Tag: ಇಸ್ರೇಲ್

  • ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯ ವಕ್ತಾರ ಕಲ್ಲಾಸ್‌

    ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯ ವಕ್ತಾರ ಕಲ್ಲಾಸ್‌

    ಬೈರೂತ್‌: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮತ್ತೆ ಯುದ್ಧದ ಕಾರ್ಮೋಡ ದಟ್ಟವಾಗಿ ಆವರಿಸಿದೆ. ಪ್ಯಾಲೆಸ್ತೀನ್‌ (Palestine) ವಿರುದ್ಧ ಸಮರ ಸಾರಿರುವ ಇಸ್ರೇಲ್ (Israel) ನೆರೆಯ ಲೆಬನಾನ್ (Lebanon) ಮೇಲೂ ದಾಳಿ ಮಾಡುತ್ತಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನದ ಮೇಲೆ ಗುಂಡಿನ ದಾಳಿ – ಕಿಡಿಗೇಡಿಗಳಿಗೆ ಶೋಧ

    ಎರಡು ದಿನಗಳ ಹಿಂದೆಯಷ್ಟೇ ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಬೈರೂತ್‌ ನಗರದ ಮೇಲೆ ಇಸ್ರೇಲ್‌ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಭಾನುವಾರ (ನ.17) ಸಿರಿಯನ್ ಬಾತ್ ಪಕ್ಷದ ಲೆಬನಾನ್‌ನ ಶಾಖೆಯನ್ನು ಗುರಿಯಾಗಿಸಿಕೊಂಡು ಮಧ್ಯ ಬೈರೂತ್‌ ನಗರದ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಹಿಜ್ಬುಲ್ಲಾದ ಮುಖ್ಯ ವಕ್ತಾರ (Hezbollah Spokesman)ಮೊಹಮ್ಮದ್ ಅಫೀಫ್‌ನನ್ನು ಹತ್ಯೆಗೈದಿದೆ ಎಂದು ಲೆಬನಾನಿನ ಭದ್ರತಾ ಪಡೆಯ ಮೂಲಗಳು ತಿಳಿಸಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

    ಎರಡು ದಿನಗಳ ಹಿಂದೆಯಷ್ಟೇ ಇಸ್ರೇಲ್‌ ಬೈರೂತ್‌ ಮೇಲೆ ವಾಯು ದಾಳಿ ನಡೆಸಿ 12 ಜನರನ್ನು ಹತ್ಯೆಗೈದಿತ್ತು. ಇದನ್ನೂ ಓದಿ: ಜಪಾನ್‌ನಿಂದ ಚೀನಾಗೆ ಶಿಫ್ಟ್ ಆಯ್ತು ಟ್ರಂಪ್ ‘ವಾಣಿಜ್ಯ ಯುದ್ಧ’ ಕಾರ್ಡ್ – ಭಾರತ ಮುಂದಿನ ಟಾರ್ಗೆಟ್?

    ಮತ್ತೆ ಉದ್ವಿಗ್ನಗೊಂಡಿದ್ದೇಕೆ?
    ಒಂದು ವಾರದ ಹಿಂದೆಯಷ್ಟೇ ಹಿಜ್ಬುಲ್ಲಾ ಉಗ್ರರ ಗುಂಪು ಇಸ್ರೇಲ್‌ನ ಇಸ್ರೇಲ್‌ನ ಹೈಫಾ ನಗರವನ್ನ (Haifa City) ಗುರಿಯಾಗಿಸಿಕೊಂಡು 150 ರಾಕೆಟ್‌ಗಳಿಂದ ದಾಳಿ ನಡೆಸಿತ್ತು. ಹಿಜ್ಬುಲ್ಲಾ ಕ್ಷಿಪಣಿ ದಾಳಿಗೆ ಇಸ್ರೇಲ್‌ನಲ್ಲಿ ಅನೇಕ ನಾಗರಿಕರು ಗಾಯಗೊಂಡಿದ್ದರು. ಇದರಿಂದ ಕೆರಳಿದ ಇಸ್ರೇಲ್‌ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿತ್ತು. ಇದನ್ನೂ ಓದಿ: ನ್ಯೂಜಿಲೆಂಡ್‌ ಸಂಸತ್‌ನಲ್ಲಿ ಹೈಡ್ರಾಮಾ – ಸಾಂಪ್ರದಾಯಿಕ ನೃತ್ಯ ಮಾಡಿ ವಿವಾದಿತ ಬಿಲ್‌ ಪ್ರತಿ ಹರಿದು ಹಾಕಿದ ಸಂಸದೆ

  • ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ – 12 ಬಲಿ

    ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ – 12 ಬಲಿ

    ಬೈರುತ್‌: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ. ಪ್ಯಾಲೆಸ್ತೀನ್‌ (Palestine) ವಿರುದ್ಧ ಸಮರ ಸಾರಿರುವ ಇಸ್ರೇಲ್ (Israel) ನೆರೆಯ ಲೆಬನಾನ್ (Lebanon) ಮೇಲೂ ದಾಳಿ ಮಾಡುತ್ತಿದೆ.

    ಹೆಜ್ಬುಲ್ಲಾ (Hezbollah) ಉಗ್ರರನ್ನು ಗುರಿಯಾಗಿಸಿ ಇಸ್ರೇಲ್ ಪಡೆಗಳು ಬೈರುತ್ ನಗರ ಮೇಲೆ ವೈಮಾನಿಕ ದಾಳಿ ನಡೆಸಿವೆ. ಇದಕ್ಕೂ ಮುನ್ನ ಹೆಜ್ಬುಲ್ಲಾ ಪಡೆ ಇಸ್ರೇಲ್ ಸೇನೆಯ ಪ್ರಧಾನ ಕಚೇರಿ ಮೇಲೆಯೇ ದಾಳಿ ನಡೆಸಿತ್ತು. ಇದನ್ನೂ ಓದಿ: 17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು

    ಟೆಲ್‌ ಅವೀವ್‌ನಲ್ಲಿರುವ ಇಸ್ರೇಲ್‌ ಸೇನೆಯ ಮುಖ್ಯ ಕಚೇರಿ ಮೇಲೆ ನಾವು ಕ್ಷಿಪಣಿ ಉಡಾವಣೆ ಮಾಡಿದ್ದೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿತ್ತು. ಈ ಹೇಳಿಕೆಯ ಬೆನ್ನಲ್ಲೇ ಇಸ್ರೇಲ್ ಬೈರುತ್ ಮೇಲೆ ದಾಳಿ ಮಾಡಿದೆ. ಬೈರುತ್‌ನ ಹೆಜ್ಬೊಲ್ಲಾ ಪ್ರಾಬಲ್ಯವಿರುವ ಪ್ರದೇಶಗಳಿಂದ ಸ್ಥಳಾಂತರಗೊಳ್ಳುವಂತೆ ನಿವಾಸಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಸ್ರೇಲ್ ಸೇನೆ ಪೂರ್ವ ಬಾಲ್ಟಿಕ್‌ ಪ್ರದೇಶದ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ.

    ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು ವ್ಯಾಪಕ ನಾಶ-ನಷ್ಟ ಸಂಭವಿಸಿದೆ. ದಾಳಿ ನಡೆದ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಮತ್ತು ಹೊಗೆಯ ಕಾರ್ಮೋಡ ಆಗಸಕ್ಕೆ ವ್ಯಾಪಿಸಿತ್ತು.

    ಇಸ್ರೇಲಿ ನಡೆಸಿದ ದಾಳಿಯಲ್ಲಿ ಕನಿಷ್ಠ 12 ಜನರು ಗುರುವಾರ ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ ತಿಳಿಸಿದೆ.

  • ಇಸ್ರೇಲ್‌ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!

    ಇಸ್ರೇಲ್‌ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!

    ಬೈರೂತ್‌: ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಇಸ್ರೇಲ್‌-ಹಿಜ್ಬುಲ್ಲಾ (Israel vs Hezbollah) ನಡುವೆ ಮತ್ತೆ ಯುದ್ಧದ ಕಿಡಿ ಹೊತ್ತಿಕೊಂಡಿದೆ. ಸೋಮವಾರ (ಇಂದು) ಹಿಜ್ಬುಲ್ಲಾ ಭಯೋತ್ಪಾದಕ ಗುಂಪು ಇಸ್ರೇಲ್‌ ಮೇಲೆ ಭೀಕರ ವಾಯು ದಾಳಿ ನಡೆಸಿದೆ. ಇಸ್ರೇಲ್‌ನ ಹೈಫಾ ನಗರವನ್ನ (Haifa City) ಗುರಿಯಾಗಿಸಿಕೊಂಡು 150 ರಾಕೆಟ್‌ಗಳಿಂದ ದಾಳಿ ನಡೆಸಿದೆ.

    ಹಿಜ್ಬುಲ್ಲಾ ಕ್ಷಿಪಣಿ ದಾಳಿಗೆ ಇಸ್ರೇಲ್‌ನಲ್ಲಿ ಅನೇಕ ನಾಗರಿಕರು ಗಾಯಗೊಂಡಿದ್ದಾರೆ. ಒಂದು ಮಗು ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಹಲವು ವಾಹನಗಳು, ಕಟ್ಟಡಗಳು ಹಾನಿಯಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೇ ಇದು ಇಸ್ರೇಲ್‌ ಮೇಲೆ ನಡೆದ ಅತಿದೊಡ್ಡ ರಾಕೆಟ್‌ ದಾಳಿಗಳಲ್ಲಿ ಒಂದೆಂದು ಹೇಳಲಾಗಿದೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಯುದ್ಧವನ್ನು ಉಲ್ಬಣಗೊಳಿಸಬೇಡಿ: ಪುಟಿನ್‌ಗೆ ಕರೆ ಮಾಡಿ ಮಾತಾಡಿದ ಟ್ರಂಪ್‌

    ಇಸ್ರೇಲ್‌ನ ರಕ್ಷಣಾ ವ್ಯವಸ್ಥೆ ʻಐರನ್ ಡೋಮ್ʼ ನಿಂದ ಹೆಜ್ಬೊಲ್ಲಾ ರಾಕೆಟ್‌ಗಳ ದಾಳಿಯನ್ನು ಯಶಸ್ವಿಯಾಗಿ ತಡೆಯಲಾಗಿದ್ದು, ಹೆಚ್ಚಿನ ಹಾನಿ ಆಗುವುದನ್ನು ತಪ್ಪಿಸಲಾಗಿದೆ. ಆದ್ರೆ ಹೈಫಾ ನಗರದಲ್ಲಿನ ಜನನಿಬಿಡ ಪ್ರದೇಶಗಳಲ್ಲಿ ಹಾನಿಯುಂಟುಮಾಡಿವೆ.

    ಇರಾನ್ (Iran) ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ (Israel) ಪ್ರತೀಕಾರವಾಗಿ ಕಳೆದ ಅಕ್ಟೋಬರ್‌ 25ರಂದು 100ಕ್ಕೂ ಹೆಚ್ಚು ಯುದ್ಧ ವಿಮಾನಗಳ (Air Strike) ಮೂಲಕ ಇರಾನ್‌ನ 20ಕ್ಕೂ ಹೆಚ್ಚು ಮಿಲಿಟರಿ ಸ್ಥಳಗಳಲ್ಲಿ ಇಸ್ರೇಲ್ ಏರ್‌ಸ್ಟ್ರೈಕ್‌ ನಡೆಸಿತ್ತು. ಆ ಬಳಿಕ ಪಾಶ್ಚಿಮಾತ್ಯ ದೇಶಗಳ ನಡುವೆ ಹೇಳಿಕೊಳ್ಳುವಂತಹ ದೊಡ್ಡಮಟ್ಟದಲ್ಲಿ ದಾಳಿಗಳು ನಡೆದಿರಲಿಲ್ಲ. ಇದೀಗ ಪೇಜರ್‌ ಸ್ಫೋಟದ ಹಿಂದೆ ಇಸ್ರೇಲ್‌ ಇರುವುದಾಗಿ‌ ಪ್ರಧಾನಿ ಒಪ್ಪಿಕೊಂಡ ಮರುದಿನ ದಾಳಿ ನಡೆಸಿದೆ.

    ಕಳೆದ ಒಂದು ದಿನದ ಹಿಂದೆಯಷ್ಟೇ ನಡೆದ ಪೇಜರ್‌ ಮತ್ತು ವಾಕಿಟಾಕಿ ಸ್ಫೋಟದ ಹಿಂದೆ ಟೆಲ್‌ ಅವೀವ್‌ (ಇಸ್ರೇಲ್‌ ರಾಜಧಾನಿ) ಇದೆ ಎಂದು ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದರು. ಇದರ ಬೆನ್ನಲ್ಲೇ ಹಿಜ್ಬುಲ್ಲಾ ಭಯೋತ್ಪಾದಕ ಗುಂಪು ದಾಳಿ ನಡೆಸಿದೆ. ಇದನ್ನೂ ಓದಿ: ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ಯುವಕರನ್ನ ಪ್ರಚೋದಿಸುತ್ತಿದ್ದ ಖಲಿಸ್ತಾನಿ ಉಗ್ರ ಕೆನಡಾದಲ್ಲಿ ಬಂಧನ

    ಕಳೆದ ಸೆಪ್ಟೆಂಬರ್‌ನಲ್ಲಿ ಲೆಬನಾನ್‌ನಾದ್ಯಂತ ಸುಮಾರು ಸಾವಿರಾರು ಪೇಜರ್‌ಗಳು ಸ್ಫೋಟಗೊಂಡಿದ್ದವು, ಇದರ ಮರುದಿನ ವಾಕಿಟಾಕಿಗಳೂ ಸ್ಫೋಟಗೊಂಡಿದ್ದವು. ಈ ಘಟನೆಯನ್ನು ಸುಮಾರು 39 ಮಂದಿ ಮೃತಪಟ್ಟು 3,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

  • ಇಸ್ರೆಲ್‌ ರಕ್ಷಣಾ ಸಚಿವನನ್ನೇ ವಜಾಗೊಳಿಸಿದ ಪ್ರಧಾನಿ ನೆತನ್ಯಾಹು

    ಇಸ್ರೆಲ್‌ ರಕ್ಷಣಾ ಸಚಿವನನ್ನೇ ವಜಾಗೊಳಿಸಿದ ಪ್ರಧಾನಿ ನೆತನ್ಯಾಹು

    ಟೆಲ್‌ ಅವಿವ್‌: ಗಾಜಾ ವಿರುದ್ಧದ ಯುದ್ಧದ ಹೊತ್ತಲ್ಲೇ ಇಸ್ರೇಲ್‌ನಲ್ಲಿ (Isreal) ಮಹತ್ವದ ಬೆಳವಣಿಗೆ ನಡೆದಿದೆ. ಗಾಜಾ ಯುದ್ಧದ ವಿಚಾರದಲ್ಲಿ ತಮ್ಮೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ರಕ್ಷಣಾ ಮಂತ್ರಿ ಯೋವ್ ಗಾಲೆಂಟ್‌ರನ್ನು (Yoav Gallant) ಪ್ರಧಾನಿ ನೆತನ್ಯಾಹು (Benjamin Netanyahu) ತಮ್ಮ ಸಂಪುಟದಿಂದ ರಾತ್ರೋರಾತ್ರಿ ಪದಚ್ಯುತಗೊಳಿಸಿದ್ದಾರೆ.

    ರಕ್ಷಣಾ ಮಂತ್ರಿಯನ್ನು ವಜಾಗೊಳಿಸಿದ ಬೆನ್ನಲ್ಲೇ ನೆತನ್ಯಾಹು ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಧ್ಯರಾತ್ರಿಯೇ ಟೆಲ್ ಅವೀವ್‌ನಲ್ಲಿ ದೊಡ್ಡಮಟ್ಟದ ಪ್ರತಿಭಟನೆ ನಡೆದಿದೆ.  ಇದನ್ನೂ ಓದಿ: ಅಮೆರಿಕ ಉಪಾಧ್ಯಕ್ಷನಾಗಿ ಜೆಡಿ ವ್ಯಾನ್ಸ್ ಆಯ್ಕೆ – ಆಂಧ್ರದ ವಡ್ಲೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನೆತನ್ಯಾಹು ವಿರೋಧಿ ಘೋಷಣೆಗಳು ಮುಗಿಲುಮುಟ್ಟಿದ್ದು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆ ಸಂಬಂಧ ನೆತನ್ಯಾಹು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎನ್ನುವುದು ಪ್ರತಿಭಟನಾಕಾರರ ಪ್ರಮುಖ ಆರೋಪವಾಗಿದೆ.

    ಕಳೆದ ವರ್ಷವೇ ಯೋವ್ ಗಾಲೆಂಟ್ ತಲೆದಂಡಕ್ಕೆ ನೆತನ್ಯಾಹು ಯತ್ನಿಸಿದ್ದರು. ಆಗಲೂ ಭಾರೀ ವಿರೋಧ ವ್ಯಕ್ತವಾಗಿತ್ತು. ಯುದ್ಧದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮತ್ತು ರಕ್ಷಣಾ ಸಚಿವರ ನಡುವೆ ಸಂಪೂರ್ಣ ನಂಬಿಕೆಯ ಅಗತ್ಯವಿದೆ ಎಂದು ನೆತನ್ಯಾಹು ಹೇಳಿದ್ದಾರೆ.

    ಅಕ್ಟೋಬರ್ 7, 2023 ರಂದು ಹಮಾಸ್ ಉಗ್ರರು ಇಸ್ರೇಲ್‌ ಮೇಲೆ ದಾಳಿ ನಡೆಸಿ 251 ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದು ಈ ಪೈಕಿ 100 ಮಂದಿ ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲಿಯವರೆಗೆ ಲಭ್ಯವಾಗಿಲ್ಲ.

     

  • ಇಸ್ರೇಲ್‌ ಮೇಲೆ ದಾಳಿ ಬೆದರಿಕೆ – ಇರಾನ್ ಸರ್ವೋಚ್ಚ ನಾಯಕನ ಎಕ್ಸ್‌ ಖಾತೆ ಅಮಾನತು

    ಇಸ್ರೇಲ್‌ ಮೇಲೆ ದಾಳಿ ಬೆದರಿಕೆ – ಇರಾನ್ ಸರ್ವೋಚ್ಚ ನಾಯಕನ ಎಕ್ಸ್‌ ಖಾತೆ ಅಮಾನತು

    ಟೆಹ್ರಾನ್: ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಇರಾನ್‌ನ (Iran) ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಎಕ್ಸ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ.

    ಇತ್ತೀಚೆಗೆ ಇರಾನ್ ಮೇಲೆ ಇಸ್ರೇಲ್ (Israel) ನಡೆಸಿದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಪೋಸ್ಟ್‌ನಲ್ಲಿ ಇಸ್ರೇಲ್‌ ತಪ್ಪು ಮಾಡಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ರಾಷ್ಟ್ರವು ಯಾವ ರೀತಿಯ ಶಕ್ತಿ, ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್‌ಗೆ ಅರ್ಥ ಮಾಡಿಸುತ್ತೇವೆ ಎಂದು ಅವರು ಬರೆದುಕೊಂಡಿದ್ದರು. ಇದನ್ನೂ ಓದಿ: ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಭಾರತ-ಚೀನಾ ಹ್ಯಾಂಡ್‌ಶೇಕ್; ಫಲ ನೀಡುತ್ತಾ ಒಪ್ಪಂದ?

    ಶನಿವಾರ ಇರಾನ್‌ನಲ್ಲಿ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್‌ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿರುವುದಾಗಿ ವರದಿಯಾಗಿದೆ.

    ಇಸ್ರೇಲ್ ಶನಿವಾರ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟುಕೊಂಡು ವೈಮಾನಿಕ ದಾಳಿ ನಡೆಸಿತ್ತು. ಇದರ ಪರಿಣಾಮವಾಗಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್‌ನ ಮೇಲೆ ಇರಾನ್‌ ಇತ್ತೀಚಿಗೆ ನಡೆಸಿದ್ದ ರಾಕೆಟ್‌ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್‌ ಸುಪ್ರೀಂ ಲೀಡರ್‌

  • ಎಡಪಂಥೀಯರ ವಿಕಿಪೀಡಿಯಗೆ ದೇಣಿಗೆ ನೀಡಬೇಡಿ: ಮಸ್ಕ್ ಕರೆ

    ಎಡಪಂಥೀಯರ ವಿಕಿಪೀಡಿಯಗೆ ದೇಣಿಗೆ ನೀಡಬೇಡಿ: ಮಸ್ಕ್ ಕರೆ

    ವಾಷಿಂಗ್ಟನ್: ವಿಶ್ವಕೋಶ ಎಂದೇ ಬಿಂಬಿತವಾಗಿರುವ ವಿಕಿಪೀಡಿಯನ್ನು (Wikipedia) ಎಡಪಂಥೀಯರು ನಿಯಂತ್ರಿಸುತ್ತಿದ್ದು ದೇಣಿಗೆ ನೀಡಬೇಡಿ ಎಂದು ಟೆಸ್ಲಾ, ವಿಶ್ವದ ನಂಬರ್‌ ಶ್ರೀಮಂತ ಉದ್ಯಮಿ ಮುಖ್ಯಸ್ಥ ಎಲಾನ್‌ ಮಸ್ಕ್‌ (Elon Musk) ಬಹಿರಂಗ ಕರೆ ನೀಡಿದ್ದಾರೆ.

    ʼPiratewiresʼ ನಲ್ಲಿ ಪ್ರಕಟವಾದ ತನಿಖಾ ವರದಿಯನ್ನು ಪೋಸ್ಟ್‌ ಮಾಡಿ ವಿಕಿಪೀಡಿಯಗೆ ದೇಣಿಗೆ ಕೊಡಬೇಡಿ ಎಂದು ಹೇಳಿದ್ದಾರೆ.  ಇಸ್ರೇಲ್‌ (Israel) ಮತ್ತು ಹಮಾಸ್‌ (Hamas) ಉಗ್ರರ ನಡುವಿನ ಯುದ್ಧವನ್ನು ಯಾವ ರೀತಿ ತೋರಿಸಲಾಗಿದೆ ಎಂಬ ಸುದ್ದಿಯನ್ನು ಶೇರ್‌ ಮಾಡಿ ಮಸ್ಕ್‌ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

     


    ವರದಿಯಲ್ಲಿ ಏನಿದೆ?
    ವಿಕಿಪೀಡಿಯದ 40 ಸೂಪರ್‌ ಸಂಪಾದಕರು ಇಸ್ರೇಲ್‌ ವಿರುದ್ಧ ಮತ್ತು ಹಮಾಸ್‌ ಪರವಾಗಿ ಬರಹಗಳನ್ನು ಪ್ರಕಟಿಸುತ್ತಿದ್ದಾರೆ. ಇಸ್ರೇಲ್ -ಪ್ಯಾಲೆಸ್ತೀನ್ ಸಂಘರ್ಷದ ಕುರಿತಾದ ವ್ಯಾಖ್ಯಾನವನ್ನು ಬದಲಿಸುತ್ತಿದ್ದಾರೆ. ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಅನುಕೂಲಕರವಾಗುವಂತೆ ಎಡಿಟ್‌ ಮಾಡಲಾಗುತ್ತಿದೆ.

    ಇಸ್ಲಾಮಿಕ್ ರಿಪಬ್ಲಿಕ್ ಪಾರ್ಟಿ ಅಧಿಕಾರಿಗಳು ಮಾಡಿರುವ ಮಾನವ ಹಕ್ಕುಗಳ ಅಪರಾಧಗಳನ್ನು ಅಳಿಸಿ ಹಾಕಲಾಗಿದೆ. ಹಲವಾರು ಲೇಖನಗಳಲ್ಲಿ ಇರಾನ್ ಸರ್ಕಾರದ ಹಿತಾಸಕ್ತಿಗಳನ್ನು ಉತ್ತೇಜಿಸಲು ಗುಂಪು ಪ್ರಯತ್ನಿಸುತ್ತಿದೆ ಎಂದು Piratewires ದಾಖಲೆಗಳೊಂದಿಗೆ ವರದಿ ಪ್ರಕಟಿಸಿತ್ತು. ಇದನ್ನೂ ಓದಿ: ನಿಮಗೆ ಇಷ್ಟವಾಗದೇ ಇದ್ರೆ ಭಾರತದಲ್ಲಿ ಕೆಲಸ ಮಾಡಬೇಡಿ – ವಿಕಿಪೀಡಿಯಗೆ ಹೈಕೋರ್ಟ್‌ ಎಚ್ಚರಿಕೆ

    ಭಾರತದಲ್ಲೂ ಟೀಕೆ:
    ವಿಕಿಪೀಡಿಯಾ ಬಗ್ಗೆ ಭಾರತದಲ್ಲೂ ಆಕ್ಷೇಪ ವ್ಯಕ್ತವಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ (ANI) ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌ ವಿಕಿಪೀಡಿಯಗೆ ನ್ಯಾಯಾಂಗ ನಿಂದನೆ ನೋಟಿಸ್ (Contempt of Court) ಜಾರಿ ಮಾಡಿದೆ. ಅಷ್ಟೇ ಅಲ್ಲದೇ ಎಎನ್‌ಐಗೆ ಸಂಬಂಧಿಸಿದ ಪೇಜ್‌ ಎಡಿಟ್‌ ಮಾಡದಂತೆ ಸೂಚಿಸಿದೆ.

    ತನ್ನನ್ನು ಭಾರತ ಸರ್ಕಾರದ ಪ್ರಚಾರ ಸಾಧನ (The Propaganda Tool) ಎಂದು ಉಲ್ಲೇಖಿಸಿದ್ದನ್ನು ಪ್ರಶ್ನಿಸಿ ಎಎನ್‌ಐ ಕೋರ್ಟ್‌ ಮೊರೆ ಹೋಗಿ ವಿಕೀಪಿಡಿಯಾ ವಿರುದ್ಧ 2 ಕೋಟಿ ರೂ. ಮಾನನಷ್ಟ ಕೇಸ್‌ ಹೂಡಿದೆ. ಅ.25ರ ಅರ್ಜಿ ವಿಚಾರಣೆ ವೇಳೆ, ಯಾರು ಬೇಕಾದರೂ ಪೇಜ್‌ ತಿದ್ದಬಹುದೇ? ಎಲ್ಲರಿಗೂ ಎಡಿಟಿಂಗ್‌ ಮಾಡಲು ಅವಕಾಶ ನೀಡುವುದಾದರೆ ಅದು ಯಾವ ರೀತಿಯ ಪೇಜ್‌? ಮುಕ್ತ ಎಡಿಟಿಂಗ್‌ ಆಯ್ಕೆ ಅಪಾಯಕಾರಿ ಎಂದು ವಿಕೀಪಿಡಿಯಾವನ್ನು ತರಾಟೆಗೆ ತೆಗೆದುಕೊಂಡಿತ್ತು.

    ತನ್ನ ಪೇಜ್‌ ಅನ್ನು ಎಡಿಟ್‌ ಮಾಡಿದ ಮೂವರ ಹೆಸರನ್ನು ಬಹಿರಂಗ ಪಡಿಸುವಂತೆ ವಿಕಿಪೀಡಿಯಾಗೆ ಸೂಚಿಸಿತ್ತು. ತನ್ನ ನೋಟಿಸ್‌ಗೆ ವಿಕಿಪೀಡಿಯಾ ಉತ್ತರ ನೀಡದ್ದಕ್ಕೆ ಈಗ ಎಎನ್‌ಐ ಕೋರ್ಟ್‌ ಮೊರೆ ಹೋಗಿದೆ.

    2001 ರಲ್ಲಿ ಜಿಮ್ಮಿ ವೇಲ್ಸ್ ಮತ್ತು ಲ್ಯಾರಿ ಸ್ಯಾಂಗರ್ ಅವರು ವಿಕಿಪೀಡಿಯವನ್ನುಸ್ಥಾಪಿಸಿದ್ದಾರೆ. ವಿಕಿಮೀಡಿಯಾ ಫೌಂಡೇಶನ್‌ನಿಂದ ಇದು ನಡೆಯುತ್ತಿದ್ದು ಅಮೆರಿಕ ಮತ್ತು ಫ್ರಾನ್ಸಿನಲ್ಲಿ ನೆಲೆಗೊಂಡಿದೆ. ವಿಶ್ವಾದ್ಯಂತ ಲಕ್ಷಕ್ಕೂ ಅಧಿಕ ಸ್ವಯಂಸೇವಕರು ವಿಕಿಪೀಡಿಯ ಪುಟದಲ್ಲಿ ಮಾಹಿತಿಯನ್ನು ಅಪ್‌ಡೇಟ್‌ ಮಾಡುತ್ತಿರುತ್ತಾರೆ.

     

  • ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

    ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

    ಬೈರೂತ್‌: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗುತ್ತಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ನಿವಾಸದ ಮೇಲೆ ಹಮಾಸ್‌ ಡ್ರೋನ್‌ ದಾಳಿ ನಡೆಸಿದ ಬಳಿಕ ಇಸ್ರೇಲ್‌ ತನ್ನ ದಾಳಿಯ ತೀವ್ರತೆಯನ್ನು ಹೆಚ್ಚು ಮಾಡಿದೆ. ಮಂಗಳವಾರವೂ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ (Israeli Airstrike) ಬೈರೂತ್‌ನ ಬೃಹತ್‌ ಕಟ್ಟಡಗಳು ಸೆಕೆಂಡುಗಳಲ್ಲಿ ನೆಲೆ ಕಚ್ಚಿವೆ.

    ಇಸ್ರೇಲಿ ಮಿಲಿಟರಿ ವಕ್ತಾರ ಅವಿಚಾಯ್‌ ಅಡ್ರೇ ಅವರು ಎಚ್ಚರಿಕೆ ನೀಡಿದ 40 ನಿಮಿಷಗಳ ಬಳಿಕ ದಾಳಿ ಸಂಭವಿಸಿದೆ. ದಾಳಿಗೆ ಒಳಗಾದ ಎರಡು ಬೃಹತ್‌ ಕಟ್ಟಡಗಳಲ್ಲಿ ಹಿಜ್ಬುಲ್ಲಾ ಸೌಲಭ್ಯಗಳನ್ನು ಅಡಗಿಸಿಡಲಾಗಿತ್ತು. ಅಲ್ಲದೇ ಲೆಬನಾನ್‌ನಿಂದ (Lebanon) ಸ್ಥಳಾಂತರಗೊಂಡಿದ್ದ ಕುಟುಂಬಗಳೂ ಆಶ್ರಯ ಪಡೆದಿದ್ದವು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ: ಯುದ್ಧ ಕುರಿತು ಪುಟಿನ್‌ ಜೊತೆ ಮೋದಿ ಮಾತು

    ಇಸ್ರೇಲ್‌ ವಾಯುದಾಳಿಯ 32 ಸೆಕೆಂಡುಗಳ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಉದ್ಯಾನ ಪಕ್ಕದಲ್ಲೇ ನಿರ್ಮಾಣಗೊಂಡಿದ್ದ ದೈತ್ಯ ಕಟ್ಟಡ ಮಿಸೈಲ್‌ ಬೀಳುತ್ತಿದ್ದಂತೆ ಕೇವಲ 3 ಸೆಕೆಂಡುಗಳಲ್ಲೇ ಧ್ವಂಸವಾಗಿದೆ. ಸಮೀಪದಲ್ಲೇ ಇದ್ದ ಸ್ಥಳೀಯರು ದಾಳಿ ಕಂಡು ಕಕ್ಕಾಬಿಕ್ಕಿಯಾಗಿರುವುದು ವೀಡಿಯೋದಲ್ಲಿ ತೋರಿಸಿದೆ. ಸದ್ಯ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

    ಹಿಜ್ಬುಲ್ಲಾ ಟಾಪ್‌ ಲೀಡರ್‌ ಸುದ್ದಿಗೋಷ್ಠಿ ದಿಢೀರ್‌ ರದ್ದು:
    ಇನ್ನೂ ಇಸ್ರೇಲ್‌ ದಾಳಿ ಸಮಯದಲ್ಲಿ ಉದ್ದೇಶಿತ ಪ್ರದೇಶದಿಂದ ನೂರು ಮೀಟರ್‌ಗಳಷ್ಟು ದೂರದಲ್ಲಿ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನು ಹಿಜ್ಬುಲ್ಲಾದ ಟಾಪ್‌ ಲೀಡರ್‌ ದಿಢೀರ್‌ ರದ್ದುಗೊಳಿಸಿದ್ದಾರೆ. ಇದನ್ನೂ ಓದಿ: ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

    ಇನ್ನೂ ಜೆರುಸಲೆಮ್‌ನ ಮಾನವ ಹಕ್ಕುಗಳ ಗುಂಪಾದ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಅಲ್-ಕರ್ದ್ ಅಲ್-ಹಸನ್, ಇಸ್ರೇಲ್‌ ವಾಯುದಾಳಿಯನ್ನು ಖಂಡಿಸಿದೆ. ಹಿಜ್ಬುಲ್ಲಾದ ಸಂಯೋಜಿತ ಹಣಕಾಸು ಶಾಖೆಗಳನ್ನ ಇಸ್ರೇಲ್‌ ಗುರಿಯಾಗಿಸಿದೆ. ಇದು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ.

    ಒಂದು ದಿನದ ಹಿಂದೆಯಷ್ಟೇ ಇಸ್ರೇಲ್‌ ನಡೆಸಿದ ಲೆಬನಾನ್‌ನ ಬೈರೂತ್‌ನಲ್ಲಿ ದಾಳಿ ನಡೆಸಿತ್ತು. ಲೆಬನಾನ್‌ ರಾಜಧಾನಿ ಬೈರೂತ್‌ನ ಅಲ್‌ ಸಹೇಲ್‌ ಆಸ್ಪತ್ರೆಯ ಕೆಳಗೆ ಹಿಜ್ಬುಲ್ಲಾ ಉಗ್ರರು ಸಂಗ್ರಹಿಸಿಟ್ಟಿದ್ದ 4,200 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನದ ಸಂಗ್ರಹ ಪತ್ತೆ ಮಾಡಿತ್ತು ಇಸ್ರೇಲ್‌. ಇದನ್ನೂ ಓದಿ: ಶಾಂತಿ ಮಾತುಕತೆ ಯಶಸ್ವಿ – 5 ವರ್ಷದ ಬಳಿಕ ನಡೆಯಲಿದೆ ಮೋದಿ-ಜಿನ್‌ಪಿಂಗ್‌ ದ್ವಿಪಕ್ಷೀಯ ಸಭೆ

  • ಹಮಾಸ್‌ ಈ ಕೆಲಸ ಮಾಡಿದ್ರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ – ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

    ಹಮಾಸ್‌ ಈ ಕೆಲಸ ಮಾಡಿದ್ರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ – ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

    ಟೆಲ್‌ ಅವಿವ್‌: ಹಮಾಸ್‌ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಇಚ್ಚಿಸಿದ್ರೆ ಹಾಗೂ ಒತ್ತೆಯಾಳುಗಳನ್ನ ಬಿಡುಗಡೆ ಮಾಡಲು ಒಪ್ಪಿದರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಹೇಳಿದ್ದಾರೆ.

    2023ರ ಅಕ್ಟೋಬರ್ 7 ರಂದು ಇಸ್ರೇಲ್‌ (Isreal) ಮೇಲೆ ನಡೆಸಿದ ದಾಳಿಯ ಮಾಸ್ಟರ್ ಮೈಂಡ್ ಹಮಾಸ್ ಉಗ್ರ ಸಂಘಟನೆಯ ನಾಯಕ (Hamas Leader) ಯಾಹ್ಯಾ ಸಿನ್ವಾರ್ (Yahya Sinwar) ಇಸ್ರೇಲ್‌ ನಡೆಸಿದ ದಾಳಿಗೆ ಬಲಿಯಾಗಿದ್ದಾನೆ. ಇದಾದ ಕೆಲ ಗಂಟೆಗಳ ನಂತರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗಾಜಾದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಮಾಸ್‌ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಇಚ್ಚಿಸಿದ್ರೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಿದರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.

    ಈ ಕುರಿತು ತನ್ನ ಎಕ್ಸ್‌ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ನೆತನ್ಯಾಹು, ಯಾಹ್ಯಾ ಸತ್ತಿದ್ದಾನೆ. ಇಸ್ರೇಲ್‌ನ ಕೆಚ್ಚೆದೆಯ ಸೈನಿಕರ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾನೆ. ಆದ್ರೆ ಇದು ಜಾದಲ್ಲಿನ ಯುದ್ಧದ ಅಂತ್ಯವಲ್ಲ, ಆರಂಭ ಎಂದು ಎಚ್ಚರಿಸಿದ್ದಾರೆ. ಮುಂದುವರಿದು, ಗಾಜಾದ ಜನರೇ ನನ್ನ ಬಳಿ ಒಂದು ಸರಳವಾದ ಸಂದೇಶವಿದೆ. ಹಮಾಸ್‌ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ನಮ್ಮ ಒತ್ತೆಯಾಳುಗಳನ್ನು ಹಿಂದಿರುಗಿಸಿದರೆ, ಈ ಯುದ್ಧ ನಾಳೆಯೇ ಕೊನೆಗೊಳ್ಳಬಹುದು ಎಂದು ಹೇಳಿದ್ದಾರೆ.

    ಜೊತೆಗೆ ಹಮಾಸ್‌ ಪ್ರಸ್ತುತ ಗಾಜಾದಲ್ಲಿ 101 ಒತ್ತೆಯಾಳುಗಳನ್ನು ಇರಿಸಿಕೊಂಡಿದೆ. ಇದರಲ್ಲಿ ಇಸ್ರೇಲ್‌ ಸೇರಿದಂತೆ ವಿವಿಧ ವಿವಿಧ ದೇಶಗಳ 23 ನಾಗರಿಕರು ಇದ್ದಾರೆ ಎಂದು ನೆತನ್ಯಾಹು ಬಹಿರಂಗಪಡಿಸಿದ್ದಾರೆ.

    ಬೇಟೆಯಾಡದೇ ಬಿಡುವುದಿಲ್ಲ:
    ಇಸ್ರೇಲ್‌ ತನ್ನ ದೇಶದ ನಾಗರಿಕರನ್ನು ಮಾತ್ರವಲ್ಲ, ಒತ್ತೆಯಾಳಾಗಿರುವ ಇತರ ದೇಶಗಳ ನಾಗರಿಕರನ್ನು ರಕ್ಷಿಸಿ ತಮ್ಮ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡುತ್ತಿದೆ. ಅದಕ್ಕೆ ಬದ್ಧವಾಗಿಯೂ ನಡೆದುಕೊಳ್ಳುತ್ತಿದೆ. ನಮ್ಮ ಒತ್ತೆಯಾಳುಗಳನ್ನು ಹಿಂದಿರುಗಿಸಿದ್ರೆ, ಅವರನ್ನ ಏನೂ ಮಾಡುವುದಿಲ್ಲ. ಒಂದು ವೇಳೆ ಅವರಿಗೆ ತೊಂದರೆ ಮಾಡಿದ್ರೆ, ಬೇಟೆಯಾಡದೇ ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ಬೆಂಜಮಿನ್‌ ನೆತನ್ಯಾಹು ನೀಡಿದ್ದಾರೆ.

    ಮೊದಲು ನಸ್ರಲ್ಲಾ ಹೋದ, ಆಮೇಲೆ ಹಿಜ್ಬುಲ್ಲಾ ವೋಹ್ಸೆನ್‌, ಹನಿಯೆ, ಡೀಫ್‌, ಸಿನ್ವಾರ್‌ ಸೇರಿ ಅನೇಕ ಟಾಪ್‌ ಲೀಡರ್‌ಗಳು ಹೋದರು. ಮುಂದೆ ಇರಾಕ್‌, ಸಿರಿಯಾ, ಲೆಬನಾನ್‌, ಯೆಮನ್‌ ದೇಶಗಳ ಭಯೋತ್ಪಾದನಾ ಆಳ್ವಿಕೆಯೂ ಕೊನೆಗೊಳ್ಳುತ್ತದೆ. ಆದ್ದರಿಂದ ಮಧ್ಯಪ್ರಾಚ್ಯದಲ್ಲಿ ಶಾಂತಿ, ಸಮೃದ್ಧಿ, ಉತ್ತಮ ಭವಿಷ್ಯ ಬಯಸುವ ಎಲ್ಲರೂ ಒಂದಾಗಬೇಕು. ಆಗ ಕತ್ತಲನ್ನು ದೂಡಿ ಬೆಳಕು ತರಬಹುದು ಎಂದು ಕಿವಿಮಾತು ಹೇಳಿದ್ದಾರೆ.

  • ಹಮಾಸ್ ಮುಖ್ಯಸ್ಥನ ಕೊನೆ ಕ್ಷಣಗಳ ಡ್ರೋನ್ ದೃಶ್ಯ ಬಿಡುಗಡೆ ಮಾಡಿದ ಇಸ್ರೇಲ್

    ಹಮಾಸ್ ಮುಖ್ಯಸ್ಥನ ಕೊನೆ ಕ್ಷಣಗಳ ಡ್ರೋನ್ ದೃಶ್ಯ ಬಿಡುಗಡೆ ಮಾಡಿದ ಇಸ್ರೇಲ್

    ಜೆರುಸಲೇಂ: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ನ (Yahya Sinwar) ‘ಕೊನೆಯ ಕ್ಷಣಗಳು’ ಎಂದು ಹೇಳಿದ ಡ್ರೋನ್ ದೃಶ್ಯಗಳನ್ನು ಇಸ್ರೇಲ್ ರಕ್ಷಣಾ ಪಡೆಗಳು ಬಿಡುಗಡೆ ಮಾಡಿದೆ.

    ಹಾನಿಗೊಳಗಾದ ಮತ್ತು ಶಿಥಿಲಗೊಂಡ ಮನೆಯೊಳಗೆ ಸಿನ್ವಾರ್ ಮಂಚದ ಮೇಲೆ ಕುಳಿತಿರುವುದನ್ನು ವೀಡಿಯೋ ತೋರಿಸಿದೆ. ಆತನ ಅಂತಿಮ ಕ್ಷಣಗಳಲ್ಲಿ, ಡ್ರೋನ್‌ಗೆ ವಸ್ತುವನ್ನು ಎಸೆಯುವುದನ್ನು ವೀಡಿಯೋದಲ್ಲಿ ಕಾಣಬಹುದು.‌ ಇದನ್ನೂ ಓದಿ: ಇಸ್ರೇಲ್‌, ಜಗತ್ತಿಗೆ ಇದು ಒಳ್ಳೆಯ ದಿನ: ಹಮಾಸ್‌ ಮುಖ್ಯಸ್ಥನ ಹತ್ಯೆಗೆ ಅಮೆರಿಕ ಸಂತಸ

    ಇಸ್ರೇಲ್ (Israel) ಗುರುವಾರ ಗಾಜಾ ಕಾರ್ಯಾಚರಣೆಯಲ್ಲಿ 62 ವಯಸ್ಸಿನ ಸಿನ್ವಾರ್‌ನನ್ನು ಹತ್ಯೆ ಮಾಡಿತು. ‘ಎಲಿಮಿನೇಟೆಡ್: ಯಾಹ್ಯಾ ಸಿನ್ವಾರ್’ ಎಂದು ಐಡಿಎಫ್‌ (ಇಸ್ರೇಲಿ ಮಿಲಿಟರಿ) ಸೋಷಿಯಲ್‌ ಮೀಡಿಯಾ ಪೋಸ್ಟ್‌ ಹಾಕಿದೆ.

    ಅಕ್ಟೋಬರ್ 7 ರ ಹತ್ಯಾಕಾಂಡ ಮತ್ತು ದುಷ್ಕೃತ್ಯಗಳಿಗೆ ಕಾರಣವಾದ ಕೊಲೆಗಾರ ಯಾಹ್ಯಾ ಸಿನ್ವಾರ್ ಅನ್ನು ಐಡಿಎಫ್ (ಇಸ್ರೇಲಿ ಮಿಲಿಟರಿ) ಸೈನಿಕರು ನಿರ್ಮೂಲನೆ ಮಾಡಿದರು ಎಂದು ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಮಾಸ್​​ ಮುಖ್ಯಸ್ಥ ​ಹತ್ಯೆ – ನಮ್ಮ ಮಿಲಿಟರಿಗೆ ಸಿಕ್ಕಿದ ಜಯ ಎಂದ ಇಸ್ರೇಲ್‌

    ಹತ್ಯೆಯಾದ ಸಿನ್ವಾರ್ ಅ.7 ರ ದಾಳಿಯ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ. ಇದು ಇಸ್ರೇಲಿ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ ಎನ್ನಲಾಗಿದೆ. ದಾಳಿಯು 1,206 ಜನರ ಸಾವಿಗೆ ಕಾರಣವಾಯಿತು.

  • ಇಸ್ರೇಲ್‌, ಜಗತ್ತಿಗೆ ಇದು ಒಳ್ಳೆಯ ದಿನ: ಹಮಾಸ್‌ ಮುಖ್ಯಸ್ಥನ ಹತ್ಯೆಗೆ ಅಮೆರಿಕ ಸಂತಸ

    ಇಸ್ರೇಲ್‌, ಜಗತ್ತಿಗೆ ಇದು ಒಳ್ಳೆಯ ದಿನ: ಹಮಾಸ್‌ ಮುಖ್ಯಸ್ಥನ ಹತ್ಯೆಗೆ ಅಮೆರಿಕ ಸಂತಸ

    ವಾಷಿಂಗ್ಟನ್: ಕಳೆದ ವರ್ಷ ಅಕ್ಟೋಬರ್ 7 ರ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಗೆ ಅಮೆರಿಕ ಸಂತಸ ವ್ಯಕ್ತಪಡಿಸಿದೆ. ‘ಇದು ಇಸ್ರೇಲ್‌ ಮತ್ತು ಜಗತ್ತಿಗೆ ಒಳ್ಳೆಯ ದಿನ’ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Biden) ಪ್ರತಿಕ್ರಿಯಿಸಿದ್ದಾರೆ.

    ಹಮಾಸ್ ನಾಯಕರನ್ನು ಬೆನ್ನಟ್ಟಲು ಅಮೆರಿಕದ ಗುಪ್ತಚರವು ಇಸ್ರೇಲ್ ರಕ್ಷಣಾ ಪಡೆಗಳಿಗೆ ಸಹಾಯ ಮಾಡಿದೆ ಎಂದು ಅಧ್ಯಕ್ಷ ಬೈಡೆನ್ ಉಲ್ಲೇಖಿಸಿದ್ದಾರೆ. ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಇಸ್ರೇಲ್‌ಗೆ ಎಲ್ಲ ಹಕ್ಕು ಇದೆ ಎಂದು ಅವರು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಹಮಾಸ್​​ ಮುಖ್ಯಸ್ಥ ​ಹತ್ಯೆ – ನಮ್ಮ ಮಿಲಿಟರಿಗೆ ಸಿಕ್ಕಿದ ಜಯ ಎಂದ ಇಸ್ರೇಲ್‌

    ಕಳೆದ ವರ್ಷ ಅಕ್ಟೋಬರ್ 7 ರಂದು ಇಸ್ರೇಲ್ ಮೇಲಿನ ಹಮಾಸ್ ದಾಳಿಯ ಮಾಸ್ಟರ್‌ಮೈಂಡ್‌ನ ಹತ್ಯೆಯು, ಜಗತ್ತಿನಲ್ಲಿ ಎಲ್ಲಿಯೂ ಯಾವುದೇ ಭಯೋತ್ಪಾದಕರು ಎಷ್ಟು ಸಮಯ ತೆಗೆದುಕೊಂಡರೂ ನ್ಯಾಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಯುಎಸ್ ಅಧ್ಯಕ್ಷ ತಿಳಿಸಿದ್ದಾರೆ.

    ನನ್ನ ಇಸ್ರೇಲಿ ಸ್ನೇಹಿತರಿಗೆ, ಇದು ನಿಸ್ಸಂದೇಹವಾಗಿ ಪರಿಹಾರ ಮತ್ತು ನೆನಪಿನ ದಿನವಾಗಿದೆ. 2011 ರಲ್ಲಿ ಒಸಾಮಾ ಬಿನ್ ಲಾಡೆನ್ ಅನ್ನು ಕೊಲ್ಲಲು ಅಧ್ಯಕ್ಷ ಒಬಾಮಾ ಅವರು ದಾಳಿಗೆ ಆದೇಶಿಸಿದ ನಂತರ ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ಸಾಕ್ಷಿಯಾದ ದೃಶ್ಯಗಳಂತೆಯೇ ಇದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿರುವ ಶೇಖ್ ಹಸೀನಾ ವಿರುದ್ಧ ಅರೆಸ್ಟ್‌ ವಾರೆಂಟ್‌ ಜಾರಿ

    ಕಳೆದ ವರ್ಷ ಅಕ್ಟೋಬರ್ 7 ರಂದು ಇಸ್ರೇಲ್‌ (Isreal) ಮೇಲೆ ನಡೆಸಿದ ದಾಳಿಯ ಮಾಸ್ಟರ್ ಮೈಂಡ್ ಹಮಾಸ್ ಉಗ್ರ ಸಂಘಟನೆಯ ನಾಯಕ (Hamas Leader) ಯಾಹ್ಯಾ ಸಿನ್ವಾರ್ (Yahya Sinwar) ಇಸ್ರೇಲ್‌ ನಡೆಸಿದ ದಾಳಿಗೆ ಬಲಿಯಾಗಿದ್ದಾನೆ.