Tag: ಈಜುಪಟು

  • ರಾಷ್ಟ್ರಮಟ್ಟದ ಈಜುಪಟು ಆತ್ಮಹತ್ಯೆಗೆ ಶರಣು

    ರಾಷ್ಟ್ರಮಟ್ಟದ ಈಜುಪಟು ಆತ್ಮಹತ್ಯೆಗೆ ಶರಣು

    ಪುಣೆ: ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಏಳು ಚಿನ್ನದ ಪದಕ ಗೆದ್ದಿದ್ದ 21 ವರ್ಷದ ಈಜುಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

    ಸಾಹಿಲ್ ಜೋಶಿ(21) ಅತ್ಮಹತ್ಯೆ ಮಾಡಿಕೊಂಡ ಈಜುಪಟು. ಕೋಥ್ರೂಡ್ ಪ್ರದೇಶದ ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಪೋಷಕರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಸೀಲಿಂಗ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಹಿಲ್ ತಂದೆ ತನ್ನ ಮಗನಿಗೆ ಆಫೀಸ್‍ನಿಂದ ಕರೆ ಮಾಡಿದ್ದಾರೆ ಸಾಕಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸದ ಹಿನ್ನೆಲೆಯಲ್ಲಿ ತಂದೆ ಮನೆಗೆ ಬಂದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

    ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಸಿಕಿಲ್ಲ. ಯಾವುದೋ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ಎಂಬಿಬಿಎಸ್ ಓದುತ್ತಿದ್ದ ಜೋಶಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಆದ್ದರಿಂದ ನಾವು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಜೋಶಿ ಅವರ ಕೋಚ್ ಮನೋಜ್ ಎರಾಂಡೆ, ಜೋಶಿ ಅತ್ಯಂತ ಪ್ರತಿಭಾವಂತ ಈಜುಗಾರನಾಗಿದ್ದ. ಅವನು ರಾಷ್ಟ್ರೀಯ ಮಟ್ಟದಲ್ಲಿ 9 ಸ್ಪರ್ಧೆಗಳಲ್ಲಿ ಭಾಗವಹಿಸಿ 7 ಚಿನ್ನದ ಪದಕ ಗೆದ್ದಿದ್ದಾನೆ. ಅವನ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ ಎಂದು ಹೇಳಿದ್ದಾರೆ.

  • ಅಪಘಾತದಲ್ಲಿ ರಾಷ್ಟ್ರೀಯ ಈಜು ಪಟು ದುರ್ಮರಣ

    ಅಪಘಾತದಲ್ಲಿ ರಾಷ್ಟ್ರೀಯ ಈಜು ಪಟು ದುರ್ಮರಣ

    ಚೆನ್ನೈ: ರಸ್ತೆ ಅಪಘಾತದಲ್ಲಿ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‍ರೊಬ್ಬರು ಬೈಕಿನಿಂದ ಬಿದ್ದು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಎಂ.ಬಿ.ಬಾಲಕೃಷ್ಣನ್ ಮೃತ ಈಜುಪಟು. ಇವರು ಅರುಂಬಕ್ಕಂನಿಂದ ಶೆಣೈನಗರದ ಜಯಲಕ್ಷ್ಮಿ ಕಾಲೋನಿಯಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬೈಕ್ ಹಿಂಬದಿಯಲ್ಲಿ ಬಾಲಕೃಷ್ಣನ ಗೆಳತಿ ಕುಳಿತಿದ್ದು, ಆಕೆ ಅಪಘಾತದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತ ಬಾಲಕೃಷ್ಣ ಬೈಕಿನಲ್ಲಿ ಗೆಳತಿ ಕೂರಿಸಿಕೊಂಡು ಬರುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಕ್ ಅನ್ನು ಹಿಂದಿಕ್ಕುವ ಭರದಲ್ಲಿ ವೇಗವಾಗಿ ಬಂದು ಟ್ರಕ್‍ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸದಲ್ಲಿ ಬೈಕ್ ನಿಯಂತ್ರಣ ತಪ್ಪಿ ನೇರವಾಗಿ ಟ್ರಕ್ ಚಕ್ರಕ್ಕೆ ಸಿಕ್ಕಿದೆ. ಪರಿಣಾಮ ಬಾಲಕೃಷ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಮೃತ ಬಾಲಕೃಷ್ಣ ವೈದ್ಯ ದಂಪತಿಯ ಪುತ್ರನಾಗಿದ್ದು, ಅವರು ಗಿಂಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಅಮೆರಿಕದಲ್ಲಿ ಎಂ.ಎಸ್ ಪೂರ್ಣಗೊಳಿಸಿ ಅಲ್ಲಿಯೇ ಕೆಲಸ ಮಾಡುತ್ತಿದ್ದರು. ಬಾಲಕೃಷ್ಣ ರಾಷ್ಟ್ರೀಯ ಚಾಂಪಿಯನ್ ಶಿಪ್‍ಗಳಲ್ಲಿ ಸಾಧನೆ ಮಾಡಿರುವ ಅನುಭವಿ ಈಜು ಪಟುವಾಗಿದ್ದರು. 2010 ಢಾಕಾದಲ್ಲಿ ನಡೆದ 11ನೇ ದಕ್ಷಿಣ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದರು.

    ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಬಾಲಕೃಷ್ಣನ ಮೃತ ದೇಹವನ್ನು ಕಿಲ್ಪಾಕ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಜೊತೆಗೆ ಟ್ರಕ್ ಚಾಲಕ ಸುಬ್ರಹ್ಮಣ್ಯನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.