Tag: ಉಡುಗೊರೆ

  • ಪ್ರಧಾನಿ ಮೋದಿಗೆ ದೊರಕಿದ 1,300ಕ್ಕೂ ಹೆಚ್ಚು ಉಡುಗೊರೆಗಳ ಇ-ಹರಾಜು

    ಪ್ರಧಾನಿ ಮೋದಿಗೆ ದೊರಕಿದ 1,300ಕ್ಕೂ ಹೆಚ್ಚು ಉಡುಗೊರೆಗಳ ಇ-ಹರಾಜು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಉಡುಗೊರೆಯಾಗಿ (Gifts) ದೊರಕಿದ 1,300ಕ್ಕೂ ಹೆಚ್ಚು ವಸ್ತುಗಳನ್ನು ಬುಧವಾರ ಪ್ರಾರಂಭಗೊಂಡ ಇ-ಹರಾಜಿನಲ್ಲಿ (E-Auction) ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಯೋಧ್ಯಾ ರಾಮ ಮಂದಿರ ಮಾದರಿ, ಭವಾನಿ ದೇವಿಯ ವಿಗ್ರಹ, 2024ರ ಒಲಿಂಪಿಕ್ಸ್ ಕ್ರೀಡಾಕೂಟದ ಸ್ಮರಣಿಕೆಗಳು ಸೇರಿದಂತೆ 1,300ಕ್ಕೂ ಹೆಚ್ಚು ಉಡುಗೊರೆಗಳನ್ನು ಹರಾಜಿಗಿಡಲಾಗಿದೆ. ಮೋದಿಯವರ ಜನ್ಮದಿನವಾದ ಇಂದು (ಸೆ.17) ಇ-ಹರಾಜು ಪ್ರಕ್ರಿಯೆ ಆರಂಭಗೊಂಡಿದ್ದು, ಅ.2ರವರೆಗೆ ಹರಾಜು ನಡೆಯಲಿದೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

    ಪಿಎಂ ಮೊಮೆಂಟೋಸ್ ವೆಬ್‌ಸೈಟ್ ಪ್ರಕಾರ, ಭವಾನಿ ದೇವಿಯ ಪ್ರತಿಮೆಯ ಬೆಲೆ 1,03,95,000 ರೂ. ಆಗಿದ್ದು, ರಾಮ ಮಂದಿರ ದೇವಾಲಯದ ಮಾದರಿ 5.5 ಲಕ್ಷ ರೂ. ಮೌಲ್ಯವನ್ನು ಹೊಂದಿದೆ. ಇನ್ನು ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳ ಮೂರು ಜೊತೆ ಶೂಗಳನ್ನು ಕೂಡ ಹರಾಜಿಗಿಡಲಾಗಿದ್ದು, ಪ್ರತಿ ಶೂ ಬೆಲೆ 7.7 ಲಕ್ಷ ರೂ. ಇರಲಿದೆ ಎಂದು ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.  2019ರ ಜನವರಿಯಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಯವರಿಗೆ ನೀಡಿದ್ದ ಉಡುಗೊರೆಗಳ ಇ-ಹರಾಜನ್ನು ನಡೆಸಲಾಗಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ಗುಂಡಿಗಳನ್ನ ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌ ಮಾಡಿದ ಡಿಸಿಎಂ ಡಿಕೆಶಿ

    ಜಮ್ಮು ಮತ್ತು ಕಾಶ್ಮೀರದ ಕಸೂತಿ ಮಾಡಿದ ಪಶ್ಮಿನಾ ಶಾಲು, ರಾಮ ದರ್ಬಾರ್‌ನ ತಂಜೂರಿನ ಚಿತ್ರಕಲೆ, ಲೋಹದ ನಟರಾಜ ಪ್ರತಿಮೆ, ಗುಜರಾತ್‌ನ ರೋಗನ್ ಕಲೆ ಮತ್ತು ಕೈಯಿಂದ ನೇಯ್ದ ನಾಗಾ ಶಾಲು ಕೂಡ ಇ-ಹರಾಜಿನಲ್ಲಿ ಇಡಲಾಗಿದೆ. ಈವರೆಗೂ ಹರಾಜಿನಲ್ಲಿ 50 ಕೋಟಿ. ರೂಗೂ ಹೆಚ್ಚು ಹಣ ಸಂಗ್ರಹವಾಗಿದ್ದು, ಈ ಹಣವನ್ನು ನಮಾಮಿ ಗಂಗೆ ಯೋಜನೆಗೆ ವಿನಿಯೋಗಿಸಲಾಗುತ್ತದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್

  • ಟ್ರಿನಿಡಾಡ್ ಪ್ರಧಾನಿಗೆ ಮಹಾಕುಂಭದ ಜಲ, ರಾಮಮಂದಿರದ ಪ್ರತಿಕೃತಿ ಉಡುಗೊರೆಯಾಗಿ ನೀಡಿದ ಮೋದಿ

    ಟ್ರಿನಿಡಾಡ್ ಪ್ರಧಾನಿಗೆ ಮಹಾಕುಂಭದ ಜಲ, ರಾಮಮಂದಿರದ ಪ್ರತಿಕೃತಿ ಉಡುಗೊರೆಯಾಗಿ ನೀಡಿದ ಮೋದಿ

    ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ (PM Modi) ಟ್ರಿನಿಡಾಡ್ ಹಾಗೂ ಟೊಬೆಗೊಗೆ (Trinidad and Tobago) ಭೇಟಿ ನೀಡಿದ ವೇಳೆ ಅಲ್ಲಿನ ಪ್ರಧಾನಿಗೆ `ಮಹಾಕುಂಭದ ಜಲ’ ಹಾಗೂ `ರಾಮಮಂದಿರದ ಪ್ರತಿಕೃತಿ’ಯ ಉಡುಗೊರೆ ನೀಡಿ ಗೌರವಿಸಿದ್ದಾರೆ.

    ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಸದ್ಯ ಎರಡು ದಿನಗಳ ಕಾಲ ಟ್ರಿನಿಡಾಡ್ ಹಾಗೂ ಟೊಬೆಗೊ ದೇಶದ ಪ್ರವಾಸದಲ್ಲಿದ್ದಾರೆ. ಈ ವೇಳೆ ಟ್ರಿನಿಡಾಡ್ ಮತ್ತು ಟೊಬೆಗೊದ ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ (Kamla Persad-Bissessar) ಅವರಿಗೆ `ಮಹಾಕುಂಭದ ಜಲ’ ಹಾಗೂ `ರಾಮಮಂದಿರದ ಪ್ರತಿಕೃತಿ’ಯನ್ನು ಉಡುಗೊರೆಯಾಗಿ ನೀಡಿದ್ದಾರೆ.ಇದನ್ನೂ ಓದಿ: ಢಾಬಾದಲ್ಲಿ ಬ್ಲಾಂಕೆಟ್ ಸುತ್ತಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ – ಬಾಯ್‌ಫ್ರೆಂಡ್‌ ಅರೆಸ್ಟ್‌

    ಈ ವೇಳೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಹಾಗೂ ದೇವಾಲಯದ ಮಹತ್ವವನ್ನು ಒತ್ತಿ ಹೇಳಿದರು. ನಿಮಗೆಲ್ಲರಿಗೂ ರಾಮನಲ್ಲಿ ಆಳವಾದ ನಂಬಿಕೆಯಿದೆ ಎಂಬುವುದರ ಅರಿವು ನನಗಿದೆ. ರಾಮಚರಿತಮಾನಸದಲ್ಲಿ, ಭಗವಾನ್ ರಾಮನ ನಗರವು ತುಂಬಾ ಸುಂದರವಾಗಿದೆ, ಅದರ ವೈಭವವನ್ನು ಪ್ರಪಂಚದಾದ್ಯಂತ ಕೊಂಡಾಡುತ್ತಾರೆ. ಸುಮಾರು 500 ವರ್ಷಗಳ ನಂತರ ರಾಮಲಲ್ಲಾ ಅಯೋಧ್ಯೆಗೆ ಮರಳಿರುವುದನ್ನು ನೀವೆಲ್ಲರೂ ಬಹಳ ಸಂತೋಷದಿಂದ ಸ್ವಾಗತಿಸಿದ್ದೀರಿ. ಜೊತೆಗೆ ರಾಮಮಂದಿರ ನಿರ್ಮಾಣ ಸಂದರ್ಭದಲ್ಲಿ ಪವಿತ್ರ ನೀರು ಹಾಗೂ ಶಿಲೆಗಳನ್ನು ಕಳುಹಿಸಿದ್ದೀರಿ. ಜೊತೆಗೆ 4,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದೀರಿ. ನಿಮ್ಮ ಹಾಗೇ ನಾನು ಕೂಡ ಭಕ್ತಿಯಿಂದ ಸರಯು ನದಿಯ ನೀರು ಹಾಗೂ ರಾಮಮಂದಿರದ ಪ್ರತಿಕೃತಿಯನ್ನು ತಂದಿದ್ದೇನೆ ಎಂದು ತಿಳಿಸಿದರು.

    ಮೋದಿಯವರಿಗೆ ಟ್ರಿನಿಡಾಡ್ ಮತ್ತು ಟೊಬೆಗೊ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ `ದಿ ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರಿನಿಡಾಡ್ ಮತ್ತು ಟೊಬಾಗೊ’ (The Order of the Republic of Trinidad & Tobago) ನೀಡಲಿದೆ.ಇದನ್ನೂ ಓದಿ: ʻಪಬ್ಲಿಕ್‌ ಟಿವಿʼ ಸಿಬ್ಬಂದಿಗೆ ಸಮಗ್ರ ಆರೋಗ್ಯ ತಪಾಸಣೆ

  • Fashion | ಕಪಲ್ ರಿಂಗ್ ಗಿಫ್ಟ್‌ ಕೊಟ್ಟು ಪ್ರೇಮಿಗಳ ದಿನ ಆಚರಿಸಿ

    Fashion | ಕಪಲ್ ರಿಂಗ್ ಗಿಫ್ಟ್‌ ಕೊಟ್ಟು ಪ್ರೇಮಿಗಳ ದಿನ ಆಚರಿಸಿ

    ವ್ಯಾಲೆಂಟೈನ್ಸ್ ಡೇಗೆ (Valentine’s Day) ಇನ್ನೊಂದೇ ದಿನ ಬಾಕಿಯಿದೆ. ನಿಮ್ಮ ಪ್ರೀತಿ ಪಾತ್ರರಿಗೆ ಉಡುಗೊರೆ ನೀಡುವ ಯೋಚನೆ ನೀವು ಮಾಡಿಯೇ ಇರುತ್ತೀರಿ. ಆದರೆ ಏನು ನೀಡುವುದು ಎಂಬ ಗೊಂದಲ ನಿಮ್ಮಲ್ಲಿದ್ದರೆ ಇದಕ್ಕೆ ಇರುವ ಒಂದು ಉತ್ತಮ ಆಯ್ಕೆ ಏನು ಅಂದ್ರೆ ಕಪಲ್ ರಿಂಗ್ಸ್.

    ಕೇವಲ ಯಾವುದೋ ಒಂದು ಸಾಮಾನ್ಯ ಉಂಗುರ ನಿಮ್ಮ ಹುಡುಗ ಅಥವಾ ಹುಡುಗಿಗೆ ನೀಡಿದರೆ ಚೆನ್ನಾಗಿರುತ್ತಾ? ಸ್ವಲ್ಪ ಯೋಚಿಸಿ. ನೀವು ನೀಡುವ ಉಡುಗೊರೆ ವಿಶೇಷವಾಗಿದ್ದರೆ ಮಾತ್ರವೇ ವಿಶೇಷ ದಿನವನ್ನು ವಿಶೇಷವಾಗಿ ಆಚರಿಸಬಹುದು ಅಲ್ಲವೇ? ಇತ್ತೀಚೆಗೆ ಕೆಲವು ಟ್ರೆಂಡ್‌ನಲ್ಲಿರುವ ಕಪಲ್ ರಿಂಗ್‌ಗಳ (Couple Rings) ಡಿಸೈನ್ ಹೀಗಿವೆ. ಇವುಗಳಲ್ಲಿ ನಿಮ್ಮ ಟೇಸ್ಟ್‌ಗೆ ತಕ್ಕಂತಹ ಉಂಗುರಗಳನ್ನು ಆಯ್ಕೆ ಮಾಡಿ ಅಂತಹದ್ದನ್ನೇ ಕೊಂಡು ನಿಮ್ಮ ಪ್ರೀತಿ ಪಾತ್ರರಿಗೆ ನೀಡಿ ಅವರನ್ನು ಖುಷಿಪಡಿಸಬಹುದು. ಈಗಿನ ಟ್ರೆಂಡ್‌ನಲ್ಲಿರುವ ವಿವಿಧ ಡಿಸೈನ್‌ನ ಕಪಲ್ ರಿಂಗ್ಸ್ ಹೀಗಿವೆ…

    ಕಿಂಗ್ ಆಂಡ್ ಕ್ವೀನ್ ಕಪಲ್ ರಿಂಗ್ಸ್:
    ರಾಜ ಹಾಗೂ ರಾಣಿಯರ ಕಿರೀಟದ ವಿನ್ಯಾಸವಿರುವ ಉಂಗುರಗಳು ಇತ್ತೀಚಿನ ಟ್ರೆಂಡ್‌ಗಳಲ್ಲಿ ಒಂದು. ಪ್ರೇಮಿಗಳ ದಿನದಂದು ಇದನ್ನು ನಿಮ್ಮನ್ನು ಇಷ್ಟ ಪಡುವವರಿಗೆ ನೀಡಿದರೆ ಅವರು ಖಂಡಿತವಾಗಿಯೂ ವಿಶೇಷ ಅನುಭವ ಪಡೆಯುತ್ತಾರೆ. ನಿಜ ಜೀವನದಲ್ಲಿ ನಿಮ್ಮ ಪ್ರೀತಿ ಪಾತ್ರರನ್ನು ರಾಜ ಅಥವಾ ರಾಣಿಯಂತೆ ನೋಡುತ್ತೀರಿ ಎಂಬ ಅರ್ಥವನ್ನೂ ಇದು ನೀಡುತ್ತದೆ.

    ಮ್ಯಾಗ್ನೆಟಿಕ್ ಹಾಫ್ ಹಾರ್ಟ್ ಕಪಲ್ ರಿಂಗ್ಸ್:
    ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜೋಡಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿರುವ ಜೋಡಿ ಉಂಗುರಗಳೆಂದರೆ ಅದು ಮ್ಯಾಗ್ನೆಟಿಕ್ ಹಾಫ್ ಹಾರ್ಟ್ ಕಪಲ್ ರಿಂಗ್ಸ್. ಎರಡು ಉಂಗುರಗಳನ್ನು ಒಟ್ಟಿಗೆ ತಂದಾಗ ಅಯಸ್ಕಾಂತದ ಸಣ್ಣ ತುಂಣುಕಿನಿಂದಾಗಿ ಉಂಗುರಗಳು ಒಂದಕ್ಕೊಂದು ಅಂಟಿಕೊಳ್ಳುತ್ತವೆ. ಅದೊಂದು ಸಂಪೂರ್ಣ ಹೃದಯದ ಆಕಾರ ಪಡೆಯುತ್ತದೆ. ಉಂಗುರಗಳನ್ನು ಬಿಡಿಸಿದಾಗ ಸಂಪೂರ್ಣ ಹೃದಯವೂ ಬಿಡಿಸಿಕೊಳ್ಳುತ್ತದೆ. ಪ್ರೀತಿಸುವವರು ಒಟ್ಟಾಗಿದ್ದಾಗ ಮಾತ್ರವೇ ಸಂಪೂರ್ಣವಾಗಲು ಸಾಧ್ಯ ಎಂಬ ವಿಶೇಷ ಸಂದೇಶ ಈ ಉಂಗುರಗಳು ನೀಡುತ್ತವೆ. ವಿಶೇಷ ಸಂದೇಶ ಸಾರುವ ಜೋಡಿ ಉಂಗುರಗಳನ್ನು ನಿಮ್ಮ ಗೆಳೆಯ ಅಥವಾ ಗೆಳತಿಗೆ ಉಡುಗೊರೆ ನೀಡುವುದರಿಂದ ಅವರೂ ಸಂತೋಷ ಪಡುತ್ತಾರೆ.

    ಹೆಸರು ಬರೆದ ಜೋಡಿ ಉಂಗುರಗಳು:
    ಉಂಗುರಗಳಲ್ಲಿ ಅಂದದ ಫಾಂಟ್‌ನಲ್ಲಿ ವೈಯಕ್ತಿಕ ಹೆಸರನ್ನು ಕೆತ್ತಿಸಿ, ಅದನ್ನು ಉಡುಗೊರೆ ನೀಡಿದರೆ ಸಂತೋಷ ಯಾರಿಗೆ ತಾನೇ ಆಗಲ್ಲ? ಉಡುಗೊರೆ ಪಡೆದುಕೊಂಡವರು ನೀಡಿದವರ ಹೃದಯದಲ್ಲಿ ಎಷ್ಟು ಮುಖ್ಯವಾದ ಸ್ಥಾನ ಕೊಟ್ಟಿದ್ದಾರೆ ಎಂಬುದು ಮನದಟ್ಟಾಗುವುದು ಖಂಡಿತಾ.

    ದೂರದ ಜೋಡಿಗಳ ಉಂಗುರ:
    ನಿಮ್ಮ ಪ್ರೀತಿ ಲಾಂಗ್ ಡಿಸ್ಟೆನ್ಸ್‌ನದ್ದಾ? ಹಾಗಿದ್ದರೆ ಈ ಉಂಗುರಗಳು ನಿಮಗಾಗಿಯೇ ಹೇಳಿ ಮಾಡಿಸಿರುವಂತಹವುಗಳು. ಜೋಡಿಗಳು ದೂರವಿದ್ದರೂ ಹೃದಯದಲ್ಲಿ ವಿಶೇಷ ಸ್ಥಾನ ನೀಡುವುದು ಸಾಮಾನ್ಯದ ಮಾತಲ್ಲ. ಅದನ್ನು ನಿಭಾಯಿಸುವುದು ಅಷ್ಟೇ ಕಷ್ಟಕರ. ಹೀಗಿರುವಾಗ ನೀವು ನಿಮ್ಮ ಪ್ರೀತಿ ಪಾತ್ರರಿಗೆ ಭೂಮಿಯ ನಕ್ಷೆಯ ಚಿತ್ರವಿರುವ ಉಂಗುರವನ್ನೇ ಉಡುಗೊರೆ ಕೊಡಿ. ಅದನ್ನು ತೊಟ್ಟುಕೊಂಡವರು ಪ್ರತಿಬಾರಿ ಉಂಗುರವನ್ನು ಗಮನಿಸಿದಾಗ ನಿಮ್ಮನ್ನು ಖಂಡಿತಾ ನೆನಪಿಸಿಕೊಳ್ಳುತ್ತಾರೆ.

    ಜೋಡಿಗಳಿಗೆ ಲವ್ ಬರ್ಡ್ಸ್ ಉಂಗುರಗಳು:
    ನೀವು ಪರಿಸರ ಪ್ರೇಮಿಯೇ? ಪ್ರಾಣಿ-ಪಕ್ಷಿಗಳೆಂದರೆ ನಿಮಗೆ ಹಾಗೂ ನಿಮ್ಮ ಪ್ರೇಮಿಗೆ ಇಷ್ಟವೇ? ಹಾಗಿದ್ದರೆ ಲವ್ ಬರ್ಡ್ಸ್ ಚಿತ್ರವಿರುವ ಉಂಗುರಗಳನ್ನು ನೀಡಿ. ನಿಮ್ಮ ಪ್ರೀತಿ ಪಾತ್ರರು ಇದನ್ನು ಜೀವನದ ಅಮೂಲ್ಯ ಆಭರಣವೆಂದುಪರಿಗಣಿಸುತ್ತಾರೆ.

    ಹೆಸರಿನ ಮೊದಲ ಅಕ್ಷರದ ಕಪಲ್ ರಿಂಗ್‌ಗಳು:
    ಹೆಸರಿನ ಮೊದಲ ಅಕ್ಷರ ಹೊಂದಿರುವ ಕಪಲ್ ರಿಂಗ್ಸ್ ಹಿಂದಿನಿಂದಲೂ ಟ್ರೆಂಡ್ ಹುಟ್ಟಿಸಿರುವ ಉಂಗುರಗಳೇ ಆಗಿವೆ. ಆದರೆ ಅವುಗಳ ವಿನ್ಯಾಸಗಳಲ್ಲಿ ಬದಲಾವಣೆಗಳು ಬಂದಿವೆ. ಹೆಸರಿನ ಮೊದಲ ಅಕ್ಷರದ ಉಂಗುರಗಳು ಟ್ರೆಂಡಿಯಾಗಿ ಕಾಣಿಸುತ್ತವೆ. ಫ್ಯಾಶನ್‌ಪ್ರೇಮಿಗಳು ಈ ವಿನ್ಯಾಸದ ಉಂಗುರಗಳ ಉಡುಗೊರೆ ನೀಡುವುದು ಬೆಸ್ಟ್ ಚಾಯ್ಸ್.

    ಮ್ಯೂಜಿಕಲ್ ನೋಟ್‌ನ ಜೋಡಿ ಉಂಗುರಗಳು:
    ಸಂಗೀತವನ್ನು ಇಷ್ಟಪಡದವರು ಯಾರಿದ್ದಾರೆ? ಇಷ್ಟ ಇಲ್ಲ ಎನ್ನುವವರನ್ನು ಹುಡುಕುವುದೂ ಕಷ್ಟ. ಸಂಗೀತವನ್ನು ಇಷ್ಟ ಪಡುವ ಜೋಡಿಗಳು ತಮ್ಮ ಪ್ರೇಮಿಗಳಿಗೆ ಸಂಗೀತದ ಟಿಪ್ಪಣಿಗಳನ್ನು ನಮೂದಿಸಿರುವ ವಿನ್ಯಾಸದ ಉಂಗುರ ನೀಡಿದರೆ ಚೆನ್ನಾಗಿರುತ್ತದೆ.

    ನಿಮಗೂ ನಿಮ್ಮ ಪ್ರೇಮಿಗೂ ಈ ರೀತಿಯಾಗಿ ತಮ್ಮ ತಮ್ಮ ಟೇಸ್ಟ್‌ಗೆ ತಕ್ಕಂತಹ ಉಂಗುರಗಳನ್ನು ಉಡುಗೊರೆ ನೀಡಿ, ಈ ಮೂಲಕ ಪ್ರೇಮಿಗಳ ದಿನವನ್ನು ವಿಶೇಷವಾಗಿಸಿಕೊಳ್ಳಿ.

  • Christmas | ಮಕ್ಕಳಿಗೆ ಗಿಫ್ಟ್‌ ನೀಡುವ ಸಾಂತಾ ಕ್ಲಾಸ್‌ ಯಾರು? ಹಿನ್ನೆಲೆ ಏನು?

    Christmas | ಮಕ್ಕಳಿಗೆ ಗಿಫ್ಟ್‌ ನೀಡುವ ಸಾಂತಾ ಕ್ಲಾಸ್‌ ಯಾರು? ಹಿನ್ನೆಲೆ ಏನು?

    ಕ್ರಿಸ್ಮಸ್‌ (Christmas) ಹಬ್ಬದ ಸಂದರ್ಭದಲ್ಲಿ ಮಕ್ಕಳಿಗಾಗಿ ಸಾಕಷ್ಟು ಉಡುಗೊರೆಗಳು, ಸಿಹಿತಿಂಡಿಗಳನ್ನು ನೀಡುವ ಸಾಂತಾ ಕ್ಲಾಸ್‌ (Santa Claus) ಯಾರು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುವುದು ಸಹಜ.

    ಸಾಂತಾ ಕ್ಲಾಸ್‌ ಬಗ್ಗೆ ಮಕ್ಕಳು ಪ್ರಶ್ನೆ ಮಾಡಿದರೆ ಆತ ದೇವದೂತ. ಕ್ರಿಸ್ಮಸ್‌ ಹಬ್ಬದಂದು ಮೇಲಿನಿಂದ ಇಳಿದು ಬಂದು ಉಡುಗೊರೆ (Gift) ನೀಡಿ ಮರಳಿ ಹೋಗುತ್ತಾನೆ ಎಂದು ಪೋಷಕರು ಹೇಳುತ್ತಿರುತ್ತಾರೆ. ಆದರೆ ನಿಜವಾದ ಸಾಂತಾ ಕ್ಲಾಸನ ಕಥೆ ಬೇರೆಯೇ ಇದೆ.

    ಬಹಳ ಹಿಂದೆ ಟರ್ಕಿಯ (Turkey) ಮೈರಾ ನಗರದಲ್ಲಿ ಸೇಂಟ್ ನಿಕೋಲಸ್ (Saint Nicholas) ಎಂಬ ವ್ಯಕ್ತಿ ನೆಲೆಸಿದ್ದ. ಶ್ರೀಮಂತನಾಗಿದ್ದ ಈತ ಜನರಿಗೆ ಸಹಾಯ ಮಾಡುವುದರಲ್ಲೇ ಸಂತೋಷ ಅನುಭವಿಸುತ್ತಿದ್ದ. ಮಕ್ಕಳು ದು:ಖದಲ್ಲಿದ್ದರೆ ವಿಶೇಷವಾದ ಉಡುಪು ತೊಟ್ಟು ಅವರಿಗೆ ಉಡುಗೊರೆಗಳನ್ನು ನೀಡುತ್ತಿದ್ದ. ಎಲ್ಲರೂ ಸಂತೋಷವಾಗಿರಬೇಕು ಎಂದು ಆತ ಬಯಸುತ್ತಿದ್ದ.

    17ನೇ ವಯಸ್ಸಿನಲ್ಲಿ ಪಾದ್ರಿಯಾದ ಸೇಂಟ್ ನಿಕೋಲಸ್ ತನ್ನ ಜೀವನದುದ್ದಕ್ಕೂ ಮಧ್ಯರಾತ್ರಿಯಲ್ಲಿ ಮಕ್ಕಳಿಗೆ ಉಡುಗೊರೆಗಳನ್ನು ನೀಡುತ್ತಿದ್ದ. ಒಂದು ಬಾರಿ ಊರಿನಲ್ಲಿ ವರದಕ್ಷಿಣೆ ಕೊಡಲು ಹಣವಿಲ್ಲದೆ ಮೂವರು ಹುಡುಗಿಯರ ಮದುವೆ ನಿಂತು ಹೋಗುವ ಪರಿಸ್ಥಿತಿ ಬಂದಿತ್ತು. ಈ ವಿಚಾರ ತಿಳಿದ ಸಂತ ನಿಕೊಲಾಸ್ ಮೂರು ಥೈಲಿ ಹಣವನ್ನು ಕ್ರಿಸ್ಮಸ್ ಹಬ್ಬದಂದು ಕಿಟಕಿಯ ಮೂಲಕ ಒಳಗೆಸೆದು ಅವರಿಗೆ ಸಂತೋಷ ಉಂಟುಮಾಡಿದ್ದ.  ಇದನ್ನೂ ಓದಿ: ಕ್ರಿಸ್ಮಸ್ ಟ್ರೀ – ಏನಿದರ ಇತಿಹಾಸ, ಮಹತ್ವ?

    ನಿಕೋಲಸ್‌ ಹೆಸರಿನ ರೂಪಾಂತರವೇ ಸಾಂತಾಕ್ಲಾಸ್. ಈ ಕಾರಣಕ್ಕೆ ನಿದ್ರೆ ಮಾಡುತ್ತಿರುವ ಮಕ್ಕಳ ಹಾಸಿಗೆ ಬದಿಯಲ್ಲಿ ಕ್ರಿಸ್ಮಸ್ ಬಹುಮಾನಗಳನ್ನು ಇಟ್ಟುಹೋಗುವುದು ಸಂಪ್ರದಾಯ ಆರಂಭಗೊಂಡಿದೆ.

    ನಿಕೋಲಸ್‌ ಸಾವಿನ ನಂತರ ಚರ್ಚ್ ಅನುಯಾಯಿಗಳು ಈ ಪರಂಪರೆಯನ್ನು ಮುಂದುವರೆಸಿದರು. ಅಂದಿನಿಂದ ಈ ಕ್ರಮ ಒಂದು ಆಚರಣೆಯಾಗಿ ವಿಶ್ವಾದ್ಯಂತ ಪಸರಿಸಿತು. ಕುಟುಂಬದ ಹಿರಿಯರು ನಿಕೋಲಸ್ ತೊಡುತ್ತಿದ್ದಂತಹ ಉಡುಗೆ ಧರಿಸಿ ಮಕ್ಕಳಿಗಾಗಿ ಉಡುಗೊರೆಗಳನ್ನು ನೀಡಲಾರಂಭಿಸಿದರು. ಹೀಗೆ ಬಿಳಿಯ ಗಡ್ಡ, ಕೆಂಪು ಬಣ್ಣದ ಉಡುಗೆಯೊಂದಿಗೆ ಗಿಫ್ಟ್‌ ನೀಡುವ ಹಿರಿಯ ವ್ಯಕ್ತಿಯನ್ನು ಇಂದಿಗೂ ಮಕ್ಕಳು ಸಾಂತಾ ಕ್ಲಾಸ್ ಎಂದು ನಂಬುತ್ತಾರೆ.

     

  • ವಿಶೇಷ ಅಭಿಮಾನಿಯ ಉಡುಗೊರೆ ಮೆಚ್ಚಿ, ಸುದೀಪ್ ಕೊಟ್ಟರು ಭರ್ಜರಿ ಗಿಫ್ಟ್

    ವಿಶೇಷ ಅಭಿಮಾನಿಯ ಉಡುಗೊರೆ ಮೆಚ್ಚಿ, ಸುದೀಪ್ ಕೊಟ್ಟರು ಭರ್ಜರಿ ಗಿಫ್ಟ್

    ಮ್ಮ ನೆಚ್ಚಿನ ನಟರನ್ನ ಭೇಟಿ ಆಗುವುದು ಅವರಿಗೆ ತಮ್ಮ ಕೈಲಾದ ಉಡುಗೊರೆ ಕೊಡುವುದು ಇದೇನು ಹೊಸತಲ್ಲ. ಆದರೆ ಇಲ್ಲೊಬ್ಬ ವಿಶೇಷಚೇತನ ಅಭಿಮಾನಿ ಅಂದರೆ ಮಾತು ಬಾರದ ಕಿಚ್ಚನ ಅಭಿಮಾನಿ ಸುದೀಪ್ (Kiccha Sudeep) ಭೇಟಿ ಮಾಡಿದ್ದಾನೆ. ಕಿಚ್ಚ ಸುದೀಪ್ ಕೂಡಾ ಅಭಿಮಾನಿಯನ್ನ (Fans) ಭೇಟಿ ಮಾಡಿದ್ದಾರೆ. ಕಿಚ್ಚನಿಗೆ ಏನು ಹೇಳಬೇಕು ಅದನ್ನ ಬರವಣಿಗೆಯಲ್ಲಿ ಬರೆದು ತಂದಿದ್ದಾನೆ. ಅಭಿಮಾನಿ ಬರೆದುಕೊಂಡು ಬಂದಿದ್ದ ಪತ್ರವನ್ನ ಸುದೀಪ್ ತಾಳ್ಮೆಯಿಂದ ಪೂರ್ತಿಯಾಗಿ ಓದಿದ್ದಾರೆ.

    ನಂತರ ನನ್ನಿಂದ ಏನಾಗ್ಬೇಕು ಅಂತ ಸುದೀಪ್ ಸನ್ನೆಯಿಂದಲೇ ಕೇಳಿದ್ದಾರೆ. ಅದಕ್ಕೆ ಅಭಿಮಾನಿ ಕೂಡಾ ಪ್ರತಿಕ್ರಿಯಿಸಿದ್ದಾನೆ. ಬಳಿಕ ಸುದೀಪ್ ವಿಶೇಷಚೇತನ ಅಭಿಮಾನಿಗೆ ಸಹಾಯವನ್ನ ಮಾಡಿದ್ದಾರೆ. ಅಷ್ಟೇ ಅಲ್ಲದೇ ಊಟ ಆಯ್ತಾ ಅಂತಾ ಸುದೀಪ್ ಸನ್ನೆ ಮೂಲಕ ಕೇಳಿದ್ದಾರೆ ಸುದೀಪ್, ಇಲ್ಲ ಎಂದು ಅಭಿಮಾನಿ ಪ್ರತಿಕ್ರಿಯಿಸಿದ್ದಾನೆ. ಸರಿ ಇಲ್ಲೆ ಊಟ ಮಾಡಿ ಹೋಗಿ ಅಂತಾ ಸುದೀಪ್ ಅಭಿಮಾನಿಗೆ ಊಟ ಮಾಡಿಸಿ ಕಳುಹಿಸಿದ್ದಾರೆ.

    ಅಭಿಮಾನಿಗಳು ನೆಚ್ಚಿನ ನಟರನ್ನ ಹುಡುಕಿಕೊಂಡು ಬರ್ತಾರೆ ಅದಕ್ಕೆ ನಟರು ಸಹ ಅವರನ್ನ ಭೇಟಿ ಮಾಡಿ ಪ್ರತಿಕ್ರಿಯೆ ನೀಡುವುದು ವಿಶೇಷ. ಆದರೆ ವಿಶೇಷಗಳಲ್ಲಿ ವಿಶೇಷ ಅಂದರೆ ಈ ಅಭಿಮಾನಿಗೆ ಮಾತು ಬರುವುದಿಲ್ಲ ಆದರೂ ಕಿಚ್ಚ ಸುದೀಪ್ ಭೇಟಿ ಮಾಡಬೇಕು. ತನ್ನ ಮನದಾಳದ ಮಾತನ್ನ ಹಂಚಿಕೊಳ್ಳಬೇಕು ಅಂತ ಬಂದು ಭೇಟಿ ಮಾಡಿದ್ದಾನೆ. ಸುದೀಪ್ ಹಾಗೂ ಅಪ್ಪು ಇರುವ ಫೋಟೋವನ್ನ ಉಡುಗೊರೆಯಾಗಿ (Gift) ನೀಡಿದ್ದಾನೆ.

    ಮನೆ ಬಳಿ ಬಂದ ವಿಶೇಷಚೇತನ ಅಭಿಮಾನಿಯನ್ನ ಭೇಟಿ ಮಾಡಿ ಅವರ ಆಸೆಯನ್ನ ಈಡೇರಿಸಿದ್ದಾರೆ ಕಿಚ್ಚ ಸುದೀಪ್. ಈ ಸಂದರ್ಭಕ್ಕೆ ಕಿಚ್ಚನ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ `ಮ್ಯಾಕ್ಸ್’ ಸಿನಿಮಾದ ಶೂಟಿಂಗ್ ಮುಗಿಸಿರುವ ಸುದೀಪ್ ಮುಂದಿನ ದಿನಗಳಲ್ಲಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತಾರೆ ಎನ್ನುವ ನಿರೀಕ್ಷಯಲ್ಲಿ ಅಭಿಮಾನಿ ಬಳಗ.

  • ‘ಕಾಟೇರ’ ಬರಹಗಾರರಿಗೆ ಕಾರು ಉಡುಗೊರೆ ನೀಡಿದ ರಾಕ್ ಲೈನ್ ವೆಂಕಟೇಶ್

    ‘ಕಾಟೇರ’ ಬರಹಗಾರರಿಗೆ ಕಾರು ಉಡುಗೊರೆ ನೀಡಿದ ರಾಕ್ ಲೈನ್ ವೆಂಕಟೇಶ್

    ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ಚೆಂದವಾಗಿ ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ರಾಮ್ಗೂ ಕಾಟೇರ ದೊಡ್ಡ ಹಿಟ್ ನೀಡಿತ್ತು. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿತ್ತು. ಚಿತ್ರ ಶತದಿನೋತ್ಸವ ಕಂಡ ಬೆನ್ನಲ್ಲೇ ಬರಹಗಾರರಿಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ (Rock Line Venkatesh) ಕಾರುಗಳನ್ನು (Car Gift) ಉಡುಗೊರೆಯಾಗಿ ನೀಡಿದ್ದಾರೆ.

    ಈ ಹಿಂದೆ ‘ಕಾಟೇರ’ ಸಿನಿಮಾ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಿರ್ದೇಶಕ ತರುಣ್ ಸುಧೀರ್ ಮತ್ತು ತಂಡ ಕೇಕ್ ಕತ್ತರಿಸಿ ಸಂಭ್ರಮಿಸಿತ್ತು. ಈ ಸಂಭ್ರಮದಲ್ಲಿ ದರ್ಶನ್ ಕಾಣಿಸಿದೇ ಇದ್ದರೂ, ನೂರು ದಿನ ಖುಷಿಯನ್ನು ಅಭಿಮಾನಿಗಳಿಗಾಗಿ ಚಿತ್ರತಂಡ ಹಂಚಿಕೊಂಡಿತ್ತು. ನೂರು ದಿನಗಳನ್ನು (Hundred Days) ಪೂರೈಸಿದ ಬೆನ್ನಲ್ಲೇ ಕಾಟೇರ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಂಡಿತ್ತು.

    ಕಾಟೇರ (Kaatera) ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ, ಒಟಿಟಿಯಲ್ಲೂ (OTT) ಸ್ಟ್ರೀಮಿಂಗ್ ಆಗುತ್ತಿದೆ. ಒಟಿಟಿಯಲ್ಲಿ ಕಾಟೇರ ಪ್ರದರ್ಶನ ಕಾಣುತ್ತಿರುವುದಕ್ಕೆ ಹುಬ್ಬಳ್ಳಿಯ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಬರಮಾಡಿಕೊಂಡಿದ್ದರು. ಆಳೆತ್ತರದ ಕಟೌಟ್ ಹಾಕಿ ಕಾಟೇರನನ್ನು ಸ್ವಾಗತಿಸಿದ್ದರು.

    ದರ್ಶನ್ ಸಿನಿಕರಿಯರ್ ನಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕಾಟೇರ ಬಾಕ್ಸಾಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ  ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ರಾಕ್ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾವನ್ನು ಒಟಿಟಿಗೆ Zee5 ವಹಿವಾಟು ಮುಗಿಸಿತ್ತು.

     

    Zee5 ತಾನು ಖರೀದಿಸಿದ ಹೊಸ ಸಿನಿಮಾಗಳನ್ನು ಪ್ರತಿ ಶುಕ್ರವಾರ ಬಿಡುಗಡೆ ಮಾಡುತ್ತೆ. ಅಲ್ಲದೆ ನಿರ್ಮಾಪಕರು ಹಾಗೂ ಓಟಿಟಿ ಸಂಸ್ಥೆಯೊಂದಿಗೆ ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ ಆಗುತ್ತೆ. ‘ಕಾಟೇರ’ ಬಿಡುಗಡೆಯಾದ 40 ದಿನಗಳ ಬಳಿಕ ಓಟಿಟಿಯಲ್ಲಿ ರಿಲೀಸ್ ಮಾಡುವ ಮಾತುಕತೆ ನಡೆದಿದ್ದು, ಅದರಂತೆಯೇ ಫೆಬ್ರವರಿ 9ರಂದು  ಸಿನಿಮಾ ಪ್ರೀಮಿಯರ್ ಆಗಿದೆ.

  • ಸಹೋದರಿಗೆ ಚಿನ್ನದ ಉಂಗುರ, ಟಿವಿ ಗಿಫ್ಟ್‌ ಕೊಡ್ತೀನಿ ಎಂದ ಪತಿಯನ್ನೇ ಮುಗಿಸಿದ ಪತ್ನಿ!

    ಸಹೋದರಿಗೆ ಚಿನ್ನದ ಉಂಗುರ, ಟಿವಿ ಗಿಫ್ಟ್‌ ಕೊಡ್ತೀನಿ ಎಂದ ಪತಿಯನ್ನೇ ಮುಗಿಸಿದ ಪತ್ನಿ!

    ಲಕ್ನೋ: ಮದುವೆ ಉಡುಗೊರೆಗೆ ಸಂಬಂಧಿಸಿದಂತೆ ಗಂಡ- ಹೆಂಡತಿ ಜಗಳ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆಯೊಂದು ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ.

    ಮೃತನನನು ಚಂದ್ರಪ್ರಕಾಶ್‌ (35) ಎಂದು ಗುರುತಿಸಲಾಗಿದೆ. ಈತನನ್ನು ಪತ್ನಿ ಚಾಬಿ ತನ್ನ ಸಹೋದರರ ಸಹಾಯದಿಂದ ಕೊಲೆ ಮಾಡಿದ್ದಾಳೆ. ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ.

    ನಡೆದಿದ್ದೇನು?: ಚಂದ್ರಪ್ರಕಾಶ್‌ ಸಹೋದರಿಗೆ ಮದುವೆ ನಿಗದಿಯಾಗಿತ್ತು. ಅಂತೆಯೇ ಏಪ್ರಿಲ್‌ 26 ರಂದು ಮದುವೆ ಕಾರ್ಯಕ್ರಮ ನಡೆಯುವುದಿತ್ತು. ಹೀಗಾಗಿ ಸಹೋದರಿಗೆ ಏನಾದರೂ ಗಿಫ್ಟ್‌ ಕೊಡಬೇಕು ಎಂದು ಯೋಚಿಸುತ್ತಿರುವಾಗ ಚಂದ್ರಶೇಖರ್‌ಗೆ ಚಿನ್ನದ ಉಂಗುರ ಮತ್ತು ಟಿವಿ ಕೊಡಿಸುವ ಯೋಚನೆ ಬಂತು. ಅಂತೆಯೇ ಈ ವಿಚಾರವನ್ನು ಪತ್ನಿಯ ಮುಂದೆ ಪ್ರಸ್ತಾಪಿಸಿದ್ದಾನೆ. ಇದನ್ನೂ ಓದಿ; 6 ವರ್ಷದ ಮಗಳ ಮುಂದೆಯೇ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ!

    ಈ ವೇಳೆ ಪತಿಯ ನಿರ್ಧಾರಕ್ಕೆ ಪತ್ನಿ ಚಾಬಿ ವಿರೋಧ ವ್ಯಕ್ತಪಡಿಸಿದ್ದಾಳೆ. ಅಲ್ಲದೇ ಇದೇ ವಿಚಾರವಾಗಿ ಪತಿ- ಪತ್ನಿಯ ನಡುವೆ ವಾಗ್ವಾದವೂ ನಡೆದಿದೆ. ಆದರೆ ಚಂದ್ರಶೇಖರ್‌ ಈ ಎರಡು ವಸ್ತುಗಳನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳುತ್ತಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಪತ್ನಿ ಚಾಬಿ ತನ್ನ ಸಹೋದರರಿಗೆ ಈ ವಿಷಯ ಮುಟ್ಟಿಸುತ್ತಾಳೆ. ಅಲ್ಲದೇ ಪತಿಗೆ ತಕ್ಕ ಬುದ್ಧಿ ಕಲಿಸುವಂತೆ ಹೇಳುತ್ತಾಳೆ.

    ಸಹೋದರಿ ಚಾಬಿ ಮಾತು ಕೇಳಿ ಮನೆಗೆ ಬಂದು ಚಂದ್ರಶೇಖರ್‌ಗೆ ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಥಳಿಸಿದ್ದರಿಂದ ಗಂಭೀರ ಗಾಯಗೊಂಡು ಚಂದ್ರಶೇಕರ್‌ ಕುಸಿದು ಬಿದ್ದಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರು ಚಂದ್ರಶೇಖರ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಸದೇ ಚಂದ್ರಶೇಖರ್‌ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

    ಇತ್ತ ಪ್ರಕರಣ ಸಂಬಂಧ ಚಾಬಿ ಮತ್ತು ಆಕೆಯ ಸಹೋದರರು ಸೇರಿದಂತೆ ಐವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

  • ಮೈಸೂರು ಬಿಜೆಪಿ ಘಟಕದಿಂದ ಮೋದಿಗಾಗಿ ರೆಡಿಯಾಗಿದೆ ವಿಶೇಷ ಉಡುಗೊರೆ

    ಮೈಸೂರು ಬಿಜೆಪಿ ಘಟಕದಿಂದ ಮೋದಿಗಾಗಿ ರೆಡಿಯಾಗಿದೆ ವಿಶೇಷ ಉಡುಗೊರೆ

    ಮೈಸೂರು: ಅರಮನೆ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇನ್ನು ಕೆಲವೇ ಹೊತ್ತಿನಲ್ಲಿ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಬಿಜೆಪಿ ಘಟಕದಿಂದ ವಿಶೇಷ ಉಡುಗೊರೆಯೊಂದು ರೆಡಿಯಾಗಿದೆ.

    ಈ ಸಂಬಂಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ರಾಮಾ, ಸೀತೆ, ಲಕ್ಷ್ಮಣ ಹಾಗೂ ಆಂಜನೇಯ ಒಳಗೊಂಡ ಮರದಲ್ಲಿ ಕೆತ್ತನೆ ಮಾಡಿರುವ ಸುಮಾರು 2 ಅಡಿ ಎತ್ತರ ಇರುವ ಮರದ ಮೂರ್ತಿ ಉಡುಗೊರೆ ನೀಡಲು ತಯಾರಿ ನಡೆಸಲಾಗುತ್ತಿದೆ. ಈ ಮೂರ್ತಿಯು ವಿಶೇಷ ಕುಸುರಿ ಕೆಲಸ ಒಳಗೊಂಡಿದೆ. ಮೂರ್ತಿ ಜೊತೆಗೆ ಮೈಸೂರು ಪೇಟ, ರೇಷ್ಮೆ ಶಲ್ಯ, ಹಾರ ಹಾಕಿ ಸನ್ಮಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

    ರಾಮರಾಜ್ಯ ನಿರ್ಮಾಣದ ಕಲ್ಪನೆಯಲ್ಲಿರುವ ನರೇಂದ್ರ ಮೋದಿ ಅವರಿಗೆ ರಾಮನ ಮೂರ್ತಿ ನೀಡಿ ಗೌರವಿಸುತ್ತಿದ್ದೇವೆ. ಅವರು ಮೈಸೂರು ಭಾಗದ ಪ್ರಚಾರ ನಮಗೆ ಮತ್ತಷ್ಟು ಬೂಸ್ಟ್ ನೀಡಿದೆ. ಈ ಬಾರಿಯೂ ಜನ ಮತ್ತೊಮ್ಮೆ ಮೋದಿ ಎನ್ನುತ್ತಿದ್ದಾರೆ ಎಂದು ಅವರು ಹೇಳಿದರು. ಇದನ್ನೂ ಓದಿ: ಮೋದಿ ರೋಡ್ ಶೋ ವೇಳೆ ಪುಷ್ಪವೃಷ್ಟಿಗೆ ಕೋಲಾರದಿಂದ 2 ಟನ್ ಚೆಂಡು ಹೂವು!

    ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿರುವ ಮೋದಿಯವರು ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಓವೆಲ್ ಮೈದಾನಕ್ಕೆ ಆಗಮಿಸಲಿದ್ದಾರೆ. ಬಳಿಕ ಮೋದಿಯವರು ಕಾರಿನಲ್ಲಿ ಮಹಾರಾಜ ಮೈದಾನಕ್ಕೆ ತೆರಳಲಿದ್ದಾರೆ. ಓವೆಲ್ ಮೈದಾನದಲ್ಲಿ ಈಗಾಗಲೇ ಹೆಲಿಪ್ಯಾಡ್ ಸಿದ್ಧಗೊಂಡಿದ್ದು, ಹೆಲಿಪ್ಯಾಡ್ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

  • ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಗಣ್ಯರಿಗೆ ದೊರೆಯಲಿದೆ ವಿಶೇಷ ಉಡುಗೊರೆ – ಏನಿದು ಸ್ಪೆಷಲ್ ಗಿಫ್ಟ್?

    ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಗಣ್ಯರಿಗೆ ದೊರೆಯಲಿದೆ ವಿಶೇಷ ಉಡುಗೊರೆ – ಏನಿದು ಸ್ಪೆಷಲ್ ಗಿಫ್ಟ್?

    ಲಕ್ನೋ: ಜನವರಿ 22 ರಂದು ಪ್ರಾಣ ಪ್ರತಿಷ್ಠಾ (Pran Prathishta) ಅಥವಾ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನಾ ಸಮಾರಂಭಕ್ಕೆ ಆಹ್ವಾನಿಸಲಾದ ಎಲ್ಲಾ ಗಣ್ಯ ಅತಿಥಿಗಳಿಗೆ (Guest) ಈ ಸಂದರ್ಭದಲ್ಲಿ ವಿಶೇಷ ಉಡುಗೊರೆಗಳನ್ನು (Special Gift) ನೀಡಲಾಗುವುದು ಎಂದು ದೇವಾಲಯದ ಟ್ರಸ್ಟ್ ಬುಧವಾರ ತಿಳಿಸಿದೆ.

    ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ನಿರ್ಮಾಣ ಮತ್ತು ನಿರ್ವಹಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನಿಂದ ಪವಿತ್ರ ಪ್ರಸಾದದ ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಗೀತಾ ಪ್ರೆಸ್‌ನಿಂದ ‘ಅಯೋಧ್ಯೆ ದರ್ಶನ’ ಪುಸ್ತಕದ ಪ್ರತಿಗಳನ್ನು ನೀಡಲಾಗುತ್ತದೆ. ನಿರ್ದಿಷ್ಟವಾಗಿ, 10,000 ಪ್ರತಿ ಪುಸ್ತಕವನ್ನು ಈ ಸಂದರ್ಭಕ್ಕಾಗಿ ಮುದ್ರಿಸಲಾಗುತ್ತದೆ.

    ʼಅಯೋಧ್ಯಾ ದರ್ಶನʼ ಪುಸ್ತಕದಲ್ಲಿ ಏನಿದೆ?
    ‘ಅಯೋಧ್ಯಾ ದರ್ಶನ’ ಪುಸ್ತಕವು ನಗರದ ಇತಿಹಾಸ, ಪುರಾತನ ಮಹತ್ವ, ರಾಮಾಯಣಕ್ಕೆ ಸಂಬಂಧಿಸಿದ ಅಧ್ಯಾಯಗಳು ಮತ್ತು ದೇವಾಲಯಗಳ ಬಗ್ಗೆ ವಿವರಗಳನ್ನು ಒಳಗೊಂಡಂತೆ ಸಮಗ್ರ ಮಾಹಿತಿಯನ್ನು ಒದಗಿಸುತ್ತದೆ. ಪುಸ್ತಕದ ಮುಖಪುಟದಲ್ಲಿ ಭಗವಾನ್ ರಾಮನ ಚಿತ್ರಣ ಮತ್ತು ರಾಮಮಂದಿರದ ಚಿತ್ರವಿದೆ. ಅಲ್ಲದೇ ಪ್ರತಿಷ್ಠಾಪನಾ ಸಮಾರಂಭದ ದಿನಾಂಕವನ್ನೂ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ: ಮತ್ತೆ 500 ಕಾರ್ಮಿಕರಿಗೆ ಬುಲಾವ್‌, 4000 ಕಾರ್ಮಿಕರಿಂದ ಹಗಲಿರುಳು ಕೆಲಸ

    ಈ ಕಾರ್ಯಕ್ರಮದ ಭಾಗವಾಗಿ ಉಡುಗೊರೆಯಾಗಿ ಕೊಡುವ ಎಲ್ಲಾ 10,000 ಪುಸ್ತಕಗಳು ಗೋರಖ್‌ಪುರದ ಗೀತಾ ಪ್ರೆಸ್‌ನಿಂದ ‘ಸುಪ್ರೀಮ್ ಆಫರಿಂಗ್’ ಎಂಬ ಶೀರ್ಷಿಕೆಯ ವಿಶೇಷ ಟಿಪ್ಪಣಿಯನ್ನು ಒಳಗೊಂಡಿರುತ್ತದೆ. ಈ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸುವ ಎಲ್ಲಾ ಅತಿಥಿಗಳಿಗೆ ‘ಅಯೋಧ್ಯೆ ದರ್ಶನ’ ಪುಸ್ತಕವನ್ನು ನೀಡಲಾಗುವುದು. ಆದರೆ ಆಯ್ದ ಕೆಲವು ವಿಶೇಷ ಅತಿಥಿಗಳು ಮೂರು ಹೆಚ್ಚುವರಿ ಪುಸ್ತಕಗಳನ್ನು ಸ್ವೀಕರಿಸುತ್ತಾರೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ಒಳಗಿನ ಚಿತ್ರಣ ಹೇಗಿದೆ? ಇಲ್ಲಿದೆ ಕೆಲವು ಫೋಟೋಸ್

    ಸರಿಸುಮಾರು 100 ಅತಿಥಿಗಳಿಗೆ ‘ಅಯೋಧ್ಯಾ ಮಾಹಾತ್ಮ್ಯ’ (ಅಯೋಧ್ಯೆಯ ಮಹಿಮೆ), ‘ಗೀತಾ ದೈನಂದಿನಿ’ (ಗೀತಾ ಡೈರಿ), ಮತ್ತು ಭಗವಾನ್ ರಾಮನ ಕುರಿತ ಲೇಖನವನ್ನು ಒಳಗೊಂಡ ‘ಕಲ್ಯಾಣ ಪಾತ್ರ’ ಪತ್ರಿಕೆಯ ವಿಶೇಷ ಆವೃತ್ತಿಯನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ‘ಕಲ್ಯಾಣ’ ಪತ್ರಿಕೆಯ ವಿಶೇಷ ಆವೃತ್ತಿಯನ್ನು ಮೊದಲು 1972 ರಲ್ಲಿ ಪ್ರಕಟಿಸಲಾಯಿತು. ಗೀತಾ ಪ್ರೆಸ್ ಅಯೋಧ್ಯೆಯ ವೈಭವದ ಬಗ್ಗೆ ವಿವಿಧ ಲೇಖನಗಳನ್ನು ಒಳಗೊಂಡಿರುವ ‘ಅಯೋಧ್ಯಾ ಮಾಹಾತ್ಮ್ಯ’ ಪುಸ್ತಕವನ್ನು ಸಹ ಪ್ರಸ್ತುತಪಡಿಸುತ್ತದೆ. ಆರ್ಟ್ ಪೇಪರ್‌ನಲ್ಲಿ 45 ಪುಟಗಳ ಮುದ್ರಿತ ಚಿತ್ರಗಳನ್ನು ಹೊಂದಿರುವ ಈ ಪುಸ್ತಕವು ಓದುಗರಿಗೆ ದೃಶ್ಯ ರಸದೌತಣವಾಗಿದೆ. ಇದನ್ನೂ ಓದಿ: 39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?

    ʼಗೀತಾ ದೈನಂದಿನಿʼ ಡೈರಿಯ ವಿಶೇಷತೆಯೇನು?
    ಇದಲ್ಲದೆ, ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆ, ಗೀತಾ ಪ್ರೆಸ್ ಇಂಗ್ಲಿಷ್ ಮತ್ತು ಹಿಂದಿ ದಿನಾಂಕಗಳೊಂದಿಗೆ ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿರುವ ‘ಗೀತಾ ದೈನಂದಿನಿ’ ಡೈರಿಯನ್ನು ನೀಡುತ್ತದೆ. ದಿನಚರಿಯು ಉಪವಾಸ, ಹಬ್ಬಗಳು ಮತ್ತು ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದ ಬಗ್ಗೆ ವಿವರಗಳನ್ನು ಒಳಗೊಂಡಿದೆ. ಇದು ವರ್ಷವಿಡೀ ಮಾಹಿತಿಯನ್ನು ಹುಡುಕುವ ವ್ಯಕ್ತಿಗಳಿಗೆ ಜನಪ್ರಿಯ ಆಯ್ಕೆಯಾಗಿದೆ. ಇದನ್ನೂ ಓದಿ: Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌

    ದೇವಾಲಯದ ಮೊದಲ ಹಂತವು ಪೂರ್ಣಗೊಳ್ಳುವ ಹಂತದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ಯಲ್ಲಿ ಭಾಗವಹಿಸಲಿದ್ದಾರೆ. ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ದೇವಾಲಯದ ಸಂಕೀರ್ಣವು 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರವಿದೆ. ದೇವಾಲಯದ ಪ್ರತಿಯೊಂದು ಮಹಡಿಯು 20 ಅಡಿ ಎತ್ತರ ಮತ್ತು ಒಟ್ಟು 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿದೆ. ಇದನ್ನೂ ಓದಿ: Ram Mandir: ಭಗವಾನ್‌ ರಾಮನ ಅಜ್ಜಿ ಮನೆಯಿಂದ 3,000 ಕ್ವಿಂಟಾಲ್‌ ಅಕ್ಕಿ, ಅತ್ತೆ ಮನೆಯಿಂದ 1,100 ತಟ್ಟೆ ಉಡುಗೊರೆ

  • ಪತ್ನಿಗೆ ದೇಶದ ಅತ್ಯಂತ ದುಬಾರಿ ಕಾರನ್ನು ಗಿಫ್ಟ್ ಕೊಟ್ಟ ಮುಖೇಶ್ ಅಂಬಾನಿ- ಬೆಲೆ ಎಷ್ಟು ಗೊತ್ತಾ?

    ಪತ್ನಿಗೆ ದೇಶದ ಅತ್ಯಂತ ದುಬಾರಿ ಕಾರನ್ನು ಗಿಫ್ಟ್ ಕೊಟ್ಟ ಮುಖೇಶ್ ಅಂಬಾನಿ- ಬೆಲೆ ಎಷ್ಟು ಗೊತ್ತಾ?

    ಮುಂಬೈ: ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ (Mukesh Ambani) ತಮ್ಮ ಪತ್ನಿ ನೀತಾ ಅಂಬಾನಿಗೆ (Nita Ambani) ದೇಶದ ಅತ್ಯಂತ ದುಬಾರಿ ಕಾರನ್ನು (Car) ಉಡುಗೊರೆ ನೀಡಿರುವುದಾಗಿ ವರದಿಯಾಗಿದೆ.

    ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ತಮ್ಮ ವ್ಯವಹಾರ, ದೇಣಿಗೆ ಮಾತ್ರವಲ್ಲದೆ ಐಷಾರಾಮಿ ಜೀವನಶೈಲಿಗೆ ಆಗಾಗ ಸುದ್ದಿಯಲ್ಲಿರುತ್ತಾರೆ. ಅಂಬಾನಿ ಕುಟುಂಬ ಭಾರತದ ಅತ್ಯಂತ ಶ್ರೀಮಂತ ಕುಟುಂಬವಾಗಿದೆ. ತಮ್ಮ ಆಂಟಿಲಿಯಾ ಹೆಸರಿನ 15,000 ಕೋಟಿ ರೂ.ಯ ನಿವಾಸದಲ್ಲಿರುವ ಗ್ಯಾರೇಜ್‌ನಲ್ಲಿ ಪ್ರಪಂಚದ ಅತ್ಯಂತ ದುಬಾರಿ ಕಾರುಗಳೇ ತುಂಬಿವೆ.

    ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ನಿವಾಸದ ಪಾರ್ಕಿಂಗ್ ಸ್ಥಳದಲ್ಲಿ ದೇಶದ ಅತ್ಯಂತ ದುಬಾರಿ ಕಾರುಗಳನ್ನು ಕಾಣಬಹುದು. ಮುಖೇಶ್ ಅಂಬಾನಿ, ಮಕ್ಕಳಾದ ಆಕಾಶ್ ಅಂಬಾನಿ, ಇಶಾ ಅಂಬಾನಿ, ಅನಂತ್ ಅಂಬಾನಿ ಮತ್ತು ಪತ್ನಿ ನೀತಾ ಅಂಬಾನಿ ತಮ್ಮ ದುಬಾರಿ ಕಾರುಗಳಲ್ಲಿ ಕೆಲ ಕಾರ್ಯಕ್ರಮಗಳಿಗೆ ಆಗಮಿಸುವುದನ್ನು ಆಗಾಗ ಕಾಣಬಹುದು. ಇದೀಗ ಈ ದುಬಾರಿ ಕಾರುಗಳ ಸಂಗ್ರಹಣೆಗೆ ಮತ್ತೊಂದು ಅತ್ಯಂತ ದುಬಾರಿ ಕಾರೊಂದು ಸೇರ್ಪಡೆಯಾಗಿದೆ. ಅದೆಂದರೆ 10 ಕೋಟಿ ರೂ.ಯ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ (Rolls Royce Cullinan Black Badge) ಎಸ್‌ಯುವಿ.

    ಹೌದು, ವರದಿಯ ಪ್ರಕಾರ ದೀಪಾವಳಿಗೆ ಮುಂಚಿತವಾಗಿ ಮುಖೇಶ್ ಅಂಬಾನಿ ತನ್ನ ಪತ್ನಿಗೆ 10 ಕೋಟಿ ರೂ. ಬೆಲೆಯ ಎಸ್‌ಯುವಿಯನ್ನು (SUV) ಉಡುಗೊರೆಯಾಗಿ ನೀಡಿದ್ದಾರೆ. ಈ ಕಾರಿನ ವೀಡಿಯೊವನ್ನು CS 12 Vlogs ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಳ್ಳಲಾಗಿದೆ. ನೀತಾ ಅಂಬಾನಿಯವರಿಗೆ ಉಡುಗೊರೆ ನೀಡಿದ ಈ ಹೊಸ ರೋಲ್ಸ್ ರಾಯ್ಸ್ ಈಗ ಭಾರತದ ಅತ್ಯಂತ ದುಬಾರಿ ಕಾರು ಎನಿಸಿಕೊಂಡಿದೆ. ಇದನ್ನೂ ಓದಿ: Cash for Query – ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ

    ರೋಲ್ಸ್ ರಾಯ್ಸ್ ಕಲ್ಲಿನನ್ ಬ್ಲ್ಯಾಕ್ ಬ್ಯಾಡ್ಜ್ ಭಾರತದ ಅತ್ಯಂತ ದುಬಾರಿ ಎಸ್‌ಯುವಿಯಾಗಿದೆ. ಈ ಐಷಾರಾಮಿ ಕಾರನ್ನು ದೇಶದಲ್ಲಿ ಕೆಲವೇ ಸೆಲೆಬ್ರಿಟಿಗಳು ಹೊಂದಿದ್ದಾರೆ. ಭಾರತದಲ್ಲಿನ ಜನಪ್ರಿಯ ರೋಲ್ಸ್ ರಾಯ್ಸ್ ಕಲ್ಲಿನನ್ ಬ್ಲ್ಯಾಕ್ ಬ್ಯಾಡ್ಜ್ ಎಸ್‌ಯುವಿಯನ್ನು ಹೊಂದಿರುವವರಲ್ಲಿ ಒಬ್ಬರೆಂದರೆ ಬಾಲಿವುಡ್ ಸ್ಟಾರ್ ಶಾರುಖ್ ಖಾನ್. ಮುಖೇಶ್ ಅಂಬಾನಿ ಒಡೆತನದ ಇತರ ರೋಲ್ಸ್ ರಾಯ್ಸ್ ಎಸ್‌ಯುವಿಗೆ ಹೋಲಿಸಿದರೆ ನೀತಾ ಅಂಬಾನಿಯವರ ಹೊಸ ಕಾರು ಕಿತ್ತಳೆ ಬಣ್ಣದ ವಿಭಿನ್ನ ಶೇಡ್‌ನಲ್ಲಿದೆ. ಇದನ್ನೂ ಓದಿ: ಮಹಿಳೆಯರ ವಿರುದ್ಧದ ಹೇಳಿಕೆಗಳು ದೇಶವನ್ನೇ ಅವಮಾನಿಸುವಂತಿದೆ: ಮೋದಿ ವಾಗ್ದಾಳಿ