Tag: ಈಶ್ವರ್ ಮಲ್ಪೆ

  • ಶಿರೂರು ಗುಡ್ಡ ಕುಸಿತ ದುರಂತ – ಎರಡನೇ ಹಂತದ ಶೋಧಕಾರ್ಯ, ಗಂಗಾವಳಿ ನದಿಯಲ್ಲಿ ಲಾರಿಯ ಅವಶೇಷ ಪತ್ತೆ

    ಶಿರೂರು ಗುಡ್ಡ ಕುಸಿತ ದುರಂತ – ಎರಡನೇ ಹಂತದ ಶೋಧಕಾರ್ಯ, ಗಂಗಾವಳಿ ನದಿಯಲ್ಲಿ ಲಾರಿಯ ಅವಶೇಷ ಪತ್ತೆ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ (Ankola) ತಾಲೂಕಿನ ಶಿರೂರಿನಲ್ಲಿ ಭೂ ಕುಸಿತವಾಗಿ (Shirur Landslide) 29 ದಿನವಾಗಿದೆ. ಇದರ ಬೆನ್ನಲ್ಲೇ ಗಂಗಾವಳಿ ನದಿಯಲ್ಲಿ ಕಾಣೆಯಾದ ಮೂವರ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಹಿಂದೇಟು ಹಾಕಿತ್ತು. ಆದರೆ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಸೂಚನೆಯಂತೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆಯವರು ಗಂಗಾವಳಿ ನದಿಯಲ್ಲಿ ಸಂಜೆ ವೇಳೆಯಲ್ಲಿ ಶೋಧಕಾರ್ಯಕ್ಕಿಳಿದಿದ್ದು, ಗ್ಯಾಸ್ ಟ್ಯಾಂಕರ್‌ನ ಚಿಕ್ಕ ಭಾಗವನ್ನು ಶೋಧ ನಡೆಸಿ ಹೊರತೆಗೆದಿದ್ದಾರೆ.

    ಕೇರಳದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಶವಕ್ಕಾಗಿ ಶೋಧ ನಡೆಸಬೇಕಿದ್ದು, ಇದೀಗ ಗಂಗಾವಳಿ ನದಿಯಲ್ಲಿ ಜಿಲ್ಲಾಡಳಿತದ ತಡೆಯ ಮಧ್ಯೆಯೇ ಶೋಧ ಕಾರ್ಯ ಮುಂದುವರೆದಿದೆ. ಜಿಲ್ಲಾಡಳಿತದಿಂದ ಇದುವರೆಗೂ ಅಧಿಕೃತ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಈಶ್ವರ್ ಮಲ್ಪೆ ಗಂಗಾವಳಿ ನದಿಗೆ ಇಳಿದಿದ್ದಾರೆ. ಸೇನಾ ತಂಡ ಈ ಹಿಂದೆ ಗುರುತಿಸಿದ ಜಾಗದಲ್ಲಿ ಮತ್ತೊಮ್ಮೆ ಮುಳುಗಿ ಈಶ್ವರ ಮಲ್ಪೆ ಶೋಧ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ಸತೀಶ್ ಸೈಲ್ ಖುದ್ದು ಸ್ಥಳಕ್ಕೆ ಆಗಮಿಸಿದ್ದರು. ಇವರೊಂದಿಗೆ ಕೇರಳ ರಾಜ್ಯದ ಶಾಸಕ ಆಶ್ರಫ್ ಕೂಡ ಹಾಜರಿದ್ದರು. ಇದನ್ನೂ ಓದಿ: HMT ಜಾಗವನ್ನು ರಾಜ್ಯ ಸರ್ಕಾರಕ್ಕೆ ನೀಡಲ್ಲ: ಖಂಡ್ರೆ ವಿರುದ್ಧ ಹೆಚ್‌ಡಿಕೆ ಆಕ್ರೋಶ

     

    ಇನ್ನು ಶೋಧ ಕಾರ್ಯಾಚರಣೆ ವೇಳೆ ಲಾರಿಯ ಜಾಕ್ ಪತ್ತೆಯಾಗಿದೆ. ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಪತ್ತೆ ಮಾಡಲಾಗಿದೆ. ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಜಾಕ್ ಪತ್ತೆಯಾಗಿದ್ದು, ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿಯದ್ದೇ ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದಾರೆ. ಲಾರಿಯ ಎರಡು ಬಿಡಿ ಭಾಗಗಳು ಕೂಡ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಒಂದು ಲಾರಿ ಬಾಗಿಲಿನ ಕೀಲು ಹಾಗೂ ಜಾಕ್ ಪತ್ತೆಯಾಗಿದೆ. ಬಾಗಿಲಿನ ಕೀಲು ತನ್ನ ವಾಹನದ್ದಲ್ಲ. ಆದರೆ ಜಾಕ್ ಮಾತ್ರ ತನ್ನ ವಾಹನದ್ದೇ ಎಂದು ನಾಪತ್ತೆಯಾದ ಬೆಂಜ್ ಲಾರಿಯ ಮಾಲಿಕ ಮುಫಿನ್ ಹೇಳಿದ್ದಾರೆ. ಇದನ್ನೂ ಓದಿ: Tungabhadra Dam| ಗೇಟ್‌ ಕೊಚ್ಚಿ ಹೋದ ಪ್ರಕರಣದ ತನಿಖೆಯಾಗಲಿ: ಹೆಚ್‌ಡಿಕೆ ಆಗ್ರಹ

    ಕಾರ್ಯಾಚರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರ್ ಮಲ್ಪೆ (Eshwar Malpe), ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಾಚರಣೆ ಆರಂಭ ಮಾಡಿದೆವು. ನಿರಂತರ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಲಾಯಿತು. ಕಾರ್ಯಾಚರಣೆ ವೇಳೆ ಬೆಂಜ್ ಲಾರಿಯ ಜಾಕ್ ಪತ್ತೆ ಆಗಿದೆ. ಜಾಕ್ ಪತ್ತೆ ಆಗಿದ್ದ ಬಳಿಯೇ ಕೆಳಗೆ ಲಾರಿ ಇರುವುದು ಖಚಿತವಾಗಿದೆ. ನಾಳೆ ಬೆಳಗ್ಗೆ 8:30ಕ್ಕೆ ಮತ್ತೆ ಕಾರ್ಯಾಚರಣೆ ಆರಂಭ ಮಾಡುತ್ತೇವೆ. ಲಾರಿ ಇಂತಹದ್ದೇ ಸ್ಥಳದಲ್ಲಿ ಇದೆ ಎಂಬುವುದು ಖಚಿತ ಆಗಿದೆ. ಆದರೆ ಆ ಲಾರಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ. ಮಣ್ಣನ್ನು ತೆರವು ಮಾಡುವ ಕಾರ್ಯದ ಬಳಿಕ ಮೃತ ದೇಹಗಳು ಸಿಗುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಿ – CWRC ಮುಂದೆ ಕರ್ನಾಟಕದ ಮನವಿ

  • ಶಿರೂರು ಗುಡ್ಡ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ

    ಶಿರೂರು ಗುಡ್ಡ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ

    ಕಾರವಾರ: ಶಿರೂರು ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳುಗು ತಜ್ಞರ ತಂಡ ಎಷ್ಟೇ ಹುಡುಕಿದರೂ ಲಾರಿ ಹಾಗೂ ನಾಪತ್ತೆಯಾದ ಮೂವರ ಮೃತದೇಹ ಸಿಗದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

    ಗಂಗಾವಳಿ ನದಿ (Gangavali River) ನೀರಿನ ವೇಗ ಹೆಚ್ಚಿದೆ. ಅಲ್ಲದೇ ನದಿಯ ಒಳಗೆ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿ ಇರುವ ಹಿನ್ನೆಲೆ ಕಾರ್ಯಾಚರಣೆಯಲ್ಲಿ ಲಾರಿ ಮೇಲಕ್ಕೆ ಎತ್ತಲು ಜಿಲ್ಲಾಡಳಿತ ಯಶಸ್ವಿಯಾಗಲಿಲ್ಲ. ಆದ್ದರಿಂದ ಕಾರ್ಯಾಚರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

    ಭೂ ಕುಸಿತದಿಂದ ಕಾಣೆಯಾದ ಕೇರಳ ಮೂಲದ ಅರ್ಜುನ್, ಶಿರೂರಿನ ಜಗನ್ನಾಥ ನಾಯ್ಕ, ಗಂಗೆ ಕೊಳ್ಳದ ಲೋಕೇಶ್‌ಗಾಗಿ ಗಂಗಾವಳಿ ನದಿಗೆ ಮುಳುಗು ತಜ್ಞರ ತಂಡ ಇಳಿದಿತ್ತು. ನೌಕಾದಳ, ಭೂಸೇನೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಹೆಸ್ಕಾಂ ಹಾಗೂ ಈಶ್ವರ್ ಮಲ್ಪೆ ಅವರ ತಂಡ ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಆಲದ ಮರದ ದಿಮ್ಮಿ, ವಿದ್ಯುತ್ ಕಂಬ, ತಂತಿಗಳನ್ನು ಮುಳುಗು ತಜ್ಞರು ಪತ್ತೆಹಚ್ಚಿದ್ದಾರೆ. ಆದರೆ ಲಾರಿ ಹಾಗೂ ಕಾಣೆಯಾದವರ ಮೃತದೇಹಗಳು ಪತ್ತೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

    ಕಾರ್ಯಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಜು ತಜ್ಞ ಈಶ್ವರ್ ಮಲ್ಪೆ, ನಾನು ಈ ಹಿಂದೆ ಮಾಡಿದ ಬಹಳಷ್ಟು ಕಾರ್ಯಾಚರಣೆ ಯಶಸ್ವಿ ಆಗಿದೆ. ಆದರೆ ಇವತ್ತಿನ ಕಾರ್ಯಾಚರಣೆಯಲ್ಲಿ ಯಶಸ್ಸು ಸಿಗದೇ ಇರುವ ದುಃಖ ನನಗಿದೆ. ನಿರಂತರ ಮಳೆಯಿಂದ ಗಂಗಾವಳಿ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಆಗುತ್ತಲೇ ಇದೆ. ನದಿಯ ನೀರಿನ ವೇಗ ಮತ್ತು ಕೆಸರು ನೀರಿನಿಂದ ಕಾರ್ಯಾಚರಣೆಯಲ್ಲಿ ಯಶಸ್ಸು ಕಾಣುವುದಕ್ಕೆ ಆಗಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ – ಪರಮೇಶ್ವರ್

    ನಾನು ಶನಿವಾರ ನದಿಗೆ ಇಳಿದಾಗ ಅಲ್ಲಿ ಬಂಡೆಕಲ್ಲು ಹಾಗೂ ಮಣ್ಣು ಹೊರತುಪಡಿಸಿ ಬೇರೆ ಏನು ಕಾಣಲಿಲ್ಲ. ಭಾನುವಾರ ಕಾರ್ಯಾಚರಣೆ ಮಾಡಿದ ಪಾಯಿಂಟ್‌ನಲ್ಲಿ ಆಲದ ಮರ ಕಾಣಿಸಿತ್ತು. ಮರದ ಸುತ್ತ ಏನಿದೆ ಎಂಬುವುದನ್ನು ನೋಡಲು ಪ್ರಯತ್ನಿಸಿದೆ. ಆದರೆ ನದಿಯ ನೀರಿನ ವೇಗ ಜಾಸ್ತಿ ಇರುವ ಹಿನ್ನೆಲೆ ಅಲ್ಲಿ ಇರಲಾಗಲಿಲ್ಲ. ಕೆಸರು ನೀರು ಇರೋತನಕ ಕಾರ್ಯಾಚರಣೆ ಮಾಡುವುದು ಕಷ್ಟ. ನಾನು ನದಿಯ ಒಳಗೆ ಎಷ್ಟೆ ಇಳಿದರೂ ಸರಿಯಾಗಿ ಏನೂ ಕಾಣಲಿಲ್ಲ. ನದಿಯ ನೀರು ಕೆಸರು ಮಿಶ್ರಿತ ಆಗಿರುವುದರಿಂದ ಏನೂ ಸರಿಯಾಗಿ ಕಾಣುತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಎನ್‌ಡಿಎ ಅವಧಿಯಲ್ಲಿ 2,95,817 ಕೋಟಿ ರೂ. ತೆರಿಗೆ ಹಂಚಿಕೆ: ರಾಜ್ಯ ಸರ್ಕಾರಕ್ಕೆ ನಿರ್ಮಲಾ ತಿರುಗೇಟು