Tag: ಇ ಹರಾಜು

  • ಪ್ರಧಾನಿ ಮೋದಿಗೆ ದೊರಕಿದ 1,300ಕ್ಕೂ ಹೆಚ್ಚು ಉಡುಗೊರೆಗಳ ಇ-ಹರಾಜು

    ಪ್ರಧಾನಿ ಮೋದಿಗೆ ದೊರಕಿದ 1,300ಕ್ಕೂ ಹೆಚ್ಚು ಉಡುಗೊರೆಗಳ ಇ-ಹರಾಜು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಉಡುಗೊರೆಯಾಗಿ (Gifts) ದೊರಕಿದ 1,300ಕ್ಕೂ ಹೆಚ್ಚು ವಸ್ತುಗಳನ್ನು ಬುಧವಾರ ಪ್ರಾರಂಭಗೊಂಡ ಇ-ಹರಾಜಿನಲ್ಲಿ (E-Auction) ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಯೋಧ್ಯಾ ರಾಮ ಮಂದಿರ ಮಾದರಿ, ಭವಾನಿ ದೇವಿಯ ವಿಗ್ರಹ, 2024ರ ಒಲಿಂಪಿಕ್ಸ್ ಕ್ರೀಡಾಕೂಟದ ಸ್ಮರಣಿಕೆಗಳು ಸೇರಿದಂತೆ 1,300ಕ್ಕೂ ಹೆಚ್ಚು ಉಡುಗೊರೆಗಳನ್ನು ಹರಾಜಿಗಿಡಲಾಗಿದೆ. ಮೋದಿಯವರ ಜನ್ಮದಿನವಾದ ಇಂದು (ಸೆ.17) ಇ-ಹರಾಜು ಪ್ರಕ್ರಿಯೆ ಆರಂಭಗೊಂಡಿದ್ದು, ಅ.2ರವರೆಗೆ ಹರಾಜು ನಡೆಯಲಿದೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

    ಪಿಎಂ ಮೊಮೆಂಟೋಸ್ ವೆಬ್‌ಸೈಟ್ ಪ್ರಕಾರ, ಭವಾನಿ ದೇವಿಯ ಪ್ರತಿಮೆಯ ಬೆಲೆ 1,03,95,000 ರೂ. ಆಗಿದ್ದು, ರಾಮ ಮಂದಿರ ದೇವಾಲಯದ ಮಾದರಿ 5.5 ಲಕ್ಷ ರೂ. ಮೌಲ್ಯವನ್ನು ಹೊಂದಿದೆ. ಇನ್ನು ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳ ಮೂರು ಜೊತೆ ಶೂಗಳನ್ನು ಕೂಡ ಹರಾಜಿಗಿಡಲಾಗಿದ್ದು, ಪ್ರತಿ ಶೂ ಬೆಲೆ 7.7 ಲಕ್ಷ ರೂ. ಇರಲಿದೆ ಎಂದು ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.  2019ರ ಜನವರಿಯಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಯವರಿಗೆ ನೀಡಿದ್ದ ಉಡುಗೊರೆಗಳ ಇ-ಹರಾಜನ್ನು ನಡೆಸಲಾಗಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ಗುಂಡಿಗಳನ್ನ ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌ ಮಾಡಿದ ಡಿಸಿಎಂ ಡಿಕೆಶಿ

    ಜಮ್ಮು ಮತ್ತು ಕಾಶ್ಮೀರದ ಕಸೂತಿ ಮಾಡಿದ ಪಶ್ಮಿನಾ ಶಾಲು, ರಾಮ ದರ್ಬಾರ್‌ನ ತಂಜೂರಿನ ಚಿತ್ರಕಲೆ, ಲೋಹದ ನಟರಾಜ ಪ್ರತಿಮೆ, ಗುಜರಾತ್‌ನ ರೋಗನ್ ಕಲೆ ಮತ್ತು ಕೈಯಿಂದ ನೇಯ್ದ ನಾಗಾ ಶಾಲು ಕೂಡ ಇ-ಹರಾಜಿನಲ್ಲಿ ಇಡಲಾಗಿದೆ. ಈವರೆಗೂ ಹರಾಜಿನಲ್ಲಿ 50 ಕೋಟಿ. ರೂಗೂ ಹೆಚ್ಚು ಹಣ ಸಂಗ್ರಹವಾಗಿದ್ದು, ಈ ಹಣವನ್ನು ನಮಾಮಿ ಗಂಗೆ ಯೋಜನೆಗೆ ವಿನಿಯೋಗಿಸಲಾಗುತ್ತದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್

  • ಮೋದಿಗೆ ಸಿಕ್ಕ ಗಿಫ್ಟ್‌ಗಳಿಗೆ ಭರ್ಜರಿ ಬೆಲೆ- ಚೋಪ್ರಾ ಜಾವೆಲಿನ್‍ಗೆ 1.50 ಕೋಟಿ

    ಮೋದಿಗೆ ಸಿಕ್ಕ ಗಿಫ್ಟ್‌ಗಳಿಗೆ ಭರ್ಜರಿ ಬೆಲೆ- ಚೋಪ್ರಾ ಜಾವೆಲಿನ್‍ಗೆ 1.50 ಕೋಟಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾದ ಉಡುಗೊರೆಗಳ ಇ-ಹರಾಜಿನಲ್ಲಿ, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗೋಲ್ಡ್ ಮೆಡಲ್ ವಿನ್ನರ್ ನೀರಜ್ ಚೋಪ್ರಾ ಅವರ ಜಾವೆಲಿನ್ ಅತ್ಯಂತ ಅಧಿಕ ಬೆಲೆಗೆ ಮಾರಾಟಗೊಂಡಿದೆ.

    ಇ-ಹರಾಜು ಗುರುವಾರ ಮುಕ್ತಾಯಗೊಂಡಿದೆ. ಒಲಿಂಪಿಕ್ಸ್‌ನಲ್ಲಿ ನೀರಜ್ ಬಳಸಿದ್ದ ಜಾವೆಲಿನ್ ಬರೋಬ್ಬರಿ ಒಂದೂವರೆ ಕೋಟಿ ಮತ್ತು ಭವಾನಿ ದೇವಿ ಅವರ ಆಟೋಗ್ರಾಫ್‍ವುಳ್ಳ ಫೆನ್ಸಿಂಗ್ ಕತ್ತಿ ಒಂದು ಕಾಲು ಕೋಟಿಗೆ ಹರಾಜುಗೊಂಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಗಣ್ಯರು ನೀಡಿರುವ ಕಾಣಿಕೆಗಳನ್ನು ಇ-ಹರಾಜಿ (e-auction)ನಲ್ಲಿ ಇರಿಸಲಾಗಿತ್ತು. ಇದನ್ನೂ ಓದಿ: ಇ-ಹರಾಜಿನಲ್ಲಿ ಭಾಗವಹಿಸಲು ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

    ನೀರಜ್ ಚೋಪ್ರಾ ತಮ್ಮ ಜಾವೆಲಿನನ್ನು ಮೋದಿ ಅವರಿಗೆ ಕಾಣಿಕೆಯಾಗಿ ನೀಡಿದ್ದರು. ಇದೇ ವೇಳೆ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಮೊದಲ ಬಾರಿಗೆ ಫೆನ್ಸಿಂಗ್‌ನಲ್ಲಿ ಭಾರತ ಪ್ರತಿನಿಧಿಸಿದ್ದ ಭವಾನಿ ದೇವಿ ಸೇರಿದಂತೆ ಹಲವು ಕ್ರೀಡಾಪಟುಗಳು ಪ್ರಧಾನಿಗಳನ್ನು ಭೇಟಿಯಾಗಿದ್ದರು. ಎಲ್ಲರೂ ಪ್ರಧಾನಿಗಳಿಗೆ ವಿಶೇಷ ಉಡುಗೊರೆಗಳನ್ನು ನೀಡಿದ್ದರು. ನೀರಜ್ ಚೋಪ್ರಾ ಅವರ ಭರ್ಜಿಗೆ ಆನ್‍ಲೈನ್‍ನಲ್ಲಿ ಮೂಲ ಬೆಲೆಯಾಗಿ 80 ಸಾವಿರ ರೂ. ನಿಗದಿ ಮಾಡಲಾಗಿತ್ತು. ಭರ್ಜಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಕೊನೆಗೆ 1.50 ಕೋಟಿಗೆ ಬಿಕರಿಯಾಗಿದೆ. ಭವಾನಿಯವರ ಫೆನ್ಸಿಂಗ್ ಸಹ 1.25 ಕೋಟಿಗೆ ಬಿಕರಿಗೊಂಡಿದೆ.  ಇದನ್ನೂ ಓದಿ:   ಪ್ರಧಾನಿ ಮೋದಿ ಸ್ವೀಕರಿಸಿದ ಉಡುಗೊರೆ- ಸ್ಮರಣಿಕೆಗಳು ಸೆ.17ರಿಂದ ಇ-ಹರಾಜು

    ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ.ಸಿಂಧು ಅವರ racket ಬೆಲೆ 80 ಲಕ್ಷ ರೂ. ಅಂತಿಮಗೊಂಡಿತು. ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಆಟಗಾರರ ಸಹಿಯುಳ್ಳ ಡ್ರೆಸ್ 1 ಕೋಟಿ ರೂಪಾಯಿಗೆ ಹರಾಜುಗೊಂಡಿದೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಜಾವೆಲಿನ್ ವಿಭಾಗದಲ್ಲಿ ಚಿನ್ನ ಗೆದ್ದ ಸುಮಿತ್ ಅಂತಿಲ್ ಅವರ ಭರ್ಜಿ ಸಹ 1.002 ಕೋಟಿ ರೂ. ಮತ್ತು ಬಾಕ್ಸಿಂಗ್‍ನಲ್ಲಿ ಕಂಚು ಗೆದ್ದ ಲವ್ಲೀನಾ ಅವರ ಗ್ಲೌಸ್ 91 ಲಕ್ಷ ರೂ.ಗೆ ಮಾರಾಟಗೊಂಡಿದೆ. ಇದನ್ನೂ ಓದಿ:  ಶತಕೋಟಿ ಭಾರತೀಯರ ಕನಸು ನನಸು – ಚಿನ್ನ ಗೆದ್ದ ನೀರಜ್

    ಮಿನಿಸ್ಟರಿ ಆಫ್ ಕಲ್ಚರ್ ಪ್ರಧಾನಿಗಳಿಗೆ ಸಿಕ್ಕಂತಹ ಎಲ್ಲ ಕಾಣಿಕೆಗಳನ್ನು ಆನ್‍ಲೈನ್‍ನಲ್ಲಿ ಹರಾಜಿಗೆ ಇಟ್ಟಿತ್ತು. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರವವರೆಗೆ ನಡೆದ ಹರಾಜು ಪ್ರಕ್ರಿಯೆಯಲ್ಲಿ 1,300 ವಸ್ತುಗಳನ್ನು ಇರಿಸಲಾಗಿತ್ತು. ಇಲ್ಲಿ ಬಂದಂತಹ ಎಲ್ಲ ಹಣವನ್ನು ‘ನಮಾಮಿ ಗಂಗಾ’ ಯೋಜನೆಗೆ ವಿನಿಯೋಗಿಸಲಾಗುತ್ತದೆ. ಇದಕ್ಕೂ ಮೊದಲು 2019ರಲ್ಲಿ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ಸಹ ತನ್ನಲ್ಲಿರುವ ಹಲವು ವಸ್ತುಗಳನ್ನು ಆನ್‍ಲೈನ್ ಹರಾಜಿನಲ್ಲಿರಿಸಿತ್ತು. ಹರಾಜಿನಲ್ಲಿ ಬಂದ ಹಣವನ್ನು (ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್) ಗಂಗಾ ನದಿ ಪುನರುಜ್ಜೀವನ ಯೋಜನೆಯಾಗಿರುವ ನಮಾಮಿ ಗಂಗೆ ಮಿಷನ್‍ಗೆ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

  • ಹಳೆ ಮಾಲೀಕ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಯಾರು ಪಾವತಿಸಬೇಕು – ಸುಪ್ರೀಂನಿಂದ ಮಹತ್ವದ ತೀರ್ಪು

    ಹಳೆ ಮಾಲೀಕ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಯಾರು ಪಾವತಿಸಬೇಕು – ಸುಪ್ರೀಂನಿಂದ ಮಹತ್ವದ ತೀರ್ಪು

    ನವದೆಹಲಿ: ಬಾಕಿ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಹೊಸ ಕಂಪನಿ ಪಾವತಿ ಮಾಡಬೇಕೇ? ಬೇಡವೇ? ಈ ಪ್ರಶ್ನೆಗೆ ಇಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಕಟಿಸುವ ಮೂಲಕ ಉತ್ತರ ನೀಡಿದೆ.

    ಪ್ರಕರಣ ಒಂದರ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕಿಶನ್ ಮತ್ತು ನ್ಯಾ.ಕೆಎಂ ಜೋಸೆಫ್ ಅವರಿದ್ದ ದ್ವಿಸಸ್ಯ ಪೀಠ ಹೊಸ ಕಂಪನಿಯೇ ವಿದ್ಯುತ್ ಬಿಲ್ ಅನ್ನು ಪಾವತಿಸಬೇಕೆಂದು ಆದೇಶಿಸಿದೆ.

    ಏನಿದು ಪ್ರಕರಣ?
    ನಷ್ಟದಲ್ಲಿದ್ದ ತೆಲಂಗಾಣದ ಮಿನರಲ್ ಕಂಪನಿಯೊಂದನ್ನು ಮತ್ತೊಬ್ಬ ಮಾಲೀಕ ಖರೀದಿಸಿದ್ದರು. ಈ ವೇಳೆ ಮಾಲೀಕ ಹೊಸದಾಗಿ 500 ಕಿ.ವಾ ವಿದ್ಯುತ್ ಸಂಪರ್ಕ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಹಿಂದಿನ ಮಾಲೀಕ ವಿದ್ಯುತ್ ಬಿಲ್ ಪಾವತಿ ಮಾಡದ್ದಕ್ಕೆ ಹೊಸದಾಗಿ ಕಂಪನಿಗೆ ವಿದ್ಯುತ್ ಸಂಪರ್ಕ ನೀಡುವುದಿಲ್ಲ ಎಂದು ಹೇಳಿ ತೆಲಂಗಾಣ ಎಲೆಕ್ಟ್ರಿಸಿಟಿ ಬೋರ್ಡ್ ಅರ್ಜಿಯನ್ನು ತಿರಸ್ಕರಿಸಿತ್ತು.

    ತನ್ನ ಬೇಡಿಕೆಯನ್ನು ಮನ್ನಿಸದ ಹಿನ್ನೆಲೆಯಲ್ಲಿ ಮಾಲೀಕರು ತೆಲಂಗಾಣ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ಮಾಲೀಕರ ಪರವಾಗಿ ತೀರ್ಪು ನೀಡಿತ್ತು. ಹೈಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ತೆಲಂಗಾಣ ಎಲೆಕ್ಟ್ರಿಸಿಟಿ ಬೋರ್ಡ್ ಸುಪ್ರೀಂ ಮೊರೆ ಹೋಗಿತ್ತು.

    ಮಾಲೀಕನೇ ಪಾವತಿಸಬೇಕು ಯಾಕೆ?
    ಈ ಪ್ರಕರಣದ ಮೂಲ ಮಾಲೀಕ ಸಾಲವನ್ನು ಪಾವತಿಸದ ಹಿನ್ನೆಲೆಯಲ್ಲಿ ಮಿನರಲ್ ಕಂಪನಿಯನ್ನು ಮಾರಾಟ ಮಾಡಲು ಸಿಂಡಿಕೇಟ್ ಬ್ಯಾಂಕ್ ಇ-ಹರಾಜು ಹಾಕಿತ್ತು. ಈ ವೇಳೆ ಈ ಕಂಪನಿ ಯಾವ ಸ್ಥಿತಿಯಲ್ಲಿದೆಯೇ ಆ ಸ್ಥಿತಿಯಲ್ಲೇ ಮಾರಾಟ ಮಾಡುತ್ತಿದ್ದೇವೆ. ಎಲ್ಲದ್ದಕ್ಕೂ ಹೊಸ ಮಾಲೀಕನೇ ಹೊಣೆಗಾರನಾಗುತ್ತಾನೆ ಎಂಬ ಅಂಶವನ್ನು ನೋಟಿಸ್ ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿತ್ತು.

     

    ಅರ್ಜಿ ವಿಚಾರಣೆ ಸಂದರ್ಭದಲ್ಲಿ ಈ ಎಲ್ಲ ಅಂಶಗಳನ್ನು ಆಲಿಸಿದ್ದ ಪೀಠ ಕಂಪನಿಯ ಎಲ್ಲ ವಿವರಗಳು, ಉಲ್ಲೇಖಿಸಲ್ಪಟ್ಟ ವಿಚಾರಗಳನ್ನು ತಿಳಿದುಕೊಂಡು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಹಳೆಯ ಮಾಲೀಕ ಪಾವತಿಸದ ಕಾರಣಕ್ಕೆ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಲು ಸಾಧ್ಯವಿಲ್ಲ. ನೋಟಿಸ್‍ನಲ್ಲಿ ಉಲ್ಲೇಖಿಸಿದ್ದ ಕಂಪನಿಯನ್ನು ಯಥಾಸ್ಥಿತಿಯಲ್ಲಿ ಮಾರಾಟ ಮಾಡಲಾಗುತ್ತದೆ ಎಂಬ ಅಂಶವನ್ನೇ ಗಂಭೀರವಾಗಿ ಪರಿಗಣಿಸಿದ ಕೋರ್ಟ್ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶವನ್ನು ರದ್ದುಗೊಳಿಸಿ ಹೊಸ ಕಂಪನಿಯ ಮಾಲೀಕನೇ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಶುಲ್ಕವನ್ನು ಪಾವತಿಸಬೇಕು ಎಂದು ಮಹತ್ವದ ಆದೇಶ ಪ್ರಕಟಿಸಿತು.