Tag: ಉಕ್ರೇನ್‌-ರಷ್ಯಾ

  • ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಉಕ್ರೇನ್ ‌ನಿಂದ ಬಂದ ಕನ್ನಡಿಗ ವೈದ್ಯ‌ವಿದ್ಯಾರ್ಥಿಗಳಿಗೆ ಪ್ರವೇಶ

    ಬೆಂಗಳೂರು : ಉಕ್ರೇನ್-ರಷ್ಯಾ ಯುದ್ದದಿಂದ ಉಕ್ರೇನ್ ನಲ್ಲಿ ಶಿಕ್ಷಣ ವಂಚಿತರಾಗಿ ಕರ್ನಾಟಕಕ್ಕೆ ವಾಪಸ್ ಆಗಿರೋ ಮೆಡಿಕಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಉಕ್ರೇನ್ ನಿಂದ ಅರ್ಧಕ್ಕೆ ಶಿಕ್ಷಣ ಬಿಟ್ಟು ಬಂದಿರೋ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವೈದ್ಯ ಶಿಕ್ಷಣ ಮುಂದುವರೆಸಲು ಅವಕಾಶ ನೀಡಲು ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳು ಮುಂದೆ ಬಂದಿದೆ.ಈ ಸಂಬಂಧ ಸಭೆ ಮಾಡಿರೋ ಡೀಮ್ಸ್ ವಿವಿಗಳ ಒಕ್ಕೂಟ ವಿದ್ಯಾರ್ಥಿಗಳಿಗೆ ಪ್ರವೇಶ ನಿಡೋ ಭರವಸೆ ನೀಡಿದ್ದಾರೆ.

    ಪ್ರತಿ ವರ್ಷದ ಕೋರ್ಸ್ ನಲ್ಲಿ ಪ್ರತಿ ವಿಶ್ವವಿದ್ಯಾಲಯಗಳಲ್ಲಿ 25 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ನಿರ್ಧಾರ ಮಾಡಲಾಗಿದೆ. ಒಟ್ಟಾರೆ ಒಂದು ವಿಶ್ವವಿದ್ಯಾಲಯಕ್ಕೆ ವರ್ಷಕ್ಕೆ 125 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಒಕ್ಕೂಟ ನಿರ್ಧಾರ‌ ಮಾಡಲಾಗಿದೆ ಅಂತ ಒಕ್ಕೂಟ ಮಾಹಿತಿ ನೀಡಿದೆ. ಇದನ್ನೂ ಓದಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ, ನಾವು ಕಲಿಯುತ್ತೇವೆ: ರಾಹುಲ್ ಗಾಂಧಿ

    ಡೀಮ್ಡ್ ವಿಶ್ವವಿದ್ಯಾಲಯಗಳು ಪ್ರವೇಶ ನೀಡಿದರು. ಸರ್ಕಾರವೇ ನಿರ್ಧಾರ ಮಾಡುವ ಶುಲ್ಕಕ್ಕೆ ಪ್ರವೇಶ ಕೊಡುತ್ತೇವೆ ಅಂತ ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ತಿಳಿಸಿದೆ. ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ಪ್ರವೇಶ ನೀಡಲು ನಿರ್ಧಾರ ಮಾಡಲಾಗಿದೆ. ಈಗಾಗಲೇ ಅನುಮತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡೀಮ್ಡ್ ವಿವಿಗಳ ಒಕ್ಕೂಟ ಪತ್ರ ಬರೆದಿದೆ. ಕೇಂದ್ರದಿಂದ ಅನುಮತಿ ಬಂದ ಕೂಡಲೇ ಪ್ರವೇಶ ನೀಡುವ ಕುರಿತು ಅಂತಿಮ ತೀರ್ಮಾನ ಘೋಷಣೆ ‌ಮಾಡೋದಾಗಿ ಒಕ್ಕೂಟ ತಿಳಿಸಿದೆ. ಇದನ್ನೂ ಓದಿ: 5 ವರ್ಷ ಪೂರ್ಣಗೊಳಿಸಿ ಮತ್ತೆ ಅಧಿಕಾರಕ್ಕೇರಿದ ಮೊದಲ ಯುಪಿ ಸಿಎಂ ಯೋಗಿ

  • ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ

    ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ

    ಪಾಟ್ನಾ: ರಾಹುಲ್ ಗಾಂಧಿ ಅವರು ಮಾಡಿದ ಟ್ವೀಟ್‍ಗೆ ಅರ್ಥವಿಲ್ಲ ಹಾಗೂ ಇದೊಂದು ಸುಳ್ಳಿನಕಂತೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಕಿಡಿಕಾರಿದರು.

    ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್‍ಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಅವರು ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುತ್ತಿರುವ ಕಾರ್ಯವನ್ನು ಜನರು ಮೆಚ್ಚುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲರೂ ಭಾರತದತ್ತ ನೋಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ಹಿಂದೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಉಕ್ರೇನ್‍ನಲ್ಲಿ ನಡೆಯುತ್ತಿರುವ ರಷ್ಯಾ ದಾಳಿಯ ನಡುವೆ ಸಿಲುಕಿರುವ ಭಾರತೀಯರನ್ನು ದೇಶಕ್ಕೆ ಮರಳಿ ತರಲು ಪ್ರಾರಂಭಿಸಲಾದ ಆಪರೇಷನ್ ಗಂಗಾ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಅಸಹಾಯಕ ವಿದ್ಯಾರ್ಥಿಗಳ ಜೊತೆಗೆ ಇಂತಹ ನಾಚಿಕೆಗೇಡಿನ ವರ್ತನೆ ಇಡೀ ದೇಶಕ್ಕೆ ಮಾಡಿದ ಅವಮಾನ. ಆಪರೇಷನ್ ಗಂಗಾದ ಈ ಕಹಿ ಸತ್ಯವು ಮೋದಿ ಸರ್ಕಾರದ ನೈಜ ಮುಖವನ್ನು ತೆರೆದಿಟ್ಟಿದೆ ಎಂದು ಟೀಕಿಸಿದ್ದರು.

    ರಷ್ಯಾ ಆಕ್ರಮಣದ ಹಿನ್ನೆಲೆಯಲ್ಲಿ ಉಕ್ರೇನ್ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್‍ನ ನೆರೆ ದೇಶಗಳಾದ ನಿಯಾ, ಹಂಗೆರಿ, ಸ್ಲೋವಾಕಿಯಾ ಮತ್ತು ಪೋಲೆಂಡ್‍ನಿಂದ ಭಾರತೀಯರನ್ನು ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಆಪರೇಷನ್ ಗಂಗಾ ಎಂದು ಹೆಸರಿಡಲಾಗಿದೆ.

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ರಕ್ಷಿಸಲು ಆಪರೇಷನ್ ಗಂಗಾ ಅಡಿಯಲ್ಲಿ ವಿಶೇಷ ವಿಮಾನಗಳು ಪ್ರಾರಂಭವಾದಾಗಿನಿಂದ 15,900ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ಕರೆತರಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

  • ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿ – ಕಲೆ ಮೂಲಕ ಸುದರ್ಶನ್ ಪಟ್ನಾಯಕ್ ಮನವಿ

    ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿ – ಕಲೆ ಮೂಲಕ ಸುದರ್ಶನ್ ಪಟ್ನಾಯಕ್ ಮನವಿ

    ಭುವನೇಶ್ವರ: ಒಡಿಶಾ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ತಮ್ಮ ಅದ್ಭುತ ಶಿಲ್ಪಕಲೆಗಳಿಂದ ನೆಟ್ಟಿಗರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ. ತಮ್ಮ ಕಲೆಯಿಂದಲೇ ಎಲ್ಲರ ಗಮನ ಸೆಳೆಯುವುದರ ಜೊತೆಗೆ ವಿಶೇಷ ಗೌರವಗಳನ್ನು ಸ್ವೀಕರಿಸಿದ್ದಾರೆ.

    ಸದ್ಯ ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿಹೋಗಿದೆ ಮತ್ತು ಅಲ್ಲಿನ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದು, ಉಕ್ರೇನ್‍ನಲ್ಲಿ ಅನೇಕ ಸಾವು-ನೋವುಗಳು ಸಂಭವಿಸಿವೆ. ಈ ನಡುವೆ ಸುದರ್ಶನ್ ಪಟ್ನಾಯಕ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರ ಭಾವಚಿತ್ರವನ್ನು ಮರಳಿನಲ್ಲಿ ರಚಿಸಿದ್ದಾರೆ. ಇದರ ಜೊತೆಗೆ ಯುದ್ಧ ನಿಲ್ಲಿಸಿ ಎಂಬ ಸಂದೇಶವನ್ನು ಬರೆದಿದ್ದಾರೆ.

    ಈ ಶಿಲ್ಪಕಲೆಯ ಫೋಟೋವನ್ನು ಸುದರ್ಶನ್ ಪಟ್ನಾಯಕ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಸ್ಟಾಪ್ ವಾರ್ ಎಂಬ ಸಂದೇಶದೊಂದಿಗೆ STOP WAR ಸಂದೇಶದೊಂದಿಗೆ ಪುರಿ ಬೀಚ್‍ನಲ್ಲಿರುವ ನನ್ನ ಸ್ಯಾಂಡ್‍ಆರ್ಟ್ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಲ್ಲಿಯವರೆಗೂ 4,000 ಕ್ಕೂ ಹೆಚ್ಚು ಲೈಕ್ಸ್ ಮತ್ತು ಕಾಮೆಂಟ್‍ಗಳು ಹರಿದುಬಂದಿದೆ. ಫೆಬ್ರವರಿ 24 ರಿಂದ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲು ಆರಂಭಿಸಿದ್ದು, ಇಲ್ಲಿಯವರೆಗೂ ಸುಮಾರು 28 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಯೂರೋಪ್‌ನಲ್ಲಿ ಸೈಬರ್ ಅಟ್ಯಾಕ್ – ಇಂಟರ್‌ನೆಟ್ ಇಲ್ಲದೇ ಸಾವಿರಾರು ಜನ ಪರದಾಟ

  • ಯೂರೋಪ್‌ನಲ್ಲಿ ಸೈಬರ್ ಅಟ್ಯಾಕ್ – ಇಂಟರ್‌ನೆಟ್ ಇಲ್ಲದೇ ಸಾವಿರಾರು ಜನ ಪರದಾಟ

    ಯೂರೋಪ್‌ನಲ್ಲಿ ಸೈಬರ್ ಅಟ್ಯಾಕ್ – ಇಂಟರ್‌ನೆಟ್ ಇಲ್ಲದೇ ಸಾವಿರಾರು ಜನ ಪರದಾಟ

    ಪ್ಯಾರಿಸ್: ಉಕ್ರೇನ್-ರಷ್ಯಾದ ಯುದ್ಧ ಪ್ರಾರಂಭವಾದ ಬಳಿಕ ಶುಕ್ರವಾರ ಸೈಬರ್ ಅಟ್ಯಾಕ್ ಆಗಿರುವ ಬಗ್ಗೆ ವದಂತಿಗಳು ಹಬ್ಬಿವೆ. ಈ ಕಾರಣದಿಂದ ಯೂರೋಪ್‌ನಾದ್ಯಂತ ಇಂಟರ್‌ನೆಟ್ ಅನ್ನು ಸ್ಥಗಿತಗೊಳಿಸಿದ್ದು, ಸಾವಿರಾರು ಬಳಕೆದಾರರು ಇಂಟರ್‌ನೆಟ್ ಇಲ್ಲದೇ ದಿನದೂಡುತ್ತಿದ್ದಾರೆ.

    ಫ್ರಾನ್ಸ್ ಅಂಗಸಂಸ್ಥೆ ನಾರ್ಡ್‌ನೆಟ್ ಒದಗಿಸುತ್ತಿದ್ದ ಉಪಗ್ರಹ ಇಂಟರ್‌ನೆಟ್ ಸೇವೆಯನ್ನು ಸುಮಾರು 9 ಸಾವಿರ ಚಂದಾದಾರರು ಬಳಸುತ್ತಿದ್ದು, ಈ ಸೇವೆಯನ್ನು ಫೆಬ್ರವರಿ 24ರಂದು ಸ್ಥಗಿತಗೊಳಿಸಲಾಗಿದೆ. ಇದೀಗ ಅಷ್ಟೂ ಜನರು ಇಂಟರ್‌ನೆಟ್ ಸೇವೆ ಇಲ್ಲದೇ ಇರಬೇಕಾದಂತಹ ಪರಿಸ್ಥಿತಿ ಎದುರಾಗಿದೆ. ಇತರ ಇಂಟರ್‌ನೆಟ್ ಮೂಲಗಳನ್ನು ಹುಡುಕಬೇಕಾದ ಸಂದಿಗ್ಧತೆ ಎದುರಾಗಿದೆ. ಇದನ್ನೂ ಓದಿ: ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಯೂರೋಪ್, ಜರ್ಮನಿ, ಫ್ರಾನ್ಸ್, ಹಂಗೇರಿ, ಗ್ರೀಸ್, ಇಟಲಿ ಹಾಗೂ ಪೋಲೆಂಡ್‌ನಲ್ಲಿ ಬಿಗ್‌ಬ್ಲೂನ 40,000 ಚಂದಾದಾರರಿದ್ದಾರೆ. ಇದರಲ್ಲಿ ಮೂರನೇ ಒಂದು ಭಾಗದಷ್ಟು ಜನರಿಗೆ ಇಂಟರ್‌ನೆಟ್ ಸ್ಥಗಿತದ ಪರಿಣಾಮ ಬೀರಿದೆ. ಈ ಮಾಹಿತಿಯನ್ನು ಬಿಗ್‌ಬ್ಲೂ ಉಪಗ್ರಹ ಇಂಟರ್‌ನೆಟ್ ಸೇವೆಯ ಮೂಲ ಕಂಪನಿ ಯುಟೆಲ್‌ಸಾಟ್ ಶುಕ್ರವಾರ ತಿಳಿಸಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ 28 ಮಕ್ಕಳು ಸಾವು, 840 ಮಕ್ಕಳಿಗೆ ಗಾಯ – ಉಕ್ರೇನ್ ಸರ್ಕಾರ

    ಉಕ್ರೇನ್ ರಷ್ಯಾದ ಯುದ್ಧದಿಂದಾಗಿ ಸೈಬರ್ ದಾಳಿ ನಡೆದಿದೆ. ಹೀಗಾಗಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಫ್ರಾನ್ಸ್‌ನ ಬಾಹ್ಯಾಕಾಶ ಕಮಾಂಡ್ ಮುಖ್ಯಸ್ಥ ಜನರಲ್ ಮೈಕೆಲ್ ಫ್ರೆಡ್ಲಿಂಗ್ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಸಲಾಗಿಲ್ಲ. ಇದರ ಬಗ್ಗೆ ಪೊಲೀಸ್ ಹಾಗೂ ರಾಜ್ಯದ ಪಾಲುದಾರರಿಗೆ ಸೂಚನೆ ನೀಡಲಾಗಿದ್ದು, ತನಿಖೆ ನಡೆಯುತ್ತಿದೆ ಎಂದಿದ್ದಾರೆ.

  • ಕೈಕೊಟ್ಟಿತೆ ನ್ಯಾಟೋ- ರಷ್ಯಾ ಬಾಂಬ್‌ ದಾಳಿ ತಡೆಗೆ ಉಕ್ರೇನ್‌ ಮನವಿ ತಿರಸ್ಕಾರ

    ಕೈಕೊಟ್ಟಿತೆ ನ್ಯಾಟೋ- ರಷ್ಯಾ ಬಾಂಬ್‌ ದಾಳಿ ತಡೆಗೆ ಉಕ್ರೇನ್‌ ಮನವಿ ತಿರಸ್ಕಾರ

    ಕೀವ್: ರಷ್ಯಾದ ಬಾಂಬ್‌ ದಾಳಿಯನ್ನು ತಡೆಗಟ್ಟಲು ಉಕ್ರೇನ್‌ನಲ್ಲಿ ಹಾರಾಟ ನಿಷೇಧ ವಲಯ ರೂಪಿಸುವಂತೆ ಮಾಡಿದ್ದ ಮನವಿಯನ್ನು ನ್ಯಾಟೋ ತಿರಸ್ಕರಿಸಿದ್ದು, ನ್ಯಾಟೋ ನಿಲುವನ್ನು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಖಂಡಿಸಿದ್ದಾರೆ.

    ಮುಷ್ಕರ, ಸಾವುನೋವುಗಳು ಅನಿವಾರ್ಯವೆಂದು ತಿಳಿದಿದ್ದ ನ್ಯಾಟೋ ಉದ್ದೇಶಪೂರ್ವಕವಾಗಿ ಉಕ್ರೇನ್‌ನ ಆಕಾಶ ವಲಯವನ್ನು ಮುಚ್ಚದಿರಲು ನಿರ್ಧರಿಸಿದೆ ಎಂದು ವೀಡಿಯೋ ಮೂಲಕ ನ್ಯಾಟೋ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ

    ಮೈತ್ರಿಕೂಟದ ನಾಯಕತ್ವವು ಉಕ್ರೇನಿಯನ್‌ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್‌ ದಾಳಿಗೆ ಹಸಿರು ನಿಶಾನೆ ತೋರಿಸಿದೆ. ಹಾರಾಟ ನಿಷೇಧ ವಲಯವನ್ನು ಮಾಡಲು ನಿರಾಕರಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ರಷ್ಯಾದ ಬಾಂಬ್‌ ದಾಳಿ ತಡೆಗಟ್ಟುವ ನಿಟ್ಟಿನಲ್ಲಿ ಉಕ್ರೇನ್‌ನಲ್ಲಿ ಹಾರಾಟ ನಿಷೇಧ ವಲಯ ರೂಪಿಸುವಂತೆ ಉಕ್ರೇನ್‌ ಮನವಿ ಮಾಡಿತ್ತು. ಆದರೆ ನ್ಯಾಟೋ ಇದನ್ನು ತಿರಸ್ಕರಿಸಿತ್ತು. ಆದರೆ ಮತ್ತೊಂದೆಡೆ ರಷ್ಯಾ ತನ್ನ ಯುದ್ಧವನ್ನು ನಿಲ್ಲಿಸದಿದ್ದರೆ ಹೊಸ ನಿರ್ಬಂಧಗಳನ್ನು ವಿಧಿಸುವುದಾಗಿ ಪಾಶ್ಚಿಮಾತ್ಯ ಮಿತ್ರ ರಾಷ್ಟ್ರಗಳು ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ತಮ್ಮ ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!

    ಈ ಸಂಘರ್ಷದ ವಿಚಾರವಾಗಿ ಮೈತ್ರಿಕೂಟವು ಮಧ್ಯಪ್ರವೇಶಿಸುವುದಿಲ್ಲ. ಒಂದು ವೇಳೆ ಮಧ್ಯಪ್ರವೇಶಿಸಿದರೆ ವ್ಯಾಪಕ ಸಂಘರ್ಷಕ್ಕೆ ತಿರುಗಬಹುದು ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್‌ ಸ್ಟೋಲ್ಟೆನ್‌ಬರ್ಗ್‌ ಅಭಿಪ್ರಾಯಪಟ್ಟಿದ್ದಾರೆ.

    ನ್ಯಾಟೋ ಯುದ್ಧ ವಿಮಾನಗಳನ್ನು ಉಕ್ರೇನ್‌ನ ವಾಯುಮಾರ್ಗಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಹಾರಾಟ ನಿಷೇಧ ವಲಯವನ್ನು ಹೇರಬಹುದು. ಹಾರಾಟ ನಿಷೇಧ ವಲಯ ಕಾರ್ಯಗತಗೊಳಿಸುವುದಕ್ಕೆ ಇರುವುದು ಅದೊಂದೇ ಮಾರ್ಗ ಎಂದು ಸ್ಟೋಲ್ಟೆನ್‌ಬರ್ಗ್‌ ತಿಳಿಸಿದ್ದಾರೆ. ಇದನ್ನೂ ಓದಿ: 16 ಗಂಟೆ ಟ್ರಾನ್‍ನಲ್ಲೇ ನಿಂತುಕೊಂಡೆ ಪ್ರಯಾಣ ಮಾಡಿದ್ದೇವೆ: ನೋವು ಹಂಚಿಕೊಂಡ ವಿದ್ಯಾರ್ಥಿಗಳು!