Tag: ಈಶಾನ್ಯ ಸಾರಿಗೆ ಇಲಾಖೆ

  • ಬಸ್ಸಿನ ಡೀಸೆಲ್ ಟ್ಯಾಂಕಿಗೆ ಬಾಟಲ್‍ಗಳ ಮುಚ್ಚಳ ಅಳವಡಿಕೆ- ಮಾಹಿತಿ ನೀಡಿದವರ ಅಮಾನತು

    ಬಸ್ಸಿನ ಡೀಸೆಲ್ ಟ್ಯಾಂಕಿಗೆ ಬಾಟಲ್‍ಗಳ ಮುಚ್ಚಳ ಅಳವಡಿಕೆ- ಮಾಹಿತಿ ನೀಡಿದವರ ಅಮಾನತು

    ಕಲಬುರಗಿ: ಈಶಾನ್ಯ ಸಾರಿಗೆ ಬಸ್‍ನ ಡೀಸೆಲ್ ಟ್ಯಾಂಕ್‍ಗೆ ಬಾಟಲ್‍ಗಳನ್ನೆ ಮುಚ್ಚಳಿಕೆ ಮಾಡಿರುವ ಕುರಿತು ಪಬ್ಲಿಕ್ ಟಿವಿ ಇತ್ತೀಚೆಗೆ ವರದಿ ಮಾಡಿತ್ತು. ವರದಿಯ ನಂತರ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಡಿಪೋ ಮ್ಯಾನೇಜರ್ ಹಾಗೂ ಸಾರಿಗೆ ಡಿಸಿಯನ್ನು ಅಮಾನತು ಮಾಡುವುದಾಗಿ ಹೇಳಿದ್ದರು. ಇದೀಗ ಯಾರೋ ಮಾಡಿದ್ದ ತಪ್ಪಿಗೆ ಯಾರೋ ಶಿಕ್ಷೆ ಅನುಭವಿಸುವಂತಾಗಿದೆ.

    ಇದೀಗ ಅಲ್ಲಿನ ಅಧಿಕಾರಿಗಳು ಈ ಕುರಿತು ಮೇಲಾಧಿಕಾರಿ ಹಾಗೂ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಎಫ್ ಡಿಎ ನಾಗರೆಡ್ಡಿ ಅವರನ್ನೇ ಬಲಿಪಶು ಮಾಡಿದ್ದು, ಕರ್ತವ್ಯ ನಿರ್ಲಕ್ಷ್ಯ ಅಂತ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಅಧಿಕಾರಿಗಳು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಅಮಾಯಕ ಅಧಿಕಾರಿಯನ್ನು ಬಲಿಪಶು ಮಾಡಿದ್ದಾರೆ. ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆ ನಡೆಸುವುದಾಗಿ ಹೇಳಿದ್ದ ಸಚಿವ ತಮ್ಮಣ್ಣ ಇದೀಗ ಸೈಲೆಂಟಾಗಿದ್ದಾರೆ. ಈ ಮೂಲಕ ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷೆ ಎಂಬಂತಾಗಿದೆ. ಇದನ್ನು ಓದಿ:  ಪಬ್ಲಿಕ್ ಟಿವಿ ಇಂಪ್ಯಾಕ್ಟ್-ಡೀಸೆಲ್ ಟ್ಯಾಂಕ್‍ಗಳ ಮುಚ್ಚಳ ಇಲ್ಲದಿರುವ ಬಸ್ ಓಡಿಸಿದವರನ್ನು ಮನೆಗೆ ಕಳಸ್ತೀನಿ: ಡಿ.ಸಿ.ತಮ್ಮಣ್ಣ

    ಈಶಾನ್ಯ ಸಾರಿಗೆಯ ಬಹುತೇಕ ಬಸ್‍ಗಳಲ್ಲಿ ಡೀಸೆಲ್ ಟ್ಯಾಂಕ್‍ಗಳನ್ನು ಮುಚ್ಚಲು 1 ಲೀ. ಮತ್ತು 2 ಲೀ. ಪ್ಲಾಸ್ಟಿಕ್ ಬಾಟಲ್‍ಗಳನ್ನು ಬಳಕೆ ಮಾಡಲಾಗುತ್ತಿತ್ತು. ಈ ಸಂಬಂಧ ಪಬ್ಲಿಕ್ ಟಿವಿ ವಿಸ್ತೃತ ವರದಿಯನ್ನು ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿ ಬೆನ್ನೆಲ್ಲೆ ಎಚ್ಚೆತ್ತ ಈಶಾನ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು ಬಸ್ ಗಳ ತಪಾಸಣೆ ನಡೆಸಿ, ಬಾಟಲ್ ತೆರವು ಮಾಡಿ ಟ್ಯಾಂಕ್‍ಗಳಿಗೆ ಕ್ಯಾಪ್ ಅಳವಡಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಇದನ್ನು ಓದಿ: ಈಶಾನ್ಯ ಸಾರಿಗೆ ಬಸ್ ಹತ್ತೋ ಮುನ್ನ ಹುಷಾರ್!

    ಟ್ಯಾಂಕ್‍ಗಳಿಗೆ ಬಾಟಲ್‍ಗಳನ್ನು ಮುಚ್ಚಿದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಆದೇಶಿಸುತ್ತೇನೆ. ಡೀಸೆಲ್ ಟ್ಯಾಂಕ್‍ಗಳ ಮುಚ್ಚಳ ಇಲ್ಲದಿರುವ ಬಸ್‍ಗಳನ್ನು ಓಡಿಸಿರುವಂತಹ ಡಿಪೋ ಮ್ಯಾನೇಜರ್ ಸೇರಿದಂತೆ ಇತರೆ ಸಿಬ್ಬಂದಿಯನ್ನು ನಾಳೆಯೇ ಮನೆಗೆ ಕಳುಹಿಸುತ್ತೇನೆ. ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಿಂದ ಕೆಲವು ಅಧಿಕಾರಿಗಳು ಈಶಾನ್ಯ ಸಾರಿಗೆಯ ವ್ಯವಸ್ಥೆಯ ಬಗೆಗೆ ವರದಿ ನೀಡುವಂತೆ ಕಳುಹಿಸಿದ್ದೇನೆ. ಪಬ್ಲಿಕ್ ಟಿವಿ ವರದಿ ನನ್ನ ಗಮನಕ್ಕೂ ಬಂದಿದ್ದೂ, ನಾಳೆಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡುತ್ತೇನೆ. ಪಬ್ಲಿಕ್ ಟಿವಿ ಈ ವರದಿಯನ್ನು ನಾನು ಸ್ವಾಗತಿಸುತ್ತೇನೆ ಎಂದು ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಪಬ್ಲಿಕ್ ಟಿವಿಗೆ ತಿಳಿಸಿದ್ದರು.

    https://www.facebook.com/publictv/videos/1926995200670473/

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್-ಡೀಸೆಲ್ ಟ್ಯಾಂಕ್‍ಗಳ ಮುಚ್ಚಳ ಇಲ್ಲದಿರುವ ಬಸ್ ಓಡಿಸಿದವರನ್ನು ಮನೆಗೆ ಕಳಸ್ತೀನಿ: ಡಿ.ಸಿ.ತಮ್ಮಣ್ಣ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್-ಡೀಸೆಲ್ ಟ್ಯಾಂಕ್‍ಗಳ ಮುಚ್ಚಳ ಇಲ್ಲದಿರುವ ಬಸ್ ಓಡಿಸಿದವರನ್ನು ಮನೆಗೆ ಕಳಸ್ತೀನಿ: ಡಿ.ಸಿ.ತಮ್ಮಣ್ಣ

    -ಬಸ್ ಡಿಸೇಲ್ ಟ್ಯಾಂಕ್ ಪರಿಶೀಲನೆಗಿಳಿದ ಅಧಿಕಾರಿಗಳು

    ಕಲಬುರಗಿ: ಈಶಾನ್ಯ ಸಾರಿಗೆಯ ಬಹುತೇಕ ಬಸ್‍ಗಳಲ್ಲಿ ಡೀಸೆಲ್ ಟ್ಯಾಂಕ್‍ಗಳನ್ನು ಮುಚ್ಚಲು 1 ಲೀ. ಮತ್ತು 2 ಲೀ. ಪ್ಲಾಸ್ಟಿಕ್ ಬಾಟಲ್‍ಗಳನ್ನು ಬಳಕೆ ಮಾಡಲಾಗುತ್ತಿತ್ತು. ಈ ಸಂಬಂಧ ಪಬ್ಲಿಕ್ ಟಿವಿ ಇಂದು ಬೆಳಗ್ಗೆ ವಿಸ್ತೃತ ವರದಿಯನ್ನು ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿ ಬೆನ್ನೆಲ್ಲೆ ಎಚ್ಚೆತ್ತ ಈಶಾನ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು ಬಸ್ ಗಳ ತಪಾಸಣೆ ನಡೆಸಿ, ಬಾಟಲ್ ತೆರವು ಮಾಡಿ ಟ್ಯಾಂಕ್‍ಗಳಿಗೆ ಕ್ಯಾಪ್ ಅಳವಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

    ಟ್ಯಾಂಕ್‍ಗಳಿಗೆ ಬಾಟಲ್‍ಗಳನ್ನು ಮುಚ್ಚಿದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಆದೇಶಿಸುತ್ತೇನೆ. ಡೀಸೆಲ್ ಟ್ಯಾಂಕ್‍ಗಳ ಮುಚ್ಚಳ ಇಲ್ಲದಿರುವ ಬಸ್‍ಗಳನ್ನು ಓಡಿಸಿರುವಂತಹ ಡಿಪೋ ಮ್ಯಾನೇಜರ್ ಸೇರಿದಂತೆ ಇತರೆ ಸಿಬ್ಬಂದಿಯನ್ನು ನಾಳೆಯೇ ಮನೆಗೆ ಕಳುಹಿಸುತ್ತೇನೆ.  ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಿಂದ ಕೆಲವು ಅಧಿಕಾರಿಗಳು ಈಶಾನ್ಯ ಸಾರಿಗೆಯ ವ್ಯವಸ್ಥೆಯ ಬಗೆಗೆ ವರದಿ ನೀಡುವಂತೆ ಕಳುಹಿಸಿದ್ದೇನೆ. ಇಂದು ಬೆಳಗ್ಗೆ ಪಬ್ಲಿಕ್ ಟಿವಿ ವರದಿ ನನ್ನ ಗಮನಕ್ಕೂ ಬಂದಿದ್ದೂ, ನಾಳೆಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡುತ್ತೇನೆ. ಪಬ್ಲಿಕ್ ಟಿವಿ ಈ ವರದಿಯನ್ನು ನಾನು ಸ್ವಾಗತಿಸುತ್ತೇನೆ ಎಂದು ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಡೀಸೆಲ್ ಟ್ಯಾಂಕ್‍ಗಳನ್ನು ಬಂದ್ ಮಾಡಲು 1 ಮತ್ತು 2 ಲೀಟರ್ ನೀರಿನ ಬಾಟಲ್ ಗಳನ್ನೇ ಮುಚ್ಚಳ ಮಾಡಿ ಚಾಲಕರು ಬಸ್ ಚಲಾಯಿಸುತ್ತಿದ್ದಾರೆ. ಹಾಗಾಗಿ ತೈಲ ಸೋರಿಕೆಯಾಗಿ ಬಸ್‍ಗೆ ಬೆಂಕಿ ತಗಲುವ ಸಾಧ್ಯತೆಗಳು ಹೆಚ್ಚಾಗಿವೆ. ಅದರಲ್ಲೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಬಿಸಿಲು ಹೆಚ್ಚಾಗಿರುವ ಕಾರಣ ಈ ಬಾಟಲಿ ಕ್ಯಾಪ್ ಅಂತು ಇನ್ನು ಡೇಂಜರಸ್ ಆಗಿದೆ ಅಂತ ನಿವಾಸಿ ಸಿದ್ದರಾಮಯ್ಯ ಹಿರೇಮಠ್ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದರು.

    ಪಬ್ಲಿಕ್ ಟಿವಿಗೆ ಸಿಕ್ಕ ದಾಖಲೆಗಳ ಪ್ರಕಾರ ಕಲಬುರಗಿ ಡಿಪೋ ನಂಬರ್-4ರಲ್ಲಿಯೇ 23 ಬಸ್‍ಗಳಿಗೆ ಡೀಸೆಲ್ ಕ್ಯಾಪ್‍ಗಳಿಲ್ಲ. ಇನ್ನು ಈಶಾನ್ಯ ಸಾರಿಗೆಯ ಹೈದರಾಬಾದ್ ಕರ್ನಾಟಕದ 6 ಜಿಲ್ಲೆ ಅಂದ್ರೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರದಲ್ಲಿ ಒಟ್ಟು 52 ಡಿಪೋಗಳಿದ್ದು, ಅದೆಷ್ಟು ಬಸ್‍ಗಳ ಡೀಸೆಲ್ ಟ್ಯಾಂಕ್‍ಗಳಿಗೆ ಕ್ಯಾಪ್ ಇಲ್ಲದೇ ಪ್ರಯಾಣಿಕರ ಸಾವಿಗೆ ಕಾಯ್ತಿದೆಯೋ ಗೊತ್ತಿಲ್ಲ. ಈ ಬಗ್ಗೆ ಈಶಾನ್ಯ ಸಾರಿಗೆ ಅಧಿಕಾರಿಗಳನ್ನು ಕೇಳಿದ್ರೆ, ಈ ಬಗ್ಗೆ ವರದಿ ಮಾಡಿದ್ದೇವೆ. ಆದ್ರೆ ಪ್ರಯೋಜನವಾಗಿಲ್ಲ ಅಂತಾ ಇಂಧನ ನಿರ್ವಾಹಕ ನಾಗರಾಜ್ ರೆಡ್ಡಿ ಹೇಳಿದ್ದರು.

    ಈಶಾನ್ಯ ಸಾರಿಗೆ ಸಂಸ್ಥೆಗೆ ಇತ್ತೀಚೆಗೆ ಮಲೇಶ್ಯಾದಲ್ಲಿ ರಾಷ್ಟ್ರಮಟ್ಟದ ಇಂಡಿಯಾ ಬಸ್ ಸೇಫ್ಟಿ ಅವಾರ್ಡ್ ಸಿಕ್ಕಿತ್ತು. ಆದರೆ ಅದ್ಯಾಕೆ ಈ ಸಂಸ್ಥೆಗೆ ಅವಾರ್ಡ್ ಕೊಟ್ರೆನೋ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=1AvXi-0xSVo

  • ಈಶಾನ್ಯ ಸಾರಿಗೆ ಬಸ್ ಹತ್ತೋ ಮುನ್ನ ಹುಷಾರ್!

    ಈಶಾನ್ಯ ಸಾರಿಗೆ ಬಸ್ ಹತ್ತೋ ಮುನ್ನ ಹುಷಾರ್!

    – ಬಸ್‍ ನ ಡೀಸೆಲ್ ಟ್ಯಾಂಕ್ ಗಿಲ್ಲ ಕ್ಯಾಪ್

    ಕಲಬುರಗಿ: ಈಶಾನ್ಯ ಸಾರಿಗೆಯ ಬಸ್‍ ಗಳಲ್ಲಿ ಸಂಚರಿಸಬೇಕು ಅಂದ್ರೆ ನಿಮ್ಮ ಜೀವ ಕೈಯಲ್ಲಿ ಹಿಡಿದು ಕೂರಬೇಕು. ಯಾಕಂದ್ರೆ ಅಲ್ಲಿನ ಬಹುತೇಕ ಬಸ್‍ನ ಡಿಸೇಲ್ ಟ್ಯಾಂಕ್‍ ಗಳು ಯಾವಾಗ ಬ್ಲಾಸ್ಟ್ ಆದರೂ ಅಚ್ಚರಿಯಿಲ್ಲ.

    ಹೌದು. ಈಶಾನ್ಯ ಸಾರಿಗೆ ಸಂಸ್ಥೆಗೆ ಇತ್ತೀಚೆಗೆ ಮಲೇಶ್ಯಾದಲ್ಲಿ ರಾಷ್ಟ್ರಮಟ್ಟದ ಇಂಡಿಯಾ ಬಸ್ ಸೇಫ್ಟಿ ಅವಾರ್ಡ್ ಸಿಕ್ಕಿತ್ತು. ಆದ್ರೆ ಅದ್ಯಾಕೆ ಈ ಸಂಸ್ಥೆಗೆ ಅವಾರ್ಡ್ ಕೊಟ್ರೆನೋ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಯಾಕಂದ್ರೆ ಕಲಬುರಗಿಯಲ್ಲಿ ಈಶಾನ್ಯ ಸಾರಿಗೆಯ ಬಹುತೇಕ ಬಸ್‍ಗಳ ಡೀಸೆಲ್ ಟ್ಯಾಂಕರ್‍ಗಳಿಗೆ ಕ್ಯಾಪ್‍ಗಳೇ ಇಲ್ಲ.

    ಆಶ್ಚರ್ಯ ಅಂದ್ರೆ ಅದನ್ನ ಮುಚ್ಚೋಕೆ ಏನೂ ಇಲ್ಲದೇ 1 ಮತ್ತು 2 ಲೀಟರ್ ನೀರಿನ ಬಾಟಲ್ ಗಳನ್ನೇ ಮುಚ್ಚಳ ಮಾಡಿ ಚಾಲಕರು ಬಸ್ ಚಲಾಯಿಸುತ್ತಿದ್ದಾರೆ. ಹಾಗಾಗಿ ತೈಲ ಸೋರಿಕೆಯಾಗಿ ಬಸ್‍ಗೆ ಬೆಂಕಿ ತಗಲುವ ಸಾಧ್ಯತೆಗಳು ಹೆಚ್ಚಾಗಿವೆ. ಅದರಲ್ಲೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಬಿಸಿಲು ಹೆಚ್ಚಾಗಿರುವ ಕಾರಣ ಈ ಬಾಟಲಿ ಕ್ಯಾಪ್ ಅಂತು ಇನ್ನು ಡೆಂಜರಸ್ ಆಗಿದೆ ಅಂತ ನಿವಾಸಿ ಸಿದ್ದರಾಮಯ್ಯ ಹಿರೇಮಠ್ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಗೆ ಸಿಕ್ಕ ದಾಖಲೆಗಳ ಪ್ರಕಾರ ಕಲಬುರಗಿ ಡಿಪೋ ನಂಬರ್-4ರಲ್ಲಿಯೇ 23 ಬಸ್‍ಗಳಿಗೆ ಡೀಸೆಲ್ ಕ್ಯಾಪ್‍ಗಳಿಲ್ಲ. ಇನ್ನು ಈಶಾನ್ಯ ಸಾರಿಗೆಯ ಹೈದರಾಬಾದ್ ಕರ್ನಾಟಕದ 6 ಜಿಲ್ಲೆ ಅಂದ್ರೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರದಲ್ಲಿ ಒಟ್ಟು 52 ಡಿಪೋಗಳಿದ್ದು, ಅದೆಷ್ಟು ಬಸ್‍ಗಳ ಡೀಸೆಲ್ ಟ್ಯಾಂಕ್‍ಗಳಿಗೆ ಕ್ಯಾಪ್ ಇಲ್ಲದೇ ಪ್ರಯಾಣಿಕರ ಸಾವಿಗೆ ಕಾಯ್ತಿದೆಯೋ ಗೋತ್ತಿಲ್ಲ. ಈ ಬಗ್ಗೆ ಈಶಾನ್ಯ ಸಾರಿಗೆ ಅಧಿಕಾರಿಗಳನ್ನು ಕೇಳಿದ್ರೆ, ಈ ಬಗ್ಗೆ ವರದಿ ಮಾಡಿದ್ದೇವೆ. ಆದ್ರೆ ಪ್ರಯೋಜನವಾಗಿಲ್ಲ ಅಂತಾ ಇಂಧನ ನಿರ್ವಾಹಕ ನಾಗರಾಜ್ ರೆಡ್ಡಿ ಹೇಳಿದ್ದಾರೆ.

    ಒಟ್ಟಿನಲ್ಲಿ ಸೇಫ್ಟಿ ಪ್ರಶಸ್ತಿ ತೆಗೆದುಕೊಂಡು ಬೀಗುತ್ತಿರುವ ಈಶಾನ್ಯ ಸಾರಿಗೆ ಇಲಾಖೆ ಈಗಲಾದ್ರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಈ ಮೂಲಕ ಅವಘಡ ನಡೆಯುವ ಮುನ್ನ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv