Tag: ಇಸ್ರೇಲ್ ಸೇನೆ

  • ಇಸ್ರೇಲ್‌ ಸೇನೆಯಿಂದ ಹಮಾಸ್‌ ಗಾಜಾ ಮುಖ್ಯಸ್ಥ ಮೊಹಮ್ಮದ್‌ ಸಿನ್ವಾರ್‌ ಹತ್ಯೆ

    ಇಸ್ರೇಲ್‌ ಸೇನೆಯಿಂದ ಹಮಾಸ್‌ ಗಾಜಾ ಮುಖ್ಯಸ್ಥ ಮೊಹಮ್ಮದ್‌ ಸಿನ್ವಾರ್‌ ಹತ್ಯೆ

    ಟೆಲ್‌ ಅವೀವ್‌: ಹಮಾಸ್‌ನ (Hamas) ಗಾಜಾ ಮುಖ್ಯಸ್ಥ ಮೊಹಮ್ಮದ್‌ ಸಿನ್ವಾರ್‌ನನ್ನು (Muhammad Sinwar) ಇಸ್ರೇಲ್‌ ಸೇನೆ ಹತ್ಯೆ ಮಾಡಿದೆ ಎಂದು ಪ್ರಧಾನಿ ಬೆಂಜಮಿನ್‌ ನೆತನ್ಯಾಹು ತಿಳಿಸಿದ್ದಾರೆ.

    ಮೇ 14 ರಂದು ಇಸ್ರೇಲ್ ನಡೆಸಿದ ಬೃಹತ್ ವೈಮಾನಿಕ ದಾಳಿಯಲ್ಲಿ ಹಮಾಸ್ ಮುಖ್ಯಸ್ಥ ತೀವ್ರವಾಗಿ ಗಾಯಗೊಂಡಿದ್ದ ಎಂಬ ವರದಿಗಳು ಬಂದಿದ್ದವು. ಆ ಸಮಯದಲ್ಲಿ ಇಸ್ರೇಲ್ ರಕ್ಷಣಾ ಪಡೆಗಳು, ದಾಳಿಯಲ್ಲಿ ಉಗ್ರಗಾಮಿ ಸಾವನ್ನಪ್ಪಿದ್ದಾನೆಯೇ ಎಂದು ಖಚಿತಪಡಿಸುವ ಸ್ಥಿತಿಯಲ್ಲಿರಲಿಲ್ಲ. ಮೊಹಮ್ಮದ್ ಸಿನ್ವಾರ್, ಮಾಜಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ನ ಸಹೋದರ. ಯಾಹ್ಯಾ 2024 ರ ಅಕ್ಟೋಬರ್‌ನಲ್ಲಿ ಇಸ್ರೇಲಿ ಮಿಲಿಟರಿಯೊಂದಿಗಿನ ಘರ್ಷಣೆಯಲ್ಲಿ ಹತ್ಯೆಗೀಡಾಗಿದ್ದ. ಇದನ್ನೂ ಓದಿ: ಇರಾನ್‌ನಲ್ಲಿ ಭಾರತದ ಮೂವರು ಯುವಕರ ಕಿಡ್ನ್ಯಾಪ್ – ಬಿಡುಗಡೆಗೆ 1 ಕೋಟಿ ಡಿಮ್ಯಾಂಡ್‌

    ಮೇ 14 ರಂದು ಇಸ್ರೇಲ್ ರಕ್ಷಣಾ ಪಡೆಗಳು ನಿಖರವಾದ ಡ್ರೋನ್ ದಾಳಿ ಮಾಡಿದಾಗ, ಗಾಜಾದಲ್ಲಿ ಉಳಿದಿರುವ ಕೊನೆಯ ಉನ್ನತ ಕಮಾಂಡರ್‌ಗಳಲ್ಲಿ ಒಬ್ಬನಾಗಿದ್ದ ಮೊಹಮ್ಮದ್ ಸಿನ್ವಾರ್, ಉಗ್ರಗಾಮಿ ಗುಂಪು ಕಮಾಂಡ್ ಸೆಂಟರ್ ಆಗಿ ಬಳಸುತ್ತಿದ್ದ ಭೂಗತ ಸೌಲಭ್ಯದಲ್ಲಿದ್ದ.

    ಖಾನ್ ಯೂನಿಸ್‌ನಲ್ಲಿರುವ ಯುರೋಪಿಯನ್ ಆಸ್ಪತ್ರೆಯ ಅಡಿಯಲ್ಲಿ ಕಮಾಂಡ್ ಸೆಂಟರ್ ಇತ್ತು. ನಿಖರವಾದ ದಾಳಿಯ ನಂತರದ ಘಟನೆಗಳ ವೀಡಿಯೊವನ್ನು ಇಸ್ರೇಲ್ ಸೇನೆ ಬಿಡುಗಡೆ ಮಾಡಿತ್ತು. ಅದರಲ್ಲಿ ಆಸ್ಪತ್ರೆಯ ಕೆಳಗೆ ಒಂದು ಸುರಂಗವು ಹಮಾಸ್ ಸೌಲಭ್ಯಕ್ಕೆ ಕರೆದೊಯ್ಯುವುದನ್ನು ತೋರಿಸಿತ್ತು. ಇದನ್ನೂ ಓದಿ: ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್‌ ಆತಂಕ, ಪಾಕ್‌ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?

    ನಾವು ಮೊಹಮ್ಮದ್ ಸಿನ್ವಾರ್‌ನನ್ನು ಹತ್ಯೆ ಮಾಡಿದ್ದೇವೆ ಎಂದು ಪ್ರಧಾನಿ ನೆತನ್ಯಾಹು (Benjamin Netanyahu) ಇಸ್ರೇಲ್ ಸಂಸತ್ತಿನ ನೆಸ್ಸೆಟ್‌ನಲ್ಲಿ ಹೇಳಿದ್ದಾರೆ. ನಾವು (ಇಸ್ರೇಲ್) ಇಸ್ಮಾಯಿಲ್ ಹನಿಯೆ, ಮೊಹಮ್ಮದ್ ಡೀಫ್, ಯಾಹ್ಯಾ ಸಿನ್ವಾರ್ ಮತ್ತು ಈಗ ಮೊಹಮ್ಮದ್ ಸಿನ್ವಾರ್‌ನನ್ನು ಮುಗಿಸಿದ್ದೇವೆಂದಿದ್ದಾರೆ.

  • ತಪ್ಪಾಗಿ ತಿಳಿದು ಮೂವರು ಒತ್ತೆಯಾಳುಗಳನ್ನೇ ಗುಂಡಿಕ್ಕಿ ಹತ್ಯೆಗೈದ ಇಸ್ರೇಲ್‌ ಸೇನೆ

    ತಪ್ಪಾಗಿ ತಿಳಿದು ಮೂವರು ಒತ್ತೆಯಾಳುಗಳನ್ನೇ ಗುಂಡಿಕ್ಕಿ ಹತ್ಯೆಗೈದ ಇಸ್ರೇಲ್‌ ಸೇನೆ

    ಟೆಲ್‌ ಅವೀವ್‌: ಜೆರುಸಲೆಮ್‌ ಮೇಲೆ ರಾಕೆಟ್‌ ದಾಳಿ ನಡೆದ ಸಂದರ್ಭದಲ್ಲಿ ಭಯೋತ್ಪಾದಕರು ಎಂದು ತಪ್ಪಾಗಿ ಭಾವಿಸಿ ಮೂವರು ಒತ್ತೆಯಾಳುಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಸೇನೆ (Israel Army) ತಿಳಿಸಿದೆ.

    ಹಮಾಸ್ (Hamas) ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ ಯುದ್ಧ ಪ್ರಾರಂಭವಾಯಿತು. ಇಲ್ಲಿಯವರೆಗೆ ಇಸ್ರೇಲಿ ಅಧಿಕಾರಿಗಳು ಸುಮಾರು 1,200 ಜನರನ್ನು ಹತ್ಯೆ ಮಾಡಿದ್ದಾರೆ. ಅವರ ಪೈಕಿ ಹೆಚ್ಚಿನವರು ನಾಗರಿಕರೇ ಆಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಮೆರಿಕ ಹಿಂದೂ ಅಧ್ಯಕ್ಷರನ್ನು ಒಪ್ಪಿಕೊಳ್ಳುತ್ತಾ? – ಪ್ರಶ್ನೆಗೆ ಹಿಂದೂ ಧರ್ಮದ ಮೌಲ್ಯ ತಿಳಿಸಿದ ವಿವೇಕ್‌

    ಹಮಾಸ್ ಬಂಡುಕೋರರ ಗುಂಪನ್ನು ನಾಶಮಾಡಲು ಮತ್ತು ಉಗ್ರಗಾಮಿಗಳಿಂದ ಅಪಹರಿಸಲ್ಪಟ್ಟ ಅಂದಾಜು 250 ಒತ್ತೆಯಾಳುಗಳನ್ನು ವಾಪಸ್‌ ಕರೆತರುವುದಾಗಿ ಪ್ರತಿಜ್ಞೆ ಮಾಡಿದ ಇಸ್ರೇಲ್, ಭಾರಿ ಆಕ್ರಮಣ ನಡೆಸಿದೆ. ಇಸ್ರೇಲ್‌ ಸೇನೆ ಮುತ್ತಿಗೆ ಹಾಕಿದ ಹೆಚ್ಚಿನ ಪ್ರದೇಶವನ್ನು ನಾಶಮಾಡಿದೆ.

    ಯುದ್ಧದಿಂದ ಕನಿಷ್ಠ 18,800 ಜನರು ಹತರಾಗಿದ್ದಾರೆ. ಅವರ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಹಮಾಸ್ ಸರ್ಕಾರ ತಿಳಿಸಿದೆ. ಶುಕ್ರವಾರವೂ ಭೀಕರ ದಾಳಿ ಮುಂದುವರಿದಿದ್ದು, ದಕ್ಷಿಣದ ನಗರವಾದ ಖಾನ್ ಯೂನಿಸ್‌ನಲ್ಲಿ ಇಸ್ರೇಲಿ ಸೈನಿಕರಿದ್ದ ಮನೆಯನ್ನು ಸ್ಫೋಟಿಸಿರುವುದಾಗಿ ಹಮಾಸ್ ಹೇಳಿಕೊಂಡಿದೆ. ಇದನ್ನೂ ಓದಿ: ಹಮಾಸ್ ಉಗ್ರರು ಅವಿತುಕೊಳ್ಳುತ್ತಿದ್ದ ಸುರಂಗಗಳಿಗೆ ಸಮುದ್ರದ ನೀರು ಹರಿಸಿದ ಇಸ್ರೇಲ್

    ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ 60 ಕ್ಕೂ ಹೆಚ್ಚು ಪತ್ರಕರ್ತರು ಮತ್ತು ಮಾಧ್ಯಮ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರನ್ನು ರಕ್ಷಿಸುವ ಸಮಿತಿ ತಿಳಿಸಿದೆ.

  • ಕದನ ವಿರಾಮದ ನಡುವೆಯೂ ಗಾಜಾದಲ್ಲಿ ಐವರು ಒತ್ತೆಯಾಳುಗಳ ಸಾವು

    ಕದನ ವಿರಾಮದ ನಡುವೆಯೂ ಗಾಜಾದಲ್ಲಿ ಐವರು ಒತ್ತೆಯಾಳುಗಳ ಸಾವು

    ಟೆಲ್‌ ಅವೀವ್‌: ಕಳೆದ ಒಂದು ವಾರದಿಂದ ಇಸ್ರೇಲ್‌-ಹಮಾಸ್‌ (Israel Hamas War) ನಡುವೆ ಕದನ ವಿರಾಮ ಏರ್ಪಟ್ಟಿದೆ. ಒತ್ತೆಯಾಳುಗಳ (Hostages) ಬಿಡುಗಡೆಯಾಗಿ 4 ದಿನಗಳಿಗೆ ಸೀಮಿತವಾಗಿದ್ದ ಕದನ ವಿರಾಮ ಅವಧಿ ವಿಸ್ತರಣೆಗೊಂಡಿದೆ. ಈ ನಡುವೆಯೂ ಗಾಜಾಪಟ್ಟಿಯಲ್ಲಿ ಐವರು ಒತ್ತೆಯಾಳುಗಳು ಮೃತಪಟ್ಟಿದ್ದಾರೆ.

    ಐವರು ಒತ್ತೆಯಾಳುಗಳು ಸಾವನ್ನಪ್ಪಿರುವುದಾಗಿ ಇಸ್ರೇಲ್‌ ಸೇನೆ (Israel Army) ಖಚಿತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಒತ್ತೆಯಾಳುಗಳಾದ ಎಲಿಯಾಹು ಮಾರ್ಗಲಿಟ್, ಮಾಯಾ ಗೊರೆನ್, ರೋನೆನ್ ಎಂಗಲ್ ಮತ್ತು ಆರ್ಯೆ ಜಲ್ಮನೋವಿಟ್ಜ್ ಅವರ ಸಾವಿನ ಬಗ್ಗೆ ಕುಟುಂಬದವರಿಗೆ ಇಸ್ರೇಲ್‌ ರಕ್ಷಣಾ ಪಡೆ ಹಾಗೂ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸೇನಾ ವಕ್ತಾರ ಡೇನಿಯಲ್ ಹಗರಿ ತಿಳಿಸಿದ್ದಾರೆ. ಒಫಿರ್‌ ತ್ಸರ್ಪಾತಿ ಎಂದು ಗುರುತಿಸಲಾದ 5ನೇ ವ್ಯಕ್ತಿಯ ಮೃತದೇಹವನ್ನು ಇಸ್ರೇಲ್‌ ಸೇನೆ ಮರಳಿ ಪಡೆದಿದೆ.

    ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಕದನ ವಿರಾಮ ಏರ್ಪಟ್ಟಿದ್ದು, 3 ಬ್ಯಾಚ್‌ನಲ್ಲಿ 40ಕ್ಕೂ ಹೆಚ್ಚು ಒತ್ತೆಯಾಳುಗಳನ್ನ ಹಮಾಸ್‌ ಬಿಡುಗಡೆ ಮಾಡಿದೆ. ಇನ್ನಷ್ಟು ಒತ್ತೆಯಾಳುಗಳ ಬಿಡುಗಡೆಗಾಗಿ ಕದನ ವಿರಾಮ ವಿಸ್ತರಿಸಿದೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲೂ ಯೋಗಿ ಸರ್ಕಾರದ ಬುಲ್ಡೋಜರ್ ದಾಳಿ – ಕಟ್ಟಡಗಳು ಧ್ವಂಸ

    ಇಸ್ರೇಲ್ ಮತ್ತು ಹಮಾಸ್ (Israel- Hamas) ನಡುವಿನ ಒಪ್ಪಂದದ ಅಡಿಯಲ್ಲಿ 50 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದರೆ, 150 ಪ್ಯಾಲೆಸ್ತೀನ್‌ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಬೇಕು ಎಂದು ಹೇಳಲಾಗಿತ್ತು. ಹಾಗಾಗಿ ದಿನಗಳ ಕದನ ವಿರಾಮಕ್ಕೆ ಹಮಾಸ್ ಹಾಗೂ ಇಸ್ರೇಲ್ ಒಪ್ಪಿಗೆ ಸೂಚಿಸಿತ್ತು. ಇದನ್ನೂ ಓದಿ: 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್

    ಹಮಾಸ್‌ ಉಗ್ರರ ಗುಂಪು ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅಕ್ಟೋಬರ್‌ 7 ರಂದು ಗಾಜಾಪಟ್ಟಿಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೂ ದಾಳಿ ಮಾಡಿ ಸುಮಾರು 240 ಒತ್ತೆಯಾಳುಗಳನ್ನು ಅಪಹರಿಸಿದ್ದರು. ಆದ್ರೆ ಇಸ್ರೇಲ್‌ ದಾಳಿಗೆ 15 ಸಾವಿರ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಅದರಲ್ಲಿ 6,150 ಮಕ್ಕಳೂ ಸೇರಿದ್ದಾರೆ. ಅಲ್ಲದೇ 36,000 ಮಂದಿ ಗಾಯಗೊಂಡಿದ್ದು, 7 ಸಾವಿರಕ್ಕೂ ಹೆಚ್ಚು ಮಂದಿ ಕಾಣೆಯಾಗಿರುವುದಾಗಿ ಹಮಾಸ್‌ ಹೇಳಿದೆ. ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿ ನೇಮಕ

  • ಗಾಜಾದ ಅಲ್ ಶಿಫಾ ಆಸ್ಪತ್ರೆಯೇ ಹಮಾಸ್ ಅಡ್ಡ; ಶಸ್ತ್ರಾಸ್ತ್ರ ಪತ್ತೆ – ಉಗ್ರರ ಅಡಗುದಾಣಗಳ ಮೇಲೆ ಬುಲ್ಡೋಜರ್

    ಗಾಜಾದ ಅಲ್ ಶಿಫಾ ಆಸ್ಪತ್ರೆಯೇ ಹಮಾಸ್ ಅಡ್ಡ; ಶಸ್ತ್ರಾಸ್ತ್ರ ಪತ್ತೆ – ಉಗ್ರರ ಅಡಗುದಾಣಗಳ ಮೇಲೆ ಬುಲ್ಡೋಜರ್

    ಟೆಲ್ ಅವೀವ್: ಗಾಜಾದ ಅಲ್ ಶಿಫಾ ಆಸ್ಪತ್ರೆ ಹಮಾಸ್ (Hamas) ಉಗ್ರರ ಕಾರ್ಯಸ್ಥಾನ ಎಂದು ಇಸ್ರೇಲ್ (Israel) ಮೊದಲಿಂದ ಹೇಳುತ್ತಾ ಬಂದಿತ್ತು. ಭಯೋತ್ಪಾದಕ ಚಟುವಟಿಕೆಗಳಿಗೆ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಆಸ್ಪತ್ರೆಗಳನ್ನು ಹಮಾಸ್ ಬಳಸುತ್ತದೆ ಎಂಬುದಕ್ಕೆ ತನ್ನ ಪಡೆಗಳು ಪುರಾವೆಗಳನ್ನು ಕಂಡುಕೊಂಡಿವೆ ಎಂದು ಇಸ್ರೇಲ್ ಮತ್ತೆ ಹೇಳಿಕೊಂಡಿದೆ.

    ಅಲ್ ಶಿಫಾ ಆಸ್ಪತ್ರೆಯ (Al-Shifa Hospital) ಎಂಆರ್‌ಐ ಯೂನಿಟ್‌ನಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಇಸ್ರೇಲ್‌ ತಿಳಿಸಿದೆ. ಹಮಾಸ್‌ಗೆ ಸೇರಿದ ಬ್ಯಾಗ್‌ಗಳಲ್ಲಿ ಎಕೆ 47, ಗ್ರೆನೇಡ್ ಸೇರಿ ಹಲವು ಶಸ್ತ್ರಾಸ್ತ್ರ ಸಿಕ್ಕಿವೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೋವನ್ನು ಇಸ್ರೇಲ್ ಸೇನೆ (Israeli Defence Force) ಬಿಡುಗಡೆ ಮಾಡಿದೆ. ಇದನ್ನೂ ಓದಿ: ಗಾಜಾದ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್‌ ಉಗ್ರರ ಸುರಂಗ – ಇಸ್ರೇಲ್‌ನಿಂದ ವಿಡಿಯೋ ರಿಲೀಸ್‌

    ಅಲ್ ಶಿಫಾ ಆಸ್ಪತ್ರೆಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಇಸ್ರೇಲ್ ಸೇನೆ, ಆಸ್ಪತ್ರೆಯ ಇಂಚಿಂಚನ್ನೂ ಜಾಲಾಡುತ್ತಿದೆ. ಅಷ್ಟೇ ಅಲ್ಲ, ಅಲ್ ಶಿಫಾ ಆಸ್ಪತ್ರೆ ಮೇಲೆ ಬುಲ್ಡೋಜರ್‌ಗಳು ನುಗ್ಗಿವೆ ಎಂದು ವರದಿಯಾಗಿದೆ.

    ಬುಲ್ಡೋಜರ್‌ಗಳು ದಕ್ಷಿಣ ಭಾಗದ ಗೇಟ್ ಅನ್ನು ಧ್ವಂಸ ಮಾಡಿದೆ. ಹಮಾಸ್ ಉಗ್ರರ ಸುರಂಗಗಳನ್ನು ಪತ್ತೆ ಹಚ್ಚಲು ಇಸ್ರೇಲ್ ಪಡೆಗಳು ಬುಲ್ಡೋಜರ್ ಅಸ್ತ್ರವನ್ನು ಪ್ರಯೋಗಿಸಿವೆ. ಹಮಾಸ್ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಮನೆಯನ್ನು ಐಡಿಎಫ್ ನಾಶ ಮಾಡಿದೆ. ಈಗಾಗಲೇ ಪ್ಯಾಲೆಸ್ತೇನ್ ಸಂಸತ್‌ನ್ನು ನೆಲಸಮ ಮಾಡಿದೆ. ಇದನ್ನೂ ಓದಿ: ಇಸ್ರೇಲ್‌ ಧೋರಣೆ ಖಂಡಿಸಿದ ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತ ಬೆಂಬಲ