Tag: ಉಗ್ರಪ್ಪ

  • ಮೋದಿ ಈ ದೇಶದ ಆಧುನಿಕ ಭಸ್ಮಾಸುರ: ಉಗ್ರಪ್ಪ

    ಮೋದಿ ಈ ದೇಶದ ಆಧುನಿಕ ಭಸ್ಮಾಸುರ: ಉಗ್ರಪ್ಪ

    ಚಿಕ್ಕಬಳ್ಳಾಪುರ: ನರೇಂದ್ರ ಮೋದಿ ಈ ದೇಶಕ್ಕೆ ಭಸ್ಮಾಸುರ ರೀತಿ ವಕ್ಕರಿಸಿದ್ದಾರೆ. ಮಿಸ್ಟರ್ ಮೋದಿ ಈ ದೇಶದ ಆಧುನಿಕ ಭಸ್ಮಾಸುರ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಉಗ್ರಪ್ಪ ಹೇಳಿಕೆ ನೀಡಿದರು.

    ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಭಾಗಿಯಾಗಿ ನರೇಂದ್ರ ಮೋದಿ ವಿರುದ್ಧ ಉಗ್ರಪ್ಪ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಕೇವಲ 100 ದಿನ ಅಧಿಕಾರ ಕೊಡಿ ಎಂದು, ಅಂಗೈಯಲ್ಲಿ ಆಕಾಶ ತೋರಿಸಿ ಅಧಿಕಾರಕ್ಕೆ ಬಂದವರು. 100 ದಿನ ಅಧಿಕಾರ ಕೊಡಿ, ದೇಶವನ್ನು ಬದಲಾಯಿಸುತ್ತೇನೆ ಎಂದರು. ಆದರೆ ಈಗ 100 ದಿನ ಹೋಗಿ 8 ವರ್ಷ ಮುಗಿದಿದೆ. 2014ರಲ್ಲಿ ಕೊಟ್ಟ ಯಾವುದಾದರೂ ಒಂದು ಆಶ್ವಾಸನೆ ಈಡೇರಿಸಿದ್ದೀರಿ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಈಶ್ವರಪ್ಪಗೆ B-ರಿಪೋರ್ಟ್ ಹಾಕ್ತಾರೆ ಅಂತಾ ನನಗೆ ಗೊತ್ತಿತ್ತು: ಸಿದ್ದರಾಮಯ್ಯ

     

    ವಿದೇಶದಿಂದ ಕಪ್ಪು ಹಣ ವಾಪಸ್ ತರುತ್ತೇನೆ ಎಂದು ಭಾಷಣ ಮಾಡಿದರು. ದಿನಬಳಕೆ ವಸ್ತುಗಳ ಬೆಲೆ ಕಡಿಮೆ ಮಾಡುವುದಾಗಿ ಹೇಳಿದರು. ಪ್ರತಿ ವರ್ಷ ಯುವಕ ಯುವತಿಯರಿಗೆ 2 ಕೋಟಿ ಉದ್ಯೋಗಾವಕಾಶ ಕೊಡುವುದಾಗಿಯೂ ಹೇಳಿದರು. ಆದರೆ ಈಗ 100 ದಿನ ಹೋಗಿ 8 ವರ್ಷ ಮುಗಿದಿದೆ. ಇವುಗಳನ್ನು ನೀವು ಈಡೇರಿಸಿದ್ದರೆ, ನಿಮಗೆ ತಾಕತ್ತು, ಧಮ್ ಇದ್ದರೆ ಸಂಸತ್ತು ಅಥವಾ ವಿಧಾನಸೌಧದ ಮುಂಭಾಗ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಕಾಂಗ್ರೆಸ್‌ನವರು ನನ್ನನ್ನು ಜೈಲಿಗೆ ಹಾಕಲು ಪ್ರಯತ್ನಿಸಿದ್ದರು: ಎಚ್‍ಡಿಕೆ

    Live Tv
    [brid partner=56869869 player=32851 video=960834 autoplay=true]

  • ದೇಶಕ್ಕೆ RSS-BJP ಕೊಡುಗೆ ಏನು, ತಾಕತ್ತಿದ್ರೆ ಚರ್ಚೆಗೆ ಬನ್ನಿ: ಉಗ್ರಪ್ಪ ಸವಾಲ್

    ದೇಶಕ್ಕೆ RSS-BJP ಕೊಡುಗೆ ಏನು, ತಾಕತ್ತಿದ್ರೆ ಚರ್ಚೆಗೆ ಬನ್ನಿ: ಉಗ್ರಪ್ಪ ಸವಾಲ್

    ಚಿಕ್ಕಬಳ್ಳಾಪುರ: ಆರ್‌ಎಸ್‌ಎಸ್‌, ಬಿಜೆಪಿಯವರೇ ಈ ದೇಶಕ್ಕೆ ನಿಮ್ಮ ಕೊಡುಗೆ ಏನು? ಕಾಂಗ್ರೆಸ್‍ನವರ ಕೊಡುಗೆ ಏನು ಎಂಬುದರ ಬಗ್ಗೆ ಚರ್ಚಿಸಲು ನಾವು ಸಿದ್ದ. ತಾಕತ್ತಿದ್ದರೆ ಚರ್ಚೆಗೆ ಬನ್ನಿ ಎಂದು ಚಿಕ್ಕಬಳ್ಳಾಪುರದಲ್ಲಿ ವಿಧಾನಪರಿಷತ್ ಸದಸ್ಯ ಉಗ್ರಪ್ಪ ಸವಾಲು ಹಾಕಿದ್ದಾರೆ.

     

    ಚಿಕ್ಕಬಳ್ಳಾಪುರ ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಈ ದೇಶದ ಪರಂಪರೆ ಸ್ವಾತಂತ್ರದ ಆಶಯಗಳು ಗೊತ್ತಿಲ್ಲ. ಸಮಾಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ನಡೆ ಬಿಜೆಪಿಯದ್ದು. ಹೀಗಾಗಿ ನಿಮ್ಮ ಹಳೆಯ ಯೂನಿಫಾರಂ ಚಡ್ಡಿಯನ್ನು ಸಾಂಕೇತಿಕವಾಗಿ ಸುಟ್ಟರೇ ನಿಮಗೆ ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.  ಇದನ್ನು ಓದಿ : ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ: ಸಿದ್ದರಾಮಯ್ಯ

    bjP

    ಆರ್‌ಎಸ್‌ಎಸ್‌ ಬಿಜೆಪಿಯವರೇ ಈ ದೇಶಕ್ಕೆ ನಿಮ್ಮ ಕೊಡುಗೆ ಏನು? ಕಾಂಗ್ರೆಸ್‍ನವರ ಕೊಡುಗೆ ಏನು ಎಂಬುದರ ಬಗ್ಗೆ ಚರ್ಚೆ ನಡೆಸಲು ನಾವು ಸಿದ್ದರಾಗಿದ್ದೇವೆ. ನೀವು ಚರ್ಚೆ ನಡೆಸಲು ತಯಾರಿದ್ದರೆ ಬನ್ನಿ ವಿಧಾನಸೌಧದ ಮುಂದೆ ಡೇಟ್ ಟೈಂ ಫಿಕ್ಸ್ ಮಾಡಿ. ಅದನ್ನು ಬಿಟ್ಟು ಹುಳುಕುಗಳನ್ನು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ತೆಗೆಯಬೇಡಿ. ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರವೃತ್ತಿ ಮುಂದುವರೆಸಬೇಡಿ ಎಂದಿದ್ದಾರೆ.

    ಮೋದಿ ಆಧುನಿಕ ದುರ್ಯೋಧನ ಸರ್ವಾಧಿಕಾರಿ. ಇಂತಹ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ನವರಿಗೆ ಜನ ಪಾಠ ಕಲಿಸುವ ದಿನಗಳು ದೂರ ಇಲ್ಲ. ಈಗಾಲಾದರೂ ಬಹುತ್ವದ ಕಡೆಗೆ ಬದಲಾಗಲು ಪ್ರಯತ್ನ ಮಾಡಿದರೆ ಓಳ್ಳೆಯದು ಎಂದು ಹೇಳಿದ್ದಾರೆ. ಇದನ್ನು ಓದಿ :  ಪಿಎಸ್‍ಐ ಹಗರಣ – ಆರೋಪಿ ದರ್ಶನ್ ಗೌಡ ಅರೆಸ್ಟ್

  • ನನ್ನ ಆಸ್ತಿ, ಅಶ್ವಥ್ ನಾರಾಯಣ ಆಸ್ತಿಯನ್ನು ತನಿಖೆಗೆ ಒಳಪಡಿಸಲಿ: ಉಗ್ರಪ್ಪ

    ನನ್ನ ಆಸ್ತಿ, ಅಶ್ವಥ್ ನಾರಾಯಣ ಆಸ್ತಿಯನ್ನು ತನಿಖೆಗೆ ಒಳಪಡಿಸಲಿ: ಉಗ್ರಪ್ಪ

    ಬೆಂಗಳೂರು: ನನ್ನ ಆಸ್ತಿ, ಅಶ್ವಥನಾರಾಯಣ ಅವರ ಆಸ್ತಿಯನ್ನು ಎರಡೂ ತನಿಖೆಗೆ ಒಳಪಡಿಸಲಿ. ಇವರ ಹಾಗೆ ವಾಮಾ ಮಾರ್ಗದಿಂದ ಆಸ್ತಿ ಮಾಡಿ ದುರಹಂಕಾರ ತಲೆಗೆ ಏರಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಅಶ್ವಥ್ ನಾರಾಯಣ ಈ ರಾಜ್ಯದ ಮಂತ್ರಿ. ಒಂದು ಪಕ್ಷದ ವಕ್ತಾರರನ್ನು ಏಕವಚನದಲ್ಲಿ ಮಾತನಾಡಿದ್ದು ನೋಡಿದರೆ ಅವರ ಸಂಸ್ಕಾರ ತೋರಿಸುತ್ತದೆ. ದರ್ಶನ್ ಗೌಡ ಅವರು ಮಾಗಡಿಯವರು. ನೀವು ಅಲ್ಲಿ ಉಸ್ತುವಾರಿ ಸಚಿವರು. ಇದರಿಂದಾಗಿ ದರ್ಶನ್ ಗೌಡ ಅರೆಸ್ಟ್ ಆಗಿಲ್ಲ. ನಿಮ್ಮ ಸಹೋದರ ಸತೀಶ್ ಹಣ ಪಡೆದಿದ್ದಾರೆ ಅಂತ ಜನ ಮಾತನಾಡ್ತಾರೆ ಎಂದು ಟೀಕಿಸಿದರು.

    ಡಿಕೆಶಿ ಭ್ರಷ್ಟಾಚಾರದ ಬಗ್ಗೆ ನಾನು ಎಲ್ಲಿಯೂ ಮಾತನಾಡಿಲ್ಲ. ಮಾತನಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಾನು ಡಿಕೆಶಿ ಭ್ರಷ್ಟ ಅಂತ ಹೇಳಿದ ದಾಖಲೆ ಕೊಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಪಡೆಯಿರಿ. ಈ ಹಂತದಲ್ಲಿ ದಾಖಲೆ ಪ್ರಶ್ನೆ ಉದ್ಬವವಾಗಲ್ಲ ಎಂದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

    ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದ ದಾಖಲೆ ಇದೆ ಅಂತಾರೆ. ಒಬ್ಬ ಸಚಿವರಾಗಿ ನೀವು ಅದನ್ನು ಸಾಬೀತುಪಡಿಸಿ. ದಾಖಲಾತಿ ಇದ್ದರೆ ದೂರು ದಾಖಲು ಮಾಡಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

  • ಡಿಕೆಶಿ ಬಂಡವಾಳ ಬಿಚ್ಚಿಡ್ತೀನಿ, ಕೊಳಕಿನ ಜಾಲ ಬಿಡಿಸ್ತೀನಿ: ಅಶ್ವಥ್ ನಾರಾಯಣ ಕಿಡಿ

    ಡಿಕೆಶಿ ಬಂಡವಾಳ ಬಿಚ್ಚಿಡ್ತೀನಿ, ಕೊಳಕಿನ ಜಾಲ ಬಿಡಿಸ್ತೀನಿ: ಅಶ್ವಥ್ ನಾರಾಯಣ ಕಿಡಿ

    ಬೆಂಗಳೂರು: ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. ಆರ್ಗನೈಸ್ಡ್ ಕ್ರೈಂ ಇದು. ಡಿಕೆ ಶಿವಕುಮಾರ್ ಬಂಡವಾಳ ಬಿಚ್ಚಿಡ್ತೀನಿ. ಇವತ್ತಿಂದಲೇ ಡಿಕೆಶಿಯ ಕೊಳಕಿನ ಜಾಲ ಬಿಡಿಸ್ತೀನಿ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸಮರ ಸಾರಿದ್ದಾರೆ.

    ತಮ್ಮ ಮೇಲಿನ ಆರೋಪದ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಬಾಯಿಯಲ್ಲಿ ಹೇಳಿಕೆ ಬರುತ್ತೆ ಅಂದ್ರೆ ಅದರಲ್ಲಿ ದುರುದ್ದೇಶ ಇದೆ ಎಂದರ್ಥ. ರಾಮನಗರ ಜಿಲ್ಲೆ ಯಾವತ್ತೂ ಡಿಕೆಶಿನ ಸಂಪೂರ್ಣ ಒಪ್ಪಿಲ್ಲ. ಡಿಕೆಶಿ ರಾಮನಗರದಲ್ಲಿ ಸೀಮಿತ ನಾಯಕ ಅಷ್ಟೇ. ನಾನೂ ರಾಮನಗರದವನೇ, ನಮ್ಮ ಪೂರ್ವಜರೂ ಅಲ್ಲಿಯವರೇ. ಡಿಕೆಶಿ ದಿಕ್ಕು ತಪ್ಪಿಸುವ ಹೇಳಿಕೆ ಕೊಟ್ಟಿದ್ದಾರೆ. ಆಧಾರ ರಹಿತ ಹೇಳಿಕೆ ನೀಡಿ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

    ಸತೀಶ್ ಅಂತ ನಮ್ಮಣ್ಣ ಇದ್ದಾರೆ. ಅವರ ಮೇಲೆ ಆರೋಪ ಮಾಡಿದಾರಲ್ಲ, ಸಾಕ್ಷ್ಯ ಕೊಟ್ಟಿದ್ದಾರಾ? ನಾಚಿಕೆ ಆಗಲ್ವಾ ಉಗ್ರಪ್ಪಗೆ. ಭ್ರಷ್ಟಾಚಾರ ಮಾಡಿದ್ರೆ ಹೇಳಲಿ. ಉಗ್ರಪ್ಪ ತಮ್ಮ ರಾಜಕೀಯ ಅನುಭವದಿಂದ ಮಾತನಾಡಲಿ. 80 ಲಕ್ಷ ಕೊಟ್ಟಿರುವುದು ಕಟು ಸುಳ್ಳು. ಪ್ರಕರಣಕ್ಕೂ ನಮಗೂ ಸಂಬಂಧ ಇಲ್ಲ. ನಮ್ಮ ಕುಟುಂಬದಲ್ಲಿ ಭ್ರಷ್ಟಾಚಾರ ಪದ್ಧತಿ, ಅಧಿಕಾರ ದುರ್ಬಳಕೆ ಪದ್ಧತಿ ಇಲ್ಲ. ನಮ್ಮದು ಡಿಕೆಶಿ ಕುಟುಂಬ ಅಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು: ಡಿ.ಕೆ.ಶಿವಕುಮಾರ್

    ನಮ್ಮಣ್ಣ ಸತೀಶ್‍ಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ನೂರಕ್ಕೆ ನೂರು ಪ್ರತಿಶತ ಸಂಬಂಧ ಇಲ್ಲ. ಇಂತಹ ಸಾವಿರ ಜನ ಪ್ರಯತ್ನ ಮಾಡಿದ್ರೂ ಅಶ್ವಥ್ ನಾರಾಯಣಗೆ ಮಸಿ ಬಳಿಯಲು ಆಗಲ್ಲ ಎಂದು ಗುಡುಗಿದ್ದಾರೆ.

  • ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

    ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

    ಬೆಂಗಳೂರು: ಪಿಎಸ್‍ಐ(ಸಬ್ ಇನ್ಸ್‍ಪೆಕ್ಟರ್) ಪರೀಕ್ಷೆ ಅಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೆಸರು ಕೇಳಿ ಬಂದಿದೆ.

    ಮಾಜಿ ಸಂಸದರಾದ ಉಗ್ರಪ್ಪ, ಚಂದ್ರಪ್ಪ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಇಂದು ಕೆಪಿಸಿಸಿ ಕಚೇರಿಯಲ್ಲಿ ಪಿಎಸ್‍ಐ ಅಕ್ರಮದ ಬಗ್ಗೆ ಸುದ್ದಿಗೋಷ್ಠಿ ನಡೆಸಿದರು.

    ಉಗ್ರಪ್ಪ ಮಾತನಾಡಿ, ರಾಮನಗರ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ ಸುತ್ತ ಅನುಮಾನ ಮೂಡಿಸುತ್ತಿದೆ. ಮಾಗಡಿಯಲ್ಲಿ ಮೂರರಿಂದ ಐದು ಜನರಿಗೆ ರ‍್ಯಾಂಕ್ ಬಂದಿದೆ. ಅಶ್ವಥ್ ನಾರಾಯಣ್ ಸಹೋದರ ಸತೀಶ್‍ಗೆ ಅಕ್ರಮದ ಲಿಂಕ್ ಇದೆ ಎಂದು ಆರೋಪಿಸಿದರು.

    ಪ್ರಭಾವಿ ಸಚಿವರ ಸಹೋದರನನ್ನ ತನಿಖೆಗೆ ಕರೆದಿದ್ದಾರೆ. ಆಗ ಪ್ರಭಾವಿ ಸಚಿವರು ಕರೆ ಮಾಡಿ ಒತ್ತಡ ಹಾಕಿದ್ದಾರೆ. ರಾಮನಗರದ ಐದು ಮಂದಿ ಆಯ್ಕೆ ಆಗಿದ್ದಾರೆ. ನಾನೊಬ್ಬ ವಕೀಲ ಕೂಡ ಹೌದು. ಈಗ ಈ ಪ್ರಕರಣ ಅಶ್ವಥ್ ನಾರಾಯಣ್ ಕಡೆಯೂ ಬೆರಳು ತೋರಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ 20 ಕಡೆ ಒಬ್ಬರನ್ನೇ ಚುನಾವಣೆಗೆ ನಿಲ್ಲಿಸುವ ದಾರಿದ್ರ್ಯ ಬಂದಿದೆ: ಸುನಿಲ್ ಕುಮಾರ್

    ಅಶ್ವಥ್ ನಾರಾಯಣ ಗಂಡಸ್ಥನದ ಬಗ್ಗೆ ಮಾತನಾಡಿದ್ದೀರಿ. ನಿಮಗೆ ತಾಕತ್, ಧಮ್ ಇದ್ದರೆ ನ್ಯಾಯಾಂಗ ತನಿಖೆಗೆ ಒಪ್ಪಿಸಿ. ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಒಪ್ಪಿಸಿ. ನೈತಿಕತೆ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಅಶ್ವಥ್ ನಾರಾಯಣ್ ರಾಜೀನಾಮೆಗೆ ಉಗ್ರಪ್ಪ ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‍ವೈ

  • ಅಲ್ಪಸಂಖ್ಯಾತ ವ್ಯಕ್ತಿ ಅನ್ನೋ ಕಾರಣಕ್ಕೆ ಸಲೀಂ ಮೇಲೆ ಕ್ರಮ ಕೈಗೊಂಡ್ರು: ಜಗದೀಶ್ ಶೆಟ್ಟರ್

    ಅಲ್ಪಸಂಖ್ಯಾತ ವ್ಯಕ್ತಿ ಅನ್ನೋ ಕಾರಣಕ್ಕೆ ಸಲೀಂ ಮೇಲೆ ಕ್ರಮ ಕೈಗೊಂಡ್ರು: ಜಗದೀಶ್ ಶೆಟ್ಟರ್

    – ಡಿಕೆಶಿ ಒಬ್ಬ ಅಸಹಾಯಕ ಅಧ್ಯಕ್ಷ
    – ಸಿದ್ದರಾಮಯ್ಯ ನಡವಳಿಕೆ ಸರಿಯಿಲ್ಲ

    ಹಾವೇರಿ: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಮೇಲೆ ಕ್ರಮ ಕೈಗೊಳ್ಳುವ ಧಮ್ ಡಿಕೆ ಶಿವಕುಮಾರ್ ಅವರಿಗಿಲ್ಲ. ಅಲ್ಪಸಂಖ್ಯಾತ ವ್ಯಕ್ತಿ ಅನ್ನೋ ಕಾರಣಕ್ಕೆ ಸಲೀಂ ಮೇಲೆ ಕ್ರಮ ಕೈಗೊಂಡರು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ವರ್ಸಸ್ ಡಿಕೆಶಿ ಫೈಟಿಂಗ್ ಶುರುವಾಗಿದೆ. ಸಲೀಂ ಮತ್ತು ಉಗ್ರಪ್ಪರ ನಡುವಿನ ಸಂಭಾಷಣೆಯೆ ಇದಕ್ಕೆ ಸಾಕ್ಷಿ. ಡಿಕೆಶಿ ರಾಜ್ಯದ ಅಧ್ಯಕ್ಷರು, ಆದರೆ ಅಧ್ಯಕ್ಷರ ತಕ್ಕಡಿ ಮೇಲೇಳ್ತಿಲ್ಲ ಅಂದರು. ಉಗ್ರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯರ ಪಟ್ಟದ ಶಿಷ್ಯ. ಉಗ್ರಪ್ಪ ಮೇಲೆ ಕ್ರಮ ಕೈಗೊಳ್ಳೋ ಧಮ್ ಡಿಕೆಶಿಗಿಲ್ಲ. ಅಲ್ಪಸಂಖ್ಯಾತ ವ್ಯಕ್ತಿ ಅನ್ನೋ ಕಾರಣಕ್ಕೆ ಸಲೀಂ ಮೇಲೆ ಕ್ರಮ ಕೈಗೊಂಡರು. ಸಲೀಂ ಬಹಳ ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದವರು. ಉಗ್ರಪ್ಪ ಮೇಲೆ ಕ್ರಮ ಕೈಗೊಂಡರೆ ಆರ್ಟಿಕಲ್ಸ್ ಸ್ಟಾರ್ಟ್ ಮಾಡ್ತಾರೆ ಅಂತಾ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದು ಹೇಳಿದರು.

    ಪಂಜಾಬನಲ್ಲೊಬ್ಬ ಸಿದ್ದು, ರಾಜ್ಯದಲ್ಲೊಬ್ಬ ಸಿದ್ದು ಇದ್ದಾರೆ. ಇಬ್ಬರು ಸಿದ್ದುಗಳ ಜಟಾಪಟಿಯಿಂದ ಕಾಂಗ್ರೆಸ್ ಅವನತಿ ಆಗ್ತಿದೆ. ಪಂಜಾಬ್‍ನಲ್ಲಿ ಕಾಂಗ್ರೆಸ್ ನಗೆಪಾಟಲಿಗೆ ಈಡಾಗಿದೆ. ಇಲ್ಲೂ ಅದೇ ಪರಿಸ್ಥಿತಿ ಇದೆ. ಡಿಕೆಶಿ ಒಬ್ಬ ಅಸಹಾಯಕ ಅಧ್ಯಕ್ಷ. ಎಲ್ಲವೂ ಸಿದ್ದರಾಮಯ್ಯರ ಕೈಯಲ್ಲಿದೆ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ದವರು. ಆದರೆ ಅವರ ನಡವಳಿಕೆ ಸರಿಯಿಲ್ಲ. ಅನೇಕ ಭಾಗ್ಯಗಳನ್ನ ಕೊಟ್ಟಿದ್ದೇವೆ ಅಂದವರು ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋಲು ಕಂಡರು. ಭಾಗ್ಯಗಳ ಹೆಸರೇಳಿ ದುರುಪಯೋಗ ಮಾಡಿಕೊಂಡರೆ ಹೊರತು, ಭಾಗ್ಯಗಳು ಜನರಿಗೆ ಸಿಗ್ಲಿಲ್ಲ. ಹೀಗಾಗಿ ಸೋಲು ಕಂಡರು ಎಂದು ವಾಗ್ದಾಳಿ ನಡೆಸಿದರು.

    ಎರಡೂ ಚುನಾವಣೆಗಳಲ್ಲಿ ಗೆಲ್ಲೋದಿಲ್ಲ ಅನ್ನೋದು ಕಾಂಗ್ರೆಸ್ ನವರಿಗೆ ಗೊತ್ತಾಗಿದೆ. ಹೀಗಾಗಿ ಡಿಕೆಶಿ ಹಣ ಹಂಚಿಕೆ ಬಗ್ಗೆ ಬೇಜವಾಬ್ದಾರಿ ಹೇಳಿಕೆ. ಸಿಂದಗಿಯಲ್ಲೂ ಸಿದ್ದರಾಮಯ್ಯ ಹಣ ಹಂಚಿಕೆ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದರು. ಹಣ, ಹೆಂಡ ಹಂಚೋದು, ಗೂಂಡಾಗಿರಿ ಮಾಡೋದು ಕಾಂಗ್ರೆಸ್ ಸಂಸ್ಕೃತಿ. ನಮಗೆ ಲಕ್ಷಾಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ. ನಮಗೆ ರೊಕ್ಕ ಹಂಚೋ ಸಂಸ್ಕೃತಿ ಇಲ್ಲ. ಸೋತ ಮೇಲೆ ಯಾಕೆ ಸೋಲಾಯ್ತು ಅನ್ನೋದಕ್ಕೆ ರೊಕ್ಕ ಹಂಚ್ತಿದ್ದಾರೆ ಅನ್ನೋದು ಹೇಳ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿದ್ದಾರೆ. ಸಾಕಷ್ಟು ಜನ ಅಲ್ಪಸಂಖ್ಯಾತರು ಬಿಜೆಪಿ ಪರವಾಗಿ ವೋಟು ಹಾಕಲಿದ್ದಾರೆ. ಪ್ರತಿಪಕ್ಷದವರು ಭ್ರಮೆಯಲ್ಲಿದ್ದಾರೆ. ನೀವು ಅಧಿಕಾರಕ್ಕೆ ಬರಬೇಕು ಎಂಬ ಕನಸು ನನಸಾಗೋದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಟಿ ಬಸ್ ಏರಿದ ಸಿಎಂ ಸ್ಟಾಲಿನ್ – ಪ್ರಯಾಣಿಕರು ಫುಲ್ ಶಾಕ್

    ಸಿದ್ದರಾಮಯ್ಯ ಡಿಕೆಶಿ ಇಬ್ಬರು ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರೋ ಹಡಗು. ನರೇಂದ್ರ ಮೋದಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಅಧಿಕಾರ ಮಾಡುತ್ತಿದ್ದಾರೆ. ಮೋದಿ ನಾಯಕತ್ವದಲ್ಲಿ ಎರಡು ಬಾರಿ ಕೊರೋನಾ ನಿಭಾಯಿಸಿದ್ದಾರೆ. ಮುಂದುವರಿದ ದೇಶದಲ್ಲಿ ನಿಯಂತ್ರಣ ಮಾಡುವಲ್ಲಿ ತೊಂದರೆ ಅನುಭವಿಸಿದ್ದಾರೆ. ವಾಕ್ಸಿನ್ ಉತ್ಪಾದನೆ ಹೆಚ್ಚು ಒತ್ತು ನೀಡಿ, 130 ಕೋಟಿ ಜನರಿಗೆ ವಾಕ್ಸಿನ್ ಕೊಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ED ನನ್ನ ಮೇಲೆ ದಾಳಿ ಮಾಡುವುದಿಲ್ಲ, ನಾನು BJP ಸಂಸದ: ಸಂಜಯ್ ಪಾಟೀಲ್

    ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಪರ ಮತಯಾಚನೆ ಕುರಿತು ಪ್ರತಿಕ್ರಿಯಿಸಿ, ಹಾನಗಲ್ ಮತ್ತು ಸಿಂದಗಿ ಪ್ರಚಾರ ಮಾಡಿದ್ದೇನೆ. ಒಳ್ಳೆಯ ವಾತಾವರಣ ಇದೆ. ನಮ್ಮ ಅಭ್ಯರ್ಥಿ ಎರಡು ಬಾರಿ ಶಾಸಕರಾಗಿದ್ದಾರೆ. ಹಾನಗಲ್ ಮತಕ್ಷೇತ್ರ ಉದಾಸಿ ಕ್ಷೇತ್ರ. 6 ಭಾರಿ ಶಾಸಕ, ಲೋಕೋಪಯೋಗಿ ಸಚಿವರಾಗಿ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಸಂಸದ ಶಿವಕುಮಾರ ಉದಾಸಿ ಮೂರು ಬಾರಿ ಆಯ್ಕೆ ಯಾಗಿ ಅಭಿವೃದ್ಧಿ ಮಾಡಿದ್ದಾರೆ. ಇಡೀ ಹಾವೇರಿ ಜಿಲ್ಲೆ ಬಿಜೆಪಿಯ ಗಟ್ಟಿ ನೆಲೆಯಾಗಿದೆ. ನಮ್ಮ ಅಭ್ಯರ್ಥಿ ಶಿವರಾಜ್ ಸಜ್ಜನರ್ ಶಾಸಕ, ವಿಧಾನಪರಿಷತ್ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಜಿಲ್ಲೆಯ ನಾಡಿಮಿತ ಶಿವರಾಜ್ ಸಜ್ಜನರ್ ಗೊತ್ತಿದೆ. ಅತಿಹೆಚ್ಚು ಅಂತರದಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ಪಡೆಯುತ್ತಾರೆ ಎಂದರು. ಇದನ್ನೂ ಓದಿ:  ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!

    ಈಗಾಗಲೇ 100 ಕೋಟಿ ಜನರಿಗೆ ವಾಕ್ಸಿನೇಷನ್ ನೀಡಲಾಗುತ್ತದೆ. ಸಿದ್ದರಾಮಯ್ಯ ಟೀಕೆ ಮಾಡುವುದು, 100 ಕೋಟಿ ಜನರಿಗೆ ಲಸಿಕೆ ಹಾಕಿದರೂ, ಟೀಕೆ ಮಾಡಿದರು. ಇದು ರಾಜಕೀಯ ಪಕ್ಷ ಹಾಗೂ ರಾಜಕೀಯ ನಾಯಕರಿಗೆ ಶೋಭೆ ತರವುದಿಲ್ಲ. ಕಾಂಗ್ರೆಸ್ ನಾಯಕ ಶಶಿತರೂರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

  • ನನ್ನಿಂದ ತಪ್ಪಾಗಿದೆ, ಡಿಕೆಶಿ ಮುಖ ನೋಡಲು ಆಗ್ತಿಲ್ಲ: ಸಲೀಂ ಕಣ್ಣೀರು

    ನನ್ನಿಂದ ತಪ್ಪಾಗಿದೆ, ಡಿಕೆಶಿ ಮುಖ ನೋಡಲು ಆಗ್ತಿಲ್ಲ: ಸಲೀಂ ಕಣ್ಣೀರು

    ಬೆಂಗಳೂರು: ನನ್ನಿಂದ ತಪ್ಪಾಗಿದೆ. ನಂಗೆ ಡಿಕೆಶಿ ಮುಖನೋಡಲು ಆಗುತ್ತಿಲ್ಲ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಕಣ್ಣೀರು ಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನಗೆ ಜೀವ ಭಯ ಇದೆ. ಹೆಂಡತಿ ಮಕ್ಕಳಿದ್ದಾರೆ ತೊಂದರೆ ಮಾಡಬೇಡಿ. ಡಿಕೆಶಿವಕುಮಾರ್ ದೇವರಂತ ಮನುಷ್ಯ. ಅವರಿಗೆ ನೋವಾಗಿದೆ ಕ್ಷಮೆ ಕೇಳುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಯಾವ ಶಿಕ್ಷೆ ಬೇಕಾದ್ರೂ ಕೊಡಲಿ. ಪ್ರಾಣ ಬೇಕಾದ್ರೂ ತೆಗೆಯಲಿ. ನನ್ನ ಎಲ್ಲಾ ರಾಜಕೀಯ ಜೀವನ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ನನ್ನನ್ನು ನನ್ನ ಪಾಡಿಗೆ ಬದುಕಲು ಬಿಟ್ಟು ಬಿಡಿ. ನನ್ನಿಂದ ತಪ್ಪಾಗಿದೆ. ಎಮೋಷನಲ್ ಆಗಿ ಮಾತನಾಡಿದ್ದೀನಿ ಎಂದು ಸಲೀಂ ಕಣ್ಣೀರು ಸುರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್‌ ನೋಟಿಸ್‌ ಜಾರಿ

    ನನಗೆ ಡಿಕೆ ಸಾಕಷ್ಟು ಸಹಾಯ ಮಾಡಿದ್ದಾರೆ. ಅವರಿಗೆ ಕ್ಷಮೆ ಕೇಳುತ್ತೇನೆ. ಅವರ ಮುಖ ನೋಡಲು ನನಗೆ ಆಗಲ್ಲ. ಇನ್ನು ಕೆಪಿಸಿಸಿ ಕಚೇರಿಗೆ ಬರಲು ಆಗಲ್ಲ. ಹೊರಗಿದ್ದುಕೊಂಡೇ ಕಾಂಗ್ರೆಸ್ ಸೇವೆ ಮಾಡುತ್ತೇನೆ. ನನ್ನಿಂದ ತಪ್ಪಾಗಿದೆ. ಪಕ್ಷದಿಂದ ಉಚ್ಚಾಟನೆ ಮಾಡೋ ಮುನ್ನ ಒಂದು ನೋಟಿಸ್ ಆದ್ರೂ ಕೊಡಬಹುದಿತ್ತು ಎಂದು ಹೇಳಿದರು. ಇದನ್ನೂ ಓದಿ: ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಸಲೀಂ ಹೇಳಿದ್ದೇನು..?
    ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದೆ. ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವುದು ಇದೀಗ ಭಾರೀ ಚರ್ಚೆಯಾಗಿತ್ತು. ಜಲಸಂಪನ್ಮೂಲ ಇಲಾಖೆಯಲ್ಲಿ ಹೇಗೆ ಪರ್ಸಂಟೇಜ್ ಫಿಕ್ಸಾಗುತ್ತೆ ಎಂದು ಮಾತನಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಪರ್ಸಂಟೇಜ್ ಹೇಗೆ ಹಚ್ಚಾಯ್ತು..?, ಜಲಸಂಪನ್ಮೂಲ ಇಲಾಖೆಯಲ್ಲಿ ಮೊದಲೆಲ್ಲಾ 6 ರಿಂದ 8 ಪರ್ಸೆಂಟ್ ಇತ್ತು. ಡಿಕೆಶಿ ಬಂದ ಮೇಲೆ 12 ಪರ್ಸೆಂಟ್ ಮಾಡಿದರು ಎಂದು ಸಲೀಂ ಅವರು ಉಗ್ರಪ್ಪ ಬಳಿ ಹೇಳಿದ್ದರು.  ಇದನ್ನೂ ಓದಿ: ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

    ಇದೇ ವೇಳೆ ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ ಗಳಾಗಿರುವ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯು ಪ್ರಸ್ತಾಪ ಮಾಡಿದ್ದಾರೆ. ವಾರದ ಹಿಂದೆ ಈ ಕಾಂಟ್ರಕ್ಟರ್ ಗಳ ಮೇಲೆ ಐಟಿ ದಾಳಿ ನಡೆದಿತ್ತು. ಪ್ರೆಸ್ ಮೀಟ್ ಗೂ ಮುನ್ನ ಈ ವಿಚಾರದ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಚರ್ಚೆ ನಡೆಸಿದ್ದರು. ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ಇದೆ ಕಾಂಟ್ರಾಕ್ಟರ್ ಗಳು ಇದ್ದರು. ಡಿಕೆಶಿ ಆಪ್ತ ಮುಳಗುಂದ ಸಾಕಷ್ಟು ದುಡ್ಡು ಮಾಡಿದ್ದಾರೆ. ಮುಳಗುಂದ 50-100 ಕೋಟಿ ಮಾಡಿದ್ದಾನೆ ಅಂದ್ರೆ ಡಿಕೆ ಹತ್ತಿರ ಎಷ್ಟಿರಬೇಕು ಲೆಕ್ಕ ಹಾಕಿ. ಡಿಕೆ ಬರೀ ಕಲೆಕ್ಷನ್ ಗಿರಾಕಿ ಎಂದಿದ್ದರು. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

  • ಬರೀ ಡಿಕೆಶಿ ಅಲ್ಲ, ಕೆದಕಿದರೆ ಇಡೀ ಕಾಂಗ್ರೆಸ್ಸೇ ಹೊಲಸು: ಸಿ.ಟಿ ರವಿ

    ಬರೀ ಡಿಕೆಶಿ ಅಲ್ಲ, ಕೆದಕಿದರೆ ಇಡೀ ಕಾಂಗ್ರೆಸ್ಸೇ ಹೊಲಸು: ಸಿ.ಟಿ ರವಿ

    ಚಿಕ್ಕಮಗಳೂರು/ಪಣಜಿ: ಬರೀ ಡಿಕೆಶಿ ಮಾತ್ರವಲ್ಲ, ಕೆದಕಿದರೆ ಇಡೀ ಕಾಂಗ್ರೆಸ್ ಪೂರ್ತಿ ಹೊಲಸೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

    ಸಲೀಂ-ಉಗ್ರಪ್ಪ ಅವರು ಡಿಕೆಶಿ ಬಗ್ಗೆ ನಡೆಸಿದ ಮಾತುಕತೆ ಸಂಬಂಧ ಗೋವಾದಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ಸೇ ಹೀಗಿದೆ, ತಿಪ್ಪೆ ಕೆದಕಿದಷ್ಟು ಹೊಲಸೇ ಹೊರಬರಲಿದೆ. ಬರೀ ಡಿಕೆಶಿ ಅಲ್ಲ, ಕೆದಿಕಿದರೆ ಇಡೀ ಕಾಂಗ್ರೆಸ್ ಪೂರ ಹೊಲಸೆ. ಸಲೀಂ-ಉಗ್ರಪ್ಪ ಸದಾ ಬೇರೆ ಪಕ್ಷದ ಬಗ್ಗೆ ಟೀಕೆ ಮಾಡುತ್ತಿದ್ದರು. ಇಂದು ಅವರೇ ಅವರ ಪಕ್ಷದ ಗುಟ್ಟು ರಟ್ಟು ಮಾಡಿದ್ದಾರೆ. ಇದನ್ನೂ ಓದಿ: ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಕಳ್ಳನ ಹೆಂಡತಿ ಯಾವತ್ತಿದ್ರೂ ಡ್ಯಾಶ್…ಡ್ಯಾಶ್…ಡ್ಯಾಶ್. ಕಾಂಗ್ರೆಸ್ ನಾಯಕರ ಬಗ್ಗೆ ಅವರೇ ಗುಟ್ಟನ್ನ ರಟ್ಟು ಮಾಡಿದ್ದಾರೆ. ಪರಮೇಶ್ವರನ್ನ ಯಾವ ಶಕ್ತಿ ಸೋಲಿಸಿತ್ತೋ ಅದೇ ಶಕ್ತಿಯಿಂದ ನನಗೆ ಅಡ್ಡವಾಗಬಹುದೆಂದು ಗುಟ್ಟು ರಟ್ಟಾಗಿದೆ. ಡಿಕೆಶಿ ನನಗೆ ಅಡ್ಡ ಎಂದು ಅವರ ಬದಿಗೊಳಿಸಬೇಕೆಂಬ ಸಂಚು ಸ್ಪಷ್ಟವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

    ಸಲೀಂ-ಉಗ್ರಪ್ಪ ಅಷ್ಟು ದಡ್ಡರು ಎಂದು ನನಗೆ ಅನ್ನಿಸಲ್ಲ. ಗುಟ್ಟು ರಟ್ಟಾಗಲಿ ಎಂದೇ ರಟ್ಟು ಮಾಡಿದ್ದಾರೆ ಅನಿಸುತ್ತಿದೆ. ಇದರ ಹಿಂದೆ ಖಂಡಿತ ವಿಪಕ್ಷ ನಾಯಕರ ಬುದ್ದಿವಂತ ಮೆದುಳು ಕೆಲಸ ಮಾಡಿದೆ ಎಂದು ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

  • ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್‌ ನೋಟಿಸ್‌ ಜಾರಿ

    ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್‌ ನೋಟಿಸ್‌ ಜಾರಿ

    ಬೆಂಗಳೂರು: ಡಿಕೆ ಶಿವಕುಮಾರ್‌ ವಿರುದ್ಧವೇ ಭ್ರಷ್ಟಾಚಾರದ ಆರೋಪ ಮಾಡಿದ ಮಾಧ್ಯಮ ಸಂಯೋಜಕ ಸಲೀಂ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ಸಿನಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು ಉಗ್ರಪ್ಪ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ.

    ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ರೆಹಮಾನ್‌ ಖಾನ್‌ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ ಈ ವಿಚಾರವನ್ನು ತಿಳಿಸಿದ್ದಾರೆ.


    ಸಲೀಂ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಅವರ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳವರೆಗೆ ಉಚ್ಚಾಟಿಸಲಾಗಿದೆ. ಇದನ್ನೂ ಓದಿ: ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಉಗ್ರಪ್ಪಗೆ ನೋಟಿಸ್‌:
    ಡಿಕೆ ಶಿವಕುಮಾರ್‌ ಅವರ ಘನತೆ ಗೌರವವಗಳಿಗೆ ಕುಂದುಂಟುವಾಗುವಂತೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಪಾರ ಹಾನಿ ಉಂಟಾಗುವ ಅಪಾರ ವಿಚಾರಗಳನ್ನು ಮಾತನಾಡಿದ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಈ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನದ ಒಳಗಡೆ ನೀಡಬೇಕು ಎಂದು ನೋಟಿಸಿನಲ್ಲಿ ಸೂಚಿಸಲಾಗಿದೆ.

  • ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ

    ಬೆಂಗಳೂರು: ನನಗೂ, ಕೈ ನಾಯಕರ ಆರೋಪಕ್ಕೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧದ ಪರ್ಸಂಟೇಜ್ ಆರೋಪ ಸಂಬಂಧ ಮಾತನಾಡಿದ ಡಿಕೆಶಿ, ಬೆಳಗ್ಗೆಯಿಂದ ಕೆಲವು ವಿಚಾರಗಳ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಮಾಧ್ಯಮಗೋಷ್ಠಿಯ ಸಂದರ್ಭದಲ್ಲಿ ಕೆಲವು ಆಂತರಿಕವಾದ ಸಂಭಾಷಣೆಗಳು ನಡೆದವು ಎಂಬುದನ್ನು ತೋರಿಸಿದ್ದೀರಿ ಎಂದು ಆರಂಭಿಸಿದರು.

    ಪಕ್ಷ ಶಿಸ್ತನ್ನು ಬಹಳ ಗಮನದಲ್ಲಿಟ್ಟುಕೊಂಡು ಶಿಸ್ತು ಪಾಲನಾ ಕಮಿಟಿ ಏನು  ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಕೈ ನಾಯಕರು ಹೇಳಿರುವ ವಿಚಾರದ ಕುರಿತು ನನಗೂ, ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲದೇ ಇರುವಂತಹ ವಿಚಾರವಾಗಿದೆ. ಈಗಾಗಲೇ ಉಗ್ರಪ್ಪನವರು ಪ್ರೆಸ್ ಮೀಟ್ ಏನು ಹೇಳಬೇಕೋ ಹೇಳಿದ್ದಾರೆ. ಅವರೇ ನಿಮಗೆ ಉತ್ತರ ಕೊಟ್ಟಿದ್ದಾರೆ ಎಂಬುದನ್ನು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

    ಇದೇ ವೇಳೆ ಮಾಧ್ಯಮದ ಮೇಲೆ ಗೂಬೆ ಕೂರಿಸಿದ ಉಗ್ರಪ್ಪ ಅವರ ಬಗ್ಗೆ ಪ್ರಶ್ನೆ ಮಾಡಿದಾಗ, ನಾನು ಮೀಡಿಯಾ ತಪ್ಪು ಅಂತ ಯಾಕೆ ಹೇಳಿ. ನಾವು ಮಾತಾಡಿದ್ದನ್ನು ನೀವು ತೋರಿಸಿದ್ದೀರಿ. ಈ ಹಿಂದೆ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಮಾತಾಡಿದ್ರು, ತೋರಿಸಿದ್ದೀರಿ. ಇದೀಗ ಇವರು ಮಾತಾಡಿದ್ದಾರೆ ನೀವು ತೋರಿಸಿದ್ದೀರಿ. ಆದರೆ ನನಗೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ

    ರಾಜಕಾರಣದಲ್ಲಿ ಚಪ್ಪಾಳೆ ಹೊಡೆಯುವವರು, ಜೈಕಾರ, ಮೊಟ್ಟೆ ಎಸೆಯುವವರು ಹೀಗೆ ಹಲವು ರೀತಿಯ ಜನ ಇದ್ದಾರೆ. ಯಾವ ಜಗಳನೂ ಇಲ್ಲ. ನಿಮ್ಮ ಆಪ್ತ ಸಲೀಂ ಹೇಳಿರುವುದು ಎಷ್ಟು ಸರಿ. ಇಂಟರ್ನಲ್ ಚರ್ಚೆಯಾಗಿದೆ ಹೊರತು ಬಹಿರಂಗ ಹೇಳಿಕೆ ನೀಡಿಲ್ಲ. ಪರ್ಸೆಂಟೇಜ್ ವಿಚಾರದಲ್ಲಿ ಭಾಗಿಯಾಗಿಲ್ಲ. ಅದರ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಗೃಹ ಸಚಿವರು ದೂರು ನೀಡಲು ಹೇಳಿದ್ದಾರೆ ಅಂತೆ. ಅವರೇ ಸುಮೊಟೋ ಕೇಸ್ ದಾಖಲಿಸಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು