Tag: ಉಗ್ರ

  • ಸಲ್ಮಾನ್‌ ಖಾನ್‌ ಈಗ ಉಗ್ರ: ಪಾಕ್‌ ಘೋಷಣೆ

    ಸಲ್ಮಾನ್‌ ಖಾನ್‌ ಈಗ ಉಗ್ರ: ಪಾಕ್‌ ಘೋಷಣೆ

    ಇಸ್ಲಾಮಾಬಾದ್: ಬಲೂಚಿಸ್ತಾನ್‌ ಪರ ಮಾತನಾಡಿದ್ದಕ್ಕೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಅವರಿಗೆ ಪಾಕಿಸ್ತಾನವು ‘ಭಯೋತ್ಪಾದಕ’ ಎಂಬ ಹಣಪಟ್ಟಿ ಕಟ್ಟಿದೆ.

    ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಭಾರತೀಯ ಸಿನಿಮಾದ ಜಾಗತಿಕ ವ್ಯಾಪ್ತಿಯ ಬಗ್ಗೆ ಮಾತನಾಡುವಾಗ, ಬಲೂಚಿಸ್ತಾನ್ (Balochistan) ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ್ದರು. ಹೀಗಾಗಿ, ಪಾಕಿಸ್ತಾನ (Pakistan) ಸರ್ಕಾರ ಅವರನ್ನು ‘ಭಯೋತ್ಪಾದಕ’ ಎಂದು ಘೋಷಿಸಿದೆ. ಇದನ್ನೂ ಓದಿ: ಪಾತಾಳಕ್ಕೆ ಬಿದ್ದ ಪಾಕ್‌ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ

    ಸಲ್ಮಾನ್ ಅವರನ್ನು ಪಾಕಿಸ್ತಾನದ 1997 ರ ಭಯೋತ್ಪಾದನಾ ನಿಗ್ರಹ ಕಾಯ್ದೆಯ 4ನೇ ವೇಳಾಪಟ್ಟಿಯ ಅಡಿಯಲ್ಲಿ ಸೇರಿಸಲಾಗಿದೆ. ಭಯೋತ್ಪಾದನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಕಟ್ಟುನಿಟ್ಟಿನ ನಿಗಾದಲ್ಲಿರುವ ವ್ಯಕ್ತಿಗಳಿಗೆ ಈ ವರ್ಗವನ್ನು ಕಾಯ್ದಿರಿಸಲಾಗಿದೆ.

    ‘ಈಗ ನೀವು ಹಿಂದಿ ಸಿನಿಮಾ ಮಾಡಿ ಇಲ್ಲಿ ಬಿಡುಗಡೆ ಮಾಡಿದರೆ, ಅದು ಸೂಪರ್ ಹಿಟ್ ಆಗುತ್ತದೆ. ನೀವು ತಮಿಳು, ತೆಲುಗು ಅಥವಾ ಮಲಯಾಳಿ ಸಿನಿಮಾ ಮಾಡಿದರೆ, ನೂರಾರು ಕೋಟಿ ಗಳಿಸುತ್ತದೆ. ಏಕೆಂದರೆ ಇಲ್ಲಿ ಹಲವಾರು ದೇಶಗಳ ಜನರು ವಾಸಿಸುತ್ತಾರೆ. ಬಲೂಚಿಸ್ತಾನದ ಜನರಿದ್ದಾರೆ, ಅಫ್ಘಾನಿಸ್ತಾನದ ಜನರಿದ್ದಾರೆ, ಪಾಕಿಸ್ತಾನದ ಜನರಿದ್ದಾರೆ. ಎಲ್ಲರೂ ಇಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಲ್ಮಾನ್‌ ಖಾನ್‌ ಸಮಾರಂಭದಲ್ಲಿ ಮಾತನಾಡಿದ್ದರು.

    ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಬೇರ್ಪಡಿಸುವ ಅವರ ಹೇಳಿಕೆಯು ಪಾಕ್‌ನ ತೀವ್ರ ಟೀಕೆಗೆ ಗುರಿಯಾಗಿದೆ. ಏಕೆಂದರೆ ಪಾಕಿಸ್ತಾನ ಆ ಪ್ರಾಂತ್ಯವನ್ನು ದೇಶದ ಅವಿಭಾಜ್ಯ ಅಂಗವೆಂದು ನೋಡುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ, ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸಲ್ಮಾನ್ ಅವರ ಮಾತುಗಳನ್ನು ಶ್ಲಾಘಿಸಿದ್ದಾರೆ. ಬಲೂಚ್ ಸ್ವಾತಂತ್ರ್ಯದ ಪ್ರಮುಖ ವಕೀಲರಾದ ಮೀರ್ ಯಾರ್ ಬಲೂಚ್, ‘ನಟ ಆರು ಕೋಟಿ ಬಲೂಚ್ ಜನರಿಗೆ ಸಂತೋಷ ತಂದಿದ್ದಾರೆ’ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ಪಾಕಿಸ್ತಾನದ ಅತಿದೊಡ್ಡ ಆದರೆ ಕಡಿಮೆ ಅಭಿವೃದ್ಧಿ ಹೊಂದಿದ ಪ್ರಾಂತ್ಯವಾದ ಬಲೂಚಿಸ್ತಾನ್, ದೀರ್ಘಕಾಲದಿಂದ ಆರ್ಥಿಕ ನಿರ್ಲಕ್ಷ್ಯ, ರಾಜಕೀಯ ದಮನ ಮತ್ತು ಮಿಲಿಟರಿ ದಮನಗಳನ್ನು ಎದುರಿಸುತ್ತಿದೆ. ಅಪಾರ ಖನಿಜ ಸಂಪತ್ತಿನ ಹೊರತಾಗಿಯೂ, ಈ ಪ್ರದೇಶವು ಬಡತನದಿಂದ ಬಳಲುತ್ತಿದೆ. ಅದರ ಜನಸಂಖ್ಯೆಯ 70% ಕ್ಕಿಂತ ಹೆಚ್ಚು ಜನರು ಬಡತನ ರೇಖೆಯ ಕೆಳಗಿದ್ದಾರೆ.

  • ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಎನ್‌ಕೌಂಟರ್ – ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

    ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಎನ್‌ಕೌಂಟರ್ – ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಉಧಂಪುರ (Udhampur) ಜಿಲ್ಲೆಯ ಬಸಂತಗಢದಲ್ಲಿ (Basantgarh) ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

    ‘ಆಪರೇಷನ್ ಬಿಹಾಲಿ’ (Operation Bihali) ಹೆಸರಿನಲ್ಲಿ ಬಸಂತಗಢ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದೆ. ಇದೇ ವೇಳೆ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರ ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್

    ಅಮರನಾಥ ಯಾತ್ರೆ ಆರಂಭಗೊಳ್ಳುವ ಒಂದು ವಾರ ಮೊದಲೇ ಈ ಪ್ರದೇಶದಲ್ಲಿ ಉಗ್ರರು ಶಸ್ತ್ರಾಸ್ತ್ರಗಳೊಂದಿಗೆ ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಮ್ಮು ವಲಯದ ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ – ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸೇರಿದ ಮೊದಲ ಭಾರತೀಯ ಶುಕ್ಲಾ

  • It Is My Territory – ಉಗ್ರಂ ಶೈಲಿಯಲ್ಲಿ ವೃತ್ತ ಬರೆದು ರಾಹುಲ್‌ ಸಂಭ್ರಮ

    It Is My Territory – ಉಗ್ರಂ ಶೈಲಿಯಲ್ಲಿ ವೃತ್ತ ಬರೆದು ರಾಹುಲ್‌ ಸಂಭ್ರಮ

    ಬೆಂಗಳೂರು: ಆರ್‌ಸಿಬಿ (RCB) ವಿರುದ್ಧ ಗೆದ್ದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡದಲ್ಲಿರುವ ಕನ್ನಡಿಗ ಕೆಎಲ್‌ ರಾಹುಲ್‌ (KL Rahul) ಉಗ್ರಂ ಶೈಲಿಯಲ್ಲಿ ವೃತ್ತ ಬರೆದು ಸಂಭ್ರಮಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಪಂದ್ಯ ಮುಗಿದ ಬಳಿಕ ರಾಹುಲ್‌ ಪಿಚ್‌ ಬಳಿ ಉಗ್ರಂ ಸಿನಿಮಾದ ದೃಶ್ಯದಂತೆ ಬ್ಯಾಟ್‌ ಅನ್ನು ನೆಲಕ್ಕೆ ಗುದ್ದಿ “ಇದು ನನ್ನ ಮನೆ” ಎಂಬಂತೆ ಸನ್ನೆ ಮಾಡಿದರು. ಇದನ್ನೂ ಓದಿ: ತವರಲ್ಲಿ ಮತ್ತೆ ಸೋತ ಆರ್‌ಸಿಬಿ – ಕೆ.ಎಲ್‌.ರಾಹುಲ್‌ ಮಿಂಚು; ಡೆಲ್ಲಿಗೆ 6 ವಿಕೆಟ್‌ಗಳ ಜಯ


    ಪಂದ್ಯಶ್ರೇಷ್ಠ ಗೌರಕ್ಕೆ ಪಾತ್ರರಾದ ರಾಹುಲ್‌, ಬೆಂಗಳೂರು (Bengaluru) ನನ್ನ ಮನೆ. ಈ ಮೈದಾನದ ಬಗ್ಗೆ ಎಲ್ಲರಿಗಿಂತ ಚೆನ್ನಾಗಿ ನನಗೆ ತಿಳಿದಿದೆ ಎಂದು ತಿಳಿಸಿದರು. ಈ ಡೈಲಾಗ್‌ ಹೊಡೆಯುವ ಮೂಲಕ ಹರಾಜಿನಲ್ಲಿ ತನ್ನನ್ನು ಪರಿಗಣಿಸದ ಆರ್‌ಸಿಬಿಗೆ ಟಾಂಗ್‌ ನೀಡಿದರು. ಇದನ್ನೂ ಓದಿ: RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ 7 ವಿಕೆಟ್‌ ನಷ್ಟಕ್ಕೆ 163 ರನ್‌ ಹೊಡೆಯಿತು. ಇದಕ್ಕೆ ಉತ್ತರ ನೀಡಿದ ಡೆಲ್ಲಿ ಕೆಎಲ್‌ ರಾಹುಲ್‌ ಅವರ ಅತ್ಯುತ್ತಮ ಆಟದಿಂದ 17.5 ಓವರ್‌ಗಳಲ್ಲಿ 169 ರನ್‌ ಹೊಡೆದು ಜಯಗಳಿಸಿತು.

    ರಾಹುಲ್‌ ಔಟಾಗದೇ 93 ರನ್‌ (53 ಎಸೆತ, 7 ಬೌಂಡರಿ, 6 ಸಿಕ್ಸ್‌) ಸಿಡಿಸಿ ತಂಡಕ್ಕೆ ಜಯವನ್ನು ತಂದುಕೊಟ್ಟರು.

     

  • ಜಮ್ಮು-ಕಾಶ್ಮೀರ | ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆ

    ಜಮ್ಮು-ಕಾಶ್ಮೀರ | ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದಾಚಿಗಂ ಅರಣ್ಯ ಪ್ರದೇಶದಲ್ಲಿ (Dachigam Forest) ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಉಗ್ರರಿರುವ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಸೋಮವಾರ (ಡಿ.01) ಎನ್‌ಕೌಂಟರ್ ಪ್ರಾರಂಭವಾಗಿದ್ದು, ಮಂಗಳವಾರ ಬೆಳಿಗ್ಗೆ ಓರ್ವ ಉಗ್ರ ಹತನಾಗಿದ್ದಾನೆ.ಇದನ್ನೂ ಓದಿ: UI ರಿಲೀಸ್‌ಗೂ ಮುನ್ನ ಉಪೇಂದ್ರ & ಟೀಮ್‌ ಟೆಂಪಲ್‌ ರನ್

    ದಾಚಿಗಂ ಅರಣ್ಯ ಪ್ರದೇಶಕ್ಕೂ ಮುನ್ನ ಶ್ರೀನಗರದ ಹರ್ವಾನ್ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಬಳಿಕ ಉಗ್ರರ ಅಡಗುತಾಣ ಸುತ್ತುವರಿದಾಗ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಎನ್‌ಕೌಂಟರ್ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದಕ್ಕೂ ಮುನ್ನ ನ.23 ರಂದು, ಬಾರಾಮುಲ್ಲಾ ಪೊಲೀಸರು ಹಾಗೂ ಭದ್ರತಾ ಪಡೆಗಳೊಂದಿಗೆ ನಡೆಸಿದ್ದ ಜಂಟಿ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕುಂಜರ್ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸುವ ಮೂಲಕ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಂಡರು.ಇದನ್ನೂ ಓದಿ: ಬಿಜೆಪಿಯಲ್ಲಿ ಬಣ ಫೈಟ್ – ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೇಟಿ

     

  • ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಹಿಂಡಲಗಾ ಜೈಲಿಗೆ ಶಿಫ್ಟ್

    ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಹಿಂಡಲಗಾ ಜೈಲಿಗೆ ಶಿಫ್ಟ್

    – ಗಡ್ಕರಿಗೆ ಜೀವ ಬೆದರಿಕೆ ಕರೆ ಮಾಡಿ 100 ಕೋಟಿ ರೂ. ಬೇಡಿಕೆ ಇಟ್ಟಿದ್ದ ಆಸಾಮಿ

    ಬೆಳಗಾವಿ: ಉಗ್ರ ಸಂಘಟನೆ (Terrorist Organization) ಜೊತೆಗೆ ನಂಟು ಹೊಂದಿದ್ದ ಮೋಸ್ಟ್ ವಾಂಟೆಡ್ ಉಗ್ರ ಅಫ್ಸರ್ ಪಾಷಾನನ್ನು ಮಹಾರಾಷ್ಟ್ರದ (Maharashtra) ನಾಗ್ಪುರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ (Hindalaga Jail) ಸೋಮವಾರ ರಾತ್ರಿ ಶಿಫ್ಟ್ ಮಾಡಲಾಗಿದೆ.

    ಕೇಂದ್ರ ಸಚಿವ ನಿತೀನ್ ಗಡ್ಕರಿಗೆ (Nitin Gadkari) ಜೀವ ಬೆದರಿಕೆ ಕರೆ ಮಾಡಿ 100 ಕೋಟಿ ರೂ. ಬೇಡಿಕೆಯಿಟ್ಟಿದ್ದ ಆಸಾಮಿ ಈತ. ಬೆಳಗಾವಿಯ ಹಿಂಡಲಗಾ ಜೈಲಿನಿಂದ ಜ.14 2023ರಂದು ನಾಗ್ಪುರದಲ್ಲಿರುವ ಸಚಿವ ಗಡ್ಕರಿ ಕಚೇರಿಗೆ ಫೋನ್ ಮಾಡಿ ಇಬ್ಬರು ಕೈದಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಮಹಾರಾಷ್ಟ್ರದ ನಾಗ್ಪುರ ಠಾಣೆ ಪೊಲೀಸರು ಕರೆದೊಯ್ದಿದ್ದರು. ಇಷ್ಟು ದಿನ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದ ಅಫ್ಸರ್ ಪಾಷಾನನ್ನು ಮತ್ತೆ ಈಗ ಬೆಳಗಾವಿಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಆ.30 ರಂದು ಬಿಜೆಪಿ ಸೇರಲಿದ್ದಾರೆ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌

    ಸೋಮವಾರ ರಾತ್ರಿ ನಾಗ್ಪುರದಿಂದ ಅಫ್ಸರ್ ಪಾಷಾನನ್ನು ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕರೆ ತಂದ ಪೊಲೀಸರು, ಬಿಗಿ ಪೊಲೀಸ್ ಭದ್ರತೆಯಲ್ಲಿ ರಸ್ತೆ ಮಾರ್ಗವಾಗಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಡಿ.15 2005ರಂದು ಬೆಂಗಳೂರಿನ ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಸೈನ್ಸ್ ಸ್ಫೋಟ ಪ್ರಕರಣದಲ್ಲಿ ಅಫ್ಸರ್ ಪಾಷಾ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾನೆ. ಅಲ್ಲದೇ ಪಿಎಫ್‌ಐ ಸಂಘಟನೆ ಜೊತೆಗೆ ನಂಟಿರುವ ಜಯೇಶ ಪೂಜಾರಿ ಜೊತೆಗೆ ಸೇರಿಕೊಂಡು ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಮಾಡಿದ್ದ. ಅಫ್ಸರ್ ಪಾಷಾ ಮತ್ತು ಜಯೇಶ್ ಪೂಜಾರಿ ಇಬ್ಬರೂ ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಈ ಖತರ್ನಾಕ್ ಪ್ಲಾನ್ ಮಾಡಿದ್ದರು. ಇದನ್ನೂ ಓದಿ: ಅತ್ತ ದರ್ಶನ್‌ಗೆ ರಾಜಾತಿಥ್ಯ – ಇತ್ತ ಎ5 ಆರೋಪಿ ನಂದೀಶ್ ಕುಟುಂಬ ಜೀವನ ಸಾಗಿಸಲು ಪರದಾಟ

  • ವರದಕ್ಷಿಣೆ ಕೊಟ್ಟಿರಲಿಲ್ಲ, ಹೀಗಾಗಿ ‘ಉಗ್ರಂ’ ಸಿನಿಮಾ ಮಾಡ್ಕೊಟ್ಟೆ: ಪ್ರಶಾಂತ್ ನೀಲ್ ತಮಾಷೆ

    ವರದಕ್ಷಿಣೆ ಕೊಟ್ಟಿರಲಿಲ್ಲ, ಹೀಗಾಗಿ ‘ಉಗ್ರಂ’ ಸಿನಿಮಾ ಮಾಡ್ಕೊಟ್ಟೆ: ಪ್ರಶಾಂತ್ ನೀಲ್ ತಮಾಷೆ

    ವತ್ತು ಇಡೀ ವಿಶ್ವ ಪ್ರಶಾಂತ್ ನೀಲ್ (Prashant Neel) ಕಡೆ ನೋಡುತ್ತಿದೆ. ಆದರೆ ಅದೇ ನೀಲ್ ಮೊದಲ ಸಿನಿಮಾ ಉಗ್ರಂ (Ugram) ಮಾಡುವಾಗ ಎಂಥಾ ಪರಿತಾಪ ಪಟ್ಟಿದ್ದರು ಅನ್ನೋದು ಆಲ್‌ಮೋಸ್ಟ್ ನಿಮ್ಮೆಲ್ಲರಿಗೂ ತಿಳಿದಿದೆ. ಉಗ್ರಂ ಸಿನಿಮಾವನ್ನ ಎಷ್ಟು ಪ್ರೀತಿಸಿದ್ದರು ಅನ್ನೋದಕ್ಕೆ ಸಾಕ್ಷಿ `ಸಲಾರ್’ ಚಿತ್ರ ಮಾಡಿರುವುದು. ಆ ನೆನಪು ಈಗ್ಯಾಕಂದ್ರೆ ಇದೀಗ ಉಗ್ರಂ ಚಿತ್ರಕ್ಕೆ ದಶಕದ ಸಂಭ್ರಮ. ಹೀಗಾಗೇ ಪ್ರಶಾಂತ್ ನೀಲ್ ಹಾಗೂ ಶ್ರೀಮುರಳಿ ಉಗ್ರಂ ಹಿಂದಿನ ಸಂಕಟದ ಕುರಿತು ಮನ ಬಿಚ್ಚಿದ್ದಾರೆ. ಅವರ ಮಾತುಗಳಲ್ಲೇ ಕೇಳಿ.

    ಅರ್ಜುನ-ಶ್ರೀಕೃಷ್ಣ ಭಾವ ಬಾಮೈದ ಸೇರಿ ಕುರುಕ್ಷೇತ್ರ ಯುದ್ಧ ಗೆದ್ರು. ಹಾಗೆಯೇ ಭಾವ ಬಾಮೈದ ಪ್ರಶಾಂತ್ ನೀಲ್-ಶ್ರೀಮುರಳಿ ಉಗ್ರಂ ಚಿತ್ರಿಸಿ ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಬರೆದ್ರು. ನಯಾ ತಂತ್ರಜ್ಞಾನವನ್ನ ಕನ್ನಡಕ್ಕೆ ಪರಿಚಿಯಿಸಿರುವ ಉಗ್ರಂ ಆ ಸಮಯದಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಗಳಿಸಲಿಲ್ಲ. ಆದರೆ ಈಗದು ವಿಶ್ವವಿದ್ಯಾಲಯ. ಅದಕ್ಕೀಗ 10 ವರ್ಷ ಆಯಸ್ಸು ಪ್ಲಸ್ ಯಶಸ್ಸು.

    ಪ್ರಶಾಂತ್ ನೀಲ್ ಈಗ ಸ್ಟಾರ್ ಡೈರೆಕ್ಟರ್. ಆದರೆ ಇದೇ ನೀಲ್ ಮೊದಲ ಹೆಜ್ಜೆಯಲ್ಲಿ ಅದೆಷ್ಟು ಸವಾಲು ಎದುರಿಸಿದ್ರು ಅನ್ನೋದು ಕೆಲವರಿಗೆ ಗೊತ್ತಿರಲಿಲ್ಲ. ಇಂದಿಗೂ ಉಗ್ರಂ ಬಿಗ್ಗೆಸ್ಟ್ ಟೀಚರ್ ಆಫರ್ ಮೈ ಲೈಫ್ ಎನ್ನುತ್ತಾರೆ ನೀಲ್. ತಾಳ್ಮೆ-ಹಠ-ಛಲ ಉಗ್ರಂ ಆಯ್ತು. ಶ್ರೀಮುರಳಿಗೆ (Muruli) ಗೆಲ್ಲಲೇಬೇಕಾದ ಅನಿವಾರ್ಯತೆ. ಪ್ರಶಾಂತ್ ನೀಲ್‌ಗೆ ಗೆಲ್ಲುವ ಹುಚ್ಚು. ಆಗ ಸೃಷ್ಟಿಯಾಗಿದ್ದೇ ಉಗ್ರಂ.

    ನೀಲ್-ಭುವನ್ ಗೌಡ-ರವಿಬಸ್ರೂರ್ ಹಸಿದ ಜೀವಗಳಾಗಿದ್ವು. ಸಾಧಿಸುವ ವಿಶ್ವಾಸ. ಸಾಧಿಸಬೇಕೆಂಬ ಹಂಬಲ. ಹೀಗಾಗಿ ಹುಚ್ಚುತನದಿಂದ ಹೋಗ್ತಿದ್ದ ತಂಡಕ್ಕೆ ಹುಚ್ಚರೇ ಬೇಕಿತ್ತು. ಅದೇ ನಾವು ಎನ್ನುತ್ತಾರೆ ನೀಲ್. ಪ್ರಶಾಂತ್ ನೀಲ್ ಸಹೋದರಿಯನ್ನ ಶ್ರೀಮುರಳಿ ಮದುವೆಯಾಗಿದ್ದಾರೆ. ಅದಕ್ಕೆ ತಮಾಷೆಯಿಂದ, `ವರದಕ್ಷಿಣಿ ಕೊಟ್ಟಿರಲಿಲ್ಲ. ಹೀಗಾಗಿ ಸಿನಿಮಾ ಮಾಡ್ಕೊಟ್ಟೆ’ ಎನ್ನುತ್ತಾರೆ ನೀಲ್.

    ಉಗ್ರಂ ಚಿತ್ರವನ್ನ ನೀಲ್ ಎಷ್ಟು ಪ್ರೀತಿಸಿದ್ದರು ಅಂದ್ರೆ ಅದನ್ನೇ ದೊಡ್ಡ ಮಟ್ಟಕ್ಕೆ ತಲುಪಿಸಲು ಸಲಾರ್ ಸಿನಿಮಾ ಮಾಡಿದ್ರು. ಉಗ್ರಂ ಮಾಡುವಾಗ ಪ್ರತಿ ಹಂತದಲ್ಲೂ ಸವಾಲು ಎದುರಿಸಿದ್ದಕ್ಕೆ ಈಗ ನೀಲ್ ಬಂಡೆಯಾಗಿದ್ದಾರೆ. ಸಿಡಿಲಿಗೂ ಬೆಚ್ಚದೆ ಉಕ್ಕಿನಂತೆ ನಿಂತಿದ್ದಾರೆ. ಮಾಡಿದ್ದು ನಾಲ್ಕೇ ಸಿನಿಮಾ ಆದ್ರೂ ಇಂಡಿಯನ್ ಸಿನಿಮಾ ಇಂಡಸ್ಟಿçಯಲ್ಲಿ ನೀಲ್ ಟ್ರೆಂಡ್ ಸೆಟ್ಟರ್. ಹೀಗಾಗಿ ಉಗ್ರಂ ಮೆಲಕು ಹಾಕಿದ್ದಾರೆ ನೀಲ್ & ಶ್ರೀಮುರಳಿ. ಕಾಲ ಯಾರನ್ನು ಎಲ್ಲಿ ಬೇಕಾದರೂ ಕೂಡಿಸುತ್ತದೆ. ಕಾಯಬೇಕಷ್ಟೇ.

  • ISIS ಉಗ್ರನೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಯುವಕನಿಗೆ ಆರ್ಥಿಕ ಸಂಕಷ್ಟ

    ISIS ಉಗ್ರನೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಯುವಕನಿಗೆ ಆರ್ಥಿಕ ಸಂಕಷ್ಟ

    ಯಾದಗಿರಿ: ಉಗ್ರನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಯಾದಗಿರಿ (Yadgir) ಜಿಲ್ಲೆಯ ಶಹಾಪುರದ ವ್ಯಕ್ತಿಯೊಬ್ಬನನ್ನ ಜಾರ್ಖಂಡ್‌ನ ಎನ್‌ಐಎ (Jharkhand NIA Team) ತಂಡ ವಿಚಾರಣೆ ನಡೆಸಿತ್ತು. ರಾಂಚಿಯ ಇನ್ಸ್ಪೆಕ್ಟರ್ ಸಚ್ಚಿದಾನಂದ ಶರ್ಮಾ ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಶಹಾಪುರಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು. ಅಧಿಕಾರಿಗಳು ವಿಚಾರಣೆ ನಡೆಸಿ ತೆರಳಿದ ಬಳಿಕ ಆತ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದು ತಿಳಿದುಬಂದಿದೆ.

    ಉಗ್ರನೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 20 ರಂದು ರಾಂಚಿಯ NIA ಕಚೇರಿಗೆ ವಿಚಾರಣೆಗೆ ಬರುವಂತೆ ಅಧಿಕಾರಿಗಳು ಯುವಕನಿಗೆ ನೋಟಿಸ್ ಕಳುಹಿಸಿದ್ದರು. ಆದ್ರೆ ಹಣಕಾಸಿನ ಸಮಸ್ಯೆಯಿಂದ ಯುವಕ ವಿಚಾರಣೆಗೆ ಹಾಜರಾಗಿರಲಿಲ್ಲ. ಇದನ್ನೂ ಓದಿ: 2 ತಿಂಗಳ ಹಿಂದೆಯೇ ಚೈತ್ರಾ ಕುಂದಾಪುರ ವಿಚಾರ ನನ್ನ ಗಮನಕ್ಕೆ ಬಂದಿತ್ತು: ಶರಣ್ ಪಂಪ್‍ವೆಲ್

    ನಮ್ಮ ಕುಟುಂಬ ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದೆ, ರಾಂಚಿಗೆ ಪ್ರಯಾಣ ಮಾಡಲು ನಮ್ಮ ಬಳಿ ಹಣ ಇಲ್ಲ. ಕುಟುಂಬದ ಸದಸ್ಯರು ಹಾಗೂ ಆತ್ಮೀಯರಿಗೆ ಹಣ ನೀಡುವಂತೆ ಮನವಿ ಮಾಡಿದರೂ ಯಾರೂ ಸಹಾಯ ಮಾಡುತ್ತಿಲ್ಲ ಎಂದು ಯುವಕನ ತಂದೆ ತಿಳಿಸಿದ್ದಾರೆ.

    ನಮ್ಮ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಇ-ಮೇಲ್ ಮಾಡಲಾಗಿತ್ತು. ಬುಧವಾರ ಬೆಳಿಗ್ಗೆ ಸಹ ಅಧಿಕಾರಿಗಳಿಗೆ ಕರೆ ಮಾಡಿದ್ದೆವು. ಆದರೆ ಅವರು ಕರೆ ಸ್ವೀಕರಿಸಿಲ್ಲ. ನಮ್ಮ ಗ್ಯಾರೇಜ್ ಬಳಿಗೆ ಸ್ಥಳೀಯ ಪೊಲೀಸರು ಬೆಳಿಗ್ಗೆ ಬಂದು ಮಗ ಇರುವ ಬಗ್ಗೆ ಖಚಿತಪಡಿಸಿಕೊಂಡು ಹೋಗಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ಹೋರಾಟಕ್ಕೆ ಯಾವಾಗಲೂ ನಾನು ಸಿದ್ಧ : ನಟ ನಿಖಿಲ್ ಕುಮಾರ್

    ರಾಂಚಿಯಲ್ಲಿ ಬಂಧಿತ ಐಸಿಸ್ ಉಗ್ರ ಫೈಯಾಜ್ ಜೊತೆಗೆ ಸಂಪರ್ಕ ಹೊಂದಿದ ಶಂಕೆಯ ಹಿನ್ನೆಲೆಯಲ್ಲಿ ನಗರದ ಹಳೆಪೇಟೆಯಲ್ಲಿರುವ ಯುವಕನ ಮನೆ ಮೇಲೆ ಇತ್ತೀಚೆಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಸೆ.20ರಂದು ರಾಂಚಿಯ ಎನ್‌ಐಎ ಕಚೇರಿಗೆ ಬರುವಂತೆ ಎನ್‌ಐಎ ಶಾಖೆಯ ಇನ್‌ಸ್ಪೆಕ್ಟರ್ ಸಚ್ಚಿದಾನಂದ ನೋಟಿಸ್ ನೀಡಿ ವಾಪಸ್ ತೆರಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಡ್ಕರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಥ್ರೆಟ್ ಹಿಂದಿದ್ಯಾ ಲಷ್ಕರ್ ಉಗ್ರನ ಪ್ರಚೋದನೆ?

    ಗಡ್ಕರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಥ್ರೆಟ್ ಹಿಂದಿದ್ಯಾ ಲಷ್ಕರ್ ಉಗ್ರನ ಪ್ರಚೋದನೆ?

    ಬೆಳಗಾವಿ: ಹಿಂಡಲಗಾ ಜೈಲಿನಿಂದಲೇ (Hindalaga Jail) ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಗಡ್ಕರಿ ಅವರಿಗೆ ಬೆದರಿಕೆ ಒಡ್ಡಿರುವ ಹಿಂದೆ ಲಷ್ಕರ್-ಇ-ತೋಯ್ಬಾ ಸಂಘಟನೆಯ ಉಗ್ರನ ಪ್ರಚೋದನೆ ಇರುವ ಸಂಶಯ ಮೂಡಿದೆ.

    ಲಷ್ಕರ್-ಇ-ತೋಯ್ಬಾ ಸಂಘಟನೆ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಎಂಬವನನ್ನು ಎನ್‌ಐಎ (NIA) ವಶಕ್ಕೆ ಪಡೆದುಕೊಂಡಿದೆ. ಎನ್‌ಐಎ ಅಧಿಕಾರಿಗಳು ಅಫ್ಸರ್ ಪಾಷಾನನ್ನು ಹಿಂಡಲಗಾ ಜೈಲಿನಿಂದ ಮುಂಬೈಗೆ ಕರೆದುಕೊಂಡು ಹೋಗಿದ್ದಾರೆ. ಶನಿವಾರ ಇಡೀ ದಿನ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿ, ಬಳಿಕ ಮಹಾರಾಷ್ಟ್ರದ ನಾಗ್ಪುರ ಪೊಲೀಸರಿಗೆ ಅಫ್ಸರ್ ಪಾಷಾನನ್ನು ಹಸ್ತಾಂತರಿಸಲಾಗಿದೆ.

    ಉಗ್ರ ಸಂಘಟನೆ ಲಷ್ಕರ್-ಇ-ತೋಯ್ಬಾ ಸಂಘಟನೆ ಜೊತೆಗೆ ನಂಟು ಆರೋಪದಡಿ ಅಫ್ಸರ್ ಪಾಷಾ ಬಂಧಿತನಾಗಿದ್ದ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಆತ ಶಿಕ್ಷೆ ಅನುಭವಿಸುತ್ತಿದ್ದ. ಇದೇ ವೇಳೆ ಹಿಂಡಲಗಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಜಯೇಶ್ ಪೂಜಾರಿಯಿಂದ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಲಾಗಿತ್ತು. ಹಣಕ್ಕಾಗಿ ಆತ ಈ ಕೃತ್ಯ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ವಿಚ್ಛೇದನಕ್ಕೆ ಒಪ್ಪದ ಪತ್ನಿಯ ಕೊಲೆಗೆ ಸ್ಕೆಚ್- ಅಪಘಾತಕ್ಕೆ ಯತ್ನಿಸಿ ಸಿಕ್ಕಿಬಿದ್ದ ಪತಿ

    ನಾಗ್ಪುರ ಪೊಲೀಸರ ವಿಚಾರಣೆ ವೇಳೆ ಜಯೇಶ್ ಪೂಜಾರಿ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕುವಂತೆ ಅಫ್ಸರ್ ಪಾಷಾ ಪ್ರಚೋದನೆ ನೀಡಿದ್ದ ಎಂಬುದನ್ನು ಬಾಯ್ಬಿಟ್ಟಿದ್ದಾನೆ. ಜಯೇಶ್ ಪೂಜಾರಿ ನೀಡಿದ ಮಾಹಿತಿ ಆಧರಿಸಿ ಅಫ್ಸರ್ ಪಾಷಾನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪ್ರೀತಿ ವಿಚಾರಕ್ಕೆ ಕಿರಿಕ್ – ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಚುನಾವಣೆ: ‘ದಿ ಕೇರಳ ಸ್ಟೋರಿ’ ಸಿನಿಮಾ ಪಕ್ಷವೊಂದಕ್ಕೆ ಅಸ್ತ್ರವಾಗತ್ತಾ?

    ಕರ್ನಾಟಕ ಚುನಾವಣೆ: ‘ದಿ ಕೇರಳ ಸ್ಟೋರಿ’ ಸಿನಿಮಾ ಪಕ್ಷವೊಂದಕ್ಕೆ ಅಸ್ತ್ರವಾಗತ್ತಾ?

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಮೂಲಕ ಒಂದಷ್ಟು ಲಾಭ ಪಡೆದಿದ್ದ ಬಿಜೆಪಿ (BJP) ಇದೀಗ ಮತ್ತೊಂದು ಸಿನಿಮಾವನ್ನು ವಿರೋಧಿಗಳಿಗೆ ಅಸ್ತ್ರವಾಗಿ ಬಳಸುತ್ತಿದೆ ಎನ್ನುವ ಮಾತು ಸಿನಿಮಾ ರಂಗದಲ್ಲಿ ಕೇಳಿ ಬರುತ್ತಿದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Elections) ಹೊಸ್ತಿಲಲ್ಲೇ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ರಿಲೀಸ್ ಆಗುತ್ತಿದ್ದು, ಇದರ ಲಾಭವನ್ನು ಬಿಜೆಪಿ ಪಡೆದುಕೊಳ್ಳಲಿದೆ ಎನ್ನುವ ಚರ್ಚೆ ಶುರುವಾಗಿದೆ.

    ಎರಡು ದಿನಗಳ ಹಿಂದೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಸುತ್ತಾ ಹಣೆದಿರುವ ಕಥಾ ಹಂದರ ಬಿಜೆಪಿಗೆ ಚುನಾವಣೆ ಅಸ್ತ್ರವಾಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಮೇ 05 ರಂದು ದೇಶದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಹಲವು ಕಡೆ ವಿಶೇಷ ಪ್ರದರ್ಶನವನ್ನೂ ಆಯೋಜಿಸಲಾಗಿದೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಈ ಸಿನಿಮಾದಲ್ಲಿ ಲವ್ ಜಿಹಾದ್ ಜೊತೆಗೆ ಐಸಿಸ್ ಸೇರುವ ಮುನ್ನ ಮಾಡಲಾಗುವ ಬ್ರೈನ್ ವಾಷ್ ಸೇರಿದಂತೆ ಹತ್ತಾರ ವಿಷಯಗಳನ್ನು ಕಥಾಹಂದರದಲ್ಲಿ ಜೋಡಿಸಲಾಗಿದೆಯಂತೆ. ಕೇರಳದ ಯುವತಿಯರ ನಾಪತ್ತೆ ಆದ ಬಳಿಕ ಲವ್ ಜಿಹಾದ್ ಬಲೆ, ಐಸಿಸ್ ಸೇರಿದ ಕಾಲೇಜು ಯುವತಿಯರ ರಿಯಲ್ ಸ್ಟೋರಿಯನ್ನು ತೆರೆಯ ಮೇಲೆ ತಂದಿರೋದಾಗಿ ನಿರ್ದೇಶಕರು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷವು ಈ ವಿಷಯವನ್ನು ಇಟ್ಟುಕೊಂಡು ಹಲವು ಲಾಭಗಳನ್ನು ಪಡೆದುಕೊಳ್ಳಲಿದೆ ಎನ್ನುವುದು ಲೆಕ್ಕಾಚಾರ.

    ಕೇರಳದಿಂದ ವಿದೇಶಕ್ಕೆ ಉದ್ಯೋಗ ಅರಸಿಕೊಂಡು ಹೋದ ಮಹಿಳೆಯ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ವಿವಾದಿತ (Controversy) ಅಂಶಗಳು ಇವೆ ಎಂದು ವಿರೋಧ ವ್ಯಕ್ತವಾಗಿತ್ತು. ಬುರ್ಖಾ ಧರಿಸಿದ ಪ್ರಧಾನ ಪಾತ್ರಧಾರಿ ‘ನಾನು ಶಾಲಿನಿ, ನರ್ಸ್ ಆಗಿ ಜನಸೇವೆ ಮಾಡಬೇಕು ಅಂತಿದ್ದೆ. ಆದರೆ, ನಾನು ಫಾತಿಮಾ ಆಗಿ ಐಸಿಎಸ್ ಉಗ್ರಸಂಘಟನೆಗೆ ಸೇರಿಕೊಂಡು ಭಯೋತ್ಪಾದಕಿ ಆಗಿದ್ದೇನೆ’ ಈ ರೀತಿಯ ಸಂಭಾಷಣೆ ಇತ್ತು. ಇಂತಹ ಮಾತು ಮತ್ತು ಕಥೆ ವಿವಾದಕ್ಕೀಡಾಗಿತ್ತು.

    ಇದರ ಜೊತೆಗೆ ಕೇರಳದಲ್ಲಿ ಮಹಿಳೆಯನ್ನು ವಿದೇಶಕ್ಕೆ ಕರೆದುಕೊಂಡು ಹೋಗಿ ಭಯೋತ್ಪಾದನೆ ಚಟುವಟಿಕೆಗೆ ಹಚ್ಚುವ ಸಂಘಟನೆಗಳು ಇವೆ ಎಂದು ಸಿನಿಮಾದಲ್ಲಿ ಹೇಳಲಾಗಿದೆ. ಇದರಿಂದಾಗಿ ಕೇರಳಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವನ್ನು ಸಿನಿಮಾದಲ್ಲಿ ಮಾಡಲಾಗಿದೆ. ಇಂತಹ ಚಿತ್ರಗಳು ಬಿಡುಗಡೆಯಾದರೆ, ದೇಶಕ್ಕೆ ಮತ್ತು ರಾಜ್ಯಕ್ಕೆ ಎಂತಹ ಕೆಟ್ಟ ಹೆಸರು ಬರಬಹುದು ಯೋಚಿಸಿ ಎಂದು ಹಲವು ರಾಜಕೀಯ ಮುಖಂಡರು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

  • ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ: ವಿವಾದಕ್ಕೀಡಾದ ಮಲಯಾಳಂ ಸಿನಿಮಾ

    ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ: ವಿವಾದಕ್ಕೀಡಾದ ಮಲಯಾಳಂ ಸಿನಿಮಾ

    ದಿ ಕಾಶ್ಮೀರ್ ಫೈಲ್ಸ್ ನಂತರ ಮಲಯಾಳಂನ ‘ದಿ ಕೇರಳ ಸ್ಟೋರಿ’ (The Kerala Story) ಹೆಚ್ಚು ಸದ್ದು ಮಾಡುತ್ತಿದೆ. ಹಿಂದೂ (Hindu) ಹುಡುಗಿಯೊಬ್ಬಳು ಮುಸ್ಲಿಂ (Muslim) ಧರ್ಮಕ್ಕೆ ಮತಾಂತರಗೊಂಡು ಆಕೆ ಉಗ್ರ ಸಂಘಟನೆಯನ್ನು ಸೇರುವ ಕಥೆಯನ್ನು ಈ ಸಿನಿಮಾ ಹೊಂದಿದೆ ಎಂದು ಹೇಳಲಾಗುತ್ತಿದ್ದು, ನಿನ್ನೆಯಷ್ಟೇ ಬಿಡುಗಡೆಯಾಗಿರುವ ಟ್ರೈಲರ್ ವಿವಾದಕ್ಕೀಡಾಗಿದೆ (Controversy). ಅದರಲ್ಲೂ ಮುಸ್ಲಿಂ ಹುಡುಗಿಯೊಬ್ಬಳು ಹಿಂದೂ ಹುಡುಗಿಯ ಜೊತೆ ಆಡುವ ಮಾತು ಅನೇಕರ ಕೋಪಕ್ಕೆ ಕಾರಣವಾಗಿದೆ.

    ಆಕೆ ಶಾಲಿನಿ ಉನ್ನೀಕೃಷ್ಣ. ಕೇರಳದ ಹಿಂದೂ ಹುಡುಗಿ. ಅಪಾರ ಶಿವನ ಭಕ್ತೆ. ಶಿಕ್ಷಣಕ್ಕಾಗಿ ಹಾಸ್ಟೇಲ್ ಸೇರಿಒಕೊಳ್ಳುತ್ತಾಳೆ. ಅಲ್ಲಿ ಮುಸ್ಲಿಂ ಹುಡುಗಿಯೊಬ್ಬಳ ಪರಿಚಯ. ನಂತರ ಶಾಲಿನಿಗೆ ಸಾರ್ವಜನಿಕವಾಗಿಯೇ ಲೈಂಗಿಕ ಕಿರುಕುಳ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಮುಸ್ಲಿಂ ಹುಡುಗಿಯು ‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರವಾಗಲ್ಲ, ಯಾಕೆಂದರೆ ಅಲ್ಲಾಹ್ ನಮ್ಮನ್ನು ಕಾಯುತ್ತಿರುತ್ತಾನೆ’ ಎಂದು ಡೈಲಾಗ್ ಹೇಳಿಸಿದ್ದಾರೆ. ಈ ಮಾತೇ ಹಿಂದೂ ಹುಡುಗಿಯ ಮೇಲೆ ಪರಿಣಾಮ ಬೀರಿ, ಮತಾಂತರವಾಗುತ್ತಾಳೆ. ಇಷ್ಟೇ ಅಲ್ಲದೇ, ಮತಾಂತರಗೊಂಡ ಆ ಹುಡುಗಿ ಉಗ್ರ ಸಂಘಟನೆ ಸೇರುತ್ತಾಳೆ.

    ಇಂತಹ ದೃಶ್ಯಗಳನ್ನು ಹೊಂದಿರುವ ಟ್ರೈಲರ್ ನಿನ್ನೆಯಷ್ಟೇ ರಿಲೀಸ್ ಆಗಿದ್ದು, ಭಾರೀ ಸಂಚಲನ ಮೂಡಿಸಿದೆ. ಅಲ್ಲದೇ ಈ ಟ್ರೈಲರ್ ಬಗ್ಗೆ ಪರ ಮತ್ತು ವಿರೋಧದ ಮಾತುಗಳು ಕೇಳಿ ಬರುತ್ತಿವೆ. ನಿನ್ನೆಯಿಂದಲೇ ಸೋಷಿಯಲ್ ಮೀಡಿಯಾದಲ್ಲಿ ‘ದಿ ಕೇರಳ ಸ್ಟೋರಿ’ ಟ್ರೆಂಡಿಂಗ್ ನಲ್ಲಿದ್ದು, ಈ ಸಿನಿಮಾ ಬ್ಯಾನ್ ಮಾಡಬೇಕು ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಇದನ್ನೂ ಓದಿ:ಪತಿ ಜೊತೆ ವಿದೇಶಕ್ಕೆ ಹಾರಿದ ‘ಬಿಗ್ ಬಾಸ್’ ಬೆಡಗಿ ಅಕ್ಷತಾ ಕುಕಿ

    ಕೇರಳದಿಂದ ವಿದೇಶಕ್ಕೆ ಉದ್ಯೋಗ ಅರಸಿಕೊಂಡು ಹೋದ ಮಹಿಳೆಯ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ವಿವಾದಿತ (Controversy) ಅಂಶಗಳು ಇವೆ ಎಂದು ವಿರೋಧ ವ್ಯಕ್ತವಾಗಿತ್ತು. ಬುರ್ಖಾ ಧರಿಸಿದ ಪ್ರಧಾನ ಪಾತ್ರಧಾರಿ ‘ನಾನು ಶಾಲಿನಿ, ನರ್ಸ್ ಆಗಿ ಜನಸೇವೆ ಮಾಡಬೇಕು ಅಂತಿದ್ದೆ. ಆದರೆ, ನಾನು ಫಾತಿಮಾ ಆಗಿ ಐಸಿಎಸ್ ಉಗ್ರಸಂಘಟನೆಗೆ ಸೇರಿಕೊಂಡು ಭಯೋತ್ಪಾದಕಿ ಆಗಿದ್ದೇನೆ’ ಈ ರೀತಿಯ ಸಂಭಾಷಣೆ ಇತ್ತು. ಇಂತಹ ಮಾತು ಮತ್ತು ಕಥೆ ವಿವಾದಕ್ಕೀಡಾಗಿತ್ತು.

    ಇದರ ಜೊತೆಗೆ ಕೇರಳದಲ್ಲಿ ಮಹಿಳೆಯನ್ನು ವಿದೇಶಕ್ಕೆ ಕರೆದುಕೊಂಡು ಹೋಗಿ ಭಯೋತ್ಪಾದನೆ ಚಟುವಟಿಕೆಗೆ ಹಚ್ಚುವ ಸಂಘಟನೆಗಳು ಇವೆ ಎಂದು ಸಿನಿಮಾದಲ್ಲಿ ಹೇಳಲಾಗಿದೆ. ಇದರಿಂದಾಗಿ ಕೇರಳಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವನ್ನು ಸಿನಿಮಾದಲ್ಲಿ ಮಾಡಲಾಗಿದೆ. ಇಂತಹ ಚಿತ್ರಗಳು ಬಿಡುಗಡೆಯಾದರೆ, ದೇಶಕ್ಕೆ ಮತ್ತು ರಾಜ್ಯಕ್ಕೆ ಎಂತಹ ಕೆಟ್ಟ ಹೆಸರು ಬರಬಹುದು ಯೋಚಿಸಿ ಎಂದು ಹಲವು ರಾಜಕೀಯ ಮುಖಂಡರು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.