Tag: ಉಗ್ರಪ್ಪ

  • ಮೂರು ತಿಂಗ್ಳೊಳಗೆ 3 ಮನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ!

    ಮೂರು ತಿಂಗ್ಳೊಳಗೆ 3 ಮನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ!

    ಬಳ್ಳಾರಿ: ವಿಳಾಸ ಇಲ್ಲದವರು ಇಲ್ಲಿಗೆ ಬಂದಿದ್ದಾರೆ. ಮನೆಯಿಲ್ಲ, ಮತವಿಲ್ಲ ಆದರೂ ಉಗ್ರಪ್ಪ ಬಳ್ಳಾರಿಯಲ್ಲಿ ಸ್ಪರ್ಧೆ ಮಾಡಿದ್ದಾರೆ ನೋಡಿ ಎಂದು ಮೂರು ತಿಂಗಳ ಹಿಂದೆ ಬಿಜೆಪಿ ನಾಯಕರು ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಮುಗಿಬಿದ್ದಿದ್ದರು. ಹೀಗಾಗಿ ಮೂರು ತಿಂಗಳು ಮುಗಿಯುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಬಳ್ಳಾರಿಯಲ್ಲಿ ಬರೋಬ್ಬರಿ ಮೂರು ಮನೆ ಬಾಡಿಗೆಗೆ ತೆಗೆದುಕೊಂಡಿದ್ದಾರೆ.

    ಹೌದು. ಸಂಸದ ವಿ.ಎಸ್. ಉಗ್ರಪ್ಪ ಬಳ್ಳಾರಿಯಲ್ಲಿ ಮೂರು ತಿಂಗಳಿಗೆ ಮೂರು ಬಾಡಿಗೆ ಮನೆ ಮಾಡಿದ್ದಾರೆ. ಶುಕ್ರವಾರ ಉಗ್ರಪ್ಪ ದಂಪತಿ ಹೊಸ ಮನೆಯಲ್ಲಿ ಹಾಲು ಉಕ್ಕಿಸಿದ್ದಾರೆ. ಮೂರು ತಿಂಗಳ ಹಿಂದೆ ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ವಿಳಾಸ ಇಲ್ಲದವರು ಅನ್ನೋ ಆರೋಪ ಎದುರಿಸಿದ್ದರು. ಹೀಗಾಗಿ ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಲು ಮೂರು ತಿಂಗಳೊಳಗೆ ಮೂರು ಮನೆಗಳನ್ನ ಮಾಡಿದ್ದಾರೆ. ಆದರೆ ಉಗ್ರಪ್ಪ ಮಾಡಿರೋ ಮೂರು ಮನೆಗಳು ಸಹ ಬಾಡಿಗೆಯದ್ದಾಗಿವೆ. ಬಳ್ಳಾರಿಯಲ್ಲಿ 2 ಹೊಸಪೇಟೆಯಲ್ಲೊಂದು ಮನೆ ಮಾಡಿರುವುದಾಗಿ ಉಗ್ರಪ್ಪ ಇದೀಗ ಹೆಮ್ಮಯಿಂದ ಹೇಳಿಕೊಳ್ಳುತ್ತಿದ್ದಾರೆ.

    ಇದರಿಂದ ಕಳೆದ ಬಾರಿ ಉಗ್ರಪ್ಪಗೆ ವಿಳಾಸ ಇಲ್ಲ ಎಂದು ಆರೋಪ ಮಾಡಿದ್ದ ಬಿಜೆಪಿ ನಾಯಕರಿಗೆ ಇದೀಗ ಇರಿಸುಮುರಿಸು ಉಂಟಾಗುತ್ತಿದೆ. ಯಾಕಂದರೆ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿ ವಾರವಾಗುತ್ತಾ ಬಂದರೂ ಅಭ್ಯರ್ಥಿಗೆ ಬಳ್ಳಾರಿಯಲ್ಲೊಂದು ಮನೆಯಾಗಲಿ, ಇಲ್ಲವೇ ಕಚೇರಿ ಇಲ್ಲದಿರುವುದು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

    ಈ ಕುರಿತು ನಾಯಕರನ್ನ ಪ್ರಶ್ನೆ ಮಾಡಿದರೆ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಬಳ್ಳಾರಿ ಜಿಲ್ಲೆಯವರು ಅವರಿಗೆ ಹರಪನಹಳ್ಳಿಯಲ್ಲಿ ಸ್ವಂತ ಮನೆಯಿದೆ. ಬಳ್ಳಾರಿಯಲ್ಲೂ ಸಹ ಬಾಡಿಗೆ ಮನೆ ಹುಡುಕಿ ಒಪ್ಪಂದ ಪತ್ರ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಾರಿಗೌಡ ಹೇಳಿದ್ದಾರೆ.

  • ಬಳ್ಳಾರಿಯಲ್ಲಿಂದು ಮೈತ್ರಿ ಸರ್ಕಾರ ಮತ್ತೆ ಶಕ್ತಿ ಪ್ರದರ್ಶನ..!

    ಬಳ್ಳಾರಿಯಲ್ಲಿಂದು ಮೈತ್ರಿ ಸರ್ಕಾರ ಮತ್ತೆ ಶಕ್ತಿ ಪ್ರದರ್ಶನ..!

    – ದೋಸ್ತಿಯಿಂದ ಇಂದು ಕೃತಜ್ಞತಾ ಸಮಾವೇಶ

    ಬಳ್ಳಾರಿ: ಲೋಕಸಭೆ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಉಗ್ರಪ್ಪ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿಂದು ಜೆಡಿಎಸ್, ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇಂದು ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಉಗ್ರಪ್ಪ ಗೆಲುವಿಗೆ ಕಾಂಗ್ರೆಸ್, ಜೆಡಿಎಸ್ ನಿಂದ ಕೃತಜ್ಞತಾ ಸಮಾವೇಶ ಏರ್ಪಡಿಸುವ ಮೂಲಕ ಮೈತಿ ಸರ್ಕಾರದ ನಾಯಕರಿಂದ ಮತ್ತೆ ಶಕ್ತಿ ಪ್ರದರ್ಶನ ನಡೆಯಲಿದೆ.

    ರಾಷ್ಟ್ರ ರಾಜಕಾರಣವೇ ಬಳ್ಳಾರಿಯತ್ತ ತಿರುಗಿ ನೋಡುವಂತೆ ಮಾಡಿದ ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಮೈತ್ರಿಕೂಟದ ಅಭ್ಯರ್ಥಿ ವಿ.ಎಸ್.ಉಗ್ರಪ್ಪ 2 ಲಕ್ಷದ 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿ ಇತಿಹಾಸ ಬರೆದಿದ್ದಾರೆ. ಹೀಗಾಗಿ ನಾವೆಲ್ಲ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಾರಲು ಬಳ್ಳಾರಿಯಲ್ಲಿ ಕಾಂಗ್ರೆಸ್- ಜೆಡಿಎಸ್ ನಾಯಕರು ಜಂಟಿ ಕೃತಜ್ಞತಾ ಸಮಾವೇಶ ಆಯೋಜನೆ ಮಾಡಿದ್ದಾರೆ. ಈ ಮೂಲಕ ಬಳ್ಳಾರಿ ಕಣ ಮತ್ತೆ ಶಕ್ತಿ ಪ್ರದರ್ಶನದ ವೇದಿಕೆಯಾಗುತ್ತಿದೆ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.

    ಇಂದು ಸಂಜೆ 4 ಗಂಟೆಗೆ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಸಚಿವ ಡಿಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಶಾಸಕರು, ಸಂಸದರ ದಂಡೇ ಸಮಾವೇಶದಲ್ಲಿ ಭಾಗಿಯಾಗಲಿದೆ.

    ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜಿಲ್ಲೆಯ ಜನತೆ ನಿರೀಕ್ಷೆಗೂ ಮೀರಿ ಮತ ನೀಡುವ ಮೂಲಕ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭದ ಮೂಲಕ ಮತ್ತೊಮ್ಮೆ ಗುರು ಶಿಷ್ಯರು, ಹಾಲಿ, ಮಾಜಿ ಸಿಎಂಗಳು ಸಮಾಗಮವಾಗಲಿದ್ದಾರೆ. ಸಮಾವೇಶದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 5 ಡಿವೈಎಸ್ಪಿ, 15 ಸಿಪಿಐ, 42ಪಿಎಸ್ ಐ, 100 ಎಎಸ್ ಐ, 400 ಸಿಬ್ಬಂದಿ ನಿಯೋಜಿಸಲಾಗಿದೆ.

    ಪಾರ್ಕಿಂಗ್ ಗಾಗಿ ಪ್ರವಾಸಿ ಮಂದಿರ, ಮುನ್ಸಿಪಲ್ ಮೈದಾನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಒಟ್ಟು ನಾಲ್ಕು ಪ್ರವೇಶ ದ್ವಾರ ವ್ಯವಸ್ಥೆ ಮಾಡಲಾಗಿದೆ ಅಂತ ಎಸ್ ಪಿ ಅರುಣ್ ರಂಗರಾಜನ್ ತಿಳಿಸಿದ್ದಾರೆ.

    ಒಟ್ಟಿನಲ್ಲಿ ಉಗ್ರಪ್ಪ ಗೆಲುವಿಗೆ ಜನರಿಗೆ ಕೃತಜ್ಞತೆ ಹೇಳುವ ನೆಪದಲ್ಲಿ ಮತ್ತೊಮ್ಮೆ ದೋಸ್ತಿಗಳ ಶಕ್ತಿ ಪ್ರದರ್ಶನ ನಡೆಸುವ ಮೂಲಕ ಮುಂದೆಯೂ ಬಳ್ಳಾರಿ ಕೋಟೆಯನ್ನ ಕೈ ನಾಯಕರು ವಶಪಡಿಸಿಕೊಳ್ಳಲು ಈಗಿನಿಂದಲೇ ಸಿದ್ಧತೆಗೆ ಮುಂದಾಗಿರುವುದು ವಿಶೇಷವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರಾಮುಲು ಅಣ್ಣ ಎಲೆಕ್ಷನ್ ಶಾಂತಿಯುತವಾಗಿ ನಡೆಸಿಕೊಟ್ಟಿದ್ದಾರೆ- 3 ಜನರಿಗೆ ಡಿಕೆಶಿಯಿಂದ ಥ್ಯಾಂಕ್ಸ್

    ರಾಮುಲು ಅಣ್ಣ ಎಲೆಕ್ಷನ್ ಶಾಂತಿಯುತವಾಗಿ ನಡೆಸಿಕೊಟ್ಟಿದ್ದಾರೆ- 3 ಜನರಿಗೆ ಡಿಕೆಶಿಯಿಂದ ಥ್ಯಾಂಕ್ಸ್

    ಬೆಂಗಳೂರು: ಬಳ್ಳಾರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನನಗೆ ಜವಾಬ್ದಾರಿ ವಹಿಸಿತ್ತು. ಈ ಸಂದರ್ಭದಲ್ಲಿ ಕೆಲವರು ಅಭಿನಂದಿಸಿದ್ರು, ಇನ್ನು ಕೆಲವರು ಟೀಕೆ ಟಿಪ್ಪಣಿಗಳನ್ನು ಮಾಡಿದ್ರು. ಇವುಗಳನ್ನೆಲ್ಲಾ ನಾನು ಬಹಳ ಸಂತೋಷದಿಂದಲೇ ಸ್ವೀಕರಿಸಿದ್ದೆ. ನಾನು ಈ ಚುನಾವಣೆಯಲ್ಲಿ 3 ಜನಕ್ಕೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ ಅಂತ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ನಗರದಲ್ಲಿ ಬಳ್ಳಾರಿ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಜಯಗಳಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲನೆಯದಾಗಿ ಶ್ರೀರಾಮುಲು ಅಣ್ಣ ಅವರಿಗೆ ಧನ್ಯವಾದ ಹೇಳುತ್ತೇನೆ. ಶ್ರೀರಾಮುಲು ಅಣ್ಣನವರು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹಳ ಶಾಂತ ರೀತಿಯಿಂದ ಚುನಾವಣೆಯನ್ನು ನಡೆಯಲು ಅವಕಾಶ ಮಾಡಿಕೊಟ್ಟರು. ಹಾಗೆಯೇ ಯಾವ ಸಣ್ಣ ಕಾರ್ಯಕರ್ತರಲ್ಲಿ ಘರ್ಷಣೆಯನ್ನು ಉಂಟು ಮಾಡದೇ ಇದ್ದು, ಒಟ್ಟಿನಲ್ಲಿ ಈ ಚುನಾವಣೆ ಸುಲಲಿತವಾಗಿ ನಡೆಸಿಕೊಡಲು ಸಹಕಾರ ಮಾಡಿಕೊಟ್ಟಿದ್ದಾರೆ. ಚುನಾವಣೆಯಲ್ಲಿ ಅವರು ಗೆದ್ದಿರಬೋದು ಅಥವಾ ಸೋತಿರಬಹುದು. ಸೋಲು-ಗೆಲುವು ಇಲ್ಲಿ ಮುಖ್ಯವಲ್ಲ. ಬದಲಾಗಿ ನಮ್ಮಿಂದ ಯಾವುದೇ ಕಾರ್ಯಕರ್ತರಿಗೆ, ಮತದಾರರಿಗೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ನೋವಾಗಬಾರದು ಅಂತ ಅವರು ನಮಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಅವರಿಗೆ ನಾನು ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತೇನೆ ಅಂತ ಟಾಂಗ್ ನೀಡಿದ್ರು.

    ಬಿಜೆಪಿ ಅಭ್ಯರ್ಥಿ ಶಾಂತ ಅವರು ಶಾಂತ ಸ್ವಾಭವದವರು. ನಮ್ಮ ಮತಯಾಚನೆಯ ವೇಳೆ ಎಲ್ಲಿಯೂ ಅಡ್ಡಿಪಡಿಸಲಿಲ್ಲ. ಉಗ್ರಪ್ಪನವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದಾಗ ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದಕ್ಕೆ ಅವರಿಗೆ ಧನ್ಯವಾದ ಹೇಳುತ್ತೇನೆ. ಜೊತೆಯಲ್ಲಿ ಈ ಬಾರಿ ನಮ್ಮನ್ನು ಕೈ ಹಿಡಿದ ಜನತೆಗೆ ಹಾಗೂ ಬಳ್ಳಾರಿಯ ಬಿಜೆಪಿ ಕಾರ್ಯಕರ್ತರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.

    ಪಕ್ಷ-ಭೇದ, ಜಾತಿ-ಧರ್ಮ ಇವನ್ನೆಲ್ಲಾ ಬಿಟ್ಟು ಒಗ್ಗಟ್ಟಿನಿಂದ ಮತದಾರರು ಬಳ್ಳಾರಿಗೆ ಇಂದು ಧ್ವನಿಯಾಗಿರಬೇಕು, ಉಗ್ರಪ್ಪನವರು ನಮ್ಮ ವಿಚಾರವನ್ನು ಕರ್ನಾಟಕ ಸರ್ಕಾರದಲ್ಲಿ ಹೋರಾಟ ಹಾಗೂ ಪಾರ್ಲಿಮೆಂಟಿನಲ್ಲಿ ಧ್ವನಿಯೆತ್ತುವ ಭರವಸೆ ನೀಡಿದ್ದರು. ಹೀಗಾಗಿ ಮತದಾರರು ಅವರಿಗೆ ಮತ ಹಾಕಿ ಆ ಅವಕಾಶವನ್ನು ಉಗ್ರಪ್ಪ ಅವರಿಗೆ ನೀಡಿದ್ದಾರೆ ಎಂದರು.

    ಯೋಗಕ್ಕಿಂತ ಯೋಗಕ್ಷೇಮ ಮುಖ್ಯ:
    ಆದ್ರೆ ಇಲ್ಲಿ ನಾನು ಗೆದ್ದುಬಿಟ್ಟಿದ್ದೀನಿ ಅಂತ ಹಿಗ್ಗಲು ತಯಾರಿಲ್ಲ. ಯಾಕಂದ್ರೆ ಯೋಗಕ್ಕಿಂತ ಯೋಗಕ್ಷೇಮ ಬಹಳ ಮುಖ್ಯವಾಗುತ್ತದೆ. ಐದೂವರೆ ತಿಂಗಳ ಚುನಾವಣೆಗೆ ನಾನು ವೋಟ್ ಕೇಳಿಲ್ಲ. ಡಿಕೆಶಿ ಅವರು ಇಂದು ಬಾಂಬ್ ಸಿಡಿಸುತ್ತಾರೆ ಅಂತ ಮಾಧ್ಯಮ ಮಿತ್ರರು ಹೇಳಿದ್ದರು. ನನ್ನ ಬಾಂಬ್ ಇಂದು ಬಳ್ಳಾರಿಯ ಅಭಿವೃದ್ಧಿಗೆ ಸಿಡಿಸ್ತೀನಿ. ನನ್ನ ಕಾರ್ಯಕ್ರಮ, ಯೋಜನೆ ಹಾಗೂ ಆಚಾರ-ವಿಚಾರ ಮತ್ತು ಮಾಡಿದಂತಹ ಪ್ರಚಾರ ಎಲ್ಲವೂ ಬಳ್ಳಾರಿಯ ಜನತೆಗೆ ಸರಿಯಾದ ರೀತಿಯ ನ್ಯಾಯವನ್ನು ಒದಗಿಸಿಕೊಡಬೇಕಾಗಿದೆ. ಅಲ್ಲಿರುವಂತಹ ಧೂಳನ್ನು ತೆಗೆಯುವಂತದ್ದು, ಉದ್ಯೋಗ ಸೃಷ್ಟಿ, ವಲಸೆ ಹೋಗುತ್ತಿರುವ ಯುವಕರಿಗೆ ಉದ್ಯೋಗ, ಕುಡಿಯುವ ನೀರು, ರಸ್ತೆ ಒದಗಿಸುವಂತಹ ಬಹಳ ದೊಡ್ಡ ಸವಾಲಿದೆ. ಈ ಸವಾಲನ್ನು ಚುನಾವಣೆಯ ಗೆಲುವು ಹೆಚ್ಚಿನ ಜವಾಬ್ದಾರಿಯನ್ನು ಹೊರಿಸಿದೆ ಅಂದ್ರು.

    ಜನಾರ್ದನ ಅಣ್ಣನವರು ಕೂಡ ಸಾಕಷ್ಟು ಸವಾಲುಗಳನ್ನು ಎಸೆದಿದ್ದಾರೆ. ಮಾಧ್ಯಮ ಹಾಗೂ ವಿರೋಧ ಪಕ್ಷದವರ ಸವಾಲುಗಳನ್ನೆಲ್ಲಾ ಬಹಳ ಸಂತೋಷದಿಂದಲೇ ಸ್ವೀಕಾರ ಮಾಡಿದ್ದೇವೆ ಅಂತ ಹೇಳಿದ್ರು.

    ಸಾವು, ಸೋಲಿಗೆ ಹೆದರುವವನಲ್ಲ:
    ಇದೇ ವೇಳೆ ಪಬ್ಲಿಕ್ ಟಿವಿಯಲ್ಲಿ ಶ್ರೀರಾಮುಲು ಹಾಗೂ ಡಿಕೆಶಿಯ ಪಂಥಾಹ್ವಾನ ಪ್ರಸ್ತಾಪಿಸಿದ ಡಿಕೆಶಿ, ನಾನು ಚರ್ಚೆಗೆ ಬರಲು ಸಿದ್ಧನಿದ್ದೆ, ಆದ್ರೆ ರಾಮುಲು ಅಣ್ಣ ಬರಲಿಲ್ಲ. ನಾನು ಪಲಾಯನ ಮಾಡಿಲ್ಲ. ಚುನಾವಣೆಯಲ್ಲಿ ನಿಂತವರೆಲ್ಲ ಗೆಲ್ಲಲು ಸಾಧ್ಯವಿಲ್ಲ. ಹುಟ್ಟಿದವರೆಲ್ಲ ನಿರಂತರವಾಗಿ ಬದುಕಲು ಸಾಧ್ಯವಿಲ್ಲ. ಯಾವತ್ತಾದರೂ ಒಂದು ದಿನ ಸಾಯಲೇಬೇಕು. ಹೀಗಾಗಿ ಈ ಸಾವು ಹಾಗೂ ಸೋಲಿಗೆ ಹೆದರಿಕೊಂಡು ಮನೆಯಲ್ಲಿ ಕುಳಿತುಕೊಳ್ಳುವವನು ಈ ಡಿಕೆಶಿವಕುಮಾರ್ ಅಲ್ಲ ಅಂತ ತಿಳಿಸಿದ್ರು.

    ಬಳ್ಳಾರಿಗೆ ಹೋಗುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ:
    ಇವತ್ತು ದೀಪಾವಳಿ. ಈ ಹಬ್ಬದ ಸಂದರ್ಭದಲ್ಲಿ ಕರ್ನಾಟಕ ಮಹಾಜನತೆಗೆ ನನ್ನ ವೈಯಕ್ತಿಕವಾಗಿ, ಸರ್ಕಾರದ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ. ಬಳ್ಳಾರಿಗೆ ಹೋಗುವ ಬಗ್ಗೆ ಇಂದು ನಾನು ನಿರ್ಧಾರ ಮಾಡಿಲ್ಲ. 5 ಕ್ಷೇತ್ರದಲ್ಲೂ ಚುನಾವಣಾ ಫಲಿತಾಂಶ ಹೊರಬಿದ್ದಿಲ್ಲ. ಇನ್ನೂ ಮತ ಎಣಿಕೆ ನಡೀತಾ ಇದೆ. ಹೀಗಾಗಿ ಕೊನೆಯ ಸುತ್ತಿನಲ್ಲಿ ರಾಜಕಾರಣದಲ್ಲಿ ಏನ್ ಬೇಕಾದ್ರೂ ಆಗಬಹುದು. ಇದರ ಅನುಭವ ನಮಗಿದೆ. ಲೀಡ್ ನಲ್ಲಿದ್ದವರು ಒಂದೇ ಬಾರಿಗೆ ಕೆಳಗಿಳಿದ ಅನೇಕ ಉದಾಹರಣೆಗಳು ಇವೆ ಅಂತ ಡಿಕೆಶಿ ತಿಳಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರ್ಬೇಕು, ಅಲ್ಲಿ ಮೋದಿ ಸೊಂಯ್ ಅನ್ನಬೇಕು- ಬಿಜೆಪಿ ವಿರುದ್ಧ ಇಬ್ರಾಹಿಂ ವ್ಯಂಗ್ಯ

    ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರ್ಬೇಕು, ಅಲ್ಲಿ ಮೋದಿ ಸೊಂಯ್ ಅನ್ನಬೇಕು- ಬಿಜೆಪಿ ವಿರುದ್ಧ ಇಬ್ರಾಹಿಂ ವ್ಯಂಗ್ಯ

    ಬಳ್ಳಾರಿ: ಮೊಳಕಾಲ್ಮೂರು ಶಾಸಕ ಶ್ರೀರಾಮುಲುಗೆ ಮೋದಿ ಬಿಟ್ಟರೆ ಬೇರೆ ಯಾರು ಗೊತ್ತಿಲ್ಲ. ಮೋದಿ ಜಪ ಬಿಟ್ರೆ ಅವರಿಗೆ ಬೇರೇನೂ ಗೊತ್ತಿಲ್ಲ. ಶ್ರೀರಾಮುಲು ಅವರು 10 ಜನ ಸಂಸದರು ಹೆಸರು ಹೇಳಲಿ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಚಾಲೆಂಜ್ ಹಾಕಿದ್ದಾರೆ.

    ಉಪಚುನಾವಣೆಯ ನಿಮಿತ್ತ ಬಳ್ಳಾರಿಗೆ ಆಗಮಿಸಿ ಕುರುಗೋಡ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪನಿಗೆ ಬಟನ್ ಒತ್ತಿದ್ರೆ ಟೊಂಯ್ ಅಂತಾ ಸೌಂಡ್ ಬರಬೇಕು. ಆಗ ಅಲ್ಲಿ ಮೋದಿ ಸೊಂಯ್ ಅನ್ನಬೇಕು ಎಂದು ವ್ಯಂಗ್ಯವಾಡಿದ್ದಾರೆ.

    ಬಳ್ಳಾರಿಯಲ್ಲಿ ಸುಗುಲಮ್ಮ ದೇವಸ್ಥಾನ ಹೊಡೆದಾಗ ಸಿದ್ದರಾಮಯ್ಯ ಅವರನ್ನ ಆ ದೇವಿ ಕರೆದಿದ್ದಳು ಅಂತ ತೆಲುಗಿನಲ್ಲಿ ಹೇಳುವ ಮೂಲಕ ಸಿ.ಎಂ ಇಬ್ರಾಹಿಂ ಅವರು ರೆಡ್ಡಿಗಳ ವಿರುದ್ಧ ವ್ಯಂಗ್ಯವಾಡಿದ್ರು. ಇದೇ ವೇಳೆ ಕಾಯಿಪಲ್ಯ ಮಾರುವ ತರಕಾರಿಯರು ಕಾರ್ಡ್ ಎಲ್ಲಿ ಇಡ್ಬೇಕು. ಲಕ್ಷ್ಮೀ ಪೂಜೆಯಲ್ಲಿ ವ್ಯಾಪಾರಸ್ಥರಿಗೆ ದುಡ್ಡು ಇಲ್ಲ. ಕಾರ್ಡ್ ಇಟ್ಟು ಪೂಜೆ ಮಾಡ್ತಿದ್ದಾರೆ ಅಂತ ಕ್ಯಾಶ್ ಲೆಸ್ ಮಾಡಿದ ಬಿಜೆಪಿಯವರ ವಿರುದ್ಧವೂ ವ್ಯಂಗ್ಯವಾಡಿದ್ರು.

    ಇದೇ ವೇಳೆ ಸಿದ್ದರಾಮಯ್ಯ ಅವರೂ ಕೂಡ ಸಭೆಯಲ್ಲಿ ಭಾಗವಹಿಸಿದ್ದು, ಅವರಿಗೆ ಅಭಿಮಾನಿಗಳು ಹೆಗಲ ಮೇಲೆ ಕಂಬಳಿ ಹಾಕಿ ಕೈಗೆ ಕುರಿಮರಿ ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಆ ಕುರಿಮರಿ ಕೈಯಲ್ಲಿ ಇಡ್ಕೊಂಡು ಪೋಸ್ ಕೊಟ್ಟರು.

    ಬಿಎಸ್‍ವೈ ವಿರುದ್ಧ ಡಿಕೆಶಿ ಕಿಡಿ:
    ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೈಕಲ್ ಕೊಟ್ಟಿದ್ದು ಬಿಟ್ರೆ ಏನ್ ಅಭಿವೃದ್ಧಿ ಮಾಡಿದ್ದಾರೆ. ಬಡವರ ಪರ ಸರ್ಕಾರ ಅಂದ್ರೆ ಅದು ಕಾಂಗ್ರೆಸ್ ಸರ್ಕಾರವಾಗಿದೆ. ಬಿಜೆಪಿಯವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಬಡವರ ಪಾಲಿಗೆ ಸಂಕಷ್ಟ ತಂದಿದ್ದಾರೆ. ಇದು ಡಿಕೆಶಿ-ರಾಮುಲು ಎಲೆಕ್ಷನ್ ಅಲ್ಲ. ಜೆ. ಶಾಂತಾ ಉಗ್ರಪ್ಪ ನಡುವಿನ ಚುನಾವಣೆಯಾಗಿದೆ. ಬಿಎಸ್‍ಸಸಆರ್ ಪಾರ್ಟಿ ಮಾಡಿದ್ದ ಶ್ರೀರಾಮುಲು ಅವರು ಅದರಲ್ಲಿ ಸೋತು ಸುಣ್ಣವಾದ ಮೇಲೆ ಮತ್ತೆ ಬಿಜೆಪಿಗೆ ಬಂದಿದ್ದಾರೆ. ಆಯ್ತು ಜನರು ನಿಮ್ಮನ್ನು ಕೈ ಬಿಟ್ಟಿದ್ದಾರೆ ಒಂದು ಸಲ ಅವಕಾಶ ಕೊಡ್ತಾರೆ ಅದನ್ನು ಶ್ರೀರಾಮುಲು ಕಳೆದುಕೊಂಡಿದ್ದಾರೆ. ನಾವು ನೀತಿ ರಾಜಕಾರಣ ಮಾಡುತ್ತೇವೆ. ನಿಮ್ಮಂತ ಹೊಲಸು ರಾಜಕಾರಣ ಮಾಡೋಲ್ಲ ಅಂತ ವಾಗ್ದಾಳಿ ನಡೆಸಿದ್ರು.

    ನೂರಾರು ಜನ ಶಾಸಕರನ್ನ ತಯಾರು ಮಾಡಬಹುದು. ಆದರೆ ಒಬ್ಬ ಉಗ್ರಪ್ಪನನ್ನು ತಯಾರು ಮಾಡಲು ಆಗಲ್ಲ. ಈ ಚುನಾವಣೆಯಲ್ಲಿ ನೀವು ಉಗ್ರಪ್ಪನನ್ನು ಗೆಲ್ಲಿಸ್ತಿರಿ ಎಂಬ ನಂಬಿಕೆ ನಮಗೆ ಇದೆ ಅಂತ ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಳ್ಳಾರಿ ಎಲೆಕ್ಷನ್‍ನಲ್ಲಿ ಜಾತಿ ಬೀಜ ಬಿತ್ತಿದ ಶ್ರೀರಾಮುಲು – ಚುನಾವಣಾ ಆಯೋಗಕ್ಕೆ ಉಗ್ರಪ್ಪ ದೂರು

    ಬಳ್ಳಾರಿ ಎಲೆಕ್ಷನ್‍ನಲ್ಲಿ ಜಾತಿ ಬೀಜ ಬಿತ್ತಿದ ಶ್ರೀರಾಮುಲು – ಚುನಾವಣಾ ಆಯೋಗಕ್ಕೆ ಉಗ್ರಪ್ಪ ದೂರು

    ಬಳ್ಳಾರಿ: ಉಪಚುನಾವಣೆಯ ಮಿನಿಸಮರದಲ್ಲಿ ಜಾತಿ ರಾಜಕಾರಣದ ಕುರಿತು ಹೇಳಿಕೆ ನೀಡಿದ್ದ ಶಾಸಕ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

    ಶ್ರೀರಾಮುಲು ಅವರು ಚುನಾವಣೆಯಲ್ಲಿ ಜಾತಿ ಬೀಜ ಬಿತ್ತುತ್ತಿದ್ದಾರೆ ಎಂದು ತಕರಾರು ತೆಗೆದಿರುವ ಉಗ್ರಪ್ಪ ಅವರು ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ರಾಮಪ್ರಸಾದ್ ಮನೋಹರ್ ಅವರಿಗೆ ಮೌಖಿಕ ದೂರು ನೀಡಿದ್ದಾರೆ. ಇಂದು ನಾಮಪತ್ರ ಪರಿಶೀಲನೆ ಹಿನ್ನೆಲೆಯಲ್ಲಿ ಉಗ್ರಪ್ಪ ಅವರು ಚುನಾವಣಾ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಚುನಾವಣಾ ಅಧಿಕಾರಿಗಳ ಎದುರು ಶ್ರೀರಾಮುಲು ಹೇಳಿಕೆ ಪ್ರಸ್ತಾಪ ಮಾಡಿರುವ ಉಗ್ರಪ್ಪ ಅವರು, ಜಾತಿ ಜಾತಿಗಳ ನಡುವೇ ವಿಷ ಭೀಜ ಬೀತ್ತುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಶ್ರೀರಾಮುಲು ಅವರು ಮತ್ತೊಮ್ಮೆ ಇಂತಹ ಹೇಳಿಕೆ ನೀಡಿದರೆ ಲಿಖಿತ ರೂಪದಲ್ಲಿ ದೂರು ನೀಡುವುದಾಗಿ ಉಗ್ರಪ್ಪ ಅವರು ತಿಳಿಸಿದ್ದಾಗಿ ಮಾಹಿತಿ ಲಭಿಸಿದೆ. ಉಗ್ರಪ್ಪ ಅವರಿಂದ ಈ ಕುರಿತು ದೂರು ಬಂದಿರುವುದನ್ನು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಬಳ್ಳಾರಿ ಲೋಕಸಭಾ ಉಪಚುನಾವಣೆಯ ಪ್ರಚಾರದ ವೇಳೆ ಶ್ರೀರಾಮುಲು ಅವರು ಶೋಷಿತ ಜಾತಿಯನ್ನು ತುಳಿಯಲಾಗುತ್ತಿದೆ ಎಂದು ಆರೋಪ ಮಾಡಿದ್ದರು. ಅಲ್ಲದೇ ಕಾಂಗ್ರೆಸ್ ಮುಖಂಡರಾದ ಸಚಿವ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

    ಇತ್ತ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಜೆ ಶಾಂತಾ ಪರವಾಗಿ ಸಹೋದರ, ಶಾಸಕ ಶ್ರೀರಾಮುಲು ಬಿರುಸಿನ ಪ್ರಚಾರ ನಡೆಸಿದರು. ಇದಕ್ಕೂ ಮೊದಲು ಮೈಲಾರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿ ತಾವೂ ಸಂಸದರಾದ ವೇಳೆ ರಾಜ್ಯದ ಎಲ್ಲ ಸಂಸದರ ಪೈಕಿ ಅನುದಾನ ಬಳಕೆಯಲ್ಲಿ ನಂಬರ್ ಒನ್ ಆಗಿದ್ದು, ಮುಂದಿನ ದಿನಗಳಲ್ಲಿ ಶಾಂತಾ ಅವರನ್ನು ಗೆಲ್ಲಿಸಿದರೆ ಇನ್ನೂ ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೋಲಿನ ಭೀತಿಯಿಂದ ನಕಲಿ ಆಡಿಯೋ ರಿಲೀಸ್- ಜನಾರ್ದನ ರೆಡ್ಡಿ

    ಸೋಲಿನ ಭೀತಿಯಿಂದ ನಕಲಿ ಆಡಿಯೋ ರಿಲೀಸ್- ಜನಾರ್ದನ ರೆಡ್ಡಿ

    ಬೆಂಗಳೂರು: ಕಾಂಗ್ರೆಸ್ ನಾಯಕರು ಸತ್ಯ ಹರಿಶ್ಚಂದ್ರನ ವಂಶಸ್ಥರು ಎಂಬಂತೆ ನಾಟಕ ಮಾಡುತ್ತಿದ್ದಾರೆ ಮಾಜಿ ಸಚಿವ ಜನಾರ್ದನ ರೆಡ್ಡಿ ವ್ಯಂಗ್ಯವಾಡಿದ್ದಾರೆ.

    100 ಕೋಟಿ ರೂ. ಆಫರ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್‍ಬುಕ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿರುವ ಜನಾರ್ದನ ರೆಡ್ಡಿ, ಕಳೆದ 6 ದಶಕಗಳಿಂದ ಇವರು ಸಂವಿಧಾನವನ್ನು ಎಷ್ಟು ಬಾರಿ ದುರುಪಯೊಗ ಮಾಡಿಕೊಂಡಿದ್ದಾರೆ ಎಂಬುದು ದೇಶದ ಜನತೆಗೆ ಗೊತ್ತಿದೆ. ಈಗಲೂ ಅದೇ ಹಾದಿಯಲ್ಲಿ ಜನರನ್ನು ದಿಕ್ಕು ತಪ್ಪಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ನಾಳೆ ನಡೆಯುವ ವಿಶ್ವಾಸ ಮತ ಯಾಚನೆಯಲ್ಲಿ ಸೋಲಿನ ಭೀತಿಯಿಂದ ಅನಾವಶ್ಯಕವಾಗಿ ನನ್ನ ಹೆಸರಿನ ನಕಲಿ ಆಡಿಯೋ ಒಂದನ್ನು ಬಿಡುಗಡೆ ಮಾಡಿ ನನಗೆ ಮತ್ತು ಭಾರತೀಯ ಜನತಾ ಪಕ್ಷಕ್ಕೆ ಕೆಟ್ಟ ಹೆಸರು ತರುವ ಷಡ್ಯಂತ್ರ ಇದಾಗಿದೆ ಎಂದು ದೂರಿದ್ದಾರೆ.

    ನಾಡಿನ ಜನತೆಗೆ ಗೊತ್ತಿದೆ ಇವರ ಬಣ್ಣ ಆಡಿಯೋದಲ್ಲಿ ಇರುವ ಧ್ವನಿಯನ್ನು ನನ್ನ ಹಾಗೆ ಮಾತನಾಡುವ ರೀತಿ ಆಧುನಿಕ ತಂತ್ರಗಾನ ದಿಂದ ಸಿದ್ಧಪಡಿಸಿಕೊಂಡು ನಕಲಿ ಆಡಿಯೋ ಬಿಡುಗಡೆ ಯಾವುದೇ ಸಂಭಂಧ ಇರುವುದಿಲ್ಲ ಎಂದು ಜನಾರ್ದನ ರೆಡ್ಡಿ ಬರೆದುಕೊಂಡಿದ್ದಾರೆ.

    ಕಾಂಗ್ರೆಸ್ ನಾಯಕರಾದ ವಿಎಸ್ ಉಗ್ರಪ್ಪ ಮತ್ತು ಪ್ರೊ ರಾಜೀವ್ ಗೌಡ ಜಂಟಿ ಸುದ್ದಿಗೋಷ್ಠಿ ನಡೆಸಿ ಜನಾರ್ದನ ರೆಡ್ಡಿ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ಅವರಿಗೆ ಕರೆ ಮಾಡಿ ಆಫರ್ ನೀಡಿರುವ ಆಡಿಯೋವನ್ನು ಬಿಡುಗಡೆ ಮಾಡಿದ್ದರು.

    ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆಯಲು ನೂರು, ನೂರೈವತ್ತು ಕೋಟಿ ರೂ. ಆಮಿಷವೊಡ್ಡುತ್ತಿದ್ದಾರೆ. ಅಮಿತ್ ಶಾ ಕೂಡ ಆಮಿಷವೊಡ್ಡಿದ್ದಾರೆ. ನೂರು ಕೋಟಿ ರೂ. ಜೊತೆಗೆ ಕ್ಯಾಬಿನೆಟ್ ಸಚಿವ ಸ್ಥಾನದ ಆಮಿಷ ನೀಡಿದ್ದಾರೆ. ನಮ್ಮ ಶಾಸಕರ ಕುಟುಂಬದವರನ್ನ ಸಂಪರ್ಕಿಸಿ ಹಣ ನೀಡುವ ಕೆಲಸ ಮಾಡಿ, ಶಾಸಕರ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದ್ದರು.

     

  • ಬಿಜೆಪಿ ಜಾಹೀರಾತಿಗೆ ಆಯೋಗದಿಂದ ತಡೆ

    ಬಿಜೆಪಿ ಜಾಹೀರಾತಿಗೆ ಆಯೋಗದಿಂದ ತಡೆ

    ಬೆಂಗಳೂರು: ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಬಿಜೆಪಿಯ ಜಾಹೀರಾತುಗಳಿಗೆ ಚುನಾವಣಾ ಆಯೋಗ ತಡೆ ನೀಡಿದೆ.

    ಕರ್ನಾಟಕ ಬಿಜೆಪಿ ಜನವಿರೋಧಿ ಸರ್ಕಾರ, ಮೂರು ಭಾಗ್ಯ, ವಿಫಲ ಸರ್ಕಾರದ ಹೆಸರಲ್ಲಿ ಜಾಹೀರಾತು ತಯಾರಿಸಿತ್ತು. ಈ ಜಾಹೀರಾತಿನ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಉಗ್ರಪ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮೂರು ಜಾಹೀರಾತನ್ನು ಪ್ರಸಾರ ಮಾಡದಂತೆ ತಡೆ ನೀಡಿದೆ.

    ಈ ಆದೇಶಕ್ಕೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ ಜಾಹೀರಾತುಗಳಿಗೆ ಆಯೋಗದ ಅನುಮತಿ ಪಡೆದಿದ್ದೇವೆ. ಉಗ್ರಪ್ಪನವರಿಗೆ ಬಿಜೆಪಿ ಜಾಹೀರಾತಿನ ಮೇಲೆ ಹೊಟ್ಟೆ ಉರಿಯಾಗಿದ್ದು. ಅದಕ್ಕೆ ದೂರು ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

    ಚುನಾವಣಾ ಆಯೋಗ ಅನುಮತಿ ನೀಡಿ, ಕೆಲ ಬದಲಾವಣೆಗಳನ್ನ ಹೇಳಿ ಈಗ ತಡೆ ಕೊಟ್ಟಿರುವುದು ಸರಿಯಲ್ಲ. ಚುನಾವಣಾ ಆಯೋಗ ಜಾಹಿರಾತುಗಳನ್ನು ಮರು ಪರಿಶೀಲನೆ ಮಾಡಬೇಕು. ಏಕಪಕ್ಷೀಯ ನಿರ್ಧಾರದಂತೆ ಕಾಣಿಸುತ್ತಿದೆ. ಅಧಿಕಾರಿಗಳು ಏಕಪಕ್ಷೀಯವಾಗಿ ನಡೆದುಕೊಳ್ಳಬಾರದು. ತಡೆ ನೀಡಿದ ಆದೇಶವನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು.

  • ಬಿಜೆಪಿಯವರಿಗೆ ಚಳಿ ಜ್ವರ ಬಂದಿದೆ: ಉಗ್ರಪ್ಪ

    ಬಿಜೆಪಿಯವರಿಗೆ ಚಳಿ ಜ್ವರ ಬಂದಿದೆ: ಉಗ್ರಪ್ಪ

    ಬೆಂಗಳೂರು: ಬಿಜೆಪಿಯವರಿಗೆ ಚಳಿ ಜ್ವರ ಬಂದಿದೆ. ಎಸಿಬಿ ನಡುಕ ಶುರುವಾಗಿದೆ. ಅದಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಕೊಟ್ಟಿದ್ದಾರೆ ಎಂದು ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರು ಅವರ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆ ಎಂದು ಅವರು ಸ್ಪಷ್ಟ ಪಡಿಸಲಿ. ಕೇಂದ್ರ ಸರ್ಕಾರದ ಅಡಿಯಲ್ಲಿ ದೂರವಾಣಿ ಇಲಾಖೆ ಇರುವಾಗ ಸುಮ್ಮನೆ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಶಿವರಾಮಕಾರಂತ ಬಡಾವಣೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಮೇಲೆ 2010ರಲ್ಲಿ 257.20 ಎಕರೆ ಜಮೀನನ್ನು ಕಾನೂನು ಬಾಹಿರವಾಗಿ ಡಿ.ನೋಟಿಫಿಕೇಶನ್ ಮಾಡಿದ್ದಾರೆ. 23 ಎಪ್ರಿಲ್ 2012 ರಲ್ಲಿ ಇದರ ಬಗ್ಗೆ ಆಗಿನ ಸಿಎಂ ಆಗಿದ್ದ ಡಿ.ವಿ.ಸದಾನಂದಗೌಡ ಸಿಐಡಿ ತನಿಖೆ ನಡೆಸಿದ್ದಾರೆ. ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ಉಮೇಶ್ ಕೂಡ ತನಿಖೆ ನಡೆಸಿ ವರದಿ ನೀಡಿದ್ದಾರೆ. ಈಗ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಎಸಿಬಿ ತನಿಖೆಗೆ ವಹಿಸಿದ್ದು ಸೇಡಿನ ರಾಜಕಾರಣ ಎನ್ನುವುದಾದರೆ, ಸದಾನಂದಗೌಡರು ಸಿಐಡಿ ತನಿಖೆಗೆ ಕೊಟ್ಡಿದ್ದೂ ಸೇಡಿನ ರಾಜಕಾರಣವಲ್ಲವೇ? ಮೇಲಾಗಿ ಅಯ್ಯಪ್ಪ ದೂರು ಕೊಟ್ಟ ಎರಡು ತಿಂಗಳ ನಂತರ ಐಪಿಸಿ ಸೆಕ್ಷನ್ ಪ್ರಕಾರ ಎಸಿಬಿ ಕಾನೂನು ಕ್ರಮಕ್ಕೆ ಮುಂದಾಗಿದೆ ಎಂದು ಹೇಳಿದರು.

    ಶಿವರಾಮಕಾರಂತ ಬಡಾವಣೆ ಅಕ್ರಮ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ಕೃಷ್ಣನ ಜನ್ಮಸ್ಥಳ ಸೇರೋದು ನಿಶ್ಚಿತ. ಈಗ ರಾಜ್ಯಪಾಲರಿಗೆ ದೂರು ಕೊಟ್ಟಿರುವ ಅಧಿಕಾರಿ ಹಿಂದೆ ತಿಪಟೂರು ಎಸಿ ಆಗಿದ್ದ ಸಂದರ್ಭದಲ್ಲಿ ತುಮಕೂರು ಜಿಲ್ಲೆ ತುರುವೇಕೆರೆ ಎಸಿಎಂ ಎಂ ನ್ಯಾಯಾಲಯದಲ್ಲಿ ತಮ್ಮಮಾನಸಿಕ ಸ್ಥಿತಿಯ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. 2010 ರಲ್ಲಿ ಅವರು ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿದ್ದರು. ಈಗ ಆರೋಪದಿಂದ ತಪ್ಪಿಸಿಕೊಳ್ಳಲು ಈಗ ಪತ್ರ ಬರೆಯುತ್ತಿದ್ದಾರೆ ಎಂದರು.

  • ಕಾವ್ಯಾ ಅಸಹಜವಾಗಿ ಸಾವನ್ನಪ್ಪಿದ್ದಾಳೆ: ಉಗ್ರಪ್ಪ ಕಾಲೇಜಿಗೆ ಭೇಟಿ ನೀಡಿದಾಗ ಸಿಕ್ಕಿರೋ ಸ್ಫೋಟಕ ಮಾಹಿತಿ ಇಲ್ಲಿದೆ

    ಕಾವ್ಯಾ ಅಸಹಜವಾಗಿ ಸಾವನ್ನಪ್ಪಿದ್ದಾಳೆ: ಉಗ್ರಪ್ಪ ಕಾಲೇಜಿಗೆ ಭೇಟಿ ನೀಡಿದಾಗ ಸಿಕ್ಕಿರೋ ಸ್ಫೋಟಕ ಮಾಹಿತಿ ಇಲ್ಲಿದೆ

    ಮಂಗಳೂರು: ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯಾ ಸಾವಿನ ಪ್ರಕರಣ ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಗೆ ಕಂಟಕವಾಗುವ ಸಾಧ್ಯತೆ ಗೋಚರಿಸಿದೆ. ಕಾವ್ಯಾಳ ನಿಗೂಢ ಸಾವಿನಿಂದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪರವಾನಗಿ ಇಲ್ಲದೆ ವಸತಿ ಶಾಲೆ ನಡೆಸುತ್ತದೆ ಎನ್ನುವ ವಿಚಾರ ಬಹಿರಂಗಗೊಂಡಿದೆ.

    ಹೌದು. ಕಾವ್ಯ ಸಾವಿನ ಹಿನ್ನಲೆಯಲ್ಲಿ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ನೇತೃತ್ವದ ತಂಡ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ತೆರಳಿ ಪರಿಶೀಲಿಸಿದಾಗ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅಷ್ಟೇ ಅಲ್ಲದೇ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು ಕಾವ್ಯ ಅಸಹಜವಾಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾರೆ.

    ಭೇಟಿಯ ವೇಳೆ ರೆಸಿಡೆನ್ಶಿಯಲ್ ಸ್ಕೂಲ್ ನಡೆಸಲು ಆಳ್ವಾಸ್ ಸಂಸ್ಥೆಗೆ ಅನುಮತಿ ಇಲ್ಲದಿರುವುದನ್ನು ಉಗ್ರಪ್ಪ ಕಂಡುಕೊಂಡಿದ್ದಾರೆ. ಅಲ್ಲದೆ, ಶಿಕ್ಷಣ ಸಂಸ್ಥೆಯಲ್ಲಿ 18 ಸಾವಿರ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆಯಿದ್ದು, ಹಾಸ್ಟೆಲಿಗೆ ಅನುಮತಿ ಇಲ್ಲದೇ ಇರುವುದರಿಂದ ಕಾನೂನು ಉಲ್ಲಂಘನೆ ಎಸಗಿರುವುದು ಬೆಳಕಿಗೆ ಬಂದಿದೆ.

    ಕಾವ್ಯಾ ಆತ್ಮಹತ್ಯೆ ಮಾಡಿಕೊಂಡ ಹಾಸ್ಟೆಲ್ ಮತ್ತು ಹೈಸ್ಕೂಲಿಗೆ ಭೇಟಿ ನೀಡಿದ ತಂಡ, ಅಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರನ್ನು ಪ್ರಶ್ನೆ ಮಾಡಿತು. ಬಳಿಕ ರೆಸಿಡೆನ್ಶಿಯಲ್ ಸ್ಕೂಲ್ ಬಗ್ಗೆ ಶಿಕ್ಷಣ ಅಧಿಕಾರಿಗಳು ಮತ್ತು ಆಳ್ವಾಸ್ ಆಡಳಿತ ಮಂಡಳಿಯನ್ನು ಪ್ರಶ್ನಿಸಿ ತೀವ್ರ ತರಾಟೆಗೆತ್ತಿಕೊಂಡಿದೆ. ಅನುಮತಿ ಇಲ್ಲದೇ ವಸತಿ ಶಾಲೆ ನಡೆಸುತ್ತಿರುವ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಲಾಗಿದ್ದು,ಅಷ್ಟೇ ಅಲ್ಲದೆ, ಕಾವ್ಯಾಳನ್ನು ಹಾಸ್ಟೆಲಿನಿಂದ ಆಸ್ಪತ್ರೆಗೆ ಕೊಂಡೊಯ್ದಿದ್ದ ವಿದ್ಯಾರ್ಥಿನಿಯರನ್ನು ಪ್ರಶ್ನಿಸಿ ಮಾಹಿತಿಯನ್ನು ತಂಡ ಪಡೆದುಕೊಂಡಿದೆ.

    ಘಟನೆ ನಡೆದಿದ್ದ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಇರಲಿಲ್ಲ. ಹೀಗಾಗಿ ಆಕೆಯನ್ನು ಇತರೇ ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದೊಯ್ದಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಮಾಹಿತಿ ಪಡೆದಿದ್ದೇನೆ. ರೆಸಿಡೆನ್ಸಿಯಲ್ ಸ್ಕೂಲ್‍ಗೆ ಇರಬೇಕಾದ ಮಾನದಂಡಗಳನ್ನು ಅನುಸರಿಸದೇ ಇದ್ದ ಕಾರಣ ಕಾವ್ಯಾ ಸಾವು ಸಂಭವಿಸಿದೆ. ಹೀಗಾಗಿ ಈ ಸಾವಿಗೆ ಆಳ್ವಾಸ್ ಸಂಸ್ಥೆಯೇ ಹೊಣೆ ಹೊರಬೇಕು ಉಗ್ರಪ್ಪ ಹೇಳಿದರು.

    ಹಾಸ್ಟೆಲ್ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ. ಸಂಸ್ಥೆಯ ಸಿಬ್ಬಂದಿಗೆ ಕನಿಷ್ಠ ವೇತನ ನೀಡುತ್ತಿಲ್ಲ. 7 ರಿಂದ 24 ಸಾವಿರ ರೂ. ಸಂಬಳ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಕಟ್ಟಡದಲ್ಲಿ ಲೋಪಗಳಿವೆ. ಕೆಳ ಅಂತಸ್ತಿನಲ್ಲಿ ಸ್ಕೂಲ್, ಮೇಲಂತಸ್ತಿನಲ್ಲಿ ಹಾಸ್ಟೆಲ್ ಇದೆ. ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ. ಇದರಲ್ಲಿ ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಯ ಲೋಪ ಕಂಡು ಬಂದಿದೆ. ಹೀಗಾಗಿ ಆಳ್ವಾಸ್ ಸಂಸ್ಥೆಯಿಂದ ಕಾವ್ಯಾ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ ಎಂದು ಅವರು ಹೇಳಿದರು.

    ಇದೇ ವೇಳೆ, ಜಿಲ್ಲೆಯಲ್ಲಿ ಸುಮಾರು 28 ವಸತಿಯುತ ಖಾಸಗಿ ಶಾಲೆಗಳು ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿರುವುದೂ ಬೆಳಕಿಗೆ ಬಂದಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ ಎಂದು ಉಗ್ರಪ್ಪ ತಿಳಿಸಿದರು.

    ಪಬ್ಲಿಕ್ ಟಿವಿಗೆ ಜೊತೆ ಮಾತನಾಡಿದ ಉಗ್ರಪ್ಪ ಅವರು ಪರಿಶೀಲನೆ ನಡೆಸಿದ ವೇಳೆ ಕಂಡುಕೊಂಡ ವಿಚಾರಗಳನ್ನು ತಿಳಿಸಿದರು. ಇದೇ ವೇಳೆ ತನಿಖೆ ನಡೆಸುವ ಸಂದರ್ಭದಲ್ಲಿ ಎಲ್ಲ ವಿಚಾರಗಳನ್ನು ನಾನು ಈಗ ಬಹಿರಂಗ ಪಡಿಸುವುದು ಅಷ್ಟು ಸರಿಯಲ್ಲ. ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಬರಬೇಕಿದೆ. ಈ ಸಾವಿಗೆ ಅನೇಕ ಮಂದಿ ಒಂದು ರೀತಿಯಲ್ಲಿ ಕಾರಣರಾಗಿದ್ದಾರೆ ಎಂದು ಅವರು ಹೇಳಿದರು.

    ಕುಸಿದುಬಿದ್ದ ಅಧಿಕಾರಿ: ಕಾವ್ಯಾ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಂದರ್ ಪೂಜಾರಿ ಕುಸಿದು ಬಿದ್ದ ಘಟನೆಯೂ ನಡೆಯಿತು. ಕಾವ್ಯ ಸಾವಿನ ಹಿನ್ನೆಲೆಯಲ್ಲಿ ಸುಂದರ್ ಪೂಜಾರಿ ಅವರನ್ನು ಉಗ್ರಪ್ಪ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕುಸಿದು ಬಿದ್ದ ಸುಂದರ್ ಪೂಜಾರಿ ಅವರನ್ನು ಸಭೆಯಿಂದ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದರು. ಕಳೆದ ವರ್ಷವೂ ಈ ಅಧಿಕಾರಿ ಉಗ್ರಪ್ಪ ಪ್ರಶ್ನೆಗೆ ಕುಸಿದು ಬಿದ್ದಿದ್ದರು.

    ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್‍ಡಿಕೆ

    https://youtu.be/afDao6a6_FM

    https://youtu.be/HNGQPVsAIq4

     

    https://www.youtube.com/watch?v=75vzrVm8Z6w

    https://www.youtube.com/watch?v=BgvrrloxXoQ

    https://www.youtube.com/watch?v=9upWi0NOWqw

  • 11 ಕಾಂಗ್ರೆಸ್ ಶಾಸಕರಿಂದ ಉಗ್ರಪ್ಪ ವಿರುದ್ಧ ಪರಮೇಶ್ವರ್‍ಗೆ ದೂರು

    11 ಕಾಂಗ್ರೆಸ್ ಶಾಸಕರಿಂದ ಉಗ್ರಪ್ಪ ವಿರುದ್ಧ ಪರಮೇಶ್ವರ್‍ಗೆ ದೂರು

    ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉಗ್ರಪ್ಪ ವಿರುದ್ಧ ಕೈ ಶಾಸಕರು ಕೆಂಡಾಮಂಡಲರಾಗಿದ್ದಾರೆ.

    ಉಗ್ರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ 11 ಕಾಂಗ್ರೆಸ್ ಶಾಸಕರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ. ಸಭಾಪತಿ ವಿರುದ್ಧ ಕೆಲವರು ಚಿತಾವಣೆಯಿಂದ ಅವಿಶ್ವಾಸ ನಿರ್ಣಯ ಮಂಡಿಸಿದ್ರು. ಇದಕ್ಕೆ ಮೂಲ ಕಾರಣರಾಗಿರುವ ಉಗ್ರಪ್ಪ, ಮತ್ತಿತರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

    ಶಾಸಕರಾದ ಎಸ್.ಟಿ.ಸೋಮಶೇಖರ್, ಕೆ.ಎನ್.ರಾಜಣ್ಣ, ಶಿವಮೂರ್ತಿ ನಾಯಕ್, ಶಾಂತನಗೌಡ ಸೇರಿದಂತೆ 11 ಮಂದಿಯಿಂದ ದೂರು ನೀಡಲಾಗಿದೆ.

     ಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ ಅವರನ್ನು ಪದಚ್ಯುತಿಗೊಳಿಸಲು ಮುಂದಾಗಿದ್ದ ಕಾಂಗ್ರೆಸ್‍ಗೆ ಭಾರೀ ಮುಖಭಂಗವಾಗಿದೆ. ನಿರ್ಣಯದ ಪರವಾಗಿ 36 ಮತಗಳು ಬಿದ್ದಿದ್ದರೆ, ನಿರ್ಣಯದ ವಿರುದ್ಧವಾಗಿ 37 ಮತಗಳು ಬಿದ್ದ ಪರಿಣಾಮ ಸಭಾಪತಿ ವಿರುದ್ಧ ಕಾಂಗ್ರೆಸ್‍ನ ಅವಿಶ್ವಾಸ ನಿರ್ಣಯ ತಿರಸ್ಕೃತವಾಗಿದೆ. ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಜೆಡಿಎಸ್ ಬೆಂಬಲಿಸದ ಕಾರಣ ಶಂಕರಮೂರ್ತಿ ಸಭಾಪತಿಗಳಾಗಿ ಮುಂದುವರೆದಿದ್ದಾರೆ.