Tag: ಇ.ಡಿ ವಿಚಾರಣೆ

  • ಮುಡಾ ಕೇಸಲ್ಲಿ ಆಪ್ತರಿಗೆ ಸತತ 9 ಗಂಟೆ ಇಡಿ ಡ್ರಿಲ್; ಸಿಎಂಗೂ ಸಮನ್ಸ್ ಸಾಧ್ಯತೆ

    ಮುಡಾ ಕೇಸಲ್ಲಿ ಆಪ್ತರಿಗೆ ಸತತ 9 ಗಂಟೆ ಇಡಿ ಡ್ರಿಲ್; ಸಿಎಂಗೂ ಸಮನ್ಸ್ ಸಾಧ್ಯತೆ

    – ಮರೀಗೌಡ, ನಟೇಶ್ ಸೇರಿ ನಾಲ್ವರಿಗೆ ವಿಚಾರಣೆ

    ಬೆಂಗಳೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸ್ತಿರುವ ತನಿಖೆ ಸಿಎಂ ಆಪ್ತೇಷ್ಠರ ಬುಡಕ್ಕೆ ಬಂದು ನಿಂತಿದೆ. ಮುಡಾ ಮಾಜಿ ಅಧ್ಯಕ್ಷ ಮರೀಗೌಡ, ಶಿವಣ್ಣ, ಮಾಜಿ ಆಯುಕ್ತ ನಟೇಶ್, 2004ರಲ್ಲಿ ಮೈಸೂರು ತಹಶೀಲ್ದಾರ್ ಆಗಿದ್ದ ಮಾಳಿಗೆ ಶಂಕರ್‌ರನ್ನು ಇಡಿ ವಿಚಾರಣೆಗೆ ಒಳಪಡಿಸಿದೆ.

    ಸತತ 9 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಶಿವಣ್ಣ ಸಂಜೆ ಹೊತ್ತಿಗೆ ಅಸ್ವಸ್ಥಗೊಂಡ್ರು. ಕೂಡ್ಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಇನ್ನು, ಈ ಕ್ಷಣದವರೆಗೂ ಮರೀಗೌಡ, ಮಾಳಿಗೆ ಶಂಕರ್ ವಿಚಾರಣೆಯನ್ನು ಇಡಿ ಮುಂದುವರೆಸಿದೆ. ಇನ್ನು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಇಡಿ ಸಮನ್ಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: 17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು

    ಈ ಮಧ್ಯೆ ಮುಡಾದ ಮತ್ತಷ್ಟು ಅಕ್ರಮಗಳು ಬಹಿರಂಗಗೊಂಡಿವೆ. ಸರಿಯಾದ ಮೂಲ ದಾಖಲೆಗಳೇ ಇಲ್ಲದೇ 1950 ಸೈಟ್ ಹಂಚಿಕೆಯಾಗಿವೆ. ಅಲ್ಲದೇ 5 ಸಾವಿರ ಸೈಟ್‌ಗಳಿಗೆ 2 ಸಾವಿರ ಬಾಂಡ್ ಪೇಪರ್‌ಗಳೇ ಇಲ್ಲ ಎನ್ನಲಾಗಿದೆ. ಇನ್ನು, ನನ್ನ ವಿರುದ್ಧದ ದೂರಿನಲ್ಲಿ ಸತ್ಯಾಂಶ ಇಲ್ಲ… ದಾಖಲೆ ನಕಲಿ ಆಗಿದ್ರೆ ಕಾನೂನು ಹೋರಾಟ ಮಾಡಲಿ ಎಂದು ಸಿಎಂಗೆ ದೂರುದಾರ ಸ್ನೇಹಮಯಿ ಕೃಷ್ಣ ಸವಾಲ್ ಹಾಕಿದ್ದಾರೆ. ಇದನ್ನೂ ಓದಿ:  ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

    ಈ ಮಧ್ಯೆ, ಮುಡಾ ಕೇಸಲ್ಲಿ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನವೆಂಬರ್ 23ಕ್ಕೆ ನಡೆಸಲು ಹೈಕೋರ್ಟ್ ತೀರ್ಮಾನಿಸಿದೆ. ಇದೇ ಶುಕ್ರವಾರ ಅಥ್ವಾ ಶನಿವಾರ ವಿಚಾರಣೆ ನಡೆಸಿ ಎಂಬ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ, ಕೆವಿ ಅರವಿಂದ್ ಅವರಿದ್ದ ಪೀಠ ತಿರಸ್ಕರಿಸಿದೆ.

    ಮುಡಾ ಕೇಸಲ್ಲಿ ಇಡಿ ವಿಚಾರಣೆಯ ಹಾದಿ…

    ಸೆಪ್ಟಂಬರ್ 7 ರಂದು ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆ
    ಅಕ್ಟೋಬರ್ 18 ರಂದು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ
    ಅಕ್ಟೋಬರ್ 18 ರಂದು ಅಧಿಕಾರಿಗಳನ್ನ ವಿಚಾರಣೆ ಮಾಡಿದ್ದ ಇ.ಡಿ
    ಅಕ್ಟೋಬರ್ 19 ರಂದು ಭೂಮಿ ಮಾಲೀಕ ದೇವರಾಜುಗೆ ಡ್ರಿಲ್
    ಅಕ್ಟೋಬರ್ 27 ರಂದು ದೂರುದಾರ ಗಂಗರಾಜು ವಿಚಾರಣೆ
    ಅಕ್ಟೋಬರ್ 28 ರಂದು ಬಿಲ್ಡರ್ ಮಂಜುನಾಥ್ ಮನೆಯಲ್ಲಿ ಶೋಧ
    ಅಕ್ಟೋಬರ್ 28 ರಂದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಇಡಿ ಶಾಕ್
    ಅಕ್ಟೋಬರ್ 30 ದಿನೇಶ್ ಕುಮಾರ್ – ಮುಡಾ ಮಾಜಿ ಆಯುಕ್ತ
    ನವೆಂಬರಗ 11 ರಂದು ಸಿಎಂ ಖಾಸಗಿ ಪಿಎ ಸಿ.ಟಿ ಕುಮಾರ್‌ಗೆ ಗ್ರಿಲ್, ಪಾಲಯ್ಯ
    ನವೆಂಬರ್ 13 ರಂದು ರಾಯಚೂರು ಸಂಸದ ಕುಮಾರ್ ನಾಯಕ್ ಗೆ ಗ್ರಿಲ್
    ನವೆಂಬರ್ 14 ರಂದು ಮುಡಾ ಮಾಜಿ ಅಧ್ಯಕ್ಷ ಮರಿಗೌಡ ವಿಚಾರಣೆ
    ನವೆಂಬರ್ 14 ರಂದು ನಿವೃತ್ತ ತಹಶೀಲ್ದಾರ್ ಮಾಳಿಗೆ ಶಂಕರ್ ವಿಚಾರಣೆ
    ನವೆಂಬರ್ 14 ರಂದು ಮೂಡಾ ಮಾಜಿ ಅಧ್ಯಕ್ಷ ಮರೀಗೌಡ ಆಪ್ತ ಶಿವಣ್ಣ ವಿಚಾರಣೆ

  • ಐಎಂಎ ವಂಚನೆ ಪ್ರಕರಣ- ಇಂದು ಇಡಿ ಅಧಿಕಾರಿಗಳಿಂದ ಜಮೀರ್ ವಿಚಾರಣೆ

    ಐಎಂಎ ವಂಚನೆ ಪ್ರಕರಣ- ಇಂದು ಇಡಿ ಅಧಿಕಾರಿಗಳಿಂದ ಜಮೀರ್ ವಿಚಾರಣೆ

    ಬೆಂಗಳೂರು: ಬಹುಕೋಟಿ ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಸಂಬಂಧ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾರಿ ನಿರ್ದೇಶನಾಲಯ(ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

    ರಿಚ್ಮಂಡ್ ಟೌನ್‍ನ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನ ಮನ್ಸೂರ್ ಖಾನ್‍ಗೆ ಸಚಿವ ಜಮೀರ್ ಮಾರಾಟ ಮಾಡಿದ್ದರು. ಈ ಬಗ್ಗೆ ವಿವರಣೆಗೆ ಹಾಜಾರಾಗುವಂತೆ ಇ.ಡಿ ಅಧಿಕಾರಿಗಳು ಜಮೀರ್ ಅವರಿಗೆ  ನೋಟೀಸ್ ನೀಡಿದ್ದರು. ಜೂನ್ 5ರಂದು ಖುದ್ದು ಹಾಜರಾಗಿ ಐಎಂಎ ಹಗರಣ ಆರೋಪಿ ಮನ್ಸೂರ್ ಖಾನ್ ಜೊತೆ ನಡೆಸಿದ ನಿವೇಶನ ಮಾರಾಟ ಸಂಬಂಧ ಮಾಹಿತಿ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು.

    ಕಳೆದ ವಾರ ಸಚಿವರ ಸೆವೆನ್ ಮಿನಿಸ್ಟರ್ಸ್ ಕ್ವಾಟ್ರಸ್‍ನ ಸರ್ಕಾರಿ ಮನೆಗೆ ಹೋಗಿ ಸಚಿವರ ಕೈಗೆ ಇಡಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದರು. ನೋಟಿಸ್ ತಲುಪಿದ ನಂತರ ಪ್ರತಿಕ್ರಿಯೆ ನೀಡಿದ್ದ ಜಮೀರ್ ಅವರು, ಕಾನೂನು ಪ್ರಕಾರವಾಗಿ ನಿವೇಶನ ಮಾರಾಟ ಮಾಡಿದ್ದೇನೆ. ಇಡಿ ವಿಚಾರಣೆಗೆ ಹಾಜರಾಗಿ ಎಲ್ಲಾ ದಾಖಲಾತಿಗಳನ್ನ ನೀಡಿ ವಿವರಣೆ ನೀಡುತ್ತೇನೆ ಎಂದಿದ್ದರು.

    ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಶಾಂತಿನಗರದ ಇಡಿ ಕಚೇರಿಗೆ ಸಚಿವರು ಹಾಜರಾಗಲಿದ್ದು, ಅಧಿಕಾರಿಗಳು ನಡೆಸುವ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.