Tag: ಇಸ್ಲಮಾಬಾದ್

  • ಸ್ವಾತಂತ್ರ್ಯ ದಿನದ ಮುನ್ನಾ ದಿನವೇ ಪಾಕ್‍ನಲ್ಲಿ ಚೀನಾ ಇಂಜಿನಿಯರ್‌ಗಳ ಮೇಲೆ ಉಗ್ರರ ದಾಳಿ – ಸೈನಿಕರು ಸೇರಿ 13 ಸಾವು

    ಸ್ವಾತಂತ್ರ್ಯ ದಿನದ ಮುನ್ನಾ ದಿನವೇ ಪಾಕ್‍ನಲ್ಲಿ ಚೀನಾ ಇಂಜಿನಿಯರ್‌ಗಳ ಮೇಲೆ ಉಗ್ರರ ದಾಳಿ – ಸೈನಿಕರು ಸೇರಿ 13 ಸಾವು

    ಇಸ್ಲಾಮಾಬಾದ್: ಸ್ವಾತಂತ್ರ್ಯ ದಿನದ ಮುಂಚಿನ ದಿನವಾದ ಇಂದು ಪಾಕಿಸ್ತಾನದ (Pakistan) ಬಲೂಚಿಸ್ತಾನ್ (Balochistan) ಪ್ರಾಂತ್ಯದಲ್ಲಿ ಚೀನಾದ (China) ಇಂಜಿನಿಯರ್‌ಗಳ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 4 ಚೀನಾ ಪ್ರಜೆಗಳು ಹಾಗೂ 9 ಪಾಕ್ ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಈ ವೇಳೆ ಪಾಕಿಸ್ತಾನದ ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಚೀನಾದ ಕಂಪನಿಯೊಂದರ ಇಂಜಿನಿಯರ್‌ಗಳು ಪಾಕ್‍ನ ಗ್ವಾದರ್ ಬಳಿಯ ಫಕೀರ್ ಸೇತುವೆಯ ಬಳಿ ಕೆಲಸ ನಿರ್ವಹಿಸುವ ಸ್ಥಳಕ್ಕೆ ತೆರಳುವ ವೇಳೆ ಈ ದಾಳಿಯಾಗಿದೆ. ದಾಳಿಯಲ್ಲಿ ಇಬ್ಬರು ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಬಂದರು ನಗರವಾದ ಗ್ವಾದರ್‍ನಾದ್ಯಂತ ಸ್ಫೋಟಗಳು ಮತ್ತು ಗುಂಡಿನ ಸದ್ದು ಕೇಳಿಬರುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ. ಬಂದರು ಹಾಗೂ ಪ್ರಮುಖ ಸ್ಥಳಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್, ಚೀನಾಗೆ ಠಕ್ಕರ್ ಕೊಡಲು ಅತ್ಯಾಧುನಿಕ ಡ್ರೋಣ್ ನಿಯೋಜನೆ

    ಮುಂದಿನ ಆದೇಶದವರೆಗೆ ಬಲೂಚಿಸ್ತಾನ ಮತ್ತು ಸಿಂಧ್‍ನಲ್ಲಿರುವ ತನ್ನ ನಾಗರಿಕರು ತಮ್ಮ ನಿವಾಸಗಳಲ್ಲಿಯೇ ಇರುವಂತೆ ಪಾಕಿಸ್ತಾನದಲ್ಲಿರುವ ಚೀನಾದ ರಾಯಭಾರ ಕಚೇರಿ ಆದೇಶ ಹೊರಡಿಸಿದೆ.

    ಬಲೂಚ್ ಲಿಬರೇಶನ್ ಆರ್ಮಿ – ಮಜೀದ್ ಬ್ರಿಗೇಡ್ ಭಯೋತ್ಪಾದನಾ ಸಂಘಟನೆ ಇಂದಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನೆ ಅಧ್ಯಕ್ಷನ ಮೇಲೆ ಗುಂಡು ಹಾರಿಸಿದ ಸಂಘಟನೆಯ ಮಾಜಿ ಸದಸ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

    ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

    ಇಸ್ಲಮಾಬಾದ್: ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ, ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.

    ಸದನದ ನೂತನ ನಾಯಕರ ಆಯ್ಕೆ ಪ್ರಕ್ರಿಯೆ ಭಾನುವಾರ ಆರಂಭವಾಗಿತ್ತು. ರವಿವಾರದ ಪ್ರಮುಖ ಬೆಳವಣಿಗೆಯಾಗಿ ಬಿಲಾವಲ್ ಭುಟ್ಟೋ ನೇತೃತ್ವದ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮತ್ತು ವಿಪಕ್ಷಗಳ ಇತರ ಮುಖಂಡರೆಲ್ಲ ಸೇರಿ ಶೆಹಬಾಜ್ ಷರೀಫ್ ಅವರನ್ನು ಮೈತ್ರಿಕೂಟದ ಮುಖಂಡರನ್ನಾಗಿ ಆಯ್ಕೆ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಮುಂದಾದ ಅರುಣ್ ಸಿಂಗ್, ಬಿಎಸ್‍ವೈ

    ಶನಿವಾರ ರಾತ್ರಿ ಪಾಕಿಸ್ತಾನದ ನ್ಯಾಶನಲ್ ಅಸೆಂಬ್ಲಿಯಲ್ಲಿ ನಡೆದ ಅವಿಶ್ವಾಸ ಮತ ಮಂಡನೆ ಮತದಾನದಲ್ಲಿ ಇಮ್ರಾನ್ ಖಾನ್ ಸೋಲನುಭವಿಸಿದ್ದರು. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

    ಇಮ್ರಾನ್ ಖಾನ್ ಹೇಳಿದ್ದೇನು?: 16 ಸಾವಿರ ಕೋಟಿ ರೂಪಾಯಿ ಮತ್ತು 8 ಸಾವಿರ ಕೋಟಿ ರೂಪಾಯಿಯ ಭ್ರಷ್ಟಾಚಾರದ ಕೇಸ್ ಹೊಂದಿರುವ ವ್ಯಕ್ತಿ ಆ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ. ದೇಶಕ್ಕೆ ಅದಕ್ಕಿಂತ ದೊಡ್ಡ ಅವಮಾನ ಇರಲಾರದು. ರಾಷ್ಟ್ರೀಯ ಅಸೆಂಬ್ಲಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಇಮ್ರಾನ್ ಖಾನ್ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

    ಶಹಬಾಜ್ ಷರೀಫ್ ಯಾರು?: ಮೂರು ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಸಹೋದರನಾಗಿರುವ ಶೆಹಬಾಜ್ ಷರೀಫ್, ದೇಶದ ಹೊರಗೆ ಅಷ್ಟೊಂದು ಪ್ರಸಿದ್ದರಲ್ಲದಿದ್ದರೂ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿದ್ದ ಪಾಕಿಸ್ತಾನದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. 1999 ರಲ್ಲಿ ಪಾಕಿಸ್ತಾನದಲ್ಲಿ ಮಿಲಿಟರಿ ದಂಗೆಯ ನಂತರ ಶಹಬಾಜ್ ಜೈಲಿನಲ್ಲಿದ್ದರು, ಬಳಿಕ ಸೌದಿ ಅರೇಬಿಯಾಕ್ಕೆ ಗಡಿಪಾರಾಗಿದ್ದರು. 2007 ರಲ್ಲಿ ದೇಶಕ್ಕೆ ಮರಳಿದ ಅವರು, ಪನಾಮ ಪೇಪರ್ಸ್ ಲೀಕ್ ಸಂಬಂಧಿಸಿದ ಆಸ್ತಿಯನ್ನು ಮರೆಮಾಚುವ ಆರೋಪದ ಮೇಲೆ 2017 ರಲ್ಲಿ ನವಾಜ್ ಷರೀಫ್ ತಪ್ಪಿತಸ್ಥರೆಂದು ಸಾಬೀತಾದ ನಂತರ ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಿದರು. ನವಾಜ್ ಷರೀಫ್‍ಗಿಂತ ಭಿನ್ನವಾಗಿ, ಶಹಬಾಜ್ ಅವರು ಪಾಕಿಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ವಿದೇಶಿ ಮತ್ತು ರಕ್ಷಣಾ ನೀತಿಯನ್ನು ನಿಯಂತ್ರಿಸುವ ಪಾಕಿಸ್ತಾನದ ಮಿಲಿಟರಿಯೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ.

  • ಲಾಹೋರ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ- 3 ಸಾವು

    ಲಾಹೋರ್ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ- 3 ಸಾವು

    ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್‌ ನ ಶಾಪಿಂಗ್ ಮಾರುಕಟ್ಟೆಯಲ್ಲಿ ಗುರುವಾರ ಬಾಂಬ್ ಸ್ಫೋಟವಾಗಿದ್ದು, ಕನಿಷ್ಠ 3 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬೈಕ್‍ನಲ್ಲಿ ಸಮಯ ನಿಯಂತ್ರಿತ ಸಾಧನ ಬಳಸಿ ಬಾಂಬ್ ಇಟ್ಟು ಸ್ಫೋಟಗೊಳಿಸಿದ್ದಾರೆ ಎನ್ನುವುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ ಎಂದು ಲಾಹೋರ್ ಪೊಲೀಸ್ ವಕ್ತಾರ ರಾಣಾ ಆರಿಫ್ ಹೇಳಿದ್ದಾರೆ.

    ಭಾರತೀಯ ಸರಕುಗಳನ್ನು ಮಾರಾಟ ಮಾಡುವ ಲಾಹೋರ್‌ನ ಪ್ರಸಿದ್ಧ ಅನಾರ್ಕಲಿ ಮಾರುಕಟ್ಟೆಯ ಸಮೀಪದ ಪಾನ್ ಮಂಡಿಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಹತ್ತಿರದ ಅಂಗಡಿಗಳು ಹಾಗೂ ಕಟ್ಟಡಗಳ ಕಿಟಕಿಗಳು ಹಾನಿಗೀಡಾಗಿವೆ. ಇದುವರೆಗೆ ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ. ಪಾಕಿಸ್ತಾನದಲ್ಲಿ ತಾಲಿಬಾನ್‍ಗಳು ಕಳೆದ ಡಿಸೆಂಬರ್‍ನಿಂದ ಸರ್ಕಾರ ಮತ್ತು ಪೊಲೀಸರ ವಿರುದ್ಧ ಸರಣಿ ಸ್ಫೋಟಗಳು ಹಾಗೂ ದಾಳಿಗಳನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅಮೆರಿಕದಿಂದಲೇ ಕಾನ್ಪುರದಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ತಡೆದ ಮನೆಯವರು

    ಅಫಘಾನಿಸ್ತಾನದ ತಾಲಿಬಾನ್ ಸಂಘಟನೆಯಂತೆ ಕಾರ್ಯನಿರ್ವಹಿಸುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ), ಈ ರೀತಿ ಸಂಭವಿಸಿದ ಹೆಚ್ಚಿನ ಸ್ಫೋಟಗಳ ಹೊಣೆ ಹೊತ್ತುಕೊಂಡಿದೆ.

    ನಾವು ಈ ಸ್ಫೋಟದ ಕುರಿತು ತನಿಖೆ ಆರಂಭಿಸಿದ್ದೇವೆ. ಸ್ಫೋಟದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿಐಜಿಪಿ ಡಾ. ಮೊಹಮ್ಮದ್ ಅಬಿದ್ ತಿಳಿಸಿದ್ದಾರೆ.

    ಭಯೋತ್ಪಾದನಾ ನಿಗ್ರಹ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಫೋಟದ ಸ್ವರೂಪವನ್ನು ಪರಿಶೀಲಿಸುತ್ತಿದ್ದಾರೆ.

    ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೇಯೊ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಇಫ್ತಿಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಯುಪಿ ಕಾಂಗ್ರೆಸ್‍ನ ‘ನಾನು ಹುಡುಗಿ ಹೋರಾಡಬಲ್ಲೆ’ ಪೋಸ್ಟರ್ ಗರ್ಲ್ ಬಿಜೆಪಿಗೆ ಸೇರ್ಪಡೆ

    ಸ್ಫೋಟದಲ್ಲಿ ಹಲವಾರು ದ್ವಿಚಕ್ರವಾಹನಗಳು ಮತ್ತು ಮಾರಾಟ ಮಳಿಗೆಗಳು ಹಾನಿಗೊಳಗಾಗಿವೆ. ಸ್ಫೋಟದ ನಂತರ ಇಡೀ ಅನಾರ್ಕಲಿ ಬಜಾರ್ ಮುಚ್ಚಲಾಗಿದೆ.

  • ಪಾಕ್‍ನಲ್ಲಿ ಐವರು ಹಿಂದೂಗಳ ಹತ್ಯೆ

    ಪಾಕ್‍ನಲ್ಲಿ ಐವರು ಹಿಂದೂಗಳ ಹತ್ಯೆ

    ಇಸ್ಲಮಾಬಾದ್: ಹಿಂದೂ ಕುಂಟುಂಬವೊಂದರ ಐವರರನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

    ಮೃತರನ್ನು ಬೀರ್‍ಬಲ್ ದಾಸ್, ಮೇಘ್ವಾಲ್ ಹಾಗೂ ರಾಮ್ ಛಾಂದ್ ಎಂದು ಗುರತಿಸಲಾಗಿದೆ. ಟೈಲರಿಂಗ್ ಅಂಗಡಿಯನ್ನು ನಡೆಸಿ ಜೀವನ ನಡೆಸುತ್ತಿದ್ದರು. ಆದರೆ ಐವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.

    ಪಾಕ್ ನಗರದ ರೀಮ್ ಯಾರ್ ಖಾನ್‍ನಿಂದ 15 ಕೀ.ಮೀ ದೂರವಿರುವ ಅಬುದಾಬಿ ಕಾಲನಿಯಲ್ಲಿ ಐವರ ಮೃತದೇಹ ಪತ್ತೆಯಾಗಿದೆ. ಹರಿತವಾದ ಆಯುಧಗಳಿಂದ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಐವರ ಸಾವಿನಿಂದ ಸ್ಥಳೀಯರು ಶಾಕ್ ಆಗಿದ್ದಾರೆ.

  • ಬೆಲ್ಲಿ ಡ್ಯಾನ್ಸರ್ಸ್ ಮೂಲಕ ಹೂಡಿಕೆದಾರರನ್ನು ಸೆಳೆಯಲು ಮುಂದಾಗಿ ಟ್ರೋಲಾದ ಪಾಕ್

    ಬೆಲ್ಲಿ ಡ್ಯಾನ್ಸರ್ಸ್ ಮೂಲಕ ಹೂಡಿಕೆದಾರರನ್ನು ಸೆಳೆಯಲು ಮುಂದಾಗಿ ಟ್ರೋಲಾದ ಪಾಕ್

    ಇಸ್ಲಾಮಾಬಾದ್: ವಿದೇಶಿ ಹೂಡಿಕೆದಾರರನ್ನು ಸೆಳೆಯಲು ಪಾಕಿಸ್ತಾನ `ಖೈಬರ್ ಫಾಖ್ತೂಂಕ್ವಾ ಇನ್ವೆಸ್ಟ್‌ಮೆಂಟ್‌ ಆಪರ್ಚುನಿಟೀಸ್ ಕಾನ್ಫರೆನ್ಸ್’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಬೆಲ್ಲಿ ಡ್ಯಾನ್ಸರ್‌ಗಳನ್ನು ಕರೆಸಿ ನೃತ್ಯ ಮಾಡಿಸುವ ಮೂಲಕ ಹೂಡಿಕೆದಾರರ ಸೆಳೆಯಲು ಪಾಕ್ ಮುಂದಾಗಿತ್ತು. ಪಾಕ್‍ನ ಈ ಹೊಸ ಪ್ರಯತ್ನ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗುತ್ತಿದೆ.

    ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಪಾಕಿಸ್ತಾನ ತನ್ನ ವೆಚ್ಚ ಕಡಿತಕ್ಕೆ ಹಲವು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸುದ್ದಿಯಾಗಿತ್ತು. ಆದರೆ ಈಗ ಬೆಲ್ಲಿ ಡ್ಯಾನ್ಸರ್‌ಗಳ ಮೂಲಕ ಮತ್ತೆ ಪಾಕ್ ನಗೆಪಾಟಲಿಗೆ ಕಾರಣವಾಗಿದೆ. ಹೊಸ ಪ್ರಯತ್ನಕ್ಕೆ ಕೈ ಹಾಕಿ ಮತ್ತೆ ಟ್ರೋಲ್ ಆಗುತ್ತಿದೆ. ಅಜರ್‌ಬೈಜಾನ್‌ನ ಬಾಕುವಿನಲ್ಲಿ ಸೆ.4 ರಿಂದ 8ರವರೆಗೆ ಪಾಕಿಸ್ತಾನ `ಖೈಬರ್ ಫಾಖ್ತೂಂಕ್ವಾ ಇನ್ವೆಸ್ಟ್‌ಮೆಂಟ್‌ ಆಪರ್ಚುನಿಟೀಸ್ ಕಾನ್ಫರೆನ್ಸ್’ ಆಯೋಜಿಸಲಾಗಿತ್ತು.

    ಈ ಸಮಾವೇಶದಲ್ಲಿ ಬೆಲ್ಲಿ ಡ್ಯಾನ್ಸರ್‌ಗಳ ನೃತ್ಯ ಕಾರ್ಯಕ್ರಮ ಏರ್ಪಡಿಸಿ ಹೂಡಿಕೆದಾರರನ್ನು ಸೆಳೆಯಲು ಪ್ಲಾನ್ ಮಾಡಿತ್ತು. ಸಮಾವೇಶದ ನಡುವೆ ವೇದಿಕೆಯ ಮೇಲೆ ಬೆಲ್ಲಿ ಡ್ಯಾನ್ಸರ್‌ಗಳು ಸೊಂಟ ಬಳುಕಿಸಿ ಹೂಡಿಕೆದಾರ ಮನಗೆಲ್ಲಲು ಪ್ರಯತ್ನಿಸಿದರು. ಆದರೆ ಈ ಪ್ರಯತ್ನ ಹೂಡಿಕೆದಾರರ ಮನ ಗೆದ್ದಿತ್ತೋ ಇಲ್ಲ ಎಂಬುದು ತಿಳಿದಿಲ್ಲ. ಆದರೆ ಮತ್ತೆ ಪಾಕಿಸ್ತಾನವನ್ನು ಟ್ರೋಲ್ ಮಾಡಲು ಹೊಸ ವಿಷಯ ಸಿಕ್ಕಂತಾಗಿದೆ.

    ಸಮಾವೇಶದ ವೇದಿಕೆ ಮೇಲೆ ಡ್ಯಾನ್ಸರ್‌ಗಳು ಸಖತ್ ಸ್ಟಪ್ಸ್ ಹಾಕುತ್ತಿರುವ ವಿಡಿಯೋವನ್ನು ಪಾಕಿಸ್ತಾನದ ಪತ್ರಕರ್ತರೊಬ್ಬರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬೇರೆ ದೇಶದ ಕಥೆ ಹಾಗಿರಲಿ, ಸ್ವತಃ ಪಾಕಿಸ್ತಾನಿ ಪ್ರಜೆಯೇ ಪಾಕಿಸ್ತಾನದಲ್ಲಿ ಹೂಡಿಕೆ ಮಾಡುವಂತೆ ಮುಖ್ಯ ಅರ್ಥಶಾಸ್ತ್ರಜ್ಞರು ವಿದೇಶಿ ಹೂಡಿಕೆದಾರರಿಗೆ ಬೆಲ್ಲಿ ಡ್ಯಾನ್ಸರ್‌ಗಳ ಮೂಲಕ ಆಮಿಷ ಒಡ್ಡುತ್ತಿದ್ದಾರೆ ಎಂದು ಟೀಕಿಸಿದ್ದರು.

    ಟ್ವಿಟ್ಟರ್‌ನಲ್ಲಿ ಅಪ್ಲೋಡ್ ಆಗಿದ್ದ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಆರ್ಥಿಕವಾಗಿ ಕುಗ್ಗಿರುವ ಪಾಕಿಸ್ತಾನ ಈ ಹಿಂದೆ ಕತ್ತೆ, ಬೀದಿ ನಾಯಿಗಳನ್ನು ರಫ್ತು ಮಾಡುವ ವಿಚಿತ್ರ ಯೋಚನೆ ಮೂಲಕ ಟ್ರೋಲ್ ಆಗಿತ್ತು. ಈ ವಿಡಿಯೋಗೆ ಹಲವರು ಕಮೆಂಟ್ ಮಾಡಿ ಪಾಕಿಸ್ತಾನವನ್ನು ಟೀಕಿಸಿದ್ದಾರೆ.

    https://twitter.com/_HarshKhare/status/1170598336841187328

    ನಯಾ ಪಾಕಿಸ್ತಾನಕ್ಕೆ ಹೂಡಿಕೆದಾರರಿಗೆ ಸ್ವಾಗತ, ಕತ್ತೆ, ನಾಯಿಯನ್ನು ಮಾರಾಟ ಮಾಡುವುದರಿಂದ ಹಿಡಿದು ಸಮಾವೇಶದಲ್ಲಿ ಬೆಲ್ಲಿ ಡ್ಯಾನ್ಸ್ ಕಾರ್ಯಕ್ರಮ ಏರ್ಪಡಿಸುವ ಮೂಲಕ ಪಾಕ್ ತನ್ನ ಆರ್ಥಿಕತೆ ಸರಿ ಮಾಡಿಕೊಳ್ಳಲು ನೋಡುತ್ತಿದೆ. ಹಾದಿ ತಪ್ಪಿರುವ ತನ್ನ ಆರ್ಥಿಕತೆಯನ್ನು ಸರಿದಾರಿಗೆ ತರಲು ಪಾಕಿಸ್ತಾನ ಚಿತ್ರ ವಿಚಿತ್ರ ಪ್ರಯತ್ನಕ್ಕೆ ಕೈ ಹಾಕುತ್ತಿದೆ ಎಂದು ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ ಹೂಡಿಕೆದಾರರನ್ನು ಸೆಳೆಯಲು ಬೆಲ್ಲಿ ಡ್ಯಾನ್ಸಿಂಗ್ ಬಿಟ್ಟರೆ ಬೇರೆ ಯಾವುದೇ ದಾರಿ ಪಾಕ್ ಸರ್ಕಾರಕ್ಕೆ ಕಾಣುತ್ತಿಲ್ಲ ಎಂದು ಪಾಕ್ ಕಾಲೆಳೆಯುತ್ತ ವ್ಯಂಗ್ಯವಾಡಿದ್ದಾರೆ.

  • ಪಾಕಿನ ಆರ್ಥಿಕತೆ ಕುಸಿತ- ಸರ್ಕಾರಿ ಸಭೆಯಲ್ಲಿ ಕಾಫಿ, ಟೀ, ಬಿಸ್ಕೆಟ್ ಬ್ಯಾನ್

    ಪಾಕಿನ ಆರ್ಥಿಕತೆ ಕುಸಿತ- ಸರ್ಕಾರಿ ಸಭೆಯಲ್ಲಿ ಕಾಫಿ, ಟೀ, ಬಿಸ್ಕೆಟ್ ಬ್ಯಾನ್

    – ಸರ್ಕಾರಿ ಅತಿಥಿ ಗೃಹವನ್ನೇ ಬಾಡಿಗೆ ಕೊಟ್ಟ ಇಮ್ರಾನ್ ಖಾನ್
    – ಕತ್ತೆ ಆಯ್ತು ಈಗ ಬೀದಿನಾಯಿಗಳ ರಫ್ತಿಗೆ ಪಾಕ್ ನಿರ್ಧಾರ

    ಇಸ್ಲಾಮಾಬಾದ್: ಪಾಕಿಸ್ತಾನದ ಆರ್ಥಿಕತೆ ತೀವ್ರ ಕುಸಿತಗೊಂಡಿರುವ ಕಾರಣಕ್ಕೆ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಅನಾವಶ್ಯಕವಾಗಿ ಮಾಡುವ ಖರ್ಚಿಗೆ ಬ್ರೇಕ್ ಹಾಕಲು ಇನ್ಮುಂದೆ ಸರ್ಕಾರಿ ಸಭೆಯಲ್ಲಿ ಟೀ, ಕಾಫಿ, ತಿಂಡಿ, ಬಿಸ್ಕೆಟ್ ಬ್ಯಾನ್ ಮಾಡಿದ್ದೇವೆ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

    ಆರ್ಥಿಕತೆ ಕುಸಿತ ಕಂಡ ಕಾರಣಕ್ಕೆ ಪಾಕಿಸ್ತಾನ ಬೀದಿಗೆ ಬಿದ್ದಿದೆ. ಪಾಕಿಸ್ತಾನದಲ್ಲಿ ಎಷ್ಟರ ಮಟ್ಟಿಗೆ ಹಣಹಾಸಿನ ಅಭಾವ ಬಂದಿದೆ ಎಂದರೆ, ಪ್ರಧಾನಿ ಇಮ್ರಾನ್ ಖಾನ್ ಸರ್ಕಾರಿ ಅತಿಥಿ ಗೃಹವನ್ನೇ ಬಾಡಿಗೆ ಕೊಡುವಷ್ಟರ ಮಟ್ಟಿಗೆ ಆರ್ಥಿಕತೆ ಕುಸಿತಗೊಂಡಿದೆ.

    ಪಾಕಿಸ್ತಾನ ಕಚೇರಿಗಳಲ್ಲಿ ಕಾಫಿ, ಟೀ, ಬಿಸ್ಕೆಟ್ ಗೂ ಗತಿ ಇಲ್ಲದಂತಾಗಿದೆ. ಪಾಕಿಸ್ತಾನ ಸರ್ಕಾರದ ಯಾವುದೇ ಅಧಿಕೃತ ಸಭೆಗಳಲ್ಲಿ ಕಾಫಿ-ತಿಂಡಿ, ಟೀ, ಬಿಸ್ಕೆಟ್ ಕೊಡದಂತೆ ಸರ್ಕಾರ ಅಧಿಕಾರಿಗಳಿಗೆ ಆದೇಶ ನೀಡಿದೆ. ಅಲ್ಲದೆ ದೇಶದಲ್ಲಿ ಹೊಸ ಉದ್ಯೋಗ ಸೃಷ್ಟಿಗೂ ಕಡಿವಾಣ ಹಾಕಿದೆ. ಜೊತೆಗೆ ಮೊಟರ್ ಬೈಕನ್ನು ಹೊರತುಪಡಿಸಿ ಇನ್ನಿತರ ವಾಹನಗಳ ಖರೀದಿ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಇದನ್ನೂ ಓದಿ:ಕಾಶ್ಮೀರಕ್ಕಾಗಿ ಏನು ಬೇಕಾದ್ರೂ ಮಾಡಲು ಸಿದ್ಧ – ಬಾಲ ಬಿಚ್ಚಿದ ಪಾಕ್

    ಪಾಕ್ ಅಕ್ಷರಶಃ ಬೀದಿಗೆ ಬಂದಿದೆ, ಈ ಹಿಂದೆ ಚೀನಾಗೆ ಕತ್ತೆ ರಫ್ತು ಮಾಡಿದ್ದ ಪಾಕ್ ಈಗ ಬೀದಿನಾಯಿಗಳನ್ನು ರಫ್ತು ಮಾಡಲು ನಿರ್ಧರಿಸಿದೆ. ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಪಾಕಿಸ್ತಾನ ಖರ್ಚು ಕಡಿಮೆ ಮಾಡಲು ಈ ರೀತಿ ಹೊಸ ನಿಯಮ ಜಾರಿಗೊಳಿಸಿದೆ.

    ಹಾಗೆಯೇ ಸರ್ಕಾರಿ ಕಚೇರಿಗಳಲ್ಲಿ ಹೆಚ್ಚು ದಿನಪ್ರತಿಕೆ, ನಿಯತಕಾಲಿಕೆಗಳನ್ನು ತರಿಸಬೇಡಿ, ಕೇವಲ ಒಂದೇ ಪ್ರತಿಕೆ ಸಾಕು ಎಂದು ಸೂಚಿಸಿದೆ. ಹಾಗೆಯೇ ಸರ್ಕಾರಿ ಕಚೇರಿಗಳಲ್ಲಿ ಜೆರಾಕ್ಸ್ ಅಥವಾ ಪ್ರಿಂಟ್ ತೆಗೆಯುವಾಗ ಕಾಗದದ ಎರಡು ಬದಿಯಲ್ಲೂ ಪ್ರಿಂಟ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ರೀತಿ ಹೀನಾಯ ಪರಿಸ್ಥಿತಿಯನ್ನು ಪಾಕ್ ಎದುರಿಸುತ್ತಿದೆ.

    ಇಷ್ಟೆಲ್ಲಾ ಕಷ್ಟವಿದ್ದರು ಕೂಡ ಇಮ್ರಾನ್ ಖಾನ್‍ಗೆ ಬುದ್ಧಿ ಬಂದಿಲ್ಲ. ನಮ್ಮಲ್ಲೂ ನ್ಯೂಕ್ಲಿಯರ್ ಬಾಂಬ್ ಇದೆ ಎಂದು ಪಾಕಿಸ್ತಾನ ಮತ್ತೆ ಭಾರತಕ್ಕೆ ಬೆದರಿಕೆ ಹಾಕಿದೆ. ಕಾಶ್ಮೀರ ವಿಚಾರವನ್ನು ಬಗೆಹರಿಸಲು ಯಾವ ಮಟ್ಟಕ್ಕಾದರೂ ಇಳಿಯಲು ನಾವು ಸಿದ್ಧ ಎಂದು ಪಾಕ್ ಹೇಳಿದೆ.

  • ಪಾಕ್ ಬಿಟ್ಟು ಇಂಗ್ಲೆಂಡಿನಲ್ಲಿ ನೆಲೆಸಿದ್ದು ಯಾಕೆ – ಮಲಾಲಾಗೆ ಭಾರತೀಯರ ಕ್ಲಾಸ್

    ಪಾಕ್ ಬಿಟ್ಟು ಇಂಗ್ಲೆಂಡಿನಲ್ಲಿ ನೆಲೆಸಿದ್ದು ಯಾಕೆ – ಮಲಾಲಾಗೆ ಭಾರತೀಯರ ಕ್ಲಾಸ್

    ಇಸ್ಲಾಮಾಬಾದ್: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿರುವ ಹಿನ್ನೆಲೆ ಟ್ವೀಟ್ ಮಾಡಿದ ನೊಬೆಲ್ ಪುರಸ್ಕೃತೆ ಮಲಾಲಾ ಯುಸೂಫಾಜಿ ವಿರುದ್ಧ ಭಾರತೀಯರು ಸಿಡಿದೆದ್ದಿದ್ದಾರೆ.

    ನಾನು ಬಾಲ್ಯದಲ್ಲಿದ್ದಾಗಿಂದಲೂ, ನನ್ನ ತಂದೆ-ತಾಯಿ, ನನ್ನ ಅಜ್ಜ-ಅಜ್ಜಿಯರ ಕಾಲದಿಂದಲೂ ಕಾಶ್ಮೀರದ ಜನತೆ ಸಂಘರ್ಷದಲ್ಲಿಯೇ ಬದುಕು ನಡೆಸಿಕೊಂಡು ಬಂದಿದ್ದಾರೆ. ಹೀಗಾಗಿ ನನಗೆ ಕಾಶ್ಮೀರದ ಮಹಿಳೆ ಮತ್ತು ಮಕ್ಕಳ ಬಗ್ಗೆ ಚಿಂತೆಯಾಗುತ್ತಿದೆ. ಅಲ್ಲಿ ಮತ್ತಷ್ಟು ಹಿಂಸಾಚಾರ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಹೆಚ್ಚು ನಷ್ಟವನ್ನು ಅನುಭವಿಸಬೇಕಾಗುತ್ತೆ ಎಂದು ಟ್ವೀಟ್‍ನಲ್ಲಿ ಮಲಾಲಾ ಬರೆದುಕೊಂಡಿದ್ದಾರೆ.

    ಈ ಟ್ವೀಟ್‍ಗೆ ಪರ ವಿರೋಧಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಭಾರತೀಯರು ಮಲಾಲಾ ಟ್ವೀಟ್‍ಗೆ ರೀ-ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಹುಟ್ಟುವ ಮೊದಲು ಕಾಶ್ಮೀರಕ್ಕೆ ಪಾಕಿಸ್ತಾನ ಏನೆಲ್ಲಾ ಮಾಡಿದೆ ಅಂತ ಗೊತ್ತಾ ಎಂದು ಪ್ರಶ್ನಿಸಿ, ಪಾಕ್ ದಾಳಿಗಳ ಬಗ್ಗೆ ಒಬ್ಬರು ಕಮೆಂಟ್ ಮಾಡಿದರೆ, ಇನ್ನೊಬ್ಬರು ನೀವು ಮೂಲತಃ ಪಾಕಿಸ್ತಾನದವರು. ಆದರೆ ಈಗ ಪಾಕಿಸ್ತಾನ ಬಿಟ್ಟು ಇಂಗ್ಲೆಂಡಿನಲ್ಲಿ ನೆಲೆಸಿದ್ದು ಯಾಕೆ? ಪಾಕ್‍ನಲ್ಲಿ ಉಗ್ರರು ರಕ್ತದೋಕುಳಿ ಹರಿಸುತ್ತಿರುವುದನ್ನು ನೋಡಿದರೆ ನಿಮಗೆ ಸತ್ಯ ಅರಿವಾಗುತ್ತೆ. ಪಾಕಿಸ್ತಾನ ಉಗ್ರರ ಸ್ವರ್ಗ ಎನ್ನುವು ವಿಚಾರ ಇಡೀ ಜಗತ್ತಿಗೆ ತಿಳಿದಿದಿದೆ. ಈ ಬಗ್ಗೆ ನಿಮಗೆ ಗೊತ್ತಿಲ್ಲವೇ ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ.

    ನಿಮಗೆ ಕಾಶ್ಮೀರ ಮಾತ್ರ ಕಾಣುತ್ತೆ. ಬಲುಚಿಸ್ತಾನದಲ್ಲಿ ಆಗುತ್ತಿರುವ ಹಿಂಸಾಚಾರದ ಬಗ್ಗೆ ತಿಳಿದಿಲ್ಲವಾ? ಭಾರತ ಬಗ್ಗೆ ಮಾತನಾಡೋರು ಬಲುಚಿಸ್ತಾನ ಬಗ್ಗೆ ಯಾಕೆ ಧ್ವನಿ ಎತ್ತಿಲ್ಲ ಎಂದು ಪ್ರಶ್ನಿಸಿ ನೆಟ್ಟಿಗರು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಇಸ್ಲಾಮಾಬಾದ್‍ನಲ್ಲಿರುವ ಭಾರತೀಯ ರಾಯಭಾರಿಯನ್ನು ಪಾಕಿಸ್ತಾನವು ಹೊರಹಾಕಿ, ಭಾರತದ ಜೊತೆಗಿನ ದ್ವಿಪಕ್ಷೀಯ ವ್ಯಪಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದನ್ನು ಸೇರಿಸಿ ಐದು ಅಂಶಗಳ ಯೋಜನೆಯನ್ನು ಘೋಷಿಸಿದೆ. ಅಲ್ಲದೆ ಜಮ್ಮು-ಕಾಶ್ಮೀರದ ಕುರಿತು ಭಾರತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳ ವಿರುದ್ಧ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಮನವಿ ಮಾಡುತ್ತೇವೆ ಎಂದು ಪಾಕ್ ಹೇಳಿದೆ.

    370 ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಭಾರತ ಸರ್ಕಾರ ವಿಭಜನೆ ಮಾಡಿದೆ. ಅಲ್ಲದೆ ಸರ್ಕಾರ ಈ ದೊಡ್ಡ ಕ್ರಮ ತೆಗೆದುಕೊಳ್ಳುವ ಮುಂಚಿತವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ 40 ಸಾವಿರಕ್ಕೂ ಹೆಚ್ಚು ಸೈನಿಕರನ್ನು ಕಳುಹಿಸಿದೆ.

    ಈ ಭಾಗದಲ್ಲಿ ಯಾವುದೇ ಹಿಂಸಾಚಾರ ನಡೆಯಬಾರದೆಂದು ಫೋನ್ ಸೇವೆಗಳು ಮತ್ತು ಇಂಟರ್‍ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಲಾಗಿದೆ. ಉನ್ನತ ಅಧಿಕಾರಿಗಳು ಸಂಪರ್ಕಕ್ಕಾಗಿ ಸ್ಯಾಟಲೈಟ್ ಫೋನ್‍ಗಳನ್ನು ಬಳಸುತ್ತಿದ್ದಾರೆ. ಕಲ್ಲು ತೂರಾಟದಂತಹ ಘಟನೆಗಳನ್ನು ಹೊರತುಪಡಿಸಿ, ಇಲ್ಲಿನ ಪರಿಸ್ಥಿತಿ ಶಾಂತವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

  • 72 ವರ್ಷಗಳ ನಂತ್ರ ಮತ್ತೆ ತೆರೆದಿದೆ ಪಾಕ್‍ನಲ್ಲಿರುವ ಹಿಂದೂ ದೇಗುಲ

    72 ವರ್ಷಗಳ ನಂತ್ರ ಮತ್ತೆ ತೆರೆದಿದೆ ಪಾಕ್‍ನಲ್ಲಿರುವ ಹಿಂದೂ ದೇಗುಲ

    ಇಸ್ಲಮಾಬಾದ್: ಪಾಕಿಸ್ತಾನದಲ್ಲಿದ್ದ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪುರಾತನ ಹಿಂದೂ ದೇಗುಲವನ್ನು 72 ವರ್ಷಗಳ ಬಳಿಕ ಮತ್ತೆ ತೆರೆದು, ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲಾಗಿದೆ.

    ಪಾಕಿಸ್ತಾನದ ಸಿಯಾಲ್ ಕೋಟ್‍ನಲ್ಲಿ ‘ಶಾವಾಲಾ ತೇಜ ಸಿಂಗ್ ದೇವಾಲಯ’ ಇದೆ. ಈ ದೇವಾಲಯವನ್ನು 72 ವರ್ಷಗಳ ಹಿಂದೆ ಮುಚ್ಚಲಾಗಿತ್ತು. ಆದರೆ ಈಗ ಮತ್ತೆ ದೇಗುಲದ ಬಾಗಿಲು ತೆರೆದಿದೆ. ಸಾವಿರ ವರ್ಷಗಳ ಹಿಂದೆ ಸರ್ದಾರ್ ತೇಜ್ ಸಿಂಗ್ ಅವರು ಶಾವಾಲಾ ತೇಜ ಸಿಂಗ್ ದೇವಾಲಯವನ್ನು ನಿರ್ಮಿಸಿದ್ದರು. ಈ ದೇವಾಲಯವು ಭಾರತ-ಪಾಕ್ ವಿಭಜನೆಯ ಸಮಯದಲ್ಲಿ ಮುಚ್ಚಲಾಗಿತ್ತು.

    1992ರಲ್ಲಿ ಭಾರತದಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ನಂತರ ಪಾಕ್‍ನಲ್ಲಿದ್ದ ಹಿಂದೂಗಳು ಶಾವಾಲಾ ತೇಜ ಸಿಂಗ್ ದೇಗುಲಕ್ಕೆ ಭೇಟಿ ನೀಡುವುದನ್ನು ನಿಲ್ಲಿಸಿದ್ದರು. ಅಂದಿನಿಂದ ದೇಗುಲದಲ್ಲಿ ಪೂಜೆ, ಪುನಸ್ಕಾರಗಳು ನಡೆಯದೆ ಪಾಳುಬಿದ್ದಿತ್ತು.

    ಸುದ್ದಿಸಂಸ್ಥೆಯೊಂದರ ವರದಿ ಪ್ರಕಾರ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ನಿರ್ದೇಶನದ ಮೇರೆಗೆ ದೇವಾಲಯದ ಬಾಗಿಲನ್ನು ಮತ್ತೆ ತೆರೆಯಲಾಗಿದೆ ಎನ್ನಲಾಗಿದೆ. ಅಲ್ಲದೆ ಜನರು ಯಾವುದೇ ಸಮಯದಲ್ಲಿ ಇಲ್ಲಿಗೆ ಭೇಟಿ ನೀಡಲು ಮುಕ್ತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಬಿಲಾಲ್ ಹೈದರ್ ಹೇಳಿದ್ದಾರೆ.

    ಹಾಗೆಯೇ ದೇವಾಲಯದ ಸಂರಕ್ಷಣೆ ಮತ್ತು ಪುನಃಸ್ಥಾಪಿಸುವ ಕಾರ್ಯವನ್ನು ಕೂಡ ಶೀಘ್ರದಲ್ಲೇ ಆರಂಭಿಸಲಾಗುತ್ತಿದೆ ಎಂದು ಪಾಕಿಸ್ತಾನ ಸರ್ಕಾರ ತಿಳಿಸಿದೆ.

  • ಲೈವ್ ಚರ್ಚೆಯಲ್ಲೇ ಪಾಕ್ ನಾಯಕರ ನಡುವೆ ಡಿಶುಂ-ಡಿಶುಂ

    ಲೈವ್ ಚರ್ಚೆಯಲ್ಲೇ ಪಾಕ್ ನಾಯಕರ ನಡುವೆ ಡಿಶುಂ-ಡಿಶುಂ

    ಇಸ್ಲಾಮಾಬಾದ್: ಪಾಕಿಸ್ತಾನದ ಸುದ್ದಿ ವಾಹಿನಿಯೊಂದರಲ್ಲಿ ನಡೆಯುತ್ತಿದ್ದ ಲೈವ್ ಚರ್ಚೆಯಲ್ಲಿಯೇ ಪಾಕ್ ನಾಯಕರು ಹೊಡೆದಾಡಿಕೊಂಡು ಹೈ ಡ್ರಾಮಾ ಸೃಷ್ಟಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಹೌದು, ಪಾಕ್ ಸುದ್ದಿ ವಾಹಿನಿಯೊಂದರಲ್ಲಿ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕ ಮಸ್ರೂರ್ ಅಲಿ ಸಿಯಾಲ್ ಮತ್ತು ಕರಾಚಿ ಪ್ರೆಸ್ ಕ್ಲಬ್ ಅಧ್ಯಕ್ಷ ಇಮ್ತಿಯಾಜ್ ಖಾನ್ ಲೈವ್ ಚರ್ಚೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮ ನೇರಪ್ರಸಾರ ಆಗುತ್ತಿರುವಾಗಲೇ ಚರ್ಚೆ ಜಗಳಕ್ಕೆ ತಿರುಗಿ, ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

    ಚರ್ಚೆ ಮಾಡುತ್ತಾ ಮಾತಿಗೆ ಮಾತು ಬೆಳೆದಿದ್ದು, ಮೊದಲು ಸಿಯಾಲ್ ಅವರು ಖಾನ್ ವಿರುದ್ಧ ತಿರುಗಿಬಿದ್ದಿದ್ದಾರೆ. ಸಿಯಾಲ್ ಅವರು ಖಾನ್ ಅವರ ಚೇರ್ ಎಳೆದು ಬೀಳಿಸಿ ಹೊಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಖಾನ್ ಅವರು ಕೂಡ ಸಿಯಾಲ್ ಅವರಿಗೆ ಹೊಡೆತದ ಮೂಲಕವೇ ಉತ್ತರ ನೀಡಿದ್ದು, ಇಬ್ಬರು ಪರಸ್ಪರ ಗುದ್ದಾಟ ನಡೆಸಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿದ್ದ ಇತರೇ ಅತಿಥಿಗಳು ಹಾಗೂ ಕಾರ್ಯಕ್ರಮ ಸಿಬ್ಬಂದಿ ಮಧ್ಯೆ ಬಂದು ಇಬ್ಬರ ಹೊಡೆದಾಟವನ್ನು ನಿಲ್ಲಿಸಿದ್ದಾರೆ.

    ಗಲಾಟೆ ನಡೆದ ಬಳಿಕ ಏನೂ ನಡೆಯದಂತೆ ಪರಸ್ಪರ ಮಸ್ರೂರ್ ಅಲಿ ಸಿಯಾಲ್ ಅವರು ಕಾರ್ಯಕ್ರಮಕ್ಕೆ ಮರಳಿದರೆ, ಇಮ್ತಿಯಾಜ್ ಖಾನ್ ಅವರು ಕಾರ್ಯಕ್ರಮ ಬಿಟ್ಟು ಹೊರ ಹೋಗಿದ್ದಾರೆ.

    https://www.youtube.com/watch?time_continue=1&v=Riaw-R-_d6A

  • ಪಾಕ್‍ನಲ್ಲಿ 13ರ ಹಿಂದೂ ಬಾಲಕಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್

    ಪಾಕ್‍ನಲ್ಲಿ 13ರ ಹಿಂದೂ ಬಾಲಕಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್

    ಇಸ್ಲಮಾಬಾದ್: ಅಪ್ರಾಪ್ತ ಹಿಂದೂ ಬಾಲಕಿಗೆ ಮದ್ಯ ಕುಡಿಸಿ ಇಬ್ಬರು ಕಾಮುಕರು ಸಾಮುಹಿಕ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಪಾಕಿಸ್ತಾನದ ಸಿಂಧ್ ನ ತಾಂಡೋ ಮೊಹಮ್ಮದ್ ಖಾನ್ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ತಾಂಡೋ ಮೊಹಮ್ಮದ್ ಖಾನ್’ನಲ್ಲಿ ಜೂನ್ 7 ರಂದು 13 ವರ್ಷದ ಹಿಂದೂ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆದರೆ ಘಟನೆ ನಡೆದು ಒಂದು ದಿನದ ಬಳಿಕ ಈ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯನ್ನು ಅಪಹರಿಸಿ, ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ ಇಬ್ಬರು ಆರೋಪಿಗಳು ಈ ದುಷ್ಕೃತ್ಯ ಎಸೆಗಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಟದ ಮೈದಾನದಲ್ಲಿ ಎಸೆದು ಹೋಗಿದ್ದಾರೆ.

    ಶುಕ್ರವಾರದಂದು ನಮ್ಮ ಮಗಳು ಕೆಲವು ದಿನಸಿ ಸಾಮಾಗ್ರಿಗಳನ್ನು ತರಲು ಅಂಗಡಿಗೆ ತೆರಳಿದ್ದಳು. ಈ ವೇಳೆ ಅಂಗಡಿ ಬಳಿ ಇದ್ದ ಯುವಕರು ಆಕೆಯನ್ನು ಕರೆದು ಅಪಹರಿಸಿದ್ದಾರೆ. ಬಳಿಕ ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ, ಅತ್ಯಾಚಾರ ಮಾಡಿದ್ದಾರೆ. ಕತ್ತಲಾದರೂ ಮಗಳು ಮನೆಗೆ ವಾಪಾಸ್ ಬರದಿದ್ದಾಗ ನಾನು ಗಾಬರಿಯಾಗಿ ನನ್ನ ಮಗನ ಜೊತೆ ಆಕೆಯನ್ನು ಹುಡುಕಲು ಹೋದೆ. ಆಗ ಸಕ್ಕರೆ ಮಿಲ್ ಬಳಿಯ ಮೈದಾನದಲ್ಲಿ ಪ್ರಜ್ಞೆ ಇಲ್ಲದ ಸ್ಥಿಯಲ್ಲಿ ಬಿದ್ದಿದ್ದಳು. ತಕ್ಷಣ ನಾವು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದೆವು ಎಂದು ಬಾಲಕಿ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

    ಬಾಲಕಿಗೆ ಎಚ್ಚರವಾದ ಬಳಿಕ ಆಕೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾಳೆ. ನಂತರ ಆಕೆಯನ್ನು ಹೈದಾರಬಾದ್‍ನ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ಬಾಲಕಿಗೆ ವಿವಿಧ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿದ ಬಳಿಕ ಅತ್ಯಾಚಾರ ನಡೆದಿರುವ ಬಗ್ಗೆ ಸ್ಪಷ್ಟವಾಗಿದೆ. ತದನಂತರ ಬಾಲಕಿ ತುಸು ಚೇತರಿಸಿಕೊಂಡ ಮೇಲೆ ಆರೋಪಿಗಳನ್ನು ಗುರುತಿಸಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    ಸದ್ಯ ಇಬ್ಬರೂ ಆರೋಪಿಗಳನ್ನು ಸ್ಥಳೀಯ ನ್ಯಾಯಲಯವೂ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.