಪಿ ಕೊಲೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಇಸ್ಕಾನ್ನ ‘ಪೌಷ್ಟಿಕ ಆಹಾರ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಂಗಳವಾರ ಚಾಲನೆ ನೀಡಿದರು. ಇನ್ಮುಂದೆ ಆಸ್ಪತ್ರೆಗಳಲ್ಲಿ ಇಸ್ಕಾನ್ನ (ISKCON) ರುಚಿಕರ ಹಾಗೂ ಆರೋಗ್ಯಕರ ಊಟ ಸಿಗಲಿದೆ.
ಇಂದಿರಾನಗರದಲ್ಲಿರುವ ಸಿ.ವಿ.ರಾಮನ್ ನಗರ ಜನರಲ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು. ಸದ್ಯ ಕೆಸಿ ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ, ಸಿವಿ ರಾಮನ್ ಜನರಲ್ ಆಸ್ಪತ್ರೆಯಲ್ಲಿ ಇಸ್ಕಾನ್ ಊಟ ಸಿಗಲಿದೆ. ಸುಮಾರು 9 ತಿಂಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ 1.37 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇದನ್ನೂ ಓದಿ: ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ – ಸಂತಸ ವ್ಯಕ್ತಪಡಿಸಿದ ರಾಜಮಾತೆ
ಏನೇನು ಆಹಾರ?
ಸೋಮವಾರ
ಬೆಳಗ್ಗೆ ಟಿಫನ್: ರವೆ ಉಪ್ಪಿಟ್ಟು, ಕಾಫಿ 100 ಎಂಲ್, ಬಾಳೆಹಣ್ಣು
ಮಧ್ಯಾಹ್ನ ಊಟ: ರಾಗಿಮುದ್ದೆ, ಸಾಂಬಾರು, ಸೋಯಾ
ಸಂಜೆ: ಟೀ – 70 ಎಂಎಲ್, ಬಿಸ್ಕೆಟ್
ರಾತ್ರಿ ಊಟ: ಚಪಾತಿ, ವೆಜ್ ಪಲ್ಯ, ಮೊಟ್ಟೆ
ಮಂಗಳವಾರ
ಟಿಫನ್: ಬಾಳೆಹಣ್ಣು, ಕಾಫಿ
ಮಧ್ಯಾಹ್ನ: ರಾಗಿ ಮುದ್ದೆ, ಸಾಂಬಾರ್, ಸೋಯಾ
ಸಂಜೆ: ಟೀ ಬಿಸ್ಕೆಟ್
ರಾತ್ರಿ ಊಟ – ಚಪಾತಿ, ಪಲ್ಯ, ಮೊಟ್ಟೆ
ಬುಧವಾರ
ಬೆಳ್ಳಗ್ಗೆ: ಪೊಂಗಲ್, ಕಾಫಿ,ಬಾಳೆ ಹಣ್ಣು
ಮಧ್ಯಾಹ್ನ: ರಾಗಿಮುದ್ದೆ, ಸಾಂಬಾರ್ ಮೊಟ್ಟೆ,
ಸಂಜೆ: ಟೀ ಬಿಸ್ಕೆಟ್
ರಾತ್ರಿ: ಚಪಾತಿ, ಸೊಪ್ಪು, ಪಲ್ಯ, ಮೊಟ್ಟೆ, ಸಾಂಬಾರು
ನಾಲ್ಕು ವರ್ಗದ ರೋಗಿಗಳಿಗೆ ಐದು ಮಾದರಿಯ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುವುದು.
1.ಜನರಲ್ ರೋಗಿಗಳಿಗೆ
2.ಥೆರಪಿಸ್ಟ್
3.ಬಾಣಂತಿಯರಿಗೆ ಬೇರೆ ಪೌಷ್ಠಿಕ ಆಹಾರ
4.ಮಕ್ಕಳಿಗೆ ಬೇರೆ ರೀತಿಯ ಪೌಷ್ಠಿಕ ಆಹಾರ
ಯೋಜನೆಗೆ ಚಾಲನೆ ಬಳಿಕ ದಿನೇಶ್ ಗುಂಡೂರಾವ್ ಮಾತನಾಡಿ, ಸಿ.ವಿ.ರಾಮನ್ ನಗರ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಆರಂಭ ಮಾಡುವುದಾಗಿ ಘೋಷಣೆ ಮಾಡುತ್ತೇವೆ. ಮಂಗಳೂರು, ಹೋಸಕೋಟೆಯಲ್ಲಿ ಕೂಡ ಕ್ಯಾಥ್ ಲ್ಯಾಬ್ ಓಪನ್ ಮಾಡ್ತೇವೆ. ಮೂರು ಆಸ್ಪತ್ರೆಗಳಲ್ಲಿ ಪ್ರಾಯೋಗಿಕವಾಗಿ ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದ್ದೇವೆ. ಇದನ್ನು ಇನ್ನೂ ವಿಸ್ತರಣೆ ಮಾಡೋ ಬಗ್ಗೆ ಚಿಂತನೆ ಆಗ್ತಿದೆ. ಐದು ಥರದ ಪೌಷ್ಟಿಕ ಆಹಾರ ವಿತರಣೆ ಮಾಡ್ತಾ ಇದ್ದೇವೆ. ಬಾಣಂತಿಯರಿಗೆ ಒಂದು ಆಹಾರ ಕ್ರಮ, ಥೆರಪಿಸ್ಟ್ಗಳಿಗೆ ಒಂದು ಮಾದರಿಯ ಆಹಾರ ಕ್ರಮ, ಮಕ್ಕಳಿಗೆ ಒಂದು ರೀತಿಯ ಆಹಾರ ಕ್ರಮ ಜಾರಿ ಆಗ್ತಿದೆ. ನಮ್ಮ ಆಸ್ಪತ್ರೆಯಲ್ಲಿ ಪ್ರಾರಂಭ ಆಗಿರೋದು ನನಗೆ ಬಹಳ ಸಂತೋಷ ಮತ್ತು ತೃಪ್ತಿ ತಂದಿದೆ ಎಂದು ತಿಳಿಸಿದ್ದಾರೆ.
ಮೊಟ್ಟೆ ಕೊಡದಿದ್ದರೂ ಪ್ರೋಟಿನ್ ಕಂಟೆಂಟ್ ಅನ್ನು ಕೊಡಬೇಕು. ಇದು ಪ್ರಥಮ ಹಂತದಲ್ಲಿ ಮೂರು ಆಸ್ಪತ್ರೆ. ಎಲ್ಲೆಲ್ಲಿ ಇಸ್ಕಾನ್ ಇದೆ, ಅಲ್ಲಿಯ ಜಿಲ್ಲಾ ಆಸ್ಪತ್ರೆಗಳಿಗೆ ವಿಸ್ತರಿಸೋದಕ್ಕೆ ತೀರ್ಮಾನ ಮಾಡುತ್ತೇವೆ. ಬೆಳಗಾವಿ, ಬಳ್ಳಾರಿ, ಧಾರವಾಡ, ಮೈಸೂರು ಹಲವು ಕಡೆ ವಿಸ್ತರಣೆ ಮಾಡುತ್ತೇವೆ. ಕೆ.ಆರ್ ಪುರಂ ಆಸ್ಪತ್ರೆಗೂ ವಿಸ್ತರಣೆಯನ್ನ ಮಾಡ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ – ಬಾಲಕೃಷ್ಣ ಸ್ಫೋಟಕ ಹೇಳಿಕೆ
ಮೂರು ಆಸ್ಪತ್ರೆಗಳಿಗೆ 9 ತಿಂಗಳಿಗೆ 1.45 ಕೋಟಿ ಭರಿಸಬೇಕು. ಈ ಮೂರು ಆಸ್ಪತ್ರೆ ಇಸ್ಕಾನ್ ಸುಪರ್ದಿಗೆ ಕೊಟ್ಟಿದ್ದೇವೆ. ಬಾಣಂತಿಯರು, ಗರ್ಭಿಣಿಯರಿಗೆ ಡಯಟ್ ಪ್ಲಾನ್ ಹಾಗೂ ಮಕ್ಕಳಿಗೆ ಪ್ರತ್ಯೇಕ ಡಯಟ್ ಪ್ಲಾನ್ ಇದೆ. ಇದು ಖಂಡಿತ ಯಶಸ್ಸು ಸಿಗುತ್ತೆ. ಒಂದೇ ತರಹದ ಆಹಾರ ಇರುತ್ತೆ. ಗುಣಮಟ್ಟ ನೋಡಿಕೊಳ್ಳೋದಕ್ಕೆ ಸಾಧ್ಯ ಆಗ್ತಾ ಇರಲಿಲ್ಲ. ಸಾಕಷ್ಟು ದೂರು ಬರ್ತಾ ಇತ್ತು. ಇಸ್ಕಾನ್ ಅವರಿಗೆ ಬಹಳಷ್ಟು ಅನುಭವ ಇದೆ. ನಮಗೆ ಖರ್ಚು ಕೂಡ ತುಂಬ ಆಗ್ತಾ ಇರಲಿಲ್ಲ. ಮೊಟ್ಟೆ ಬದಲು ಸೋಯಾ ಚಂಕ್ಸ್ ಕೊಡುತ್ತೇವೆ. ಪೂರ್ತಿ ಜವಾಬ್ದಾರಿ ಇಸ್ಕಾನ್ ಆಗಿರುವುದರಿಂದ ಪೌಷ್ಟಿಕಾಂಶ, ಸ್ವಚ್ಛತೆ ಇರಬೇಕು. ವಿತರಣೆ ಸಲಕರಣೆ ಎಲ್ಲಾ ಇಸ್ಕಾನ್ ಅವರದ್ದೇ. ಇಸ್ಕಾನ್ ಇರುವ ಕಡೆ ಈ ವ್ಯವಸ್ಥೆ ಮುಂದುವರಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಲಂಡನ್: ಇಸ್ಕಾನ್ (ISKCON) ರೆಸ್ಟೋರೆಂಟ್ಗೆ ವ್ಯಕ್ತಿಯೊಬ್ಬ ಚಿಕನ್ (Chicken) ತಂದು ತಿಂದಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಲಂಡನ್ನಲ್ಲಿರುವ ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಷಿಯಸ್ನೆಸ್ (ಇಸ್ಕಾನ್) ಗೋವಿಂದ ರೆಸ್ಟೋರೆಂಟ್ ಸಂಪೂರ್ಣವಾಗಿ ಸಸ್ಯಾಹಾರಿಯಾಗಿದೆ. ಈ ರೆಸ್ಟೋರೆಂಟ್ ಒಳಗೆ ಪ್ರವೇಶಿಸಿ ವ್ಯಕ್ತಿಯೊಬ್ಬ ಫ್ರೈಡ್ ಚಿಕನ್ ತಿನ್ನುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಿಡಿ ಹೊತ್ತಿಸಿದೆ.
ವೈರಲ್ ಆಗಿರುವ ಈ ವೀಡಿಯೊದಲ್ಲಿ, ಆಫ್ರಿಕನ್-ಬ್ರಿಟಿಷ್ ಮೂಲದ ವ್ಯಕ್ತಿಯೊಬ್ಬ ಇಸ್ಕಾನ್ನ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್ ಗೋವಿಂದದ ಆವರಣಕ್ಕೆ ಪ್ರವೇಶಿಸಿ, ಇಲ್ಲಿ ಮಾಂಸಾಹಾರ ಸಿಗುತ್ತಾ ಎಂದು ಕೇಳುತ್ತಿರುವುದು ಕಂಡುಬಂದಿದೆ.
ನಮ್ಮ ರೆಸ್ಟೋರೆಂಟ್ನಲ್ಲಿ ಮಾಂಸ, ಈರುಳ್ಳಿ ಅಥವಾ ಬೆಳ್ಳುಳ್ಳಿ ಸಿಗಲ್ಲ ಎಂದು ಸಿಬ್ಬಂದಿ ತಿಳಿಸಿದಾಗ, ಆತ ಕೆಎಫ್ಸಿ ಚಿಕನ್ ಬಾಕ್ಸ್ ತೆಗೆದು ರೆಸ್ಟೋರೆಂಟ್ ಒಳಗೆ ತಿನ್ನಲು ಪ್ರಾರಂಭಿಸಿದ್ದಾನೆ. ಇದನ್ನು ಕಂಡು ಸಿಬ್ಬಂದಿ ಅರೆಕ್ಷಣ ಆವಕ್ಕಾಗಿದ್ದಾರೆ.
ಈ ವೇಳೆ ಸ್ಥಳಕ್ಕಾಗಮಿಸಿದ ಗ್ರಾಹಕರೊಬ್ಬರು, ಕ್ಷಮಿಸಿ, ನೀವು ಮಾಡುತ್ತಿರುವುದು ಈ ಸ್ಥಳದ ನಿಯಮಗಳನ್ನು ಉಲ್ಲಂಘಿಸುತ್ತಿದೆ. ಇದು ನ್ಯಾಯಯುತವಲ್ಲ ಎಂದು ಹೇಳುತ್ತಾನೆ. ಆದಾಗ್ಯೂ, ಭದ್ರತಾ ಸಿಬ್ಬಂದಿಯನ್ನು ಕರೆಯುವವರೆಗೂ ಆ ವ್ಯಕ್ತಿ ಚಿಕನ್ ತಿನ್ನುವುದನ್ನು ಮುಂದುವರಿಸುತ್ತಾನೆ. ಕೊನೆಗೆ ಆತನನ್ನು ರೆಸ್ಟೋರೆಂಟ್ನಿಂದ ಹೊರಗೆ ಹಾಕಲಾಗುತ್ತದೆ.
ಈ ಘಟನೆಯು ಆಕ್ರೋಶಕ್ಕೆ ಕಾರಣವಾಗಿದೆ. ಈ ಕೃತ್ಯವು ಜನಾಂಗೀಯ ಪ್ರೇರಿತವಾಗಿದೆಯೇ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಗುರಿಯನ್ನು ಹೊಂದಿದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ವೀಡಿಯೋ ಇತ್ತೀಚಿನದ್ದೇ ಎಂಬುದು ದೃಢವಾಗಿಲ್ಲ.
ಬಾಂಗ್ಲಾದೇಶ: ಇಲ್ಲಿನ ರಾಜಧಾನಿಯಲ್ಲಿ ಹಿಂದೂಗಳನ್ನು ಸೇರಿಸಿ ಬೃಹತ್ ಪ್ರತಿಭಟನೆ ನಡೆಸಿದಕ್ಕೆ ಬಂಧಿಸಲಾಗಿದ್ದ ಇಸ್ಕಾನ್ ಸಂಸ್ಥೆಯ ಮಾಜಿ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ (Chinmoy Krishna Das) ಅವರಿಗೆ ಬಾಂಗ್ಲಾದ ಚಿತ್ತಗಾಂಗ್ ಹೈಕೋರ್ಟ್ (Chittagong HighCourt) 5 ತಿಂಗಳ ಬಳಿಕ ಜಾಮೀನು ನೀಡಿದೆ.
ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಯಾರು?
ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂ ಸಂಘಟನೆಯಾದ ಇಸ್ಕಾನ್ ಸಂಸ್ಥಾಪಕರಲ್ಲಿ ಒಬ್ಬರು ಮತ್ತು ಬಾಂಗ್ಲಾದೇಶದ (Bangladesh) ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲರಾಗಿದ್ದರು. ಸನಾತನ ಜಾಗರಣ್ ಮಂಚ್, ಬಾಂಗ್ಲಾದೇಶ ಸನಾತನ ಜಾಗರಣ ಮಂಚ್ ವಕ್ತಾರರು ಮತ್ತು ಪುಂಡರೀಕ್ ಧಾಮದ ಪ್ರಾಂಶುಪಾಲರಾಗಿದ್ದರು. ಇದನ್ನೂ ಓದಿ: ಪಾಕ್ ವಿರುದ್ಧ ಜಲಯುದ್ಧ – ಚೆನಾಬ್ ನದಿಯ ನೀರಿನ ಮಟ್ಟ ಭಾರೀ ಇಳಿಕೆ
ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಚಿನ್ಮಯ್ ಕೃಷ್ಣದಾಸ್ ಅವರು ಧ್ವನಿ ಎತ್ತಿದ್ದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಕೆಳಗಿಳಿದ ನಂತರ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ನಡೆಯುತ್ತಿತ್ತು. ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂದು ಟೀಕಿಸಿದ್ದರು.
– ಗುಜರಾತ್ನಲ್ಲಿ 241 ಕೋಟಿ ಮೌಲ್ಯ ಅಭಿವೃದ್ಧಿ ಯೋಜನೆಗಳಿಗೆ ಅಮಿತ್ ಶಾ ಚಾಲನೆ
– ಸೇವಾ ಮನೋಭಾವ ಜಾತ್ಯತೀತತೆಯ ಸಂಕೇತ; ಮೋದಿ ಬಣ್ಣನೆ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಹಾರಾಷ್ಟ್ರದ ನವಿ ಮುಂಬೈನ ಖಾರ್ಘರ್ ಪ್ರದೇಶದಲ್ಲಿ ನೂತನ ಇಸ್ಕಾನ್ ದೇವಾಲಯ (ISKCON Temple) ಉದ್ಘಾಟಿಸಿದರು.
ಬಳಿಕ ಮಾತನಾಡಿದ ಪ್ರಧಾನಿ ಮೋದಿ (Narendra Modi), ಭಾರತದ ಆಧ್ಯಾತ್ಮಿಕ ಸಂಸ್ಕೃತಿಯು ಸೇವಾ ಮನೋಭಾವದಲ್ಲಿ ಆಳವಾಗಿ ಬೇರೂರಿದೆ. ಹಾಗಾಗಿಯೇ ನಮ್ಮ ಸರ್ಕಾರ ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲ ಜನರ ಕಲ್ಯಾಣಕ್ಕಾಗಿ ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದೆ. ಬಡವರಿಗಾಗಿ ಮನೆ, ಶೌಚಾಲಯಗಳನ್ನು ನಿರ್ಮಿಸುವ ಕಾರ್ಯಕ್ರಮವನ್ನು ನಮ್ಮ ಸರ್ಕಾರ ಜಾರಿಗೊಳಿಸಿದೆ. ನಾಗರಿಕರಿಗೆ ಎಲ್ಪಿಜಿ ಸಂಪರ್ಕ, ವೈದ್ಯಕೀಯ ವಿಮೆ ಒದಗಿಸುವ ಹತ್ತು ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು.
ನಮ್ಮ ಆಧ್ಯಾತ್ಮಿಕ ಸಂಸ್ಕೃತಿಯ ಮುಖ್ಯ ಅಡಿಪಾಯ ಸೇವಾ ಮನೋಭಾವ. ಆ ಸೇವಾ ಮನೋಭಾವವು ಜಾತ್ಯತೀತತೆಯ ಸಂಕೇತವಾಗಿದೆ. ಭಾರತವು ಕೇವಲ ಭೌಗೋಳಿಕ ಗಡಿಗಳಿಂದ ಸುತ್ತುವರಿದ ತುಂಡು ಭೂಮಿ ಅಲ್ಲ. ಇದು ಜೀವಂತ ಭೂಮಿ, ಜೀವಂತ ಸಂಸ್ಕೃತಿ ಹೊಂದಿರುವ. ಈ ಜ್ಞಾನವನ್ನು ಅರ್ಥಮಾಡಿಕೊಳ್ಳಬೇಕಾದ್ರೆ ನಾವು ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
241 ಕೋಟಿ ರೂ. ಯೋಜನೆಗಳಿಗೆ ಅಮಿತ್ ಶಾ ಚಾಲನೆ
ಗುಜರಾತ್ನ ಮಾನ್ಸಾದಲ್ಲಿ ಸುಮಾರು 241 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಇತರ ಗಣ್ಯರು ಸಾಥ್ ನೀಡಿದ್ದಾರೆ.
ಬಳಿಕ ಮಾತನಾಡಿರುವ ಅಮಿತ್ ಶಾ, ನರೇಂದ್ರ ಮೋದಿ ಅವರು ಗುಜರಾತ್ನ ಮುಖ್ಯಮಂತ್ರಿಯಾಗಿದ್ದಾಗ ನೀರಿನ ಕೊರತೆಯನ್ನು ನೀಗಿಸಲು ಪರಿವರ್ತನಾಶೀಲ ಪ್ರಯತ್ನಗಳನ್ನು ಎತ್ತಿತೋರಿಸಿದರು ಎಂದರು.
ಒಂದು ಕಾಲದಲ್ಲಿ ಅಂತರ್ಜಲ ಮಟ್ಟ 1,200 ಅಡಿ ಆಳಕ್ಕೆ ಕುಸಿದಿತ್ತು. ಆದ್ರೆ ನರೇಂದ್ರ ಮೋದಿ ಅವರ ಪ್ರಯತ್ನಗಳು ಅಂತರ್ಜಲದ ಮಟ್ಟ ಹೆಚ್ಚಾಗಲು ಕಾರಣವಾಯಿತು. ಪ್ರಧಾನಿಯಾದ ಬಳಿಕ ನರ್ಮದಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೋಳಿಸಿದರು. ಈಗ ಗುಜರಾತ್ನಾದ್ಯಂತ ಪ್ರತಿ ಮನೆಗೂ ನರ್ಮದಾ ನೀರು ಹರಿಯುತ್ತಿದೆ. ಅಲ್ಲದೇ ಮಳೆ ನೀರು ಸಂರಕ್ಷಣೆಯಿಂದ ರಾಜ್ಯದ 9,000ಕ್ಕೂ ಹೆಚ್ಚು ಕೋಳಗಳಿಗೆ ಜೀವಕಳೆ ಬಂದಿದೆ ಎಂದು ಶ್ಲಾಘಿಸಿದರೆಂದು ಪ್ರಕಟಣೆ ತಿಳಿಸಿದೆ.
ಢಾಕಾ: ಬಾಂಗ್ಲಾದೇಶದಲ್ಲಿ ಇಸ್ಕಾನ್ (ISKCON) ಮೇಲಿನ ಸರ್ಕಾರದ ಪ್ರಹಾರ ಮುಂದುವರಿದಿದೆ. ಇತ್ತೀಚೆಗಷ್ಟೇ ಇಸ್ಕಾನ್ನ ಮೂವರು ಸನ್ಯಾಸಿಗಳನ್ನು ಬಂಧಿಸಿ, 17 ಮಂದಿಯ ಬ್ಯಾಂಕ್ ಖಾತೆಗಳನ್ನ (Bank Account) ಫ್ರೀಜ್ ಮಾಡಿತ್ತು. ಇದೀಗ ಇಸ್ಕಾನ್ನ 50ಕ್ಕೂ ಹೆಚ್ಚು ಸದಸ್ಯರು ಭಾರತಕ್ಕೆ ತೆರಳದಂತೆ ತಡೆಹಿಡಿದಿದೆ ಎಂದು ವರದಿಯಾಗಿದೆ.
ಸುಮಾರು 54 ಇಸ್ಕಾನ್ ಸದಸ್ಯರು ಶನಿವಾರ ತಡರಾತ್ರಿ ಮತ್ತು ಭಾನುವಾರ ಬೆಳಗ್ಗೆ ಬೆನಪೋಲ್ ಗಡಿಭಾಗಕ್ಕೆ ಆಗಮಿಸಿದ್ದರು. ಧಾರ್ಮಿಕ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವುದಕ್ಕಾಗಿ ಭಾರತಕ್ಕೆ ತೆರಳಲು ಗಂಟೆಗಟ್ಟಲೆ ಕಾದು ಕುಳಿತಿದ್ದರು. ಬಳಿಕ ಗಡಿ ಭದ್ರತಾ ಅಧಿಕಾರಿಗಳು ಅವರ ಪ್ರಯಾಣಕ್ಕೆ ಅನುಮತಿಯಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ಬಾಂಗ್ಲಾದೇಶವು ಇಸ್ಕಾನ್ ಸಂಘಟನೆಯನ್ನ ಗುರಿಯಾಗಿಸಿಕೊಂಡು ಪ್ರಮುಖರನ್ನ ಬಂಧಿಸುವುದು, ಗಡಿ ದಾಟದಂತೆ ತಡೆಹಿಡಿಯುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚಿನ್ಮೊಯ್ ಕೃಷ್ಣ ದಾಸ್ ಬಂಧನ
ಚಿತ್ತೋಗ್ರಾಮ್ನ ನ್ಯೂ ಮಾರ್ಕೆಟ್ ಪ್ರದೇಶದಲ್ಲಿ ಹಿಂದೂ ಸಮುದಾಯದ ರ್ಯಾಲಿ ಸಂದರ್ಭದಲ್ಲಿ ಬಾಂಗ್ಲಾದೇಶದ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದ್ದಾರೆ ಎಂದು ಆರೋಪಿಸಿ ಕೃಷ್ಣ ದಾಸ್ ಸೇರಿದಂತೆ 19 ಮಂದಿ ವಿರುದ್ಧ ಅ. 30ರಂದು ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಆ ಬಳಿಕ ಕೃಷ್ಣದಾಸ್ ಭೇಟಿಗೆ ತೆರಳಿದ್ದ ಇತರ ಸ್ವಾಮೀಜಿಗಳನ್ನು ಬಂಧಿಸಲಾಗಿತ್ತು.
ಢಾಕಾ: ದೇಶದ್ರೋಹ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಇಸ್ಕಾನ್ನ (ISKCON) ಮಾಜಿ ಸದಸ್ಯ ಚಿನ್ಮಯ್ ಕೃಷ್ಣ ದಾಸ್ (Chinmoy Krishna Das) ಅವರನ್ನು ಭೇಟಿಗೆ ತೆರಳಿದ್ದ ಅರ್ಚಕರೊಬ್ಬರನ್ನು ಬಾಂಗ್ಲಾದೇಶದ (Bangladesh) ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಅರ್ಚಕರನ್ನು ಶ್ಯಾಮ್ ದಾಸ್ ಪ್ರಭು (Sri Shyam Das Prabhu) ಎಂದು ಗುರುತಿಸಲಾಗಿದೆ. ಯಾವುದೇ ಅಧಿಕೃತ ವಾರಂಟ್ ಇಲ್ಲದೆ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಇಸ್ಕಾನ್ನ ಕೋಲ್ಕತ್ತಾದ ಉಪಾಧ್ಯಕ್ಷ ಮತ್ತು ವಕ್ತಾರ ರಾಧರಾಮ್ ದಾಸ್ ಅವರು, ಅರ್ಚಕರ ಬಂಧನದ ಕುರಿತು ಪೋಸ್ಟ್ ಮಾಡಿದ್ದಾರೆ. ಇನ್ನೊಬ್ಬ ಬ್ರಹ್ಮಚಾರಿ ಶ್ರೀ ಶ್ಯಾಮ್ ದಾಸ್ ಪ್ರಭು ಅವರನ್ನು ಇಂದು ಚಟ್ಟೋಗ್ರಾಮ್ ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಬಾಂಗ್ಲಾದೇಶದದಲ್ಲಿ ಇಸ್ಕಾನ್ ಮಾಜಿ ಸದಸ್ಯ ಚಿನ್ಮಯ್ ಕೃಷ್ಣ ದಾಸ್ ಅವರನ್ನು ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬಂಧಿಸಲಾಗಿತ್ತು. ಅವರ ಬಂಧನವು ರಾಜಧಾನಿ ಢಾಕಾ ಮತ್ತು ಚಟ್ಟೋಗ್ರಾಮ್ ಸೇರಿದಂತೆ ಬಾಂಗ್ಲಾದೇಶದ ವಿವಿಧ ಸ್ಥಳಗಳಲ್ಲಿ ಹಿಂದೂಗಳ ಪ್ರತಿಭಟನೆಗೆ ಕಾರಣವಾಗಿದೆ.
ಚಿನ್ಮಯ್ ಕೃಷ್ಣ ದಾಸ್ ಅವರನ್ನು ಬಿಡುಗಡೆ ಮಾಡಲು ಒತ್ತಾಯಿಸಿ ನಡೆದ ಪ್ರತಿಭಟನೆ (Protest) ವೇಳೆ ಪೊಲೀಸರ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಇನ್ನೂ ಕೃಷ್ಣದಾಸ್ ಅವರಿಗೆ ಚಟ್ಟೋಗ್ರಾಮ್ ನ್ಯಾಯಾಲಯ ಮಂಗಳವಾರ ಜಾಮೀನು ನಿರಾಕರಿಸಿತ್ತು.
ಬೆಂಗಳೂರು: ಬಾಂಗ್ಲಾದೇಶದಲ್ಲಿ(Bangladesh) ಇಸ್ಕಾನ್ (ISKCON)ಸಂಸ್ಥೆ ಬ್ಯಾನ್ ಮಾಡಲು ಹೊರಟಿರುವುದು ಮತ್ತು ಹಿಂದೂಗಳ ಮೇಲೆ ದೌರ್ಜನ್ಯ ಆಗುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ನಿಲುವು ತಿಳಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ, ಅಟ್ಟಹಾಸ ಮಿತಿ ಮೀರಿದೆ. ಮೋದಿ ಸರ್ಕಾರ ಈಗಾಗಲೇ ಬಾಂಗ್ಲಾದೇಶಕ್ಕೆ ಹಿಂದೂಗಳಿಗೆ ತೊಂದರೆ ಕೊಡದಂತೆ ಚಿನ್ಮಯ್ ಕೃಷ್ಣದಾಸ್ ಬಿಡುಗಡೆಗೆ ಆಗ್ರಹ ಮಾಡಿದ್ದಾರೆ. ಇಸ್ಕಾನ್ ಅನುಮತಿ ರದ್ದು ಮಾಡಬೇಕು ಎಂಬ ಬಾಂಗ್ಲಾದೇಶ ಸರ್ಕಾರದ ಮನವಿಯನ್ನ ಹೈಕೋರ್ಟ್ ತಿರಸ್ಕಾರ ಮಾಡಿದೆ. ಈ ವಿಚಾರದಲ್ಲಿ ಮಮತ ಬ್ಯಾನರ್ಜಿ ಕೇಂದ್ರದ ಪರವಾಗಿ ಇರುತ್ತೇನೆ ಅಂತ ಹೇಳಿದ್ದಾರೆ. ಬ್ಯಾನರ್ಜಿ ಮಾತನ್ನ ನಾನು ಸ್ವಾಗತ ಮಾಡುತ್ತೇನೆ. ಈ ವಿಚಾರದಲ್ಲಿ ಕಾಂಗ್ರೆಸ್ ನಡೆ ಏನು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಿಎಂ ಇರೋ ಕೆಲಸ ಮೊದಲು ಮಾಡಲಿ, ರಾಜ್ಯಪಾಲರ ಕೆಲಸ ಯಾಕೆ ಕಡಿತ ಮಾಡ್ತೀರಾ? – ಅಶ್ವಥ್ ನಾರಾಯಣ ಕಿಡಿ
ರಾಹುಲ್ ಗಾಂಧಿ ನಾನು ಹಿಂದು ಪರ ಅಂತಾರೆ ಯಾಕೆ ಈ ಬಗ್ಗೆ ಮಾತಾಡಿಲ್ಲ. ನಮ್ಮ ರಾಜ್ಯ ಸರ್ಕಾರ ಯಾಕೆ ಇದರ ಬಗ್ಗೆ ಮಾತಾಡಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧ ಸರ್ಕಾರ. ಇಂದೇ ಸಿದ್ದರಾಮಯ್ಯ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು. ಕೇಂದ್ರದ ನಿಲುವು ನಾವು ಬೆಂಬಲಿಸಬೇಕು ಅಂತ ಆಗ್ರಹ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಯಾಕೆ ತಟಸ್ಥವಾಗಿದೆ. ಕಾಂಗ್ರೆಸ್ ನಡೆ ಸಂಶಯವಾಗಿದೆ. ತುಷ್ಟೀಕರಣದ ನಡೆಯಿಂದ ಬಾಂಗ್ಲಾದೇಶ, ಮತ್ತೊಂದು ಪಾಕಿಸ್ತಾನದ ಕವಲು ರಾಜ್ಯದಲ್ಲಿ ಒಡೆಯೋ ಸುಳಿವು ಸಿಗುತ್ತಿದೆ. ಕೇಂದ್ರ ಸರ್ಕಾರ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ವ್ಯವಸ್ಥೆಯನ್ನ ಕಡಿವಾಣ ಹಾಕಲು ಕ್ರಮವಹಿಸಬೇಕು. ದೇಶದ ಎಲ್ಲಾ ರಾಜ್ಯಗಳು ಕೇಂದ್ರಕ್ಕೆ ಬೆಂಬಲಕ್ಕೆ ನಿಲ್ಲಬೇಕು. ಚಿನ್ಮಯ ಕೃಷ್ಣದಾಸ್ ರನ್ನ ಬಿಡುಗಡೆ ಮಾಡಬೇಕು. ಬಾಂಗ್ಲಾದೇಶದಲ್ಲಿ ಇರುವ ಹಿಂದೂಗಳ ರಕ್ಷಣೆಯಾಬೇಕು. ಕಾಂಗ್ರೆಸ್ ನಿಲುವು ಏನು ಅಂತ ತಿಳಿಸಬೇಕು ಅಂತ ಆಗ್ರಹ ಮಾಡಿದರು.
ಢಾಕಾ: ಇಸ್ಕಾನ್ (ISKCON) ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿಯಾಗಿದೆ ಎಂದು ಆರೋಪಿಸಿ ಇಸ್ಕಾನ್ ಸಂಸ್ಥೆಯನ್ನು ನಿಷೇಧಿಸಲು ಮುಂದಾಗಿದ್ದ ಬಾಂಗ್ಲಾದೇಶ (Bangladesh) ಸರ್ಕಾರಕ್ಕೆ ಹೈಕೋರ್ಟ್ನಲ್ಲಿ (High Court) ಮುಖಭಂಗವಾಗಿದೆ.
ಬಾಂಗ್ಲಾದೇಶದಲ್ಲಿ ಇಸ್ಕಾನ್ ಚಟುವಟಿಕೆ ನಿಷೇಧಿಸಲು ಢಾಕಾ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ ಹಿಂದೂಗಳ (Hindu) ಮೇಲೆ ದಾಳಿಯಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ.
ಈ ಪ್ರಶ್ನೆಗೆ ಉತ್ತರಿಸಿದ ಎಜಿ, ಚಿನ್ಮಯ್ ಕೃಷ್ಣದಾಸ್ (Chinmay Krishna Das) ಬಂಧನದ ಬಳಿಕ ತೀವ್ರ ಘರ್ಷಣೆಯಾಗಿದೆ. ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಸೈಫುಲ್ಲಾ ಇಸ್ಲಾಂ ಮೃತಪಟ್ಟಿದ್ದಾರೆ. ಇಸ್ಕಾನ್ ಮೇಲೆ 3 ಕೇಸ್ಗಳಿವೆ. 33 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಬಾಂಗ್ಲಾದೇಶ ನೆಲದ ಕಾನೂನು ಸುವ್ಯವಸ್ಥೆ ಇಲ್ಲಿನ ನಾಗರಿಕರು, ಆಸ್ತಿಯ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಕ್ರಮಗೊಳ್ಳುವ ಭರವಸೆ ಕೊಟ್ಟಿದೆ. ಇಸ್ಕಾನ್ ನಿಷೇಧ ಮಾಡುವುದಿಲ್ಲ ಎಂದು ಹೇಳಿತು.
ಢಾಕಾ/ನವದೆಹಲಿ: ಬಾಂಗ್ಲಾದೇಶದ ಇಸ್ಲಾಂ ಮೂಲಭೂತವಾದಿ ಸರ್ಕಾರದ ಹಿಂದೂ (Hindu) ದ್ವೇಷ ರಾಜಕೀಯ ಮಿತಿ ಮೀರುತ್ತಿದೆ. ಹಿಂದೂ ಪ್ರಜೆಗಳ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದೆ.
ಬಾಂಗ್ಲಾ ರಾಷ್ಟ್ರಧ್ವಜಕ್ಕೆ (Bangladesh National Flag) ಅಪಮಾನ ಎಸಗಿದ ಆರೋಪದ ಮೇಲೆ ಮಂಗಳವಾರ ಇಸ್ಕಾನ್ (ISKCON) ಸಂತ ಚಿನ್ಮಯ್ ಕೃಷ್ಣದಾಸ್ರನ್ನು (Chinmoy Krishna Das) ಬಂಧಿಸಿದ್ದ ಪೊಲೀಸರು ದೇಶದ್ರೋಹದ (Sedition) ಕೇಸ್ ದಾಖಲಿಸಿದ್ದಾರೆ. ಕೋರ್ಟ್ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಚಿನ್ಮಯ್ ಕೃಷ್ಣದಾಸ್ ಬಂಧನಕ ಖಂಡಿಸಿ ಬಾಂಗ್ಲಾ ಹಿಂದೂಗಳು ದೊಡ್ಡಮಟ್ಟದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೊತ್ತಲ್ಲೇ ಮಹತ್ವದ ಬೆಳವಣಿಗೆ ಘಟಿಸಿದೆ. ಇಸ್ಕಾನ್ ಸಂಸ್ಥೆಯನ್ನು ನಿಷೇಧಿಸಲು ಬಾಂಗ್ಲಾ ಸರ್ಕಾರ ಚಿಂತನೆ ನಡೆಸಿದೆ. ಇಸ್ಕಾನ್ ಸಂಸ್ಥೆ ಒಂದು ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿಯಾಗಿದೆ. ಇದನ್ನು ನಿಷೇಧಿಸಿ ಎಂದು ಕೋರಿ ಢಾಕಾ ಹೈಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆ ಆಗಿದೆ. ಇದನ್ನೂ ಓದಿ: ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ
ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಮೊಹಮ್ಮದ್ ಅಸದುಜ್ಜಮಾನ್ ಕೂಡ, ಇಸ್ಕಾನ್ಗೆ ಧಾರ್ಮಿಕ ಮೂಲಭೂತವಾದಿ ಸಂಸ್ಥೆ ಎಂಬ ಹಣೆಪಟ್ಟಿ ಕಟ್ಟಿದ್ದಾರೆ. ಇಸ್ಕಾನ್ ಸಂಸ್ಥೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ಶುರುವಾಗಿವೆ ಎಂಬುದನ್ನು ಕೋರ್ಟ್ ಗಮನಕ್ಕೆ ತಂದರು.
ಈ ವೇಳೆ ಇಸ್ಕಾನ್ ಸಂಸ್ಥೆಯ ವಿರುದ್ಧ ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಬಗ್ಗೆ ನಾಳೆಯೊಳಗೆ ವರದಿ ನೀಡಿ ಬಾಂಗ್ಲಾ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿತು. ಬಾಂಗ್ಲಾ ದೇಶದ ನಡೆ ಅಲ್ಲಿನ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.
ಚಿನ್ಮಯ್ ಕೃಷ್ಣದಾಸ್ ಬಿಡುಗಡೆಗೆ ಆಗ್ರಹಿಸಿ ಇಸ್ಕಾನ್ ಸಂಸ್ಥೆ ವಿರುದ್ಧ ಕ್ರಮ ತೆಗೆದುಕೊಳ್ಳದಂತೆ ಬಾಂಗ್ಲಾ ದೇಶವನ್ನು ತಡೆಯುವಂತೆ ಒತ್ತಾಯಿಸಿ ಕೋಲ್ಕತ್ತಾದಲ್ಲಿ ಇಸ್ಕಾನ್ ಸಂಸ್ಥೆ ಪ್ರತಿಭಟನೆ ನಡೆಸಿದೆ. ಚಿನ್ಮಯ್ ಬಿಡುಗಡೆಗಾಗಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ.
ದೇಶದ್ರೋಹದ ಕೇಸ್ ಯಾಕೆ?
ಚಿತ್ತಗಾಂಗ್ನಲ್ಲಿ ವ್ಯಾಪಾರಿ ಓಸ್ಮಾನ್ ಆಲಿ ಎಂಬಾತ ಇಸ್ಕಾನ್ ನಿಷೇಧಿಸಿ ಎಂದು ಪೋಸ್ಟ್ ಹಾಕಿದ್ದ.ಇದಕ್ಕೆ ಇಸ್ಕಾನ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಂಗಡಿ ಮುಂದೆ ನಡೆಯುತ್ತಿದ್ದ ಪ್ರತಿಭಟನೆ ಘರ್ಷಣೆಗೆ ತಿರುಗಿದೆ. ಘರ್ಷಣೆ ವೇಳೆ ಕಲ್ಲು ತೂರಾಟ, ಜೈಶ್ರೀರಾಮ್ ಘೋಷಣೆ ವೇಳೆ ಆಸಿಡ್ ದಾಳಿಯಾಗಿದೆ. ಈ ಘರ್ಷಣೆಯಲ್ಲಿ 14 ಪೊಲೀಸರು ಗಾಯಗಳಾಗಿತ್ತು. ಆಲಿ ಅಂಗಡಿ ಧ್ವಂಸವಾಗಿತ್ತು. ಆರೋಪಿ ಓಸ್ಮಾನ್ ಆಲಿ ಸೇರಿ 82 ಮಂದಿಯನ್ನು ಪೊಲೀಸರು ಬಂಧಿಸಿದ್ದರು.
ಚಿತ್ತಗಾಂಗ್ನಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು. ಈ ಕಾರಣಕ್ಕೆ ಪ್ರತಿಭಟನೆಯ ಉಸ್ತುವಾರಿ ಹೊತ್ತಿದ್ದ ಇಸ್ಕಾನ್ ಸಂತ ಚಿನ್ಮಯ್ ಕೃಷ್ಣದಾಸ್ ಸೇರಿ 18 ಮಂದಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.
ಚಿನ್ಮಯ್ ಕೃಷ್ಣದಾಸ್ ಯಾರು?
38 ವರ್ಷದ ಕೃಷ್ಣದಾಸ್ ಬಾಂಗ್ಲಾದ ಚಿತ್ತಗಾಂಗ್ ಮೂಲದವರು. ಬಾಲ್ಯದಿಂದಲೇ ಧಾರ್ಮಿಕ ಭಾಷಣಗಳಿಗೆ ಫೇಮಸ್ ಆಗಿದ್ದ ಇವರು ಶಿಶುಭಕ್ತ ಎಂದೇ ಜನಪ್ರಿಯರಾಗಿದ್ದರು.
2007ರಿಂದ ಪುಂಡರಿಕ್ ಧಾಮ್ ಅಧ್ಯಕ್ಷ ಮತ್ತು 2016ರಿಂದ ಇಸ್ಕಾನ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶೇಖ್ ಹಸೀನಾ ಪಲಾಯನದ ನಂತರ ದೇಗುಲಗಳ ಮೇಲೆ ದಾಳಿ ನಡೆದ ಬಳಿಕ ಆಗಸ್ಟ್ನಲ್ಲಿ ಸನಾತನ ಜಾಗರಣ ಮಂಚ್ ಹೆಸರಿನ ಸಂಘಟನೆ ರಚನೆಯಾಗಿತ್ತು. ಕೃಷ್ಣದಾಸ್ ಈ ಸಂಘಟನೆಯ ವಕ್ತಾರರಾಗಿದ್ದಾರೆ.