Tag: ಇಸ್ರೇಲ್

  • ಉಗ್ರ ಕೃತ್ಯಕ್ಕೆ ಸಹಕಾರ – ನಾಪತ್ತೆಯಾಗಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್‌

    ಉಗ್ರ ಕೃತ್ಯಕ್ಕೆ ಸಹಕಾರ – ನಾಪತ್ತೆಯಾಗಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್‌

    ಮೈಸೂರು: ಭಯೋತ್ಪಾಕ ಕೃತ್ಯಕ್ಕೆ ಸಹಕಾರ ನೀಡುತ್ತಿದ್ದ ಆರೋಪದ ಅಡಿ ಮೈಸೂರಿನಲ್ಲಿ (Mysuru) ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.

    ಮೈಸೂರಿನ‌ ರಾಜೀವ್ ನಗರದಲ್ಲಿ ನೆಲೆಸಿದ್ದ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ದಾಳಿ ವೇಳೆ ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್‌ಡ್ರೈವ್ ಸೇರಿದಂತೆ ಮೊದಲಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    2014ರಲ್ಲಿ ಬೆಂಗಳೂರಿನ ಇಸ್ರೇಲ್ (Israel) ಹಾಗೂ ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪ ಈತನ ಮೇಲಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್‌ ಶಾ ಮಾತು

     

    ಶ್ರೀಲಂಕಾ ಪ್ರಜೆ ಮೊಹಮ್ಮದ್ ಸಕೀರ್ ಹುಸೇನ್ ಹಾಗೂ ಕೊಲಂಬೋದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು. ಇವರಿಗೆ ಭಾರತದ ನಕಲಿ ನೋಟು ಪೂರೈಸುವ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ನೂರುದ್ದೀನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

    2023ರ ಆಗಸ್ಟ್‌ನಲ್ಲಿ ಜಾಮೀನಿನ (Bail) ಮೇಲೆ ಹೊರಬಂದಿದ್ದ ನೂರುದ್ದೀನ್ ಚೆನ್ನೈನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಕಾರಣಕ್ಕೆ ನೂರುದ್ದೀನ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಅಷ್ಟೇ ಅಲ್ಲದೇ ಆತನ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿತ್ತು. ಖಚಿತ ಮಾಹಿತಿ ಆಧಾರಿಸಿ ಬುಧವಾರ  ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಎನ್‌ಐಎ ಯಶಸ್ವಿಯಾಗಿದೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಕಣ್ಣಾಮುಚ್ಚಾಲೆ ಆಟ – ವಿಮಾನ ನಿಲ್ದಾಣದಿಂದ ಬರಿಗೈಯಲ್ಲಿ ಪೊಲೀಸರು ವಾಪಸ್‌

  • ಇಸ್ರೇಲ್‌ನಲ್ಲಿ ಅಲ್‌ ಜಜೀರಾ ಬಂದ್‌ – ಕಚೇರಿ ಮೇಲೆ ದಾಳಿ

    ಇಸ್ರೇಲ್‌ನಲ್ಲಿ ಅಲ್‌ ಜಜೀರಾ ಬಂದ್‌ – ಕಚೇರಿ ಮೇಲೆ ದಾಳಿ

    ಟೆಲ್‌ ಅವಿವ್‌: ಕತಾರ್‌ ಮೂಲದ ಅಲ್‌ ಜಜೀರಾ (Al Jazeera) ಸುದ್ದಿ ವಾಹಿನಿ ಇಸ್ರೇಲ್‌ನಲ್ಲಿ ಸಂಪೂರ್ಣ ನಿಷೇಧವಾಗಿದೆ. ನಿಷೇಧವಾದ ಬೆನ್ನಲ್ಲೇ ವಾಹಿನಿಯ ಜೇರುಸಲೇಂನಲ್ಲಿರುವ ಕಚೇರಿ ಮೇಲೆ ದಾಳಿ ಇಸ್ರೇಲ್‌ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಇಸ್ರೇಲ್‌ ಸಂಸತ್ತು (Israel Parliament) ಅಲ್ ಜಜೀರಾ ಸುದ್ದಿ ವಾಹಿನಿಯನ್ನು ನಿಷೇಧಿಸುವ ಮಸೂದೆಯನ್ನು ಕಳೆದ ತಿಂಗಳು ಪಾಸ್‌ ಮಾಡಿತ್ತು. ಇದನ್ನೂ ಓದಿ: ಮಂಗನಕಾಯಿಲೆಗೆ ಐದು ವರ್ಷದ ಮಗು ಬಲಿ

    ಹಮಾಸ್‌ ಉಗ್ರರ ಮೇಲೆ ಇಸ್ರೇಲ್‌ ನಡೆಸಿದ ದಾಳಿಯನ್ನು ಅಲ್‌ ಜಜೀರಾ ಖಂಡಿಸಿ ನಿರಂತರ ಸುದ್ದಿ ಪ್ರಸಾರ ಮಾಡುತ್ತಿತ್ತು. ಇದು ಇಸ್ರೇಲ್‌ ಕೆಂಗಣ್ಣಿಗೆ ಗುರಿಯಾಗಿತ್ತು.

    ಈ ಮಸೂದೆ ಸರ್ಕಾರಕ್ಕೆ  ಇಸ್ರೇಲ್‌ನಿಂದ ಸುದ್ದಿ ವಾಹಿನಿಯ ಪ್ರಸಾರವನ್ನು ನಿಷೇಧಿಸುವ ಅಧಿಕಾರವನ್ನು ನೀಡುತ್ತದೆ. ಮತಕ್ಕೆ ಹಾಕಿದಾಗ 70 ಮಂದಿ ಸಂಸದರು ಒಪ್ಪಿಗೆ ನೀಡಿದರೆ 10 ಮಸೂದೆಯನ್ನು ವಿರೋಧಿಸಿದ್ದರು. ಮಸೂದೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಹಾನಿಯುಂಟುಮಾಡುವ ವಿದೇಶಿ ವಾಹಿನಿಗಳ ಪ್ರಸಾರವನ್ನು ನಿಷೇಧಿಸುವ ಅಧಿಕಾರದ ಜೊತೆ ಇಸ್ರೇಲ್‌ನಲ್ಲಿ ಅವರ ಕಚೇರಿ ಮುಚ್ಚಲು ಅನುಮತಿ ನೀಡುತ್ತದೆ.

    ಮಸೂದೆ ಅಧಿಕೃತವಾಗಿ ಕಾನೂನಾಗಿ ಜಾರಿಗೆ ಬಂದ ಕೂಡಲೇ ಇಸ್ರೇಲ್‌ನಲ್ಲಿ ಅಲ್ ಜಜೀರಾ ನಿಷೇಧಿಸಲು ಕ್ರಮ ತೆಗೆದುಕೊಳ್ಳುವುದಾಗಿ ಪ್ರಧಾನಿ ನೆತನ್ಯಾಹು (PM Benjamin Netanyahu) ಈ ಹಿಂದೆ ಪ್ರತಿಜ್ಞೆ ಮಾಡಿದ್ದರು. ಅಲ್ ಜಜೀರಾವನ್ನು ಉಗ್ರರ ವಾಹಿನಿ ಎಂದು ನೆತನ್ಯಾಹು ಕರೆದಿದ್ದಾರೆ. ಇದನ್ನೂ ಓದಿ: ಹಾಸನದ ಲೈಂಗಿಕ ಹಿಂಸೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

    ಗಾಜಾದಲ್ಲಿ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಲ್ ಜಜೀರಾ ಸಿಬ್ಬಂದಿ ಪತ್ರಕರ್ತ ಮತ್ತು ಸ್ವತಂತ್ರ ಉದ್ಯೋಗಿ ಭಯೋತ್ಪಾದಕರು ಎಂದು ಇಸ್ರೇಲ್ ಜನವರಿಯಲ್ಲಿ ಹೇಳಿಕೊಂಡಿತ್ತು. ಗಾಯಗೊಂಡ ಚಾನೆಲ್‌ನ ಇನ್ನೊಬ್ಬ ಪತ್ರಕರ್ತ ಹಮಾಸ್‌  ಡೆಪ್ಯುಟಿ ಕಂಪನಿ ಕಮಾಂಡರ್ ಎಂದು ಹೇಳಿತ್ತು.

     

  • ಇಸ್ರೇಲ್‌ ವಿರುದ್ಧ ಪ್ರತಿಭಟನೆ – ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಬಂಧನ

    ಇಸ್ರೇಲ್‌ ವಿರುದ್ಧ ಪ್ರತಿಭಟನೆ – ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಬಂಧನ

    ವಾಷಿಂಗ್ಟನ್‌: ಇಸ್ರೇಲ್‌ (Israel) ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಅಮೆರಿಕದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಕ್ಯಾಂಪಸ್‌ನಲ್ಲಿ ಬಂಧಿಸಲಾಗಿದೆ.

    ಗುರುವಾರ ಮುಂಜಾನೆ ವಿಶ್ವವಿದ್ಯಾನಿಲಯದ ಅಂಗಳದಲ್ಲಿ ಶಿಬಿರಕ್ಕಾಗಿ ಪ್ರತಿಭಟನಾಕಾರರು ಟೆಂಟ್‌ಗಳನ್ನು ಸ್ಥಾಪಿಸಿದ್ದರು. ನಂತರ ತಮಿಳುನಾಡು ಮೂಲದ ಅಚಿಂತ್ಯ ಶಿವಲಿಂಗನ್ ಮತ್ತು ಹಸನ್ ಸೈಯದ್ ಅವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಮೇಲೆ ದಾಳಿ ಕೇಸ್‌ – ಖಲಿಸ್ತಾನಿ ಪರ ಆರೋಪಿ ಬಂಧನ

    ಇಬ್ಬರು ಪದವೀಧರ ವಿದ್ಯಾರ್ಥಿಗಳನ್ನು ಅತಿಕ್ರಮ ಪ್ರವೇಶ ಆರೋಪದಲ್ಲಿ ಬಂಧಿಸಲಾಗಿದೆ. ಈ ಬೆಳವಣಿಗೆಯಾದ ತಕ್ಷಣ ವಿವಿ ಕ್ಯಾಂಪಸ್‌ನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಕ್ಯಾಂಪಸ್‌ನಲ್ಲಿ ಟೆಂಟ್‌ಗಳನ್ನು ಹಾಕುವುದು ವಿವಿ ನೀತಿ ಉಲ್ಲಂಘನೆ ಎಂದು ಹೇಳಲಾಗಿದೆ.

    ಶಿವಲಿಂಗಂ ಪ್ರಿನ್ಸ್‌ಟನ್‌ನಲ್ಲಿ ಸಾರ್ವಜನಿಕ ವ್ಯವಹಾರಗಳ ವಿಷಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾರೆ. ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಗಾಜಾದಲ್ಲಿ ಅಪಾರ ಸಾವು-ನೋವುಗಳಾಗಿವೆ ಎಂದು ಇಸ್ರೇಲ್‌ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: Olympic 2024: ಕ್ರೀಡೆಗಳ ಮಹಾಸಂಗಮಕ್ಕೆ ಕೆಲವೇ ದಿನ ಬಾಕಿ – ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌!

    ಸಾವಿರಾರು ವಿದ್ಯಾರ್ಥಿಗಳು ತಮ್ಮ ಕ್ಯಾಂಪಸ್‌ಗಳಲ್ಲಿ ದಾಂಧಲೆ ಸೃಷ್ಟಿಸಿ, ಪ್ಯಾಲೆಸ್ಟೈನ್ ಪರ (Pro-Palestine) ಪ್ರತಿಭಟನೆಗಳನ್ನು ನಡೆಸುತ್ತಿರುವುದು ಯುಎಸ್ ಉನ್ನತ ವಿಶ್ವವಿದ್ಯಾಲಯಗಳನ್ನು ಬೆಚ್ಚಿಬೀಳಿಸಿದೆ. ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಮೊದಲು ಪ್ರತಿಭಟನೆ ಪ್ರಾರಂಭವಾಯಿತು. ಈಗ ಅದು ದೇಶಾದ್ಯಂತ ಕಾಲೇಜುಗಳಿಗೆ ಆವರಿಸಿಕೊಂಡಿದೆ.

  • ಇಸ್ರೇಲ್ ಡ್ರೋನ್‌ಗಳು ನಮಗೆ ಆಟಿಕೆಗಳಂತೆ: ಇರಾನ್ ಲೇವಡಿ

    ಇಸ್ರೇಲ್ ಡ್ರೋನ್‌ಗಳು ನಮಗೆ ಆಟಿಕೆಗಳಂತೆ: ಇರಾನ್ ಲೇವಡಿ

    ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮನೆ ಮಾಡಿದೆ. ಇಸ್ರೇಲ್ ಡ್ರೋನ್ ದಾಳಿ (Israel Drone Attack) ಬಗ್ಗೆ ಇದೀಗ ಇರಾನ್ (Iran) ವ್ಯಂಗ್ಯ ಮಾಡಿದೆ.

    ಈ ಸಂಬಂಧ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್ ಡಿ ಅವರು, ಇಸ್ರೇಲ್ ಡ್ರೋನ್‌ಗಳು ಮಕ್ಕಳು ಆಡುವ ಆಟಿಕೆಗಳಂತೆ ಎಂದು ಲೇವಡಿ ಮಾಡಿದ್ದಾರೆ.

    ಶುಕ್ರವಾರ ಬೆಳಗ್ಗೆ ಪ್ರಮುಖ ಸೇನಾ ವಾಯುನೆಲೆ ಮತ್ತು ಇರಾನ್‌ನ ಹಲವಾರು ಪರಮಾಣು ಕೇಂದ್ರಗಳ ನೆಲೆಯಾಗಿರುವ ಇಸ್ಫಹಾನ್‌ನಲ್ಲಿ ಮೂರು ಸ್ಫೋಟಗಳು ವರದಿಯಾಗಿವೆ. ದಾಳಿಯ ಬಳಿಕ ಇರಾನ್ ಹಲವಾರು ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಆದರೆ ಈ ಡ್ರೋನ್ ದಾಳಿಯ ಬಗ್ಗೆ ಇರಾನ್ ತನಿಖೆ ನಡೆಸುತ್ತಿದೆ. ಆದಾಗ್ಯೂ, ಇದುವರೆಗೆ ದಾಳಿಗೆ ಇಸ್ರೇಲಿ ಲಿಂಕ್‌ ಇರುವ ಬಗ್ಗೆ ಅಧಿಕೃತವಾಗಿ ದೃಢಪಟ್ಟಿಲ್ಲ.

    ಇದೇ ವೇಳೆ, ನಮ್ಮ ದೇಶದ ಪ್ರಯೋಜನಗಳಿಗೆ ಅಡ್ಡಿ ಉಂಟು ಮಾಡಲು ನೋಡಿದ್ರೆ, ಅದರ ಪರಿಣಾಮಗಳು ತೀವ್ರವಾಗಿರುತ್ತದೆ ಎಂದು ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಎಲೋನ್‌ ಮಸ್ಕ್‌ ಭಾರತ ಭೇಟಿ ಮುಂದಕ್ಕೆ – ಸದ್ಯಕ್ಕಿಲ್ಲ ಮೋದಿ ಜೊತೆಗೆ ಮಾತುಕತೆ

  • ಏ.30 ರವರೆಗೆ  ಇಸ್ರೇಲ್‌ಗೆ ಏರ್ ಇಂಡಿಯಾ ಸೇವೆ ಸ್ಥಗಿತ

    ಏ.30 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ಸೇವೆ ಸ್ಥಗಿತ

    ನವದೆಹಲಿ: ಇಸ್ರೇಲ್ ಮತ್ತು ಇರಾನ್ (Israel and Iran) ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ 30 ರವರೆಗೆ ಟೆಲ್ ಅವಿವ್‌ಗೆ (Tel Aviv) ಮತ್ತು ಅಲ್ಲಿಂದ ಬರುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದೆ.

    ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಏರ್‌ ಇಂಡಿಯಾ (Air India), ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳನ್ನು 30 ಏಪ್ರಿಲ್ ರವರೆಗೆ ಸ್ಥಗಿತಗೊಳಿಸಲಾಗುವುದು. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಈ ಸಮಯದಲ್ಲಿ ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಪ್ರಯಾಣಕ್ಕಾಗಿ ಬುಕಿಂಗ್‌ಗಳನ್ನು ದೃಢಪಡಿಸಿದ ನಮ್ಮ ಪ್ರಯಾಣಿಕರಿಗೆ ಬೆಂಬಲವನ್ನು ನೀಡುತ್ತಿದ್ದೇವೆ. ಏರ್ ಇಂಡಿಯಾದಲ್ಲಿ ನಮ್ಮ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದೆ.

    ಕಳೆದ ಭಾನುವಾರವಷ್ಟೇ ಏರ್ ಇಂಡಿಯಾ ಅಧಿಕಾರಿಯೊಬ್ಬರು ದೆಹಲಿ ಮತ್ತು ಟೆಲ್ ಅವೀವ್ ನಡುವಿನ ನೇರ ವಿಮಾನಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ

    ಟಾಟಾ ಸಮೂಹ-ಮಾಲೀಕತ್ವದ ವಾಹಕವು ಸುಮಾರು ಐದು ತಿಂಗಳ ಅಂತರದ ನಂತರ ಮಾರ್ಚ್ 3 ರಂದು ಇಸ್ರೇಲಿ ರಾಜಧಾನಿಗೆ ಸೇವೆಗಳನ್ನು ಮರುಪ್ರಾರಂಭಿಸಿತು. ಇಸ್ರೇಲಿ ನಗರದ ಮೇಲೆ ಹಮಾಸ್ ದಾಳಿಯ ಹಿನ್ನೆಲೆಯಲ್ಲಿ 2023 ರ ಅಕ್ಟೋಬರ್ 7 ರಿಂದ ಏರ್ ಇಂಡಿಯಾ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಿತು.

  • ಕಚೇರಿಯಲ್ಲೇ ಪ್ಯಾಲೆಸ್ತೀನ್‌ ಪರ ಘೋಷಣೆ ಕೂಗಿದ 28 ಗೂಗಲ್‌ ಸಿಬ್ಬಂದಿ ವಜಾ

    ಕಚೇರಿಯಲ್ಲೇ ಪ್ಯಾಲೆಸ್ತೀನ್‌ ಪರ ಘೋಷಣೆ ಕೂಗಿದ 28 ಗೂಗಲ್‌ ಸಿಬ್ಬಂದಿ ವಜಾ

    ಕ್ಯಾಲಿಫೋರ್ನಿಯಾ: ಕಚೇರಿಯ ಒಳಗಡೆ ಪ್ಯಾಲೆಸ್ತೀನ್‌ (Palestine) ಪರ ಘೋಷಣೆ ಕೂಗಿದ 28 ಸಿಬ್ಬಂದಿಯನ್ನು ಗೂಗಲ್‌ (Google) ಮನೆಗೆ ಕಳುಹಿಸಿದೆ.

    ಕಂಪನಿಯು ಇಸ್ರೇಲ್‌ನೊಂದಿಗೆ 1.2 ಬಿಲಿಯನ್ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿದ್ದನ್ನು ವಿರೋಧಿಸಿ ಉದ್ಯೋಗಿಗಳು ಪ್ರತಿಭಟಿಸಿದ್ದರು. ಕೆಲವರು ಕ್ಯಾಲಿಫೋರ್ನಿಯಾದಲ್ಲಿರುವ ಕಚೇರಿ ಒಳಗಡೆ ಪ್ರತಿಭಟಿಸಿದ್ದರೆ ಇನ್ನು ಕೆಲವರು ನ್ಯೂಯಾರ್ಕ್‌ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಧರಣಿ ನಡೆಸಿದ್ದರು.ಇದನ್ನೂ ಓದಿ: ಲಂಡನ್‌, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ

    ಏಪ್ರಿಲ್ 16 ರಂದು ಗೂಗಲ್ ಕ್ಲೌಡ್ ಸಿಇಒ ಥಾಮಸ್ ಕುರಿಯನ್ ಅವರ ಕ್ಯಾಲಿಫೋರ್ನಿಯಾದ ಕಚೇರಿ ಪ್ರವೇಶಿಸಿ ಸಿಬ್ಬಂದಿ ಪ್ರತಿಭಟಿಸಿದ್ದರು. ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಅವರನ್ನು ಪೊಲೀಸರು ಅವರನ್ನು ಬಂಧಿಸಿದ್ದರು.  ಇದನ್ನೂ ಓದಿ: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ

    ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ಗೂಗಲ್‌ ಗಾಜಾದಲ್ಲಿ ಇಸ್ರೇಲ್‌ (Israel) ನಡೆಸುತ್ತಿರುವ ಯುದ್ಧ ಪ್ಯಾಲೆಸ್ತೀನ್‌ ಜನರ  ನರಮೇಧಕ್ಕೆ ಶಕ್ತಿ ತುಂಬುತ್ತಿದೆ. ಹೀಗಾಗಿ ಕೂಡಲೇ ಈ ಒಪ್ಪಂದವನ್ನು ರದ್ದು ಮಾಡಬೇಕೆಂದು ಸಿಬ್ಬಂದಿ ಪ್ರತಿಭಟಿಸುತ್ತಿದ್ದರು. ಗೂಗಲ್‌ ಕಂಪನಿ ಆಂತರಿಕ ತನಿಖೆ ನಡೆಸಿ ಪ್ರತಿಭಟನೆ ನಡೆಸಿದ ಸಿಬ್ಬಂದಿಯನ್ನು ಈಗ ವಜಾ ಮಾಡಿದೆ.

     

  • ಗಡಿ ದಾಟುವ ಮೊದಲೇ ಇರಾನ್‌ ಕ್ಷಿಪಣಿಗಳನ್ನಹೊಡೆದುರುಳಿಸಿದ ಇಸ್ರೇಲ್‌ – ಅರಬ್‌ ರಾಷ್ಟ್ರಗಳಿಂದಲೂ ತಡೆ

    ಗಡಿ ದಾಟುವ ಮೊದಲೇ ಇರಾನ್‌ ಕ್ಷಿಪಣಿಗಳನ್ನಹೊಡೆದುರುಳಿಸಿದ ಇಸ್ರೇಲ್‌ – ಅರಬ್‌ ರಾಷ್ಟ್ರಗಳಿಂದಲೂ ತಡೆ

    – 99% ಕ್ಷಿಪಣಿಗಳನ್ನು ತಡೆದ ಇಸ್ರೇಲ್‌

    ಟೆಲ್‌ ಅವೀವ್‌: ಇರಾನ್‌ (Iran) ಹಾರಿಸಿದ್ದ 300 ಕ್ಷಿಪಣಿಗಳ ಪೈಕಿ 99% ರಷ್ಟು ಕ್ಷಿಪಣಿ (Missile), ಯುಎವಿಗಳನ್ನು (UAV) ಹೊಡೆದು ಉರುಳಿಸಿದೆ ಎಂದು ಇಸ್ರೇಲ್‌ (Isreal) ಹೇಳಿದೆ.

    ತನ್ನ ಕಮಾಂಡರ್‌ ಹತ್ಯೆಯ ಪ್ರತೀಕಾರವಾಗಿ ಇಸ್ರೇಲ್‌ ಮೇಲೆ ಇರಾನ್‌ 300 ಕ್ಷಿಪಣಿಗಳನ್ನು ಹಾರಿಸಿತ್ತು. ಇವುಗಳನ್ನು ಇಸ್ರೇಲ್‌ ತಡೆದಿದೆ. 170 ಯುಎವಿಗಳನ್ನು ಇರಾನ್‌ ಹಾರಿಸಿತ್ತು. ಇವುಗಳನ್ನು ಇಸ್ರೇಲ್‌ ತಡೆದಿದೆ. ಇವು ಯಾವುದು ತನ್ನ ವಾಯುನೆಲೆಯನ್ನು ಪ್ರವೇಶ ಮಾಡಿಲ್ಲ ಎಂದು ಇಸ್ರೇನ್‌ ಸೇನೆಯ ವಕ್ತಾರ ಡೇನಿಯಲ್‌ ಹಗೆರಿ ತಿಳಿಸಿದ್ದಾರೆ.

    ಇರಾನ್‌ 30 ಕ್ರೂಸ್‌ ಕ್ಷಿಪಣಿ ಹಾರಿಸಿತ್ತು. ಈ ಪೈಕಿ 25 ಕ್ಷಿಪಣಿಗಳನ್ನು ಇಸ್ರೇಲ್‌ ಫೈಟರ್‌ ವಿಮಾನಗಳು ತಡೆದಿದೆ. 120 ಬ್ಯಾಲಿಸ್ಟಿಕ್‌ ಕ್ಷಿಪಣಿಗಳ ಪೈಕಿ ಕೆಲ ಮಾತ್ರ ಇಸ್ರೇಲ್‌ ಭೂ ಪ್ರದೇಶದ ಒಳಗಡೆ ಬಿದ್ದಿದೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿ ಮಾರ್ಗಸೂಚಿ ಬಿಡುಗಡೆ

    ನಮ್ಮ ಬಲವಾದ ಮಿತ್ರ ಪಕ್ಷಗಳು ಇರಾನ್‌ನಿಂದ ಬಂದ ಕ್ಷಿಪಣಿಗಳನ್ನು ತಡೆಯುವಲ್ಲಿ ಸಫಲರಾಗಿದ್ದರಿಂದ ಅವುಗಳು ಇಸ್ರೇಲ್‌ ಗಡಿ ದಾಟಿಲ್ಲ ಎಂದು ತಿಳಿಸಿದರು. ಮಿತ್ರ ಪಕ್ಷಗಳ ಹೆಸರನ್ನು ಉಲ್ಲೇಖಿಸದೇ ಇದ್ದರೂ ಅಮೆರಿಕ, ಯುಕೆ,ಫ್ರಾನ್ಸ್‌ ಸೇರಿದಂತೆ ಹಲವು ದೇಶಗಳು ಇಸ್ರೇಲ್‌ ಬೆಂಬಲಕ್ಕೆ ನಿಂತಿವೆ.

    ಜೋರ್ಡಾನ್‌ನಲ್ಲಿ ಹಲವಾರು ಕ್ಷಿಪಣಿಗಳನ್ನು ತಡೆಹಿಡಿಯಲಾಗಿದೆ. ಜೋರ್ಡಾನ್‌ನಲ್ಲಿರುವ ಅಮೆರಿಕ ಹಲವು ಕ್ಷಿಪಣಿಗಳನ್ನು ಹೊಡೆದು ಹಾಕಿದೆ.

    ಕೆಲ ಮಾಧ್ಯಮಗಳು ತನ್ನ ವಾಯು ಸೇಮೆಯನ್ನು ಬಳಸಿದ್ದಕ್ಕೆ ಅರಬ್‌ ರಾಷ್ಟ್ರಗಳೇ ಇರಾನ್‌ ಸಿಡಿಸಿದ ಕ್ಷಿಪಣಿ ಮತ್ತು ಯುಎವಿಯನ್ನು ಹೊಡೆದು ಹಾಕಿವೆ ಎಂದು ವರದಿ ಮಾಡಿವೆ. ಆದರೆ ಯಾವ ದೇಶಗಳು ಎಷ್ಟು ಕ್ಷಿಪಣಿ, ಯುಎವಿ ಹೊಡೆದು ಹಾಕಿವೆ ಎಂಬುದನ್ನು ತಿಳಿಸಿಲ್ಲ. ಕ್ಷಿಪಣಿಯನ್ನು ತಡೆದಿದ್ದ ಸಿಟ್ಟಾಗಿ ತನ್ನ ಮೇಲೂ ಇರಾನ್‌ ದಾಳಿ ಮಾಡಬಹುದು ಎಂಬ ಕಾರಣಕ್ಕೆ ಅರಬ್‌ ದೇಶಗಳು ಈ ವಿಷಯನ್ನು ಬಹಿರಂಗ ಮಾಡಿಲ್ಲ ಎಂದು ವರದಿಯಾಗಿದೆ.

  • ಇಸ್ರೆಲ್, ಇರಾನ್ ಉದ್ವಿಗ್ನತೆ – ಟೆಲ್ ಅವೀವ್‍ಗೆ ಏರ್ ಇಂಡಿಯಾ ಹಾರಾಟ ಸ್ಥಗಿತ

    ಇಸ್ರೆಲ್, ಇರಾನ್ ಉದ್ವಿಗ್ನತೆ – ಟೆಲ್ ಅವೀವ್‍ಗೆ ಏರ್ ಇಂಡಿಯಾ ಹಾರಾಟ ಸ್ಥಗಿತ

    ನವದೆಹಲಿ: ಇಸ್ರೇಲ್ (Israel) ಮತ್ತು ಇರಾನ್ (Iran) ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಟೆಲ್ ಅವೀವ್‍ಗೆ (Tel Aviv) ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಏರ್ ಇಂಡಿಯಾ (Air India) ನಿರ್ಧರಿಸಿದೆ.

    ದೆಹಲಿ ಮತ್ತು ಟೆಲ್ ಅವೀವ್ ನಡುವಿನ ನೇರ ವಿಮಾನ ಸಂಚಾರವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿ ಮಾರ್ಗಸೂಚಿ ಬಿಡುಗಡೆ

    ಏರ್ ಇಂಡಿಯಾ ವಿಮಾನವು ದೆಹಲಿಯಿಂದ (Delhi) ಇಸ್ರೇಲ್‍ಗೆ ವಾರದಲ್ಲಿ ನಾಲ್ಕು ದಿನಗಳು ಹಾರಾಟ ನಡೆಸುತ್ತಿತ್ತು. ಇದೀಗ ತಾತ್ಕಾಲಿಕವಾಗಿ ಆ ಹಾರಾಟವನ್ನು ಸ್ಥಗಿತಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಟಾಟಾ ಸಮೂಹದ ಮಾಲೀಕತ್ವದ ಏರ್ ಇಂಡಿಯಾ, ಸುಮಾರು ಐದು ತಿಂಗಳ ಅಂತರದ ನಂತರ ಮಾರ್ಚ್ 3 ರಿಂದು ಟೆಲ್ ಅವಿವ್‍ಗೆ ಸೇವೆಗಳನ್ನು ಮರುಪ್ರಾರಂಭಿಸಿತ್ತು. ಇಸ್ರೇಲಿ ನಗರದ ಮೇಲೆ ಹಮಾಸ್ ದಾಳಿಯ ಹಿನ್ನೆಲೆಯಲ್ಲಿ ಏರ್ ಇಂಡಿಯಾ 2023ರ ಅಕ್ಟೋಬರ್ 7 ರಿಂದ ಟೆಲ್ ಅವೀವ್‍ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಿತ್ತು. ಇದನ್ನೂ ಓದಿ: ಇರಾನ್‌ ವೈಮಾನಿಕ ದಾಳಿ; ಇಸ್ರೇಲ್‌ನ ಶಾಲಾ-ಕಾಲೇಜುಗಳು ಬಂದ್‌

  • ಇರಾನ್ ವಶಪಡಿಸಿಕೊಂಡ ಹಡಗಿನಲ್ಲಿರೋ ಪುತ್ರನನ್ನು ನೆನೆದು ಕಣ್ಣೀರಿಟ್ಟ ಕೇರಳದ ವೃದ್ಧ ದಂಪತಿ

    ಇರಾನ್ ವಶಪಡಿಸಿಕೊಂಡ ಹಡಗಿನಲ್ಲಿರೋ ಪುತ್ರನನ್ನು ನೆನೆದು ಕಣ್ಣೀರಿಟ್ಟ ಕೇರಳದ ವೃದ್ಧ ದಂಪತಿ

    ತಿರುವನಂತಪುರಂ: ಇರಾನ್ (Iran) ವಶಪಡಿಸಿಕೊಂಡಿರುವ, ಯುಎಇಯಿಂದ ಮುಂಬೈಗೆ (Mumbai) ಬರುತ್ತಿದ್ದ ಹಡಗಿನಲ್ಲಿದ್ದ (Container Ship) ತಮ್ಮ ಮಗನ ಸುರಕ್ಷತೆಯ ಬಗ್ಗೆ ಕೇರಳದ (Kerala) ವೃದ್ಧ ದಂಪತಿ ಆತಂಕ ವ್ಯಕ್ತಪಡಿಸಿದ್ದು, ಆತನ ಸುರಕ್ಷತೆಗಾಗಿ ಪ್ರಾರ್ಥಿಸಿದ್ದಾರೆ.

    ಹಾರ್ಮುಜ್ ಜಲಸಂಧಿ ಬಳಿ ಶನಿವಾರ ಇರಾನ್ ಸೇನೆ ಇಸ್ರೇಲ್‍ಗೆ (Israel) ಸಂಬಂಧಿತ ಎಂಎಸ್‍ಸಿ ಏರೀಸ್ ಎಂಬ ಸರಕು ತುಂಬಿದ್ದ ಹಡಗನ್ನು ವಶಪಡಿಸಿಕೊಂಡಿದೆ. ಹಡಗಿನಲ್ಲಿದ್ದ ಸುಮಾರು 17 ಮಂದಿ ಭಾರತೀಯರು ಇರಾನ್ ವಶದಲ್ಲಿದ್ದು, ಇದರಲ್ಲಿ ಕೇರಳ ಮೂಲದ ಶ್ಯಾಮನಾಥ್ ಕೂಡ ಸೇರಿದ್ದಾರೆ. ಇದೀಗ ಶ್ಯಾಮನಾಥ್ ಪೋಷಕರಾದ ವಿಶ್ವನಾಥನ್ ಮತ್ತು ಶ್ಯಾಮಲಾ ಅವರು ಶಿಪ್ಪಿಂಗ್ ಕಂಪನಿಯೊಂದಿಗೆ ಫೋನ್ ಮೂಲಕ ಮಾತನಾಡಿದ್ದು, ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್‌

    ತಮ್ಮ ಮಗನ ಸುರಕ್ಷತೆಯ ಬಗ್ಗೆ ಕಾಳಜಿ ಇದೆ. ವಶಪಡಿಸಿಕೊಂಡ ನಂತರ ಅವರು ಹಡಗಿನಲ್ಲಿರುವ ನಮ್ಮ ಸಿಬ್ಬಂದಿಯನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಆದರೆ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಕಂಪನಿಯ ಅಧಿಕಾರಿಗಳು ಹೇಳಿದ್ದಾರೆ ಎಂದು ವಿಶ್ವನಾಥನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಕೆರಳದ ವೆಲ್ಲಿಪರಂಬಲ್ಲಿಯ ಶ್ಯಾಮನಾಥ್, ಕಳೆದ 10 ವರ್ಷಗಳಿಂದ ಎಂಎಸ್‍ಸಿ ಹಡಗಿನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊನೆಯ ಬಾರಿಗೆ ಹುಟ್ಟೂರಿಗೆ ಭೇಟಿ ನೀಡಿದ್ದರು. ಸಿಬ್ಬಂದಿಯಲ್ಲಿ ಶ್ಯಾಮನಾಥ್ ಜೊತೆಗೆ ನೆರೆಯ ಪಾಲಕ್ಕಾಡ್ ಮತ್ತು ವಯನಾಡ್ ಜಿಲ್ಲೆಗಳ ಇಬ್ಬರು ವ್ಯಕ್ತಿಗಳೂ ಇದ್ದಾರೆ ಎಂದು ವಿಶ್ವನಾಥನ್ ಹೇಳಿದ್ದಾರೆ.

    ಹಡಗಿನಲ್ಲಿ ಭಾರತೀಯರಲ್ಲದೇ, ಫಿಲಿಪೈನ್ಸ್, ಪಾಕಿಸ್ತಾನ ಮತ್ತು ರಷ್ಯಾದವರು ಕೂಡ ಇದ್ದಾರೆ. ಕೇಂದ್ರದ ಮಧ್ಯಸ್ಥಿಕೆಯಲ್ಲಿ ಅಧಿಕಾರಿಗಳು ತಮ್ಮ ಮಗ ಮತ್ತು ಅವನ ಸಹೋದ್ಯೋಗಿಗಳನ್ನು ಆದಷ್ಟು ಬೇಗ ಸುರಕ್ಷಿತವಾಗಿ ಮರಳಿ ಕರೆತರುವ ಪ್ರಯತ್ನದಲ್ಲಿದ್ದಾರೆ ಎಂಬುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಶ್ಯಾಮನಾಥ್ ಅವರ ತಾಯಿ ಕೂಡ ಮಾಧ್ಯಮದವರೊಂದಿಗೆ ಮಾತನಾಡಲು ಪ್ರಯತ್ನಿಸಿದರು, ಆದರೆ ಮಗನನ್ನು ನೆನೆದು ಗದ್ಗದಿತರಾದರು. ಸದ್ಯ ಹಡಗಿನಲ್ಲಿರುವ ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಲು ಇರಾನ್‍ನ ಅಧಿಕಾರಿಗಳೊಂದಿಗೆ ಭಾರತ ಮಾತುಕತೆ ನಡೆಸಿದೆ. ಇದನ್ನೂ ಓದಿ: ಇರಾನ್‌ ವೈಮಾನಿಕ ದಾಳಿ; ಇಸ್ರೇಲ್‌ನ ಶಾಲಾ-ಕಾಲೇಜುಗಳು ಬಂದ್‌

  • ಇಸ್ರೇಲ್‌ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್‌

    ಇಸ್ರೇಲ್‌ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್‌

    ನವದೆಹಲಿ/ಟೆಹರಾನ್‌: ಮಧ್ಯಪ್ರಾಚ್ಯದಲ್ಲಿ(Middle East) ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಮುಂಬೈಗೆ (Mumbai) ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಸರಕು ಸಾಗಾಣೆ ಹಡಗನ್ನು (Container Ship) ಇರಾನ್‌ ವಶಪಡಿಸಿಕೊಂಡಿದೆ.

    ಯುಎಇಯಿಂದ ಸರಕು ತುಂಬಿಸಿಕೊಂಡು ಮುಂಬೈ (Mumbai) ಬಂದರಿಗೆ ಬರುತ್ತಿದ್ದ MCS Aries ಹೆಸರಿನ ಕಂಟೈನರ್‌ ಶಿಪ್‌ ಅನ್ನು Strait of Hormuz ಬಳಿ ವಶಪಡಿದೆ. ವಶಪಡಿಸಿದ ಹಡಗು ಈಗ ಇರಾನ್‌ (Iran) ಜಲ ವ್ಯಾಪ್ತಿಯಲ್ಲಿ ಸಂಚರಿಸುತ್ತಿದೆ ಎಂದು ವರದಿಯಾಗಿದೆ.   ಇದನ್ನೂ ಓದಿ: 2009, 2014, 2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? ಗೆದ್ದ ಕಲಿಗಳು ಯಾರು? – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌!

    ಈ ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು ಇವರ ಬಿಡುಗಡೆ ಸಂಬಂಧ ಭಾರತ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ಇಸ್ರೇಲ್‌ ಮೇಲೆ 48 ಗಂಟೆಯ ಒಳಗಡೆ ಇರಾನ್‌ ದಾಳಿ ನಡೆಸಬಹುದು ಎಂಬ ವರದಿಯ ಬೆನ್ನಲ್ಲೇ ಈ ಘಟನೆ ನಡೆದಿದೆ. ಪೋರ್ಚುಗೀಸ್‌ ಧ್ವಜ ಹೊಂದಿದ್ದ ಈ ಹಡಗಿನ ಮೇಲೆ ಇರಾನ್‌ ಸೈನಿಕರು ಹೆಲಿಕಾಪ್ಟರ್‌ನಿಂದ ನೇರವಾಗಿ ಇಳಿದು ದಾಳಿ ಮಾಡಿ ವಶ ಪಡಿಸಿದ್ದಾರೆ. ಈ ಹಡಗು ಇಸ್ರೇಲಿ ಬಿಲಿಯನೇರ್ ಇಯಾಲ್ ಆಫರ್ ಒಡೆತನದ ಲಂಡನ್ ಮೂಲದ ಜೊಡಿಯಾಕ್ ಮಾರಿಟೈಮ್‌ನೊಂದಿಗೆ ಕಂಪನಿಯೊಂದಿಗೆ ಸಂಯೋಜಿತವಾಗಿದೆ. ಈ ಹಡಗು ಏ.15ರ ರಾತ್ರಿ ಮುಂಬೈ ಬಂದರಿಗೆ ಆಗಮಿಸಬೇಕಿತ್ತು. ಇದನ್ನೂ ಓದಿ: ಇರಾನ್‌ ದಾಳಿ ಸಾಧ್ಯತೆ – ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

    ಸೋವಿಯತ್ ಕಾಲ ಮಿಲ್ ಎಂಐ -17 ಹೆಲಿಕಾಪ್ಟರ್ ಬಳಸಿ ಈ ದಾಳಿ ಮಾಡಿದ್ದು, ಇದನ್ನು ಇರಾನಿನ ರೆವಲ್ಯೂಷನ್‌ ಗಾರ್ಡ್‌ ಮತ್ತು ಇರಾನ್ ಬೆಂಬಲಿತ ಯೆಮೆನ್ ಹೌತಿ ಬಂಡುಕೋರರು ಈ ಹಿಂದೆ ಬಳಸಿದ್ದರು.

    ಇಸ್ರೇಲ್‌ ಎಚ್ಚರಿಕೆ: ಹಡಗನ್ನು ಇರಾನ್‌ ವಶಪಡಿಸಿಕೊಂಡ ಬೆನ್ನಲ್ಲೇ ಇಸ್ರೇಲ್‌ ಸಿಟ್ಟಾಗಿದೆ. ಪರಿಸ್ಥಿತಿಯನ್ನು ಮತ್ತಷ್ಟು ಉಲ್ಭಣಗೊಳಿಸಿದರೆ ಅದರ ಪರಿಣಾಮಗಳನ್ನು ಇರಾನ್‌ ಎದುರಿಸಬೇಕಾಗಬಹುದು ಎಂದು ಇಸ್ರೇಲ್‌ ಸೇನೆ ಎಚ್ಚರಿಕೆ ನೀಡಿದೆ.

    ಮುಂದಿನ 48 ಗಂಟೆಗಳಲ್ಲಿ ಇಸ್ರೇಲ್‌ (Israel) ಮೇಲೆ ಇರಾನ್‌ ದಾಳಿ ನಡೆಸಬಹುದು ಎಂದು ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿಯನ್ನು ಆಧಾರಿಸಿ ಶುಕ್ರವಾರ ಮಾಧ್ಯಮಗಳು ವರದಿ ಮಾಡಿದ್ದವು. ಏಪ್ರಿಲ್‌ 1 ರಂದು ಸಿರಿಯಾದಲ್ಲಿರುವ ಇರಾನ್‌ ರಾಯಭಾರ ಕಚೇರಿಯ ಮೇಲೆ ಬಾಂಬ್‌ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಕಮಾಂಡರ್‌ ಸೇರಿದಂತೆ 7 ಮಂದಿ ಇರಾನ್‌ ಮಿಲಿಟರಿ ಸಲಹೆಗಾರರು ಮೃತಪಟ್ಟಿದ್ದರು. ಈ ಏರ್‌ ಸ್ಟ್ರೈಕ್‌ ಅನ್ನು ಇಸ್ರೇಲ್‌ ಮಾಡಿದೆ ಎಂದು ಇರಾನ್‌ ದೂರಿದರೆ ಇಸ್ರೇಲ್‌ ಇಲ್ಲಿಯವರೆಗೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಈ ದಾಳಿಗೆ ಪ್ರತೀಕಾರವಾಗಿ ನಾವು ಇಸ್ರೇಲ್‌ ಮೇಲೆ ದಾಳಿ ಮಾಡುತ್ತೇವೆ ಎಂದು ಇರಾನ್‌ ಎಚ್ಚರಿಕೆ ನೀಡಿತ್ತು.