Tag: ಉಚಿತ ಪಾಸ್

  • ಸರ್ಕಾರಿ ಬಸ್‍ನಲ್ಲಿ ಇಬ್ಬರು ಮಕ್ಕಳ ಜನನ – ಗಿಫ್ಟ್ ಆಗಿ ಸಿಕ್ತು  ಜೀವನಪರ್ಯಂತ ಉಚಿತ ಪಾಸ್

    ಸರ್ಕಾರಿ ಬಸ್‍ನಲ್ಲಿ ಇಬ್ಬರು ಮಕ್ಕಳ ಜನನ – ಗಿಫ್ಟ್ ಆಗಿ ಸಿಕ್ತು ಜೀವನಪರ್ಯಂತ ಉಚಿತ ಪಾಸ್

    ಹೈದರಾಬಾದ್: ಸರ್ಕಾರಿ ಬಸ್‍ಗಳಲ್ಲಿ ಜನಿಸಿದ ಇಬ್ಬರು ಹೆಣ್ಣು ಮಕ್ಕಳಿಗೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‌ಆರ್‌ಟಿಸಿ) ಜೀವನಪರ್ಯಂತ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡಿದೆ.

    ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಯು ಬಸ್‍ನಲ್ಲಿ ಜನಿಸಿದ ಎರಡು ಶಿಶುಗಳಿಗೆ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ಉಚಿತ ಜೀವಮಾನ ಪಾಸ್‍ಗಳನ್ನು ಘೋಷಿಸಿದೆ. ನವೆಂಬರ್ 30ರಂದು ನಾಗರಕರ್ನೂಲ್ ಡಿಪೋಗೆ ಸೇರಿದ ಬಸ್‍ನಲ್ಲಿ ಪೆದ್ದಕೋತಪಲ್ಲಿ ಗ್ರಾಮದ ಬಳಿ ಮಹಿಳೆಯೊಬ್ಬರಿಗೆ ಹೆಣ್ಣು ಮಗು ಜನಿಸಿತ್ತು. ನಂತರ ಡಿಸೆಂಬರ್ 7ರಂದು ಸಿದ್ದಿಪೇಟೆ ಬಳಿ ಆಸಿಫಾಬಾದ್ ಡಿಪೋಗೆ ಸೇರಿದ ಬಸ್‍ನಲ್ಲಿ ಇನ್ನೋರ್ವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

    ಈ ಇಬ್ಬರು ಮಹಿಳೆಯರಿಗೆ ಅನಿರೀಕ್ಷಿತವಾಗಿ ಬಸ್‍ನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಟಿಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರು ಮಹಿಳೆಯರಿಗೆ ಹೆರಿಗೆ ಸಮಯದಲ್ಲಿ ಸಹಾಯ ಮಾಡಿದ್ದರು. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ಪತನ – ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಯಾರು ಗೊತ್ತಾ?

    ಬಳಿಕ ಟಿಎಸ್‌ಆರ್‌ಟಿಸಿ ಸಿಬ್ಬಂದಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ತಾಯಂದಿರು ಮತ್ತು ನವಜಾತ ಶಿಶುಗಳಿಗೆ ಹೆಚ್ಚಿನ ಚಿಕಿತ್ಸೆ ಗಾಗಿ ಆಂಬುಲೆನ್ಸ್ ಮೂಲಕ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಇದೀಗ ತಾಯಿ ಮಕ್ಕಳು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:  ವೆಲ್ಲಿಂಗ್ಟನ್‍ನಲ್ಲಿ ಹುತಾತ್ಮ ಯೋಧರಿಗೆ ಅಂತಿಮ ನಮನ, ಸೇನಾ ಗೌರವ

    BUS

    ಟಿಎಸ್‌ಆರ್‌ಟಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿ. ಸಿ. ಸಜ್ಜಾನರ್ ಟಿಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಪ್ರಯಾಣಿಕರ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಇಬ್ಬರು ಇಬ್ಬರು ಹೆಣ್ಣು ಮಕ್ಕಳಿಗೆ ಜೀವನಪರ್ಯಂತ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ನೀಡುವುದಾಗಿ ಘೋಷಿಸಿದರು.

  • ಹಬ್ಬಕ್ಕೆ ವಂಡರ್ ಲಾದಿಂದ ಬಂಪರ್ ಆಫರ್- ಗಣೇಶ ಹೆಸರಿರೋ 100 ಮಂದಿಗೆ ಉಚಿತ ಪಾಸ್

    ಹಬ್ಬಕ್ಕೆ ವಂಡರ್ ಲಾದಿಂದ ಬಂಪರ್ ಆಫರ್- ಗಣೇಶ ಹೆಸರಿರೋ 100 ಮಂದಿಗೆ ಉಚಿತ ಪಾಸ್

    ಬೆಂಗಳೂರು: ಇಂದು ದೇಶಾದ್ಯಂತ ಗಣೇಶ ಹಬ್ಬವನ್ನು ಜನರು ಸಡಗರದಿಂದ ಆಚರಿಸುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ವಂಡರ್ ಲಾ ಈ ಬಾರಿ ಗಣೇಶ ಹಬ್ಬಕ್ಕೆ ಬಂಪರ್ ಆಫರ್ ನೀಡಿದೆ. ಇದನ್ನೂ ಓದಿ:  ಗಣೇಶನಿಗೆ ಪ್ರಿಯವಾದ ಬೇಸನ್ ಲಾಡು ಮಾಡುವ ಸರಳ ವಿಧಾನ

    Wonder La

    ಹೌದು, ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಶೇಷ ಕೊಡುಗೆ ನೀಡಲಾಗಿದೆ. ಭಗವಾನ್ ಶ್ರೀ ಗಣೇಶನ 108 ಹೆಸರುಗಳ ಪೈಕಿ ಯಾವುದೇ ಹೆಸರು ನೀವು ಇಟ್ಟುಕೊಂಡಿದ್ದರೆ, ಅವರಿಗೆ ಸೆಪ್ಟೆಂಬರ್ 10ರ ಗಣೇಶ ಹಬ್ಬದಂದು ಉಚಿತ ಪಾಸ್ ನೀಡುತ್ತಿದೆ. ಇಂಥ 100 ಪಾಸ್ ನೀಡಲು ನಿರ್ಧರಿಸಿದೆ. ಇದನ್ನೂ ಓದಿ:  6,50,000 ರೂ.ಗೆ ದೇವರ ತೆಂಗಿನಕಾಯಿ ಖರೀದಿಸಿದ ಭಕ್ತ!

    Wonder La

    ಶ್ರೀ ಗಣೇಶನ ವಿವಿಧ ಹೆಸರು ಹೊಂದಿರುವ ಜನರು ವಂಡರ್ ಲಾಗೆ ನೇರವಾಗಿ ಭೇಟಿ ನೀಡಿ ಉಚಿತ ಪಾಸ್ ಪಡೆಯಬಹುದು. ಈ ಕೊಡುಗೆ ಪಡೆಯಲು ಅರ್ಹರಾಗಿರುವವರು ನಿಮ್ಮ ಹೆಸರನ್ನು ಸೂಚಿಸುವ ಯಾವುದಾದರೂ ಗುರುತಿನ ಚೀಟಿ ತರುವುದು ಕಡ್ಡಾಯ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 080-37230333, 080-35073966.

  • ದಲಿತ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಅಲ್ಲ!

    ದಲಿತ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಅಲ್ಲ!

    ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿದ್ಯಾರ್ಥಿ ಪಾಸ್ ನೀಡೋದಾಗಿ ಘೋಷಿಸಿದ್ದರು. ಅದರಂತೆ ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ ಆಗ್ತಿದೆ. ಆದರೆ ಅದು ಉಚಿತವಾಗಿ ಅಲ್ಲ. ಅದರ ಬದಲಾಗಿ ವಿದ್ಯಾರ್ಥಿಗಳಿಂದ 130 ರಿಂದ 150 ರೂಪಾಯಿ ಶುಲ್ಕ ಪಡೆದು ಪಾಸ್ ನೀಡಲಾಗುತ್ತಿದೆ.

    ಹೌದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಹೆಸರಿಗೆ ಮಾತ್ರ ಉಚಿತ ಪಾಸ್ ನೀಡುತ್ತಿದ್ದೇವೆ ಅಂತ ಸಿಎಂ ಅವರು ವೇದಿಕೆಗಳಲ್ಲಿ ಹೇಳುತ್ತಿದ್ದರೂ ಪಾಸ್ ವಿಚಾರದಲ್ಲಿ ಲಕ್ಷಾಂತರ ಮಕ್ಕಳಿಂದ ಶುಲ್ಕ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.

    ಶಾಲಾ-ಕಾಲೇಜು ಮಕ್ಕಳಿಗೆ ವಿತರಣೆಯಾಗುತ್ತಿರುವ ಪಾಸ್ ಮೇಲೆ ಉಚಿತ ಅಂತ ಬರೆಯಲಾಗಿದೆ. ಹೀಗಿದ್ದರೂ ಸಂಸ್ಕರಣಾ ವೆಚ್ಚ ಹಾಗೂ ಇತರೆ ವೆಚ್ಚ ಅನ್ನೋ ಹೆಸರಲ್ಲಿ 130 ರಿಂದ 150 ರೂಪಾಯಿ ಹಣ ಪಡೆಯಲಾಗುತ್ತಿದೆ. ಇದನ್ನ ಪಾಸ್ ಕೌಂಟರ್ ಬಳಿ ಬ್ಯಾನರ್‍ಗಳಲ್ಲೂ ಹಾಕಲಾಗಿದೆ.

    ಒಂದರಿಂದ ಏಳನೇ ತರಗತಿಯ ಮಕ್ಕಳಿಗೆ 130 ರೂ. ಶುಲ್ಕ ಪಡೆಯಲಾಗುತ್ತಿದೆ. ಎಸ್ಸಿ ಮತ್ತು ಎಸ್ಟಿ ಮಕ್ಕಳು ಹಾಗೂ ಸಾಮಾನ್ಯ ಮಕ್ಕಳಿಂದಲೂ ಶುಲ್ಕ ಪಡೆಯಲಾಗುತ್ತಿದೆ. 8ನೇ ತರಗತಿ ಯಿಂದ ಡಿಗ್ರಿ ವಿದ್ಯಾರ್ಥಿಗಳ ಬಳಿಯೂ ಸಂಸ್ಕರಣಾ ಹಾಗೂ ಇತರೆ ವೆಚ್ಚ ಅಂತ 150 ರೂಪಾಯಿ ಪಡೆಯಲಾಗುತ್ತಿದೆ.

    ಕರ್ನಾಟಕ ರಾಜ್ಯ ಶೈಕ್ಷಣಿಕ ವರದಿ 2016-17ರ ಅನ್ವಯ 1-8 ತರಗತಿವರೆಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು 16,06,159 ಇದ್ದಾರೆ. ಪರಿಶಿಷ್ಟ ಪಂಗಡದಲ್ಲಿ 6,38,827 ವಿದ್ಯಾರ್ಥಿಗಳು ಇದ್ದಾರೆ. ಒಟ್ಟಾರೆ 22,44,986 ವಿದ್ಯಾರ್ಥಿಗಳು ಇದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯಿಂದ 130ರೂ. ಪಡೆದರೆ 30 ಕೋಟಿ ಹಣ ಸಾರಿಗೆ ಇಲಾಖೆಗೆ ಸಂಗ್ರಹವಾಗುತ್ತಿದೆ. ಇದು ಕೇವಲ 1-8 ತರಗತಿಯ ಅಂಕಿ ಅಂಶ. ಪದವಿಯ ವರೆಗೂ ಇದೇ ಶುಲ್ಕ ಪಡೆದರೆ ಸರ್ಕಾರಕ್ಕೆ ಇದರಿಂದಲೇ ಕೋಟಿ ರೂ. ಹಣ ಬೊಕ್ಕಸಕ್ಕೆ ಬರುತ್ತದೆ.