Tag: ಇಸ್ರೇಲ್

  • ಹಮಾಸ್‌ ಕಳ್ಳಾಟಕ್ಕೆ ಇಸ್ರೇಲ್‌ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ, 30 ಬಲಿ

    ಹಮಾಸ್‌ ಕಳ್ಳಾಟಕ್ಕೆ ಇಸ್ರೇಲ್‌ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ, 30 ಬಲಿ

    ಗಾಜಾ: ಹಮಾಸ್‌ (Hamas) ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್‌ (Israel) ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ (Gaza Strip) 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

    ಇಸ್ರೇಲ್‌ ಉತ್ತರ ಗಾಜಾದ ಹಲವಾರು ಜಾಗಗಳನ್ನು ಗುರಿಯಾಗಿಸಿ ಇಸ್ರೇಲ್‌ ವಾಯು ದಾಳಿ ನಡೆಸಿದೆ. ಮಧ್ಯ ಗಾಜಾ ಪಟ್ಟಿಯಲ್ಲಿರುವ ಬುರೈಜ್ ನಿರಾಶ್ರಿತರ ಶಿಬಿರದಲ್ಲಿ ಮನೆ ಮೇಲೆ ದಾಳಿ ನಡೆಸಿದ ಐದು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ, ಮತ್ತೊಂದು ದಾಳಿಯಲ್ಲಿ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ.

    ಉತ್ತರ ಗಾಜಾದ ವೈದ್ಯಕೀಯ ಸೌಲಭ್ಯದ ಬಳಿ ಕನಿಷ್ಠ ಮೂರು ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ಅಲ್ ಶಿಫಾ ಆಸ್ಪತ್ರೆಯ ನಿರ್ದೇಶಕ ಡಾ. ಮೊಹಮ್ಮದ್ ಅಬು ಸಲ್ಮಿಯಾ ಹೇಳಿದ್ದಾರೆ.

    ಯಾಕೆ ಮತ್ತೆ ದಾಳಿ?
    ಸೋಮವಾರ ಹಮಾಸ್ ಒತ್ತೆಯಾಳಿನ ಮೃತದೇಹ ಇರುವ ಶವಪೆಟ್ಟಿಗೆಯನ್ನು ಹಸ್ತಾಂತರಿಸಿತ್ತು. ಆದರೆ ಈ ಶವಪೆಟ್ಟಿಗೆಯಲ್ಲಿ ಈ ಹಿಂದೆ ಮರಳಿಸಿದ ಒತ್ತೆಯಾಳಿನ ಮೃತದೇಹದ ಹೆಚ್ಚಿನ ಭಾಗಗಳಿದ್ದವು ಎಂದು ಇಸ್ರೇಲ್ ಹೇಳಿದೆ.

     

    ಸೋಮವಾರ ಹಸ್ತಾಂತರಿಸಲಾದ ದೇಹದ ಭಾಗಗಳು ಓಫಿರ್ ಝರ್ಫಾಟಿ ಎಂಬವರಿಗೆ ಸೇರಿದೆ ಎನ್ನುವುದು ವಿಧಿವಿಜ್ಞಾನ ಪರೀಕ್ಷೆಗಳಿಂದ ದೃಢಪಟ್ಟಿತ್ತು. ಆದರೆ ಅವರ ಮೃತ ದೇಹವನ್ನು 2023ರ ಕೊನೆಯಲ್ಲಿ ಇಸ್ರೇಲ್‌ ಪಡೆಗಳು ವಶಪಡಿಸಿದ್ದವು. ಈಗ ಕಳುಹಿಸಿದ ಮೃತದೇಹಗಳು ಗಾಜಾದಲ್ಲಿ ಮೃತಪಟ್ಟ 13 ಮೃತ ಒತ್ತೆಯಾಳುಗಳದ್ದಲ್ಲ ಎಂದು ಎಂದು ತಿಳಿಸಿದೆ. ಇದನ್ನೂ ಓದಿ:  282 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ – ಚಂಡಮಾರುತದ ಹೊಡೆತಕ್ಕೆ ಜಮೈಕಾ ತತ್ತರ

    ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇತೃತ್ವದಲ್ಲಿ ಅರಬ್ ರಾಷ್ಟ್ರಗಳ ಸಮ್ಮುಖದಲ್ಲಿ ಕದನ ವಿರಾಮ ಘೋಷಣೆಯಾಗಿತ್ತು. ಈಗ ಬೇರೆ ವ್ಯಕ್ತಿಯ ಮೃತದೇಹವನ್ನು ಕಳುಹಿಸಿ ಹಮಾಸ್‌ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಇಸ್ರೇಲ್‌ ಹೇಳಿದೆ.

    ಒತ್ತೆಯಾಳುಗಳನ್ನು ಹತ್ಯೆ ಮಾಡಿ ನಂತರ ಇಸ್ರೇಲ್‌ ದಾಳಿಗೆ ಇವರು ಹತ್ಯೆಯಾಗಿದ್ದಾರೆ ಎಂದು ಹಮಾಸ್‌ ಬಿಂಬಿಸುತ್ತಿದೆ. ಇದಕ್ಕೆ ಸಾಕ್ಷ್ಯವಾಗಿ ಐಡಿಎಫ್‌ ವಿಡಿಯೋ ರಿಲೀಸ್‌ ಮಾಡಿದೆ. ಈ ವಿಡಿಯೋದಲ್ಲಿ ಕಟ್ಟಡದಿಂದ ಇಸ್ರೇಲ್‌ ಒತ್ತೆಯಾಳುವಿನ ಶವವನ್ನು ಎಸೆಯಲಾಗಿದ್ದು ನಂತರ ಅದನ್ನು ಮಣ್ಣಿನಲ್ಲಿ ಹೂಳಲಾಗಿದೆ.  ಈ ಎಲ್ಲಾ ದೃಶ್ಯಗಳು ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಹಮಾಸ್‌ ಕಳ್ಳಾಟಕ್ಕೆ ಇಸ್ರೇಲ್‌ ಈಗ ಸಿಟ್ಟಾಗಿದೆ. ಭದ್ರತಾ ಸಮಾಲೋಚನೆಗಳ ನಂತರ ಪ್ರಧಾನಿ ನೆತನ್ಯಾಹು ಅವರು ಗಾಜಾ ಪಟ್ಟಿ ಮೇಲೆ ತಕ್ಷಣವೇ ಪ್ರಬಲ ದಾಳಿಗಳನ್ನು ನಡೆಸುವಂತೆ ಮಿಲಿಟರಿಗೆ ಸೂಚನೆ ನೀಡಿದ್ದರು.

  • ಮೃತದೇಹದಲ್ಲೂ ಹಮಾಸ್‌ ಕಳ್ಳಾಟ, ಇಸ್ರೇಲ್‌ ಕೆಂಡಾಮಂಡಲ – ಗಾಜಾ ಮೇಲೆ ಭಾರೀ ದಾಳಿಗೆ ಆದೇಶ

    ಮೃತದೇಹದಲ್ಲೂ ಹಮಾಸ್‌ ಕಳ್ಳಾಟ, ಇಸ್ರೇಲ್‌ ಕೆಂಡಾಮಂಡಲ – ಗಾಜಾ ಮೇಲೆ ಭಾರೀ ದಾಳಿಗೆ ಆದೇಶ

    ಟೆಲ್‌ ಅವಿವ್‌: ಹಮಾಸ್‌ನಿಂದ (Hamas) ಕದನ ವಿರಾಮ ಒಪ್ಪಂದ ಉಲ್ಲಂಘನೆಯಾದ ಬೆನ್ನಲ್ಲೇ ಇಸ್ರೇಲ್‌ (Isreal) ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ತಕ್ಷಣವೇ ಪ್ರಬಲ ದಾಳಿ ನಡೆಸುವಂತೆ ಆದೇಶಿಸಿದ್ದಾರೆ.

    “ಭದ್ರತಾ ಸಮಾಲೋಚನೆಗಳ ನಂತರ, ಪ್ರಧಾನಿ ನೆತನ್ಯಾಹು ಅವರು ಗಾಜಾ ಪಟ್ಟಿ(Gaza Strip) ಮೇಲೆ ತಕ್ಷಣವೇ ಪ್ರಬಲ ದಾಳಿಗಳನ್ನು ನಡೆಸುವಂತೆ ಮಿಲಿಟರಿಗೆ ಸೂಚನೆ ನೀಡಿದ್ದಾರೆ” ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ.

    ಯಾಕೆ ಮತ್ತೆ ದಾಳಿ?
    ಸೋಮವಾರ ಹಮಾಸ್ ಒತ್ತೆಯಾಳಿನ ಮೃತದೇಹ ಇರುವ ಶವಪೆಟ್ಟಿಗೆಯನ್ನು ಹಸ್ತಾಂತರಿಸಿತ್ತು. ಆದರೆ ಈ ಶವಪೆಟ್ಟಿಗೆಯಲ್ಲಿ ಈ ಹಿಂದೆ ಮರಳಿಸಿದ ಒತ್ತೆಯಾಳಿನ ಮೃತದೇಹದ ಹೆಚ್ಚಿನ ಭಾಗಗಳಿದ್ದವು ಎಂದು ಇಸ್ರೇಲ್ ಹೇಳಿದೆ.

    ಸೋಮವಾರ ಹಸ್ತಾಂತರಿಸಲಾದ ದೇಹದ ಭಾಗಗಳು ಓಫಿರ್ ಝರ್ಫಾಟಿ ಎಂಬವರಿಗೆ ಸೇರಿದೆ ಎನ್ನುವುದು ವಿಧಿವಿಜ್ಞಾನ ಪರೀಕ್ಷೆಗಳಿಂದ ದೃಢಪಟ್ಟಿತ್ತು. ಆದರೆ ಅವರ ಮೃತ ದೇಹವನ್ನು 2023ರ ಕೊನೆಯಲ್ಲಿ ಇಸ್ರೇಲ್‌ ಪಡೆಗಳು ವಶಪಡಿಸಿದ್ದವು. ಈಗ ಕಳುಹಿಸಿದ ಮೃತದೇಹಗಳು ಗಾಜಾದಲ್ಲಿ ಮೃತಪಟ್ಟ 13 ಮೃತ ಒತ್ತೆಯಾಳುಗಳದ್ದಲ್ಲ ಎಂದು ಎಂದು ತಿಳಿಸಿದೆ.

    ಅಮೆರಿಕ ನೇತೃತ್ವದಲ್ಲಿ ಅರಬ್ ರಾಷ್ಟ್ರಗಳ ಸಮ್ಮುಖದಲ್ಲಿ ಕದನ ವಿರಾಮ ಘೋಷಣೆಯಾಗಿತ್ತು. ಈಗ ಬೇರೆ ವ್ಯಕ್ತಿಯ ಮೃತದೇಹವನ್ನು ಕಳುಹಿಸಿ ಹಮಾಸ್‌ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಇಸ್ರೇಲ್‌ ಹೇಳಿದೆ.

  • ಹಮಾಸ್‌ ಸೆರೆಯಲ್ಲಿದ್ದ ನೇಪಾಳ ವಿದ್ಯಾರ್ಥಿ ಸಾವು ದೃಢ – ಇಸ್ರೇಲ್‌ಗೆ ಮೃತದೇಹ ಹಸ್ತಾಂತರ

    ಹಮಾಸ್‌ ಸೆರೆಯಲ್ಲಿದ್ದ ನೇಪಾಳ ವಿದ್ಯಾರ್ಥಿ ಸಾವು ದೃಢ – ಇಸ್ರೇಲ್‌ಗೆ ಮೃತದೇಹ ಹಸ್ತಾಂತರ

    – ಸುಧಾರಿತ ಕೃಷಿ ತಂತ್ರಗಳ ಅಧ್ಯಯನಕ್ಕೆ ಹಿಂದೂ ವಿದ್ಯಾರ್ಥಿ
    – ಸೆರೆಯಾಗುವ ಮುನ್ನ ಹತ್ತಾರು ಜೀವಗಳನ್ನ ಉಳಿಸಿದ್ದರಂತೆ ಬಿಪಿನ್‌

    ಜೆರುಸಲೇಮ್‌/ಟೆಲ್‌ ಅವಿವ್: 2023ರ ಅಕ್ಟೋಬರ್‌ 7ರಂದು ಹಮಾಸ್‌ ದಾಳಿ ನಡೆಸುವ 3 ವಾರಗಳಿಗೆ ಮೊದಲೇ ಇಸ್ರೇಲ್‌ಗೆ ತೆರಳಿದ್ದ ನೇಪಾಳದ ಕೃಷಿ ವಿದ್ಯಾರ್ಥಿ (Nepalese Student) ಬಿಪಿನ್‌ ಜೋಶಿ (Bipin Joshi) ಮೃತಪಟ್ಟಿದ್ದಾರೆ ಎಂದು ಹಮಾಸ್‌ ದೃಢಪಡಿಸಿದೆ. ಬದುಕುಳಿದ ಎಲ್ಲರನ್ನ ಇಸ್ರೇಲ್‌ಗೆ ಹಸ್ತಾಂತರಿಸಿದೆ. ಇದರೊಂದಿಗೆ ಬಿಪಿನ್‌ ಜೋಶಿ ಮೃತಪಟ್ಟ ವಿಷಯ ಖಚಿತಪಡಿಸಿದ್ದು, ಮೃತದೇಹವನ್ನ ಇಸ್ರೇಲ್‌ಗೆ ಹಸ್ತಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಹೌದು. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಈಜಿಪ್ಟ್‌ನಲ್ಲಿ ನಡೆದ ಶಾಂತಿ ಒಪ್ಪಂದದ ನಂತರ ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಎರಡು ವರ್ಷಗಳ ಸುದೀರ್ಘ ಯುದ್ಧ ಅಧಿಕೃತವಾಗಿ ಅಂತ್ಯಗೊಂಡಿದೆ. ಹೀಗಾಗಿ ಎಲ್ಲ 20 ಒತ್ತೆಯಾಳುಗಳನ್ನ (Hamas Hostage) ಹಮಾಸ್‌ ಬಿಡುಗಡೆ ಮಾಡಿದೆ.

    ಇದೇ ವೇಳೆ 2 ವರ್ಷಗಳ ಹಿಂದೆ ಹಮಾಸ್ ಅಪಹರಿಸಿದ್ದ ನೇಪಾಳದ ಹಿಂದೂ ವಿದ್ಯಾರ್ಥಿ (Nepal Hindu Student) ಬಿಪಿನ್ ಜೋಶಿ ಅವರ ದೇಹವನ್ನ ಇಸ್ರೇಲ್‌ಗೆ ಹಿಂತಿರುಗಿಸಲಾಗಿದೆ. ಈ ಕುರಿತು ಇಸ್ರೇಲ್‌ನಲ್ಲಿರುವ ನೇಪಾಳದ ರಾಯಭಾರಿ ಧನ ಪ್ರಸಾದ್ ಪಂಡಿತ್ ಮಾಹಿತಿ ನೀಡಿದ್ದಾರೆ. ಬಿಪಿನ್ ಜೋಶಿಯವರ ಮೃತದೇಹವನ್ನ ಹಮಾಸ್ ಇಸ್ರೇಲಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ಅದನ್ನು ಟೆಲ್ ಅವೀವ್‌ಗೆ ಕೊಂಡೊಯ್ಯಲಾಗುತ್ತಿದೆ ಎಂದಿದ್ದಾರೆ.

    ನೇಪಾಳಕ್ಕೆ ಹಸ್ತಾಂತರಕ್ಕೂ ಮುನ್ನ ಡಿಎನ್‌ಎ ಟೆಸ್ಟ್‌
    ಜೋಶಿಯವರ ಮೃತದೇಹವನ್ನ ನೇಪಾಳಕ್ಕೆ ವಾಪಸ್ ಕಳುಹಿಸುವ ಮೊದಲು ಡಿಎನ್‌ಎ (DNA) ಪರೀಕ್ಷೆ ನಡೆಸಿ, ನೇಪಾಳಿ ರಾಯಭಾರ ಕಚೇರಿಯ ಸಮನ್ವಯದೊಂದಿಗೆ ಇಸ್ರೇಲ್‌ನಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುವುದು ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

    ನೂರಾರು ಕನಸು ಹೊತ್ತು ಬಂದಿದ್ದ ಜೋಶಿ
    ಅಕ್ಟೋಬರ್‌ನಲ್ಲಿ ಯುದ್ಧ ಶುರುವಾಗ 3 ವಾರಗಳಿಗೂ ಮೊದಲೇ ಬಿಪಿನ್‌ ಜೋಶಿ ಇಸ್ರೇಲ್‌ಗೆ ತೆರಳಿದ್ದರು. ಗಾಜಾ ಗಡಿಯ ಬಳಿಯ ಕಿಬ್ಬುಟ್ಜ್ ಅಲುಮಿಮ್‌ನಲ್ಲಿ ಸುಧಾರಿತ ಕೃಷಿ ತಂತ್ರಗಳ ಅಧ್ಯಯನಕ್ಕೆ ತೆರಳಿದ್ದ 16 ವಿದ್ಯಾರ್ಥಿಗಳಲ್ಲಿ ಜೋಶಿ ಒಬ್ಬರಾಗಿದ್ದರು. ಆದರೆ ಅಕ್ಟೋಬರ್ 7, 2023 ರಂದು ಹಮಾಸ್ ದಕ್ಷಿಣ ಇಸ್ರೇಲ್ ನಡೆಸಿದ ಅನಿರೀಕ್ಷಿತ ದಾಳಿಯಿಂದಾಗಿ ವಿದ್ಯಾರ್ಥಿಗಳು ಬಾಂಬ್ ಶೆಲ್ಟರ್‌ನಲ್ಲಿ ಆಶ್ರಯ ಪಡೆದಿದ್ದರು. ಆ ವೇಳೆ ಹಮಾಸ್‌ ಉಗ್ರರು ಇಸ್ರೇಲ್‌ನ ಕಿಬ್ಬುಟ್ಜ್‌ ಶೆಲ್ಟರ್‌ಗೆ ಗ್ರೆನೇಡ್‌ಗಳನ್ನು ಎಸೆದು ನುಗ್ಗಿದರು. ಅದರಲ್ಲಿ ಒಂದು ಗ್ರೆನೇಡ್ ಸ್ಫೋಟಿಸಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡರು, ಆದರೆ ಜೋಶಿ ತಕ್ಷಣವೇ ಕಾರ್ಯ ನಿರ್ವಹಿಸಿ, 2ನೇ ಗ್ರೆನೇಡ್ ಅನ್ನು ಹಿಡಿದು ಅದು ಸ್ಫೋಟಗೊಳ್ಳುವ ಮೊದಲು ಹೊರಗೆ ಎಸೆದು ಜೀವಗಳನ್ನು ಉಳಿಸಿದರು ಎಂದು ಬದುಕುಳಿದ ನೇಪಾಳದ ಏಕೈಕ ವಿದ್ಯಾರ್ಥಿ ಹಿಮಾಂಚಲ್ ಕಟ್ಟೆಲ್ ಹೇಳಿದ್ದಾರೆ.

    ನಂತರ ಅವರನ್ನು ಹಮಾಸ್‌ ಬಂದೂಕುಧಾರಿಗಳು ಸೆರೆ ಹಿಡಿದು ಗಾಜಾಗೆ ಕರೆದೊಯ್ದರು. ನಂತರದ ದಿನಗಳಲ್ಲಿ, ಇಸ್ರೇಲಿ ಮಿಲಿಟರಿ ಬಿಡುಗಡೆ ಮಾಡಿದ ವೀಡಿಯೊ ದೃಶ್ಯಗಳಲ್ಲಿ ಜೋಶಿಯನ್ನು ಗಾಜಾದ ಶಿಫಾ ಆಸ್ಪತ್ರೆಗೆ ಎಳೆದುಕೊಂಡು ಹೋಗುತ್ತಿರುವುದನ್ನು ತೋರಿಸಲಾಗಿತ್ತು. ಥಾಯ್ ಕಾರ್ಮಿಕರೊಂದಿಗೆ ಕೂಡಿಹಾಕಿದ್ದು, ಅವರ ಕೊನೆಯ ಜೀವಂತ ದೃಶ್ಯವಾಗಿತ್ತು.

  • ಟ್ರಂಪ್‌ ಭಾಷಣಕ್ಕೆ ಅಡ್ಡಿ – ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ಟ್ರಂಪ್‌ ಭಾಷಣಕ್ಕೆ ಅಡ್ಡಿ – ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ಜೆರುಸಲೆಮ್: ಡೊನಾಲ್ಡ್‌ ಟ್ರಂಪ್‌ (Donald Trump) ಭಾಷಣಕ್ಕೆ ಅಡ್ಡಿ ಪಡಿಸಿದ್ದಕ್ಕೆ ಇಸ್ರೇಲ್‌ ಸಂಸದರನ್ನು ಸಂಸತ್‌ ಭವನದಿಂದಲೇ ಬಲವಂತವಾಗಿ ಹೊರಹಾಕಿದ ಪ್ರಸಂಗ ಇಂದು ನಡೆಯಿತು.

    ಇಸ್ರೇಲ್ ಮತ್ತು ಗಾಜಾದ ಹಮಾಸ್ ಬಂಡುಕೋರರ ನಡುವಿನ ಸುದೀರ್ಘ 2 ವರ್ಷಗಳ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಇಸ್ರೇಲ್‌ ಸಂಸತ್ತನ್ನು ಉದ್ದೇಶಿಸಿ ಟ್ರಂಪ್‌ ಭಾಷಣ ಮಾಡಿದರು.

     

    ಹಲವು ವರ್ಷಗಳ ನಿರಂತರ ಯುದ್ಧದ ನಂತರ ಇಂದು ಆಕಾಶವು ಶಾಂತವಾಗಿದೆ. ಬಂದೂಕುಗಳು ಮೌನವಾಗಿವೆ. ಸೈರನ್‌ಗಳು ಶಬ್ಧ ಮಾಡುವುದನ್ನು ನಿಲ್ಲಿಸಿವೆ. ಶಾಂತಿಯಿಂದ ಇರುವ ಪವಿತ್ರ ಭೂಮಿಯ ಮೇಲೆ ಸೂರ್ಯ ಉದಯಿಸುತ್ತಿದ್ದಾನೆ ಎಂದು ಹೇಳಿದರು. ಇದನ್ನೂ ಓದಿ:  ಯುದ್ಧದ ಅಂತ್ಯ ಮಾತ್ರವಲ್ಲ, ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯ: ಟ್ರಂಪ್‌

    ಭಾಷಣ ಮಾಡುತ್ತಿದ್ದಾಗ ಟ್ರಂಪ್ ವಿರುದ್ಧ ಹೀಬ್ರೂ ಭಾಷೆಯಲ್ಲಿ ಸಂಸದರಾದ ಐಮನ್ ಒಡೆಹ್ ಮತ್ತು ಓಫರ್ ಕ್ಯಾಸಿಫ್ ಘೋಷಣೆ ಕೂಗಿದರು. ಇವರಿಬ್ಬರು ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಹಿಡಿದಿದ್ದರು. ಘೊಷಣೆ ಕೂಗಿದ ಬೆನ್ನಲ್ಲೇ ಭದ್ರತಾ ಸಿಬ್ಬಂದಿ ಬಲವಂತವಾಗಿ ಎಡಪಂಥಿಯ ಸಂಸದರನ್ನು ಹೊರಗೆ ಎಳೆದುಕೊಂಡು ಹೋದರು.

  • ಯುದ್ಧದ ಅಂತ್ಯ ಮಾತ್ರವಲ್ಲ, ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯ: ಟ್ರಂಪ್‌

    ಯುದ್ಧದ ಅಂತ್ಯ ಮಾತ್ರವಲ್ಲ, ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯ: ಟ್ರಂಪ್‌

    – ಇಸ್ರೇಲ್‌, ಹಮಾಸ್‌ ನಡುವೆ ಕದನ ವಿರಾಮ
    – ಇಸ್ರೇಲ್‌ ಸಂಸತ್ತಿನಲ್ಲಿ ಟ್ರಂಪ್‌ ಭಾಷಣ

    ಜೆರುಸಲೆಮ್: ಯುದ್ಧದ ಅಂತ್ಯ ಮಾತ್ರವಲ್ಲ. ಇದು ಹೊಸ ಮಧ್ಯಪ್ರಾಚ್ಯದ ಐತಿಹಾಸಿಕ ಉದಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಬಣ್ಣಿಸಿದ್ದಾರೆ.

    ಇಸ್ರೇಲ್(Isreal)  ಮತ್ತು ಗಾಜಾದ ಹಮಾಸ್ (Hamas) ಬಂಡುಕೋರರ ನಡುವಿನ ಸುದೀರ್ಘ 2 ವರ್ಷಗಳ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಇಸ್ರೇಲ್‌ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರು, ಹಲವು ವರ್ಷಗಳ ನಿರಂತರ ಯುದ್ಧದ ನಂತರ ಇಂದು ಆಕಾಶವು ಶಾಂತವಾಗಿದೆ. ಬಂದೂಕುಗಳು ಮೌನವಾಗಿವೆ. ಸೈರನ್‌ಗಳು ಶಬ್ಧ ಮಾಡುವುದನ್ನು ನಿಲ್ಲಿಸಿವೆ. ಶಾಂತಿಯಿಂದ ಇರುವ ಪವಿತ್ರ ಭೂಮಿಯ ಮೇಲೆ ಸೂರ್ಯ ಉದಯಿಸುತ್ತಿದ್ದಾನೆ ಎಂದು ಹೇಳಿದರು.  ಇದನ್ನೂ ಓದಿ:  ಗಾಜಾ ಯುದ್ಧ ಅಂತ್ಯ | ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆ ಮಾಡಿದ ಹಮಾಸ್

    ಒತ್ತೆಯಾಳುಗಳು ಹಿಂತಿರುಗಿದ್ದಾರೆ, ಅದನ್ನು ಹೇಳಲು ತುಂಬಾ ಸಂತೋಷವಾಗುತ್ತಿದೆ. ನಾನು ಕ್ರೂರಿಯಾಗಿ ವರ್ತಿಸುತ್ತೇನೆ ಎಂದು ಎಲ್ಲರೂ ಭಾವಿಸಿದ್ದರು. ನಾನು ಎಲ್ಲರೊಂದಿಗೆ ಯುದ್ಧಕ್ಕೆ ಹೋಗುತ್ತೇನೆ ಎಂದು ಹಿಲರಿ ಕ್ಲಿಂಟನ್ ಹೇಳಿದ್ದು ನನಗೆ ನೆನಪಿದೆ. ಆದರೆ ನಾನು ಯುದ್ಧ ಬಯಸುವ ವ್ಯಕ್ತಿಯಲ್ಲ. ನನ್ನದು ಯುದ್ಧ ನಿಲ್ಲಿಸುವ ವ್ಯಕ್ತಿತ್ವ ಎಂದರು. ಇದನ್ನೂ ಓದಿ:  ಯುದ್ಧಗಳನ್ನ ಪರಿಹರಿಸೋದ್ರಲ್ಲಿ ನಾನು ನಿಪುಣ; ಭಾರತ-ಪಾಕ್‌ ಕದನ ವಿರಾಮ ಬಗ್ಗೆ ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್‌

    ಟ್ರಂಪ್ ರಾಜಧಾನಿ ಟೆಲ್ ಅವೀವ್‌ಗೆ ಬಂದಿಳಿದಾಗ ಅದ್ಧೂರಿ ಸ್ವಾಗತ ನೀಡಲಾಯಿತು. ಯುದ್ಧ ನಿಲ್ಲಿಸಲು ಮಧ್ಯಸ್ಥಿತಿಕೆ ವಹಿಸಿದ್ದಕ್ಕೆ ಇಸ್ರೇಲ್‌ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿದರು.

     

  • ಗಾಜಾ ಯುದ್ಧ ಅಂತ್ಯ | ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆ ಮಾಡಿದ ಹಮಾಸ್

    ಗಾಜಾ ಯುದ್ಧ ಅಂತ್ಯ | ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆ ಮಾಡಿದ ಹಮಾಸ್

    – 2 ವರ್ಷಗಳಿಂದ ಒತ್ತೆಯಾಳುಗಳಾಗಿದ್ದ 20 ಜನರ ಪೈಕಿ 7 ಮಂದಿ ರಿಲೀಸ್

    ಟೆಲ್‌ಅವಿವ್: ಗಾಜಾದಲ್ಲಿ (Gaza) ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ (Israel) 7 ಮಂದಿ ಒತ್ತೆಯಾಳುಗಳನ್ನ ಹಮಾಸ್ (Hamas) ಬಿಡುಗಡೆ ಮಾಡಿದೆ.

    ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ ಮೊದಲ ಹಂತದಲ್ಲಿ 7 ಒತ್ತೆಯಾಳುಗಳನ್ನು ಹಮಾಸ್ ರೆಡ್‌ಕ್ರಾಸ್‌ಗೆ ಹಸ್ತಾಂತರಿಸಿದೆ. ಆದರೆ ಅವರ ಸದ್ಯದ ಸ್ಥಿತಿಯ ಬಗ್ಗೆ ಮಾಹಿತಿ ಇಲ್ಲ. ಜೊತೆಗೆ ಇಸ್ರೇಲ್ ವಶದಲ್ಲಿರುವ 1,900ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ 20 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಹಮಾಸ್ ಹೇಳಿದೆ. ಅದರಂತೆ 20 ಮಂದಿ ಪೈಕಿ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಲಾಗಿದೆ.ಇದನ್ನೂ ಓದಿ: Gaza War Is Over | ಗಾಜಾ ಯುದ್ಧ ಮುಗಿದಿದೆ – ಟ್ರಂಪ್‌ ಘೋಷಣೆ; ಇಸ್ರೇಲ್, ಹಮಾಸ್ ನಡ್ವೆ ಒತ್ತೆಯಾಳು-ಕೈದಿ ವಿನಿಮಯ ಶುರು

    ಹಮಾಸ್ ಬಿಡುಗಡೆಗೊಳಿಸಿರುವ ಒತ್ತೆಯಾಳುಗಳು ಸದ್ಯ ರೆಡ್‌ಕ್ರಾಸ್ ನಿಯಂತ್ರಣದಲ್ಲಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ಬಹಿರಂಗಪಡಿಸಿದ್ದು, ಒತ್ತೆಯಾಳುಗಳ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

    ಗಾಜಾದಲ್ಲಿ ಯುದ್ಧ ಅಂತ್ಯಗೊಂಡು, ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಟ್ರಂಪ್ ಪಶ್ಚಿಮ ಏಷ್ಯಾಕ್ಕೆ ತೆರಳಿದ್ದಾರೆ. ಇದಕ್ಕೂ ಮುನ್ನ ಏರ್‌ಫೋರ್ಸ್ ಒನ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಗಿದಿದೆ ಎಂದು ತಿಳಿಸಿದ್ದರು.

    ಇದೊಂದು ವಿಶೇಷ ಕಾರ್ಯಕ್ರಮ, ಸಹಜವಾಗಿ ಒಂದು ಕಡೆ ಸಂತೋಷ ಇದ್ರೆ, ಮತ್ತೊಂದು ಕಡೆ ದುಃಖ ಇದೆ. ಆದ್ರೆ ಎಲ್ಲರೂ ಅಚ್ಚರಿಯಾಗಿರುವುದು, ರೋಮಾಂಚನಗೊಂಡಿರುವುದು ಇದೇ ಮೊದಲು. ಆದ್ರೆ ಯುದ್ಧ ನಿಲ್ಲಿಸುವ ಭಾಗವಾಗಿರುವುದು ನಿಜಕ್ಕೂ ನನಗೆ ಗೌರವ. ಇನ್ಮುಂದೆ ನಾವು ಹಿಂದೆಂದೂ ಕಾಣದ ಅದ್ಭುತ ಕ್ಷಣಗಳನ್ನು ಕಳೆಯಲಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದರು.

    ಈ ಯುದ್ಧ ನಿಲ್ಲಿಸಿದ್ದರಿಂದ ಯಹೂದಿಗಳು, ಮುಸ್ಲಿಮರು ಅಥವಾ ಅರಬ್ ದೇಶಗಳಾಗಿರಬಹುದು ಎಲ್ಲರೂ ಸಂತೋಷವಾಗಿದ್ದಾರೆ. ಇದರ ಬಳಿಕ ನಾವು ಈಜಿಪ್ಟ್ಗೆ ಹೋಗ್ತಿದ್ದೀವಿ. ಶಕ್ತಿಶಾಲಿ ಮತ್ತು ದೊಡ್ಡ ದೇಶಗಳ ನಾಯಕರನ್ನು ಹಾಗೂ ಅತ್ಯಂತ ಶ್ರೀಮಂತ ದೇಶಗಳನ್ನ ಭೇಟಿಯಾಗುತ್ತೇವೆ. ಅವರೆಲ್ಲರೂ ಈ ಈ ಒಪ್ಪಂದದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದರು.ಇದನ್ನೂ ಓದಿ: ಯುದ್ಧಗಳನ್ನ ಪರಿಹರಿಸೋದ್ರಲ್ಲಿ ನಾನು ನಿಪುಣ; ಭಾರತ-ಪಾಕ್‌ ಕದನ ವಿರಾಮ ಬಗ್ಗೆ ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್‌

    ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ:
    ಇದಕ್ಕೂ ಮುನ್ನ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಘರ್ಷಗಳನ್ನು ಪರಿಹರಿಸುವಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಟ್ರಂಪ್ ಮತ್ತೊಮ್ಮೆ ತಮಗೆ ತಾವೇ ಬೆನ್ನುತಟ್ಟಿಕೊಂಡಿದ್ದಾರೆ. ಜೊತೆಗೆ ಇದನ್ನೆಲ್ಲ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ ಎಂದು ಹೇಳಿದ್ದಾರೆ.

    ಭಾರತ ಮತ್ತು ಪಾಕಿಸ್ತಾನದ ಬಗ್ಗೆ ಯೋಚಿಸಿ. ಕೆಲ ಯುದ್ಧಗಳು 31, 32, 37 ವರ್ಷಗಳ ಕಾಲ ನಡೆದವು. ಲಕ್ಷಾಂತರ ಜನರು ಸಾವನ್ನಪ್ಪಿದ್ರು. ಆದ್ರೆ ನಾನು ಒಂದು ದಿನದ ಬಳಗಾಗಿ ಯುದ್ಧ ಪರಿಹರಿಸಿದೆ. ವ್ಯಾಪಾರ ಮತ್ತು ಸುಂಕದAತಹ ಆರ್ಥಿಕ ಕ್ರಮಗಳ ಮೂಲಕ ಸಂಘರ್ಷ ಬಗೆಹರಿಸಿದ್ದೇನೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ತಡೆಯಲು, ನಿಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ ಅಂತ ನಾನು ಅವರಿಗೆ ಹೇಳಿದ್ದೆ. ನೀವಿಬ್ಬರೂ ಯುದ್ಧಕ್ಕೆ ಹೋದ್ರೆ ನಿಮ್ಮ ಮೇಲೆ 100%, 150% ಮತ್ತು 200% ಸುಂಕ ವಿಧಿಸುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದೆ. ಸುಂಕದ ಎಚ್ಚರಿಕೆ ನೀಡಿದ 24 ಗಂಟೆಗಳಲ್ಲಿ ಯುದ್ಧ ನಿಲ್ಲಿಸಿದೆ. ಇಲ್ಲದಿದ್ದರೆ ಈ ಯುದ್ಧ ನಿಲ್ಲುತ್ತಿರಲಿಲ್ಲ ಎಂದು ಬೀಗಿದ್ದಾರೆ.

    ಪಾಕ್-ಅಫ್ಘಾನ್ ಯುದ್ಧವನ್ನೂ ನಿಲ್ಲಿಸುವೆ:
    ನಾನು ಯುದ್ಧಗಳನ್ನು ಪರಿಹರಿಸುವಲ್ಲಿ ನಿಪುಣ. ಇಸ್ರೇಲ್-ಗಾಜಾ ಕದನ ವಿರಾಮ ನಾನು ಪರಿಹರಿಸಿದ 8 ಯುದ್ಧ. ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ. ನಾನು ಹಿಂದಿರುಗುವಾಗ ಅದನ್ನೂ ಪರಿಹರಿಸುತ್ತೇನೆ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ.

    ನೊಬೆಲ್ ಶಾಂತಿ ಪ್ರಶಸ್ತಿ ಗೆಲ್ಲುವುದು ತನ್ನ ಗುರಿಯಲ್ಲ. ಆದ್ರೆ ಯುದ್ಧಗಳನ್ನು ನಿಲ್ಲಿಸುವುದು ನನಗೆ ಗೌರವ. 2025 ರಲ್ಲಿ ಇನ್ನೂ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಜೀವಗಳನ್ನು ಉಳಿಸುವ ಉದ್ದೇಶದಿಂದ ನಾನು ಈ ಕೆಲಸಗಳನ್ನು ಮಾಡಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.ಇದನ್ನೂ ಓದಿ: ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರ ಕಣಿವೆಯಲ್ಲಿ ಭದ್ರತೆ ಹೆಚ್ಚಳ

  • Gaza War Is Over | ಗಾಜಾ ಯುದ್ಧ ಮುಗಿದಿದೆ – ಟ್ರಂಪ್‌ ಘೋಷಣೆ; ಇಸ್ರೇಲ್, ಹಮಾಸ್ ನಡ್ವೆ ಒತ್ತೆಯಾಳು-ಕೈದಿ ವಿನಿಮಯ ಶುರು

    Gaza War Is Over | ಗಾಜಾ ಯುದ್ಧ ಮುಗಿದಿದೆ – ಟ್ರಂಪ್‌ ಘೋಷಣೆ; ಇಸ್ರೇಲ್, ಹಮಾಸ್ ನಡ್ವೆ ಒತ್ತೆಯಾಳು-ಕೈದಿ ವಿನಿಮಯ ಶುರು

    – ಹಮಾಸ್ ಒತ್ತೆಯಾಳು ಬಿಡುಗಡೆಗೂ ಮುನ್ನ ಪಶ್ಚಿಮ ಏಷ್ಯಾಕ್ಕೆ ತೆರಳಿದ ಟ್ರಂಪ್

    ವಾಷಿಂಗ್ಟನ್‌/ಟೆಲ್‌ಅವಿವ್‌: ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು (Gaza War Is Over), ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ.

    ಸದ್ಯ ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ (Hamas Hostage Release) ಮುನ್ನ ಪಶ್ಚಿಮ ಏಷ್ಯಾಕ್ಕೆ ಟ್ರಂಪ್‌ ತೆರಳಿದ್ದಾರೆ. ಇದಕ್ಕೂ ಮುನ್ನ ಏರ್ ಫೋರ್ಸ್‌ ಒನ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಗಿದಿದೆ ಅನ್ನೊ ವಿಶ್ವಾಸ ನಿಮಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಹೌದು ಯುದ್ಧ ಮುಗಿದಿದೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಯುದ್ಧಗಳನ್ನ ಪರಿಹರಿಸೋದ್ರಲ್ಲಿ ನಾನು ನಿಪುಣ; ಭಾರತ-ಪಾಕ್‌ ಕದನ ವಿರಾಮ ಬಗ್ಗೆ ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್‌

    ಇದೊಂದು ವಿಶೇಷ ಕಾರ್ಯಕ್ರಮ, ಸಹಜವಾಗಿ ಒಂದು ಕಡೆ ಸಂತೋಷ ಇದ್ರೆ, ಮತ್ತೊಂದು ಕಡೆ ದುಃಖ ಇದೆ. ಆದ್ರೆ ಎಲ್ಲರೂ ಅಚ್ಚರಿಯಾಗಿರುವುದು, ರೋಮಾಂಚನಗೊಂಡಿರುವುದು ಇದೇ ಮೊದಲು. ಆದ್ರೆ ಯುದ್ಧ ನಿಲ್ಲಿಸುವ ಭಾಗವಾಗಿರುವುದು ನಿಜಕ್ಕೂ ನನಗೆ ಗೌರವ. ಇನ್ಮುಂದೆ ನಾವು ಹಿಂದೆಂದೂ ಕಾಣದ ಅದ್ಭುತ ಕ್ಷಣಗಳನ್ನು ಕಳೆಯಲಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

    ಮುಂದುವರಿದು.. ಈ ಯುದ್ಧ ನಿಲ್ಲಿಸಿದ್ದರಿಂದ ಯಹೂದಿಗಳು, ಮುಸ್ಲಿಮರು ಅಥವಾ ಅರಬ್‌ ದೇಶಗಳಾಗಿರಬಹುದು ಎಲ್ಲರೂ ಸಂತೋಷವಾಗಿದ್ದಾರೆ. ಇದರ ಬಳಿಕ ನಾವು ಈಜಿಪ್ಟ್‌ಗೆ ಹೋಗ್ತಿದ್ದೀವಿ. ಶಕ್ತಿಶಾಲಿ ಮತ್ತು ದೊಡ್ಡ ದೇಶಗಳ ನಾಯಕರನ್ನು ಹಾಗೂ ಅತ್ಯಂತ ಶ್ರೀಮಂತ ದೇಶಗಳನ್ನ ಭೇಟಿಯಾಗುತ್ತೇವೆ. ಅವರೆಲ್ಲರೂ ಈ ಈ ಒಪ್ಪಂದದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆ ಸರಿಯಲ್ಲ; ಅಫ್ಘಾನ್‌ ರಾಯಭಾರಿಗೆ ಪಾಕಿಸ್ತಾನ ಸಮನ್ಸ್‌

    ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ
    ಇದಕ್ಕೂ ಮುನ್ನ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಘರ್ಷಗಳನ್ನು ಪರಿಹರಿಸುವಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಟ್ರಂಪ್‌ ಮತ್ತೊಮ್ಮೆ ತಮಗೆ ತಾವೇ ಬೆನ್ನುತಟ್ಟಿಕೊಂಡಿದ್ದಾರೆ. ಜೊತೆಗೆ ಇದನ್ನೆಲ್ಲ ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ ಎಂದು ಹೇಳಿದ್ದಾರೆ.

    ಭಾರತ ಮತ್ತು ಪಾಕಿಸ್ತಾನದ ಬಗ್ಗೆ ಯೋಚಿಸಿ. ಕೆಲ ಯುದ್ಧಗಳು 31, 32, 37 ವರ್ಷಗಳ ಕಾಲ ನಡೆದವು. ಲಕ್ಷಾಂತರ ಜನರು ಸಾವನ್ನಪ್ಪಿದ್ರು. ಆದ್ರೆ ನಾನು ಒಂದು ದಿನದ ಬಳಗಾಗಿ ಯುದ್ಧ ಪರಿಹರಿಸಿದೆ. ವ್ಯಾಪಾರ ಮತ್ತು ಸುಂಕದಂತಹ ಆರ್ಥಿಕ ಕ್ರಮಗಳ ಮೂಲಕ ಸಂಘರ್ಷ ಬಗೆಹರಿಸಿದ್ದೇನೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ತಡೆಯಲು, ನಿಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ ಅಂತ ನಾನು ಅವರಿಗೆ ಹೇಳಿದ್ದೆ. ನೀವಿಬ್ಬರೂ ಯುದ್ಧಕ್ಕೆ ಹೋದ್ರೆ ನಿಮ್ಮ ಮೇಲೆ 100%, 150% ಮತ್ತು 200% ಸುಂಕ ವಿಧಿಸುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದೆ. ಸುಂಕದ ಎಚ್ಚರಿಕೆ ನೀಡಿದ 24 ಗಂಟೆಗಳಲ್ಲಿ ಯುದ್ಧ ನಿಲ್ಲಿಸಿದೆ. ಇಲ್ಲದಿದ್ದರೆ ಈ ಯುದ್ಧ ನಿಲ್ಲುತ್ತಿರಲಿಲ್ಲ ಎಂದು ಬೀಗಿದ್ದಾರೆ.

    ಪಾಕ್‌-ಅಫ್ಘಾನ್‌ ಯುದ್ಧವನ್ನೂ ನಿಲ್ಲಿಸುವೆ
    ನಾನು ಯುದ್ಧಗಳನ್ನು ಪರಿಹರಿಸುವಲ್ಲಿ ನಿಪುಣ. ಇಸ್ರೇಲ್‌-ಗಾಜಾ ಕದನ ವಿರಾಮ ನಾನು ಪರಿಹರಿಸಿದ 8 ಯುದ್ಧ. ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ. ನಾನು ಹಿಂದಿರುಗುವಾಗ ಅದನ್ನೂ ಪರಿಹರಿಸುತ್ತೇನೆ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ 58 ಸೈನಿಕರ ಹತ್ಯೆ, 30 ಮಂದಿಗೆ ಗಾಯ: ಅಫ್ಘಾನಿಸ್ತಾನ

    ನೊಬೆಲ್ ಶಾಂತಿ ಪ್ರಶಸ್ತಿ ಗೆಲ್ಲುವುದು ತನ್ನ ಗುರಿಯಲ್ಲ. ಆದ್ರೆ ಯುದ್ಧಗಳನ್ನು ನಿಲ್ಲಿಸುವುದು ನನಗೆ ಗೌರವ. 2025 ರಲ್ಲಿ ಇನ್ನೂ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಜೀವಗಳನ್ನು ಉಳಿಸುವ ಉದ್ದೇಶದಿಂದ ನಾನು ಈ ಕೆಲಸಗಳನ್ನು ಮಾಡಿದ್ದೇನೆ ಎಂದು ಟ್ರಂಪ್‌ ಹೇಳಿದ್ದಾರೆ.

  • ಟ್ರಂಪ್‌ ಮಾತಿಗೆ ಇಸ್ರೇಲ್‌ ಡೋಂಟ್‌ ಕೇರ್‌ – ಗಾಜಾ ಮೇಲೆ ಮತ್ತೆ ವೈಮಾನಿಕ ದಾಳಿ, 6 ಮಂದಿ ಸಾವು

    ಟ್ರಂಪ್‌ ಮಾತಿಗೆ ಇಸ್ರೇಲ್‌ ಡೋಂಟ್‌ ಕೇರ್‌ – ಗಾಜಾ ಮೇಲೆ ಮತ್ತೆ ವೈಮಾನಿಕ ದಾಳಿ, 6 ಮಂದಿ ಸಾವು

    ಟೆಲ್‌ ಅವಿವ್‌: ಗಾಜಾ (Gaza) ಪಟ್ಟಿಯ ಮೇಲಿನ ದಾಳಿ ನಿಲ್ಲಿಸುವಂತೆ ಟ್ರಂಪ್ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.

    ಗಾಜಾದಲ್ಲಿ ನಾಲ್ಕು ಜನ ಹಾಗೂ ದಕ್ಷಿಣದ ಖಾನ್ ಯೂನಿಸ್‌ನಲ್ಲಿ ಇಬ್ಬರು ಸೇರಿ ಒಟ್ಟು 6 ಮಂದಿ ಬಲಿಯಾಗಿದ್ದಾರೆ.ಇದನ್ನೂ ಓದಿ: ಭಾರತ ನನ್ನ ಮಾತೃಭೂಮಿ, ಪಾಕಿಸ್ತಾನ ನನ್ನ ಜನ್ಮಭೂಮಿ – ಪಾಕ್‌ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

    ಶುಕ್ರವಾರ (ಅ.3) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ (Israel) ಸೂಚನೆ ನೀಡಿದ್ದರು. ಇದೇ ವೇಳೆ ಹಮಾಸ್ (Hamas) ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು, ಶಾಂತಿ ಯೋಜನೆಗೆ ಒಪ್ಪಿಕೊಂಡಿತ್ತು. ಜೊತೆಗೆ ಇಸ್ರೇಲ್ ಯುಎಸ್ (US) ಯೋಜನೆಯೊಂದಿಗೆ ಒಪ್ಪಂದ ಮಾಡಿಕೊಂಡು ಯುದ್ಧ ನಿಲ್ಲಿಸಲು ಒಪ್ಪಿಕೊಂಡಿದೆ ಎಂದು ತಿಳಿಸಿದ್ದರು ಟ್ರಂಪ್‌.

    ಇದಕ್ಕೆ ಪ್ರತಿಕ್ರಿಯಿಸಿದ್ದ ಇಸ್ರೇಲ್ ಪ್ರಧಾನಿ ಬೆಂಜಮನ್ ನೆತನ್ಯಾಹು, ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯ ಮೊದಲ ಭಾಗವನ್ನು ತಕ್ಷಣವೇ ಅನುಷ್ಠಾನಗೊಳಿಸಲು ಇಸ್ರೇಲ್ ಸಿದ್ಧತೆ ನಡೆಸುತ್ತಿದೆ ಎಂದಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಟ್ರಂಪ್ ಮಾತಿಗೆ ಬೆಲೆಕೊಡದೇ ಇಸ್ರೇಲ್ ತನ್ನ ಯುದ್ಧ ಚಾಳಿಯನ್ನು ಮುಂದುವರೆಸಿದೆ.

    2023ರಲ್ಲಿ ಅ.7ರಂದು ಹಮಾಸ್ ನೇತೃತ್ವದ ದಾಳಿಯಲ್ಲಿ 1,200 ಜನರು ಸಾವನ್ನಪ್ಪಿದರು. ಈ ವೇಳೆ 251 ಜನರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿತ್ತು. ಅಲ್ಲಿಂದ ಈ ಸಂಘರ್ಷ ಪ್ರಾರಂಭವಾಯಿತು. ಈವರೆಗೂ ಗಾಜಾದಲ್ಲಿ ಇಸ್ರೇಲ್‌ನ 48 ಒತ್ತೆಯಾಳುಗಳಿದ್ದು, ಆ ಪೈಕಿ 20 ಮಂದಿ ಮಾತ್ರ ಬದುಕಿದ್ದಾರೆ ಎಂದು ತಿಳಿಸಿದೆ. ಇನ್ನೂ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಗಾಜಾದಲ್ಲಿ 66,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಗಾಜಾ ಭಾಗಶಃ ನಾಶವಾಗಿದೆ.ಇದನ್ನೂ ಓದಿ: ಸೆಕ್ಸ್‌ ವರ್ಕರ್ಸ್‌ ಮೇಲೆ ಹಲ್ಲೆ ನಡೆಸಿ ದರೋಡೆ: ಸಿಂಗಾಪುರದಲ್ಲಿ ಇಬ್ಬರು ಭಾರತೀಯರಿಗೆ ಜೈಲು ಶಿಕ್ಷೆ

  • ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಒಪ್ಪಿಗೆ

    ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಒಪ್ಪಿಗೆ

    – ಗಾಜಾ ಮೇಲಿನ ಬಾಂಬ್‌ ದಾಳಿ ತಕ್ಷಣವೇ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್‌ ಸೂಚನೆ

    ಗಾಜಾ: ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ (Hamas) ಕೊನೆಗೂ ಒಪ್ಪಿಕೊಂಡಿದೆ. ಹಮಾಸ್‌ ಘೋಷಣೆ ಬೆನ್ನಲ್ಲೇ, ಗಾಜಾ ಮೇಲೆ ಬಾಂಬ್‌ ದಾಳಿ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್‌ (Donald Trump) ಹೇಳಿದ್ದಾರೆ.

    ಭಾನುವಾರದ ಒಳಗೆ ಹಮಾಸ್‌ ಒತ್ತೆಯಾಳುಗಳ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟ್ರಂಪ್‌ ಖಡಕ್‌ ಎಚ್ಚರಿಕೆ ನೀಡಿದ್ದರು. ಬಳಿಕ ಟ್ರಂಪ್ ಅವರ 20 ಅಂಶಗಳ ಯೋಜನೆಗೆ ಶುಕ್ರವಾರ ಪ್ಯಾಲೆಸ್ಟೀನಿಯನ್ ಉಗ್ರಗಾಮಿ ಗುಂಪು ತನ್ನ ಪ್ರತಿಕ್ರಿಯೆಯನ್ನು ನೀಡಿದೆ. ಇದನ್ನೂ ಓದಿ: ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ

    ಗಾಜಾದಲ್ಲಿ ಶಾಂತಿ ಸ್ಥಾಪಿಸುವ ಏಕೈಕ ಸಾಮರ್ಥ್ಯವಿರುವ ವ್ಯಕ್ತಿ ಎಂದು ಟ್ರಂಪ್ ಬಿಂಬಿಸಿಕೊಂಡಿದ್ದಾರೆ. ಗಾಜಾ ಮೇಲಿನ ದಾಳಿಯಲ್ಲಿ ಸಾವಿರಾರು ಜನರನ್ನು ಬಲಿ ತೆಗೆದುಕೊಂಡ ಮತ್ತು ಅಮೆರಿಕದ ಮಿತ್ರ ಇಸ್ರೇಲ್‌ ಜಾಗತಿಕ ವೇದಿಕೆಯಲ್ಲಿ ಏಕಾಂಗಿಯಾಗಿದೆ. ಈಗ ಅದರ ಎರಡು ವರ್ಷಗಳ ಯುದ್ಧವನ್ನು ಕೊನೆಗೊಳಿಸಲು ಟ್ರಂಪ್‌ ಪ್ರಯತ್ನಿಸಿದ್ದಾರೆ.

    ಇಸ್ರೇಲ್ (Israel) ಗಾಜಾದ ಮೇಲೆ ಬಾಂಬ್ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು. ಇದರಿಂದ ನಾವು ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ಹೊರಗೆ ಕರೆತರಬಹುದು ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅ.9 ರಂದು ಭಾರತಕ್ಕೆ ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಭೇಟಿ

    ಟ್ರಂಪ್‌ ಅವರ ನಿಲುವನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ ನಿಗದಿಪಡಿಸಿದ ತತ್ವಗಳಿಗೆ ಅನುಗುಣವಾಗಿ ಯುದ್ಧವನ್ನು ಕೊನೆಗೊಳಿಸಲು ನೆತನ್ಯಾಹು ಮತ್ತು ಅವರ ತಂಡದೊಂದಿಗೆ ಇಸ್ರೇಲ್‌ ಸಂಪೂರ್ಣ ಸಹಕಾರದೊಂದಿಗೆ ಕೆಲಸ ಮಾಡುತ್ತಿದೆ ಎಂದು ನೆತನ್ಯಾಹು ಅವರ ಕಚೇರಿ ತಿಳಿಸಿದೆ.

  • ಗಾಜಾ ಮೇಲೆ ಇಸ್ರೇಲ್‌ ದಾಳಿ – ಒಂದೇ ದಿನ 91 ಮಂದಿ ಸಾವು

    ಗಾಜಾ ಮೇಲೆ ಇಸ್ರೇಲ್‌ ದಾಳಿ – ಒಂದೇ ದಿನ 91 ಮಂದಿ ಸಾವು

    ಟೆಲ್‌ ಅವೀವ್: ಗಾಜಾ (Gaza) ಮೇಲೆ ಇಸ್ರೇಲ್‌ (Israel) ನಡೆಸಿದ ದಾಳಿಯಲ್ಲಿ ಒಂದೇ ದಿನ 91 ಸಾವು ಸಾವನ್ನಪ್ಪಿದ್ದಾರೆ. ಟೆಲ್ ಅವೀವ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

    ಗಾಜಾದ ಅತಿದೊಡ್ಡ ನಗರ ಕೇಂದ್ರವನ್ನು ವಶಪಡಿಸಿಕೊಳ್ಳಲು ವಾಯು ಮತ್ತು ಭೂಸೇನಾ ಕಾರ್ಯಾಚರಣೆ ತೀವ್ರಗೊಳಿಸಲಾಗಿತ್ತು. ಇಸ್ರೇಲಿ ಪಡೆಗಳು ಒಂದೇ ದಿನದಲ್ಲಿ ಗಾಜಾದಲ್ಲಿ 91 ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಿವೆ. ಪ್ರಮುಖ ವೈದ್ಯರ ಕುಟುಂಬ ಸದಸ್ಯರು ಮತ್ತು ಉತ್ತರ ಗಾಜಾ ನಗರದ ಹಲವಾರು ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಇದನ್ನೂ ಓದಿ: H1B ವೀಸಾಕ್ಕೆ ಮೊದಲು ಎಷ್ಟು ಶುಲ್ಕ ಇತ್ತು? ಟ್ರಂಪ್‌ ನಿರ್ಧಾರ ಭಾರತಕ್ಕೆ ಲಾಭವೋ? ನಷ್ಟವೋ?

    ವಸತಿ ಮನೆಗಳು, ಆಶ್ರಯ ತಾಣಗಳು ಹಾಗೂ ಗಾಜಾದಿಂದ ಬೇರೆಡೆಗೆ ನಾಗರಿಕರನ್ನು ಸಾಗಿಸುತ್ತಿದ್ದ ಟ್ರಕ್‌ನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಈ ದಾಳಿಗಳಲ್ಲಿ ಕನಿಷ್ಠ 76 ಮಂದಿ ಸಾವಿಗೀಡಾಗಿದ್ದಾರೆ.

    ಗಾಜಾ ನಗರದ ನಾಸ್ರ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ‘ನಿರಂತರ ಇಸ್ರೇಲಿ ಬಾಂಬ್ ದಾಳಿ, ಫಿರಂಗಿ ಶೆಲ್ ದಾಳಿ ಮತ್ತು ಕ್ವಾಡ್‌ಕಾಪ್ಟರ್ ಗುಂಡಿನ ದಾಳಿಗಳಿಗೆ ಬೇರೆಡೆ ಸ್ಥಳಾಂತರ ಆಗುತ್ತಿದ್ದ ಸಾವಿರಾರು ಜನರು ಬಲಿಯಾದವರು ಸೇರಿದ್ದಾರೆ’ ಎಂದು ಅಜ್-ಜವಾಯ್ದಾದಿಂದ ವರದಿ ಮಾಡುತ್ತಿರುವ ಅಲ್ ಜಜೀರಾದ ಹಿಂದ್ ಖೌದರಿ ಹೇಳಿದ್ದಾರೆ. ಇದನ್ನೂ ಓದಿ: ಸೈಬರ್ ಅಟ್ಯಾಕ್ | ಯೂರೋಪ್‌ನ ಪ್ರಮುಖ ಏರ್‌ಪೋರ್ಟ್‌ಗಳಿಂದ ವಿಮಾನಯಾನ ವಿಳಂಬ, ರದ್ದು