Tag: ಇಸ್ರೇಲ್

  • ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

    ಬೆಂಗಳೂರು: ಇರಾನ್ (Iran) ಹಾರ್ಮುಝ್ ಜಲಸಂಧಿ (Hormuz Strait) ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟವಾಗಲಿದೆ, ಆರ್ಥಿಕತೆಗೂ ಹೊಡೆತ ಬೀಳಲಿದೆ ಎಂದು ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್ (SR Keshav) ಹೇಳಿದ್ದಾರೆ.

    ಇರಾನ್‌-ಇಸ್ರೇಲ್‌ ನಡುವೆ ಸಂಘರ್ಷ (Israel Iran Conflict) ತೀವ್ರಗೊಂಡಿದ್ದು, ಭಾರತದ ಆರ್ಥಿಕತೆ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಸಂಘರ್ಷ ಮುಂದುವರಿದ್ರೆ ಅಥವಾ ಇರಾನ್‌ ಮುಂದಿನ ಕ್ರಮ ಭಾರತದ (India) ಮೇಲೆ ಏನು ಪರಿಣಾಮಗಳು ಬೀರಬಹುದು ಅನ್ನೋ ಕುರಿತು ಎಸ್. ಆರ್ ಕೇಶವ್ ಮಾತನಾಡಿದ್ದಾರೆ.

    ಆಮದು-ರಫ್ತಿನ ಪ್ರಮುಖ ಮಾರ್ಗ
    ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಕಷ್ಟವಾಗುತ್ತದೆ. ಸಹಜವಾಗಿಯೇ ವಿಶ್ವದಲ್ಲಿ ಯಾವುದೇ ಯುದ್ಧವಾದ್ರೂ ವಿಶ್ವದ ಎಲ್ಲಾ ದೇಶಗಳಿಗೂ ಪರಿಣಾಮ ಬೀರುತ್ತೆ. ಅದೇ ರೀತಿ ಇಸ್ರೇಲ್-ಇರಾನ್ ಯುದ್ಧ ಸುದೀರ್ಘವಾದಷ್ಟು ಭಾರತಕ್ಕೆ ಲಾಸ್. ಏಕೆಂದ್ರೆ ಭಾರತದ 80% ರಷ್ಟು ಕಚ್ಚಾ ತೈಲವನ್ನ (Crude oil) ಆಮದು ಮಾಡಿಕೊಳ್ಳುತ್ತೆ. ಹಾರ್ಮೂಝ್ ಜಲಸಂಧಿ ಮಾರ್ಗದಿಂದಲೇ ಭಾರತಕ್ಕೆ ಆಮದು ಆಗಬೇಕು. ಭಾರತದಿಂದ ರಫ್ತಾಗುವ ಎಲ್ಲ ವಸ್ತುಗಳು ಸಹ ಈ ಜಲಸಂಧಿಯಿಂದಲೇ ಹೋಗಬೇಕು ಎಂದು ವಿವರಿಸಿದ್ರು.

    ಈಗಾಗಲೇ ಆಮದು, ರಫ್ತು ಎರಡಲ್ಲೂ ಭಾರತಕ್ಕೆ ನಷ್ಟ ಶುರುವಾಗಿದೆ. ಇಸ್ರೇಲ್‌ ಜೊತೆಗಿನ ಸಂಘರ್ಷ ತೀವ್ರವಾದ ಬೆನ್ನಲ್ಲೇ ಇರಾನ್ ಜೊತೆಗೆ ವಹಿವಾಟು ಕಡಿಮೆ ಆಗಿದೆ. ಜೊತೆಗೆ ಸೌದಿ ಅರೇಬಿಯಾ, ಯುಎಇ, ಅರಬ್ ದೇಶಗಳಿಂದ ಸಾಗಣಿಕೆಗೆ ಈ ಜಲಸಂಧಿಯಲ್ಲೇ ಬರಬೇಕು. ಎಲ್ಲಾ ಆಮದು ಬರೋದಕ್ಕೆ ಈ ಜಲಸಂಧಿ ಮಾರ್ಗವೇ ಹತ್ತಿರವಾಗುತ್ತೆ. ಯೂರೋಪ್ ದೇಶಗಳಿಗೆ ಭಾರತ ರಪ್ತು ಮಾಡೋದಕ್ಕೂ ಈ ಮಾರ್ಗವೇ ಮುಖ್ಯ. ಹಾಗಾಗಿ ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೇ ಭಾರತಕ್ಕೆ ಭಾರೀ ನಷ್ಟವಾಗುತ್ತದೆ ಎಂದು ತಿಳಿಸಿದರು.

    ಜೊತೆಗೆ ಏಷ್ಯಾ ದೇಶಗಳ ಸಂಪರ್ಕಕ್ಕೂ ನೇರ ಹೊಡೆತ ಬೀಳುತ್ತೆ. ಭಾರತ ಮಾತ್ರವಲ್ಲ ಬಹುತೇಕ ಎಲ್ಲ ಏಷ್ಯಾ ರಾಷ್ಟ್ರಗಳಿಗೆ ಹೊಡೆತ ಬೀಳುತ್ತೆ. ಸದ್ಯದ ಪರಿಸ್ಥಿಯಲ್ಲಿ ಇರಾನ್‌ಗೆ ಚೀನಾ ಬೇಕಿದೆ, ಇಸ್ರೇಲ್‌ಗೆ ಅಮೆರಿಕ ಬೇಕಿದೆ ಎಂದು ಮಾಹಿತಿ ನೀಡಿದರು.

  • Israel-Iran Conflict | ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

    Israel-Iran Conflict | ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

    – ಇರಾನ್‌ನ 170ಕ್ಕೂ ಹೆಚ್ಚು ಸ್ಥಳ, 720 ಮಿಲಿಟರಿ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

    ಟೆಲ್‌ ಅವಿವ್‌/ಟೆಹ್ರಾನ್‌: ಆಪರೇಷನ್‌ ʻರೈಸಿಂಗ್‌ ಲಯನ್‌ʼ ಬಳಿಕ ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷ (Israel-Iran Conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಇರಾನ್‌ ಮಿಸೈಲ್‌ ದಾಳಿಗೆ ಇಸ್ರೇಲ್‌ (Israel) ಕೂಡ ಮಿಸೈಲ್‌ಗಳ ಸುರಿಮಳೆಯನ್ನೇ ಸುರಿಸಿದೆ.

    ಅಣ್ವಸ್ತ್ರ (Nuclear Site), ಮಿಲಿಟರಿ ನೆಲೆಗಳ ಬಳಿಕ ಇರಾನ್‌ನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ಇಸ್ರೇಲ್‌ ದಾಳಿ ಮಾಡಲು ಶುರು ಮಾಡಿದೆ. ಇರಾನ್‌ನಲ್ಲಿ ಒಟ್ಟು 170ಕ್ಕೂ ಹೆಚ್ಚು ಸ್ಥಳಗಳು 720 ಮಿಲಿಟರಿ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

    ಈವರೆಗಿನ ದಾಳಿಯಲ್ಲಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅಣ್ವಸ್ತ್ರ ವಿಜ್ಞಾನಿಗಳು ಸೇರಿದಂತೆ ಈವರೆಗೆ 14 ಹಿರಿಯ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಅತ್ತ ಇರಾನ್‌ ಕೂಡ ಇಸ್ರೇಲ್‌ ಮೇಲೆ 200 ಖಂಡಾಂತರ ಕ್ಷಿಪಣಿಗಳು ಹಾಗೂ 100 ಡ್ರೋನ್‌ಗಳಿಂದ ಭೀಕರ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿದೆ. ಟೆಲ್‌ ಅವಿವ್‌, ಜೆರುಸಲೆಮ್‌ ಸೇರಿದಂತೆ ಮಿಲಿಟರಿ ಮತ್ತು ಸಾರ್ವಜನಿಕ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಹೀಗಾಗಿ ಉಭಯ ರಾಷ್ಟ್ರಗಳ ನಡುವಿನ ಸಂಘರ್ಷ 4ನೇ ದಿನವೂ ಮುಂದುವರಿದಿದೆ. ಇದನ್ನೂ ಓದಿ: ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

    ಕದನ ವಿರಾಮ ಮಾತುಕತೆ ತಿರಸ್ಕಾರ
    ಇತ್ತ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, ಟೆಹ್ರಾನ್‌ ಹೊತ್ತಿ ಉರಿಯಯತ್ತೆ, ನಿರಂತರ ದಾಳಿ ಇರಾನ್‌ ಮೇಲೆ ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅತ್ತ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಸ್ರೇಲ್‌ ಮೇಲೆ ಬೃಹತ್‌ ದಾಳಿ ನಡೆಸುವ ಸೂಚನೆ ಕೊಟ್ಟಿದೆ. ಜೊತೆಗೆ ಇಸ್ರೇಲ್‌ನಿಂದ ದಾಳಿ ಮುಂದುವರಿಯುವವರೆಗೂ ನಾವು ಕದನ ವಿರಾಮದ ಬಗ್ಗೆ ಮಾತನಾಡುವುದಿಲ್ಲ ಎಂದು ಒಮನ್ ಮತ್ತು ಕತಾರ್‌ನ ಮಧ್ಯಸ್ಥಿಕೆಯನ್ನು ಇರಾನ್‌ ತಿರಸ್ಕರಿಸಿದೆ.

    ಇಸ್ರೇಲ್‌ ನಡೆಸಿದ ದಾಳಿಯಲ್ಲಿ 224 ಮಂದಿ ಸಾವನ್ನಪ್ಪಿದ್ದು, 1,277 ಜನರು ಗಾಯಗೊಂಡಿದ್ದಾರೆ. ಅದೇ ವೇಳೆ ಇರಾನ್‌ ನಡೆಸಿದ ದಾಳಿಯಲ್ಲಿ 14 ಇಸ್ರೇಲಿ ನಾಗರಿಕರು ಸಾವನ್ನಪ್ಪಿದ್ದು, 390 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉತ್ತರಾಖಂಡ್‌ ಹೆಲಿಕಾಪ್ಟರ್‌ ಪತನ – 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್‌ಗಿತ್ತು ಅಪಾರ ಅನುಭವ

  • ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

    ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

    ಬೆಂಗಳೂರು: ಇರಾನ್ (Iran) ಮತ್ತು ಇಸ್ರೇಲ್ (Israel) ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯದ (Karnataka) 9 ವಿದ್ಯಾರ್ಥಿಗಳು ಇರಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ.

    ರಾಜಧಾನಿ ಟೆಹರಾನ್‌ನಲ್ಲಿ (Tehran) ಜಫ್ರಾನಿಯಾ ಪ್ರದೇಶದ ತೌಫಿಕ್ ಅಲ್ಲೆಯಲ್ಲಿ 9 ಮಂದಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದರು. ಈ 9 ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಂತೆ ಕರ್ನಾಟಕ ನಾನ್ ರೆಸಿಡೆನ್ಸಿ ಪೋರಂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.  ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

     
    ಪೋರಂನ ಡೆಪ್ಯುಟಿ ಚೇರ್‌ಮನ್ ಡಾ. ಆರತಿ ಕೃಷ್ಣ ಅವರು ವಿದೇಶಾಂಗ ಸಚಿವ ಜೈಶಂಕರ್‌ (Jaishankar) ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹೆದರಿ ಬಂಕರ್‌ನಲ್ಲಿ ಕುಳಿತಿದ್ದೆವು, ರಸ್ತೆಗೆ ಇಳಿಯಲ್ಲ – ಇರಾನ್ ದಾಳಿಯ ಭೀಕರತೆ ಬಿಚ್ಚಿಟ್ಟ ಕರ್ನಾಟಕದ ಮಹಿಳೆ

    ಸದ್ಯ ಭಾರತಕ್ಕೆ ಮರಳಲು ಸಹಾಯ ಮಾಡಲು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ಕರ್ನಾಟಕದ ವಿದ್ಯಾರ್ಥಿಗಳಾದ ನದೀಮ್ ಹುಸೇನ್, ಮೀರ್ ನಾಸರ್ ಹುಸೇನ್, ಸೈಯದ್ ಮೊಹಮ್ಮದ್ ಟಕಿ, ಮೀರ್ ಎಸಾಮ್ ರೆಜಾ, ಅಬ್ಬಾಸ್ ಅಸ್ಕರಿ, ಸೈಯದ್ ಮೊಹ್ಸಿನ್ ರೆಜಾ, ಮರ್ಯಮ್ ಫಾತಿಮಾ, ಡೇನಿಯಾ ಉಲ್ಫಾಟ್, ಅಬ್ಬಾಸ್ ಅಲಿ ಅವರು ತುರ್ತು ಸಹಾಯಕ್ಕೆ ಮನವಿ ಮಾಡಿದ್ದಾರೆ.

  • ಹೆದರಿ ಬಂಕರ್‌ನಲ್ಲಿ ಕುಳಿತಿದ್ದೆವು, ರಸ್ತೆಗೆ ಇಳಿಯಲ್ಲ – ಇರಾನ್ ದಾಳಿಯ ಭೀಕರತೆ ಬಿಚ್ಚಿಟ್ಟ ಕರ್ನಾಟಕದ ಮಹಿಳೆ

    ಹೆದರಿ ಬಂಕರ್‌ನಲ್ಲಿ ಕುಳಿತಿದ್ದೆವು, ರಸ್ತೆಗೆ ಇಳಿಯಲ್ಲ – ಇರಾನ್ ದಾಳಿಯ ಭೀಕರತೆ ಬಿಚ್ಚಿಟ್ಟ ಕರ್ನಾಟಕದ ಮಹಿಳೆ

    – ರಾಶಿ ರಾಶಿ ಡ್ರೋನ್, ಕ್ಷಿಪಣಿಗಳಿಂದ ದಾಳಿ

    ಟೆಲ್ ಅವೀವ್: ಇಸ್ರೇಲ್ (Israel) ಮತ್ತು ಇರಾನ್ (Iran) ನಡುವೆ ಸಂಘರ್ಷ ಉಂಟಾಗಿ, ದಾಳಿ-ಪ್ರತಿದಾಳಿಗಳು ನಡೆಸುತ್ತಿದೆ. ಇದೀಗ ಇಸ್ರೇಲ್‌ನಲ್ಲಿ ಸಿಲುಕಿರುವ ಕರ್ನಾಟಕದ ಮಹಿಳೆಯೊಬ್ಬರು ಇರಾನ್ ದಾಳಿಯ ಭೀಕರತೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

    ಇಸ್ರೇಲ್‌ನಲ್ಲಿ ಕೇರ್ ಟೇಕರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಗಳೂರಿನ ಮಹಿಳೆಯೊಬ್ಬರು, ಪಬ್ಲಿಕ್ ಟಿವಿಯೊಂದಿಗೆ ದಾಳಿ ಭೀಕರತೆಯನ್ನು ಹಂಚಿಕೊಂಡಿದ್ದಾರೆ. ಅಲ್ಲಿನ ಪರಿಸ್ಥಿತಿಯ ಕುರಿತು ಮಾತನಾಡಿದ ಅವರು, ಇಂದು ಬೆಳಗ್ಗೆ ಕೂಡಾ ಡ್ರೋನ್, ಮಿಸೈಲ್ ಅಟ್ಯಾಕ್ (Missile attack) ಆಗಿದೆ. ಇಲ್ಲಿನ ಒಂದೊಂದು ಕ್ಷಣವೂ ಭಯದಿಂದ ಕೂಡಿದೆ. ರಾಶಿ, ರಾಶಿ ಡ್ರೋನ್, ಮಿಸೈಲ್‌ಗಳಿಂದ ದಾಳಿ ನಡೆಯುತ್ತಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: Israel-Iran Conflict | ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು

    ರಸ್ತೆಗಳಿಗೆ ಇಳಿಯಲು ಭಯ ಆಗ್ತಿದೆ. ಜೆರುಸೇಲಂನಲ್ಲಿ 2 ದಿನಗಳಿಂದ ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡಿದೆ. ಕಚೇರಿ, ಕಾರ್ಖಾನೆಗಳಿಗೆ ರಜೆ ನೀಡಲಾಗಿದೆ. ಅಧಿಕಾರಿಗಳು, ರಸ್ತೆಗೆ ಇಳಿಯದಂತೆ ನಾಗರಿಕರಿಗೆ ಸೂಚನೆ ನೀಡಿದ್ದಾರೆ. ಜೇರುಸೇಲಂನ ಹಲವು ಪ್ರದೇಶಗಳಲ್ಲಿ ಸೈರನ್‌ಗಳು ಮೊಳಗ್ತಿದೆ. ಸೈರನ್ ಮೊಳಗ್ತಿದ್ದಂತೆ ಬಂಕರ್‌ಗೆ ಜನರು ಓಡಿ ಹೋಗುತ್ತಿದ್ದಾರೆ ಎಂದು ಇರಾನ್ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

    ತುರ್ತು ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಉಳಿದಂತೆ ಯಾವುದೇ ಸಂಚಾರ ಅನುಮತಿ ಇಲ್ಲ. ಟೆಲ್ ಅವೀವ್, ಬೆತ್ಲಹೆಂನಲ್ಲಿ ಮನೆಗಳಿಗೆ ಹಾನಿ ಆಗಿದೆ. ಜೆರುಸಲೆಂನಲ್ಲಿ ಹಾನಿಯಾಗಿಲ್ಲ. ಆದರೆ ಕ್ಷಿಪಣಿ, ಡ್ರೋನ್ ದಾಳಿಗಳು ನಡೆಯುತ್ತಿವೆ. ರಾತ್ರಿ, ಬೆಳಗ್ಗೆ ಎನ್ನದೇ ದಾಳಿ ನಡೆಯುತ್ತಿದೆ. ಇದರ ಭಯದಲ್ಲಿ ನಮಗೆ ಇಲ್ಲಿ ನಿದ್ದೆ ಇಲ್ಲದಂತಾಗಿದೆ. ಮೊನ್ನೆ ನಡೆದ ಕ್ಷಿಪಣಿ ದಾಳಿಯನ್ನು ನಾನು ಕಣ್ಣಾರೆ ನೋಡಿದ್ದೇನೆ. ನೋಡಿ ತುಂಬಾ ಭಯ ಆಯ್ತು. ಬಳಿಕ ಬಿಲ್ಡಿಂಗ್ ಕೆಳಗೆ ಇರುವ ಬಂಕರ್‌ಗೆ ಹೋಗಿ ಕುಳಿತಿದ್ದೆವು ಎಂದು ದಾಳಿ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ.

  • Israel-Iran Conflict | ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು

    Israel-Iran Conflict | ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು

    ಟೆಲ್ ಅವೀವ್: ಇಸ್ರೇಲ್ (Israel) ಹಾಗೂ ಇರಾನ್ (Iran) ನಡುವೆ ಸಂಘರ್ಷ ತೀವ್ರಗೊಂಡಿದ್ದು, ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು (Kannadigas) ಇಸ್ರೇಲ್‌ನಲ್ಲಿ ಸಿಲುಕಿದ್ದಾರೆ.

    ಒಂದು ವಾರದಿಂದ ಇಸ್ರೇಲ್‌ನಲ್ಲಿದ್ದ ಕನ್ನಡಿಗರ ತಂಡ, ಶುಕ್ರವಾರ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಇಸ್ರೇಲ್ -ಇರಾನ್ ಸಂಘರ್ಷದ ಪರಿಣಾಮ ದಿಢೀರ್ ವಿಮಾನ ಹಾರಾಟ ಸ್ಥಗಿತಗೊಳಿಸಿದ ಹಿನ್ನೆಲೆ ಬಿ ಪ್ಯಾಕ್ ಎನ್‌ಜಿಒ ತಂಡ ಇಸ್ರೇಲ್ ರಾಜಧಾನಿ ಟೆಲ್ ಅವೀವ್‌ನಲ್ಲಿ ಉಳಿದುಕೊಂಡಿದೆ. ಇದನ್ನೂ ಓದಿ: Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

    ಇಸ್ರೇಲ್ ಹಾಗೂ ಇರಾನ್ ನಡುವೆ ದಾಳಿ- ಪ್ರತಿದಾಳಿ ತೀವ್ರಗೊಂಡ ಬೆನ್ನಲ್ಲೇ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ 61 ಮಂದಿ ಭಾರತೀಯರು ಜಾರ್ಜಿಯಾದಲ್ಲಿ ಸಿಲುಕಿದ್ದಾರೆ. ರಾಜಸ್ಥಾನದ 61 ಮಂದಿಯ ತಂಡ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳುವ ಕಾರ್ಯಕ್ರಮಕ್ಕೆ ಜೂನ್ 8ರಂದು ತೆರಳಿದ್ದರು. ಜೂನ್ 13ರಂದು ಶಾರ್ಜಾ ಮೂಲಕ ಭಾರತಕ್ಕೆ ವಾಪಸ್ ಆಗಬೇಕಿತ್ತು. ವಿಮಾನ ಸ್ಥಗಿತಗೊಂಡ ಹಿನ್ನೆಲೆ ಅಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ತುರ್ತಾಗಿ ತಮಗೆ ಸಹಾಯ ಮಾಡುವಂತೆ ಕೋರಿ ಭಾರತ ಸರ್ಕಾರಕ್ಕೆ ಭಾರತೀಯ ತಂಡ ಮನವಿ ಮಾಡಿದೆ. ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ ಪ್ರಕರಣ – ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಪತ್ರ

  • ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

    ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

    ಟೆಲ್‌ ಅವೀವ್: ಇಸ್ರೇಲ್‌ ಮತ್ತು ಇರಾನ್‌ (Israel Iran War) ನಡುವಿನ ಸಂಘರ್ಷ ಮತ್ತಷ್ಟು ಬಿಗಡಾಯಿಸಿದೆ. ದಾಳಿ ಪರಿಣಾಮ ಈವರೆಗೆ ಎರಡೂ ದೇಶಗಳಲ್ಲಿ 80 ಜನ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಭಾನುವಾರ ಮುಂಜಾನೆಯೇ ಉಭಯ ದೇಶಗಳು ಒಬ್ಬರ ಮೇಲೊಬ್ಬರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಇಸ್ರೇಲಿ ರಕ್ಷಣಾ ಪಡೆಗಳು ಇರಾನಿನ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಮತ್ತು ಪರಮಾಣು ಸಿಸ್ಟಮ್‌ ಮೇಲೆ ಸರಣಿ ದಾಳಿ ನಡೆಸಿರುವುದಾಗಿ ಹೇಳಿಕೊಂಡಿವೆ. ಇದನ್ನೂ ಓದಿ: Israel vs Iran War: ಹೊತ್ತಿ ಉರಿದ ಟೆಹ್ರಾನ್‌- ತೈಲ ಡಿಪೋ ಮೇಲೆ ಇಸ್ರೇಲ್‌ ದಾಳಿ

    ಟೆಹ್ರಾನ್‌ನಲ್ಲಿರುವ ಶಹರಾನ್ ತೈಲ ಸಂಗ್ರಹಾಗಾರವನ್ನು ಇಸ್ರೇಲ್‌ ಟಾರ್ಗೆಟ್‌ ಮಾಡಿದೆ ಎಂದು ಇರಾನ್ ಹೇಳಿದೆ. ಇಸ್ರೇಲಿ ಮಿಲಿಟರಿ ಟೆಹ್ರಾನ್ ಬಳಿಯ ತೈಲ ಸಂಸ್ಕರಣಾಗಾರದ ಮೇಲೂ ದಾಳಿ ಮಾಡಿತು. ಶನಿವಾರ ಇಸ್ರೇಲಿ ದಾಳಿಯಿಂದ ಬೆಂಕಿ ಕಾಣಿಸಿಕೊಂಡ ನಂತರ, ವಿಶ್ವದ ಅತಿದೊಡ್ಡ ಅನಿಲ ಕ್ಷೇತ್ರವಾದ ಸೌತ್ ಪಾರ್ಸ್ ಕ್ಷೇತ್ರದಲ್ಲಿ ಇರಾನ್ ಉತ್ಪಾದನೆಯನ್ನು ಭಾಗಶಃ ಸ್ಥಗಿತಗೊಳಿಸಿದೆ.

    ಇಸ್ರೇಲಿ ನಗರಗಳ ಮೇಲೆ ಇರಾನ್ ಕೂಡ ದಾಳಿಗಳನ್ನು ನಡೆಸಿದೆ. ಜೆರುಸಲೆಮ್ ಮತ್ತು ಟೆಲ್ ಅವೀವ್‌ನಾದ್ಯಂತ ವಾಯುದಾಳಿ ಸೈರನ್‌ಗಳು ಮೊಳಗಿದವು. 10 ವರ್ಷದ ಬಾಲಕ ಮತ್ತು 20 ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಇರಾನ್ ತನ್ನ ಪ್ರತಿಕಾರದ ದಾಳಿಯನ್ನು ಪ್ರಾರಂಭಿಸಿದ ನಂತರ ಇಸ್ರೇಲ್‌ನಲ್ಲಿ ಇದುವರೆಗೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

    ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್‌ಗಳು ಇಸ್ರೇಲ್‌ನ ಇಂಧನ ಮೂಲಸೌಕರ್ಯ ಮತ್ತು ಯುದ್ಧ ಜೆಟ್ ಇಂಧನ ಉತ್ಪಾದನೆಗೆ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ಗಳು ತಿಳಿಸಿವೆ.

    ಇಸ್ರೇಲಿ ಸೇನೆಯು ಶುಕ್ರವಾರ ಆಪರೇಷನ್ ‘ರೈಸಿಂಗ್ ಲಯನ್’ ಅನ್ನು ಪ್ರಾರಂಭಿಸಿತು. ಇರಾನ್‌ನ ಪರಮಾಣು ಮತ್ತು ಮಿಲಿಟರಿ ತಾಣಗಳ ಮೇಲೆ ದಾಳಿ ಮಾಡಿದ ನಂತರ ಇಬ್ಬರು ಪರಸ್ಪರ ದಾಳಿ ಮುಂದುವರಿಸಿದ್ದಾರೆ.

    ನಾವು ನಡೆಸಿದ ದಾಳಿಯಲ್ಲಿ ಉನ್ನತ ಜನರಲ್‌ಗಳು ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಹಿರಿಯ ವಿಜ್ಞಾನಿಗಳು ಮತ್ತು ತಜ್ಞರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಭಾನುವಾರದ ದಾಳಿಗೆ ಮೊದಲು ಇರಾನ್‌ನ ವಿಶ್ವಸಂಸ್ಥೆಯ ರಾಯಭಾರಿಯು, 78 ಜನರು ಸಾವನ್ನಪ್ಪಿದ್ದಾರೆ ಮತ್ತು 320 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

  • Israel vs Iran War: ಹೊತ್ತಿ ಉರಿದ ಟೆಹ್ರಾನ್‌- ತೈಲ ಡಿಪೋ ಮೇಲೆ ಇಸ್ರೇಲ್‌ ದಾಳಿ

    Israel vs Iran War: ಹೊತ್ತಿ ಉರಿದ ಟೆಹ್ರಾನ್‌- ತೈಲ ಡಿಪೋ ಮೇಲೆ ಇಸ್ರೇಲ್‌ ದಾಳಿ

    ಟೆಲ್‌ ಅವೀವ್‌: ಇಸ್ರೇಲ್‌ ಮತ್ತು ಇರಾನ್‌ (Israel Iran War) ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದೆ. ತೈಲ ಡಿಪೋ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ದಾಳಿಗೆ ಟೆಹ್ರಾನ್‌ (Tehran) ಹೊತ್ತಿ ಉರಿಯುತ್ತಿದೆ.

    ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಶನಿವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ‘ಟೆಹ್ರಾನ್ ಉರಿಯುತ್ತಿದೆ’ ಎಂದು ತಿಳಿಸಿದ್ದಾರೆ. ಇರಾನ್ ರಾಜಧಾನಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿರುವುದನ್ನು ತೋರಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.‌ ಇದನ್ನೂ ಓದಿ: ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

    ಇರಾನಿನ ರಾಜ್ಯ ಮಾಧ್ಯಮವು, ಇಸ್ರೇಲಿ ವೈಮಾನಿಕ ದಾಳಿಯು ಟೆಹ್ರಾನ್‌ನ ವಾಯುವ್ಯದಲ್ಲಿರುವ ತೈಲ ಡಿಪೋವನ್ನು ಅಪ್ಪಳಿಸಿದೆ ಎಂದು ದೃಢಪಡಿಸಿದ ನಂತರ ಈ ಹೇಳಿಕೆ ಬಂದಿದೆ. ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ದೃಶ್ಯಗಳು, ನಗರದ ಮೇಲೆ ದಟ್ಟವಾದ ಹೊಗೆ ಜೊತೆ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ತೋರಿಸಿದೆ.

    ಟೆಹ್ರಾನ್‌ನಲ್ಲಿ ಸ್ಥಳೀಯ ಸಮಯ ನಸುಕಿನ ಜಾವ 2:30 ರ ಸುಮಾರಿಗೆ ಸ್ಫೋಟಗಳ ಶಬ್ದ ಕೇಳಿಬಂದವು. ಆದರೆ, ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಡ್ರೋನ್ ಮತ್ತು ಕ್ಷಿಪಣಿ ಸಂಘರ್ಷದ ನಡುವೆ ಅವುಗಳ ಮೂಲ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

    ಶುಕ್ರವಾರ ಪ್ರಾರಂಭವಾದ ಇಸ್ರೇಲಿ ದಾಳಿಗಳಿಗೆ ಪ್ರತಿಕ್ರಿಯೆಯಾಗಿ, ಇಸ್ರೇಲಿ ಫೈಟರ್ ಜೆಟ್‌ಗಳಿಗೆ ಇಂಧನ ತುಂಬಲು ಬಳಸುವ ಸ್ಥಳಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಭಾನುವಾರ ಮುಂಜಾನೆ ಇರಾನ್‌ ಘೋಷಿಸಿದೆ.

    ಇಸ್ರೇಲ್‌ನ ಹೈಫಾ ಮತ್ತು ಟೆಲ್‌ ಅವೀವ್‌ ನಗರಗಳು ಸೇರಿದಂತೆ ಹಲವು ಭಾಗಗಳ ಮೇಲೆ ಇರಾನ್‌ ಕ್ಷಿಪಣಿಗಳನ್ನು ಹಾರಿಸಿದೆ. ಈ ದಾಳಿಯಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಇಸ್ರೇಲಿ ಪಡೆಗಳು ಇರಾನ್‌ನಾದ್ಯಂತ ನಾಗರಿಕ ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ಬಾಂಬ್ ದಾಳಿ ನಡೆಸಿ, ಟೆಹ್ರಾನ್‌ನಲ್ಲಿರುವ ಶಹ್ರಾನ್ ತೈಲ ಸ್ಥಾವರದಲ್ಲಿ ಬೆಂಕಿ ಹಚ್ಚಿತ್ತು. ಇದಕ್ಕೆ ಪ್ರತಿಯಾಗಿ ಇರಾನ್‌ ದಾಳಿ ಮುಂದುವರಿಸಿದೆ.

  • ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

    ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

    – ಇಸ್ರೇಲ್‌ ನೆರವಿಗೆ ಬರದಂತೆ ಅಮೆರಿಕ, ಇಂಗ್ಲೆಂಡ್‌, ಫ್ರಾನ್ಸ್‌ಗೆ ಇರಾನ್‌ ವಾರ್ನಿಂಗ್‌
    – ಇಸ್ರೇಲ್‌ನ ʻಐರನ್ ಡೋಮ್ʼ ಭೇದಿಸಿದ ಇರಾನ್ ಮಿಸೈಲ್ಸ್

    ಟೆಲ್‌ ಅವಿವ್: ಇರಾನ್-ಇಸ್ರೇಲ್‌ ನಡುವೆ ಯುದ್ಧದ (Iran – Israel War) ಕಾರ್ಮೋಡ ಕವಿದಿದೆ. ಉಭಯ ರಾಷ್ಟ್ರಗಳ ನಡುವಿನ ದಾಳಿ-ಪ್ರತಿದಾಳಿ ಯುದ್ಧದ ಸನ್ನಿವೇಶ ತಂದೊಡ್ಡಿದೆ. ಒಂದು ದಿನದ ಹಿಂದೆಯಷ್ಟೇ ಇಸ್ರೇಲ್‌ ಸೇನೆಯು ಇರಾನ್‌ನ ಅಣ್ವಸ್ತ್ರ (Nuclear Sites) ಹಾಗೂ ಮಿಲಿಟರಿ ನೆಲೆಗಳನ್ನ ಗುರಿಯಾಗಿಸಿ ದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್ ಕೂಡ ಮಿಸೈಲ್‌ ಮಳೆ ಸುರಿಸಿತು. ಇದರಿಂದ ಕೆರಳಿದ ಇಸ್ರೇಲ್‌, ಇರಾನಿನ ಮೇಲೆ ಭೀಕರ ದಾಳಿ ಮಾಡುವ ದೊಡ್ಡ ಸುಳಿವು ನೀಡಿದೆ.

    ಈಗಾಗಲೇ ಇರಾನ್‌ನ ದಕ್ಷಿಣದಲ್ಲಿರುವ ಪರ್ಶಿಯನ್‌ ಅನಿಲ ಸಂಸ್ಕರಣಾ ಘಟಕಗಳ (Pars gas field) ಮೇಲೆ ಇಸ್ರೇಲ್‌ ಡ್ರೋನ್‌ ದಾಳಿ ನಡೆಸಿದೆ ಎಂದು ಕೆಲ ಅರೆ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಒಂದು ವೇಳೆ ಇದು ಅಧಿಕೃತ ಎಂದಾದ್ರೆ ಇರಾನ್‌ನ ತೈಲ ಮತ್ತು ನೈಸರ್ಗಿಕ ಅನಿಲ ಉದ್ಯಮದ ಮೇಲಿನ ಮೊದಲ ದಾಳಿಯಾಗಲಿದೆ. ಸದ್ಯಕ್ಕೆ ಇರಾನ್‌ ತಮ್ಮ ವಾಯು ರಕ್ಷಣಾ ವ್ಯವಸ್ಥೆಗಳು ಸುರಕ್ಷಿತವಾಗಿವೆ ಎಂದು ಹೇಳಿಕೊಂಡಿದೆ. ಇದನ್ನೂ ಓದಿ: ಅಮೆರಿಕದ ರಾಜಕಾರಣಿಗಳ ಮನೆಯೊಳಗೇ ಗುಂಡಿನ ದಾಳಿ – ಶಾಸಕಿ ಮೆಲಿಸ್ಸಾ, ಪತಿ ಹತ್ಯೆ; ಓರ್ವ ಸಂಸದನಿಗೆ ಗಾಯ

    ಇಸ್ರೇಲ್‌ನ ʻಐರನ್ ಡೋಮ್ʼ ಭೇದಿಸಿದ ಇರಾನ್ ಮಿಸೈಲ್ಸ್
    ಇಸ್ರೇಲ್ ಮೇಲೆ ಇರಾನ್ ಶುಕ್ರವಾರ (13 ಜೂನ್) ಭಾರೀ ಪ್ರತೀಕಾರದ ದಾಳಿ ನಡೆಸಿದೆ. ಟೆಲ್ ಅವಿವ್‌ನಲ್ಲಿರುವ ಇಸ್ರೇಲ್‌ನ ರಕ್ಷಣಾ ಪಡೆಗಳ (IDF) ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ಕ್ಷಿಪಣಿಗಳನ್ನು ಉಡಾಯಿಸಿದೆ. ಇಸ್ರೇಲ್‌ ಈ ದಾಳಿ ಎದುರಿಸಲು ಸಜ್ಜಾಗಿತ್ತು, ಆದ್ರೆ ಊಹೆಗೂ ಮೀರಿದ ಸನ್ನಿವೇಶವೊಂದು ನಡೆದೇ ಹೋಯಿತು. ಇರಾನ್ ದಾಳಿಯನ್ನು ಇಸ್ರೇಲ್‌ನ ಕ್ಷಿಪಣಿ ನಿಗ್ರಹ ವ್ಯವಸ್ಥೆಯಾದ ಐರನ್ ಡೋಮ್ ಕೂಡ ಮೆಟ್ಟಿ ನಿಲ್ಲಲಾಗಿಲ್ಲ. ಇರಾನ್ ನಿಂದ ಹಾರಿಸಲ್ಪಟ್ಟ ಕೆಲವು ಕ್ಷಿಪಣಿಗಳು ಐರನ್ ಡೋಂನಿಂದಲೂ ಬಚಾವಾಗಿ ಬಂದು ಇಸ್ರೇಲ್‌ನ ಕೆಲವು ಕಟ್ಟಡಗಳಿಗೆ ಅಪ್ಪಳಿಸಿದವು. ಈ ವೇಳೆ ಇಸ್ರೇಲ್ ರಕ್ಷಣಾ ಪಡೆಗಳ ಕೇಂದ್ರ ಕಚೇರಿಯೇ ಧ್ವಂಸವಾಯಿತು.

    ಇಸ್ರೇಲ್‌ನಲ್ಲಿ ಮೊಳಗಿದ ಸೈರನ್‌
    ಇಸ್ರೇಲ್‌ನ ಜೆರುಸಲೇಮ್, ಟೆಲ್ ಅವಿವ್ ನಗರವನ್ನು ಗುರಿಯಾಗಿಸಿ 100ಕ್ಕೂ ಹೆಚ್ಚು ಡ್ರೋನ್‌ಗಳು, 100 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಇರಾನ್‌ ಪ್ರಯೋಗಿಸಿತು. ಇದರಿಂದ ಇಸ್ರೇಲ್‌ನಲ್ಲಿ ನಾಲ್ವರು ಸಾವನ್ನಪ್ಪಿದ್ದು, 59 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ನ ಎರಡು ಎಫ್-35 ಜೆಟ್‌ಗಳೂ ನಾಶವಾಗಿವೆ. ಇಸ್ರೇಲ್‌ನಲ್ಲಿ ಸೈರನ್ ಮೊಳಗುತ್ತಿದ್ದಂತೆ ಜನ ಸುರಕ್ಷಿತ ಸ್ಥಳಕ್ಕೆ ಓಡಿ ಹೋಗುವ ದೃಶ್ಯ ವೈರಲ್ ಆಗಿದೆ. ಇದನ್ನೂ ಓದಿ: ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

    ಈ ಬೆನ್ನಲ್ಲೇ ಇರಾನ್ ವಿರುದ್ಧ ಪ್ರತೀಕಾರದ ಕ್ರಮ ಕೈಗೊಳ್ಳೋ ಬಗ್ಗೆ ಇಸ್ರೇಲ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಟೆಹ್ರಾನ್ ನಗರ ಹೊತ್ತಿ ಉರಿಯುತ್ತೆ… ಸರ್ವನಾಶ ಮಾಡುತ್ತೇವೆ ಎಂದು ಇಸ್ರೇಲ್‌ನ ರಕ್ಷಣಾ ಸಚಿವ ಕಾಟ್ಜ್ ಎಚ್ಚರಿಕೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಇಸ್ರೇಲ್ ಸಹಾಯಕ್ಕೆ ಬಂದರೆ ನಿಮ್ಮ ನೌಕಾನೆಲೆಗಳನ್ನು ಧ್ವಂಸಗೊಳಿಸ್ತೇವೆ ಅಂತ ಅಮೆರಿಕ, ಇಂಗ್ಲೆಂಡ್ ಹಾಗೂ ಫ್ರಾನ್ಸ್‌ಗೆ ಇರಾನ್ ವಾರ್ನಿಂಗ್ ಕೊಟ್ಟಿದೆ. ಇದನ್ನೂ ಓದಿ: 11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

    ಇಸ್ರೇಲ್‌ನಿಂದ ಘೋರ ದಾಳಿಯ ಸುಳಿವು
    ತನ್ನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳುತ್ತಿರುವ ಇಸ್ರೇಲ್‌, ಇರಾನ್‌ ಮೇಲೆ ಭೀಕರ ದಾಳಿ ನಡೆಸುವ ಎಚ್ಚರಿಕೆ ಕೊಟ್ಟಿದೆ. ನಾವು ಇರಾನ್‌ನ ಅಣ್ವಸ್ತ್ರ ತಾಣಗಳಿಂದ ಹಿಡಿದು, ವಾಯು ರಕ್ಷಣಾ ವ್ಯವಸ್ಥೆಗಳ ವರೆಗೆ ಕೆಲವು ಅಪಾಯಕಾರಿ ಮಿಲಿಟರಿ ಸಂಪತ್ತುಗಳನ್ನು ನಾಶಪಡಿಸಿದ್ದೇವೆ. ಆದರೆ ಇರಾನ್‌ ನಮ್ಮಲ್ಲಿನ ಶಾಲೆಗಳು, ನಾಗರಿಕರ ಮನೆಗಳು ಹಾಗೂ ನಾಗರಿಕರನ್ನ ಗುರಿಯಾಗಿಸಿ ದಾಳಿ ನಡೆಸುತ್ತಾ ಬಂದಿದ್ದೆ. ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದೆ. ಹೀಗಾಗಿ ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ ನಡೆಯುವ ಸಾಧ್ಯತೆಗಳಿವೆ.

  • ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

    ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

    ಟೆಹ್ರಾನ್: ಇರಾನ್‌ನ ಪರಮಾಣು ಶಸ್ತ್ರಾಸ್ತ್ರ ಕೇಂದ್ರ (Nuclear Plant) ಹಾಗೂ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್‌ನ ಡಜನ್‌ಗಟ್ಟಲೆ ಜೆಟ್‌ಗಳು ಭೀಕರ ದಾಳಿ ನಡೆಸಿವೆ. ಈ ದಾಳಿಯಲ್ಲಿ ಇರಾನ್‌ನ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಮುಖ್ಯಸ್ಥ ಜನರಲ್ ಹೊಸೈನ್ ಸಲಾಮಿ (Hossein Salami) ಹತ್ಯೆಗೀಡಾಗಿದ್ದಾರೆ. ಇದರಿಂದಾಗಿ ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದೆ.

    ಆಪರೇಷನ್‌ ರೈಸಿಂಗ್‌ ಲಯನ್‌ (Rising Lion) ಕಾರ್ಯಾಚರಣೆಯಲ್ಲಿ ಇರಾನ್‌ನ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ (Israeli AirStrike) ನಡೆಸಿದ್ದು, ಟೆಹ್ರಾನ್‌ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ. ದಾಳಿಯಲ್ಲಿ ಇರಾನ್‌ನ ಕ್ಷಿಪಣಿ ಕಾರ್ಖಾನೆಗಳು, ಯುರೇನಿಯಂ ಸಂಗ್ರಹಣಾ ಕೇಂದ್ರಕ್ಕೂ ಹಾನಿಯಾಗಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಏನಿದು Unlucky Day – 13ನೇ ತಾರೀಖು, ಶುಕ್ರವಾರ ಒಟ್ಟಿಗೆ ಬಂದರೆ ಏನಾಗುತ್ತೆ?

    ಇತ್ತ ಇಸ್ರೇಲ್‌ ಕೂಡ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸುವುದನ್ನು ತಡೆಲು ಶುಕ್ರವಾರ ಇರಾನಿನ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. ಅಲ್ಲದೇ ಇರಾನ್‌ 15 ಪರಮಾಣು ಬಾಂಬ್‌ಗಳನ್ನು ತಯಾರಿಸಲು ಸಾಕಷ್ಟು ಸಾಮಗ್ರಿಗಳನ್ನ ಸಂಗ್ರಹ ಮಾಡಿಕೊಂಡಿತ್ತು. ಇದನ್ನು ಗುರಿಯಾಗಿಸಿ ಇಸ್ರೇಲ್‌ ದಾಳಿ ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್ 

    ಪ್ಯಾರಾಮಿಲಿಟರಿ ಮುಖ್ಯಸ್ಥ, ಪರಮಾಣು ವಿಜ್ಞಾನಿಗಳು ಸಾವು
    ಇನ್ನೂ ಇಸ್ರೇಲ್‌ ನಡೆಸಿದ ವಾಯುದಾಳಿಯಲ್ಲಿ ಇರಾನಿನ ಅರೆಸೇನಾ ಕ್ರಾಂತಿಕಾರಿ ಗಾರ್ಡ್ ಕಮಾಂಡರ್ ಹೊಸೇನ್ ಸಲಾಮಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳೂ ಹತರಾಗಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

    ಭಾರತೀಯರಿಗೆ ಎಚ್ಚರಿಕೆ…
    ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಇರಾನ್ ಹಾಗೂ ಇರಾಕ್‌ನಲ್ಲಿ ಇರುವ ತನ್ನ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆಯನ್ನು ನೀಡಿದೆ. ಇರಾನ್ ಹಾಗೂ ಇರಾಕ್‌ನಲ್ಲಿನ ಭಾರತೀಯ ರಾಯಭಾರ ಕಚೇರಿಯು ಈ ಸಂಬಂಧ ಪ್ರತ್ಯೇಕ ಪ್ರಕಟಣೆ ಹೊರಡಿಸಿದ್ದು, ಭಾರತೀಯ ಪ್ರಜೆಗಳು ಜಾಗರೂಕರಾಗಿ ಇರಬೇಕು. ಅನಗತ್ಯವಾಗಿ ಹೊರಗಡೆ ಹೋಗಬಾರದು. ಸದಾ ನಮ್ಮೊಂದಿಗೆ ಸಂಪರ್ಕದಲ್ಲಿರುವಂತೆಯೂ ತಿಳಿಸಿದೆ. ಇದನ್ನೂ ಓದಿ: ಕೈಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಭಾರತೀಯ ವಿದ್ಯಾರ್ಥಿ ಗಡೀಪಾರು

  • America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ  ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

    America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

    ವಾಷಿಂಗ್ಟನ್: ದುಷ್ಕರ್ಮಿಯೋರ್ವ ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಇಸ್ರೇಲ್ (Israel) ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ಘಟನೆ ಅಮೆರಿಕದ (America) ಕೊಲೊರಾಡೋದ (Colorado) ಬೌಲ್ಡರ್‌ನಲ್ಲಿ ನಡೆದಿದೆ.

    ಘಟನೆಯಲ್ಲಿ 6 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೊರಾಡೋದ ಬೌಲ್ಡರ್‌ನಲ್ಲಿ (Boulder) ಗಾಜಾದಲ್ಲಿನ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಚರ್ಚಿಸುವ ಸಲುವಾಗಿ ಇಸ್ರೇಲ್ ನಾಗರಿಕರು ಸಭೆ ಸೇರಿದ್ದರು. ಈ ವೇಳೆ ದುಷ್ಕರ್ಮಿ ಬಾಟಲ್‌ನಲ್ಲಿ ತುಂಬಿಸಿದ್ದ ಪೆಟ್ರೋಲ್ ಬಾಂಬ್‌ಗಳನ್ನು ನಾಗರಿಕರತ್ತ ಎಸೆದು ‘ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದಾನೆ. ಇದನ್ನೂ ಓದಿ: ಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಸಿಂಧನೂರು ಬಂದ್ – ರೈತರ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ

    ಜನರ ಮೇಲೆ ಫೈರ್ ಬಾಂಬ್ ಎಸೆದ ವ್ಯಕ್ತಿಯನ್ನು ಮೊಹಮ್ಮದ್ ಸಬ್ರಿ ಸೊಲಿಮಾ (45) ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸೊಲಿಮಾ ಅಮೆರಿಕದಲ್ಲಿ ಪ್ಯಾಲೆಸ್ತೀನ್ ಪರ ನಡೆಯುತ್ತಿದ್ದ ಹಲವು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

    ಈ ಘಟನೆಯನ್ನು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ‘ಉದ್ದೇಶಿತ ಭಯೋತ್ಪಾದಕ ಕೃತ್ಯ’ ಎಂದು ಕರೆದಿದ್ದಾರೆ. ಅಲ್ಲದೇ ದೇಶದಲ್ಲಿ ಹೆಚ್ಚುತ್ತಿರುವ ಯಹೂದಿ ವಿರೋಧಿ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್| ಐವರನ್ನು ಬಂಧಿಸಿದ್ದೇವೆ: ಪರಮೇಶ್ವರ್‌