Tag: ಉಚಿತ ಯೋಜನೆ

  • ರಾಜಕೀಯ ಲಾಭಕ್ಕೆ ಮಾಡುವ ಉಚಿತ ಯೋಜನೆಗಳ ಆಯಸ್ಸು ಸ್ವಲ್ಪ ದಿನ ಮಾತ್ರ: ಬೊಮ್ಮಾಯಿ

    ರಾಜಕೀಯ ಲಾಭಕ್ಕೆ ಮಾಡುವ ಉಚಿತ ಯೋಜನೆಗಳ ಆಯಸ್ಸು ಸ್ವಲ್ಪ ದಿನ ಮಾತ್ರ: ಬೊಮ್ಮಾಯಿ

    ಬೆಂಗಳೂರು: ಉಚಿತ ಯೋಜನೆಗಳು (Free Scheme) ರಾಜಕೀಯ ಲಾಭಕ್ಕೆ ಮಾಡೋ ಯೋಜನೆಗಳು. ಈ ಯೋಜನೆಯ ಆಯಸ್ಸು ಸ್ವಲ್ಪ ದಿನ ಮಾತ್ರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ (Congress) ಉಚಿತ ಯೋಜನೆಗಳ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

    ಉಚಿತ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ (Narendra Modi) ಅವರ ಹೇಳಿಕೆ ಸಮರ್ಥನೆ ಮಾಡಿಕೊಂಡ ಅವರು, ಪ್ರತಿಯೊಬ್ಬ ನಾಗರಿಕರ ಆದಾಯ ಹೆಚ್ಚಾಗಬೇಕು. ಉದ್ಯೋಗ ಸಿಗಬೇಕು. ಆರ್ಥಿಕತೆ ಹೆಚ್ಚಾಗಬೇಕು, ಕೊಳ್ಳುವ ಪವರ್ ಹೆಚ್ಚಾಗಬೇಕು. ಆಗ ದೇಶ ಅಭಿವೃದ್ಧಿ ಆಗುತ್ತದೆ ಎಂದು ಮೋದಿ ಹೇಳಿದ್ದಾರೆ. ಉಚಿತ ಯೋಜನೆಗಳು ಅಲ್ಪ ಕಾಲದ ಯೋಜನೆಗಳು. ಇವು ಸ್ವಲ್ಪ ದಿನ ಆದ ಮೇಲೆ ಲಾಭ ಕೊಡುವುದಿಲ್ಲ. ಇದನ್ನು ರಾಜಕೀಯ ಲಾಭಕ್ಕೆ ಮಾಡುತ್ತಾರೆ. ಇದನ್ನೇ ಮೋದಿ ಅವರು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಉದಯ್ ಸ್ಟಾಲಿನ್‌ದು ಹಿಟ್ಲರ್ ಮನಸ್ಥಿತಿ: ಬೊಮ್ಮಾಯಿ ವಾಗ್ದಾಳಿ

    ಇನ್ನು ಅನ್ನಭಾಗ್ಯ ಯೋಜನೆಯಡಿ 35 ಲಕ್ಷ ಫಲಾನುಭವಿಗಳಿಗೆ ಹಣ ಹಾಕದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು. ಕುಂಟು ನೆಪ ಹೇಳಿ ಅನೇಕರನ್ನು ದೂರ ಇಡುತ್ತಾರೆ ಎಂದು ನಾನು ಅವತ್ತೇ ಹೇಳಿದ್ದೆ. ಈಗ ಅದನ್ನೆ ಮಾಡಿದ್ದಾರೆ. ಕೇಂದ್ರ ಕೊಡುತ್ತಿರುವ 5 ಕೆಜಿ ಅಕ್ಕಿ ಕೂಡಾ ಕಡಿಮೆ ಮಾಡಿದ್ದಾರೆ. 3 ಕೆಜಿ ಅಕ್ಕಿ ಕೊಟ್ಟು ಉಳಿದದ್ದು ಜೋಳ, ರಾಗಿ ಕೊಡುವ ಕೆಲಸ ಮಾಡುತ್ತಿದ್ದಾರೆ. 5 ಕೆಜಿಗೆ ಕೊಡುತ್ತಿರುವ ಹಣ ಸರಿಯಾಗಿ ಕೊಡುತ್ತಿಲ್ಲ. 35 ಲಕ್ಷ ಜನರನ್ನು ಹೊರಗೆ ಇಟ್ಟಿದ್ದಾರೆ. ತಾಂತ್ರಿಕ ಕಾರಣ ಎನ್ನುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನಿಮಗೆ ತಾಕತ್, ಧಮ್ ಇದ್ರೆ ಇಸ್ಲಾಂ ಧರ್ಮದ ಬಗ್ಗೆ ಮಾತಾಡಿ: ಆಂದೋಲ ಶ್ರೀ

    ಇದೊಂದು ಕುಂಟು ನೆಪ. ನಾನು ಹೇಳುತ್ತೇನೆ, ಬರೆದಿಟ್ಟುಕೊಳ್ಳಿ. ಗೃಹಲಕ್ಷ್ಮಿಯಲ್ಲಿ (Gruhalakshmi) ಇಂತಹದ್ದೇ ದೂರು ಮುಂದೆ ಬರುತ್ತದೆ. ಹೀಗೆ ಅನೇಕ ಜನರನ್ನು ಯೋಜನೆಯಿಂದ ಹೊರಗೆ ಇಡುತ್ತಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಸಂಸದ ಸ್ಥಾನದಿಂದ ಪುತ್ರ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫ್ರೀಂ ಸ್ಕೀಂಗಳನ್ನು ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯಗಳು ಶ್ರೀಲಂಕಾ ಆಗಬಹುದು: ಮೋದಿಗೆ ಅಧಿಕಾರಿಗಳ ಸಲಹೆ

    ಫ್ರೀಂ ಸ್ಕೀಂಗಳನ್ನು ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯಗಳು ಶ್ರೀಲಂಕಾ ಆಗಬಹುದು: ಮೋದಿಗೆ ಅಧಿಕಾರಿಗಳ ಸಲಹೆ

    ನವದೆಹಲಿ: ಜನರನ್ನು ಸೆಳೆಯಲು ರಾಜ್ಯಗಳು ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದ್ದರೆ ಆ ರಾಜ್ಯಗಳು ಶ್ರೀಲಂಕಾ, ಗ್ರೀಸ್‌ ದೇಶದಂತೆ ಆರ್ಥಿಕ ಅಧ:ಪತನ ಕಾಣಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

    ಕಳೆದ ಶನಿವಾರ ಪ್ರಧಾನಿ ಮೋದಿ ತಮ್ಮ ಅಧಿಕೃತ ಕಚೇರಿಯಲ್ಲಿ ಎಲ್ಲ ಇಲಾಖೆಯ ಕಾರ್ಯದರ್ಶಿಗಳ ಜೊತೆ ಸುಮಾರು 4 ಗಂಟೆಗಳ ಕಾಲ ದೀರ್ಘ ಸಭೆಯನ್ನು ನಡೆಸಿದ್ದಾರೆ. ಈ ವೇಳೆ ಇಲಾಖೆಗೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳಲ್ಲಿನ ಲೋಪದೋಷಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಒಂದು ಮೊಟ್ಟೆಗೆ 30 ರೂಪಾಯಿ- ಶ್ರೀಲಂಕಾದಲ್ಲಿ ದಿನಸಿ ಬೆಲೆ ಏರಿಕೆ

    sri lanka diesel

    ಈ ಸಂದರ್ಭದಲ್ಲಿ ಅಧಿಕಾರಿಗಳು, ಇತ್ತೀಗೆ ಚುನಾವಣೆ ನಡೆದ ರಾಜ್ಯಗಳು ಸೇರಿದಂತೆ ಜನರ ಮೆಚ್ಚುಗೆಗೆ ಪಾತ್ರವಾಗಲು ರಾಜ್ಯ ಸರ್ಕಾರಗಳು ಉಚಿತ ಯೋಜನೆಗಳನ್ನು ಪ್ರಕಟಿಸುತ್ತಿವೆ. ಈ ಯೋಜನೆಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಮೇಲೆ ದೀರ್ಘಾವಧಿಯಲ್ಲಿ ಪ್ರಮುಖ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆಯೇ ಹಿಂಸಾತ್ಮಕ ಪ್ರತಿಭಟನೆ – ವಾಹನಗಳು ಸುಟ್ಟು ಭಸ್ಮ

    ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಭರವಸೆ ನೀಡುವ ಜನಪರ ಯೋಜನೆಗಳ ಪ್ರವೃತ್ತಿ ಮುಂದುವರಿದರೆ ಕೆಲವು ರಾಜ್ಯಗಳು ಹಣದ ಕೊರತೆಯಿರುವ ಶ್ರೀಲಂಕಾ ಅಥವಾ ಗ್ರೀಸ್‌ನಂತೆಯೇ ದಿವಾಳಿಯಾಗಬಹುದು ಎಂದು ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇತ್ತೀಚಿನ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ವಿವಿಧ ಯೋಜನೆಗಳನ್ನು ಘೋಷಿಸಿವೆ. ರಾಜ್ಯಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ನೀಡಿದ ಅನುದಾನಕ್ಕಿಂತಲೂ ಹೆಚ್ಚಿನ ಅನುದಾನವನ್ನು ಉಚಿತ ಯೋಜನೆಗಳಿಗೆ ಮೀಸಲಿಡುತ್ತಿವೆ. ಹಲವಾರು ರಾಜ್ಯಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಅವು ಒಕ್ಕೂಟದ ಸದಸ್ಯರಾಗಿರದಿದ್ದರೆ ದಿವಾಳಿಯಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.