Tag: ಇಸ್ಲಾಮಾಬಾದ್

  • ಪಾತಾಳಕ್ಕೆ ಬಿದ್ದ ಪಾಕ್‌ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ

    ಪಾತಾಳಕ್ಕೆ ಬಿದ್ದ ಪಾಕ್‌ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ

    ಇಸ್ಲಾಮಾಬಾದ್:‌ ಆರ್ಥಿಕ ದುಸ್ಥಿತಿಗೆ ಸಿಲುಕಿರುವ ಪಾಕಿಸ್ತಾನವನ್ನ ಶೆಹಬಾಜ್ ಷರೀಫ್ (Shehbaz Sharif) ಆಡಳಿತ ಇನ್ನಷ್ಟು ಸಾಲದ ಕೂಪಕ್ಕೆ ತಳ್ಳಿದೆ. ಅಧಿಕೃತ ಅಂಕಿ ಅಂಶಗಳ ಪ್ರಕಾರ, ಪ್ರಸಕ್ತ ವರ್ಷ ಜೂನ್‌ ವೇಳೆಗೆ ಪಾಕಿಸ್ತಾನದ ಸಾಲದ ಮಿತಿ 2,86,832 ಶತಕೋಟಿ ಡಾಲರ್‌ (USD) ಅಂದ್ರೆ ಸುಮಾರು 80.6 ಲಕ್ಷ ಕೋಟಿ ಪಾಕಿಸ್ತಾನಿ ರೂಪಾಯಿಗೆ ಏರಿಕೆಯಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದ್ರೆ 13 ಪ್ರತಿಶತದಷ್ಟು ಹೆಚ್ಚಾಗಿದೆ.

    ಹೌದು. ಪಾಕಿಸ್ತಾನದ ಹಣಕಾಸು ಸಚಿವಾಲಯ (Pakistan Ministry of Finance) ಬಿಡುಗಡೆ ಮಾಡಿದ 2025ರ ಅಂಕಿ-ಅಂಶದ ಪ್ರಕಾರ, ಜೂನ್ 2025ರ ಅಂತ್ಯದ ವೇಳೆಗೆ ಪಾಕಿಸ್ತಾನದ ಒಟ್ಟು ಸಾಲ 80.6 ಲಕ್ಷ ಕೋಟಿ ಪಾಕಿಸ್ತಾನಿ ರೂಪಾಯಿಗಳಷ್ಟಾಗಿದೆ. ಇದರಲ್ಲಿ 54.5 ಲಕ್ಷ ಕೋಟಿ ದೇಶಿಯ ಸಾಲ, 26 ಲಕ್ಷ ಕೋಟಿ ಬಾಹ್ಯ ಸಾಲ ಇದೆ. ಅಲ್ಲದೇ ದೇಶದ ಸಾಲದ ಪ್ರಮಾಣ ಜಿಡಿಪಿಗಿಂತ 70% ಏರಿಕೆಯಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

    ಸಾಲದ ಹೊರೆ ಹೆಚ್ಚಾಗಿದ್ದೇಕೆ?
    ದೇಶಿಯ ಸಾಲವು ವರ್ಷದಿಂದ ವರ್ಷಕ್ಕೆ ಶೇ.15 ರಷ್ಟು ಏರಿಕೆಯಾಗುತ್ತಿದೆ. ಇದರೊಂದಿಗೆ ಬಾಹ್ಯ ಸಾಲವು ವಾರ್ಷಿಕ ಶೇ.6 ರಷ್ಟು ಹೆಚ್ಚಾಗುತ್ತಾ ಬಂದಿದೆ. ಐಎಂಎಫ್‌, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB), ಇತರ ಬಹುಪಕ್ಷೀಯ ಸಂಸ್ಥೆಗಳಿಂದ ಸಂಸ್ಥೆಗಳಿಂದಲೂ ನಿಧಿಗಳು ಹರಿದುಬಂದಿದ್ದು, ಸಾಲದ ಹೊರೆ ಹೆಚ್ಚಾಗುತ್ತ ಸಾಗಿದೆ. ಇದನ್ನೂ ಓದಿ: Bihar Election 2025 | ಪಂಚಾಯತ್ ಪ್ರತಿನಿಧಿಗಳಿಗೆ ಪಿಂಚಣಿ, 50 ಲಕ್ಷ ವಿಮೆ, 5 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತೇಜಸ್ವಿ ಭರವಸೆ

  • ಪಾಕ್‌ನಲ್ಲಿ 4.7 ತೀವ್ರತೆಯ ಭೂಕಂಪ – ಮೂರು ದಿನಗಳಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ

    ಪಾಕ್‌ನಲ್ಲಿ 4.7 ತೀವ್ರತೆಯ ಭೂಕಂಪ – ಮೂರು ದಿನಗಳಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ

    ಇಸ್ಲಾಮಾಬಾದ್: ವಾರಾಂತ್ಯದಲ್ಲಿ ಸಂಭವಿಸಿದ್ದ ಎರಡು ಭೂಕಂಪನದ ಬಳಿಕ ಇದೀಗ ಮೂರನೇ ಬಾರಿಗೆ ಭೂಮಿ ಕಂಪಿಸಿದೆ. ಸೋಮವಾರ (ಅ.20) ಪಾಕಿಸ್ತಾನದಲ್ಲಿ (Pakistan) 10 ಕಿ.ಮೀ ಆಳದಲ್ಲಿ 4.7 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ.

    ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಅ.18 ಹಾಗೂ ಅ.19ರಂದು 4.0 ತೀವ್ರತೆಯಲ್ಲಿ ಭೂಮಿ ಕಂಪಿಸಿದ ಬಳಿಕ ಸೋಮವಾರ 4.7 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಬೆಳಗ್ಗೆ 11:12ರ ಸುಮಾರಿಗೆ ಭೂಮಿ ಕಂಪಿಸಿದ್ದು, ಈ ರೀತಿಯ ಭೂಕಂಪಗಳು ಹೆಚ್ಚು ಅಪಾಯಕಾರಿ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು – 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆರ್‌ಜೆಡಿ

    ಈ ಭೂಕಂಪನದಿಂದಾಗಿ ಪಂಜಾಬ್‌ನ ಡೇರಾ ಘಾಜಿ ಖಾನ್ ಸುತ್ತಮುತ್ತಿನ ಪ್ರದೇಶದ ಮೇಲೆ ಪರಿಣಾಮ ಬೀರಿದೆ.

    ಪಾಕಿಸ್ತಾನವು ವಿಶ್ವದ ಅತ್ಯಂತ ಭೂಕಂಪನಶೀಲ ದೇಶಗಳಲ್ಲಿ ಒಂದಾಗಿದೆ. ಬಲೂಚಿಸ್ತಾನ್, ಖೈಬರ್ ಪಖ್ತುನ್ಖ್ವಾ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್‌ನಂತಹ ಪ್ರಾಂತ್ಯಗಳು ಯುರೇಷಿಯನ್ ಪ್ಲೇಟ್‌ನ ದಕ್ಷಿಣ ಅಂಚಿನಲ್ಲಿದ್ದರೆ, ಸಿಂಧ್ ಮತ್ತು ಪಂಜಾಬ್ ಭಾರತೀಯ ಪ್ಲೇಟ್‌ನ ವಾಯುವ್ಯ ಅಂಚಿನಲ್ಲಿದ್ದು, ಆಗಾಗ್ಗೆ ಭೂಕಂಪಕ್ಕೆ ಕಾರಣವಾಗುತ್ತದೆ.

    ಅರೇಬಿಯನ್ ಮತ್ತು ಯುರೇಷಿಯನ್ ಟೆಕ್ಟೋನಿಕ್ ಪ್ಲೇಟ್‌ಗಳ ನಡುವಿನ ಸಕ್ರಿಯ ಗಡಿಯ ಬಳಿ ಇರುವ ಬಲೂಚಿಸ್ತಾನವು, 1945ರ ವಿನಾಶಕಾರಿ 8.1 ತೀವ್ರತೆಯ ಭೂಕಂಪ ಸೇರಿದಂತೆ ಬಲವಾದ ಭೂಕಂಪಗಳ ದೀರ್ಘ ಇತಿಹಾಸವನ್ನು ಹೊಂದಿದೆ.ಇದನ್ನೂ ಓದಿ: ದೀಪಾವಳಿ ಗಿಫ್ಟ್‌ – ದುಬಾರಿ ಕಾರುಗಳನ್ನೇ ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ

  • ಪಾಕಿಸ್ತಾನದಲ್ಲಿ ಬಾಂಬ್‌ ದಾಳಿ – ಕನಿಷ್ಠ 10 ಜನರು ಸಾವು

    ಪಾಕಿಸ್ತಾನದಲ್ಲಿ ಬಾಂಬ್‌ ದಾಳಿ – ಕನಿಷ್ಠ 10 ಜನರು ಸಾವು

    – 30ಕ್ಕೂ ಅಧಿಕ ಮಂದಿಗೆ ಗಾಯ

    ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

    ಮಂಗಳವಾರ (ಸೆ.30) ಬೆಳಗ್ಗೆ ಕ್ವೆಟ್ಟಾದ ಜರ್ಘೂನ್ ರಸ್ತೆಯಲ್ಲಿರುವ ಅರೆಸೈನಿಕ ಪಡೆಯ ಪ್ರಧಾನಿ ಕಚೇರಿ ಮೇಲೆ ಪ್ರಬಲವಾದ ಬಾಂಬ್‌ ಸ್ಫೋಟಗೊಂಡಿದೆ. ಪೊಲೀಸರ ಮಾಹಿತಿ ಪ್ರಕಾರ, ಸ್ಫೋಟದ ತೀವ್ರತೆಯಿಂದಾಗಿ ಸಮೀಪದ ಕಟ್ಟಡಗಳ ಬಾಗಿಲು ಹಾಗೂ ಕಿಟಕಿಗಳು ಪುಡಿಪುಡಿಯಾಗಿವೆ. ಸ್ಫೋಟದ ಸ್ವಲ್ಪ ಹೊತ್ತಿನ ನಂತರ ಗುಂಡಿನ ಚಕಮಕಿಯು ಕೇಳಿಬಂದಿದೆ ಎಂದು ತಿಳಿಸಿದ್ದಾರೆ.

    ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.ಇದನ್ನೂ ಓದಿ: ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    ಈ ಕುರಿತು ಬಲೂಚಿಸ್ತಾನದ ಆರೋಗ್ಯ ಸಚಿವ ಬಖ್ತ್ ಮುಹಮ್ಮದ್ ಕಾಕರ್ ಮಾತನಾಡಿ, ನಗರದಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ, ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದಾರೆ. ಇನ್ನೂ ಸ್ಫೋಟದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ಈಗಾಗಲೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹೊಗೆಯಾವರಿಸಿಕೊಂಡಿರುವುದು ಕಂಡುಬಂದಿದೆ.

    ಇದಕ್ಕೂ ಮುನ್ನ ಸೆ.4ರಂದು ಕ್ವೆಟ್ಟಾದಲ್ಲಿ ನಡೆದ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದರು ಮತ್ತು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.ಇದನ್ನೂ ಓದಿ: RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

  • ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

    ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

    – ದೇವರ ದಯೆಯಿಂದ ಮೊದಲಿಗಿಂತ ದೊಡ್ಡ ಮಸೀದಿ ನಿರ್ಮಾಣವಾಗ್ತಿದೆ; ವಿಡಿಯೋದಲ್ಲಿ ಹೇಳಿಕೆ

    ಇಸ್ಲಾಮಾಬಾದ್‌: ಆಪರೇಷನ್ ಸಿಂಧೂರದಲ್ಲಿ (Operation Sindoor) ಭಾರತೀಯ ಸೇನೆಯ ಶೌರ್ಯ, ಸಾಹಸ ಇಡೀ ವಿಶ್ವಕ್ಕೇ ಗೊತ್ತಾಗಿದೆ. ಭಾರತ ನಡೆಸಿದ ವಾಯುದಾಳಿಗೆ ಸಿಲುಕಿ ಪಾಕಿಸ್ತಾನ ಹಿಂಡಿ ಹಿಪ್ಪೆಯಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ಮುಗಿದು ಹಲವು ದಿನಗಳು ಕಳೆದರೂ ಅದರ ಪರಿಣಾಮಗಳು ಮಾತ್ರ ಇನ್ನೂ ಮುಗಿದಿಲ್ಲ. ಅದ್ರಲ್ಲೂ ಭಾರತದ ದಾಳಿಯಲ್ಲಿ ಏನೂ ಆಗೇ ಇಲ್ಲ ಎಂದು ಮೀಸೆ ತಿರುವುತ್ತಿರುವ ಪಾಕಿಸ್ತಾನದ (Pakistan) ಸುಳ್ಳುಗಳನ್ನು ಸ್ವತಃ ಅಲ್ಲಿನೇ ಉಗ್ರರೇ ಬಟಾಬಯಲು ಮಾಡುತ್ತಿದ್ದಾರೆ.

    ಈ ಹಿಂದೆ ಪಾಕಿಸ್ತಾನದ ಸುಳ್ಳುಗಳನ್ನು ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆ ಬಯಲು ಮಾಡಿತ್ತು. ಇದೀಗ ಲಷ್ಕರ್-ಎ-ತೊಯ್ಬಾ (Lashkar-e-Taiba) ಕೂಡ ಆಪರೇಷನ್‌ ಸಿಂಧೂರಕ್ಕೆ ಸಾಕ್ಷ್ಯ ನೀಡಿದೆ. ಭಾರತದ ‘ಆಪರೇಷನ್ ಸಿಂಧೂರ’ದ ಯಶಸ್ಸನ್ನು ಈ ಉಗ್ರಗಾಮಿ ಸಂಘಟನೆಯೇ ಒಪ್ಪಿಕೊಂಡಿದೆ. ಭಾರತೀಯ ಸೇನೆಯು ತಮ್ಮ ಪ್ರಮುಖ ಭಯೋತ್ಪಾದಕ ಶಿಬಿರವನ್ನು ನಾಶಪಡಿಸಿರುವುದಾಗಿ ಲಷ್ಕರ್ ಕಮಾಂಡರ್ ಖಾಸಿಂ ವೀಡಿಯೋ ಮೂಲಕ ಸತ್ಯ ಬಾಯ್ಬಿಟ್ಟಿದ್ದಾನೆ. ಇದನ್ನೂ ಓದಿ: ಪಾಕಿಸ್ತಾನ ನನ್ನ ಮನೆಯಂತೆ ಭಾಸವಾಗುತ್ತೆ, ಭಾರತ ಶಾಂತಿ ಮಾತುಕತೆ ನಡೆಸಬೇಕು: ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದ

    ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಖಾಸಿಂ, ನಾನೀಗ ಭಾರತ ದಾಳಿ ಮಾಡಿ ನಾಶಪಡಿಸಿದ ಮುರಿಡ್ಕೆಯ ಮರ್ಕಜ್ ತೈಬಾ ಕ್ಯಾಂಪ್ ಮುಂದೆ ಇದ್ದೀನಿ. ಈ ಶಿಬಿರವನ್ನ ಭಾರತೀಯ ಪಡೆಗಳು ಹೊಡೆದುರುಳಿಸಿವೆ. ಆದ್ರೆ ಕಟ್ಟಡದ ಮರುನಿರ್ಮಾಣ ಕಾರ್ಯ ನಡೆಯುತ್ತಿದೆ. ದೇವರ ದಯೆಯಿಂದ ಮೊದಲಿಗಿಂತಲೂ ದೊಡ್ಡ ಮಸೀದಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾನೆ.

    ಆಪರೇಷನ್‌ ಸಿಂಧೂರಕ್ಕೆ ಕಾರಣ ಏನು?
    ಏಪ್ರಿಲ್‌ 22ರಂದು ಸೈನಿಕರ ಸೋಗಿನಲ್ಲಿ ಬಂದಿದ್ದ ಪಾಕ್‌ ಮೂಲದ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನೆತ್ತರ ಕೋಡಿ ಹರಿಸಿದ್ದರು. ಓರ್ವ ವಿದೇಶಿಗ ಸೇರಿ 26 ಪ್ರವಾಸಿಗರ ನರಮೇಧ ನಡೆಸಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತ ಮೇ 7ರ ರಾತ್ರಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಅಡಗು ತಾಣಗಳ ಮೇಲೆ ದಾಳಿ ನಡೆಸಿತ್ತು. ಇದನ್ನೂ ಓದಿ: ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

    ಇತ್ತ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜರಲ್ ಅನಿಲ್ ಚೌಹಾಣ್ ಮಧ್ಯರಾತ್ರಿ 1 ಗಂಟೆಗೆ ಯಾಕೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಲಾಯ್ತು ಅನ್ನೋದರ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ. ಬೆಳಗಿನ ಜಾವದ ನಮಾಜ್ ಮಾಡುವ ಸಮಯವನ್ನು ತಪ್ಪಿಸುವ ಸಲುವಾಗಿ ಈ ಯೋಜನೆ ಮಾಡಬೇಕಾಯ್ತು. ಆ ಸಮಯದಲ್ಲಿ ಅಲ್ಲಿನ ಸಾಕಷ್ಟು ಜನ ತೊಂದರೆಗೆ ಸಿಲುಕಬಹುದು ಅಂತ ಮಧ್ಯರಾತ್ರಿ ವೇಳೆ ಕಾರ್ಯಾಚರಣೆ ಮಾಡಿದ್ದೇವು ಎಂದಿದ್ದಾರೆ. ಇದನ್ನೂ ಓದಿ: ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA

  • ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

    ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

    ಇಸ್ಲಾಮಾಬಾದ್:‌ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸೋದನ್ನ ಮುಂದುವರಿಸಿದ್ರೆ ನಾವು ಯುದ್ಧದಿಂದ ಹಿಂದೆ ಸರಿಯಲ್ಲ ಅಂತ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಭಾರತಕ್ಕೆ ಬೆದರಿಕೆಯೊಡ್ಡಿದ್ದಾರೆ.

    ಸಿಂಧ್ ಸರ್ಕಾರದ ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಿರುವುದು ಸಿಂಧೂ ಕಣಿವೆ ನಾಗರಿಕತೆ ಮತ್ತು ಸಂಸ್ಕೃತಿಯ ಮೇಲೆ ಭಾರತ ಮಾಡುತ್ತಿರುವ ದಾಳಿಯಾಗಿದೆ. ಪಾಕಿಸ್ತಾನ ಯಾವಾಗಲೂ ಶಾಂತಿಯನ್ನ ಪ್ರತಿಪಾದಿಸುತ್ತೆ. ಆದ್ರೆ ಭಾರತ ಯುದ್ಧಕ್ಕೆ ಒತ್ತಾಯಿಸಿದರೆ, ನಾವು ಹಿಂದೆ ಸರಿಯಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: 1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ

    bilawal bhutto

    ಮೋದಿ ಸರ್ಕಾರಕ್ಕೆ ನಾವು ಒಂದು ಸಂದೇಶ ಕಳಿಸುತ್ತೇವೆ. ನಾವು ಯಾವುದಕ್ಕೂ ಹಿಂದೆ ಸರಿಯುವುದಿಲ್ಲ, ತಲೆಬಾಗುವುದಿಲ್ಲ ಮತ್ತು ನೀವು ಸಿಂಧೂ ನದಿಯನ್ನು ಅತಿಕ್ರಮಿಸಲು ಧೈರ್ಯ ಮಾಡಿದರೆ, ಪಾಕಿಸ್ತಾನದ ಪ್ರತಿಯೊಂದು ಪ್ರಾಂತ್ಯದ ಜನರು ನಿಮ್ಮೊಂದಿಗೆ ಹೋರಾಡಲು ಸಿದ್ಧರಿರುತ್ತಾರೆ ಭುಟ್ಟೋ ಹೇಳಿದ್ದಾರೆ. ಇದನ್ನೂ ಓದಿ: ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಿದ್ದೇಕೆ?
    ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ 1960ರ ಸಿಂಧೂ ಜಲ ಒಪ್ಪಂದವನ್ನ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಕ್ಕೆ ಬ್ರೇಕ್‌ ಹಾಕಿತು. ಇದನ್ನೂ ಓದಿ: ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕನ ಕತ್ತು ಹಿಡಿದು ಹೊರದಬ್ಬಿದೆ ಕಾಂಗ್ರೆಸ್: ಪ್ರಹ್ಲಾದ್ ಜೋಶಿ

  • ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

    ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

    – ಭಾರತ – ಪಾಕಿಸ್ತಾನ ಎರಡರೊಂದಿಗೂ ಸಂಬಂಧ ಕಾಪಾಡಿಕೊಳ್ಳುವುದಾಗಿ ಪ್ರತಿಪಾದನೆ

    ವಾಷಿಂಗ್ಟನ್‌: ಭಯೋತ್ಪಾದನೆ (Terrorism) ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಅದ್ಭುತ ಪಾಲುದಾರ ಎಂದು ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ನ ಕಮಾಂಡರ್ ಜನರಲ್ ಮೈಕೆಲ್ ಕುರಿಲ್ಲಾ (Michael Kurilla) ಬಣ್ಣಿಸಿದ್ದಾರೆ.

    ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್‌ ಮಾರ್ಷಲ್‌ ಅಸೀಮ್‌ ಮುನೀರ್‌ (Asim Munir) ಅವರನ್ನು ಆಹ್ವಾನಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮುಂದಾಗಿದ್ದಾರೆ. ಈ ನಡುವೆ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್-ಖೋರಾಸನ್) ಉಗ್ರರನ್ನು ಸದೆಬಡಿಯುವಲ್ಲಿ ಪಾಕಿಸ್ತಾನ (Pakistan) ನೀಡಿದ ಸಹಕಾರವನ್ನು ಅಮೆರಿಕ ಮಿಲಿಟರಿ ಕಮಾಂಡರ್‌ ಹಾರಿ ಹೊಗಳಿದ್ದಾರೆ.

    ಅಮೆರಿಕದ ಸಂಸತ್ತಿನಲ್ಲಿ ಸಶಸ್ತ್ರ ಸೇವೆಗಳ ಸಮಿತಿ ವಿಚಾರಣೆ ಸಂದರ್ಭದಲ್ಲಿ ಕುರಿಲ್ಲಾ ಮಾತನಾಡಿದ್ದು, ಇಸ್ಲಾಮಾಬಾದ್‌ ಪಾತ್ರವನ್ನು ಹಾಡಿಹೊಗಳಿದ್ದಾರೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಭಯೋತ್ಪಾದನೆ ಪ್ರಾಯೋಜಿತ ಪಾಕ್‌ ಮುಖವಾಡವನ್ನು ಬಯಲುಮಾಡಲು ಭಾರತ ಸರ್ವಪಕ್ಷ ನಿಯೋಗವನ್ನು ವಿದೇಶಗಳಿಗೆ ಕಳುಹಿಸಿದೆ. ಈ ಹೊತ್ತಿನಲ್ಲೇ ಪಾಕಿಸ್ತಾನವನ್ನು ಅಮೆರಿಕ ಮಿಲಿಟರಿ ಅಧಿಕಾರಿ ಹಾಡಿಹೊಗಳಿದ್ದಾರೆ. ಅಲ್ಲದೇ ನಾವು ಪಾಕಿಸ್ತಾನ ಮತ್ತು ಭಾರತ ಎರಡೂ ದೇಶಗಳೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವುದಾಗಿಯೂ ಪ್ರತಿಪಾದಿಸಿದ್ದಾರೆ.

    ಪಾಕಿಸ್ತಾನ ಪ್ರಸ್ತುತ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ, ಹಾಗೂ ಭಯೋತ್ಪಾದನೆ ನಿಗ್ರಗದಲ್ಲಿ ಅಭೂತಪೂರ್ವ ಪಾಲುದಾರನಾಗಿದೆ ಎಂದರಲ್ಲದೇ ನವದೆಹಲಿ ಮತ್ತು ಇಸ್ಲಾಮಾಬಾದ್/ರಾವಲ್ಪಿಂಡಿ ಎರಡರೊಂದಿಗೂ ವಾಷಿಂಗ್ಟನ್ ಬಲವಾದ ಸಂಬಂಧ ಹೊಂದಿರಬೇಕು. ಭಯೋತ್ಪಾದನೆಯ ವಿರುದ್ಧದ ಅಮೆರಿಕದ ಹೋರಾಟಕ್ಕೆ ಭಾರತ, ಪಾಕಿಸ್ತಾನ ಎರಡೂ ರಾಷ್ಟ್ರಗಳ ನೆರವು ಬೇಕೆಂದು ಮನವಿ ಮಾಡಿದ್ದಾರೆ.

    ಅಫ್ಘಾನಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಐಸಿಸ್-ಖೋರಾಸನ್, ಅಮೆರಿಕದಲ್ಲಿ ಮಾತ್ರವಲ್ಲದೇ ವಿಶ್ವದಾದ್ಯಂತ ವಿವಿಧೆಡೆ ಭಯೋತ್ಪಾದಕ ದಾಳಿ ನಡೆಸುತ್ತಿರುವ ಸಕ್ರೀಯ ಸಂಘಟನೆಗಳಲ್ಲಿ ಒಂದಾಗಿದೆ. ಆದ್ರೆ ಇಸ್ಲಾಮಾಬಾದ್ ಐಸಿಸ್ ಹೋರಾಟಗಾರರನ್ನು ಗುರಿಯಾಗಿಸಲು ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ಡಜನ್ಗಟ್ಟಲೆ ಕಾರ್ಯಾಚರಣೆ ನಡೆಸಿದೆ ಎಂದು ಶ್ಲಾಘಿಸಿದ್ದಾರೆ.

    ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಹೊಣೆಗಾರರನ್ನಾಗಿ ಮಾಡಲು ಭಾರತವು ರಾಜತಾಂತ್ರಿಕ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಕುರಿಲ್ಲಾ ಅವರ ಹೇಳಿಕೆಗಳು ಬಂದಿವೆ.

  • ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

    ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

    – ರಾವಲ್ಪಿಂಡಿ ಏರ್‌ಪೋರ್ಟ್ ಧ್ವಂಸ ಆಗಿರೋದು ನಿಜ ಎಂದ ಶೆಹಬಾಜ್‌ ಷರೀಫ್‌

    ಇಸ್ಲಾಮಾಬಾದ್‌: ಆಪರೇಷನ್ ಸಿಂಧೂರದ (Operation Sindoor) ಪರಾಕ್ರಮದ ಬಗ್ಗೆ ಪಾಕ್ ಪ್ರಧಾನಿ ಮತ್ತಷ್ಟು ಸತ್ಯ ಬಾಯಿಬಿಡ್ತಿದ್ದಾರೆ. ರಾವಲ್ಪಿಂಡಿ ಏರ್‌ಪೋರ್ಟ್ ಮೇಲೆ ಬ್ರಹ್ಮೋಸ್ ಕ್ಷಿಪಣಿಯ (BrahMos Missile) ದಾಳಿ ಆಯಿತು. ನಾವು ಪ್ಲ್ಯಾನ್‌ ಮಾಡುವ ಮೊದಲೇ ಅವರು ದಾಳಿ ಮಾಡಿದ್ದರು. ಇದು ನಮ್ಮ ಮಿಲಿಟರಿ ವೈಫಲ್ಯ ಅಂತ ಪಾಕ್ ಪ್ರಧಾನಿ ಶೆಹಬಾಜ್‌ ಷರೀಫ್ ಒಪ್ಪಿಕೊಂಡಿದ್ದಾರೆ.

    ಅಜೆರ್ಬೈಜಾನ್‌ನ ಲಾಚಿನ್‌ನಲ್ಲಿ ನಡೆದ ಪಾಕಿಸ್ತಾನ-ಟರ್ಕಿ-ಅಜೆರ್ಬೈಜಾನ್ ತ್ರಿಪಕ್ಷೀಯ ಶೃಂಗಸಭೆಯಲ್ಲಿ (Pakistan-Turkey-Azerbaijan Trilateral Summit) ಮಾತನಾಡಿದ ಷರೀಫ್, ಮೇ 10ರಂದು ಬೆಳಗ್ಗಿನ ಜಾವ 4:30ಕ್ಕೆ ಪ್ರಾರ್ಥನೆ ಬಳಿಕ ಭಾರತದ ಮೇಲೆ ದಾಳಿ ಮಾಡಲು ಫೀಲ್ಡ್ ಮಾರ್ಷಲ್ ಅಸೀಮ್‌ ಮುನೀರ್ ನೇತೃತ್ವದ ನಮ್ಮ ಸೇನೆಯು ಪ್ಲ್ಯಾನ್‌ ಮಾಡಿತ್ತು. ಆದ್ರೆ ಭಾರತ ನಮ್ಮ ಯೋಜಿತ ದಾಳಿಯನ್ನೆಲ್ಲ ತಲೆಕೆಳಗೆ ಮಾಡಿತು ಅಂತ ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

    ನಾವು ದಾಳಿ ಮಾಡುವ ಮೊದಲೇ ಭಾರತ ಬ್ರಹ್ಮೋಸ್‌ನಿಂದ (ಸೂಪರ್‌ ಸಾನಿಕ್‌ ಕ್ರೂಸ್‌ ಕ್ಷಿಪಣಿ) ಪಾಕ್‌ನ ಹಲವು ಮಿಲಿಟರಿ ಕೇಂದ್ರಗಳು ಹಾಗೂ ವಾಯುನೆಲೆಗಳ ಮೇಲೆ ದಾಳಿ ಮಾಡಿತ್ತು. ನಮ್ಮ ಕಾರ್ಯತಂತ್ರದ ನೆಲೆಗಳನ್ನೂ ನಾಶಗೊಳಿಸಿತು. ಪಾಕಿಸ್ತಾನದ ವಿವಿಧ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡು ಬ್ರಹ್ಮೋಸ್‌ ಕ್ಷಿಪಣಿ ದಾಳಿ ನಡೆಸಿದಾಗ ರಾವಲ್ಪಿಂಡಿಯ ನೂರ್‌ ಖಾನ್‌ ಮತ್ತು ಮುರಿಯ್‌ನ (ಚಕ್ವಾಲ್‌) ವಾಯುನೆಲೆಗಳು ಧ್ವಂಸವಾದವು. ಇದರಿಂದ ನಮ್ಮ ಯೋಜಿತ ದಾಳಿ ತಲೆಕೆಳಗಾಯಿತು. ಇದನ್ನೂ ಓದಿ: ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್‌ ಆತಂಕ, ಪಾಕ್‌ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?

    ಆಪರೇಷನ್‌ ಸಿಂಧೂರ ಭಾಗವಾಗಿ ಭಾರತ‌ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್‌ ಅನ್ನು ಪ್ರಯೋಗಿಸಿತ್ತು. ಇದಾದ ಬಳಿಕ ಪಾಕ್‌ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಚೀನಾ ನಿರ್ಮಿತ ಡ್ರೋನ್‌ಗಳನ್ನು ಹಾರಿಸಿತ್ತು. ಇದನ್ನೂ ನಮ್ಮ ವಾಯುರಕ್ಷಣಾ ವ್ಯವಸ್ಥೆ ಎಸ್‌-400 ವಿಫಲಗೊಳಿಸಿತು.  ಇದನ್ನೂ ಓದಿ: ಗೋಲ್ಡನ್‌ ಡೋಮ್;‌ ಕ್ಷಿಪಣಿ ದಾಳಿಯಿಂದ ಅಮೆರಿಕ ರಕ್ಷಣೆಗೆ ಬಾಹ್ಯಾಕಾಶದಲ್ಲಿ ರಕ್ಷಾಕವಚ

  • ಭಾರತದ ದಾಳಿಗೆ ಬೆದರಿ ರಾವಲ್ಪಿಂಡಿಯಿಂದ ಪಾಕ್‌ ಸೇನಾ ಪ್ರಧಾನ ಕಚೇರಿ ಇಸ್ಲಾಮಾಬಾದ್‌ಗೆ ಶಿಫ್ಟ್‌!

    ಭಾರತದ ದಾಳಿಗೆ ಬೆದರಿ ರಾವಲ್ಪಿಂಡಿಯಿಂದ ಪಾಕ್‌ ಸೇನಾ ಪ್ರಧಾನ ಕಚೇರಿ ಇಸ್ಲಾಮಾಬಾದ್‌ಗೆ ಶಿಫ್ಟ್‌!

    – ಚಕ್ಲಾಲಾದ ವಾಯುನೆಲೆಯ ಮೇಲೆ ಭಾರತ ದಾಳಿ

    ಇಸ್ಲಾಮಾಬಾದ್‌: ಭಾರತದ (India) ದಾಳಿಗೆ ಬೆದರಿರುವ ಪಾಕಿಸ್ತಾನ (Pakistan) ಸೇನೆ ರಾವಲ್ಪಿಂಡಿಯಲ್ಲಿರುವ ತನ್ನ ಪ್ರಧಾನ ಕಚೇರಿಯನ್ನು (GHQ) ರಾಜಧಾನಿ ಇಸ್ಲಾಮಾಬಾದ್‌ಗೆ (Islamabad) ಶಿಫ್ಟ್‌ ಮಾಡಲು ಮುಂದಾಗುತ್ತಿದೆ.

    ಸದ್ಯ ಪಾಕಿಸ್ತಾನದ ಸೇನಾ ಜನರಲ್ ಪ್ರಧಾನ ಕಚೇರಿ(GHQ) ರಾವಲ್ಪಿಂಡಿಯ ಚಕ್ಲಾಲಾದ ನೂರ್‌ ಖಾನ್‌ ವಾಯು ನೆಲೆಯ ಬಳಿಯಿದೆ. ಮೇ 10 ರಂದು ಭಾರತ ಪಾಕ್‌ ವಾಯುನೆಲೆಯಗಳ ಮೇಲೆ ಭೀಕರ ವಾಯುದಾಳಿ ನಡೆಸಿತು. ಚಕ್ಲಾಲಾ ವಾಯು ನೆಲೆ ಮೇಲೆಯೂ ದಾಳಿ ನಡೆಸಿ ಧ್ವಂಸ ಮಾಡಿತ್ತು.

    ಭವಿಷ್ಯದಲ್ಲಿ ಭಾರತ ದಾಳಿ ಮಾಡಬಹುದು ಎಂಬ ಭೀತಿ ಎದುರಿಸುತ್ತಿರುವ ಪಾಕಿಸ್ತಾನ ಸೇನೆ ತನ್ನ ಪ್ರಧಾನ ಕಚೇರಿಯನ್ನು ಇಸ್ಲಾಮಾಬಾದ್‌ಗೆ ಸ್ಥಳಾಂತರಿಸಲು ಮುಂದಾಗುತ್ತಿದೆ ಎಂದು ವರದಿಯಾಗಿದೆ.

    ಇಸ್ಲಾಮಾಬಾದ್‌ನಿಂದ ಕೇವಲ 10 ಕಿಲೋಮೀಟರ್ ದೂರದಲ್ಲಿರುವ ರಾವಲ್ಪಿಂಡಿಯ (Rawalpindi) ಚಕ್ಲಾಲಾ ನೂರ್ ಖಾನ್ ವಾಯುನೆಲೆಯು ಪಾಕಿಸ್ತಾನದ GHQ ಪಕ್ಕದಲ್ಲಿದೆ ಮತ್ತು ಪ್ರಮುಖ ಸಾರಿಗೆ ವಿಮಾನಗಳು, ಕಣ್ಗಾವಲು ವ್ಯವಸ್ಥೆಗಳು ಮತ್ತು ಇಂಧನ ತುಂಬುವ ಸ್ಕ್ವಾಡ್ರನ್‌ಗಳನ್ನು ಹೊಂದಿದೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?

    ತನ್ನ ಸೇನಾ ಜನರಲ್ ಪ್ರಧಾನ ಕಚೇರಿಯ ಜೊತೆ ಸೇನಾ ಮುಖ್ಯಸ್ಥರ ನಿವಾಸವನ್ನು ಸಹ ಸ್ಥಳಾಂತರಿಸಲಾಗುತ್ತದೆ ಎಂದು ವರದಿಯಾಗಿದೆ.

    ಭಾರತದ ದಾಳಿಗೆ ಬೆದರಿದ ಪಾಕ್‌ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ (Asim Munir) ಜೀವಭಯದಿಂದ ಸೇನಾ ಬಂಕರ್‌ (Bunker) ಒಳಗಡೆ ಅಡಗಿದ್ದ ವಿಚಾರ 4 ದಿನ ಹಿಂದೆ ಬೆಳಕಿಗೆ ಬಂದಿತ್ತು.  ಇದನ್ನೂ ಓದಿ: IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್

    ರಾವಲ್ಪಿಂಡಿಯಲ್ಲಿರುವ ನೂರ್‌ ಖಾನ್‌ ನೆಲೆಯ ಮೇಲೆ ದಾಳಿ ನಡೆಸಿದ ನಂತರ ಮುಂದೆ ಭಾರತ ತನ್ನ ಮೇಲೂ ದಾಳಿ ನಡೆಸಬಹುದು ಎಂದು ಭಾವಿಸಿ ಮುನೀರ್‌ ಜನರಲ್ ಹೆಡ್‌ಕ್ವಾರ್ಟರ್ಸ್ (ಜಿಎಚ್‌ಕ್ಯು) ನಲ್ಲಿರುವ ಕೋಟೆಯ ಬಂಕರ್‌ ಒಳಗಡೆ ಅಡಗಿದ್ದರು ಎಂಬ ಮಾಹಿತಿ ಸರ್ಕಾರಿ ಮೂಲಗಳಿಂದ ಬಂದಿದೆ. ಸುಮಾರು 2 ರಿಂದ 3 ಗಂಟೆಗಳ ಕಾಲ ಮುನೀರ್‌ ಬಂಕರ್‌ ಒಳಗಡೆಯೇ ಇದ್ದರು. ಪರಿಸ್ಥಿತಿ ಸುಧಾರಿಸಿದ ಬಳಿಕ ಮುನೀರ್‌ ಹೊರಗಡೆ ಬಂದು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರು.

  • ಪಾಕ್‌ ತತ್ತರ – ಇಸ್ಲಾಮಾಬಾದ್‌ನಲ್ಲಿ 48 ಗಂಟೆಗಳವರೆಗೆ ಪೆಟ್ರೋಲ್ ಪಂಪ್‌ಗಳು ಬಂದ್‌

    ಪಾಕ್‌ ತತ್ತರ – ಇಸ್ಲಾಮಾಬಾದ್‌ನಲ್ಲಿ 48 ಗಂಟೆಗಳವರೆಗೆ ಪೆಟ್ರೋಲ್ ಪಂಪ್‌ಗಳು ಬಂದ್‌

    ಇಸ್ಲಾಮಾಬಾದ್‌: ಭಾರತದ ದಾಳಿಯಿಂದ (India’s Strike) ದಿವಾಳಿಯತ್ತ ಸಾಗುತ್ತಿರುವ ಪಾಕಿಸ್ತಾನದಲ್ಲೀಗ ( ಇಂಧನ ಕೊರತೆ ಎದುರಾಗಿದೆ. ರಾಜಧಾನಿ ಇಸ್ಲಾಮಾಬಾದ್‌ ಆಡಳಿತ ಮುಂದಿನ 48 ಗಂಟೆಗಳ ಕಾಲ ಎಲ್ಲಾ ಪೆಟ್ರೋಲ್‌ ಪಂಪ್‌ಗಳನ್ನು ಸಂಪೂರ್ಣವಾಗಿ ಬಂದ್‌ (Petrol Pumps Shut) ಮಾಡುವಂತೆ ಆದೇಶ ಹೊರಡಿಸಿದೆ.

    ಇಸ್ಲಾಮಾಬಾದ್‌ (Islamabad) ಆಡಳಿತ ಹೊರಡಿಸಿದ ಅಧಿಕೃತ ಸೂಚನೆಯಲ್ಲಿ ನಿಖರ ಕಾರಣ ಉಲ್ಲೇಖಿಸದೇ, ಎಲ್ಲಾ ಪೆಟ್ರೋಲ್‌ ಪಂಪ್‌ಗಳನ್ನು ಕೂಡಲೇ ಮುಚ್ಚಬೇಕೆಂದು ಕಟ್ಟಾಜ್ಞೆ ಮಾಡಿದೆ. ಈ ಆದೇಶ ಶನಿವಾರ ಮುಂಜಾನೆ ಹೊರಡಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಶಕ್ತಿಶಾಲಿ ಅಸ್ತ್ರಗಳಿಂದಲೇ ಪಾಕ್‌ಗೆ ಶತಕೋಟಿ ಲಾಸ್‌ – ದಿವಾಳಿಯತ್ತ ʻಭಿಕಾರಿಸ್ತಾನʼ

    ಇದರಿಂದ 48 ಗಂಟೆ ವರೆಗೆ ಇಸ್ಲಾಮಾಬಾದ್‌ನಲ್ಲಿ ಖಾಸಗಿ ವಾಹನಗಳು, ಸಾರ್ವಜನಿಕ ಸಾರಿಗೆ ಹಾಗೂ ವಾಣಿಜ್ಯ ವಾಹನಗಳಿಗೆ ಇಂಧನ ಲಭ್ಯವಾಗದೇ ಎಲ್ಲಾ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದೆ. ಜೊತೆಗೆ ಈ ಬೆಳವಣಿಗೆ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ ತಂದೊಡ್ಡುತ್ತಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ದೆಹಲಿಗೆ ಬರುತ್ತಿದ್ದ ಪಾಕ್‌ ಬ್ಯಾಲಿಸ್ಟಿಕ್‌ ಮಿಸೈಲ್‌ ಹರ್ಯಾಣದಲ್ಲೇ ಛಿದ್ರ!

    ಭಾರತದ ʻಆಪರೇಷನ್‌ ಸಿಂಧೂರʼ (Operation Sindoor) ಎಫೆಕ್ಟ್‌ ಪಾಕಿಸ್ತಾನದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಭಾರತ ನಡೆಸಿದ ವಾಯುದಾಳಿಗೆ ಪತರುಗುಟ್ಟಿಹೋಗಿರುವ ಪಾಕ್‌ ತಾನು ನಂಬಿದ್ದ ಶಕ್ತಿಶಾಲಿ ಅಸ್ತ್ರಗಳಿಂದಲೇ ಶತಕೋಟಿ ನಷ್ಟ ಅನುಭವಿಸಿದೆ. ಇದರಿಂದ ಪಾಕಿಸ್ತಾನದ ಆರ್ಥಿಕ ಸ್ಥಿತಿ ಈಗಾಗಲೇ ಅಧೋಗತಿ ತಲುಪಿದ್ದು, ದಿವಾಳಿಯ ಆಗುವ ಹಂತಕ್ಕೆ ತಲುಪಿದೆ. ಇದನ್ನೂ ಓದಿ: ವಾಯುನೆಲೆಯ ಮೇಲೆ ಭಾರತ ದಾಳಿ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಅಲ್ಲೋಲ ಕಲ್ಲೋಲ

    ಭಾರತದ ವಿರುದ್ಧದ ಹೋರಾಟಕ್ಕೂ ಭಿಕ್ಷೆ ಬೇಡುವ ಪರಿಸ್ಥಿತಿಗೆ ತಲುಪಿದೆ. ಭಾರತದ ದಾಳಿಯಿಂದ ತನಗೆ ಭಾರೀ ನಷ್ಟವಾಗವಾಗಿದ್ದು ಸಾಲ ನೀಡುವಂತೆ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಬೇಡಿಕೆ ಇಟ್ಟಿದೆ. ಪಾಕಿಸ್ತಾನದ ಆರ್ಥಿಕ ಇಲಾಖೆಯ ಆರ್ಥಿಕ ವ್ಯವಹಾರಗಳ ವಿಭಾಗದ ಸಾಮಾಜಿಕ ಜಾಲತಾಣ ʻxʼ ಖಾತೆಯಲ್ಲಿ ಸಾಲಕ್ಕಾಗಿ ಅಧಿಕೃತ ಮನವಿ ಮಾಡಿಕೊಂಡಿದೆ. ಇದು ವಿಶ್ವಮಟ್ಟದಲ್ಲಿ ಟೀಕೆಗೆ ಒಳಗಾಗುತ್ತಿದ್ದಂತೆ ವರಸೆ ಬದಲಿಸಿದ ಪಾಕ್‌ ʻತನ್ನ ಎಕ್ಸ್‌ ಖಾತೆ ಹ್ಯಾಕ್‌ ಆಗಿದೆʼ ಎಂದು ಹೇಳಿಕೊಂಡಿದೆ. ಇದಾದ ಬಳಿಕ ಭಾರತದ ಆಕ್ಷೇಪದ ನಡುವೆಯೂ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) 2 ಕಂತುಗಳಲ್ಲಿ 19 ಸಾವಿರ ಕೋಟಿ ಸಾಲ ಮಂಜೂರು ಮಾಡಿದೆ.

  • ಭಾರತದ ದಾಳಿಗೆ ಬೆಚ್ಚಿದ ಪಾಕ್‌ – ಅಣ್ವಸ್ತ್ರ ನಿರ್ಧಾರ ಕೈಗೊಳ್ಳುವ ತುರ್ತು ಸಭೆ ಕರೆದ ಪ್ರಧಾನಿ

    ಭಾರತದ ದಾಳಿಗೆ ಬೆಚ್ಚಿದ ಪಾಕ್‌ – ಅಣ್ವಸ್ತ್ರ ನಿರ್ಧಾರ ಕೈಗೊಳ್ಳುವ ತುರ್ತು ಸಭೆ ಕರೆದ ಪ್ರಧಾನಿ

    ಇಸ್ಲಾಮಾಬಾದ್‌: ಭಾರತದ (India) ದಾಳಿಗೆ ತತ್ತರಿಸಿದ ಪಾಕಿಸ್ತಾನ (Pakistan) ಈಗ ಪರಮಾಣು ಶಸ್ತ್ರಾಸ್ತ್ರ ಬಳಕೆಯ ಬಗ್ಗೆ  ನಿರ್ಧಾರ ಕೈಗೊಳ್ಳುವ ಸಭೆಯನ್ನು ಕರೆದಿದೆ.

    ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಅವರು National Command Authority ತುರ್ತು ಸಭೆಯನ್ನು ಕರೆದಿದ್ದಾರೆ. ಇದು ದೇಶದ ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಮತ್ತು ಕಾರ್ಯಾಚರಣೆಯ  ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಮಾತ್ರ ಈ ಸಭೆಯನ್ನು ಕರೆಯಲಾಗುತ್ತದೆ. ಇದನ್ನೂ ಓದಿ: ದೆಹಲಿಗೆ ಬರುತ್ತಿದ್ದ ಪಾಕ್‌ ಬ್ಯಾಲಿಸ್ಟಿಕ್‌ ಮಿಸೈಲ್‌ ಹರ್ಯಾಣದಲ್ಲೇ ಛಿದ್ರ!

     

    ಭಾರತ ಮತ್ತು ಪಾಕಿಸ್ತಾನ ಎರಡೂ ಪರಮಾಣು ಬಾಂಬ್‌ ಹೊಂದಿದೆ. ಭಾರತ ತಾನೂ ಯಾವತ್ತೂ ಮೊದಲು ಪರಮಾಣು ಅಸ್ತ್ರವನ್ನು ಪ್ರಯೋಗಿಸುವುದಿಲ್ಲ ಎಂದು ವಿಶ್ವಕ್ಕೆ ಹೇಳಿದೆ. ಆದರೆ ತನ್ನ ಮೇಲೆ ಪ್ರಯೋಗ ಮಾಡಿದರೆ ಪ್ರಯೋಗಿಸುತ್ತೇನೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಶಕ್ತಿಶಾಲಿ ಅಸ್ತ್ರಗಳಿಂದಲೇ ಪಾಕ್‌ಗೆ ಶತಕೋಟಿ ಲಾಸ್‌ – ದಿವಾಳಿಯತ್ತ ʻಭಿಕಾರಿಸ್ತಾನʼ

    ಈ ಹಿಂದೆ ರಷ್ಯಾ-ಉಕ್ರೇನ್‌, ಇಸ್ರೇಲ್‌-ಹಮಾಸ್‌, ಇರಾನ್‌ ಯುದ್ಧ ನಡೆಯುವಾಗಲೂ ಪರಮಾಣು ಬಾಂಬ್‌ ಬಳಸುವ ಬಗ್ಗೆ ಬಹಳಷ್ಟು ಸುದ್ದಿಗಳು ಪ್ರಕಟವಾಗಿದ್ದವು. ಆದರೆ ಯಾರೂ ಅಣು ಬಾಂಬ್‌ ಪ್ರಯೋಗಿಸುವ ಧೈರ್ಯ ಮಾಡಿರಲಿಲ್ಲ. ಒಂದು ವೇಳೆ ಯಾವುದಾದರೂ ದೇಶ ಪರಮಾಣು ಬಾಂಬ್‌ ಬಳಸಿದರೆ ಆ ದೇಶದ ಜೊತೆ ವಿಶ್ವವೇ ಆರ್ಥಿಕ ಸಂಬಂಧವನ್ನೇ ಕಳೆದುಕೊಳ್ಳುತ್ತದೆ. ಹೀಗಾಗಿ ಎರಡನೇ ಮಹಾಯುದ್ಧದ ಬಳಿಕ ಇಲ್ಲಿಯವರೆಗೆ ಯಾವುದೇ ದೇಶ ಪರಮಾಣು ಅಸ್ತ್ರವನ್ನು ಬಳಸಿಲ್ಲ.